Homeನ್ಯಾಯ ಪಥಪಠ್ಯ ಪರಿಷ್ಕರಣೆ ವಿವಾದ; ಎಚ್ಚೆತ್ತುಕೊಂಡ ತಿಪಟೂರು!

ಪಠ್ಯ ಪರಿಷ್ಕರಣೆ ವಿವಾದ; ಎಚ್ಚೆತ್ತುಕೊಂಡ ತಿಪಟೂರು!

- Advertisement -
- Advertisement -

ಕರ್ನಾಟಕದ ಮಕ್ಕಳು ಓದುವ ಪಠ್ಯ ತಿದ್ದಿರುವ ವಿಷಯದಲ್ಲಿ ಎಲ್ಲ ಊರುಗಳಿಗಿಂತಲೂ ತಿಪಟೂರು ವ್ಯಗ್ರಗೊಂಡಿದೆ, ಯಾಕೆಂದರೆ ತಿಪಟೂರು ಶಿಕ್ಷಣ ಸಚಿವರಾಗಿರುವ ಬಿ. ಸಿ ನಾಗೇಶರ ಕ್ಷೇತ್ರ. ಇಲ್ಲಿ ಲಿಂಗಾಯತರು, ಒಕ್ಕಲಿಗರು, ಕುರುಬರು ಮತ್ತು ಓಬಿಸಿಗಳು ಪ್ರಬಲವಾಗಿದ್ದರೂ ಎರಡು ಸಾವಿರ ಮತಗಳನ್ನು ದಾಟದ ಬ್ರಾಹ್ಮಣ ಸಮುದಾಯದ ನಾಗೇಶರನ್ನು ಶಾಸಕರನ್ನಾಗಿ ತಿಪಟೂರು ಎರಡು ಬಾರಿ ಆರಿಸಿಕೊಂಡಿದೆ. ಆ ದಿಸೆಯಲ್ಲಿ ಇಲ್ಲಿನ ಮತದಾರರು ತಾವೆಷ್ಟು ಜಾತ್ಯತೀತ ಮನಸ್ಸಿನವರು ಎಂದು ಸಾಬೀತುಮಾಡಿದ್ದಾರೆ. ಇದಕ್ಕೆ ಮತ್ತೊಂದು ಕಾರಣವೂ ಇದೆ. ನಾಗೇಶ್ ಎಲ್ಲರನ್ನ ಪ್ರೀತಿಯಿಂದ ಮಾತನಾಡಿಸುತ್ತ ಸರಳ ಸಜ್ಜನಿಕೆಯಿಂದ ನಡೆದುಕೊಳ್ಳುತ್ತಿದ್ದುದು; ಎಲ್ಲರ ಭುಜದ ಮೇಲೆ ಕೈಹಾಕಿ ಮಾತನಾಡಿಸುತ್ತ ನಾನೂ ನಿಮ್ಮವನು ಎಂಬಂತೆ ನಡೆದುಕೊಂಡಿದ್ದರು. ಇದು ಮೊದಲು ಗೆದ್ದಾಗಿನ ಕತೆ. ಆದರೀಗ ತಾವು ಗೆದ್ದುಬಂದಿರುವುದೇ ಬ್ರಾಹ್ಮಣ್ಯದ ಹಿತ ಕಾಯಲು ಎಂಬಂತೆ ಶಿಕ್ಷಣ ಮಂತ್ರಿಯಾದಂದಿನಿಂದ ನಡೆದುಕೊಂಡು ಬರುತ್ತಿದ್ದಾರೆ. ಅಧಿಕಾರವಿಲ್ಲದಾಗ ವಿನಯವಂತನ ಸೋಗು ಹಾಕಿದ್ದ ನಾಗೇಶ್ ಶಿಕ್ಷಣ ಸಚಿವನೆಂಬ ಆಯುಧ ಸಿಕ್ಕ ಕೂಡಲೇ ಮಕ್ಕಳ ಮೇಲೆ ಕಂಸನಂತೆ ಎಗರಿದ್ದಾರೆ, ಜೊತೆಗೆ ಜನರಿಗೆ ಮತ್ತು ಮಾಧ್ಯಮಕ್ಕೆ ಸುಳ್ಳು ಹೇಳುತ್ತ ಗೊಂದಲ ಸೃಷ್ಟಿಸುತ್ತಿದ್ದಾರೆ. ಪಠ್ಯಪರಿಷ್ಕರಣ ಸಮಿತಿ ಅಧ್ಯಕ್ಷನ ಪರ ಇವರು ವಹಿಸುವ ವಕಾಲತ್ತು ಅಪ್ರಭುದ್ದತೆಯಿಂದ ಕೂಡಿದೆ. ಇವೆಲ್ಲದರಿಂದ ಸಹಜವಾಗಿ ತಿಪಟೂರಿನ ಪ್ರಜ್ಞಾವಂತರು ಕೆರಳಿದ್ದಾರೆ.

ಆದ್ದರಿಂದ ಜಾಗೃತ ತಿಪಟೂರು ಎಂಬ ವೇದಿಕೆ ನಿರ್ಮಿಸಿಕೊಂಡು ವಿಶ್ವಮಾನವ ಕ್ರಾಂತಿಕಾರಿ ಕುವೆಂಪು ಹೋರಾಟ ಸಮಿತಿಯ ಸಹಯೋಗದಿಂದ ಒಂದು ವಾರ ಕಾಲ ತಿಪಟೂರಿನ ಹಳ್ಳಿಗಳಿಗೆ ಜಾಥಾ ಮಾಡಿದರು. ಅಂಬೇಡ್ಕರ್, ಬಸವಣ್ಣ, ಕುವೆಂಪು ವಿಚಾರಗಳನ್ನ ಹಳ್ಳಿಗಳಿಗೆ ತಲುಪಿಸಿದ ನಂತರ ಅಂತಿಮವಾಗಿ ಕಳೆದ ಭಾನುವಾರ ತಿಪಟೂರಿನಲ್ಲಿ ಪ್ರತಿಭಟನಾ ಜಾಥಾ ಮತ್ತು ಸಭೆ ಏರ್ಪಡಿಸಿದ್ದರು. ಮಂಡ್ಯದಿಂದ ಬಂದಿದ್ದ ಡಾ.ರವೀಂದ್ರ ಅವರು ತಿಪಟೂರಿನ ನಡುರಸ್ತೆಯಲ್ಲಿ ಜೋರು ದನಿಯಲ್ಲಿ “ಪುರಾಣಗಳನ್ನ ಸೃಷ್ಟಿಸಿಕೊಂಡು ಅವುಗಳನ್ನೇ ಸಾಮಾನ್ಯರ ಮೇಲೆ ಹೇರುತ್ತ ಸಾವಿರಾರು ವರ್ಷದಿಂದ ಮುಗ್ಧ ಮನಸ್ಸುಗಳನ್ನು ವಂಚಿಸಿದ್ದು ಸಾಕು. ಈ ಕೆಲಸ ಇನ್ನ ಮುಂದೆ ನಡೆಯುವುದಿಲ್ಲ. ಸುತ್ತಿಬಳಸಿ ಮಾತನಾಡುವ ಅಗತ್ಯವಿಲ್ಲ. ನಾಗೇಶ್ ಒಬ್ಬ ಬ್ರಾಹ್ಮಣ. ಅವರು ನೇಮಿಸಿದ ಪಠ್ಯಪರಿಷ್ಕರಣ ಸಮಿತಿಯಲ್ಲಿ ಒಂಭತ್ತು ಜನ ಬ್ರಾಹ್ಮಣರಿದ್ದಾರೆ. ನಿಮ್ಮ ಜಾತಿಹಿಡಿದು ಮಾತನಾಡದೆ ಬೇರೆ ದಾರಿಯಿಲ್ಲ ಎಂದರು. ಇನ್ನ ವೇದಿಕೆಯಲ್ಲಿ ಮಾತನಾಡಿದ ಕೋಟಗಾನಹಳ್ಳಿ ರಾಮಯ್ಯ “ಆರೆಸ್ಸೆಸ್ ಸಂಘಟನೆಯೇ ಒಂದು ದೇಶದ್ರೋಹಿ ಸಂಘಟನೆ. ಅದರಿಂದ ಸಮಾನತೆ ಸಾಧ್ಯವಿಲ್ಲ; ದೇಶಕಟ್ಟುವ ಕೆಲಸಬಿಟ್ಟು ಜನಿವಾರದ ಕೆಲಸ ಮಾಡುತ್ತಿದ್ದಾರೆ. ಅಂಬೇಡ್ಕರ್ ಮನುಧರ್ಮದ ಗ್ರಂಥ ಸುಟ್ಟಂತೆ ನಾವು ಈ ಸರಕಾರ ರೂಪಿಸಿದ ವಿಕೃತ ಪಠ್ಯಪುಸ್ತಕ (ಪರಿಷ್ಕರಣೆ ಮಾಡಿರುವ) ಸುಡೋಣ. ನಮ್ಮ ಮೈಸೂರು ಅರಸರ ಫೋಟೊ ಬದಲು ಶಿವಾಜಿ ಫೋಟೊ ತೋರಿಸುತ್ತಾರೆ.

ಮರಾಠರಿಂದ ಕರ್ನಾಟಕದ ಮೇಲೆ ನಡೆದ ದಾಳಿಗಳ ಇತಿಹಾಸ ಎಲ್ಲರಿಗೂ ಗೊತ್ತಿದೆ. ಹೀಗಿದ್ದರೂ ಇತಿಹಾಸ ತಿರುಚುತ್ತಾ ಅಂಬೇಡ್ಕರ್, ಗಾಂಧಿ, ಕುವೆಂಪು ಅವರಿಗೆ ಅಗೌರವ ತೋರಿದ್ದಾರೆ. ಇವರು ತಿರುಚಿರುವ ಪಠ್ಯವನ್ನು ಸುಡುವುದು ನಮ್ಮ ಕರ್ತವ್ಯ ಎಂದರು.

ಇನ್ನ ಹಿರಿಯೂರಿನ ಕೋಡಿಹಳ್ಳಿ ಆದಿಜಾಂಭವ ಮಠದ ಷಡಕ್ಷರ ಮುನಿ ಸ್ವಾಮೀಜಿ, “ಈ ಸರಕಾರ ಪಠ್ಯಪುಸ್ತಕಗಳ ವಿಷಯದಲ್ಲಿ ಅಕ್ಷರಗಳಿಗೆ ಬಣ್ಣ ಬಳಿಯತೊಡಗಿದೆ. ನಾವು ಕೇಳುತ್ತಿರುವುದು ಪಠ್ಯವನ್ನ ಸರಿಯಾಗಿ ರೂಪಿಸಿ ಎಂದು. ತಾವೇ ಬದಲಾಯಿಸಿದ ಪಠ್ಯದಲ್ಲಿನ ತಪ್ಪು ಕೃತ್ಯಗಳನ್ನ ಒಪ್ಪಿಕೊಂಡರೂ, ಹಿಂತೆಗೆದುಕೊಳ್ಳದೆ ಸರಕಾರ ಕಾಲ ದೂಡುತ್ತಿದೆ, ಹಠಕ್ಕೆ ಬಿದ್ದಿದೆ. ಶಿಕ್ಷಣ ಸಚಿವ ಮಾಡುವುದೆಲ್ಲವನ್ನು ಮಾಡಿ ಮೌನಕ್ಕೆ ಶರಣಾಗಿದ್ದಾರೆ. ಮಕ್ಕಳ ಭವಿಷ್ಯದ ವಿಷಯದಲ್ಲಿ ಹೀಗೆ ಹಠ ಹಿಡಿಯುವುದು ಸರಿಯಲ್ಲ ಎಂದರು. ಇನ್ನು ಅಲ್ಲಮಪ್ರಭು ಮಠದ ತಿಪ್ಪೇರುದ್ರಸ್ವಾಮಿಗಳು, “ನಿಮಗೆ ಅಂಬೇಡ್ಕರ್ ವಿಷಯ ತೆಗೆದರೆ ಭಯವಾಗುವುದೇಕೆ? ಅದಕ್ಕೆ ಇರಬೇಕು ’ಸಂವಿಧಾನ ಶಿಲ್ಪಿ ಗುಣವಾಚಕ ತೆಗೆದಿದ್ದೀರಿ. ಬಸವನಿಗೆ ಉಪನಯನ ಮಾಡಿ ಜನಿವಾರ ಹಾಕಿಬಿಟ್ಟಿದ್ದೀರಿ. ಮುಖ್ಯಮಂತ್ರಿಗಳಿಗೆ ಇದು ಅಘಾತ ನೀಡಬೇಕಿತ್ತು. ಒಂದು ನಾಯಿ ಸಿನಿಮಾ ನೋಡಿ ಗಳಗಳನೆ ಅತ್ತ ನಿಮ್ಮ ಕಣ್ಮುಂದೆ ಶರಣರ ಹತ್ಯಾಕಾಂಡದ ದೃಶ್ಯ ಮೂಡಬೇಕಿತ್ತು. ಸಾಕಿದ ನಾಯಿ ಸಾವಿಗೆ ದುಃಖ ಪಡುವುದು ಮಾನವೀಯ ಲಕ್ಷಣ. ಅದನ್ನು ನಾವು ಆಡಿಕೊಳ್ಳುವುದಿಲ್ಲ. ಆದರೆ ನಿಮ್ಮದು ತೋರಿಕೆಯ ಗುಣ ಎಂಬ ಅನುಮಾನ ಮೂಡಬಾರದು” ಎಂದರು. ಜಿ.ಬಿ ಪಾಟೀಲರು ಮಾತನಾಡಿ, “ನಾಗೇಶ್‌ರಂತಹ ಜಾತಿವಾದಿಗಳು ರಾಜಕಾರಣದಲ್ಲಿರಬಾರದು. ಅದರಲ್ಲೂ ಶಿಕ್ಷಣ ಸಚಿವರಾದರೆ ಏನು ಮಾಡಬಲ್ಲರೆಂಬುದಕ್ಕೆ ಈಗಿನ ಘಟನೆಯೇ ಸಾಕ್ಷಿ. ಇಂತವರನ್ನ ಮನೆಗೆ ಕಳಿಸುವ ಶಕ್ತಿ ತಿಪಟೂರಿನ ಜನರಿಗೆ ಮಾತ್ರ ಇದೆ. ಆದ್ದರಿಂದ ಮುಂದಿನ ಚುನಾವಣೆಯಲ್ಲಿ ಇವರು ನಿರ್ಗಮಿಸುವಂತೆ ಮಾಡಿ. ಏಕೆಂದರೆ ವೈದ್ಯ ದಾರಿ ತಪ್ಪಿದರೆ ರೋಗಿ ಕತೆ ಮುಗಿದಂತೆಯೇ. ಹಾಗೆಯೇ ಮಕ್ಕಳಿಗೆ ಸಂಕುಚಿತ ಮನೋಭಾವ ಬೆಳೆಸುವ ವಿಷ ಉಣಿಸಿದರೆ ಅದರ ಪರಿಣಾಮ ಈ ಸಮಾಜದ ಮೇಲಾಗುತ್ತದೆ. ಆದ್ದರಿಂದ ನಾಗೇಶರಿಗೆ ಅಧಿಕಾರದಿಂದ ಗೌರವದ ನಿರ್ಗಮನ ಹೇಳಿ” ಎಂದರು.

ತಿಪಟೂರಿಗೂ ಪ್ರತಿಭಟನೆಗೂ ಬಹಳ ದೂರ. ಇದೊಂತರದ ಸಂತೃಪ್ತ ಊರು. ಜನ ತಮ್ಮಷ್ಟಕ್ಕೆ ತಾವಿರುವುದನ್ನು ಬಹಳ ಹಿಂದಿನಿಂದಲೂ ಕಲಿತಿದ್ದಾರೆ. ಇಂತಲ್ಲಿ ನಾಗೇಶರಂಥವರು ಬೆಳೆಯುವುದು ಸಹಜ. ಆದ್ದರಿಂದ ಇಲ್ಲಿ ಎಚ್ಚೆತ್ತುಕೊಂಡ ಯುವ ಜನರಾದ ಶಶಿಧರ, ಶ್ರೀಕಾಂತ ಮುಂತಾದವರೆಲ್ಲಾ ಸೇರಿ ಹೋರಾಟ ರೂಪಿಸಿದರು. ಇದಕ್ಕೆ ಒತ್ತಾಸೆಯಾಗಿ ಮಂಜುನಾಥ ಅದ್ದೆ, ಮುಕುಂದರಾಜ್, ಗಂಗಾಧರಯ್ಯ ಇನ್ನು ಹಲವು ಜನರ ಬೆಂಬಲದಿಂದ ಒಂದು ಅಪರೂಪದ ಪ್ರತಿಭಟನಾ ಜಾಥಾ ನಡೆಯಿತು. ಇಂತದೇ ಜಾಥಾ ನಡೆಸಿದ ರವೀಶ್ ಬಸಪ್ಪ ಚಿಕ್ಕಮಗಳೂರಿಂದ ಬಂದಿದ್ದರೆ, ರೈತನಾಯಕ ಕೆ.ಟಿ ಗಂಗಾಧರ್ ಶಿವಮೊಗ್ಗದಿಂದ ಆಗಮಿಸಿದ್ದರು. ಬೆಳವಂಗಲದ ಪ್ರಭಾರ ದನಿ ಮೆರವಣಿಗೆಯಲ್ಲಿ ಮೊಳಗಿದ್ದೊಂದು ವಿಶೇಷ. ಸದ್ಯಕ್ಕೆ ಶಶಿಧರರ ಟೀಮು ತಿಪಟೂರು ಮತ್ತೆ ಮಲಗದಂತೆ ನೋಡಿಕೊಳ್ಳಬೇಕಿದೆ. ಏಕೆಂದರೆ ನಾಗೇಶ ಈ ಪ್ರತಿಭಟನೆಗೆ ಕೇರ್ ಮಾಡಿದಂತೆ ಕಾಣುವುದಿಲ್ಲ.

– ವರದಿಗಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೆಲಸದ ಅವಧಿ ಬಳಿಕ ಯಾವುದೇ ಕರೆಗಳು, ಇಮೇಲ್‌ಗಳಿಗೆ ಉತ್ತರಿಸಬೇಕಿಲ್ಲ : ಸಂಪರ್ಕ ಕಡಿತ ಹಕ್ಕು ಮಸೂದೆ ಹೇಳುವುದೇನು?

ದೇಶದಲ್ಲಿ ಕಾರ್ಪೋರೇಟ್ ಸಂಸ್ಥೆಗಳು ಉದ್ಯೋಗಿಗಳ ಮೇಲೆ ಅತೀವ ಕೆಲಸದ ಹೊರೆಯನ್ನು ಹೇರಿ ಅವರ ಖಾಸಗಿ ಜೀವನವನ್ನು ಕಿತ್ತುಕೊಳ್ಳುವ ಮೂಲಕ ಮಾನಸಿಕ ಒತ್ತಡಕ್ಕೆ ತಳ್ಳುತ್ತಿರುವ ಪರಿಸ್ಥಿತಿ ಗಂಭೀರ ಹಂತಕ್ಕೆ ತಲುಪಿದೆ. ಅದಾಗ್ಯೂ ಕೆಲ ಕಾರ್ಪೋರೇಟ್‌...

ಯುದ್ಧ ವಿರೋಧಿ ವಾಟ್ಸಾಪ್ ಸ್ಟೇಟಸ್ : ಬಲಪಂಥೀಯರ ಕೆಂಗಣ್ಣಿಗೆ ಗುರಿಯಾಗಿದ್ದ ದಲಿತ ಪ್ರಾಧ್ಯಾಪಕಿ ವಜಾ

ಭಾರತೀಯ ಸೇನೆಯ ಆಪರೇಷನ್ ಸಿಂಧೂರ್ ವೇಳೆ ಯುದ್ಧ ವಿರೋಧಿ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದ ಚೆನ್ನೈನ ಎಸ್‌ಆರ್‌ಎಂ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕಿ ಲೋರಾ ಶಾಂತಕುಮಾರ್ ಅವರನ್ನು ಕೆಲಸದಿಂದ ವಜಾಗೊಳಿಸಲಾಗಿದೆ. ಎಸ್‌ಆರ್‌ಎಂನ ಆಂತರಿಕ ಸಮಿತಿಯ ವರದಿಯು ಲೋರಾ...

ಗಾಝಾದಲ್ಲಿ ಕದನ ವಿರಾಮ : ಎರಡು ವರ್ಷಗಳ ಬಳಿಕ ಬೆಥ್ಲೆಹೆಮ್‌ನಲ್ಲಿ ಮರುಕಳಿಸಿದ ಕ್ರಿಸ್‌ಮಸ್ ಸಂಭ್ರಮ

ಗಾಝಾದಲ್ಲಿ ಕದನ ವಿರಾಮ ಜಾರಿಯಾಗಿರುವ ಹಿನ್ನೆಲೆ, ಎರಡು ವರ್ಷಗಳ ನಂತರ ಈ ಬಾರಿ ಯೇಸು ಕ್ರಿಸ್ತನ ಜನ್ಮಸ್ಥಳ ಜೆರುಸಲೇಂನ ಬೆಥ್ಲೆಹೆಮ್‌ನಲ್ಲಿ ಕ್ರಿಸ್‌ಮಸ್‌ ಸಂಭ್ರಮಾಚರಣೆ ಮರುಕಳಿಸಿದೆ. ಶನಿವಾರ (ಡಿಸೆಂಬರ್ 6) ಬೆಥ್ಲೆಹೆಮ್‌ನ ಮ್ಯಾಂಗರ್ ಸ್ಕ್ವೇರ್‌ನಲ್ಲಿರುವ ಚರ್ಚ್...

ರಾಷ್ಟ್ರವ್ಯಾಪಿ ವಿಮಾನಯಾನ ಬಿಕ್ಕಟ್ಟು : ಜೆಪಿಸಿ ವಿಚಾರಣೆ ಕೋರಿ ಪ್ರಧಾನಿಗೆ ಪತ್ರ ಬರೆದ ಸಂಸದ ಜಾನ್ ಬ್ರಿಟ್ಟಾಸ್

ಇಂಡಿಗೋ ವಿಮಾನಗಳ ಹಾರಾಟ ವ್ಯತ್ಯಯದಿಂದ ಉಂಟಾದ ರಾಷ್ಟ್ರವ್ಯಾಪಿ ವಿಮಾನಯಾನ ಬಿಕ್ಕಟ್ಟಿನ ಕುರಿತು ಜಂಟಿ ಸಂಸದೀಯ ಸಮಿತಿ (ಜೆಪಿಸಿ) ವಿಚಾರಣೆ ಅಥವಾ ನ್ಯಾಯಾಂಗ ತನಿಖೆ ಮಾಡಿಸುವಂತೆ ಕೋರಿ ರಾಜ್ಯಸಭಾ ಸಂಸದ ಜಾನ್ ಬ್ರಿಟ್ಟಾಸ್ ಪ್ರಧಾನಿ...

ಒಳಮೀಸಲಾತಿ : ಶೇ.17ರ ಪ್ರಮಾಣದಲ್ಲೇ ಮುಂದುವರಿಯಲು ಸರ್ಕಾರ ತೀರ್ಮಾನ?

ಒಳಮೀಸಲಾತಿಗೆ ಸಂಬಂಧಿಸಿದಂತೆ ಉಂಟಾಗಿರುವ ಕಗ್ಗಂಟನ್ನು ಎದುರಿಸಲು ಮುಂದಾಗಿರುವ ರಾಜ್ಯ ಸರ್ಕಾರ, ಶೇಕಡ 17ರ ಮೀಸಲಾತಿ ಪ್ರಮಾಣದಲ್ಲೇ ಮುಂದುವರಿಯಲು ತೀರ್ಮಾನಿಸಿರುವುದಾಗಿ ತಿಳಿದುಬಂದಿದೆ. ಶನಿವಾರ ಸಂಜೆ (ಡಿಸೆಂಬರ್ 6) ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ...

ಗೋವಾ ನೈಟ್ ಕ್ಲಬ್‌ನಲ್ಲಿ ಸಿಲಿಂಡರ್ ಸ್ಫೋಟ; 25 ಮಂದಿ ಸಾವು

ಉತ್ತರ ಗೋವಾದ ನೈಟ್‌ ಕ್ಲಬ್‌ವೊಂದರಲ್ಲಿ ಶನಿವಾರ (ಡಿಸೆಂಬರ್ 6) ತಡರಾತ್ರಿ ಸಂಭವಿಸಿದ ಸಿಲಿಂಡರ್ ಸ್ಫೋಟದಲ್ಲಿ ಕನಿಷ್ಠ 25 ಜನರು ಸಾವನ್ನಪ್ಪಿದ್ದು, ಆರು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಸಾವಿಗೀಡಾದವರಲ್ಲಿ ಹೆಚ್ಚಿನವರು ಕ್ಲಬ್‌ನ ಅಡುಗೆ ಸಿಬ್ಬಂದಿಯಾಗಿದ್ದು,...

ಮೈಸೂರು| ಒಳಮೀಸಲಾತಿ ಹೋರಾಟ ಹತ್ತಿಕ್ಕಲು ನಿಷೇಧಾಜ್ಞೆ ಹೇರಿದ ಕಾಂಗ್ರೆಸ್ ಸರ್ಕಾರ

ಪೂರ್ಣ ಪ್ರಮಾಣದ ಒಳಮೀಸಲಾತಿ ಜಾರಿಗೆ ಆಗ್ರಹಿಸಿ 'ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಹೋರಾಟ ಸಮಿತಿ' ನಡೆಸುತ್ತಿದ್ದ ಹೋರಾಟಕ್ಕೆ ಜಿಲ್ಲಾ ಪೊಲೀಸರು ಅನುಮತಿ ನಿರಾಕರಿಸಿದ್ದು, ಸಿದ್ದರಾಮನಹುಂಡಿಯಿಂದ ಮೈಸೂರಿಗೆ ಇಂದು ಪಾದಯಾತ್ರೆ ಆರಂಭಿಸಿದ ಹೋರಾಟಗಾರರನ್ನು...

‘ನಕಲಿ ಬ್ಯಾಂಕ್ ಗ್ಯಾರಂಟಿ’ ಪ್ರಕರಣ : ರಿಲಯನ್ಸ್ ಪವರ್, ಇತರ ಸಂಸ್ಥೆಗಳ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಿದ ಇಡಿ

ರಿಲಯನ್ಸ್ ಪವರ್ ಕಂಪನಿಯು ಭಾರತೀಯ ಸೌರಶಕ್ತಿ ನಿಗಮಕ್ಕೆ (ಎಸ್‌ಇಸಿಐ) ಟೆಂಡರ್ ಪಡೆಯಲು ಸಲ್ಲಿಸಿದ 68 ಕೋಟಿ ರೂಪಾಯಿಗಳ ನಕಲಿ ಬ್ಯಾಂಕ್ ಗ್ಯಾರಂಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಿಲಯನ್ಸ್ ಪವರ್ ಲಿಮಿಟೆಡ್ ಮತ್ತು ರಿಲಯನ್ಸ್ ಇನ್ಫ್ರಾಸ್ಟ್ರಕ್ಚರ್‌ನ...

ಉತ್ತರ ಪ್ರದೇಶ| ಬಾಬರಿ ಮಸೀದಿ ಮೇಲಿನ ದಾಳಿಗೆ 33 ವರ್ಷ; ಅಯೋಧ್ಯೆ-ವಾರಣಾಸಿಯಲ್ಲಿ ಬಿಗಿ ಭದ್ರತೆ

ಬಾಬರಿ ಮಸೀದಿ ಧ್ವಂಸವಾಗಿ 33ನೇ ವರ್ಷ ತುಂಬುತ್ತಿದೆ. ಮುಂಜಾಗ್ರತಾ ಕ್ರಮವಾಗಿ ಅಯೋಧ್ಯೆ ಮತ್ತು ಉತ್ತರ ಪ್ರದೇಶದ ಇತರ ಪ್ರದೇಶಗಳಲ್ಲಿ ಭದ್ರತಾ ಪಡೆಗಳು ಜಾಗರೂಕರಾಗಿದ್ದು, ಎಲ್ಲಾ ಮಾರ್ಗಗಳಲ್ಲಿ ವಾಹನಗಳ ಸಂಪೂರ್ಣ ತಪಾಸಣೆ ನಡೆಸುತ್ತಿವೆ. ಈ ಕುರಿತು...

ನ್ಯಾಷನಲ್ ಹೆರಾಲ್ಡ್‌ಗೆ ದೇಣಿಗೆ: ‘ಡಿಕೆ’ ಸಹೋದರರಿಗೆ ಇಡಿ-ದೆಹಲಿ ಪೊಲೀಸರಿಂದ ಸಮನ್ಸ್

ನ್ಯಾಷನಲ್ ಹೆರಾಲ್ಡ್ ಮತ್ತು ಯಂಗ್ ಇಂಡಿಯಾ ಸಂಸ್ಥೆಗಳಿಗೆ ನೀಡಿದ ದೇಣಿಗೆಗಳಿಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಕೈಗೊಂಡಿರುವ ತನಿಖೆಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಮತ್ತು ಜಾರಿ ನಿರ್ದೇಶನಾಲಯವು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಮತ್ತು...