Homeಕರ್ನಾಟಕಆದೇಶವಿಲ್ಲದೆ ಪಠ್ಯ ಪರಿಷ್ಕರಣೆ: ಸಂಪುಟದಿಂದ ಬಿ.ಸಿ.ನಾಗೇಶ್ ವಜಾಕ್ಕೆ ಸಿದ್ದರಾಮಯ್ಯ ಪಟ್ಟು

ಆದೇಶವಿಲ್ಲದೆ ಪಠ್ಯ ಪರಿಷ್ಕರಣೆ: ಸಂಪುಟದಿಂದ ಬಿ.ಸಿ.ನಾಗೇಶ್ ವಜಾಕ್ಕೆ ಸಿದ್ದರಾಮಯ್ಯ ಪಟ್ಟು

“ಪಠ್ಯಪುಸ್ತಕ ಪರಿಷ್ಕರಣೆಗೆ ಅವಸರದಲ್ಲಿ ಮೌಖಿಕ ಸೂಚನೆ ನೀಡಿ ಘಟನೋತ್ತರ ಅನುಮತಿ ನೀಡಲು ಇದೇನು 40% ಕಮಿಷನ್ ಬಾಚುವ ರಸ್ತೆ ಕಾಮಗಾರಿಯೇ?”

- Advertisement -
- Advertisement -

ಸ್ಪಷ್ಟವಾದ ಸರ್ಕಾರಿ ಆದೇಶವಿಲ್ಲದೆ ಪಠ್ಯಪುಸ್ತಕಗಳ ಪರಿಷ್ಕರಿಸಲು ಒಬ್ಬ ಕಿಡಿಗೇಡಿ ಟ್ರೋಲರ್‌ನಿಗೆ ಅವಕಾಶ ನೀಡಿ, ಈಗ ಆತ ಮಾಡಿಟ್ಟಿರುವ ಕೊಳಕುಗಳನ್ನೆಲ್ಲ ತಲೆಮೇಲೆ ಇಟ್ಟುಕೊಂಡು ಸಮರ್ಥಿಸುತ್ತಿರುವ ಬೇಜವಾಬ್ದಾರಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಕ್ಷಣ ಸಂಪುಟದಿಂದ ವಜಾಮಾಡಬೇಕು ಮತ್ತು ಪಠ್ಯಪುಸ್ತಕ ಪರಿಷ್ಕರಣಾ ಸಮಿತಿ ಅಧ್ಯಕ್ಷ ರೋಹಿತ್ ಚಕ್ರತೀರ್ಥನನ್ನು ಬಂಧಿಸಿ ಕಾನೂನು ಕ್ರಮಕೈಗೊಳ್ಳಬೇಕು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ರಾಜ್ಯದ ಶೈಕ್ಷಣಿಕ, ಸಾಮಾಜಿಕ, ಸಾಹಿತ್ತಿಕ ಕ್ಷೇತ್ರವನ್ನೇ ಅಲ್ಲೋಲಕಲ್ಲೋಲ ಮಾಡಿರುವ ಪಠ್ಯಪುಸ್ತಕ ಪರಿಷ್ಕರಣೆಯ ಅದ್ವಾನಕ್ಕೆ ಕಾರಣಕರ್ತರಾಗಿರುವ ಇಂತಹ ಬೇಜವಾಬ್ದಾರಿ ಶಿಕ್ಷಣ ಸಚಿವರನ್ನು ಮುಖ್ಯಮಂತ್ರಿಗಳು ಇನ್ನೂ ಸಮರ್ಥಿಸಿಕೊಳ್ಳಲು ಹೊರಡುವುದಾದರೆ ಅವರೇ ಮೊದಲು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪಠ್ಯಪುಸ್ತಕ ಪರಿಷ್ಕರಣೆಯಂತಹ ಅತ್ಯಂತ ಜವಾಬ್ದಾರಿಯುತ ಕೆಲಸವನ್ನು ಸ್ವಭಾವತ: ವಿಕೃತನಾದ ಒಬ್ಬ ಯಕಶ್ಚಿತ್ ಟ್ರೋಲರ್‌‌ನಿಗೆ ಒಪ್ಪಿಸಿ, ಅವನು ಮಾಡುವ ಅವಾಂತರಗಳಿಗೆ ಅವನೇ ಹೊಣೆ ಎಂದು ಅಧಿಕೃತ ಆದೇಶದಲ್ಲಿ ತಿಳಿಸಿ, ಈಗ ಆತ ಮಾಡಿಟ್ಟಿರುವ ರಾಡಿಗಳನ್ನೆಲ್ಲ ಸಮರ್ಥಿಸುತ್ತಾ ಕೂತಿರುವ ಸರ್ಕಾರಕ್ಕೆ ಅಧಿಕಾರದಲ್ಲಿ ಮುಂದುವರಿಯುವ ಯಾವ ನೈತಿಕತೆ ಇದೆ? ಎಂದು ಪ್ರಶ್ನಿಸಿದ್ದಾರೆ.

ಪಠ್ಯಪುಸ್ತಕ ಪರಿಷ್ಕರಣೆಗೆ ಅವಸರದಲ್ಲಿ ಮೌಖಿಕ ಸೂಚನೆ ನೀಡಿ ಘಟನೋತ್ತರ ಅನುಮತಿ ನೀಡಲು ಇದೇನು 40% ಕಮಿಷನ್ ಬಾಚುವ ರಸ್ತೆ ಕಾಮಗಾರಿಯೇ? ಈ ಮೌಖಿಕ ಸೂಚನೆಯಲ್ಲಿ ಕೆಲಸಮಾಡಿಸಿ ಅಮಾಯಕ ಗುತ್ತಿಗೆದಾರನನ್ನು ಬಲಿ ಪಡೆದಿರುವ ಈ ಸರ್ಕಾರ ಈಗ ಎಳೆಯ ಮಕ್ಕಳ ಭವಿಷ್ಯವನ್ನೇ ಬಲಿಕೊಡಲು ಹೊರಟಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಪಠ್ಯಪುಸ್ತಕ ಸಮಿತಿಯ ವಿಕೃತ ಅಧ್ಯಕ್ಷ ಮತ್ತು ಅವನ ಗ್ಯಾಂಗ್, ಜ್ಞಾನದೀವಿಗೆಗಳಾದ ಬಸವಣ್ಣ, ಅಂಬೇಡ್ಕರ್, ಜ್ಯೋತಿಬಾ ಪುಲೆ, ನಾರಾಯಣ ಗುರು, ಕೆಂಪೇಗೌಡ, ಕುವೆಂಪು ಮಾತ್ರವಲ್ಲ ಮಹರ್ಷಿ ವಾಲ್ಮೀಕಿಯವರನ್ನೂ ಬಿಡದೆ ಅವಮಾನಿಸಿದೆ. ಇಂತಹ ಜ್ಞಾನವಿರೋಧಿ ಮತ್ತು ಮನುಷ್ಯವಿರೋಧಿ ಪಠ್ಯವನ್ನು ತರಗತಿಗಳಲ್ಲಿ ಬೋಧನೆಗೆ ಅವಕಾಶ ನೀಡಿದರೆ ಅದು ನಾಡಿಗೆ ಬಗೆವ ದ್ರೋಹವಾಗುತ್ತದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿರಿ: ಆದೇಶ ಇಲ್ಲದೆ ಪಠ್ಯಪರಿಷ್ಕರಣೆ; ಜನಾಕ್ರೋಶದ ನಡುವೆ ‘ಪ್ರಜಾವಾಣಿ’ ವರದಿಗಳಿಗೆ ಸಚಿವ ಬಿ.ಸಿ.ನಾಗೇಶ್ ಗರಂ!

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರೇ ನಿಮ್ಮ ಕುರ್ಚಿ ಉಳಿಸಿಕೊಳ್ಳಲು ಉಳಿದಿರುವುದೊಂದೇ ದಾರಿ. ಮೊದಲು ಶಿಕ್ಷಣ ಸಚಿವರನ್ನು ವಜಾಮಾಡಿ, ಪಠ್ಯಪುಸ್ತಕ ಪರಿಷ್ಕರಣಾ ಸಮಿತಿ ಅಧ್ಯಕ್ಷನನ್ನು ಬಂಧಿಸಿ ಸರ್ಕಾರಕ್ಕೆ ಆತನಿಂದ ಆಗಿರುವ ನಷ್ಟವನ್ನು ಕಕ್ಕಿಸಿ ಮತ್ತು ಬರಗೂರು ರಾಮಚಂದ್ರಪ್ಪ ಸಮಿತಿಯ ಶಿಫಾರಸಿನ ಹಳೆಯ ಪಠ್ಯವನ್ನೇ ಈ ಶೈಕ್ಷಣಿಕ ವರ್ಷಕ್ಕೆ ಮುಂದುವರಿಸಿ ಎಂದು ಆಗ್ರಹಿಸಿದ್ದಾರೆ.

ಇಷ್ಟೆಲ್ಲ ತಪರಾಕಿಗಳ ನಂತರವೂ ಮುಖ್ಯಮಂತ್ರಿಗಳು ಸಂಘ ಪರಿವಾರ ಒಡ್ಡಿರುವ ನೇಣಿಗೆ ಕೊರಳೊಡ್ಡುವುದಾದರೆ ನಮ್ಮದೇನೂ ಅಭ್ಯಂತರ ಇಲ್ಲ. ಪರಿಷ್ಕೃತ ಪಠ್ಯಪುಸ್ತಕಗಳ ವಿರುದ್ದದ ಪ್ರತಿಭಟನೆಯನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯಲು ಕಾಂಗ್ರೆಸ್ ಪಕ್ಷ ಕಟಿಬದ್ದವಾಗಿದೆ. ನಮ್ಮ ಕಾರ್ಯಕರ್ತರು ಈ ಹೋರಾಟವನ್ನು ಜಿಲ್ಲೆ, ತಾಲೂಕು, ಹೋಬಳಿ ಮಟ್ಟಕ್ಕೂ ಕೊಂಡೊಯ್ಯಲಿದ್ದಾರೆ. ಆಗ ಮುಖ್ಯಮಂತ್ರಿಗಳ ತಲೆದಂಡ ಅವರ ಪಕ್ಷಕ್ಕೂ ಅನಿವಾರ್ಯವಾಗಬಹುದು ಎಂದು ಎಚ್ಚರಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಭಾರತವನ್ನು ಮಾರಲು ನಿಮಗೆ ನಾಚಿಕೆಯಾಗುವುದಿಲ್ಲವೇ?’; ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ಉಲ್ಲೇಖಿಸಿ ಪ್ರಧಾನಿ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ

ಅಮೆರಿಕದೊಂದಿಗೆ ಇತ್ತೀಚೆಗೆ ಘೋಷಿಸಲಾದ ವ್ಯಾಪಾರ ಒಪ್ಪಂದದ ಕುರಿತು ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ತೀವ್ರ ವಾಗ್ದಾಳಿ ನಡೆಸಿದ್ದಾರೆ.  ಲೋಕಸಭೆಯಲ್ಲಿ ವ್ಯಾಪಾರ ಒಪ್ಪಂದದ ಹಿನ್ನೆಲೆಯಲ್ಲಿ ತೀವ್ರ ದಾಳಿ ಮಾಡಿದ...

ಗಾಜಾ| ಮನೆ ಅವಶೇಷದಲ್ಲಿ ತನ್ನ ಕುಟುಂಬದ ಸದಸ್ಯರ ಮೂಳೆ ಹುಡುಕಿದ ವ್ಯಕ್ತಿ

ಗಾಜಾ ನಗರದಲ್ಲಿದ್ದ ತನ್ನ ಮನೆಯ ಅವಶೇಷಗಳ ರಾಶಿಯ ನಡುವೆ ಕುಳಿತಿರುವ ಮಹಮೂದ್ ಹಮ್ಮದ್, ದೊಡ್ಡ ಜರಡಿಯಲ್ಲಿ ಮಣ್ಣನ್ನು ತೆಗೆದು ಅಲ್ಲಾಡಿಸಿ, ಅದನ್ನು ಹೊರಗೆ ಎಸೆಯುವ ಮೊದಲು ಎಚ್ಚರಿಕೆಯಿಂದ ನೋಡುವ ವಿಡಯೊ ನೋಡಿದವರ ಮನಕಲಕುತ್ತದೆ....

ವಿಪಕ್ಷಗಳಿಂದ ಅವಿಶ್ವಾಸ ನೋಟಿಸ್: ಕಲಾಪಕ್ಕೆ ಗೈರಾದ ಲೋಕಸಭೆ ಸ್ಪೀಕರ್ ಓಂ ಬಿರ್ಲಾ

'ಪಕ್ಷಪಾತ'ದ ಆರೋಪ ಹೊರಿಸಿ ವಿಪಕ್ಷಗಳು 'ಅವಿಶ್ವಾಸ ನೋಟಿಸ್' ನೀಡಿರುವ ಹಿನ್ನೆಲೆ, ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಕಲಾಪದಿಂದ ದೂರ ಉಳಿದಿದ್ದಾರೆ. ಬುಧವಾರ (ಫೆ.11) ಸ್ಪೀಕರ್ ಪೀಠದಲ್ಲಿ ಹಿರಿಯ ಬಿಜೆಪಿ ಸಂಸದರಾದ ಪಿ.ಸಿ ಮೋಹನ್...

ಕೆನಡಾ ಬ್ರಿಟಿಷ್ ಕೊಲಂಬಿಯಾ ಪ್ರಾಂತ್ಯದ ಶಾಲೆಯಲ್ಲಿ ಗುಂಡಿನ ದಾಳಿ: ಬಂದೂಕುಧಾರಿ ಸೇರಿ ಕನಿಷ್ಠ 10 ಸಾವು, 27 ಮಂದಿಗೆ ಗಾಯ

ಬ್ರಿಟಿಷ್ ಕೊಲಂಬಿಯಾದ ಪೀಸ್ ಪ್ರದೇಶದಲ್ಲಿರುವ ಶಾಲೆಯಲ್ಲಿ ಮಂಗಳವಾರ ಮಧ್ಯಾಹ್ನ ಗುಂಡಿನ ದಾಳಿ ನಡೆದಿದ್ದು, ಕನಿಷ್ಠ ಒಂಬತ್ತು ಮಂದಿ ಸಾವನ್ನಪ್ಪಿದ್ದು, 27 ಮಂದಿಗೆ ಗಂಭೀರ ಗಾಯಗಳಾಗಿರುವುದಾಗಿ ವರದಿಯಾಗಿದೆ. ಶಂಕಿತ ಎಂದು ನಂಬಲಾದವರ ಮನೆಯಲ್ಲಿ ಇನ್ನೂ...

ಉತ್ತರ ಪ್ರದೇಶ| ಭೂಮಿ ವಿವಾದದಲ್ಲಿ ದಲಿತ ಮಹಿಳೆಯರ ಮೇಲೆ ಹಲ್ಲೆ- ಜಾತಿ ನಿಂದನೆ

ಉತ್ತರ ಪ್ರದೇಶದ ಮಾಂಡಾ ಪೊಲೀಸ್ ಠಾಣೆ ವ್ಯಾಪ್ತಿಯ ಹಂಡಿಯಾ ಗ್ರಾಮದಲ್ಲಿ ದೀರ್ಘಕಾಲದಿಂದ ನಡೆಯುತ್ತಿದ್ದ ಭೂ ವಿವಾದ ಭಾನುವಾರ ಹಿಂಸಾಚಾರಕ್ಕೆ ತಿರುಗಿದೆ. ಪ್ರಬಲ ಜಾತಿ ಜನರು ದಲಿತ ಕುಟುಂಬದ ಮೇಲೆ ಹಲ್ಲೆ ನಡೆಸಿದ್ದು, ಪೊಲೀಸರು...

ಒಡಿಶಾ| ಸಹಾಯಕಿಯಾಗಿ ದಲಿತ ಮಹಿಳೆ ನೇಮಕ; ಮೂರು ತಿಂಗಳ ಕಾಲ ಮುಚ್ಚಿದ ಅಂಗನವಾಡಿ

ಭಾರತೀಯ ಸಮಾಜದಲ್ಲಿ ಆಳವಾಗಿ ಈಗಲೂ ಬೇರೂರಿರುವ ಜಾತಿ ಪೂರ್ವಾಗ್ರಹದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಒಡಿಶಾ ರಾಜ್ಯದ ಕೇಂದ್ರಪಾರ ಜಿಲ್ಲೆಯ ರಾಜನಗರ ಬ್ಲಾಕ್‌ನ ಹಳ್ಳಿಯ ನಿವಾಸಿಗಳು ಸುಮಾರು ಮೂರು ತಿಂಗಳ ಹಿಂದೆ, ದಲಿತ...

ಆತ್ಮಕಥೆ ಜಟಾಪಟಿ: ನಕಲಿ ಪುಸ್ತಕ ಬಳಸಿ ರಾಷ್ಟ್ರೀಯ ಭದ್ರತೆಯ ಬಗ್ಗೆ ಅನುಮಾನ ವ್ಯಕ್ತಪಡಿಸಿದ ರಾಹುಲ್ ಕ್ಷಮೆಯಾಚಿಸಬೇಕು: ಬಿಜೆಪಿ ಒತ್ತಾಯ

ನವದೆಹಲಿ: ಮಾಜಿ ಸೇನಾ ಮುಖ್ಯಸ್ಥ ಜನರಲ್ ಎಂಎಂ ನರವಾಣೆ ತಮ್ಮ ಆತ್ಮಚರಿತ್ರೆ "ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ" ಪ್ರಕಾಶಕರು ಬಿಡುಗಡೆ ಮಾಡಿದ ಹೇಳಿಕೆಯನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಕ್ಕೆ ರಾಹುಲ್ ಗಾಂಧಿ ಅವರ ಮುಖ...

ಆತ್ಮಕಥೆ ಜಟಾಪಟಿ : ಅಂದು ಪುಸ್ತಕ ಪ್ರಿ- ಆರ್ಡರ್ ಮಾಡಿ ಎಂದಿದ್ದ ನರವಾಣೆ, ಇಂದು ಪ್ರಕಟವೇ ಆಗಿಲ್ಲ ಎನ್ನುತ್ತಿದ್ದಾರೆ

ಕಳೆದ ಹತ್ತು ದಿನಗಳಿಂದ ದೇಶದಾದ್ಯಂತ ಚರ್ಚೆಯಲ್ಲಿರುವ ತನ್ನ 'ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ' ಆತ್ಮಕಥೆಯ ಕುರಿತು ಮಾಜಿ ಭೂ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಮೌನ ಮುರಿದಿದ್ದಾರೆ. "ಪುಸ್ತಕದ ಮುದ್ರಿತ ಅಥವಾ...

ಗೌರವ್ ಗೊಗೊಯ್ ಸಹಿತ ಮೂವರು ಕಾಂಗ್ರೆಸ್ ನಾಯಕರ ವಿರುದ್ಧ 500 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದ ಅಸ್ಸಾಂ ಸಿಎಂ

ಕಾಂಗ್ರೆಸ್ ನಾಯಕರಾದ ಜಿತೇಂದ್ರ ಸಿಂಗ್, ಭೂಪೇಶ್ ಬಘೇಲ್ ಮತ್ತು ಗೌರವ್ ಗೊಗೊಯ್ ವಿರುದ್ದ 500 ಕೋಟಿ ರೂಪಾಯಿ ಮಾನನಷ್ಟ ಮೊಕದ್ದಮೆ ಹೂಡಿದ್ದೇನೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ತಿಳಿಸಿದ್ದಾರೆ. "ಪತ್ರಿಕಾಗೋಷ್ಠಿಯ ಮೂಲಕ...

ಕೇರಳದಲ್ಲಿ ಸರ್ಕಾರ ಬದಲಾವಣೆಗೆ ಕವಿ ಸಚ್ಚಿದಾನಂದನ್ ಕರೆಗೆ ಎಡಪಕ್ಷಗಳ ತೀವ್ರ ವಿರೋಧ; ಇದು ಸಾರ್ವಜನಿಕ ಭಾವನೆ ಎಂದ ವಿಪಕ್ಷಗಳು

ಕೇರಳದಲ್ಲಿ ನಿರಂತರ ಆಡಳಿತ ಅಪೇಕ್ಷಣೀಯವಲ್ಲ ಮತ್ತು ಅಧಿಕಾರವು ರಾಜಕೀಯ ರಂಗಗಳ ನಡುವೆ ಪರ್ಯಾಯವಾಗಿರಬೇಕು ಎಂದು ಹಿರಿಯ ಕವಿ ಮತ್ತು ಕೇರಳ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಕೆ. ಸಚ್ಚಿದಾನಂದನ್ ಹೇಳಿದ್ದಾರೆ. ಈ ಹೇಳಿಕೆ ಆಡಳಿತಾರೂಢ...