Homeಚಳವಳಿಪಠ್ಯ ಪರಿಷ್ಕರಣೆ ಅಸಂವಿಧಾನಿಕ-ಅಪ್ರಜಾಸತ್ತಾತ್ಮಕ –ಅಪಾರದರ್ಶಕ- ಅಸಿಂಧು: ಸಿಎಂಗೆ ನಿರಂಜನಾರಾಧ್ಯರ ಪತ್ರ

ಪಠ್ಯ ಪರಿಷ್ಕರಣೆ ಅಸಂವಿಧಾನಿಕ-ಅಪ್ರಜಾಸತ್ತಾತ್ಮಕ –ಅಪಾರದರ್ಶಕ- ಅಸಿಂಧು: ಸಿಎಂಗೆ ನಿರಂಜನಾರಾಧ್ಯರ ಪತ್ರ

ಸಮಿತಿಗೆ ಕೇವಲ ಪರಿಶೀಲಿಸಿ ಒಂದು ತಿಂಗಳ ಒಳಗಾಗಿ ವರದಿ ನೀಡುವ ಅಧಿಕಾರವನ್ನು ಮಾತ್ರ ನೀಡಿತ್ತು. ಹೀಗಾಗಿ, ಪರಿಷ್ಕರಣೆಗೆ ಸರ್ಕಾರದ ಅನುಮತಿ ಇಲ್ಲವಾದ್ದರಿಂದ ಇಡೀ ಪ್ರಕ್ರಿಯೆಯೆ ಅಸಂವಿಧಾನಿಕ

- Advertisement -
- Advertisement -

ಪಠ್ಯ ಪರಿಷ್ಕರಣೆ ವಿವಾದಕ್ಕೆ ಸಂಬಂಧಿಸಿದಂತೆ ಬದಲಾವಣೆಗಳಿಗೆ ಮುಕ್ತವಾಗಿದ್ದೇವೆ ಎಂದಿರುವ ಸಿಎಂ ಬಸವರಾಜ ಬೊಮ್ಮಾಯಿಯರವರಿಗೆ ಶಿಕ್ಷಣ ತಜ್ಞ ಡಾ.ವಿ.ಪಿ ನಿರಂಜನಾರಾಧ್ಯರು ಪತ್ರ ಬರೆದಿದ್ದು, ಇಡೀ ಪ್ರಕ್ರಿಯೆಯು ಅಪ್ರಜಾಸತ್ತಾತ್ಮಕ –ಅಪಾರದರ್ಶಕ- ಅಸಿಂಧು ಮತ್ತು ಅಪಮೌಲ್ಯದಿಂದ ಕೂಡಿವೆ ಎಂದು ದೂರಿದ್ದಾರೆ.

ರಾಜ್ಯದಲ್ಲಿ ಪಠ್ಯ ಪುಸ್ತಕ ಪರಿಷ್ಕರಣೆ ಗೊಂದಲದ ಗೂಡಾಗಿ ಲಕ್ಷಾಂತರ ಮಕ್ಕಳ ಕಲಿಕೆ ನೆನೆಗುದಿಗೆ ಬಿದ್ದಿರುವ ಈ ಸಂಕಷ್ಟದ ಪರಿಸ್ಥಿತಿಯಲ್ಲಿ, ಮಕ್ಕಳ ಕಲಿಕೆ ಹಾಗು ಶಿಕ್ಷಣದ ಹಕ್ಕನ್ನು ಗೌರವಿಸಿ ಎತ್ತಿ ಹಿಡಿಯಬೇಕಿದೆ. ಈ ಕುರಿತು ಮೇ 22 ರಂದೇ ತಮಗೆ ಪತ್ರ ಬರೆದಿದ್ದೇನೆ. ಆದರೆ ವಿಳಂಬವಾದರೂ ಸಹ ತಮ್ಮ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿಯೂ ಪರಿಷ್ಕೃತ ಪುಸ್ತಕಗಳನ್ನು ಕೈಬಿಡುವ ಬಗ್ಗೆ ತೀರ್ಮಾನಕ್ಕೆ ಬರಲಾಗಲಿಲ್ಲ. ಈ ಹಿನ್ನೆಲೆಯಲ್ಲಿ, ಅಪ್ರಬುದ್ಧ -ಅಸಂವಿಧಾನಿಕ-ಅಪ್ರಜಾಸತ್ತಾತ್ಮಕ –ಅಪಾರದರ್ಶಕ- ಅಸಿಂಧು –ಅಪಮೌಲ್ಯದ ಪ್ರಕ್ರಿಯೆಯ ಮೂಲಕ ನಡೆದ ಪಠ್ಯ ಪರಿಷ್ಕರಣಾ ವಿಷಯದಲ್ಲಿ ತಾವು ಒಂದು ವಸ್ತುನಿಷ್ಟ ತೀರ್ಮಾನ ತೆಗೆದುಕೊಳ್ಳಲು, ಕಳೆದ 35 ವರ್ಷಗಳಿಂದ ಶಾಲಾ ಶಿಕ್ಷಣದಲ್ಲಿ ಕೆಲಸ ನಿರ್ವಹಿಸುತ್ತಿರುವ ನಾನು, ನನ್ನ ಅನುಭವದಲ್ಲಿ ಕೆಲವೊಂದು ಸತ್ಯ ಆಧಾರಿತ ವಸ್ತುನಿಷ್ಟ ಮುಖ್ಯಾಂಶಗಳನ್ನು ಸಕಾರಣಗಳೊಂದಿಗೆ ತಮ್ಮ ಗಮನಕ್ಕೆ ತರಬಯಸುತ್ತೇನೆ ಎಂದು ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಪರಿಶೀಲನೆಗೆ ಸಮಿತಿ ರಚಿಸುವ ಮುನ್ನವೇ ಇಲಾಖೆಯು ವಿವಾದಿತ ವಿಷಯಾಂಶಗಳನ್ನು ಬೋಧನೆ-ಕಲಿಕೆಗೆ/ಮೌಲ್ಯ ಮಾಪನಕ್ಕೆ ಪರಿಗಣಿಸದಿರಲು ಇಲಾಖೆಯು ದಿನಾಂಕ:17.02.2021ರಂದು ಸುತ್ತೋಲೆ ಹೊರಡಿಸಿದೆ. ಸಮಾಲೋಚನೆ-ಪರಿಶೀಲನೆಯೇ ಇಲ್ಲದೆ ಏಕಾಏಕಿ ಸುತ್ತೋಲೆ ಹೊರಡಿಸಿದ್ದು ಆತುರದ ಸರ್ವಾಧಿಕಾರದ ಅಪ್ರಬುದ್ಧ ತೀರ್ಮಾನವಾಗಿದೆ ಎಂದು ಅವರು ಹೇಳಿದ್ದಾರೆ.

ದಿನಾಂಕ:08.09.2021 ರಂದು ಸರ್ಕಾರ ಸಮಿತಿ ರಚಿಸಲು ಹೊರಡಿಸಿದ ಆದೇಶದಲ್ಲಿ ಸಮಿತಿಗೆ ಕೇವಲ ಪರಿಶೀಲಿಸಿ ಒಂದು ತಿಂಗಳ ಒಳಗಾಗಿ ವರದಿ ನೀಡುವ ಅಧಿಕಾರವನ್ನು ಮಾತ್ರ ನೀಡಿತ್ತು. ಹೀಗಾಗಿ, ಪರಿಷ್ಕರಣೆಗೆ ಸರ್ಕಾರದ ಅನುಮತಿ ಇಲ್ಲವಾದ್ದರಿಂದ ಇಡೀ ಪಠ್ಯ ಪರಿಷ್ಕರಣಾ ಪ್ರಕ್ರಿಯೆಯು ಅಸಂವಿಧಾನಿಕ ಮತ್ತು ಆದೇಶರಹಿತವಾಗಿದೆ ಎಂದು ಅವರು ತಿಳಿಸಿದ್ದಾರೆ.

ಪರಿಷ್ಕರಣೆಗೆ ಆದೇಶವೇ ಇರಲಿಲ್ಲ. ಜೊತೆಗೆ, ಯಾವುದೇ ಒಪ್ಪಿತ ಪಠ್ಯಕ್ರಮ ಚೌಕಟ್ಟು, ಪಠ್ಯವಸ್ತು ಮತ್ತು ನಿರ್ಧಿಷ್ಟ ಮಾರ್ಗ ಸೂಚಿಯಿಲ್ಲದೆ ಹಾಗು ನೀತಿ-ನಿಯಮಗಳಿಲ್ಲದೆ ಪರಿಷ್ಕರಣೆಯನ್ನು ಮಾಡಿದ್ದು ಒಪ್ಪಿತ ವಿಧಾನವಲ್ಲ. ಈ ಹಿಂದೆ ರೂಪಿಸಿದ ಭಾಷಾ ಹಾಗು ಸಮಾಜ ವಿಜ್ಞಾನ ಪುಸ್ತಕಗಳಲ್ಲಿ ದೋಷಗಳಿದ್ದರೆ, ಅಯಾ ಲೇಖಕರು ಮತ್ತು ಇತಿಹಾಸಕಾರರರ ಜೊತೆ ಮುಖಾಮುಖಿಯಾಗಿ ಚರ್ಚಿಸಿ, ಸರಿ-ತಪ್ಪುಗಳನ್ನು ಪ್ರಜಾಸತ್ತಾತ್ಮಕವಾಗಿ ಸಮಾಲೋಚಿಸಿ ಪರಿಷ್ಕರಣೆ ನಡೆಯಬೇಕಿತ್ತು. ಎಲ್ಲಕ್ಕಿಂತ ಮಿಗಿಲಾಗಿ, ಹಿಂದಿನ ಪರಿಷ್ಕರಣೆಯಲ್ಲಿ ದೋಷಗಳಿದ್ದರೆ ಅದು ಸಹಜ ನ್ಯಾಯ ತತ್ವಗಳನ್ನು ಅನುಸರಿಸಿ ತೀರ್ಮಾನಿಸಬೇಕಿತ್ತು. ಎಲ್ಲಕ್ಕಿಂತ ಮಿಗಿಲಾಗಿ, ಸಮಿತಿ ಸದಸ್ಯರ ಅಭಿಪ್ರಾಯಗಳನ್ನು ಗೌರವಿಸಿ ಅದರಂತೆ ಪ್ರಜಾಸತ್ತಾತ್ಮಕವಾಗಿ ನಡೆಯಬೇಕಿತ್ತು. ಇದಾವ ಪ್ರಕ್ರಿಯೆ ನಡೆದಿಲ್ಲದ ಕಾರಣ ಇದು ಅಪ್ರಜಾಸತ್ತಾತ್ಮಕ ಎಂದು ಅವರು ದೂರಿದ್ದಾರೆ.

ಪರಿಶೀಲನೆ/ಪರಿಷ್ಕರಣೆ ಪ್ರಾರಂಭವಾದಾಗಿನಿಂದಲೂ, ಪರಿಶೀಲನೆ/ಪರಿಷ್ಕರಣೆಗೆ ಸಕಾರಣಗಳಾಗಲಿ, ಪ್ರಕ್ರಿಯೆ ನಡೆದ ನಡಾವಳಿಗಳಾಗಳಿ, ಪರೀಶೀಲಿಸಿದ ನಂತರ ಪರಿಶೀಲನೆಯ ವರದಿಯಾಗಲಿ, ಎಲ್ಲಾ ಆದೇಶ-ವರದಿಗಳನ್ನು ಸಾರ್ವಜನಿಕ ಚರ್ಚೆಗಾಗಲಿ ದೊರಕದಂತೆ ಮಾಡುವ ಮೂಲಕ ಇಡೀ ಪ್ರಕ್ರಿಯೆಯನ್ನು ಗೌಪ್ಯವಾಗಿ ಮಾಡಲಾಗಿದೆ. ಆದ್ದರಿಂದ ಇದು ಅಪಾರದರ್ಶಕವಾಗಿದೆ ಎಂದು ನಿರಂಜನಾರಾಧ್ಯರು ಹೇಳಿದ್ದಾರೆ.

3 ಮತ್ತು 4ನೇ ತರಗತಿಯ ಪರಿಸರ ಅಧ್ಯಯನ, 1ರಿಂದ 10ನೇ ತರಗತಿಯ ಕನ್ನಡ ಭಾಷಾ ವಿಷಯಗಳು ಮತ್ತು 6 ರಿಂದ 10ನೇ ತರಗತಿಯ ಸಮಾಜ ವಿಜ್ಞಾನ ಪುಸ್ತಕಗಳನ್ನು ಆದೇಶವಿಲ್ಲದೆ ಪರಿಷ್ಕರಿಸಿ, ನಂತರ ದಿನಾಂಕ 27.01.2022ರಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ, ಆದೇಶ ರಹಿತ ಪರಿಷ್ಕರಣೆಯನ್ನು ತಮ್ಮ ಗಮನಕ್ಕಾಗಲಿ ಅಥವಾ ತಮ್ಮ ಅಧ್ಯಕ್ಷತೆಯಲ್ಲಿ ನಡೆಯುವ ಸಂಪುಟ ಸಭೆಯ ಮುಂದೆ ಮಂಡಿಸಿ ಅನುಮೋದನೆ ಪಡೆಯದೆ ಸಚಿವರೇ ಅನುಮೋದಿಸಿರುವುದು ಮೇಲ್ನೋಟಕ್ಕೆ ಸ್ಪಷ್ಟವಾಗಿದೆ. ಎಲ್ಲಕ್ಕಿಂತ ಮಿಗಿಲಾಗಿ, ಈ ತೀರ್ಮಾನದಂತೆ ದಿನಾಂಕ 19.03.2022 ರಂದು ಪಠ್ಯ ಪುಸ್ತಕಗಳನ್ನು ಪರಿಷ್ಕೃತಗೊಳಿಸಿರುವುದಕ್ಕೆ ಘಟನೋತ್ತರ ಅನುಮತಿ ನೀಡಿದ ಸರ್ಕಾರಿ ಆದೇಶದಲ್ಲಿ “ಕನ್ನಡ ಭಾಷೆ, ಪರಿಸರ ಅಧ್ಯಯನ ಮತ್ತು ಸಮಾಜ ವಿಜ್ಞಾನ ವಿಷಯದ ಪರಿಷ್ಕೃತ ಪಠ್ಯಪುಸ್ತಕಗಳಲ್ಲಿರುವ ಎಲ್ಲ ವಿಷಯಾಂಶಗಳು, ಲೇಖಕರು/ಕವಿಗಳು, ಚಿತ್ರಗಳು, ಭೂಪಟಗಳು , ನಕ್ಷೆಗಳು ಹಾಗು ಆಧಾರಗಳಿಗೆ ಸಮಿತಿ ಅಧ್ಯಕ್ಷರು ಹಾಗು ಸದಸ್ಯರು ಜವಾಬ್ದಾರರಾಗಿದ್ದು, ಪಠ್ಯಪುಸ್ತಕಗಳಲ್ಲಿರುವ ವಿಷಯಗಳಿಗೆ ಮುಂದಿನ ದಿನಗಳಲ್ಲಿ ಆಕ್ಷೇಪಣೆ ಬಂದಲ್ಲಿ ಶ್ರೀ ರೋಹಿತ್ ಚಕ್ರತೀರ್ಥ ಸಮಿತಿ ಅಧ್ಯಕ್ಷರು ಉತ್ತರಿಸುವ ಜವಾಬ್ದಾರಿ ಹೊಂದಿರುತ್ತಾರೆ” ಎಂದು ಬರೆದಿದೆ. ಇದು ಸರಕಾರದ ಅಧಿಕೃತ ತೀರ್ಮಾನವಾದರೆ ಪಠ್ಯಪುಸ್ತಕಗಳ ಪರಿಷ್ಕರಣೆ ಅಸಿಂಧು ಹಾಗು ಅಮಾನ್ಯವಾಗಿವೆ ಎಂದು ಅವರು ವಾದಿಸಿದ್ದಾರೆ.

ಇದನ್ನೂ ಓದಿ; ಪಠ್ಯಪುಸ್ತಕ ರಚನೆಯಲ್ಲಿ ಏಕ‘ಚಕ್ರ’ ಅಧಿಪತ್ಯ: ಸಮಿತಿ ಸದಸ್ಯರ ಗೊಂದಲಕಾರಿ ಹೇಳಿಕೆ

ಈ ಪರಿಷ್ಕರಣೆಯ ಹೆಸರಲ್ಲಿ ನಾಡಿನ ಹಾಗು ದೇಶದ ದಾರ್ಶನಿಕರನ್ನು ಅವಮಾನಿಸಿ, ಅವರ ವಿಚಾರಗಳನ್ನು ತಿರುಚಿರುವುದಲ್ಲದೆ, ಇತಿಹಾಸವನ್ನು ತನಗೆ ಇಷ್ಟಬಂದ ರೀತಿಯಲ್ಲ ಯಾವುದೇ ಸಾಕ್ಷಿ-ಆಧಾರ ಪುರಾವೆಗಳಿಲ್ಲದೆ ಬದಲಾಯಿಸಿದೆ. ಭಾಷಾ ವಿಷಯಗಳಲ್ಲಿ ಸಂವಿಧಾನದ ಮೌಲ್ಯಗಳನ್ನು ಗೌಣಗೊಳಿಸಿ ವಿವಾದಾತ್ಮಕ ಪಾಠಗಳನ್ನು ಸೇರಿಸಿ, ಹಿಂದಿನ ಲೇಖಕರ ಪಾಠ/ಪದ್ಯಗಳನ್ನು ಕೈಬಿಟ್ಟಿದೆ. ಒಟ್ಟಾರೆ, ಈ ಪ್ರಕ್ರಿಯೆ ಮೂಲಕ ಪಠ್ಯಪುಸ್ತಕ ಹಾಗು ಅವುಗಳಲ್ಲಿನ ವಿಷಯಗಳನ್ನು ಅಪಮೌಲ್ಯಗೊಳಿಸಿದೆ.

ಈಗಿನ ಪರಿಷ್ಕರಣಾ ಕ್ರಮ, ವಿಧಾನ ಮತ್ತು ವಿಷಯಗಳ ಆಯ್ಕೆಯಲ್ಲಿ ಗೊಂದಲ ಹಾಗು ಸಾಂವಿಧಾನಿಕ ಸಂಘರ್ಷ ಉಂಟಾಗಿದೆ. ಈ ಎಲ್ಲಾ ಕಾರಣಗಳಿಂದ ಈಗಿನ ಪರಿಷ್ಕರಣೆಯನ್ನು ಸಂಪೂರ್ಣವಾಗಿ ಕೈಬಿಟ್ಟು, ಈ ಹಿಂದೆ ರಚನೆಯಾಗಿದ್ದ ಪಠ್ಯಪುಸ್ತಕಗಳನ್ನು ಯಥಾವತ್ತಾಗಿ ಮುಂದುವರಿಸಬೇಕೆಂದು ನಾಡಿನ ಪ್ರಜ್ಞಾವಂತ ಜನರ ಪರವಾಗಿ ತಮ್ಮಲ್ಲಿ ಕಳಕಳಿಯಿಂದ ವಿನಂತಿಸುತ್ತೇನೆ ಎಂದು ಅಭಿವೃದ್ಧಿ ಶಿಕ್ಷಣ ತಜ್ಞರು ಹಾಗು ಕರ್ನಾಟಕ ರಾಜ್ಯ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳ ಸಮನ್ವಯ ವೇದಿಕೆಯ ಮಹಾ ಪೋಷಕರು ಆದ ನಿರಂಜನಾರಾಧ್ಯರು ಮನವಿ ಮಾಡಿದ್ದಾರೆ.

ಅಲ್ಲದೆ ಪಠ್ಯ ಪರಿಷ್ಕರಣೆಗೆ ಯುನೇಸ್ಕೊ ವರದಿಗಳು, ರಾಷ್ಟ್ರೀಯ ಪಠ್ಯಕ್ರಮ ಚೌಕಟ್ಟು ಮತ್ತು ಭಾರತೀಯ ಸಂವಿಧಾನದ ಮುನ್ನಡಿ ಆಧಾರದಲ್ಲಿ ಯಾವ ನಿಯಮಗಳನ್ನು ಪಾಲಿಸಬೇಕೆಂದು ಸಹ ತಮ್ಮ ಪತ್ರದಲ್ಲಿ ವಿವರವಾಗಿ ಬರೆದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...