Homeಚಳವಳಿಪಠ್ಯ ಪರಿಷ್ಕರಣೆ ಅಸಂವಿಧಾನಿಕ-ಅಪ್ರಜಾಸತ್ತಾತ್ಮಕ –ಅಪಾರದರ್ಶಕ- ಅಸಿಂಧು: ಸಿಎಂಗೆ ನಿರಂಜನಾರಾಧ್ಯರ ಪತ್ರ

ಪಠ್ಯ ಪರಿಷ್ಕರಣೆ ಅಸಂವಿಧಾನಿಕ-ಅಪ್ರಜಾಸತ್ತಾತ್ಮಕ –ಅಪಾರದರ್ಶಕ- ಅಸಿಂಧು: ಸಿಎಂಗೆ ನಿರಂಜನಾರಾಧ್ಯರ ಪತ್ರ

ಸಮಿತಿಗೆ ಕೇವಲ ಪರಿಶೀಲಿಸಿ ಒಂದು ತಿಂಗಳ ಒಳಗಾಗಿ ವರದಿ ನೀಡುವ ಅಧಿಕಾರವನ್ನು ಮಾತ್ರ ನೀಡಿತ್ತು. ಹೀಗಾಗಿ, ಪರಿಷ್ಕರಣೆಗೆ ಸರ್ಕಾರದ ಅನುಮತಿ ಇಲ್ಲವಾದ್ದರಿಂದ ಇಡೀ ಪ್ರಕ್ರಿಯೆಯೆ ಅಸಂವಿಧಾನಿಕ

- Advertisement -
- Advertisement -

ಪಠ್ಯ ಪರಿಷ್ಕರಣೆ ವಿವಾದಕ್ಕೆ ಸಂಬಂಧಿಸಿದಂತೆ ಬದಲಾವಣೆಗಳಿಗೆ ಮುಕ್ತವಾಗಿದ್ದೇವೆ ಎಂದಿರುವ ಸಿಎಂ ಬಸವರಾಜ ಬೊಮ್ಮಾಯಿಯರವರಿಗೆ ಶಿಕ್ಷಣ ತಜ್ಞ ಡಾ.ವಿ.ಪಿ ನಿರಂಜನಾರಾಧ್ಯರು ಪತ್ರ ಬರೆದಿದ್ದು, ಇಡೀ ಪ್ರಕ್ರಿಯೆಯು ಅಪ್ರಜಾಸತ್ತಾತ್ಮಕ –ಅಪಾರದರ್ಶಕ- ಅಸಿಂಧು ಮತ್ತು ಅಪಮೌಲ್ಯದಿಂದ ಕೂಡಿವೆ ಎಂದು ದೂರಿದ್ದಾರೆ.

ರಾಜ್ಯದಲ್ಲಿ ಪಠ್ಯ ಪುಸ್ತಕ ಪರಿಷ್ಕರಣೆ ಗೊಂದಲದ ಗೂಡಾಗಿ ಲಕ್ಷಾಂತರ ಮಕ್ಕಳ ಕಲಿಕೆ ನೆನೆಗುದಿಗೆ ಬಿದ್ದಿರುವ ಈ ಸಂಕಷ್ಟದ ಪರಿಸ್ಥಿತಿಯಲ್ಲಿ, ಮಕ್ಕಳ ಕಲಿಕೆ ಹಾಗು ಶಿಕ್ಷಣದ ಹಕ್ಕನ್ನು ಗೌರವಿಸಿ ಎತ್ತಿ ಹಿಡಿಯಬೇಕಿದೆ. ಈ ಕುರಿತು ಮೇ 22 ರಂದೇ ತಮಗೆ ಪತ್ರ ಬರೆದಿದ್ದೇನೆ. ಆದರೆ ವಿಳಂಬವಾದರೂ ಸಹ ತಮ್ಮ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿಯೂ ಪರಿಷ್ಕೃತ ಪುಸ್ತಕಗಳನ್ನು ಕೈಬಿಡುವ ಬಗ್ಗೆ ತೀರ್ಮಾನಕ್ಕೆ ಬರಲಾಗಲಿಲ್ಲ. ಈ ಹಿನ್ನೆಲೆಯಲ್ಲಿ, ಅಪ್ರಬುದ್ಧ -ಅಸಂವಿಧಾನಿಕ-ಅಪ್ರಜಾಸತ್ತಾತ್ಮಕ –ಅಪಾರದರ್ಶಕ- ಅಸಿಂಧು –ಅಪಮೌಲ್ಯದ ಪ್ರಕ್ರಿಯೆಯ ಮೂಲಕ ನಡೆದ ಪಠ್ಯ ಪರಿಷ್ಕರಣಾ ವಿಷಯದಲ್ಲಿ ತಾವು ಒಂದು ವಸ್ತುನಿಷ್ಟ ತೀರ್ಮಾನ ತೆಗೆದುಕೊಳ್ಳಲು, ಕಳೆದ 35 ವರ್ಷಗಳಿಂದ ಶಾಲಾ ಶಿಕ್ಷಣದಲ್ಲಿ ಕೆಲಸ ನಿರ್ವಹಿಸುತ್ತಿರುವ ನಾನು, ನನ್ನ ಅನುಭವದಲ್ಲಿ ಕೆಲವೊಂದು ಸತ್ಯ ಆಧಾರಿತ ವಸ್ತುನಿಷ್ಟ ಮುಖ್ಯಾಂಶಗಳನ್ನು ಸಕಾರಣಗಳೊಂದಿಗೆ ತಮ್ಮ ಗಮನಕ್ಕೆ ತರಬಯಸುತ್ತೇನೆ ಎಂದು ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಪರಿಶೀಲನೆಗೆ ಸಮಿತಿ ರಚಿಸುವ ಮುನ್ನವೇ ಇಲಾಖೆಯು ವಿವಾದಿತ ವಿಷಯಾಂಶಗಳನ್ನು ಬೋಧನೆ-ಕಲಿಕೆಗೆ/ಮೌಲ್ಯ ಮಾಪನಕ್ಕೆ ಪರಿಗಣಿಸದಿರಲು ಇಲಾಖೆಯು ದಿನಾಂಕ:17.02.2021ರಂದು ಸುತ್ತೋಲೆ ಹೊರಡಿಸಿದೆ. ಸಮಾಲೋಚನೆ-ಪರಿಶೀಲನೆಯೇ ಇಲ್ಲದೆ ಏಕಾಏಕಿ ಸುತ್ತೋಲೆ ಹೊರಡಿಸಿದ್ದು ಆತುರದ ಸರ್ವಾಧಿಕಾರದ ಅಪ್ರಬುದ್ಧ ತೀರ್ಮಾನವಾಗಿದೆ ಎಂದು ಅವರು ಹೇಳಿದ್ದಾರೆ.

ದಿನಾಂಕ:08.09.2021 ರಂದು ಸರ್ಕಾರ ಸಮಿತಿ ರಚಿಸಲು ಹೊರಡಿಸಿದ ಆದೇಶದಲ್ಲಿ ಸಮಿತಿಗೆ ಕೇವಲ ಪರಿಶೀಲಿಸಿ ಒಂದು ತಿಂಗಳ ಒಳಗಾಗಿ ವರದಿ ನೀಡುವ ಅಧಿಕಾರವನ್ನು ಮಾತ್ರ ನೀಡಿತ್ತು. ಹೀಗಾಗಿ, ಪರಿಷ್ಕರಣೆಗೆ ಸರ್ಕಾರದ ಅನುಮತಿ ಇಲ್ಲವಾದ್ದರಿಂದ ಇಡೀ ಪಠ್ಯ ಪರಿಷ್ಕರಣಾ ಪ್ರಕ್ರಿಯೆಯು ಅಸಂವಿಧಾನಿಕ ಮತ್ತು ಆದೇಶರಹಿತವಾಗಿದೆ ಎಂದು ಅವರು ತಿಳಿಸಿದ್ದಾರೆ.

ಪರಿಷ್ಕರಣೆಗೆ ಆದೇಶವೇ ಇರಲಿಲ್ಲ. ಜೊತೆಗೆ, ಯಾವುದೇ ಒಪ್ಪಿತ ಪಠ್ಯಕ್ರಮ ಚೌಕಟ್ಟು, ಪಠ್ಯವಸ್ತು ಮತ್ತು ನಿರ್ಧಿಷ್ಟ ಮಾರ್ಗ ಸೂಚಿಯಿಲ್ಲದೆ ಹಾಗು ನೀತಿ-ನಿಯಮಗಳಿಲ್ಲದೆ ಪರಿಷ್ಕರಣೆಯನ್ನು ಮಾಡಿದ್ದು ಒಪ್ಪಿತ ವಿಧಾನವಲ್ಲ. ಈ ಹಿಂದೆ ರೂಪಿಸಿದ ಭಾಷಾ ಹಾಗು ಸಮಾಜ ವಿಜ್ಞಾನ ಪುಸ್ತಕಗಳಲ್ಲಿ ದೋಷಗಳಿದ್ದರೆ, ಅಯಾ ಲೇಖಕರು ಮತ್ತು ಇತಿಹಾಸಕಾರರರ ಜೊತೆ ಮುಖಾಮುಖಿಯಾಗಿ ಚರ್ಚಿಸಿ, ಸರಿ-ತಪ್ಪುಗಳನ್ನು ಪ್ರಜಾಸತ್ತಾತ್ಮಕವಾಗಿ ಸಮಾಲೋಚಿಸಿ ಪರಿಷ್ಕರಣೆ ನಡೆಯಬೇಕಿತ್ತು. ಎಲ್ಲಕ್ಕಿಂತ ಮಿಗಿಲಾಗಿ, ಹಿಂದಿನ ಪರಿಷ್ಕರಣೆಯಲ್ಲಿ ದೋಷಗಳಿದ್ದರೆ ಅದು ಸಹಜ ನ್ಯಾಯ ತತ್ವಗಳನ್ನು ಅನುಸರಿಸಿ ತೀರ್ಮಾನಿಸಬೇಕಿತ್ತು. ಎಲ್ಲಕ್ಕಿಂತ ಮಿಗಿಲಾಗಿ, ಸಮಿತಿ ಸದಸ್ಯರ ಅಭಿಪ್ರಾಯಗಳನ್ನು ಗೌರವಿಸಿ ಅದರಂತೆ ಪ್ರಜಾಸತ್ತಾತ್ಮಕವಾಗಿ ನಡೆಯಬೇಕಿತ್ತು. ಇದಾವ ಪ್ರಕ್ರಿಯೆ ನಡೆದಿಲ್ಲದ ಕಾರಣ ಇದು ಅಪ್ರಜಾಸತ್ತಾತ್ಮಕ ಎಂದು ಅವರು ದೂರಿದ್ದಾರೆ.

ಪರಿಶೀಲನೆ/ಪರಿಷ್ಕರಣೆ ಪ್ರಾರಂಭವಾದಾಗಿನಿಂದಲೂ, ಪರಿಶೀಲನೆ/ಪರಿಷ್ಕರಣೆಗೆ ಸಕಾರಣಗಳಾಗಲಿ, ಪ್ರಕ್ರಿಯೆ ನಡೆದ ನಡಾವಳಿಗಳಾಗಳಿ, ಪರೀಶೀಲಿಸಿದ ನಂತರ ಪರಿಶೀಲನೆಯ ವರದಿಯಾಗಲಿ, ಎಲ್ಲಾ ಆದೇಶ-ವರದಿಗಳನ್ನು ಸಾರ್ವಜನಿಕ ಚರ್ಚೆಗಾಗಲಿ ದೊರಕದಂತೆ ಮಾಡುವ ಮೂಲಕ ಇಡೀ ಪ್ರಕ್ರಿಯೆಯನ್ನು ಗೌಪ್ಯವಾಗಿ ಮಾಡಲಾಗಿದೆ. ಆದ್ದರಿಂದ ಇದು ಅಪಾರದರ್ಶಕವಾಗಿದೆ ಎಂದು ನಿರಂಜನಾರಾಧ್ಯರು ಹೇಳಿದ್ದಾರೆ.

3 ಮತ್ತು 4ನೇ ತರಗತಿಯ ಪರಿಸರ ಅಧ್ಯಯನ, 1ರಿಂದ 10ನೇ ತರಗತಿಯ ಕನ್ನಡ ಭಾಷಾ ವಿಷಯಗಳು ಮತ್ತು 6 ರಿಂದ 10ನೇ ತರಗತಿಯ ಸಮಾಜ ವಿಜ್ಞಾನ ಪುಸ್ತಕಗಳನ್ನು ಆದೇಶವಿಲ್ಲದೆ ಪರಿಷ್ಕರಿಸಿ, ನಂತರ ದಿನಾಂಕ 27.01.2022ರಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ, ಆದೇಶ ರಹಿತ ಪರಿಷ್ಕರಣೆಯನ್ನು ತಮ್ಮ ಗಮನಕ್ಕಾಗಲಿ ಅಥವಾ ತಮ್ಮ ಅಧ್ಯಕ್ಷತೆಯಲ್ಲಿ ನಡೆಯುವ ಸಂಪುಟ ಸಭೆಯ ಮುಂದೆ ಮಂಡಿಸಿ ಅನುಮೋದನೆ ಪಡೆಯದೆ ಸಚಿವರೇ ಅನುಮೋದಿಸಿರುವುದು ಮೇಲ್ನೋಟಕ್ಕೆ ಸ್ಪಷ್ಟವಾಗಿದೆ. ಎಲ್ಲಕ್ಕಿಂತ ಮಿಗಿಲಾಗಿ, ಈ ತೀರ್ಮಾನದಂತೆ ದಿನಾಂಕ 19.03.2022 ರಂದು ಪಠ್ಯ ಪುಸ್ತಕಗಳನ್ನು ಪರಿಷ್ಕೃತಗೊಳಿಸಿರುವುದಕ್ಕೆ ಘಟನೋತ್ತರ ಅನುಮತಿ ನೀಡಿದ ಸರ್ಕಾರಿ ಆದೇಶದಲ್ಲಿ “ಕನ್ನಡ ಭಾಷೆ, ಪರಿಸರ ಅಧ್ಯಯನ ಮತ್ತು ಸಮಾಜ ವಿಜ್ಞಾನ ವಿಷಯದ ಪರಿಷ್ಕೃತ ಪಠ್ಯಪುಸ್ತಕಗಳಲ್ಲಿರುವ ಎಲ್ಲ ವಿಷಯಾಂಶಗಳು, ಲೇಖಕರು/ಕವಿಗಳು, ಚಿತ್ರಗಳು, ಭೂಪಟಗಳು , ನಕ್ಷೆಗಳು ಹಾಗು ಆಧಾರಗಳಿಗೆ ಸಮಿತಿ ಅಧ್ಯಕ್ಷರು ಹಾಗು ಸದಸ್ಯರು ಜವಾಬ್ದಾರರಾಗಿದ್ದು, ಪಠ್ಯಪುಸ್ತಕಗಳಲ್ಲಿರುವ ವಿಷಯಗಳಿಗೆ ಮುಂದಿನ ದಿನಗಳಲ್ಲಿ ಆಕ್ಷೇಪಣೆ ಬಂದಲ್ಲಿ ಶ್ರೀ ರೋಹಿತ್ ಚಕ್ರತೀರ್ಥ ಸಮಿತಿ ಅಧ್ಯಕ್ಷರು ಉತ್ತರಿಸುವ ಜವಾಬ್ದಾರಿ ಹೊಂದಿರುತ್ತಾರೆ” ಎಂದು ಬರೆದಿದೆ. ಇದು ಸರಕಾರದ ಅಧಿಕೃತ ತೀರ್ಮಾನವಾದರೆ ಪಠ್ಯಪುಸ್ತಕಗಳ ಪರಿಷ್ಕರಣೆ ಅಸಿಂಧು ಹಾಗು ಅಮಾನ್ಯವಾಗಿವೆ ಎಂದು ಅವರು ವಾದಿಸಿದ್ದಾರೆ.

ಇದನ್ನೂ ಓದಿ; ಪಠ್ಯಪುಸ್ತಕ ರಚನೆಯಲ್ಲಿ ಏಕ‘ಚಕ್ರ’ ಅಧಿಪತ್ಯ: ಸಮಿತಿ ಸದಸ್ಯರ ಗೊಂದಲಕಾರಿ ಹೇಳಿಕೆ

ಈ ಪರಿಷ್ಕರಣೆಯ ಹೆಸರಲ್ಲಿ ನಾಡಿನ ಹಾಗು ದೇಶದ ದಾರ್ಶನಿಕರನ್ನು ಅವಮಾನಿಸಿ, ಅವರ ವಿಚಾರಗಳನ್ನು ತಿರುಚಿರುವುದಲ್ಲದೆ, ಇತಿಹಾಸವನ್ನು ತನಗೆ ಇಷ್ಟಬಂದ ರೀತಿಯಲ್ಲ ಯಾವುದೇ ಸಾಕ್ಷಿ-ಆಧಾರ ಪುರಾವೆಗಳಿಲ್ಲದೆ ಬದಲಾಯಿಸಿದೆ. ಭಾಷಾ ವಿಷಯಗಳಲ್ಲಿ ಸಂವಿಧಾನದ ಮೌಲ್ಯಗಳನ್ನು ಗೌಣಗೊಳಿಸಿ ವಿವಾದಾತ್ಮಕ ಪಾಠಗಳನ್ನು ಸೇರಿಸಿ, ಹಿಂದಿನ ಲೇಖಕರ ಪಾಠ/ಪದ್ಯಗಳನ್ನು ಕೈಬಿಟ್ಟಿದೆ. ಒಟ್ಟಾರೆ, ಈ ಪ್ರಕ್ರಿಯೆ ಮೂಲಕ ಪಠ್ಯಪುಸ್ತಕ ಹಾಗು ಅವುಗಳಲ್ಲಿನ ವಿಷಯಗಳನ್ನು ಅಪಮೌಲ್ಯಗೊಳಿಸಿದೆ.

ಈಗಿನ ಪರಿಷ್ಕರಣಾ ಕ್ರಮ, ವಿಧಾನ ಮತ್ತು ವಿಷಯಗಳ ಆಯ್ಕೆಯಲ್ಲಿ ಗೊಂದಲ ಹಾಗು ಸಾಂವಿಧಾನಿಕ ಸಂಘರ್ಷ ಉಂಟಾಗಿದೆ. ಈ ಎಲ್ಲಾ ಕಾರಣಗಳಿಂದ ಈಗಿನ ಪರಿಷ್ಕರಣೆಯನ್ನು ಸಂಪೂರ್ಣವಾಗಿ ಕೈಬಿಟ್ಟು, ಈ ಹಿಂದೆ ರಚನೆಯಾಗಿದ್ದ ಪಠ್ಯಪುಸ್ತಕಗಳನ್ನು ಯಥಾವತ್ತಾಗಿ ಮುಂದುವರಿಸಬೇಕೆಂದು ನಾಡಿನ ಪ್ರಜ್ಞಾವಂತ ಜನರ ಪರವಾಗಿ ತಮ್ಮಲ್ಲಿ ಕಳಕಳಿಯಿಂದ ವಿನಂತಿಸುತ್ತೇನೆ ಎಂದು ಅಭಿವೃದ್ಧಿ ಶಿಕ್ಷಣ ತಜ್ಞರು ಹಾಗು ಕರ್ನಾಟಕ ರಾಜ್ಯ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳ ಸಮನ್ವಯ ವೇದಿಕೆಯ ಮಹಾ ಪೋಷಕರು ಆದ ನಿರಂಜನಾರಾಧ್ಯರು ಮನವಿ ಮಾಡಿದ್ದಾರೆ.

ಅಲ್ಲದೆ ಪಠ್ಯ ಪರಿಷ್ಕರಣೆಗೆ ಯುನೇಸ್ಕೊ ವರದಿಗಳು, ರಾಷ್ಟ್ರೀಯ ಪಠ್ಯಕ್ರಮ ಚೌಕಟ್ಟು ಮತ್ತು ಭಾರತೀಯ ಸಂವಿಧಾನದ ಮುನ್ನಡಿ ಆಧಾರದಲ್ಲಿ ಯಾವ ನಿಯಮಗಳನ್ನು ಪಾಲಿಸಬೇಕೆಂದು ಸಹ ತಮ್ಮ ಪತ್ರದಲ್ಲಿ ವಿವರವಾಗಿ ಬರೆದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...