Homeಮುಖಪುಟಉತ್ತರ ಪ್ರದೇಶ ವಿವಿಗಳಲ್ಲಿ ಯೋಗಿ ಆದಿತ್ಯನಾಥ್, ಬಾಬಾ ರಾಮದೇವ್ ಕುರಿತು ಪಠ್ಯ!

ಉತ್ತರ ಪ್ರದೇಶ ವಿವಿಗಳಲ್ಲಿ ಯೋಗಿ ಆದಿತ್ಯನಾಥ್, ಬಾಬಾ ರಾಮದೇವ್ ಕುರಿತು ಪಠ್ಯ!

- Advertisement -
- Advertisement -

ಮೀರತ್‌ನಲ್ಲಿರುವ ಸರ್ಕಾರಿ ಚೌಧರಿ ಚರಣ್ ಸಿಂಗ್ ವಿಶ್ವವಿದ್ಯಾಲಯವು ರಾಮದೇವ್, ಯೋಗಿ ಆದಿತ್ಯನಾಥರನ್ನು ದಾರ್ಶನಿಕರು ಎಂದು ಈಗಾಗಲೇ ತನ್ನ ಪಠ್ಯಕ್ರಮದಲ್ಲಿ ಸೇರಿಸಿದ್ದು, ಉಳಿದ ವಿವಿಗಳು ಶೀಘ್ರದಲ್ಲೇ ಅನುಸರಿಸುವ ಸಾಧ್ಯತೆಯಿದೆ ಎಂದು ದಿ ಪ್ರಿಂಟ್ ವರದಿ ಮಾಡಿದೆ.

ಉತ್ತರ ಪ್ರದೇಶ ಕೋವಿಡ್ ನಿರ್ವಹಣೆಯಲ್ಲಿ ವಿಫಲರಾಗಿದ್ದಾರೆ ಎಂದು ಯೋಗಿ ಆದಿತ್ಯನಾಥ್ ಈಗಾಗಲೇ ಟೀಕೆ ಎದುರಿಸಿದ್ದಾರೆ. ಅಲೋಪತಿ ವೈದ್ಯ ಪದ್ದತಿಯನ್ನು ಅವಹೇಳನ ಮಾಡಿದ ಕಾರಣಕ್ಕಾಗಿ ಬಾಬಾ ರಾಮ್‌ದೇವ್‌ ದೊಡ್ಡ ವಿರೋಧ ಎದುರಿಸಿದ್ದಾರೆ. ಆದರೆ ಈ ಇಬ್ಬರನ್ನು ಹೀರೋ ಮಾಡಲು ಬಿಜೆಪಿ ಹೊರಟಿದೆಯೇ? ಕೋವಿಡ್‌ಗಿಂತ ಮುಂದಿನ ವರ್ಷದ ಉತ್ತರಪ್ರದೇಶದ ಚುನಾವಣೆಯೇ ಬಿಜೆಪಿಗೆ ಆದ್ಯತೆಯಾಗಿದೆಯೇ ಎಂಬ ಪ್ರಶ್ನೆಗಳು ಕೇಳಿ ಬರುತ್ತಿವೆ.

ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯ ಅನುಷ್ಠಾನ ಕುರಿತು ಉತ್ತರ ಪ್ರದೇಶದ ರಾಜ್ಯ ಸಮಿತಿಯು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಯೋಗ ಗುರು ಬಾಬಾ ರಾಮದೇವ್ ಅವರು ಬರೆದ ಪುಸ್ತಕಗಳನ್ನು ರಾಜ್ಯದಾದ್ಯಂತದ ಎಲ್ಲಾ ವಿಶ್ವವಿದ್ಯಾಲಯಗಳು ಮತ್ತು ಅವುಗಳ ಅಂಗಸಂಸ್ಥೆ ಕಾಲೇಜುಗಳಲ್ಲಿ ತತ್ವಶಾಸ್ತ್ರ ಕೋರ್ಸ್ ಅಡಿಯಲ್ಲಿ ಈ ಎರಡು ಪುಸ್ತಕಗಳನ್ನು ಶಿಫಾರಸು ಮಾಡಲಾಗಿದೆ.

ಉತ್ತರಪ್ರದೇಶದ ಸರ್ಕಾರದ ಅಧೀನದಲ್ಲಿ ಇರುವ ಮೀರತ್‌ನ ಚೌಧರಿ ಚರಣ್ ಸಿಂಗ್ ವಿಶ್ವವಿದ್ಯಾಲಯ (ಸಿಸಿಎಸ್‌ಯು) ಈಗಾಗಲೇ ತನ್ನ ಪಠ್ಯಕ್ರಮದಲ್ಲಿ ಪುಸ್ತಕಗಳನ್ನು ಸಂಯೋಜಿಸಿದೆ. ಇದರಲ್ಲಿ ‘ದಾರ್ಶನಿಕರಾದ’ ಬಾಬಾ ಮತ್ತು ಯೋಗಿ ಅವರ ಬಗ್ಗೆಯೇ ಪುಸ್ತಕಗಳಿವೆ, ಅವರು ಬರೆದ ಪುಸ್ತಕಗಳೇ ಪಠ್ಯವಾಗಿವೆ ಮತ್ತು ಕೆಲವು ಕಡೆ ಪಾಠಗಳೂ ಇವೆ.
ಆದಿತ್ಯನಾಥ್ ಅವರ ಹತ್ಯೋಗ ಕಾ ಸ್ವರೂಪ್ ವಾ ಸಾಧನಾ ಮತ್ತು ಬಾಬಾ ರಾಮದೇವ್ ಅವರ ಯೋಗ ಸಾಧನಾ ವಾ ಯೋಗ ಚಿಕಿತ್ಸಾ ರಹಸ್ಯ ಈಗ ವಿಶ್ವವಿದ್ಯಾಲಯದ ಎರಡನೇ ಸೆಮಿಸ್ಟರ್ ಪದವಿಪೂರ್ವ ತತ್ವಶಾಸ್ತ್ರ ಪಠ್ಯಕ್ರಮದ ಭಾಗವಾಗಿವೆ!

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಚಿಂತಕ ಬಂಜಗೆರೆ ಜಯಪ್ರಕಾಶ್, ‘ಈ ಹೊಸ ಶಿಕ್ಷಣ ನೀತಿ ಎಂಬುದೇ ಒಂದು ಅಜೆಂಡಾ. ಈ ನೀತಿ ಜಾರಿ ತಂದಿರುವುದೇ ದೇಶಪ್ರೇಮ, ರಾಷ್ಟ್ರವಾದದ ಹೆಸರಿನಲ್ಲಿ ಜನರನ್ನು ಒಡೆಯುವ ಭಾಗವಾಗಿಯೇ. ಯೋಗಿ, ರಾಮದೇವ್ ಫಿಲಾಸಫಿ ಪಠ್ಯಗಳಲ್ಲಿ ಬಂದಿರುವುದು ಹೊಸ ಶಿಕ್ಷಣ ನೀತಿಯ ಹುನ್ನಾರಗಳಿಗೆ ಮೊದಲ ಸಾಕ್ಷಿಯಂತಿದೆ. ‘ಮುಂದಿನ ದಿನಗಳಲ್ಲಿ ಗೋಮೂತ್ರ ಸೇವನೆ, ಸೆಗಣಿ ಸ್ನಾನ ಕೂಡ ವಿಜ್ಞಾನ ಮತ್ತು ವೈದ್ಯಕೀಯ ಪಠ್ಯಗಳಲ್ಲಿ ಬಂದರೂ ಬರಬಹುದು’ ಎಂದರು.

ಶೈಕ್ಷಣಿಕ, ಸಾಹಿತ್ಯಿಕ ಮೌಲ್ಯವಂತೆ!

ಹೆಸರಿಸಲು ಇಚ್ಛಿಸದ ಪಠ್ಯಕ್ರಮ ಅಭಿವೃದ್ಧಿ ಸಮಿತಿಯ ಸದಸ್ಯರೊಬ್ಬರು, ಈ ಪುಸ್ತಕಗಳನ್ನು ಅವುಗಳ “ಉನ್ನತ ಸಾಹಿತ್ಯಿಕ ಮೌಲ್ಯ”ದ ಕಾರಣಕ್ಕೆ ಆಯ್ಕೆ ಮಾಡಲಾಗಿದೆ ಎಂದು ದಿ ಪ್ರಿಂಟ್‌ಗೆ ಹೇಳಿದ್ದಾರೆ.

  • ಪಿ.ಕೆ. ಮಲ್ಲನಗೌಡರ್

ಇದನ್ನೂ ಓದಿ: ಅಲಪಾನ್‌ ಬಂದೋಪಾದ್ಯಾಯ್‌ರವರ ಮೇಲೆ ಕ್ರಮ ಕೈಗೊಳ್ಳುವ ಅಧಿಕಾರ ಕೇಂದ್ರಕ್ಕಿದೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...