Homeಚಳವಳಿಪಠ್ಯ ಪರಿಷ್ಕರಣೆ ಅಸಂವಿಧಾನಿಕ-ಅಪ್ರಜಾಸತ್ತಾತ್ಮಕ –ಅಪಾರದರ್ಶಕ- ಅಸಿಂಧು: ಸಿಎಂಗೆ ನಿರಂಜನಾರಾಧ್ಯರ ಪತ್ರ

ಪಠ್ಯ ಪರಿಷ್ಕರಣೆ ಅಸಂವಿಧಾನಿಕ-ಅಪ್ರಜಾಸತ್ತಾತ್ಮಕ –ಅಪಾರದರ್ಶಕ- ಅಸಿಂಧು: ಸಿಎಂಗೆ ನಿರಂಜನಾರಾಧ್ಯರ ಪತ್ರ

ಸಮಿತಿಗೆ ಕೇವಲ ಪರಿಶೀಲಿಸಿ ಒಂದು ತಿಂಗಳ ಒಳಗಾಗಿ ವರದಿ ನೀಡುವ ಅಧಿಕಾರವನ್ನು ಮಾತ್ರ ನೀಡಿತ್ತು. ಹೀಗಾಗಿ, ಪರಿಷ್ಕರಣೆಗೆ ಸರ್ಕಾರದ ಅನುಮತಿ ಇಲ್ಲವಾದ್ದರಿಂದ ಇಡೀ ಪ್ರಕ್ರಿಯೆಯೆ ಅಸಂವಿಧಾನಿಕ

- Advertisement -
- Advertisement -

ಪಠ್ಯ ಪರಿಷ್ಕರಣೆ ವಿವಾದಕ್ಕೆ ಸಂಬಂಧಿಸಿದಂತೆ ಬದಲಾವಣೆಗಳಿಗೆ ಮುಕ್ತವಾಗಿದ್ದೇವೆ ಎಂದಿರುವ ಸಿಎಂ ಬಸವರಾಜ ಬೊಮ್ಮಾಯಿಯರವರಿಗೆ ಶಿಕ್ಷಣ ತಜ್ಞ ಡಾ.ವಿ.ಪಿ ನಿರಂಜನಾರಾಧ್ಯರು ಪತ್ರ ಬರೆದಿದ್ದು, ಇಡೀ ಪ್ರಕ್ರಿಯೆಯು ಅಪ್ರಜಾಸತ್ತಾತ್ಮಕ –ಅಪಾರದರ್ಶಕ- ಅಸಿಂಧು ಮತ್ತು ಅಪಮೌಲ್ಯದಿಂದ ಕೂಡಿವೆ ಎಂದು ದೂರಿದ್ದಾರೆ.

ರಾಜ್ಯದಲ್ಲಿ ಪಠ್ಯ ಪುಸ್ತಕ ಪರಿಷ್ಕರಣೆ ಗೊಂದಲದ ಗೂಡಾಗಿ ಲಕ್ಷಾಂತರ ಮಕ್ಕಳ ಕಲಿಕೆ ನೆನೆಗುದಿಗೆ ಬಿದ್ದಿರುವ ಈ ಸಂಕಷ್ಟದ ಪರಿಸ್ಥಿತಿಯಲ್ಲಿ, ಮಕ್ಕಳ ಕಲಿಕೆ ಹಾಗು ಶಿಕ್ಷಣದ ಹಕ್ಕನ್ನು ಗೌರವಿಸಿ ಎತ್ತಿ ಹಿಡಿಯಬೇಕಿದೆ. ಈ ಕುರಿತು ಮೇ 22 ರಂದೇ ತಮಗೆ ಪತ್ರ ಬರೆದಿದ್ದೇನೆ. ಆದರೆ ವಿಳಂಬವಾದರೂ ಸಹ ತಮ್ಮ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿಯೂ ಪರಿಷ್ಕೃತ ಪುಸ್ತಕಗಳನ್ನು ಕೈಬಿಡುವ ಬಗ್ಗೆ ತೀರ್ಮಾನಕ್ಕೆ ಬರಲಾಗಲಿಲ್ಲ. ಈ ಹಿನ್ನೆಲೆಯಲ್ಲಿ, ಅಪ್ರಬುದ್ಧ -ಅಸಂವಿಧಾನಿಕ-ಅಪ್ರಜಾಸತ್ತಾತ್ಮಕ –ಅಪಾರದರ್ಶಕ- ಅಸಿಂಧು –ಅಪಮೌಲ್ಯದ ಪ್ರಕ್ರಿಯೆಯ ಮೂಲಕ ನಡೆದ ಪಠ್ಯ ಪರಿಷ್ಕರಣಾ ವಿಷಯದಲ್ಲಿ ತಾವು ಒಂದು ವಸ್ತುನಿಷ್ಟ ತೀರ್ಮಾನ ತೆಗೆದುಕೊಳ್ಳಲು, ಕಳೆದ 35 ವರ್ಷಗಳಿಂದ ಶಾಲಾ ಶಿಕ್ಷಣದಲ್ಲಿ ಕೆಲಸ ನಿರ್ವಹಿಸುತ್ತಿರುವ ನಾನು, ನನ್ನ ಅನುಭವದಲ್ಲಿ ಕೆಲವೊಂದು ಸತ್ಯ ಆಧಾರಿತ ವಸ್ತುನಿಷ್ಟ ಮುಖ್ಯಾಂಶಗಳನ್ನು ಸಕಾರಣಗಳೊಂದಿಗೆ ತಮ್ಮ ಗಮನಕ್ಕೆ ತರಬಯಸುತ್ತೇನೆ ಎಂದು ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಪರಿಶೀಲನೆಗೆ ಸಮಿತಿ ರಚಿಸುವ ಮುನ್ನವೇ ಇಲಾಖೆಯು ವಿವಾದಿತ ವಿಷಯಾಂಶಗಳನ್ನು ಬೋಧನೆ-ಕಲಿಕೆಗೆ/ಮೌಲ್ಯ ಮಾಪನಕ್ಕೆ ಪರಿಗಣಿಸದಿರಲು ಇಲಾಖೆಯು ದಿನಾಂಕ:17.02.2021ರಂದು ಸುತ್ತೋಲೆ ಹೊರಡಿಸಿದೆ. ಸಮಾಲೋಚನೆ-ಪರಿಶೀಲನೆಯೇ ಇಲ್ಲದೆ ಏಕಾಏಕಿ ಸುತ್ತೋಲೆ ಹೊರಡಿಸಿದ್ದು ಆತುರದ ಸರ್ವಾಧಿಕಾರದ ಅಪ್ರಬುದ್ಧ ತೀರ್ಮಾನವಾಗಿದೆ ಎಂದು ಅವರು ಹೇಳಿದ್ದಾರೆ.

ದಿನಾಂಕ:08.09.2021 ರಂದು ಸರ್ಕಾರ ಸಮಿತಿ ರಚಿಸಲು ಹೊರಡಿಸಿದ ಆದೇಶದಲ್ಲಿ ಸಮಿತಿಗೆ ಕೇವಲ ಪರಿಶೀಲಿಸಿ ಒಂದು ತಿಂಗಳ ಒಳಗಾಗಿ ವರದಿ ನೀಡುವ ಅಧಿಕಾರವನ್ನು ಮಾತ್ರ ನೀಡಿತ್ತು. ಹೀಗಾಗಿ, ಪರಿಷ್ಕರಣೆಗೆ ಸರ್ಕಾರದ ಅನುಮತಿ ಇಲ್ಲವಾದ್ದರಿಂದ ಇಡೀ ಪಠ್ಯ ಪರಿಷ್ಕರಣಾ ಪ್ರಕ್ರಿಯೆಯು ಅಸಂವಿಧಾನಿಕ ಮತ್ತು ಆದೇಶರಹಿತವಾಗಿದೆ ಎಂದು ಅವರು ತಿಳಿಸಿದ್ದಾರೆ.

ಪರಿಷ್ಕರಣೆಗೆ ಆದೇಶವೇ ಇರಲಿಲ್ಲ. ಜೊತೆಗೆ, ಯಾವುದೇ ಒಪ್ಪಿತ ಪಠ್ಯಕ್ರಮ ಚೌಕಟ್ಟು, ಪಠ್ಯವಸ್ತು ಮತ್ತು ನಿರ್ಧಿಷ್ಟ ಮಾರ್ಗ ಸೂಚಿಯಿಲ್ಲದೆ ಹಾಗು ನೀತಿ-ನಿಯಮಗಳಿಲ್ಲದೆ ಪರಿಷ್ಕರಣೆಯನ್ನು ಮಾಡಿದ್ದು ಒಪ್ಪಿತ ವಿಧಾನವಲ್ಲ. ಈ ಹಿಂದೆ ರೂಪಿಸಿದ ಭಾಷಾ ಹಾಗು ಸಮಾಜ ವಿಜ್ಞಾನ ಪುಸ್ತಕಗಳಲ್ಲಿ ದೋಷಗಳಿದ್ದರೆ, ಅಯಾ ಲೇಖಕರು ಮತ್ತು ಇತಿಹಾಸಕಾರರರ ಜೊತೆ ಮುಖಾಮುಖಿಯಾಗಿ ಚರ್ಚಿಸಿ, ಸರಿ-ತಪ್ಪುಗಳನ್ನು ಪ್ರಜಾಸತ್ತಾತ್ಮಕವಾಗಿ ಸಮಾಲೋಚಿಸಿ ಪರಿಷ್ಕರಣೆ ನಡೆಯಬೇಕಿತ್ತು. ಎಲ್ಲಕ್ಕಿಂತ ಮಿಗಿಲಾಗಿ, ಹಿಂದಿನ ಪರಿಷ್ಕರಣೆಯಲ್ಲಿ ದೋಷಗಳಿದ್ದರೆ ಅದು ಸಹಜ ನ್ಯಾಯ ತತ್ವಗಳನ್ನು ಅನುಸರಿಸಿ ತೀರ್ಮಾನಿಸಬೇಕಿತ್ತು. ಎಲ್ಲಕ್ಕಿಂತ ಮಿಗಿಲಾಗಿ, ಸಮಿತಿ ಸದಸ್ಯರ ಅಭಿಪ್ರಾಯಗಳನ್ನು ಗೌರವಿಸಿ ಅದರಂತೆ ಪ್ರಜಾಸತ್ತಾತ್ಮಕವಾಗಿ ನಡೆಯಬೇಕಿತ್ತು. ಇದಾವ ಪ್ರಕ್ರಿಯೆ ನಡೆದಿಲ್ಲದ ಕಾರಣ ಇದು ಅಪ್ರಜಾಸತ್ತಾತ್ಮಕ ಎಂದು ಅವರು ದೂರಿದ್ದಾರೆ.

ಪರಿಶೀಲನೆ/ಪರಿಷ್ಕರಣೆ ಪ್ರಾರಂಭವಾದಾಗಿನಿಂದಲೂ, ಪರಿಶೀಲನೆ/ಪರಿಷ್ಕರಣೆಗೆ ಸಕಾರಣಗಳಾಗಲಿ, ಪ್ರಕ್ರಿಯೆ ನಡೆದ ನಡಾವಳಿಗಳಾಗಳಿ, ಪರೀಶೀಲಿಸಿದ ನಂತರ ಪರಿಶೀಲನೆಯ ವರದಿಯಾಗಲಿ, ಎಲ್ಲಾ ಆದೇಶ-ವರದಿಗಳನ್ನು ಸಾರ್ವಜನಿಕ ಚರ್ಚೆಗಾಗಲಿ ದೊರಕದಂತೆ ಮಾಡುವ ಮೂಲಕ ಇಡೀ ಪ್ರಕ್ರಿಯೆಯನ್ನು ಗೌಪ್ಯವಾಗಿ ಮಾಡಲಾಗಿದೆ. ಆದ್ದರಿಂದ ಇದು ಅಪಾರದರ್ಶಕವಾಗಿದೆ ಎಂದು ನಿರಂಜನಾರಾಧ್ಯರು ಹೇಳಿದ್ದಾರೆ.

3 ಮತ್ತು 4ನೇ ತರಗತಿಯ ಪರಿಸರ ಅಧ್ಯಯನ, 1ರಿಂದ 10ನೇ ತರಗತಿಯ ಕನ್ನಡ ಭಾಷಾ ವಿಷಯಗಳು ಮತ್ತು 6 ರಿಂದ 10ನೇ ತರಗತಿಯ ಸಮಾಜ ವಿಜ್ಞಾನ ಪುಸ್ತಕಗಳನ್ನು ಆದೇಶವಿಲ್ಲದೆ ಪರಿಷ್ಕರಿಸಿ, ನಂತರ ದಿನಾಂಕ 27.01.2022ರಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ, ಆದೇಶ ರಹಿತ ಪರಿಷ್ಕರಣೆಯನ್ನು ತಮ್ಮ ಗಮನಕ್ಕಾಗಲಿ ಅಥವಾ ತಮ್ಮ ಅಧ್ಯಕ್ಷತೆಯಲ್ಲಿ ನಡೆಯುವ ಸಂಪುಟ ಸಭೆಯ ಮುಂದೆ ಮಂಡಿಸಿ ಅನುಮೋದನೆ ಪಡೆಯದೆ ಸಚಿವರೇ ಅನುಮೋದಿಸಿರುವುದು ಮೇಲ್ನೋಟಕ್ಕೆ ಸ್ಪಷ್ಟವಾಗಿದೆ. ಎಲ್ಲಕ್ಕಿಂತ ಮಿಗಿಲಾಗಿ, ಈ ತೀರ್ಮಾನದಂತೆ ದಿನಾಂಕ 19.03.2022 ರಂದು ಪಠ್ಯ ಪುಸ್ತಕಗಳನ್ನು ಪರಿಷ್ಕೃತಗೊಳಿಸಿರುವುದಕ್ಕೆ ಘಟನೋತ್ತರ ಅನುಮತಿ ನೀಡಿದ ಸರ್ಕಾರಿ ಆದೇಶದಲ್ಲಿ “ಕನ್ನಡ ಭಾಷೆ, ಪರಿಸರ ಅಧ್ಯಯನ ಮತ್ತು ಸಮಾಜ ವಿಜ್ಞಾನ ವಿಷಯದ ಪರಿಷ್ಕೃತ ಪಠ್ಯಪುಸ್ತಕಗಳಲ್ಲಿರುವ ಎಲ್ಲ ವಿಷಯಾಂಶಗಳು, ಲೇಖಕರು/ಕವಿಗಳು, ಚಿತ್ರಗಳು, ಭೂಪಟಗಳು , ನಕ್ಷೆಗಳು ಹಾಗು ಆಧಾರಗಳಿಗೆ ಸಮಿತಿ ಅಧ್ಯಕ್ಷರು ಹಾಗು ಸದಸ್ಯರು ಜವಾಬ್ದಾರರಾಗಿದ್ದು, ಪಠ್ಯಪುಸ್ತಕಗಳಲ್ಲಿರುವ ವಿಷಯಗಳಿಗೆ ಮುಂದಿನ ದಿನಗಳಲ್ಲಿ ಆಕ್ಷೇಪಣೆ ಬಂದಲ್ಲಿ ಶ್ರೀ ರೋಹಿತ್ ಚಕ್ರತೀರ್ಥ ಸಮಿತಿ ಅಧ್ಯಕ್ಷರು ಉತ್ತರಿಸುವ ಜವಾಬ್ದಾರಿ ಹೊಂದಿರುತ್ತಾರೆ” ಎಂದು ಬರೆದಿದೆ. ಇದು ಸರಕಾರದ ಅಧಿಕೃತ ತೀರ್ಮಾನವಾದರೆ ಪಠ್ಯಪುಸ್ತಕಗಳ ಪರಿಷ್ಕರಣೆ ಅಸಿಂಧು ಹಾಗು ಅಮಾನ್ಯವಾಗಿವೆ ಎಂದು ಅವರು ವಾದಿಸಿದ್ದಾರೆ.

ಇದನ್ನೂ ಓದಿ; ಪಠ್ಯಪುಸ್ತಕ ರಚನೆಯಲ್ಲಿ ಏಕ‘ಚಕ್ರ’ ಅಧಿಪತ್ಯ: ಸಮಿತಿ ಸದಸ್ಯರ ಗೊಂದಲಕಾರಿ ಹೇಳಿಕೆ

ಈ ಪರಿಷ್ಕರಣೆಯ ಹೆಸರಲ್ಲಿ ನಾಡಿನ ಹಾಗು ದೇಶದ ದಾರ್ಶನಿಕರನ್ನು ಅವಮಾನಿಸಿ, ಅವರ ವಿಚಾರಗಳನ್ನು ತಿರುಚಿರುವುದಲ್ಲದೆ, ಇತಿಹಾಸವನ್ನು ತನಗೆ ಇಷ್ಟಬಂದ ರೀತಿಯಲ್ಲ ಯಾವುದೇ ಸಾಕ್ಷಿ-ಆಧಾರ ಪುರಾವೆಗಳಿಲ್ಲದೆ ಬದಲಾಯಿಸಿದೆ. ಭಾಷಾ ವಿಷಯಗಳಲ್ಲಿ ಸಂವಿಧಾನದ ಮೌಲ್ಯಗಳನ್ನು ಗೌಣಗೊಳಿಸಿ ವಿವಾದಾತ್ಮಕ ಪಾಠಗಳನ್ನು ಸೇರಿಸಿ, ಹಿಂದಿನ ಲೇಖಕರ ಪಾಠ/ಪದ್ಯಗಳನ್ನು ಕೈಬಿಟ್ಟಿದೆ. ಒಟ್ಟಾರೆ, ಈ ಪ್ರಕ್ರಿಯೆ ಮೂಲಕ ಪಠ್ಯಪುಸ್ತಕ ಹಾಗು ಅವುಗಳಲ್ಲಿನ ವಿಷಯಗಳನ್ನು ಅಪಮೌಲ್ಯಗೊಳಿಸಿದೆ.

ಈಗಿನ ಪರಿಷ್ಕರಣಾ ಕ್ರಮ, ವಿಧಾನ ಮತ್ತು ವಿಷಯಗಳ ಆಯ್ಕೆಯಲ್ಲಿ ಗೊಂದಲ ಹಾಗು ಸಾಂವಿಧಾನಿಕ ಸಂಘರ್ಷ ಉಂಟಾಗಿದೆ. ಈ ಎಲ್ಲಾ ಕಾರಣಗಳಿಂದ ಈಗಿನ ಪರಿಷ್ಕರಣೆಯನ್ನು ಸಂಪೂರ್ಣವಾಗಿ ಕೈಬಿಟ್ಟು, ಈ ಹಿಂದೆ ರಚನೆಯಾಗಿದ್ದ ಪಠ್ಯಪುಸ್ತಕಗಳನ್ನು ಯಥಾವತ್ತಾಗಿ ಮುಂದುವರಿಸಬೇಕೆಂದು ನಾಡಿನ ಪ್ರಜ್ಞಾವಂತ ಜನರ ಪರವಾಗಿ ತಮ್ಮಲ್ಲಿ ಕಳಕಳಿಯಿಂದ ವಿನಂತಿಸುತ್ತೇನೆ ಎಂದು ಅಭಿವೃದ್ಧಿ ಶಿಕ್ಷಣ ತಜ್ಞರು ಹಾಗು ಕರ್ನಾಟಕ ರಾಜ್ಯ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳ ಸಮನ್ವಯ ವೇದಿಕೆಯ ಮಹಾ ಪೋಷಕರು ಆದ ನಿರಂಜನಾರಾಧ್ಯರು ಮನವಿ ಮಾಡಿದ್ದಾರೆ.

ಅಲ್ಲದೆ ಪಠ್ಯ ಪರಿಷ್ಕರಣೆಗೆ ಯುನೇಸ್ಕೊ ವರದಿಗಳು, ರಾಷ್ಟ್ರೀಯ ಪಠ್ಯಕ್ರಮ ಚೌಕಟ್ಟು ಮತ್ತು ಭಾರತೀಯ ಸಂವಿಧಾನದ ಮುನ್ನಡಿ ಆಧಾರದಲ್ಲಿ ಯಾವ ನಿಯಮಗಳನ್ನು ಪಾಲಿಸಬೇಕೆಂದು ಸಹ ತಮ್ಮ ಪತ್ರದಲ್ಲಿ ವಿವರವಾಗಿ ಬರೆದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಖರ್ಗೆ ಭಾಷಣ ಸ್ಥಳದ ‘ಶುದ್ಧೀಕರಣ’: ಬಿಜೆಪಿ-RSS, ಸಂಘ ಪರಿವಾರದ ವಿಷಪೂರಿತ ಮನಸ್ಥಿತಿ ಮಾಜಿ ಸಿಎಂ ಸಿದ್ದರಾಮಯ್ಯ

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಮಾವೇಶದಲ್ಲಿ ಪಾಲ್ಗೊಂಡ ಬಳಿಕ, ಬಲಪಂಥೀಯ ಸಂಘಟನೆಯೊಂದು ಆ ಮೈದಾನದಲ್ಲಿ 'ಶುದ್ಧೀಕರಣ' ಕೈಗೊಂಡಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಕ್ರೋಶ...

ಸೋನಿಯಾ ಗಾಂಧಿ ಆತ್ಮಕಥೆ ವಿವಾದ | ಮೋದಿ, ಆರ್‌ಎಸ್‌ಎಸ್, ಚೀನಾ ನುಸುಳುವಿಕೆ ಕುರಿತ ಭಾಗಗಳನ್ನು ತೆಗೆದುಹಾಕಲು ಪೆಂಗ್ವಿನ್ ಇಂಡಿಯಾ ಕೋರಿತ್ತು : ಕಾಂಗ್ರೆಸ್ ಆರೋಪ

ಪ್ರಧಾನಿ ನರೇಂದ್ರ ಮೋದಿ, ಆರ್‌ಎಸ್‌ಎಸ್ ಮತ್ತು ಅವರ ಅಧಿಕಾರಾವಧಿಯಲ್ಲಿ ನಡೆದ ಭಾರತೀಯ ಭೂಪ್ರದೇಶದ ಮೇಲಿನ ಚೀನಾದ ಆಕ್ರಮಣದ ನಿರ್ವಹಣೆಗೆ ಸಂಬಂಧಿಸಿದ ಭಾಗಗಳನ್ನು ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ "ಬೆಲಾಂಗಿಂಗ್: ಎ ಜರ್ನಿ...

ಪಶ್ಚಿಮ ಬಂಗಾಳ| ದುರ್ಗಾಪೂಜೆ ಸಂದರ್ಭದಲ್ಲಿ ಮಾಂಸ ಮಾರಾಟ ನಿಷೇಧ ಆದೇಶ ಹೊರಡಿಸಿದ ವಿಎಚ್‌ಪಿ; ಬಲಪಂಥೀಯ ಸಂಘನೆಯ ಅಧಿಕಾರ ಪ್ರಶ್ನಿಸಿದ ವಿಪಕ್ಷಗಳು

ಪಶ್ಚಿಮ ಬಂಗಾಳದಲ್ಲಿ ದುರ್ಗಾಪೂಜೆ ಆಚರಣೆಗೆ ಸಂಬಂಧಿಸಿದಂತೆ ಬಲಪಂಥೀಯ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಹೊರಡಿಸಿರುವ ಮಾರ್ಗಸೂಚಿಯು ರಾಜಕೀಯ ಚರ್ಚೆಗೆ ಗ್ರಾಸವಾಗಿದೆ. ಪೂಜಾ ಮಂಟಪಗಳ ಸುತ್ತಮುತ್ತ ಸಸ್ಯಾಹಾರಿ ಅಲ್ಲದ ಮಾಂಸ ಮತ್ತು ಮೀನು...

ನ್ಯೂಯಾರ್ಕ್‌ನಲ್ಲಿ ಮೋಹನ್ ಭಾಗವತ್ ಕಾರ್ಯಕ್ರಮ: RSS ಮತ್ತು ಸಂಸ್ಥೆಯ ನಂಟಿನ ರಹಸ್ಯ ಬಯಲು

ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸರಸಂಘಚಾಲಕ ಮೋಹನ್ ಭಾಗವತ್ ಅವರು ಶನಿವಾರ ನ್ಯೂಯಾರ್ಕ್‌ನ ಪ್ರಸಿದ್ಧ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ಆಯೋಜಿಸಲಾಗಿರುವ ‘ಯೂನಿವರ್ಸಲ್ ಒನ್‌ನೆಸ್ ಸೆಲೆಬ್ರೇಷನ್ಸ್’ ಎಂಬ ಬೃಹತ್ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ವರದಿಗಳ ಪ್ರಕಾರ,...

ಮೋಹನ್ ಭಾಗವತ್ ನ್ಯೂಯಾರ್ಕ್ ಕಾರ್ಯಕ್ರಮಕ್ಕೆ ವಿರೋಧ : ಅಮೆರಿಕದ 61 ಸಂಘಟನೆಗಳಿಂದ ಪ್ರತಿಭಟನೆ

ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಭಾಷಣ ಮಾಡಲಿರುವ, ಶನಿವಾರ (ಆ.29) ನ್ಯೂಯಾರ್ಕ್‌ನ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ಆಯೋಜಿಸಲಾಗಿರುವ 'ಯೂನಿವರ್ಸಲ್ ಒನ್ನೆಸ್ ಸೆಲೆಬ್ರೇಷನ್ಸ್' ಕಾರ್ಯಕ್ರಮಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ. ನ್ಯೂಯಾರ್ಕ್ ಮೇಯರ್ ಝೊಹ್ರಾನ್ ಮಮ್ದಾನಿ ಅವರು...

ಶಿವಮೊಗ್ಗ| ಈದ್-ಎ-ಮಿಲಾದ್ ರ್‍ಯಾಲಿಯಲ್ಲಿ ಪ್ಯಾಲೆಸ್ತೀನ್ ಧ್ವಜ ಪ್ರದರ್ಶನ: ಮೂವರ ವಿರುದ್ಧ ಪ್ರಕರಣ ದಾಖಲು

ಶಿವಮೊಗ್ಗದ ಆರ್‌ಎಂಎಲ್ ನಗರದಲ್ಲಿ ಈದ್-ಎ-ಮಿಲಾದ್ ಆಚರಣೆಗಾಗಿ ನಿರ್ಮಿಸಲಾಗಿದ್ದ ಕಟೌಟ್ ಒಂದರ ಮೇಲೆ ಫೆಲೆಸ್ತೀನ್ ಧ್ವಜವನ್ನು ಪ್ರದರ್ಶಿಸಿದ ಆರೋಪದ ಮೇಲೆ ಪೊಲೀಸರು ಮೂವರು ಮುಸ್ಲಿಂ ಯುವಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಆರೋಪಿಗಳನ್ನು ನಿಹಾಲ್ ಉರುಫ್ ಬೆಕ್ಕು,...

ಕೋಲ್ಕತ್ತಾದಲ್ಲಿ ಮಮತಾ ಬ್ಯಾನರ್ಜಿ ವಿರುದ್ಧ FIR: ಹೈಕೋರ್ಟ್ ಆದೇಶ ಉಲ್ಲಂಘನೆ ಆರೋಪ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖ್ಯಸ್ಥೆ ಮಮತಾ ಬ್ಯಾನರ್ಜಿ ವಿರುದ್ಧ ಕೋಲ್ಕತ್ತಾ ಪೊಲೀಸರು ಸ್ವಯಂಪ್ರೇರಿತ (Suo Motu) ದೂರು ದಾಖಲಿಸಿಕೊಂಡಿದ್ದಾರೆ. ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಟಿಎಂಸಿ ವಿದ್ಯಾರ್ಥಿ...

ಈದ್ ಮಿಲಾದ್ ಸಂದರ್ಭದಲ್ಲಿ ಸಾರ್ವಜನಿಕ ಶಾಂತಿಗೆ ಭಂಗ ತರಲು ಯತ್ನ; ಭಜರಂಗದಳ ಕಾರ್ಯಕರ್ತನ ವಿರುದ್ಧ ಪ್ರಕರಣ ದಾಖಲು

ಈದ್-ಎ-ಮಿಲಾದ್ ಪೋಸ್ಟರ್‌ಗಳ ವಿಚಾರವಾಗಿ ಗುಂಪುಗಳ ನಡುವೆ ಶತ್ರುತ್ವ ಸೃಷ್ಟಿಸಲು ಮತ್ತು ಸಾರ್ವಜನಿಕ ಶಾಂತಿಗೆ ಭಂಗ ತರಲು ಯತ್ನಿಸಿದ ಆರೋಪದ ಮೇಲೆ ಕಲಬುರಗಿಯಲ್ಲಿ ಭಜರಂಗದಳದ ಕಾರ್ಯಕರ್ತನೊಬ್ಬನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ನಗರದಲ್ಲಿ ಈದ್-ಎ-ಮಿಲಾದ್ ಆಚರಣೆಯ ಭಾಗವಾಗಿ...

ವೆನೆಜುವೆಲಾ ತೈಲ ನಿಕ್ಷೇಪಗಳ ಮೇಲೆ ಅಮೆರಿಕ ನಿಯಂತ್ರಣ: ಜಾಗತಿಕ ರಾಜಕಾರಣದಲ್ಲಿ ತಲ್ಲಣ!

ವಾಷಿಂಗ್ಟನ್/ಕಾರಕಾಸ್: ವಿಶ್ವದಲ್ಲೇ ಅತಿ ಹೆಚ್ಚು ಕಚ್ಚಾ ತೈಲ ನಿಕ್ಷೇಪ ಹೊಂದಿರುವ ವೆನೆಜುವೆಲಾ ದೇಶದ 65 ಬಿಲಿಯನ್ ಬ್ಯಾರೆಲ್‌ಗಿಂತ ಹೆಚ್ಚು ಸಾಬೀತಾದ ತೈಲ ನಿಕ್ಷೇಪಗಳ ಮೇಲೆ ಬಹುಮತ ನಿಯಂತ್ರಣ ಸಾಧಿಸುವ ಒಪ್ಪಂದವನ್ನು ಅಮೆರಿಕ ಮಾಡಿಕೊಂಡಿದೆ....

ನೈತಿಕ ಹೊಣೆ ಹೊತ್ತು ನಾಗೇಂದ್ರ ರಾಜೀನಾಮೆ ನೀಡಿದ್ದಾರೆ; ಇದು ಬಿಜೆಪಿಯ ಗೆಲುವಲ್ಲ: ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್

ಸಚಿವರಾಗಿದ್ದ ಬಿ. ನಾಗೇಂದ್ರ ಅವರು ಸಾರ್ವಜನಿಕ ಜೀವನದಲ್ಲಿ ನೈತಿಕ ಹೊಣೆಗಾರಿಕೆ ಹೊತ್ತು ರಾಜೀನಾಮೆ ನೀಡಿದ್ದಾರೆ. ಇದು ಬಿಜೆಪಿಯ ಗೆಲುವೂ ಅಲ್ಲ, ವಿಪಕ್ಷ ನಾಯಕರ ಹೋರಾಟದ ಗೆಲುವೂ ಅಲ್ಲ. ಇದೊಂದು ದಲಿತ ಸಮುದಾಯ ನಾಯಕರ...