Homeನ್ಯಾಯ ಪಥಪಠ್ಯ ಪರಿಷ್ಕರಣೆ ವಿವಾದ; ಎಚ್ಚೆತ್ತುಕೊಂಡ ತಿಪಟೂರು!

ಪಠ್ಯ ಪರಿಷ್ಕರಣೆ ವಿವಾದ; ಎಚ್ಚೆತ್ತುಕೊಂಡ ತಿಪಟೂರು!

- Advertisement -
- Advertisement -

ಕರ್ನಾಟಕದ ಮಕ್ಕಳು ಓದುವ ಪಠ್ಯ ತಿದ್ದಿರುವ ವಿಷಯದಲ್ಲಿ ಎಲ್ಲ ಊರುಗಳಿಗಿಂತಲೂ ತಿಪಟೂರು ವ್ಯಗ್ರಗೊಂಡಿದೆ, ಯಾಕೆಂದರೆ ತಿಪಟೂರು ಶಿಕ್ಷಣ ಸಚಿವರಾಗಿರುವ ಬಿ. ಸಿ ನಾಗೇಶರ ಕ್ಷೇತ್ರ. ಇಲ್ಲಿ ಲಿಂಗಾಯತರು, ಒಕ್ಕಲಿಗರು, ಕುರುಬರು ಮತ್ತು ಓಬಿಸಿಗಳು ಪ್ರಬಲವಾಗಿದ್ದರೂ ಎರಡು ಸಾವಿರ ಮತಗಳನ್ನು ದಾಟದ ಬ್ರಾಹ್ಮಣ ಸಮುದಾಯದ ನಾಗೇಶರನ್ನು ಶಾಸಕರನ್ನಾಗಿ ತಿಪಟೂರು ಎರಡು ಬಾರಿ ಆರಿಸಿಕೊಂಡಿದೆ. ಆ ದಿಸೆಯಲ್ಲಿ ಇಲ್ಲಿನ ಮತದಾರರು ತಾವೆಷ್ಟು ಜಾತ್ಯತೀತ ಮನಸ್ಸಿನವರು ಎಂದು ಸಾಬೀತುಮಾಡಿದ್ದಾರೆ. ಇದಕ್ಕೆ ಮತ್ತೊಂದು ಕಾರಣವೂ ಇದೆ. ನಾಗೇಶ್ ಎಲ್ಲರನ್ನ ಪ್ರೀತಿಯಿಂದ ಮಾತನಾಡಿಸುತ್ತ ಸರಳ ಸಜ್ಜನಿಕೆಯಿಂದ ನಡೆದುಕೊಳ್ಳುತ್ತಿದ್ದುದು; ಎಲ್ಲರ ಭುಜದ ಮೇಲೆ ಕೈಹಾಕಿ ಮಾತನಾಡಿಸುತ್ತ ನಾನೂ ನಿಮ್ಮವನು ಎಂಬಂತೆ ನಡೆದುಕೊಂಡಿದ್ದರು. ಇದು ಮೊದಲು ಗೆದ್ದಾಗಿನ ಕತೆ. ಆದರೀಗ ತಾವು ಗೆದ್ದುಬಂದಿರುವುದೇ ಬ್ರಾಹ್ಮಣ್ಯದ ಹಿತ ಕಾಯಲು ಎಂಬಂತೆ ಶಿಕ್ಷಣ ಮಂತ್ರಿಯಾದಂದಿನಿಂದ ನಡೆದುಕೊಂಡು ಬರುತ್ತಿದ್ದಾರೆ. ಅಧಿಕಾರವಿಲ್ಲದಾಗ ವಿನಯವಂತನ ಸೋಗು ಹಾಕಿದ್ದ ನಾಗೇಶ್ ಶಿಕ್ಷಣ ಸಚಿವನೆಂಬ ಆಯುಧ ಸಿಕ್ಕ ಕೂಡಲೇ ಮಕ್ಕಳ ಮೇಲೆ ಕಂಸನಂತೆ ಎಗರಿದ್ದಾರೆ, ಜೊತೆಗೆ ಜನರಿಗೆ ಮತ್ತು ಮಾಧ್ಯಮಕ್ಕೆ ಸುಳ್ಳು ಹೇಳುತ್ತ ಗೊಂದಲ ಸೃಷ್ಟಿಸುತ್ತಿದ್ದಾರೆ. ಪಠ್ಯಪರಿಷ್ಕರಣ ಸಮಿತಿ ಅಧ್ಯಕ್ಷನ ಪರ ಇವರು ವಹಿಸುವ ವಕಾಲತ್ತು ಅಪ್ರಭುದ್ದತೆಯಿಂದ ಕೂಡಿದೆ. ಇವೆಲ್ಲದರಿಂದ ಸಹಜವಾಗಿ ತಿಪಟೂರಿನ ಪ್ರಜ್ಞಾವಂತರು ಕೆರಳಿದ್ದಾರೆ.

ಆದ್ದರಿಂದ ಜಾಗೃತ ತಿಪಟೂರು ಎಂಬ ವೇದಿಕೆ ನಿರ್ಮಿಸಿಕೊಂಡು ವಿಶ್ವಮಾನವ ಕ್ರಾಂತಿಕಾರಿ ಕುವೆಂಪು ಹೋರಾಟ ಸಮಿತಿಯ ಸಹಯೋಗದಿಂದ ಒಂದು ವಾರ ಕಾಲ ತಿಪಟೂರಿನ ಹಳ್ಳಿಗಳಿಗೆ ಜಾಥಾ ಮಾಡಿದರು. ಅಂಬೇಡ್ಕರ್, ಬಸವಣ್ಣ, ಕುವೆಂಪು ವಿಚಾರಗಳನ್ನ ಹಳ್ಳಿಗಳಿಗೆ ತಲುಪಿಸಿದ ನಂತರ ಅಂತಿಮವಾಗಿ ಕಳೆದ ಭಾನುವಾರ ತಿಪಟೂರಿನಲ್ಲಿ ಪ್ರತಿಭಟನಾ ಜಾಥಾ ಮತ್ತು ಸಭೆ ಏರ್ಪಡಿಸಿದ್ದರು. ಮಂಡ್ಯದಿಂದ ಬಂದಿದ್ದ ಡಾ.ರವೀಂದ್ರ ಅವರು ತಿಪಟೂರಿನ ನಡುರಸ್ತೆಯಲ್ಲಿ ಜೋರು ದನಿಯಲ್ಲಿ “ಪುರಾಣಗಳನ್ನ ಸೃಷ್ಟಿಸಿಕೊಂಡು ಅವುಗಳನ್ನೇ ಸಾಮಾನ್ಯರ ಮೇಲೆ ಹೇರುತ್ತ ಸಾವಿರಾರು ವರ್ಷದಿಂದ ಮುಗ್ಧ ಮನಸ್ಸುಗಳನ್ನು ವಂಚಿಸಿದ್ದು ಸಾಕು. ಈ ಕೆಲಸ ಇನ್ನ ಮುಂದೆ ನಡೆಯುವುದಿಲ್ಲ. ಸುತ್ತಿಬಳಸಿ ಮಾತನಾಡುವ ಅಗತ್ಯವಿಲ್ಲ. ನಾಗೇಶ್ ಒಬ್ಬ ಬ್ರಾಹ್ಮಣ. ಅವರು ನೇಮಿಸಿದ ಪಠ್ಯಪರಿಷ್ಕರಣ ಸಮಿತಿಯಲ್ಲಿ ಒಂಭತ್ತು ಜನ ಬ್ರಾಹ್ಮಣರಿದ್ದಾರೆ. ನಿಮ್ಮ ಜಾತಿಹಿಡಿದು ಮಾತನಾಡದೆ ಬೇರೆ ದಾರಿಯಿಲ್ಲ ಎಂದರು. ಇನ್ನ ವೇದಿಕೆಯಲ್ಲಿ ಮಾತನಾಡಿದ ಕೋಟಗಾನಹಳ್ಳಿ ರಾಮಯ್ಯ “ಆರೆಸ್ಸೆಸ್ ಸಂಘಟನೆಯೇ ಒಂದು ದೇಶದ್ರೋಹಿ ಸಂಘಟನೆ. ಅದರಿಂದ ಸಮಾನತೆ ಸಾಧ್ಯವಿಲ್ಲ; ದೇಶಕಟ್ಟುವ ಕೆಲಸಬಿಟ್ಟು ಜನಿವಾರದ ಕೆಲಸ ಮಾಡುತ್ತಿದ್ದಾರೆ. ಅಂಬೇಡ್ಕರ್ ಮನುಧರ್ಮದ ಗ್ರಂಥ ಸುಟ್ಟಂತೆ ನಾವು ಈ ಸರಕಾರ ರೂಪಿಸಿದ ವಿಕೃತ ಪಠ್ಯಪುಸ್ತಕ (ಪರಿಷ್ಕರಣೆ ಮಾಡಿರುವ) ಸುಡೋಣ. ನಮ್ಮ ಮೈಸೂರು ಅರಸರ ಫೋಟೊ ಬದಲು ಶಿವಾಜಿ ಫೋಟೊ ತೋರಿಸುತ್ತಾರೆ.

ಮರಾಠರಿಂದ ಕರ್ನಾಟಕದ ಮೇಲೆ ನಡೆದ ದಾಳಿಗಳ ಇತಿಹಾಸ ಎಲ್ಲರಿಗೂ ಗೊತ್ತಿದೆ. ಹೀಗಿದ್ದರೂ ಇತಿಹಾಸ ತಿರುಚುತ್ತಾ ಅಂಬೇಡ್ಕರ್, ಗಾಂಧಿ, ಕುವೆಂಪು ಅವರಿಗೆ ಅಗೌರವ ತೋರಿದ್ದಾರೆ. ಇವರು ತಿರುಚಿರುವ ಪಠ್ಯವನ್ನು ಸುಡುವುದು ನಮ್ಮ ಕರ್ತವ್ಯ ಎಂದರು.

ಇನ್ನ ಹಿರಿಯೂರಿನ ಕೋಡಿಹಳ್ಳಿ ಆದಿಜಾಂಭವ ಮಠದ ಷಡಕ್ಷರ ಮುನಿ ಸ್ವಾಮೀಜಿ, “ಈ ಸರಕಾರ ಪಠ್ಯಪುಸ್ತಕಗಳ ವಿಷಯದಲ್ಲಿ ಅಕ್ಷರಗಳಿಗೆ ಬಣ್ಣ ಬಳಿಯತೊಡಗಿದೆ. ನಾವು ಕೇಳುತ್ತಿರುವುದು ಪಠ್ಯವನ್ನ ಸರಿಯಾಗಿ ರೂಪಿಸಿ ಎಂದು. ತಾವೇ ಬದಲಾಯಿಸಿದ ಪಠ್ಯದಲ್ಲಿನ ತಪ್ಪು ಕೃತ್ಯಗಳನ್ನ ಒಪ್ಪಿಕೊಂಡರೂ, ಹಿಂತೆಗೆದುಕೊಳ್ಳದೆ ಸರಕಾರ ಕಾಲ ದೂಡುತ್ತಿದೆ, ಹಠಕ್ಕೆ ಬಿದ್ದಿದೆ. ಶಿಕ್ಷಣ ಸಚಿವ ಮಾಡುವುದೆಲ್ಲವನ್ನು ಮಾಡಿ ಮೌನಕ್ಕೆ ಶರಣಾಗಿದ್ದಾರೆ. ಮಕ್ಕಳ ಭವಿಷ್ಯದ ವಿಷಯದಲ್ಲಿ ಹೀಗೆ ಹಠ ಹಿಡಿಯುವುದು ಸರಿಯಲ್ಲ ಎಂದರು. ಇನ್ನು ಅಲ್ಲಮಪ್ರಭು ಮಠದ ತಿಪ್ಪೇರುದ್ರಸ್ವಾಮಿಗಳು, “ನಿಮಗೆ ಅಂಬೇಡ್ಕರ್ ವಿಷಯ ತೆಗೆದರೆ ಭಯವಾಗುವುದೇಕೆ? ಅದಕ್ಕೆ ಇರಬೇಕು ’ಸಂವಿಧಾನ ಶಿಲ್ಪಿ ಗುಣವಾಚಕ ತೆಗೆದಿದ್ದೀರಿ. ಬಸವನಿಗೆ ಉಪನಯನ ಮಾಡಿ ಜನಿವಾರ ಹಾಕಿಬಿಟ್ಟಿದ್ದೀರಿ. ಮುಖ್ಯಮಂತ್ರಿಗಳಿಗೆ ಇದು ಅಘಾತ ನೀಡಬೇಕಿತ್ತು. ಒಂದು ನಾಯಿ ಸಿನಿಮಾ ನೋಡಿ ಗಳಗಳನೆ ಅತ್ತ ನಿಮ್ಮ ಕಣ್ಮುಂದೆ ಶರಣರ ಹತ್ಯಾಕಾಂಡದ ದೃಶ್ಯ ಮೂಡಬೇಕಿತ್ತು. ಸಾಕಿದ ನಾಯಿ ಸಾವಿಗೆ ದುಃಖ ಪಡುವುದು ಮಾನವೀಯ ಲಕ್ಷಣ. ಅದನ್ನು ನಾವು ಆಡಿಕೊಳ್ಳುವುದಿಲ್ಲ. ಆದರೆ ನಿಮ್ಮದು ತೋರಿಕೆಯ ಗುಣ ಎಂಬ ಅನುಮಾನ ಮೂಡಬಾರದು” ಎಂದರು. ಜಿ.ಬಿ ಪಾಟೀಲರು ಮಾತನಾಡಿ, “ನಾಗೇಶ್‌ರಂತಹ ಜಾತಿವಾದಿಗಳು ರಾಜಕಾರಣದಲ್ಲಿರಬಾರದು. ಅದರಲ್ಲೂ ಶಿಕ್ಷಣ ಸಚಿವರಾದರೆ ಏನು ಮಾಡಬಲ್ಲರೆಂಬುದಕ್ಕೆ ಈಗಿನ ಘಟನೆಯೇ ಸಾಕ್ಷಿ. ಇಂತವರನ್ನ ಮನೆಗೆ ಕಳಿಸುವ ಶಕ್ತಿ ತಿಪಟೂರಿನ ಜನರಿಗೆ ಮಾತ್ರ ಇದೆ. ಆದ್ದರಿಂದ ಮುಂದಿನ ಚುನಾವಣೆಯಲ್ಲಿ ಇವರು ನಿರ್ಗಮಿಸುವಂತೆ ಮಾಡಿ. ಏಕೆಂದರೆ ವೈದ್ಯ ದಾರಿ ತಪ್ಪಿದರೆ ರೋಗಿ ಕತೆ ಮುಗಿದಂತೆಯೇ. ಹಾಗೆಯೇ ಮಕ್ಕಳಿಗೆ ಸಂಕುಚಿತ ಮನೋಭಾವ ಬೆಳೆಸುವ ವಿಷ ಉಣಿಸಿದರೆ ಅದರ ಪರಿಣಾಮ ಈ ಸಮಾಜದ ಮೇಲಾಗುತ್ತದೆ. ಆದ್ದರಿಂದ ನಾಗೇಶರಿಗೆ ಅಧಿಕಾರದಿಂದ ಗೌರವದ ನಿರ್ಗಮನ ಹೇಳಿ” ಎಂದರು.

ತಿಪಟೂರಿಗೂ ಪ್ರತಿಭಟನೆಗೂ ಬಹಳ ದೂರ. ಇದೊಂತರದ ಸಂತೃಪ್ತ ಊರು. ಜನ ತಮ್ಮಷ್ಟಕ್ಕೆ ತಾವಿರುವುದನ್ನು ಬಹಳ ಹಿಂದಿನಿಂದಲೂ ಕಲಿತಿದ್ದಾರೆ. ಇಂತಲ್ಲಿ ನಾಗೇಶರಂಥವರು ಬೆಳೆಯುವುದು ಸಹಜ. ಆದ್ದರಿಂದ ಇಲ್ಲಿ ಎಚ್ಚೆತ್ತುಕೊಂಡ ಯುವ ಜನರಾದ ಶಶಿಧರ, ಶ್ರೀಕಾಂತ ಮುಂತಾದವರೆಲ್ಲಾ ಸೇರಿ ಹೋರಾಟ ರೂಪಿಸಿದರು. ಇದಕ್ಕೆ ಒತ್ತಾಸೆಯಾಗಿ ಮಂಜುನಾಥ ಅದ್ದೆ, ಮುಕುಂದರಾಜ್, ಗಂಗಾಧರಯ್ಯ ಇನ್ನು ಹಲವು ಜನರ ಬೆಂಬಲದಿಂದ ಒಂದು ಅಪರೂಪದ ಪ್ರತಿಭಟನಾ ಜಾಥಾ ನಡೆಯಿತು. ಇಂತದೇ ಜಾಥಾ ನಡೆಸಿದ ರವೀಶ್ ಬಸಪ್ಪ ಚಿಕ್ಕಮಗಳೂರಿಂದ ಬಂದಿದ್ದರೆ, ರೈತನಾಯಕ ಕೆ.ಟಿ ಗಂಗಾಧರ್ ಶಿವಮೊಗ್ಗದಿಂದ ಆಗಮಿಸಿದ್ದರು. ಬೆಳವಂಗಲದ ಪ್ರಭಾರ ದನಿ ಮೆರವಣಿಗೆಯಲ್ಲಿ ಮೊಳಗಿದ್ದೊಂದು ವಿಶೇಷ. ಸದ್ಯಕ್ಕೆ ಶಶಿಧರರ ಟೀಮು ತಿಪಟೂರು ಮತ್ತೆ ಮಲಗದಂತೆ ನೋಡಿಕೊಳ್ಳಬೇಕಿದೆ. ಏಕೆಂದರೆ ನಾಗೇಶ ಈ ಪ್ರತಿಭಟನೆಗೆ ಕೇರ್ ಮಾಡಿದಂತೆ ಕಾಣುವುದಿಲ್ಲ.

– ವರದಿಗಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪ್ರಧಾನಿ ಮೋದಿಯವರ ವಿದೇಶಾಂಗ ನೀತಿಯ ಸಾರ ಮತ್ತು ಶೈಲಿ ಎರಡಕ್ಕೂ ರಾಷ್ಟ್ರವು ಭಾರಿ ಬೆಲೆ ತೆರುತ್ತಿದೆ’: ಕಾಂಗ್ರೆಸ್

ನವದೆಹಲಿ: ಇರಾನ್ ಮೇಲೆ ನಡೆದ ಯುದ್ಧಕ್ಕೆ ಸರ್ಕಾರದ ಪ್ರತಿಕ್ರಿಯೆಯು ಭಾರತದ ಮೌಲ್ಯಗಳು, ತತ್ವಗಳು ಮತ್ತು ಹಿತಾಸಕ್ತಿಗಳಿಗೆ ಮಾಡಿದ ದ್ರೋಹವಾಗಿದೆ ಎಂದು ಕಾಂಗ್ರೆಸ್ ಭಾನುವಾರ ಹೇಳಿದೆ, ಪ್ರಧಾನಿ ನರೇಂದ್ರ ಮೋದಿಯವರ ವಿದೇಶಾಂಗ ನೀತಿಯ ಸಾರ...

ಬಂಗಾಳ ಎಸ್‌ಐಆರ್| ಮುಸ್ಲಿಂ ಬಹುಸಂಖ್ಯಾತ ಮುರ್ಷಿದಾಬಾದ್-ಮಾಲ್ಡಾದಲ್ಲಿ ಅತ್ಯಧಿಕ ಮತದಾರರ ಪರಿಶೀಲನೆ ಬಾಕಿ

ರಾಜ್ಯದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಚುನಾವಣಾ ಆಯೋಗ ಪ್ರಕಟಿಸಿದ ಅಂತಿಮ ಮತದಾರರ ಪಟ್ಟಿಯ ಪ್ರಕಾರ, ಪಶ್ಚಿಮ ಬಂಗಾಳದ ಮುಸ್ಲಿಂ ಪ್ರಾಬಲ್ಯದ ಮುರ್ಷಿದಾಬಾದ್ ಮತ್ತು ಮಾಲ್ಡಾ ಜಿಲ್ಲೆಗಳಲ್ಲಿ ದಾಖಲೆಗಳ ಪರಿಶೀಲನೆಗೆ...

‘ಪ್ರಜಾಪ್ರಭುತ್ವ ಜಗತ್ತಿನ ನಾಯಕರು, ಸಾರ್ವಭೌಮ ರಾಷ್ಟ್ರದ ನಾಯಕನನ್ನು ಹತ್ಯೆ ಮಾಡಿದ್ದು ಹೇಯ ಕೃತ್ಯ’: ಖಮೇನಿ ಹತ್ಯೆಗೆ ಪ್ರಿಯಾಂಕ ಗಾಂಧಿ ಖಂಡನೆ

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಹತ್ಯೆಯನ್ನು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಭಾನುವಾರ ತೀವ್ರವಾಗಿ ಖಂಡಿಸಿದ್ದಾರೆ. "ಪ್ರಜಾಪ್ರಭುತ್ವ ಜಗತ್ತಿನ ನಾಯಕರು ಎಂದು ಕರೆಯಲ್ಪಡುವವರು" ಸಾರ್ವಭೌಮ ರಾಷ್ಟ್ರದ ನಾಯಕತ್ವವನ್ನು ಗುರಿಯಾಗಿಸಿಕೊಂಡು...

ದುಬೈ-ಅಬುಧಾಬಿ ಮೇಲೆ ದಾಳಿ; ಇರಾನ್‌ಗೆ ಯುಎಇ ಎಚ್ಚರಿಕೆ

ಇರಾನ್ ತನ್ನ ನೆರೆಹೊರೆಯವರನ್ನು ಗುರಿಯಾಗಿಸಿಕೊಳ್ಳಬಾರದು ಎಂದು ಯುಎಇ ಅಧ್ಯಕ್ಷರ ರಾಜತಾಂತ್ರಿಕ ಸಲಹೆಗಾರ ಅನ್ವರ್ ಗರ್ಗಶ್ ಎಚ್ಚರಿಕೆ ನೀಡಿದ್ದಾರೆ. "ಗಲ್ಫ್ ರಾಷ್ಟ್ರಗಳ ವಿರುದ್ಧ ಇರಾನ್ ಆಕ್ರಮಣವು ತಪ್ಪು ಲೆಕ್ಕಾಚಾರವಾಗಿದೆ. ಇದೇ ಬೆಳವಣಿಗೆ ನಿರ್ಣಾಯಕ ಹಂತದಲ್ಲಿ ಇರಾನ್...

ಇರಾನ್‌ ಹಂಗಾಮಿ ಸರ್ವೋಚ್ಚ ನಾಯಕರಾಗಿ ಅಯಾತೊಲ್ಲ ಅಲಿರೆಝಾ ಅರಾಫಿ ನೇಮಕ

ಅಮೆರಿಕ-ಇಸ್ರೇಲ್ ನಡೆಸಿದ ಜಂಟಿ ವೈಮಾನಿಕ ದಾಳಿಯಲ್ಲಿ ಅಯತೊಲ್ಲಾ ಅಲಿ ಖಮೇನಿ ಹತ್ಯೆಯಾದ ಹಿನ್ನೆಲೆ, ಹಿರಿಯ ಧರ್ಮಗುರು ಅಯತೊಲ್ಲಾ ಅಲಿರೆಝಾ ಅರಾಫಿ ಅವರು ಇರಾನ್‌ನ ಹಂಗಾಮಿ ಸರ್ವೋಚ್ಚ ನಾಯಕರಾಗಿ ಆಯ್ಕೆ ಮಾಡಲಾಗಿದೆ ಎಂದು ಸರ್ಕಾರಿ-ಸಂಯೋಜಿತ...

ಖಮೇನಿ ಹತ್ಯೆ ವಿರೋಧಿಸಿ ಬೃಹತ್ ಪ್ರತಿಭಟನೆ; ಶ್ರೀನಗರದಲ್ಲಿ ಇಂಟರ್‌ನೆಟ್ ಸ್ತಬ್ಧ

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಹತ್ಯೆಯನ್ನು ವಿರೋಧಿಸಿ ಕಾಶ್ಮೀರದಾದ್ಯಂತ ಬೃಹತ್ ಪ್ರತಿಭಟನೆಗಳು ಭುಗಿಲೆದ್ದಿವೆ. ಶ್ರೀನಗರದಲ್ಲಿರುವ ವಿಶ್ವಸಂಸ್ಥೆಯ ಮಿಲಿಟರಿ ವೀಕ್ಷಕರ ಗುಂಪು (UNMOGIP) ಪ್ರಧಾನ ಕಚೇರಿಯ ಮುಂದೆ ದೊಡ್ಡ ಜನಸಮೂಹ ಜಮಾಯಿಸಿತ್ತು....

ಅಮೆರಿಕಾ-ಇಸ್ರೇಲ್ ‘ಪುಂಡ ರಾಷ್ಟ್ರಗಳು’; ಇರಾನ್ ಮೇಲಿನ ದಾಳಿ ಖಂಡಿಸಿದ ಕೇರಳ ಸಿಎಂ; ಅನಿವಾಸಿ ಭಾರತೀಯರ ಆತಂಕ ಪರಿಹರಿಸಲು ಕೇಂದ್ರಕ್ಕೆ ಮನವಿ

ತಿರುವನಂತಪುರಂ: ಇಸ್ರೇಲ್ ಮತ್ತು ಅಮೆರಿಕ ಇರಾನ್ ಮೇಲೆ ನಡೆಸುತ್ತಿರುವ ದಾಳಿಯನ್ನು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತೀವ್ರವಾಗಿ ಖಂಡಿಸಿದ್ದಾರೆ ಮತ್ತು ಗಲ್ಫ್ ರಾಷ್ಟ್ರಗಳಲ್ಲಿರುವ ಹಲವಾರು ಅನಿವಾಸಿ ಭಾರತೀಯರ ಆತಂಕವನ್ನು ಪರಿಹರಿಸಲು ಕೇಂದ್ರವು ತಕ್ಷಣ...

ಅಮೆರಿಕ-ಇಸ್ರೇಲಿ ಮಿಲಿಟರಿ ದಾಳಿಯಲ್ಲಿ ‘ಇರಾನ್‌ ಸಶಸ್ತ್ರ ಪಡೆಗಳ ಮುಖ್ಯಸ್ಥ ಅಬ್ದುಲ್ರಹೀಮ್ ಮೌಸಾವಿ ಹತ್ಯೆ; ಇರಾನ್ ಮಾಧ್ಯಮಗಳ ವರದಿ 

ಟೆಹ್ರಾನ್: ಇರಾನ್ ಮೇಲೆ ಅಮೆರಿಕ-ಇಸ್ರೇಲ್ ನಡೆಸಿದ ದಾಳಿಯಲ್ಲಿ ಇರಾನ್ ಸಶಸ್ತ್ರ ಪಡೆಗಳ ಮುಖ್ಯಸ್ಥ ಅಬ್ದುಲ್ರಹೀಮ್ ಮೌಸಾವಿ ಸಾವನ್ನಪ್ಪಿದ್ದಾರೆ ಎಂದು ದೇಶದ ಸರ್ಕಾರಿ ಸ್ವಾಮ್ಯದ ಐಆರ್‌ಐಬಿ ಟಿವಿ ಭಾನುವಾರ ವರದಿ ಮಾಡಿದೆ. ಟೆಹ್ರಾನ್ ಮೇಲಿನ ದಾಳಿಯಲ್ಲಿ...

ಕರಾಚಿ| ಖಮೇನಿ ಹತ್ಯೆ ಖಂಡಿಸಿ ಪ್ರತಿಭಟನೆ ವೇಳೆ ಘರ್ಷಣೆ : ಕನಿಷ್ಠ 9 ಸಾವು

ಪಾಕಿಸ್ತಾನದ ಕರಾಚಿಯಲ್ಲಿರುವ ಅಮೆರಿಕ ದೂತಾವಾಸದ ಬಳಿ ಭಾನುವಾರ (ಮಾ.1) ಇರಾನ್ ಪರ ಪ್ರತಿಭಟನಾಕಾರರು ಮತ್ತು ಭದ್ರತಾ ಸಿಬ್ಬಂದಿಯ ನಡುವೆ ಘರ್ಷಣೆ ಉಂಟಾಗಿ ಕನಿಷ್ಠ ಒಂಭತ್ತು ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. "ನಾವು ಕನಿಷ್ಠ ಎಂಟು...

ಇರಾನ್-ಇಸ್ರೇಲ್ ಯುದ್ಧ: ಭಾರತ ತಕ್ಷಣದ ಆರ್ಥಿಕ ಸವಾಲುಗಳನ್ನು ಎದುರಿಸುವ ಸಾಧ್ಯತೆಯಿದೆ; ವರದಿ

ಫೆಬ್ರವರಿ 28, 2026 ರಂದು ಇರಾನ್ ಮೇಲೆ ಅಮೆರಿಕ-ಇಸ್ರೇಲ್ ಮುಷ್ಕರದ ನಂತರ ಇರಾನ್-ಇಸ್ರೇಲ್ ಸಂಘರ್ಷದಲ್ಲಿ ತೀವ್ರ ಏರಿಕೆಯು ಪಶ್ಚಿಮ ಏಷ್ಯಾದಲ್ಲಿ ಭೌಗೋಳಿಕ ರಾಜಕೀಯ ಅಪಾಯಗಳನ್ನು ತೀವ್ರಗೊಳಿಸಿದೆ ಮತ್ತು ಜಾಗತಿಕ ಇಂಧನ ಮಾರುಕಟ್ಟೆಗಳಿಗೆ ತಕ್ಷಣದ...