Homeಚಳವಳಿಪಠ್ಯ ಪರಿಷ್ಕರಣೆ ಅಸಂವಿಧಾನಿಕ-ಅಪ್ರಜಾಸತ್ತಾತ್ಮಕ –ಅಪಾರದರ್ಶಕ- ಅಸಿಂಧು: ಸಿಎಂಗೆ ನಿರಂಜನಾರಾಧ್ಯರ ಪತ್ರ

ಪಠ್ಯ ಪರಿಷ್ಕರಣೆ ಅಸಂವಿಧಾನಿಕ-ಅಪ್ರಜಾಸತ್ತಾತ್ಮಕ –ಅಪಾರದರ್ಶಕ- ಅಸಿಂಧು: ಸಿಎಂಗೆ ನಿರಂಜನಾರಾಧ್ಯರ ಪತ್ರ

ಸಮಿತಿಗೆ ಕೇವಲ ಪರಿಶೀಲಿಸಿ ಒಂದು ತಿಂಗಳ ಒಳಗಾಗಿ ವರದಿ ನೀಡುವ ಅಧಿಕಾರವನ್ನು ಮಾತ್ರ ನೀಡಿತ್ತು. ಹೀಗಾಗಿ, ಪರಿಷ್ಕರಣೆಗೆ ಸರ್ಕಾರದ ಅನುಮತಿ ಇಲ್ಲವಾದ್ದರಿಂದ ಇಡೀ ಪ್ರಕ್ರಿಯೆಯೆ ಅಸಂವಿಧಾನಿಕ

- Advertisement -
- Advertisement -

ಪಠ್ಯ ಪರಿಷ್ಕರಣೆ ವಿವಾದಕ್ಕೆ ಸಂಬಂಧಿಸಿದಂತೆ ಬದಲಾವಣೆಗಳಿಗೆ ಮುಕ್ತವಾಗಿದ್ದೇವೆ ಎಂದಿರುವ ಸಿಎಂ ಬಸವರಾಜ ಬೊಮ್ಮಾಯಿಯರವರಿಗೆ ಶಿಕ್ಷಣ ತಜ್ಞ ಡಾ.ವಿ.ಪಿ ನಿರಂಜನಾರಾಧ್ಯರು ಪತ್ರ ಬರೆದಿದ್ದು, ಇಡೀ ಪ್ರಕ್ರಿಯೆಯು ಅಪ್ರಜಾಸತ್ತಾತ್ಮಕ –ಅಪಾರದರ್ಶಕ- ಅಸಿಂಧು ಮತ್ತು ಅಪಮೌಲ್ಯದಿಂದ ಕೂಡಿವೆ ಎಂದು ದೂರಿದ್ದಾರೆ.

ರಾಜ್ಯದಲ್ಲಿ ಪಠ್ಯ ಪುಸ್ತಕ ಪರಿಷ್ಕರಣೆ ಗೊಂದಲದ ಗೂಡಾಗಿ ಲಕ್ಷಾಂತರ ಮಕ್ಕಳ ಕಲಿಕೆ ನೆನೆಗುದಿಗೆ ಬಿದ್ದಿರುವ ಈ ಸಂಕಷ್ಟದ ಪರಿಸ್ಥಿತಿಯಲ್ಲಿ, ಮಕ್ಕಳ ಕಲಿಕೆ ಹಾಗು ಶಿಕ್ಷಣದ ಹಕ್ಕನ್ನು ಗೌರವಿಸಿ ಎತ್ತಿ ಹಿಡಿಯಬೇಕಿದೆ. ಈ ಕುರಿತು ಮೇ 22 ರಂದೇ ತಮಗೆ ಪತ್ರ ಬರೆದಿದ್ದೇನೆ. ಆದರೆ ವಿಳಂಬವಾದರೂ ಸಹ ತಮ್ಮ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿಯೂ ಪರಿಷ್ಕೃತ ಪುಸ್ತಕಗಳನ್ನು ಕೈಬಿಡುವ ಬಗ್ಗೆ ತೀರ್ಮಾನಕ್ಕೆ ಬರಲಾಗಲಿಲ್ಲ. ಈ ಹಿನ್ನೆಲೆಯಲ್ಲಿ, ಅಪ್ರಬುದ್ಧ -ಅಸಂವಿಧಾನಿಕ-ಅಪ್ರಜಾಸತ್ತಾತ್ಮಕ –ಅಪಾರದರ್ಶಕ- ಅಸಿಂಧು –ಅಪಮೌಲ್ಯದ ಪ್ರಕ್ರಿಯೆಯ ಮೂಲಕ ನಡೆದ ಪಠ್ಯ ಪರಿಷ್ಕರಣಾ ವಿಷಯದಲ್ಲಿ ತಾವು ಒಂದು ವಸ್ತುನಿಷ್ಟ ತೀರ್ಮಾನ ತೆಗೆದುಕೊಳ್ಳಲು, ಕಳೆದ 35 ವರ್ಷಗಳಿಂದ ಶಾಲಾ ಶಿಕ್ಷಣದಲ್ಲಿ ಕೆಲಸ ನಿರ್ವಹಿಸುತ್ತಿರುವ ನಾನು, ನನ್ನ ಅನುಭವದಲ್ಲಿ ಕೆಲವೊಂದು ಸತ್ಯ ಆಧಾರಿತ ವಸ್ತುನಿಷ್ಟ ಮುಖ್ಯಾಂಶಗಳನ್ನು ಸಕಾರಣಗಳೊಂದಿಗೆ ತಮ್ಮ ಗಮನಕ್ಕೆ ತರಬಯಸುತ್ತೇನೆ ಎಂದು ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಪರಿಶೀಲನೆಗೆ ಸಮಿತಿ ರಚಿಸುವ ಮುನ್ನವೇ ಇಲಾಖೆಯು ವಿವಾದಿತ ವಿಷಯಾಂಶಗಳನ್ನು ಬೋಧನೆ-ಕಲಿಕೆಗೆ/ಮೌಲ್ಯ ಮಾಪನಕ್ಕೆ ಪರಿಗಣಿಸದಿರಲು ಇಲಾಖೆಯು ದಿನಾಂಕ:17.02.2021ರಂದು ಸುತ್ತೋಲೆ ಹೊರಡಿಸಿದೆ. ಸಮಾಲೋಚನೆ-ಪರಿಶೀಲನೆಯೇ ಇಲ್ಲದೆ ಏಕಾಏಕಿ ಸುತ್ತೋಲೆ ಹೊರಡಿಸಿದ್ದು ಆತುರದ ಸರ್ವಾಧಿಕಾರದ ಅಪ್ರಬುದ್ಧ ತೀರ್ಮಾನವಾಗಿದೆ ಎಂದು ಅವರು ಹೇಳಿದ್ದಾರೆ.

ದಿನಾಂಕ:08.09.2021 ರಂದು ಸರ್ಕಾರ ಸಮಿತಿ ರಚಿಸಲು ಹೊರಡಿಸಿದ ಆದೇಶದಲ್ಲಿ ಸಮಿತಿಗೆ ಕೇವಲ ಪರಿಶೀಲಿಸಿ ಒಂದು ತಿಂಗಳ ಒಳಗಾಗಿ ವರದಿ ನೀಡುವ ಅಧಿಕಾರವನ್ನು ಮಾತ್ರ ನೀಡಿತ್ತು. ಹೀಗಾಗಿ, ಪರಿಷ್ಕರಣೆಗೆ ಸರ್ಕಾರದ ಅನುಮತಿ ಇಲ್ಲವಾದ್ದರಿಂದ ಇಡೀ ಪಠ್ಯ ಪರಿಷ್ಕರಣಾ ಪ್ರಕ್ರಿಯೆಯು ಅಸಂವಿಧಾನಿಕ ಮತ್ತು ಆದೇಶರಹಿತವಾಗಿದೆ ಎಂದು ಅವರು ತಿಳಿಸಿದ್ದಾರೆ.

ಪರಿಷ್ಕರಣೆಗೆ ಆದೇಶವೇ ಇರಲಿಲ್ಲ. ಜೊತೆಗೆ, ಯಾವುದೇ ಒಪ್ಪಿತ ಪಠ್ಯಕ್ರಮ ಚೌಕಟ್ಟು, ಪಠ್ಯವಸ್ತು ಮತ್ತು ನಿರ್ಧಿಷ್ಟ ಮಾರ್ಗ ಸೂಚಿಯಿಲ್ಲದೆ ಹಾಗು ನೀತಿ-ನಿಯಮಗಳಿಲ್ಲದೆ ಪರಿಷ್ಕರಣೆಯನ್ನು ಮಾಡಿದ್ದು ಒಪ್ಪಿತ ವಿಧಾನವಲ್ಲ. ಈ ಹಿಂದೆ ರೂಪಿಸಿದ ಭಾಷಾ ಹಾಗು ಸಮಾಜ ವಿಜ್ಞಾನ ಪುಸ್ತಕಗಳಲ್ಲಿ ದೋಷಗಳಿದ್ದರೆ, ಅಯಾ ಲೇಖಕರು ಮತ್ತು ಇತಿಹಾಸಕಾರರರ ಜೊತೆ ಮುಖಾಮುಖಿಯಾಗಿ ಚರ್ಚಿಸಿ, ಸರಿ-ತಪ್ಪುಗಳನ್ನು ಪ್ರಜಾಸತ್ತಾತ್ಮಕವಾಗಿ ಸಮಾಲೋಚಿಸಿ ಪರಿಷ್ಕರಣೆ ನಡೆಯಬೇಕಿತ್ತು. ಎಲ್ಲಕ್ಕಿಂತ ಮಿಗಿಲಾಗಿ, ಹಿಂದಿನ ಪರಿಷ್ಕರಣೆಯಲ್ಲಿ ದೋಷಗಳಿದ್ದರೆ ಅದು ಸಹಜ ನ್ಯಾಯ ತತ್ವಗಳನ್ನು ಅನುಸರಿಸಿ ತೀರ್ಮಾನಿಸಬೇಕಿತ್ತು. ಎಲ್ಲಕ್ಕಿಂತ ಮಿಗಿಲಾಗಿ, ಸಮಿತಿ ಸದಸ್ಯರ ಅಭಿಪ್ರಾಯಗಳನ್ನು ಗೌರವಿಸಿ ಅದರಂತೆ ಪ್ರಜಾಸತ್ತಾತ್ಮಕವಾಗಿ ನಡೆಯಬೇಕಿತ್ತು. ಇದಾವ ಪ್ರಕ್ರಿಯೆ ನಡೆದಿಲ್ಲದ ಕಾರಣ ಇದು ಅಪ್ರಜಾಸತ್ತಾತ್ಮಕ ಎಂದು ಅವರು ದೂರಿದ್ದಾರೆ.

ಪರಿಶೀಲನೆ/ಪರಿಷ್ಕರಣೆ ಪ್ರಾರಂಭವಾದಾಗಿನಿಂದಲೂ, ಪರಿಶೀಲನೆ/ಪರಿಷ್ಕರಣೆಗೆ ಸಕಾರಣಗಳಾಗಲಿ, ಪ್ರಕ್ರಿಯೆ ನಡೆದ ನಡಾವಳಿಗಳಾಗಳಿ, ಪರೀಶೀಲಿಸಿದ ನಂತರ ಪರಿಶೀಲನೆಯ ವರದಿಯಾಗಲಿ, ಎಲ್ಲಾ ಆದೇಶ-ವರದಿಗಳನ್ನು ಸಾರ್ವಜನಿಕ ಚರ್ಚೆಗಾಗಲಿ ದೊರಕದಂತೆ ಮಾಡುವ ಮೂಲಕ ಇಡೀ ಪ್ರಕ್ರಿಯೆಯನ್ನು ಗೌಪ್ಯವಾಗಿ ಮಾಡಲಾಗಿದೆ. ಆದ್ದರಿಂದ ಇದು ಅಪಾರದರ್ಶಕವಾಗಿದೆ ಎಂದು ನಿರಂಜನಾರಾಧ್ಯರು ಹೇಳಿದ್ದಾರೆ.

3 ಮತ್ತು 4ನೇ ತರಗತಿಯ ಪರಿಸರ ಅಧ್ಯಯನ, 1ರಿಂದ 10ನೇ ತರಗತಿಯ ಕನ್ನಡ ಭಾಷಾ ವಿಷಯಗಳು ಮತ್ತು 6 ರಿಂದ 10ನೇ ತರಗತಿಯ ಸಮಾಜ ವಿಜ್ಞಾನ ಪುಸ್ತಕಗಳನ್ನು ಆದೇಶವಿಲ್ಲದೆ ಪರಿಷ್ಕರಿಸಿ, ನಂತರ ದಿನಾಂಕ 27.01.2022ರಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ, ಆದೇಶ ರಹಿತ ಪರಿಷ್ಕರಣೆಯನ್ನು ತಮ್ಮ ಗಮನಕ್ಕಾಗಲಿ ಅಥವಾ ತಮ್ಮ ಅಧ್ಯಕ್ಷತೆಯಲ್ಲಿ ನಡೆಯುವ ಸಂಪುಟ ಸಭೆಯ ಮುಂದೆ ಮಂಡಿಸಿ ಅನುಮೋದನೆ ಪಡೆಯದೆ ಸಚಿವರೇ ಅನುಮೋದಿಸಿರುವುದು ಮೇಲ್ನೋಟಕ್ಕೆ ಸ್ಪಷ್ಟವಾಗಿದೆ. ಎಲ್ಲಕ್ಕಿಂತ ಮಿಗಿಲಾಗಿ, ಈ ತೀರ್ಮಾನದಂತೆ ದಿನಾಂಕ 19.03.2022 ರಂದು ಪಠ್ಯ ಪುಸ್ತಕಗಳನ್ನು ಪರಿಷ್ಕೃತಗೊಳಿಸಿರುವುದಕ್ಕೆ ಘಟನೋತ್ತರ ಅನುಮತಿ ನೀಡಿದ ಸರ್ಕಾರಿ ಆದೇಶದಲ್ಲಿ “ಕನ್ನಡ ಭಾಷೆ, ಪರಿಸರ ಅಧ್ಯಯನ ಮತ್ತು ಸಮಾಜ ವಿಜ್ಞಾನ ವಿಷಯದ ಪರಿಷ್ಕೃತ ಪಠ್ಯಪುಸ್ತಕಗಳಲ್ಲಿರುವ ಎಲ್ಲ ವಿಷಯಾಂಶಗಳು, ಲೇಖಕರು/ಕವಿಗಳು, ಚಿತ್ರಗಳು, ಭೂಪಟಗಳು , ನಕ್ಷೆಗಳು ಹಾಗು ಆಧಾರಗಳಿಗೆ ಸಮಿತಿ ಅಧ್ಯಕ್ಷರು ಹಾಗು ಸದಸ್ಯರು ಜವಾಬ್ದಾರರಾಗಿದ್ದು, ಪಠ್ಯಪುಸ್ತಕಗಳಲ್ಲಿರುವ ವಿಷಯಗಳಿಗೆ ಮುಂದಿನ ದಿನಗಳಲ್ಲಿ ಆಕ್ಷೇಪಣೆ ಬಂದಲ್ಲಿ ಶ್ರೀ ರೋಹಿತ್ ಚಕ್ರತೀರ್ಥ ಸಮಿತಿ ಅಧ್ಯಕ್ಷರು ಉತ್ತರಿಸುವ ಜವಾಬ್ದಾರಿ ಹೊಂದಿರುತ್ತಾರೆ” ಎಂದು ಬರೆದಿದೆ. ಇದು ಸರಕಾರದ ಅಧಿಕೃತ ತೀರ್ಮಾನವಾದರೆ ಪಠ್ಯಪುಸ್ತಕಗಳ ಪರಿಷ್ಕರಣೆ ಅಸಿಂಧು ಹಾಗು ಅಮಾನ್ಯವಾಗಿವೆ ಎಂದು ಅವರು ವಾದಿಸಿದ್ದಾರೆ.

ಇದನ್ನೂ ಓದಿ; ಪಠ್ಯಪುಸ್ತಕ ರಚನೆಯಲ್ಲಿ ಏಕ‘ಚಕ್ರ’ ಅಧಿಪತ್ಯ: ಸಮಿತಿ ಸದಸ್ಯರ ಗೊಂದಲಕಾರಿ ಹೇಳಿಕೆ

ಈ ಪರಿಷ್ಕರಣೆಯ ಹೆಸರಲ್ಲಿ ನಾಡಿನ ಹಾಗು ದೇಶದ ದಾರ್ಶನಿಕರನ್ನು ಅವಮಾನಿಸಿ, ಅವರ ವಿಚಾರಗಳನ್ನು ತಿರುಚಿರುವುದಲ್ಲದೆ, ಇತಿಹಾಸವನ್ನು ತನಗೆ ಇಷ್ಟಬಂದ ರೀತಿಯಲ್ಲ ಯಾವುದೇ ಸಾಕ್ಷಿ-ಆಧಾರ ಪುರಾವೆಗಳಿಲ್ಲದೆ ಬದಲಾಯಿಸಿದೆ. ಭಾಷಾ ವಿಷಯಗಳಲ್ಲಿ ಸಂವಿಧಾನದ ಮೌಲ್ಯಗಳನ್ನು ಗೌಣಗೊಳಿಸಿ ವಿವಾದಾತ್ಮಕ ಪಾಠಗಳನ್ನು ಸೇರಿಸಿ, ಹಿಂದಿನ ಲೇಖಕರ ಪಾಠ/ಪದ್ಯಗಳನ್ನು ಕೈಬಿಟ್ಟಿದೆ. ಒಟ್ಟಾರೆ, ಈ ಪ್ರಕ್ರಿಯೆ ಮೂಲಕ ಪಠ್ಯಪುಸ್ತಕ ಹಾಗು ಅವುಗಳಲ್ಲಿನ ವಿಷಯಗಳನ್ನು ಅಪಮೌಲ್ಯಗೊಳಿಸಿದೆ.

ಈಗಿನ ಪರಿಷ್ಕರಣಾ ಕ್ರಮ, ವಿಧಾನ ಮತ್ತು ವಿಷಯಗಳ ಆಯ್ಕೆಯಲ್ಲಿ ಗೊಂದಲ ಹಾಗು ಸಾಂವಿಧಾನಿಕ ಸಂಘರ್ಷ ಉಂಟಾಗಿದೆ. ಈ ಎಲ್ಲಾ ಕಾರಣಗಳಿಂದ ಈಗಿನ ಪರಿಷ್ಕರಣೆಯನ್ನು ಸಂಪೂರ್ಣವಾಗಿ ಕೈಬಿಟ್ಟು, ಈ ಹಿಂದೆ ರಚನೆಯಾಗಿದ್ದ ಪಠ್ಯಪುಸ್ತಕಗಳನ್ನು ಯಥಾವತ್ತಾಗಿ ಮುಂದುವರಿಸಬೇಕೆಂದು ನಾಡಿನ ಪ್ರಜ್ಞಾವಂತ ಜನರ ಪರವಾಗಿ ತಮ್ಮಲ್ಲಿ ಕಳಕಳಿಯಿಂದ ವಿನಂತಿಸುತ್ತೇನೆ ಎಂದು ಅಭಿವೃದ್ಧಿ ಶಿಕ್ಷಣ ತಜ್ಞರು ಹಾಗು ಕರ್ನಾಟಕ ರಾಜ್ಯ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳ ಸಮನ್ವಯ ವೇದಿಕೆಯ ಮಹಾ ಪೋಷಕರು ಆದ ನಿರಂಜನಾರಾಧ್ಯರು ಮನವಿ ಮಾಡಿದ್ದಾರೆ.

ಅಲ್ಲದೆ ಪಠ್ಯ ಪರಿಷ್ಕರಣೆಗೆ ಯುನೇಸ್ಕೊ ವರದಿಗಳು, ರಾಷ್ಟ್ರೀಯ ಪಠ್ಯಕ್ರಮ ಚೌಕಟ್ಟು ಮತ್ತು ಭಾರತೀಯ ಸಂವಿಧಾನದ ಮುನ್ನಡಿ ಆಧಾರದಲ್ಲಿ ಯಾವ ನಿಯಮಗಳನ್ನು ಪಾಲಿಸಬೇಕೆಂದು ಸಹ ತಮ್ಮ ಪತ್ರದಲ್ಲಿ ವಿವರವಾಗಿ ಬರೆದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...