Homeನ್ಯಾಯ ಪಥಪಠ್ಯ ಪರಿಷ್ಕರಣೆ ವಿವಾದ; ಎಚ್ಚೆತ್ತುಕೊಂಡ ತಿಪಟೂರು!

ಪಠ್ಯ ಪರಿಷ್ಕರಣೆ ವಿವಾದ; ಎಚ್ಚೆತ್ತುಕೊಂಡ ತಿಪಟೂರು!

- Advertisement -
- Advertisement -

ಕರ್ನಾಟಕದ ಮಕ್ಕಳು ಓದುವ ಪಠ್ಯ ತಿದ್ದಿರುವ ವಿಷಯದಲ್ಲಿ ಎಲ್ಲ ಊರುಗಳಿಗಿಂತಲೂ ತಿಪಟೂರು ವ್ಯಗ್ರಗೊಂಡಿದೆ, ಯಾಕೆಂದರೆ ತಿಪಟೂರು ಶಿಕ್ಷಣ ಸಚಿವರಾಗಿರುವ ಬಿ. ಸಿ ನಾಗೇಶರ ಕ್ಷೇತ್ರ. ಇಲ್ಲಿ ಲಿಂಗಾಯತರು, ಒಕ್ಕಲಿಗರು, ಕುರುಬರು ಮತ್ತು ಓಬಿಸಿಗಳು ಪ್ರಬಲವಾಗಿದ್ದರೂ ಎರಡು ಸಾವಿರ ಮತಗಳನ್ನು ದಾಟದ ಬ್ರಾಹ್ಮಣ ಸಮುದಾಯದ ನಾಗೇಶರನ್ನು ಶಾಸಕರನ್ನಾಗಿ ತಿಪಟೂರು ಎರಡು ಬಾರಿ ಆರಿಸಿಕೊಂಡಿದೆ. ಆ ದಿಸೆಯಲ್ಲಿ ಇಲ್ಲಿನ ಮತದಾರರು ತಾವೆಷ್ಟು ಜಾತ್ಯತೀತ ಮನಸ್ಸಿನವರು ಎಂದು ಸಾಬೀತುಮಾಡಿದ್ದಾರೆ. ಇದಕ್ಕೆ ಮತ್ತೊಂದು ಕಾರಣವೂ ಇದೆ. ನಾಗೇಶ್ ಎಲ್ಲರನ್ನ ಪ್ರೀತಿಯಿಂದ ಮಾತನಾಡಿಸುತ್ತ ಸರಳ ಸಜ್ಜನಿಕೆಯಿಂದ ನಡೆದುಕೊಳ್ಳುತ್ತಿದ್ದುದು; ಎಲ್ಲರ ಭುಜದ ಮೇಲೆ ಕೈಹಾಕಿ ಮಾತನಾಡಿಸುತ್ತ ನಾನೂ ನಿಮ್ಮವನು ಎಂಬಂತೆ ನಡೆದುಕೊಂಡಿದ್ದರು. ಇದು ಮೊದಲು ಗೆದ್ದಾಗಿನ ಕತೆ. ಆದರೀಗ ತಾವು ಗೆದ್ದುಬಂದಿರುವುದೇ ಬ್ರಾಹ್ಮಣ್ಯದ ಹಿತ ಕಾಯಲು ಎಂಬಂತೆ ಶಿಕ್ಷಣ ಮಂತ್ರಿಯಾದಂದಿನಿಂದ ನಡೆದುಕೊಂಡು ಬರುತ್ತಿದ್ದಾರೆ. ಅಧಿಕಾರವಿಲ್ಲದಾಗ ವಿನಯವಂತನ ಸೋಗು ಹಾಕಿದ್ದ ನಾಗೇಶ್ ಶಿಕ್ಷಣ ಸಚಿವನೆಂಬ ಆಯುಧ ಸಿಕ್ಕ ಕೂಡಲೇ ಮಕ್ಕಳ ಮೇಲೆ ಕಂಸನಂತೆ ಎಗರಿದ್ದಾರೆ, ಜೊತೆಗೆ ಜನರಿಗೆ ಮತ್ತು ಮಾಧ್ಯಮಕ್ಕೆ ಸುಳ್ಳು ಹೇಳುತ್ತ ಗೊಂದಲ ಸೃಷ್ಟಿಸುತ್ತಿದ್ದಾರೆ. ಪಠ್ಯಪರಿಷ್ಕರಣ ಸಮಿತಿ ಅಧ್ಯಕ್ಷನ ಪರ ಇವರು ವಹಿಸುವ ವಕಾಲತ್ತು ಅಪ್ರಭುದ್ದತೆಯಿಂದ ಕೂಡಿದೆ. ಇವೆಲ್ಲದರಿಂದ ಸಹಜವಾಗಿ ತಿಪಟೂರಿನ ಪ್ರಜ್ಞಾವಂತರು ಕೆರಳಿದ್ದಾರೆ.

ಆದ್ದರಿಂದ ಜಾಗೃತ ತಿಪಟೂರು ಎಂಬ ವೇದಿಕೆ ನಿರ್ಮಿಸಿಕೊಂಡು ವಿಶ್ವಮಾನವ ಕ್ರಾಂತಿಕಾರಿ ಕುವೆಂಪು ಹೋರಾಟ ಸಮಿತಿಯ ಸಹಯೋಗದಿಂದ ಒಂದು ವಾರ ಕಾಲ ತಿಪಟೂರಿನ ಹಳ್ಳಿಗಳಿಗೆ ಜಾಥಾ ಮಾಡಿದರು. ಅಂಬೇಡ್ಕರ್, ಬಸವಣ್ಣ, ಕುವೆಂಪು ವಿಚಾರಗಳನ್ನ ಹಳ್ಳಿಗಳಿಗೆ ತಲುಪಿಸಿದ ನಂತರ ಅಂತಿಮವಾಗಿ ಕಳೆದ ಭಾನುವಾರ ತಿಪಟೂರಿನಲ್ಲಿ ಪ್ರತಿಭಟನಾ ಜಾಥಾ ಮತ್ತು ಸಭೆ ಏರ್ಪಡಿಸಿದ್ದರು. ಮಂಡ್ಯದಿಂದ ಬಂದಿದ್ದ ಡಾ.ರವೀಂದ್ರ ಅವರು ತಿಪಟೂರಿನ ನಡುರಸ್ತೆಯಲ್ಲಿ ಜೋರು ದನಿಯಲ್ಲಿ “ಪುರಾಣಗಳನ್ನ ಸೃಷ್ಟಿಸಿಕೊಂಡು ಅವುಗಳನ್ನೇ ಸಾಮಾನ್ಯರ ಮೇಲೆ ಹೇರುತ್ತ ಸಾವಿರಾರು ವರ್ಷದಿಂದ ಮುಗ್ಧ ಮನಸ್ಸುಗಳನ್ನು ವಂಚಿಸಿದ್ದು ಸಾಕು. ಈ ಕೆಲಸ ಇನ್ನ ಮುಂದೆ ನಡೆಯುವುದಿಲ್ಲ. ಸುತ್ತಿಬಳಸಿ ಮಾತನಾಡುವ ಅಗತ್ಯವಿಲ್ಲ. ನಾಗೇಶ್ ಒಬ್ಬ ಬ್ರಾಹ್ಮಣ. ಅವರು ನೇಮಿಸಿದ ಪಠ್ಯಪರಿಷ್ಕರಣ ಸಮಿತಿಯಲ್ಲಿ ಒಂಭತ್ತು ಜನ ಬ್ರಾಹ್ಮಣರಿದ್ದಾರೆ. ನಿಮ್ಮ ಜಾತಿಹಿಡಿದು ಮಾತನಾಡದೆ ಬೇರೆ ದಾರಿಯಿಲ್ಲ ಎಂದರು. ಇನ್ನ ವೇದಿಕೆಯಲ್ಲಿ ಮಾತನಾಡಿದ ಕೋಟಗಾನಹಳ್ಳಿ ರಾಮಯ್ಯ “ಆರೆಸ್ಸೆಸ್ ಸಂಘಟನೆಯೇ ಒಂದು ದೇಶದ್ರೋಹಿ ಸಂಘಟನೆ. ಅದರಿಂದ ಸಮಾನತೆ ಸಾಧ್ಯವಿಲ್ಲ; ದೇಶಕಟ್ಟುವ ಕೆಲಸಬಿಟ್ಟು ಜನಿವಾರದ ಕೆಲಸ ಮಾಡುತ್ತಿದ್ದಾರೆ. ಅಂಬೇಡ್ಕರ್ ಮನುಧರ್ಮದ ಗ್ರಂಥ ಸುಟ್ಟಂತೆ ನಾವು ಈ ಸರಕಾರ ರೂಪಿಸಿದ ವಿಕೃತ ಪಠ್ಯಪುಸ್ತಕ (ಪರಿಷ್ಕರಣೆ ಮಾಡಿರುವ) ಸುಡೋಣ. ನಮ್ಮ ಮೈಸೂರು ಅರಸರ ಫೋಟೊ ಬದಲು ಶಿವಾಜಿ ಫೋಟೊ ತೋರಿಸುತ್ತಾರೆ.

ಮರಾಠರಿಂದ ಕರ್ನಾಟಕದ ಮೇಲೆ ನಡೆದ ದಾಳಿಗಳ ಇತಿಹಾಸ ಎಲ್ಲರಿಗೂ ಗೊತ್ತಿದೆ. ಹೀಗಿದ್ದರೂ ಇತಿಹಾಸ ತಿರುಚುತ್ತಾ ಅಂಬೇಡ್ಕರ್, ಗಾಂಧಿ, ಕುವೆಂಪು ಅವರಿಗೆ ಅಗೌರವ ತೋರಿದ್ದಾರೆ. ಇವರು ತಿರುಚಿರುವ ಪಠ್ಯವನ್ನು ಸುಡುವುದು ನಮ್ಮ ಕರ್ತವ್ಯ ಎಂದರು.

ಇನ್ನ ಹಿರಿಯೂರಿನ ಕೋಡಿಹಳ್ಳಿ ಆದಿಜಾಂಭವ ಮಠದ ಷಡಕ್ಷರ ಮುನಿ ಸ್ವಾಮೀಜಿ, “ಈ ಸರಕಾರ ಪಠ್ಯಪುಸ್ತಕಗಳ ವಿಷಯದಲ್ಲಿ ಅಕ್ಷರಗಳಿಗೆ ಬಣ್ಣ ಬಳಿಯತೊಡಗಿದೆ. ನಾವು ಕೇಳುತ್ತಿರುವುದು ಪಠ್ಯವನ್ನ ಸರಿಯಾಗಿ ರೂಪಿಸಿ ಎಂದು. ತಾವೇ ಬದಲಾಯಿಸಿದ ಪಠ್ಯದಲ್ಲಿನ ತಪ್ಪು ಕೃತ್ಯಗಳನ್ನ ಒಪ್ಪಿಕೊಂಡರೂ, ಹಿಂತೆಗೆದುಕೊಳ್ಳದೆ ಸರಕಾರ ಕಾಲ ದೂಡುತ್ತಿದೆ, ಹಠಕ್ಕೆ ಬಿದ್ದಿದೆ. ಶಿಕ್ಷಣ ಸಚಿವ ಮಾಡುವುದೆಲ್ಲವನ್ನು ಮಾಡಿ ಮೌನಕ್ಕೆ ಶರಣಾಗಿದ್ದಾರೆ. ಮಕ್ಕಳ ಭವಿಷ್ಯದ ವಿಷಯದಲ್ಲಿ ಹೀಗೆ ಹಠ ಹಿಡಿಯುವುದು ಸರಿಯಲ್ಲ ಎಂದರು. ಇನ್ನು ಅಲ್ಲಮಪ್ರಭು ಮಠದ ತಿಪ್ಪೇರುದ್ರಸ್ವಾಮಿಗಳು, “ನಿಮಗೆ ಅಂಬೇಡ್ಕರ್ ವಿಷಯ ತೆಗೆದರೆ ಭಯವಾಗುವುದೇಕೆ? ಅದಕ್ಕೆ ಇರಬೇಕು ’ಸಂವಿಧಾನ ಶಿಲ್ಪಿ ಗುಣವಾಚಕ ತೆಗೆದಿದ್ದೀರಿ. ಬಸವನಿಗೆ ಉಪನಯನ ಮಾಡಿ ಜನಿವಾರ ಹಾಕಿಬಿಟ್ಟಿದ್ದೀರಿ. ಮುಖ್ಯಮಂತ್ರಿಗಳಿಗೆ ಇದು ಅಘಾತ ನೀಡಬೇಕಿತ್ತು. ಒಂದು ನಾಯಿ ಸಿನಿಮಾ ನೋಡಿ ಗಳಗಳನೆ ಅತ್ತ ನಿಮ್ಮ ಕಣ್ಮುಂದೆ ಶರಣರ ಹತ್ಯಾಕಾಂಡದ ದೃಶ್ಯ ಮೂಡಬೇಕಿತ್ತು. ಸಾಕಿದ ನಾಯಿ ಸಾವಿಗೆ ದುಃಖ ಪಡುವುದು ಮಾನವೀಯ ಲಕ್ಷಣ. ಅದನ್ನು ನಾವು ಆಡಿಕೊಳ್ಳುವುದಿಲ್ಲ. ಆದರೆ ನಿಮ್ಮದು ತೋರಿಕೆಯ ಗುಣ ಎಂಬ ಅನುಮಾನ ಮೂಡಬಾರದು” ಎಂದರು. ಜಿ.ಬಿ ಪಾಟೀಲರು ಮಾತನಾಡಿ, “ನಾಗೇಶ್‌ರಂತಹ ಜಾತಿವಾದಿಗಳು ರಾಜಕಾರಣದಲ್ಲಿರಬಾರದು. ಅದರಲ್ಲೂ ಶಿಕ್ಷಣ ಸಚಿವರಾದರೆ ಏನು ಮಾಡಬಲ್ಲರೆಂಬುದಕ್ಕೆ ಈಗಿನ ಘಟನೆಯೇ ಸಾಕ್ಷಿ. ಇಂತವರನ್ನ ಮನೆಗೆ ಕಳಿಸುವ ಶಕ್ತಿ ತಿಪಟೂರಿನ ಜನರಿಗೆ ಮಾತ್ರ ಇದೆ. ಆದ್ದರಿಂದ ಮುಂದಿನ ಚುನಾವಣೆಯಲ್ಲಿ ಇವರು ನಿರ್ಗಮಿಸುವಂತೆ ಮಾಡಿ. ಏಕೆಂದರೆ ವೈದ್ಯ ದಾರಿ ತಪ್ಪಿದರೆ ರೋಗಿ ಕತೆ ಮುಗಿದಂತೆಯೇ. ಹಾಗೆಯೇ ಮಕ್ಕಳಿಗೆ ಸಂಕುಚಿತ ಮನೋಭಾವ ಬೆಳೆಸುವ ವಿಷ ಉಣಿಸಿದರೆ ಅದರ ಪರಿಣಾಮ ಈ ಸಮಾಜದ ಮೇಲಾಗುತ್ತದೆ. ಆದ್ದರಿಂದ ನಾಗೇಶರಿಗೆ ಅಧಿಕಾರದಿಂದ ಗೌರವದ ನಿರ್ಗಮನ ಹೇಳಿ” ಎಂದರು.

ತಿಪಟೂರಿಗೂ ಪ್ರತಿಭಟನೆಗೂ ಬಹಳ ದೂರ. ಇದೊಂತರದ ಸಂತೃಪ್ತ ಊರು. ಜನ ತಮ್ಮಷ್ಟಕ್ಕೆ ತಾವಿರುವುದನ್ನು ಬಹಳ ಹಿಂದಿನಿಂದಲೂ ಕಲಿತಿದ್ದಾರೆ. ಇಂತಲ್ಲಿ ನಾಗೇಶರಂಥವರು ಬೆಳೆಯುವುದು ಸಹಜ. ಆದ್ದರಿಂದ ಇಲ್ಲಿ ಎಚ್ಚೆತ್ತುಕೊಂಡ ಯುವ ಜನರಾದ ಶಶಿಧರ, ಶ್ರೀಕಾಂತ ಮುಂತಾದವರೆಲ್ಲಾ ಸೇರಿ ಹೋರಾಟ ರೂಪಿಸಿದರು. ಇದಕ್ಕೆ ಒತ್ತಾಸೆಯಾಗಿ ಮಂಜುನಾಥ ಅದ್ದೆ, ಮುಕುಂದರಾಜ್, ಗಂಗಾಧರಯ್ಯ ಇನ್ನು ಹಲವು ಜನರ ಬೆಂಬಲದಿಂದ ಒಂದು ಅಪರೂಪದ ಪ್ರತಿಭಟನಾ ಜಾಥಾ ನಡೆಯಿತು. ಇಂತದೇ ಜಾಥಾ ನಡೆಸಿದ ರವೀಶ್ ಬಸಪ್ಪ ಚಿಕ್ಕಮಗಳೂರಿಂದ ಬಂದಿದ್ದರೆ, ರೈತನಾಯಕ ಕೆ.ಟಿ ಗಂಗಾಧರ್ ಶಿವಮೊಗ್ಗದಿಂದ ಆಗಮಿಸಿದ್ದರು. ಬೆಳವಂಗಲದ ಪ್ರಭಾರ ದನಿ ಮೆರವಣಿಗೆಯಲ್ಲಿ ಮೊಳಗಿದ್ದೊಂದು ವಿಶೇಷ. ಸದ್ಯಕ್ಕೆ ಶಶಿಧರರ ಟೀಮು ತಿಪಟೂರು ಮತ್ತೆ ಮಲಗದಂತೆ ನೋಡಿಕೊಳ್ಳಬೇಕಿದೆ. ಏಕೆಂದರೆ ನಾಗೇಶ ಈ ಪ್ರತಿಭಟನೆಗೆ ಕೇರ್ ಮಾಡಿದಂತೆ ಕಾಣುವುದಿಲ್ಲ.

– ವರದಿಗಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಫೇಕ್ ಮದುವೆ ಜಾಲಕ್ಕೆ ಬಿದ್ದ ಫೇಮಸ್ ಗೋರಕ್ಷಕ ‘ಬಿಟ್ಟು ಬಜರಂಗಿ’

ಹರಿಯಾಣದಲ್ಲಿ "ಲವ್ ಜಿಹಾದ್" ಮತ್ತು ಅಂತರ್ಧರ್ಮೀಯ ವಿವಾಹಗಳ ವಿರುದ್ಧ ನಿರಂತರವಾಗಿ ಹೋರಾಡುತ್ತಾ, ತನ್ನದೇ ಆದ ಸಾರ್ವಜನಿಕ ಪ್ರಭಾವ ಬೆಳೆಸಿಕೊಂಡಿದ್ದ ರಾಜ್ ಕುಮಾರ್ ಅಲಿಯಾಸ್ ಬಿಟ್ಟು ಬಜರಂಗಿಗೆ ತನಗೆ ಇಂತಹದ್ದೊಂದು ಪರಿಸ್ಥಿತಿ ಎದುರಾಗಬಹುದು ಎಂಬ...

ಕರ್ನಾಟಕದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ‘ಸಾಮೂಹಿಕ ಅಕ್ರಮ’ ಆರೋಪ: ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ ಎನ್‌ಡಿಎ ನಿಯೋಗ

ಬೆಂಗಳೂರು: ಕರ್ನಾಟಕದಲ್ಲಿ ಸದ್ಯ ಚಾಲ್ತಿಯಲ್ಲಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ಸಾಂಸ್ಥಿಕ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿ, ರಾಜ್ಯದ ಪ್ರಮುಖ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು...

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...