Homeಚಳವಳಿಪಠ್ಯ ಪರಿಷ್ಕರಣೆ ಅಸಂವಿಧಾನಿಕ-ಅಪ್ರಜಾಸತ್ತಾತ್ಮಕ –ಅಪಾರದರ್ಶಕ- ಅಸಿಂಧು: ಸಿಎಂಗೆ ನಿರಂಜನಾರಾಧ್ಯರ ಪತ್ರ

ಪಠ್ಯ ಪರಿಷ್ಕರಣೆ ಅಸಂವಿಧಾನಿಕ-ಅಪ್ರಜಾಸತ್ತಾತ್ಮಕ –ಅಪಾರದರ್ಶಕ- ಅಸಿಂಧು: ಸಿಎಂಗೆ ನಿರಂಜನಾರಾಧ್ಯರ ಪತ್ರ

ಸಮಿತಿಗೆ ಕೇವಲ ಪರಿಶೀಲಿಸಿ ಒಂದು ತಿಂಗಳ ಒಳಗಾಗಿ ವರದಿ ನೀಡುವ ಅಧಿಕಾರವನ್ನು ಮಾತ್ರ ನೀಡಿತ್ತು. ಹೀಗಾಗಿ, ಪರಿಷ್ಕರಣೆಗೆ ಸರ್ಕಾರದ ಅನುಮತಿ ಇಲ್ಲವಾದ್ದರಿಂದ ಇಡೀ ಪ್ರಕ್ರಿಯೆಯೆ ಅಸಂವಿಧಾನಿಕ

- Advertisement -
- Advertisement -

ಪಠ್ಯ ಪರಿಷ್ಕರಣೆ ವಿವಾದಕ್ಕೆ ಸಂಬಂಧಿಸಿದಂತೆ ಬದಲಾವಣೆಗಳಿಗೆ ಮುಕ್ತವಾಗಿದ್ದೇವೆ ಎಂದಿರುವ ಸಿಎಂ ಬಸವರಾಜ ಬೊಮ್ಮಾಯಿಯರವರಿಗೆ ಶಿಕ್ಷಣ ತಜ್ಞ ಡಾ.ವಿ.ಪಿ ನಿರಂಜನಾರಾಧ್ಯರು ಪತ್ರ ಬರೆದಿದ್ದು, ಇಡೀ ಪ್ರಕ್ರಿಯೆಯು ಅಪ್ರಜಾಸತ್ತಾತ್ಮಕ –ಅಪಾರದರ್ಶಕ- ಅಸಿಂಧು ಮತ್ತು ಅಪಮೌಲ್ಯದಿಂದ ಕೂಡಿವೆ ಎಂದು ದೂರಿದ್ದಾರೆ.

ರಾಜ್ಯದಲ್ಲಿ ಪಠ್ಯ ಪುಸ್ತಕ ಪರಿಷ್ಕರಣೆ ಗೊಂದಲದ ಗೂಡಾಗಿ ಲಕ್ಷಾಂತರ ಮಕ್ಕಳ ಕಲಿಕೆ ನೆನೆಗುದಿಗೆ ಬಿದ್ದಿರುವ ಈ ಸಂಕಷ್ಟದ ಪರಿಸ್ಥಿತಿಯಲ್ಲಿ, ಮಕ್ಕಳ ಕಲಿಕೆ ಹಾಗು ಶಿಕ್ಷಣದ ಹಕ್ಕನ್ನು ಗೌರವಿಸಿ ಎತ್ತಿ ಹಿಡಿಯಬೇಕಿದೆ. ಈ ಕುರಿತು ಮೇ 22 ರಂದೇ ತಮಗೆ ಪತ್ರ ಬರೆದಿದ್ದೇನೆ. ಆದರೆ ವಿಳಂಬವಾದರೂ ಸಹ ತಮ್ಮ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿಯೂ ಪರಿಷ್ಕೃತ ಪುಸ್ತಕಗಳನ್ನು ಕೈಬಿಡುವ ಬಗ್ಗೆ ತೀರ್ಮಾನಕ್ಕೆ ಬರಲಾಗಲಿಲ್ಲ. ಈ ಹಿನ್ನೆಲೆಯಲ್ಲಿ, ಅಪ್ರಬುದ್ಧ -ಅಸಂವಿಧಾನಿಕ-ಅಪ್ರಜಾಸತ್ತಾತ್ಮಕ –ಅಪಾರದರ್ಶಕ- ಅಸಿಂಧು –ಅಪಮೌಲ್ಯದ ಪ್ರಕ್ರಿಯೆಯ ಮೂಲಕ ನಡೆದ ಪಠ್ಯ ಪರಿಷ್ಕರಣಾ ವಿಷಯದಲ್ಲಿ ತಾವು ಒಂದು ವಸ್ತುನಿಷ್ಟ ತೀರ್ಮಾನ ತೆಗೆದುಕೊಳ್ಳಲು, ಕಳೆದ 35 ವರ್ಷಗಳಿಂದ ಶಾಲಾ ಶಿಕ್ಷಣದಲ್ಲಿ ಕೆಲಸ ನಿರ್ವಹಿಸುತ್ತಿರುವ ನಾನು, ನನ್ನ ಅನುಭವದಲ್ಲಿ ಕೆಲವೊಂದು ಸತ್ಯ ಆಧಾರಿತ ವಸ್ತುನಿಷ್ಟ ಮುಖ್ಯಾಂಶಗಳನ್ನು ಸಕಾರಣಗಳೊಂದಿಗೆ ತಮ್ಮ ಗಮನಕ್ಕೆ ತರಬಯಸುತ್ತೇನೆ ಎಂದು ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಪರಿಶೀಲನೆಗೆ ಸಮಿತಿ ರಚಿಸುವ ಮುನ್ನವೇ ಇಲಾಖೆಯು ವಿವಾದಿತ ವಿಷಯಾಂಶಗಳನ್ನು ಬೋಧನೆ-ಕಲಿಕೆಗೆ/ಮೌಲ್ಯ ಮಾಪನಕ್ಕೆ ಪರಿಗಣಿಸದಿರಲು ಇಲಾಖೆಯು ದಿನಾಂಕ:17.02.2021ರಂದು ಸುತ್ತೋಲೆ ಹೊರಡಿಸಿದೆ. ಸಮಾಲೋಚನೆ-ಪರಿಶೀಲನೆಯೇ ಇಲ್ಲದೆ ಏಕಾಏಕಿ ಸುತ್ತೋಲೆ ಹೊರಡಿಸಿದ್ದು ಆತುರದ ಸರ್ವಾಧಿಕಾರದ ಅಪ್ರಬುದ್ಧ ತೀರ್ಮಾನವಾಗಿದೆ ಎಂದು ಅವರು ಹೇಳಿದ್ದಾರೆ.

ದಿನಾಂಕ:08.09.2021 ರಂದು ಸರ್ಕಾರ ಸಮಿತಿ ರಚಿಸಲು ಹೊರಡಿಸಿದ ಆದೇಶದಲ್ಲಿ ಸಮಿತಿಗೆ ಕೇವಲ ಪರಿಶೀಲಿಸಿ ಒಂದು ತಿಂಗಳ ಒಳಗಾಗಿ ವರದಿ ನೀಡುವ ಅಧಿಕಾರವನ್ನು ಮಾತ್ರ ನೀಡಿತ್ತು. ಹೀಗಾಗಿ, ಪರಿಷ್ಕರಣೆಗೆ ಸರ್ಕಾರದ ಅನುಮತಿ ಇಲ್ಲವಾದ್ದರಿಂದ ಇಡೀ ಪಠ್ಯ ಪರಿಷ್ಕರಣಾ ಪ್ರಕ್ರಿಯೆಯು ಅಸಂವಿಧಾನಿಕ ಮತ್ತು ಆದೇಶರಹಿತವಾಗಿದೆ ಎಂದು ಅವರು ತಿಳಿಸಿದ್ದಾರೆ.

ಪರಿಷ್ಕರಣೆಗೆ ಆದೇಶವೇ ಇರಲಿಲ್ಲ. ಜೊತೆಗೆ, ಯಾವುದೇ ಒಪ್ಪಿತ ಪಠ್ಯಕ್ರಮ ಚೌಕಟ್ಟು, ಪಠ್ಯವಸ್ತು ಮತ್ತು ನಿರ್ಧಿಷ್ಟ ಮಾರ್ಗ ಸೂಚಿಯಿಲ್ಲದೆ ಹಾಗು ನೀತಿ-ನಿಯಮಗಳಿಲ್ಲದೆ ಪರಿಷ್ಕರಣೆಯನ್ನು ಮಾಡಿದ್ದು ಒಪ್ಪಿತ ವಿಧಾನವಲ್ಲ. ಈ ಹಿಂದೆ ರೂಪಿಸಿದ ಭಾಷಾ ಹಾಗು ಸಮಾಜ ವಿಜ್ಞಾನ ಪುಸ್ತಕಗಳಲ್ಲಿ ದೋಷಗಳಿದ್ದರೆ, ಅಯಾ ಲೇಖಕರು ಮತ್ತು ಇತಿಹಾಸಕಾರರರ ಜೊತೆ ಮುಖಾಮುಖಿಯಾಗಿ ಚರ್ಚಿಸಿ, ಸರಿ-ತಪ್ಪುಗಳನ್ನು ಪ್ರಜಾಸತ್ತಾತ್ಮಕವಾಗಿ ಸಮಾಲೋಚಿಸಿ ಪರಿಷ್ಕರಣೆ ನಡೆಯಬೇಕಿತ್ತು. ಎಲ್ಲಕ್ಕಿಂತ ಮಿಗಿಲಾಗಿ, ಹಿಂದಿನ ಪರಿಷ್ಕರಣೆಯಲ್ಲಿ ದೋಷಗಳಿದ್ದರೆ ಅದು ಸಹಜ ನ್ಯಾಯ ತತ್ವಗಳನ್ನು ಅನುಸರಿಸಿ ತೀರ್ಮಾನಿಸಬೇಕಿತ್ತು. ಎಲ್ಲಕ್ಕಿಂತ ಮಿಗಿಲಾಗಿ, ಸಮಿತಿ ಸದಸ್ಯರ ಅಭಿಪ್ರಾಯಗಳನ್ನು ಗೌರವಿಸಿ ಅದರಂತೆ ಪ್ರಜಾಸತ್ತಾತ್ಮಕವಾಗಿ ನಡೆಯಬೇಕಿತ್ತು. ಇದಾವ ಪ್ರಕ್ರಿಯೆ ನಡೆದಿಲ್ಲದ ಕಾರಣ ಇದು ಅಪ್ರಜಾಸತ್ತಾತ್ಮಕ ಎಂದು ಅವರು ದೂರಿದ್ದಾರೆ.

ಪರಿಶೀಲನೆ/ಪರಿಷ್ಕರಣೆ ಪ್ರಾರಂಭವಾದಾಗಿನಿಂದಲೂ, ಪರಿಶೀಲನೆ/ಪರಿಷ್ಕರಣೆಗೆ ಸಕಾರಣಗಳಾಗಲಿ, ಪ್ರಕ್ರಿಯೆ ನಡೆದ ನಡಾವಳಿಗಳಾಗಳಿ, ಪರೀಶೀಲಿಸಿದ ನಂತರ ಪರಿಶೀಲನೆಯ ವರದಿಯಾಗಲಿ, ಎಲ್ಲಾ ಆದೇಶ-ವರದಿಗಳನ್ನು ಸಾರ್ವಜನಿಕ ಚರ್ಚೆಗಾಗಲಿ ದೊರಕದಂತೆ ಮಾಡುವ ಮೂಲಕ ಇಡೀ ಪ್ರಕ್ರಿಯೆಯನ್ನು ಗೌಪ್ಯವಾಗಿ ಮಾಡಲಾಗಿದೆ. ಆದ್ದರಿಂದ ಇದು ಅಪಾರದರ್ಶಕವಾಗಿದೆ ಎಂದು ನಿರಂಜನಾರಾಧ್ಯರು ಹೇಳಿದ್ದಾರೆ.

3 ಮತ್ತು 4ನೇ ತರಗತಿಯ ಪರಿಸರ ಅಧ್ಯಯನ, 1ರಿಂದ 10ನೇ ತರಗತಿಯ ಕನ್ನಡ ಭಾಷಾ ವಿಷಯಗಳು ಮತ್ತು 6 ರಿಂದ 10ನೇ ತರಗತಿಯ ಸಮಾಜ ವಿಜ್ಞಾನ ಪುಸ್ತಕಗಳನ್ನು ಆದೇಶವಿಲ್ಲದೆ ಪರಿಷ್ಕರಿಸಿ, ನಂತರ ದಿನಾಂಕ 27.01.2022ರಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ, ಆದೇಶ ರಹಿತ ಪರಿಷ್ಕರಣೆಯನ್ನು ತಮ್ಮ ಗಮನಕ್ಕಾಗಲಿ ಅಥವಾ ತಮ್ಮ ಅಧ್ಯಕ್ಷತೆಯಲ್ಲಿ ನಡೆಯುವ ಸಂಪುಟ ಸಭೆಯ ಮುಂದೆ ಮಂಡಿಸಿ ಅನುಮೋದನೆ ಪಡೆಯದೆ ಸಚಿವರೇ ಅನುಮೋದಿಸಿರುವುದು ಮೇಲ್ನೋಟಕ್ಕೆ ಸ್ಪಷ್ಟವಾಗಿದೆ. ಎಲ್ಲಕ್ಕಿಂತ ಮಿಗಿಲಾಗಿ, ಈ ತೀರ್ಮಾನದಂತೆ ದಿನಾಂಕ 19.03.2022 ರಂದು ಪಠ್ಯ ಪುಸ್ತಕಗಳನ್ನು ಪರಿಷ್ಕೃತಗೊಳಿಸಿರುವುದಕ್ಕೆ ಘಟನೋತ್ತರ ಅನುಮತಿ ನೀಡಿದ ಸರ್ಕಾರಿ ಆದೇಶದಲ್ಲಿ “ಕನ್ನಡ ಭಾಷೆ, ಪರಿಸರ ಅಧ್ಯಯನ ಮತ್ತು ಸಮಾಜ ವಿಜ್ಞಾನ ವಿಷಯದ ಪರಿಷ್ಕೃತ ಪಠ್ಯಪುಸ್ತಕಗಳಲ್ಲಿರುವ ಎಲ್ಲ ವಿಷಯಾಂಶಗಳು, ಲೇಖಕರು/ಕವಿಗಳು, ಚಿತ್ರಗಳು, ಭೂಪಟಗಳು , ನಕ್ಷೆಗಳು ಹಾಗು ಆಧಾರಗಳಿಗೆ ಸಮಿತಿ ಅಧ್ಯಕ್ಷರು ಹಾಗು ಸದಸ್ಯರು ಜವಾಬ್ದಾರರಾಗಿದ್ದು, ಪಠ್ಯಪುಸ್ತಕಗಳಲ್ಲಿರುವ ವಿಷಯಗಳಿಗೆ ಮುಂದಿನ ದಿನಗಳಲ್ಲಿ ಆಕ್ಷೇಪಣೆ ಬಂದಲ್ಲಿ ಶ್ರೀ ರೋಹಿತ್ ಚಕ್ರತೀರ್ಥ ಸಮಿತಿ ಅಧ್ಯಕ್ಷರು ಉತ್ತರಿಸುವ ಜವಾಬ್ದಾರಿ ಹೊಂದಿರುತ್ತಾರೆ” ಎಂದು ಬರೆದಿದೆ. ಇದು ಸರಕಾರದ ಅಧಿಕೃತ ತೀರ್ಮಾನವಾದರೆ ಪಠ್ಯಪುಸ್ತಕಗಳ ಪರಿಷ್ಕರಣೆ ಅಸಿಂಧು ಹಾಗು ಅಮಾನ್ಯವಾಗಿವೆ ಎಂದು ಅವರು ವಾದಿಸಿದ್ದಾರೆ.

ಇದನ್ನೂ ಓದಿ; ಪಠ್ಯಪುಸ್ತಕ ರಚನೆಯಲ್ಲಿ ಏಕ‘ಚಕ್ರ’ ಅಧಿಪತ್ಯ: ಸಮಿತಿ ಸದಸ್ಯರ ಗೊಂದಲಕಾರಿ ಹೇಳಿಕೆ

ಈ ಪರಿಷ್ಕರಣೆಯ ಹೆಸರಲ್ಲಿ ನಾಡಿನ ಹಾಗು ದೇಶದ ದಾರ್ಶನಿಕರನ್ನು ಅವಮಾನಿಸಿ, ಅವರ ವಿಚಾರಗಳನ್ನು ತಿರುಚಿರುವುದಲ್ಲದೆ, ಇತಿಹಾಸವನ್ನು ತನಗೆ ಇಷ್ಟಬಂದ ರೀತಿಯಲ್ಲ ಯಾವುದೇ ಸಾಕ್ಷಿ-ಆಧಾರ ಪುರಾವೆಗಳಿಲ್ಲದೆ ಬದಲಾಯಿಸಿದೆ. ಭಾಷಾ ವಿಷಯಗಳಲ್ಲಿ ಸಂವಿಧಾನದ ಮೌಲ್ಯಗಳನ್ನು ಗೌಣಗೊಳಿಸಿ ವಿವಾದಾತ್ಮಕ ಪಾಠಗಳನ್ನು ಸೇರಿಸಿ, ಹಿಂದಿನ ಲೇಖಕರ ಪಾಠ/ಪದ್ಯಗಳನ್ನು ಕೈಬಿಟ್ಟಿದೆ. ಒಟ್ಟಾರೆ, ಈ ಪ್ರಕ್ರಿಯೆ ಮೂಲಕ ಪಠ್ಯಪುಸ್ತಕ ಹಾಗು ಅವುಗಳಲ್ಲಿನ ವಿಷಯಗಳನ್ನು ಅಪಮೌಲ್ಯಗೊಳಿಸಿದೆ.

ಈಗಿನ ಪರಿಷ್ಕರಣಾ ಕ್ರಮ, ವಿಧಾನ ಮತ್ತು ವಿಷಯಗಳ ಆಯ್ಕೆಯಲ್ಲಿ ಗೊಂದಲ ಹಾಗು ಸಾಂವಿಧಾನಿಕ ಸಂಘರ್ಷ ಉಂಟಾಗಿದೆ. ಈ ಎಲ್ಲಾ ಕಾರಣಗಳಿಂದ ಈಗಿನ ಪರಿಷ್ಕರಣೆಯನ್ನು ಸಂಪೂರ್ಣವಾಗಿ ಕೈಬಿಟ್ಟು, ಈ ಹಿಂದೆ ರಚನೆಯಾಗಿದ್ದ ಪಠ್ಯಪುಸ್ತಕಗಳನ್ನು ಯಥಾವತ್ತಾಗಿ ಮುಂದುವರಿಸಬೇಕೆಂದು ನಾಡಿನ ಪ್ರಜ್ಞಾವಂತ ಜನರ ಪರವಾಗಿ ತಮ್ಮಲ್ಲಿ ಕಳಕಳಿಯಿಂದ ವಿನಂತಿಸುತ್ತೇನೆ ಎಂದು ಅಭಿವೃದ್ಧಿ ಶಿಕ್ಷಣ ತಜ್ಞರು ಹಾಗು ಕರ್ನಾಟಕ ರಾಜ್ಯ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳ ಸಮನ್ವಯ ವೇದಿಕೆಯ ಮಹಾ ಪೋಷಕರು ಆದ ನಿರಂಜನಾರಾಧ್ಯರು ಮನವಿ ಮಾಡಿದ್ದಾರೆ.

ಅಲ್ಲದೆ ಪಠ್ಯ ಪರಿಷ್ಕರಣೆಗೆ ಯುನೇಸ್ಕೊ ವರದಿಗಳು, ರಾಷ್ಟ್ರೀಯ ಪಠ್ಯಕ್ರಮ ಚೌಕಟ್ಟು ಮತ್ತು ಭಾರತೀಯ ಸಂವಿಧಾನದ ಮುನ್ನಡಿ ಆಧಾರದಲ್ಲಿ ಯಾವ ನಿಯಮಗಳನ್ನು ಪಾಲಿಸಬೇಕೆಂದು ಸಹ ತಮ್ಮ ಪತ್ರದಲ್ಲಿ ವಿವರವಾಗಿ ಬರೆದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...