Homeಮುಖಪುಟಉತ್ತರ ಪ್ರದೇಶ ವಿವಿಗಳಲ್ಲಿ ಯೋಗಿ ಆದಿತ್ಯನಾಥ್, ಬಾಬಾ ರಾಮದೇವ್ ಕುರಿತು ಪಠ್ಯ!

ಉತ್ತರ ಪ್ರದೇಶ ವಿವಿಗಳಲ್ಲಿ ಯೋಗಿ ಆದಿತ್ಯನಾಥ್, ಬಾಬಾ ರಾಮದೇವ್ ಕುರಿತು ಪಠ್ಯ!

- Advertisement -
- Advertisement -

ಮೀರತ್‌ನಲ್ಲಿರುವ ಸರ್ಕಾರಿ ಚೌಧರಿ ಚರಣ್ ಸಿಂಗ್ ವಿಶ್ವವಿದ್ಯಾಲಯವು ರಾಮದೇವ್, ಯೋಗಿ ಆದಿತ್ಯನಾಥರನ್ನು ದಾರ್ಶನಿಕರು ಎಂದು ಈಗಾಗಲೇ ತನ್ನ ಪಠ್ಯಕ್ರಮದಲ್ಲಿ ಸೇರಿಸಿದ್ದು, ಉಳಿದ ವಿವಿಗಳು ಶೀಘ್ರದಲ್ಲೇ ಅನುಸರಿಸುವ ಸಾಧ್ಯತೆಯಿದೆ ಎಂದು ದಿ ಪ್ರಿಂಟ್ ವರದಿ ಮಾಡಿದೆ.

ಉತ್ತರ ಪ್ರದೇಶ ಕೋವಿಡ್ ನಿರ್ವಹಣೆಯಲ್ಲಿ ವಿಫಲರಾಗಿದ್ದಾರೆ ಎಂದು ಯೋಗಿ ಆದಿತ್ಯನಾಥ್ ಈಗಾಗಲೇ ಟೀಕೆ ಎದುರಿಸಿದ್ದಾರೆ. ಅಲೋಪತಿ ವೈದ್ಯ ಪದ್ದತಿಯನ್ನು ಅವಹೇಳನ ಮಾಡಿದ ಕಾರಣಕ್ಕಾಗಿ ಬಾಬಾ ರಾಮ್‌ದೇವ್‌ ದೊಡ್ಡ ವಿರೋಧ ಎದುರಿಸಿದ್ದಾರೆ. ಆದರೆ ಈ ಇಬ್ಬರನ್ನು ಹೀರೋ ಮಾಡಲು ಬಿಜೆಪಿ ಹೊರಟಿದೆಯೇ? ಕೋವಿಡ್‌ಗಿಂತ ಮುಂದಿನ ವರ್ಷದ ಉತ್ತರಪ್ರದೇಶದ ಚುನಾವಣೆಯೇ ಬಿಜೆಪಿಗೆ ಆದ್ಯತೆಯಾಗಿದೆಯೇ ಎಂಬ ಪ್ರಶ್ನೆಗಳು ಕೇಳಿ ಬರುತ್ತಿವೆ.

ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯ ಅನುಷ್ಠಾನ ಕುರಿತು ಉತ್ತರ ಪ್ರದೇಶದ ರಾಜ್ಯ ಸಮಿತಿಯು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಯೋಗ ಗುರು ಬಾಬಾ ರಾಮದೇವ್ ಅವರು ಬರೆದ ಪುಸ್ತಕಗಳನ್ನು ರಾಜ್ಯದಾದ್ಯಂತದ ಎಲ್ಲಾ ವಿಶ್ವವಿದ್ಯಾಲಯಗಳು ಮತ್ತು ಅವುಗಳ ಅಂಗಸಂಸ್ಥೆ ಕಾಲೇಜುಗಳಲ್ಲಿ ತತ್ವಶಾಸ್ತ್ರ ಕೋರ್ಸ್ ಅಡಿಯಲ್ಲಿ ಈ ಎರಡು ಪುಸ್ತಕಗಳನ್ನು ಶಿಫಾರಸು ಮಾಡಲಾಗಿದೆ.

ಉತ್ತರಪ್ರದೇಶದ ಸರ್ಕಾರದ ಅಧೀನದಲ್ಲಿ ಇರುವ ಮೀರತ್‌ನ ಚೌಧರಿ ಚರಣ್ ಸಿಂಗ್ ವಿಶ್ವವಿದ್ಯಾಲಯ (ಸಿಸಿಎಸ್‌ಯು) ಈಗಾಗಲೇ ತನ್ನ ಪಠ್ಯಕ್ರಮದಲ್ಲಿ ಪುಸ್ತಕಗಳನ್ನು ಸಂಯೋಜಿಸಿದೆ. ಇದರಲ್ಲಿ ‘ದಾರ್ಶನಿಕರಾದ’ ಬಾಬಾ ಮತ್ತು ಯೋಗಿ ಅವರ ಬಗ್ಗೆಯೇ ಪುಸ್ತಕಗಳಿವೆ, ಅವರು ಬರೆದ ಪುಸ್ತಕಗಳೇ ಪಠ್ಯವಾಗಿವೆ ಮತ್ತು ಕೆಲವು ಕಡೆ ಪಾಠಗಳೂ ಇವೆ.
ಆದಿತ್ಯನಾಥ್ ಅವರ ಹತ್ಯೋಗ ಕಾ ಸ್ವರೂಪ್ ವಾ ಸಾಧನಾ ಮತ್ತು ಬಾಬಾ ರಾಮದೇವ್ ಅವರ ಯೋಗ ಸಾಧನಾ ವಾ ಯೋಗ ಚಿಕಿತ್ಸಾ ರಹಸ್ಯ ಈಗ ವಿಶ್ವವಿದ್ಯಾಲಯದ ಎರಡನೇ ಸೆಮಿಸ್ಟರ್ ಪದವಿಪೂರ್ವ ತತ್ವಶಾಸ್ತ್ರ ಪಠ್ಯಕ್ರಮದ ಭಾಗವಾಗಿವೆ!

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಚಿಂತಕ ಬಂಜಗೆರೆ ಜಯಪ್ರಕಾಶ್, ‘ಈ ಹೊಸ ಶಿಕ್ಷಣ ನೀತಿ ಎಂಬುದೇ ಒಂದು ಅಜೆಂಡಾ. ಈ ನೀತಿ ಜಾರಿ ತಂದಿರುವುದೇ ದೇಶಪ್ರೇಮ, ರಾಷ್ಟ್ರವಾದದ ಹೆಸರಿನಲ್ಲಿ ಜನರನ್ನು ಒಡೆಯುವ ಭಾಗವಾಗಿಯೇ. ಯೋಗಿ, ರಾಮದೇವ್ ಫಿಲಾಸಫಿ ಪಠ್ಯಗಳಲ್ಲಿ ಬಂದಿರುವುದು ಹೊಸ ಶಿಕ್ಷಣ ನೀತಿಯ ಹುನ್ನಾರಗಳಿಗೆ ಮೊದಲ ಸಾಕ್ಷಿಯಂತಿದೆ. ‘ಮುಂದಿನ ದಿನಗಳಲ್ಲಿ ಗೋಮೂತ್ರ ಸೇವನೆ, ಸೆಗಣಿ ಸ್ನಾನ ಕೂಡ ವಿಜ್ಞಾನ ಮತ್ತು ವೈದ್ಯಕೀಯ ಪಠ್ಯಗಳಲ್ಲಿ ಬಂದರೂ ಬರಬಹುದು’ ಎಂದರು.

ಶೈಕ್ಷಣಿಕ, ಸಾಹಿತ್ಯಿಕ ಮೌಲ್ಯವಂತೆ!

ಹೆಸರಿಸಲು ಇಚ್ಛಿಸದ ಪಠ್ಯಕ್ರಮ ಅಭಿವೃದ್ಧಿ ಸಮಿತಿಯ ಸದಸ್ಯರೊಬ್ಬರು, ಈ ಪುಸ್ತಕಗಳನ್ನು ಅವುಗಳ “ಉನ್ನತ ಸಾಹಿತ್ಯಿಕ ಮೌಲ್ಯ”ದ ಕಾರಣಕ್ಕೆ ಆಯ್ಕೆ ಮಾಡಲಾಗಿದೆ ಎಂದು ದಿ ಪ್ರಿಂಟ್‌ಗೆ ಹೇಳಿದ್ದಾರೆ.

  • ಪಿ.ಕೆ. ಮಲ್ಲನಗೌಡರ್

ಇದನ್ನೂ ಓದಿ: ಅಲಪಾನ್‌ ಬಂದೋಪಾದ್ಯಾಯ್‌ರವರ ಮೇಲೆ ಕ್ರಮ ಕೈಗೊಳ್ಳುವ ಅಧಿಕಾರ ಕೇಂದ್ರಕ್ಕಿದೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...