Homeಚಳವಳಿಪಠ್ಯ ಪರಿಷ್ಕರಣೆ ಅಸಂವಿಧಾನಿಕ-ಅಪ್ರಜಾಸತ್ತಾತ್ಮಕ –ಅಪಾರದರ್ಶಕ- ಅಸಿಂಧು: ಸಿಎಂಗೆ ನಿರಂಜನಾರಾಧ್ಯರ ಪತ್ರ

ಪಠ್ಯ ಪರಿಷ್ಕರಣೆ ಅಸಂವಿಧಾನಿಕ-ಅಪ್ರಜಾಸತ್ತಾತ್ಮಕ –ಅಪಾರದರ್ಶಕ- ಅಸಿಂಧು: ಸಿಎಂಗೆ ನಿರಂಜನಾರಾಧ್ಯರ ಪತ್ರ

ಸಮಿತಿಗೆ ಕೇವಲ ಪರಿಶೀಲಿಸಿ ಒಂದು ತಿಂಗಳ ಒಳಗಾಗಿ ವರದಿ ನೀಡುವ ಅಧಿಕಾರವನ್ನು ಮಾತ್ರ ನೀಡಿತ್ತು. ಹೀಗಾಗಿ, ಪರಿಷ್ಕರಣೆಗೆ ಸರ್ಕಾರದ ಅನುಮತಿ ಇಲ್ಲವಾದ್ದರಿಂದ ಇಡೀ ಪ್ರಕ್ರಿಯೆಯೆ ಅಸಂವಿಧಾನಿಕ

- Advertisement -
- Advertisement -

ಪಠ್ಯ ಪರಿಷ್ಕರಣೆ ವಿವಾದಕ್ಕೆ ಸಂಬಂಧಿಸಿದಂತೆ ಬದಲಾವಣೆಗಳಿಗೆ ಮುಕ್ತವಾಗಿದ್ದೇವೆ ಎಂದಿರುವ ಸಿಎಂ ಬಸವರಾಜ ಬೊಮ್ಮಾಯಿಯರವರಿಗೆ ಶಿಕ್ಷಣ ತಜ್ಞ ಡಾ.ವಿ.ಪಿ ನಿರಂಜನಾರಾಧ್ಯರು ಪತ್ರ ಬರೆದಿದ್ದು, ಇಡೀ ಪ್ರಕ್ರಿಯೆಯು ಅಪ್ರಜಾಸತ್ತಾತ್ಮಕ –ಅಪಾರದರ್ಶಕ- ಅಸಿಂಧು ಮತ್ತು ಅಪಮೌಲ್ಯದಿಂದ ಕೂಡಿವೆ ಎಂದು ದೂರಿದ್ದಾರೆ.

ರಾಜ್ಯದಲ್ಲಿ ಪಠ್ಯ ಪುಸ್ತಕ ಪರಿಷ್ಕರಣೆ ಗೊಂದಲದ ಗೂಡಾಗಿ ಲಕ್ಷಾಂತರ ಮಕ್ಕಳ ಕಲಿಕೆ ನೆನೆಗುದಿಗೆ ಬಿದ್ದಿರುವ ಈ ಸಂಕಷ್ಟದ ಪರಿಸ್ಥಿತಿಯಲ್ಲಿ, ಮಕ್ಕಳ ಕಲಿಕೆ ಹಾಗು ಶಿಕ್ಷಣದ ಹಕ್ಕನ್ನು ಗೌರವಿಸಿ ಎತ್ತಿ ಹಿಡಿಯಬೇಕಿದೆ. ಈ ಕುರಿತು ಮೇ 22 ರಂದೇ ತಮಗೆ ಪತ್ರ ಬರೆದಿದ್ದೇನೆ. ಆದರೆ ವಿಳಂಬವಾದರೂ ಸಹ ತಮ್ಮ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿಯೂ ಪರಿಷ್ಕೃತ ಪುಸ್ತಕಗಳನ್ನು ಕೈಬಿಡುವ ಬಗ್ಗೆ ತೀರ್ಮಾನಕ್ಕೆ ಬರಲಾಗಲಿಲ್ಲ. ಈ ಹಿನ್ನೆಲೆಯಲ್ಲಿ, ಅಪ್ರಬುದ್ಧ -ಅಸಂವಿಧಾನಿಕ-ಅಪ್ರಜಾಸತ್ತಾತ್ಮಕ –ಅಪಾರದರ್ಶಕ- ಅಸಿಂಧು –ಅಪಮೌಲ್ಯದ ಪ್ರಕ್ರಿಯೆಯ ಮೂಲಕ ನಡೆದ ಪಠ್ಯ ಪರಿಷ್ಕರಣಾ ವಿಷಯದಲ್ಲಿ ತಾವು ಒಂದು ವಸ್ತುನಿಷ್ಟ ತೀರ್ಮಾನ ತೆಗೆದುಕೊಳ್ಳಲು, ಕಳೆದ 35 ವರ್ಷಗಳಿಂದ ಶಾಲಾ ಶಿಕ್ಷಣದಲ್ಲಿ ಕೆಲಸ ನಿರ್ವಹಿಸುತ್ತಿರುವ ನಾನು, ನನ್ನ ಅನುಭವದಲ್ಲಿ ಕೆಲವೊಂದು ಸತ್ಯ ಆಧಾರಿತ ವಸ್ತುನಿಷ್ಟ ಮುಖ್ಯಾಂಶಗಳನ್ನು ಸಕಾರಣಗಳೊಂದಿಗೆ ತಮ್ಮ ಗಮನಕ್ಕೆ ತರಬಯಸುತ್ತೇನೆ ಎಂದು ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಪರಿಶೀಲನೆಗೆ ಸಮಿತಿ ರಚಿಸುವ ಮುನ್ನವೇ ಇಲಾಖೆಯು ವಿವಾದಿತ ವಿಷಯಾಂಶಗಳನ್ನು ಬೋಧನೆ-ಕಲಿಕೆಗೆ/ಮೌಲ್ಯ ಮಾಪನಕ್ಕೆ ಪರಿಗಣಿಸದಿರಲು ಇಲಾಖೆಯು ದಿನಾಂಕ:17.02.2021ರಂದು ಸುತ್ತೋಲೆ ಹೊರಡಿಸಿದೆ. ಸಮಾಲೋಚನೆ-ಪರಿಶೀಲನೆಯೇ ಇಲ್ಲದೆ ಏಕಾಏಕಿ ಸುತ್ತೋಲೆ ಹೊರಡಿಸಿದ್ದು ಆತುರದ ಸರ್ವಾಧಿಕಾರದ ಅಪ್ರಬುದ್ಧ ತೀರ್ಮಾನವಾಗಿದೆ ಎಂದು ಅವರು ಹೇಳಿದ್ದಾರೆ.

ದಿನಾಂಕ:08.09.2021 ರಂದು ಸರ್ಕಾರ ಸಮಿತಿ ರಚಿಸಲು ಹೊರಡಿಸಿದ ಆದೇಶದಲ್ಲಿ ಸಮಿತಿಗೆ ಕೇವಲ ಪರಿಶೀಲಿಸಿ ಒಂದು ತಿಂಗಳ ಒಳಗಾಗಿ ವರದಿ ನೀಡುವ ಅಧಿಕಾರವನ್ನು ಮಾತ್ರ ನೀಡಿತ್ತು. ಹೀಗಾಗಿ, ಪರಿಷ್ಕರಣೆಗೆ ಸರ್ಕಾರದ ಅನುಮತಿ ಇಲ್ಲವಾದ್ದರಿಂದ ಇಡೀ ಪಠ್ಯ ಪರಿಷ್ಕರಣಾ ಪ್ರಕ್ರಿಯೆಯು ಅಸಂವಿಧಾನಿಕ ಮತ್ತು ಆದೇಶರಹಿತವಾಗಿದೆ ಎಂದು ಅವರು ತಿಳಿಸಿದ್ದಾರೆ.

ಪರಿಷ್ಕರಣೆಗೆ ಆದೇಶವೇ ಇರಲಿಲ್ಲ. ಜೊತೆಗೆ, ಯಾವುದೇ ಒಪ್ಪಿತ ಪಠ್ಯಕ್ರಮ ಚೌಕಟ್ಟು, ಪಠ್ಯವಸ್ತು ಮತ್ತು ನಿರ್ಧಿಷ್ಟ ಮಾರ್ಗ ಸೂಚಿಯಿಲ್ಲದೆ ಹಾಗು ನೀತಿ-ನಿಯಮಗಳಿಲ್ಲದೆ ಪರಿಷ್ಕರಣೆಯನ್ನು ಮಾಡಿದ್ದು ಒಪ್ಪಿತ ವಿಧಾನವಲ್ಲ. ಈ ಹಿಂದೆ ರೂಪಿಸಿದ ಭಾಷಾ ಹಾಗು ಸಮಾಜ ವಿಜ್ಞಾನ ಪುಸ್ತಕಗಳಲ್ಲಿ ದೋಷಗಳಿದ್ದರೆ, ಅಯಾ ಲೇಖಕರು ಮತ್ತು ಇತಿಹಾಸಕಾರರರ ಜೊತೆ ಮುಖಾಮುಖಿಯಾಗಿ ಚರ್ಚಿಸಿ, ಸರಿ-ತಪ್ಪುಗಳನ್ನು ಪ್ರಜಾಸತ್ತಾತ್ಮಕವಾಗಿ ಸಮಾಲೋಚಿಸಿ ಪರಿಷ್ಕರಣೆ ನಡೆಯಬೇಕಿತ್ತು. ಎಲ್ಲಕ್ಕಿಂತ ಮಿಗಿಲಾಗಿ, ಹಿಂದಿನ ಪರಿಷ್ಕರಣೆಯಲ್ಲಿ ದೋಷಗಳಿದ್ದರೆ ಅದು ಸಹಜ ನ್ಯಾಯ ತತ್ವಗಳನ್ನು ಅನುಸರಿಸಿ ತೀರ್ಮಾನಿಸಬೇಕಿತ್ತು. ಎಲ್ಲಕ್ಕಿಂತ ಮಿಗಿಲಾಗಿ, ಸಮಿತಿ ಸದಸ್ಯರ ಅಭಿಪ್ರಾಯಗಳನ್ನು ಗೌರವಿಸಿ ಅದರಂತೆ ಪ್ರಜಾಸತ್ತಾತ್ಮಕವಾಗಿ ನಡೆಯಬೇಕಿತ್ತು. ಇದಾವ ಪ್ರಕ್ರಿಯೆ ನಡೆದಿಲ್ಲದ ಕಾರಣ ಇದು ಅಪ್ರಜಾಸತ್ತಾತ್ಮಕ ಎಂದು ಅವರು ದೂರಿದ್ದಾರೆ.

ಪರಿಶೀಲನೆ/ಪರಿಷ್ಕರಣೆ ಪ್ರಾರಂಭವಾದಾಗಿನಿಂದಲೂ, ಪರಿಶೀಲನೆ/ಪರಿಷ್ಕರಣೆಗೆ ಸಕಾರಣಗಳಾಗಲಿ, ಪ್ರಕ್ರಿಯೆ ನಡೆದ ನಡಾವಳಿಗಳಾಗಳಿ, ಪರೀಶೀಲಿಸಿದ ನಂತರ ಪರಿಶೀಲನೆಯ ವರದಿಯಾಗಲಿ, ಎಲ್ಲಾ ಆದೇಶ-ವರದಿಗಳನ್ನು ಸಾರ್ವಜನಿಕ ಚರ್ಚೆಗಾಗಲಿ ದೊರಕದಂತೆ ಮಾಡುವ ಮೂಲಕ ಇಡೀ ಪ್ರಕ್ರಿಯೆಯನ್ನು ಗೌಪ್ಯವಾಗಿ ಮಾಡಲಾಗಿದೆ. ಆದ್ದರಿಂದ ಇದು ಅಪಾರದರ್ಶಕವಾಗಿದೆ ಎಂದು ನಿರಂಜನಾರಾಧ್ಯರು ಹೇಳಿದ್ದಾರೆ.

3 ಮತ್ತು 4ನೇ ತರಗತಿಯ ಪರಿಸರ ಅಧ್ಯಯನ, 1ರಿಂದ 10ನೇ ತರಗತಿಯ ಕನ್ನಡ ಭಾಷಾ ವಿಷಯಗಳು ಮತ್ತು 6 ರಿಂದ 10ನೇ ತರಗತಿಯ ಸಮಾಜ ವಿಜ್ಞಾನ ಪುಸ್ತಕಗಳನ್ನು ಆದೇಶವಿಲ್ಲದೆ ಪರಿಷ್ಕರಿಸಿ, ನಂತರ ದಿನಾಂಕ 27.01.2022ರಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ, ಆದೇಶ ರಹಿತ ಪರಿಷ್ಕರಣೆಯನ್ನು ತಮ್ಮ ಗಮನಕ್ಕಾಗಲಿ ಅಥವಾ ತಮ್ಮ ಅಧ್ಯಕ್ಷತೆಯಲ್ಲಿ ನಡೆಯುವ ಸಂಪುಟ ಸಭೆಯ ಮುಂದೆ ಮಂಡಿಸಿ ಅನುಮೋದನೆ ಪಡೆಯದೆ ಸಚಿವರೇ ಅನುಮೋದಿಸಿರುವುದು ಮೇಲ್ನೋಟಕ್ಕೆ ಸ್ಪಷ್ಟವಾಗಿದೆ. ಎಲ್ಲಕ್ಕಿಂತ ಮಿಗಿಲಾಗಿ, ಈ ತೀರ್ಮಾನದಂತೆ ದಿನಾಂಕ 19.03.2022 ರಂದು ಪಠ್ಯ ಪುಸ್ತಕಗಳನ್ನು ಪರಿಷ್ಕೃತಗೊಳಿಸಿರುವುದಕ್ಕೆ ಘಟನೋತ್ತರ ಅನುಮತಿ ನೀಡಿದ ಸರ್ಕಾರಿ ಆದೇಶದಲ್ಲಿ “ಕನ್ನಡ ಭಾಷೆ, ಪರಿಸರ ಅಧ್ಯಯನ ಮತ್ತು ಸಮಾಜ ವಿಜ್ಞಾನ ವಿಷಯದ ಪರಿಷ್ಕೃತ ಪಠ್ಯಪುಸ್ತಕಗಳಲ್ಲಿರುವ ಎಲ್ಲ ವಿಷಯಾಂಶಗಳು, ಲೇಖಕರು/ಕವಿಗಳು, ಚಿತ್ರಗಳು, ಭೂಪಟಗಳು , ನಕ್ಷೆಗಳು ಹಾಗು ಆಧಾರಗಳಿಗೆ ಸಮಿತಿ ಅಧ್ಯಕ್ಷರು ಹಾಗು ಸದಸ್ಯರು ಜವಾಬ್ದಾರರಾಗಿದ್ದು, ಪಠ್ಯಪುಸ್ತಕಗಳಲ್ಲಿರುವ ವಿಷಯಗಳಿಗೆ ಮುಂದಿನ ದಿನಗಳಲ್ಲಿ ಆಕ್ಷೇಪಣೆ ಬಂದಲ್ಲಿ ಶ್ರೀ ರೋಹಿತ್ ಚಕ್ರತೀರ್ಥ ಸಮಿತಿ ಅಧ್ಯಕ್ಷರು ಉತ್ತರಿಸುವ ಜವಾಬ್ದಾರಿ ಹೊಂದಿರುತ್ತಾರೆ” ಎಂದು ಬರೆದಿದೆ. ಇದು ಸರಕಾರದ ಅಧಿಕೃತ ತೀರ್ಮಾನವಾದರೆ ಪಠ್ಯಪುಸ್ತಕಗಳ ಪರಿಷ್ಕರಣೆ ಅಸಿಂಧು ಹಾಗು ಅಮಾನ್ಯವಾಗಿವೆ ಎಂದು ಅವರು ವಾದಿಸಿದ್ದಾರೆ.

ಇದನ್ನೂ ಓದಿ; ಪಠ್ಯಪುಸ್ತಕ ರಚನೆಯಲ್ಲಿ ಏಕ‘ಚಕ್ರ’ ಅಧಿಪತ್ಯ: ಸಮಿತಿ ಸದಸ್ಯರ ಗೊಂದಲಕಾರಿ ಹೇಳಿಕೆ

ಈ ಪರಿಷ್ಕರಣೆಯ ಹೆಸರಲ್ಲಿ ನಾಡಿನ ಹಾಗು ದೇಶದ ದಾರ್ಶನಿಕರನ್ನು ಅವಮಾನಿಸಿ, ಅವರ ವಿಚಾರಗಳನ್ನು ತಿರುಚಿರುವುದಲ್ಲದೆ, ಇತಿಹಾಸವನ್ನು ತನಗೆ ಇಷ್ಟಬಂದ ರೀತಿಯಲ್ಲ ಯಾವುದೇ ಸಾಕ್ಷಿ-ಆಧಾರ ಪುರಾವೆಗಳಿಲ್ಲದೆ ಬದಲಾಯಿಸಿದೆ. ಭಾಷಾ ವಿಷಯಗಳಲ್ಲಿ ಸಂವಿಧಾನದ ಮೌಲ್ಯಗಳನ್ನು ಗೌಣಗೊಳಿಸಿ ವಿವಾದಾತ್ಮಕ ಪಾಠಗಳನ್ನು ಸೇರಿಸಿ, ಹಿಂದಿನ ಲೇಖಕರ ಪಾಠ/ಪದ್ಯಗಳನ್ನು ಕೈಬಿಟ್ಟಿದೆ. ಒಟ್ಟಾರೆ, ಈ ಪ್ರಕ್ರಿಯೆ ಮೂಲಕ ಪಠ್ಯಪುಸ್ತಕ ಹಾಗು ಅವುಗಳಲ್ಲಿನ ವಿಷಯಗಳನ್ನು ಅಪಮೌಲ್ಯಗೊಳಿಸಿದೆ.

ಈಗಿನ ಪರಿಷ್ಕರಣಾ ಕ್ರಮ, ವಿಧಾನ ಮತ್ತು ವಿಷಯಗಳ ಆಯ್ಕೆಯಲ್ಲಿ ಗೊಂದಲ ಹಾಗು ಸಾಂವಿಧಾನಿಕ ಸಂಘರ್ಷ ಉಂಟಾಗಿದೆ. ಈ ಎಲ್ಲಾ ಕಾರಣಗಳಿಂದ ಈಗಿನ ಪರಿಷ್ಕರಣೆಯನ್ನು ಸಂಪೂರ್ಣವಾಗಿ ಕೈಬಿಟ್ಟು, ಈ ಹಿಂದೆ ರಚನೆಯಾಗಿದ್ದ ಪಠ್ಯಪುಸ್ತಕಗಳನ್ನು ಯಥಾವತ್ತಾಗಿ ಮುಂದುವರಿಸಬೇಕೆಂದು ನಾಡಿನ ಪ್ರಜ್ಞಾವಂತ ಜನರ ಪರವಾಗಿ ತಮ್ಮಲ್ಲಿ ಕಳಕಳಿಯಿಂದ ವಿನಂತಿಸುತ್ತೇನೆ ಎಂದು ಅಭಿವೃದ್ಧಿ ಶಿಕ್ಷಣ ತಜ್ಞರು ಹಾಗು ಕರ್ನಾಟಕ ರಾಜ್ಯ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳ ಸಮನ್ವಯ ವೇದಿಕೆಯ ಮಹಾ ಪೋಷಕರು ಆದ ನಿರಂಜನಾರಾಧ್ಯರು ಮನವಿ ಮಾಡಿದ್ದಾರೆ.

ಅಲ್ಲದೆ ಪಠ್ಯ ಪರಿಷ್ಕರಣೆಗೆ ಯುನೇಸ್ಕೊ ವರದಿಗಳು, ರಾಷ್ಟ್ರೀಯ ಪಠ್ಯಕ್ರಮ ಚೌಕಟ್ಟು ಮತ್ತು ಭಾರತೀಯ ಸಂವಿಧಾನದ ಮುನ್ನಡಿ ಆಧಾರದಲ್ಲಿ ಯಾವ ನಿಯಮಗಳನ್ನು ಪಾಲಿಸಬೇಕೆಂದು ಸಹ ತಮ್ಮ ಪತ್ರದಲ್ಲಿ ವಿವರವಾಗಿ ಬರೆದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...