Homeಚಳವಳಿಪಠ್ಯ ಪರಿಷ್ಕರಣೆ ಅಸಂವಿಧಾನಿಕ-ಅಪ್ರಜಾಸತ್ತಾತ್ಮಕ –ಅಪಾರದರ್ಶಕ- ಅಸಿಂಧು: ಸಿಎಂಗೆ ನಿರಂಜನಾರಾಧ್ಯರ ಪತ್ರ

ಪಠ್ಯ ಪರಿಷ್ಕರಣೆ ಅಸಂವಿಧಾನಿಕ-ಅಪ್ರಜಾಸತ್ತಾತ್ಮಕ –ಅಪಾರದರ್ಶಕ- ಅಸಿಂಧು: ಸಿಎಂಗೆ ನಿರಂಜನಾರಾಧ್ಯರ ಪತ್ರ

ಸಮಿತಿಗೆ ಕೇವಲ ಪರಿಶೀಲಿಸಿ ಒಂದು ತಿಂಗಳ ಒಳಗಾಗಿ ವರದಿ ನೀಡುವ ಅಧಿಕಾರವನ್ನು ಮಾತ್ರ ನೀಡಿತ್ತು. ಹೀಗಾಗಿ, ಪರಿಷ್ಕರಣೆಗೆ ಸರ್ಕಾರದ ಅನುಮತಿ ಇಲ್ಲವಾದ್ದರಿಂದ ಇಡೀ ಪ್ರಕ್ರಿಯೆಯೆ ಅಸಂವಿಧಾನಿಕ

- Advertisement -
- Advertisement -

ಪಠ್ಯ ಪರಿಷ್ಕರಣೆ ವಿವಾದಕ್ಕೆ ಸಂಬಂಧಿಸಿದಂತೆ ಬದಲಾವಣೆಗಳಿಗೆ ಮುಕ್ತವಾಗಿದ್ದೇವೆ ಎಂದಿರುವ ಸಿಎಂ ಬಸವರಾಜ ಬೊಮ್ಮಾಯಿಯರವರಿಗೆ ಶಿಕ್ಷಣ ತಜ್ಞ ಡಾ.ವಿ.ಪಿ ನಿರಂಜನಾರಾಧ್ಯರು ಪತ್ರ ಬರೆದಿದ್ದು, ಇಡೀ ಪ್ರಕ್ರಿಯೆಯು ಅಪ್ರಜಾಸತ್ತಾತ್ಮಕ –ಅಪಾರದರ್ಶಕ- ಅಸಿಂಧು ಮತ್ತು ಅಪಮೌಲ್ಯದಿಂದ ಕೂಡಿವೆ ಎಂದು ದೂರಿದ್ದಾರೆ.

ರಾಜ್ಯದಲ್ಲಿ ಪಠ್ಯ ಪುಸ್ತಕ ಪರಿಷ್ಕರಣೆ ಗೊಂದಲದ ಗೂಡಾಗಿ ಲಕ್ಷಾಂತರ ಮಕ್ಕಳ ಕಲಿಕೆ ನೆನೆಗುದಿಗೆ ಬಿದ್ದಿರುವ ಈ ಸಂಕಷ್ಟದ ಪರಿಸ್ಥಿತಿಯಲ್ಲಿ, ಮಕ್ಕಳ ಕಲಿಕೆ ಹಾಗು ಶಿಕ್ಷಣದ ಹಕ್ಕನ್ನು ಗೌರವಿಸಿ ಎತ್ತಿ ಹಿಡಿಯಬೇಕಿದೆ. ಈ ಕುರಿತು ಮೇ 22 ರಂದೇ ತಮಗೆ ಪತ್ರ ಬರೆದಿದ್ದೇನೆ. ಆದರೆ ವಿಳಂಬವಾದರೂ ಸಹ ತಮ್ಮ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿಯೂ ಪರಿಷ್ಕೃತ ಪುಸ್ತಕಗಳನ್ನು ಕೈಬಿಡುವ ಬಗ್ಗೆ ತೀರ್ಮಾನಕ್ಕೆ ಬರಲಾಗಲಿಲ್ಲ. ಈ ಹಿನ್ನೆಲೆಯಲ್ಲಿ, ಅಪ್ರಬುದ್ಧ -ಅಸಂವಿಧಾನಿಕ-ಅಪ್ರಜಾಸತ್ತಾತ್ಮಕ –ಅಪಾರದರ್ಶಕ- ಅಸಿಂಧು –ಅಪಮೌಲ್ಯದ ಪ್ರಕ್ರಿಯೆಯ ಮೂಲಕ ನಡೆದ ಪಠ್ಯ ಪರಿಷ್ಕರಣಾ ವಿಷಯದಲ್ಲಿ ತಾವು ಒಂದು ವಸ್ತುನಿಷ್ಟ ತೀರ್ಮಾನ ತೆಗೆದುಕೊಳ್ಳಲು, ಕಳೆದ 35 ವರ್ಷಗಳಿಂದ ಶಾಲಾ ಶಿಕ್ಷಣದಲ್ಲಿ ಕೆಲಸ ನಿರ್ವಹಿಸುತ್ತಿರುವ ನಾನು, ನನ್ನ ಅನುಭವದಲ್ಲಿ ಕೆಲವೊಂದು ಸತ್ಯ ಆಧಾರಿತ ವಸ್ತುನಿಷ್ಟ ಮುಖ್ಯಾಂಶಗಳನ್ನು ಸಕಾರಣಗಳೊಂದಿಗೆ ತಮ್ಮ ಗಮನಕ್ಕೆ ತರಬಯಸುತ್ತೇನೆ ಎಂದು ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಪರಿಶೀಲನೆಗೆ ಸಮಿತಿ ರಚಿಸುವ ಮುನ್ನವೇ ಇಲಾಖೆಯು ವಿವಾದಿತ ವಿಷಯಾಂಶಗಳನ್ನು ಬೋಧನೆ-ಕಲಿಕೆಗೆ/ಮೌಲ್ಯ ಮಾಪನಕ್ಕೆ ಪರಿಗಣಿಸದಿರಲು ಇಲಾಖೆಯು ದಿನಾಂಕ:17.02.2021ರಂದು ಸುತ್ತೋಲೆ ಹೊರಡಿಸಿದೆ. ಸಮಾಲೋಚನೆ-ಪರಿಶೀಲನೆಯೇ ಇಲ್ಲದೆ ಏಕಾಏಕಿ ಸುತ್ತೋಲೆ ಹೊರಡಿಸಿದ್ದು ಆತುರದ ಸರ್ವಾಧಿಕಾರದ ಅಪ್ರಬುದ್ಧ ತೀರ್ಮಾನವಾಗಿದೆ ಎಂದು ಅವರು ಹೇಳಿದ್ದಾರೆ.

ದಿನಾಂಕ:08.09.2021 ರಂದು ಸರ್ಕಾರ ಸಮಿತಿ ರಚಿಸಲು ಹೊರಡಿಸಿದ ಆದೇಶದಲ್ಲಿ ಸಮಿತಿಗೆ ಕೇವಲ ಪರಿಶೀಲಿಸಿ ಒಂದು ತಿಂಗಳ ಒಳಗಾಗಿ ವರದಿ ನೀಡುವ ಅಧಿಕಾರವನ್ನು ಮಾತ್ರ ನೀಡಿತ್ತು. ಹೀಗಾಗಿ, ಪರಿಷ್ಕರಣೆಗೆ ಸರ್ಕಾರದ ಅನುಮತಿ ಇಲ್ಲವಾದ್ದರಿಂದ ಇಡೀ ಪಠ್ಯ ಪರಿಷ್ಕರಣಾ ಪ್ರಕ್ರಿಯೆಯು ಅಸಂವಿಧಾನಿಕ ಮತ್ತು ಆದೇಶರಹಿತವಾಗಿದೆ ಎಂದು ಅವರು ತಿಳಿಸಿದ್ದಾರೆ.

ಪರಿಷ್ಕರಣೆಗೆ ಆದೇಶವೇ ಇರಲಿಲ್ಲ. ಜೊತೆಗೆ, ಯಾವುದೇ ಒಪ್ಪಿತ ಪಠ್ಯಕ್ರಮ ಚೌಕಟ್ಟು, ಪಠ್ಯವಸ್ತು ಮತ್ತು ನಿರ್ಧಿಷ್ಟ ಮಾರ್ಗ ಸೂಚಿಯಿಲ್ಲದೆ ಹಾಗು ನೀತಿ-ನಿಯಮಗಳಿಲ್ಲದೆ ಪರಿಷ್ಕರಣೆಯನ್ನು ಮಾಡಿದ್ದು ಒಪ್ಪಿತ ವಿಧಾನವಲ್ಲ. ಈ ಹಿಂದೆ ರೂಪಿಸಿದ ಭಾಷಾ ಹಾಗು ಸಮಾಜ ವಿಜ್ಞಾನ ಪುಸ್ತಕಗಳಲ್ಲಿ ದೋಷಗಳಿದ್ದರೆ, ಅಯಾ ಲೇಖಕರು ಮತ್ತು ಇತಿಹಾಸಕಾರರರ ಜೊತೆ ಮುಖಾಮುಖಿಯಾಗಿ ಚರ್ಚಿಸಿ, ಸರಿ-ತಪ್ಪುಗಳನ್ನು ಪ್ರಜಾಸತ್ತಾತ್ಮಕವಾಗಿ ಸಮಾಲೋಚಿಸಿ ಪರಿಷ್ಕರಣೆ ನಡೆಯಬೇಕಿತ್ತು. ಎಲ್ಲಕ್ಕಿಂತ ಮಿಗಿಲಾಗಿ, ಹಿಂದಿನ ಪರಿಷ್ಕರಣೆಯಲ್ಲಿ ದೋಷಗಳಿದ್ದರೆ ಅದು ಸಹಜ ನ್ಯಾಯ ತತ್ವಗಳನ್ನು ಅನುಸರಿಸಿ ತೀರ್ಮಾನಿಸಬೇಕಿತ್ತು. ಎಲ್ಲಕ್ಕಿಂತ ಮಿಗಿಲಾಗಿ, ಸಮಿತಿ ಸದಸ್ಯರ ಅಭಿಪ್ರಾಯಗಳನ್ನು ಗೌರವಿಸಿ ಅದರಂತೆ ಪ್ರಜಾಸತ್ತಾತ್ಮಕವಾಗಿ ನಡೆಯಬೇಕಿತ್ತು. ಇದಾವ ಪ್ರಕ್ರಿಯೆ ನಡೆದಿಲ್ಲದ ಕಾರಣ ಇದು ಅಪ್ರಜಾಸತ್ತಾತ್ಮಕ ಎಂದು ಅವರು ದೂರಿದ್ದಾರೆ.

ಪರಿಶೀಲನೆ/ಪರಿಷ್ಕರಣೆ ಪ್ರಾರಂಭವಾದಾಗಿನಿಂದಲೂ, ಪರಿಶೀಲನೆ/ಪರಿಷ್ಕರಣೆಗೆ ಸಕಾರಣಗಳಾಗಲಿ, ಪ್ರಕ್ರಿಯೆ ನಡೆದ ನಡಾವಳಿಗಳಾಗಳಿ, ಪರೀಶೀಲಿಸಿದ ನಂತರ ಪರಿಶೀಲನೆಯ ವರದಿಯಾಗಲಿ, ಎಲ್ಲಾ ಆದೇಶ-ವರದಿಗಳನ್ನು ಸಾರ್ವಜನಿಕ ಚರ್ಚೆಗಾಗಲಿ ದೊರಕದಂತೆ ಮಾಡುವ ಮೂಲಕ ಇಡೀ ಪ್ರಕ್ರಿಯೆಯನ್ನು ಗೌಪ್ಯವಾಗಿ ಮಾಡಲಾಗಿದೆ. ಆದ್ದರಿಂದ ಇದು ಅಪಾರದರ್ಶಕವಾಗಿದೆ ಎಂದು ನಿರಂಜನಾರಾಧ್ಯರು ಹೇಳಿದ್ದಾರೆ.

3 ಮತ್ತು 4ನೇ ತರಗತಿಯ ಪರಿಸರ ಅಧ್ಯಯನ, 1ರಿಂದ 10ನೇ ತರಗತಿಯ ಕನ್ನಡ ಭಾಷಾ ವಿಷಯಗಳು ಮತ್ತು 6 ರಿಂದ 10ನೇ ತರಗತಿಯ ಸಮಾಜ ವಿಜ್ಞಾನ ಪುಸ್ತಕಗಳನ್ನು ಆದೇಶವಿಲ್ಲದೆ ಪರಿಷ್ಕರಿಸಿ, ನಂತರ ದಿನಾಂಕ 27.01.2022ರಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ, ಆದೇಶ ರಹಿತ ಪರಿಷ್ಕರಣೆಯನ್ನು ತಮ್ಮ ಗಮನಕ್ಕಾಗಲಿ ಅಥವಾ ತಮ್ಮ ಅಧ್ಯಕ್ಷತೆಯಲ್ಲಿ ನಡೆಯುವ ಸಂಪುಟ ಸಭೆಯ ಮುಂದೆ ಮಂಡಿಸಿ ಅನುಮೋದನೆ ಪಡೆಯದೆ ಸಚಿವರೇ ಅನುಮೋದಿಸಿರುವುದು ಮೇಲ್ನೋಟಕ್ಕೆ ಸ್ಪಷ್ಟವಾಗಿದೆ. ಎಲ್ಲಕ್ಕಿಂತ ಮಿಗಿಲಾಗಿ, ಈ ತೀರ್ಮಾನದಂತೆ ದಿನಾಂಕ 19.03.2022 ರಂದು ಪಠ್ಯ ಪುಸ್ತಕಗಳನ್ನು ಪರಿಷ್ಕೃತಗೊಳಿಸಿರುವುದಕ್ಕೆ ಘಟನೋತ್ತರ ಅನುಮತಿ ನೀಡಿದ ಸರ್ಕಾರಿ ಆದೇಶದಲ್ಲಿ “ಕನ್ನಡ ಭಾಷೆ, ಪರಿಸರ ಅಧ್ಯಯನ ಮತ್ತು ಸಮಾಜ ವಿಜ್ಞಾನ ವಿಷಯದ ಪರಿಷ್ಕೃತ ಪಠ್ಯಪುಸ್ತಕಗಳಲ್ಲಿರುವ ಎಲ್ಲ ವಿಷಯಾಂಶಗಳು, ಲೇಖಕರು/ಕವಿಗಳು, ಚಿತ್ರಗಳು, ಭೂಪಟಗಳು , ನಕ್ಷೆಗಳು ಹಾಗು ಆಧಾರಗಳಿಗೆ ಸಮಿತಿ ಅಧ್ಯಕ್ಷರು ಹಾಗು ಸದಸ್ಯರು ಜವಾಬ್ದಾರರಾಗಿದ್ದು, ಪಠ್ಯಪುಸ್ತಕಗಳಲ್ಲಿರುವ ವಿಷಯಗಳಿಗೆ ಮುಂದಿನ ದಿನಗಳಲ್ಲಿ ಆಕ್ಷೇಪಣೆ ಬಂದಲ್ಲಿ ಶ್ರೀ ರೋಹಿತ್ ಚಕ್ರತೀರ್ಥ ಸಮಿತಿ ಅಧ್ಯಕ್ಷರು ಉತ್ತರಿಸುವ ಜವಾಬ್ದಾರಿ ಹೊಂದಿರುತ್ತಾರೆ” ಎಂದು ಬರೆದಿದೆ. ಇದು ಸರಕಾರದ ಅಧಿಕೃತ ತೀರ್ಮಾನವಾದರೆ ಪಠ್ಯಪುಸ್ತಕಗಳ ಪರಿಷ್ಕರಣೆ ಅಸಿಂಧು ಹಾಗು ಅಮಾನ್ಯವಾಗಿವೆ ಎಂದು ಅವರು ವಾದಿಸಿದ್ದಾರೆ.

ಇದನ್ನೂ ಓದಿ; ಪಠ್ಯಪುಸ್ತಕ ರಚನೆಯಲ್ಲಿ ಏಕ‘ಚಕ್ರ’ ಅಧಿಪತ್ಯ: ಸಮಿತಿ ಸದಸ್ಯರ ಗೊಂದಲಕಾರಿ ಹೇಳಿಕೆ

ಈ ಪರಿಷ್ಕರಣೆಯ ಹೆಸರಲ್ಲಿ ನಾಡಿನ ಹಾಗು ದೇಶದ ದಾರ್ಶನಿಕರನ್ನು ಅವಮಾನಿಸಿ, ಅವರ ವಿಚಾರಗಳನ್ನು ತಿರುಚಿರುವುದಲ್ಲದೆ, ಇತಿಹಾಸವನ್ನು ತನಗೆ ಇಷ್ಟಬಂದ ರೀತಿಯಲ್ಲ ಯಾವುದೇ ಸಾಕ್ಷಿ-ಆಧಾರ ಪುರಾವೆಗಳಿಲ್ಲದೆ ಬದಲಾಯಿಸಿದೆ. ಭಾಷಾ ವಿಷಯಗಳಲ್ಲಿ ಸಂವಿಧಾನದ ಮೌಲ್ಯಗಳನ್ನು ಗೌಣಗೊಳಿಸಿ ವಿವಾದಾತ್ಮಕ ಪಾಠಗಳನ್ನು ಸೇರಿಸಿ, ಹಿಂದಿನ ಲೇಖಕರ ಪಾಠ/ಪದ್ಯಗಳನ್ನು ಕೈಬಿಟ್ಟಿದೆ. ಒಟ್ಟಾರೆ, ಈ ಪ್ರಕ್ರಿಯೆ ಮೂಲಕ ಪಠ್ಯಪುಸ್ತಕ ಹಾಗು ಅವುಗಳಲ್ಲಿನ ವಿಷಯಗಳನ್ನು ಅಪಮೌಲ್ಯಗೊಳಿಸಿದೆ.

ಈಗಿನ ಪರಿಷ್ಕರಣಾ ಕ್ರಮ, ವಿಧಾನ ಮತ್ತು ವಿಷಯಗಳ ಆಯ್ಕೆಯಲ್ಲಿ ಗೊಂದಲ ಹಾಗು ಸಾಂವಿಧಾನಿಕ ಸಂಘರ್ಷ ಉಂಟಾಗಿದೆ. ಈ ಎಲ್ಲಾ ಕಾರಣಗಳಿಂದ ಈಗಿನ ಪರಿಷ್ಕರಣೆಯನ್ನು ಸಂಪೂರ್ಣವಾಗಿ ಕೈಬಿಟ್ಟು, ಈ ಹಿಂದೆ ರಚನೆಯಾಗಿದ್ದ ಪಠ್ಯಪುಸ್ತಕಗಳನ್ನು ಯಥಾವತ್ತಾಗಿ ಮುಂದುವರಿಸಬೇಕೆಂದು ನಾಡಿನ ಪ್ರಜ್ಞಾವಂತ ಜನರ ಪರವಾಗಿ ತಮ್ಮಲ್ಲಿ ಕಳಕಳಿಯಿಂದ ವಿನಂತಿಸುತ್ತೇನೆ ಎಂದು ಅಭಿವೃದ್ಧಿ ಶಿಕ್ಷಣ ತಜ್ಞರು ಹಾಗು ಕರ್ನಾಟಕ ರಾಜ್ಯ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳ ಸಮನ್ವಯ ವೇದಿಕೆಯ ಮಹಾ ಪೋಷಕರು ಆದ ನಿರಂಜನಾರಾಧ್ಯರು ಮನವಿ ಮಾಡಿದ್ದಾರೆ.

ಅಲ್ಲದೆ ಪಠ್ಯ ಪರಿಷ್ಕರಣೆಗೆ ಯುನೇಸ್ಕೊ ವರದಿಗಳು, ರಾಷ್ಟ್ರೀಯ ಪಠ್ಯಕ್ರಮ ಚೌಕಟ್ಟು ಮತ್ತು ಭಾರತೀಯ ಸಂವಿಧಾನದ ಮುನ್ನಡಿ ಆಧಾರದಲ್ಲಿ ಯಾವ ನಿಯಮಗಳನ್ನು ಪಾಲಿಸಬೇಕೆಂದು ಸಹ ತಮ್ಮ ಪತ್ರದಲ್ಲಿ ವಿವರವಾಗಿ ಬರೆದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...