Homeಕರ್ನಾಟಕಆದೇಶವಿಲ್ಲದೆ ಪಠ್ಯ ಪರಿಷ್ಕರಣೆ: ಸಂಪುಟದಿಂದ ಬಿ.ಸಿ.ನಾಗೇಶ್ ವಜಾಕ್ಕೆ ಸಿದ್ದರಾಮಯ್ಯ ಪಟ್ಟು

ಆದೇಶವಿಲ್ಲದೆ ಪಠ್ಯ ಪರಿಷ್ಕರಣೆ: ಸಂಪುಟದಿಂದ ಬಿ.ಸಿ.ನಾಗೇಶ್ ವಜಾಕ್ಕೆ ಸಿದ್ದರಾಮಯ್ಯ ಪಟ್ಟು

“ಪಠ್ಯಪುಸ್ತಕ ಪರಿಷ್ಕರಣೆಗೆ ಅವಸರದಲ್ಲಿ ಮೌಖಿಕ ಸೂಚನೆ ನೀಡಿ ಘಟನೋತ್ತರ ಅನುಮತಿ ನೀಡಲು ಇದೇನು 40% ಕಮಿಷನ್ ಬಾಚುವ ರಸ್ತೆ ಕಾಮಗಾರಿಯೇ?”

- Advertisement -
- Advertisement -

ಸ್ಪಷ್ಟವಾದ ಸರ್ಕಾರಿ ಆದೇಶವಿಲ್ಲದೆ ಪಠ್ಯಪುಸ್ತಕಗಳ ಪರಿಷ್ಕರಿಸಲು ಒಬ್ಬ ಕಿಡಿಗೇಡಿ ಟ್ರೋಲರ್‌ನಿಗೆ ಅವಕಾಶ ನೀಡಿ, ಈಗ ಆತ ಮಾಡಿಟ್ಟಿರುವ ಕೊಳಕುಗಳನ್ನೆಲ್ಲ ತಲೆಮೇಲೆ ಇಟ್ಟುಕೊಂಡು ಸಮರ್ಥಿಸುತ್ತಿರುವ ಬೇಜವಾಬ್ದಾರಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಕ್ಷಣ ಸಂಪುಟದಿಂದ ವಜಾಮಾಡಬೇಕು ಮತ್ತು ಪಠ್ಯಪುಸ್ತಕ ಪರಿಷ್ಕರಣಾ ಸಮಿತಿ ಅಧ್ಯಕ್ಷ ರೋಹಿತ್ ಚಕ್ರತೀರ್ಥನನ್ನು ಬಂಧಿಸಿ ಕಾನೂನು ಕ್ರಮಕೈಗೊಳ್ಳಬೇಕು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ರಾಜ್ಯದ ಶೈಕ್ಷಣಿಕ, ಸಾಮಾಜಿಕ, ಸಾಹಿತ್ತಿಕ ಕ್ಷೇತ್ರವನ್ನೇ ಅಲ್ಲೋಲಕಲ್ಲೋಲ ಮಾಡಿರುವ ಪಠ್ಯಪುಸ್ತಕ ಪರಿಷ್ಕರಣೆಯ ಅದ್ವಾನಕ್ಕೆ ಕಾರಣಕರ್ತರಾಗಿರುವ ಇಂತಹ ಬೇಜವಾಬ್ದಾರಿ ಶಿಕ್ಷಣ ಸಚಿವರನ್ನು ಮುಖ್ಯಮಂತ್ರಿಗಳು ಇನ್ನೂ ಸಮರ್ಥಿಸಿಕೊಳ್ಳಲು ಹೊರಡುವುದಾದರೆ ಅವರೇ ಮೊದಲು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪಠ್ಯಪುಸ್ತಕ ಪರಿಷ್ಕರಣೆಯಂತಹ ಅತ್ಯಂತ ಜವಾಬ್ದಾರಿಯುತ ಕೆಲಸವನ್ನು ಸ್ವಭಾವತ: ವಿಕೃತನಾದ ಒಬ್ಬ ಯಕಶ್ಚಿತ್ ಟ್ರೋಲರ್‌‌ನಿಗೆ ಒಪ್ಪಿಸಿ, ಅವನು ಮಾಡುವ ಅವಾಂತರಗಳಿಗೆ ಅವನೇ ಹೊಣೆ ಎಂದು ಅಧಿಕೃತ ಆದೇಶದಲ್ಲಿ ತಿಳಿಸಿ, ಈಗ ಆತ ಮಾಡಿಟ್ಟಿರುವ ರಾಡಿಗಳನ್ನೆಲ್ಲ ಸಮರ್ಥಿಸುತ್ತಾ ಕೂತಿರುವ ಸರ್ಕಾರಕ್ಕೆ ಅಧಿಕಾರದಲ್ಲಿ ಮುಂದುವರಿಯುವ ಯಾವ ನೈತಿಕತೆ ಇದೆ? ಎಂದು ಪ್ರಶ್ನಿಸಿದ್ದಾರೆ.

ಪಠ್ಯಪುಸ್ತಕ ಪರಿಷ್ಕರಣೆಗೆ ಅವಸರದಲ್ಲಿ ಮೌಖಿಕ ಸೂಚನೆ ನೀಡಿ ಘಟನೋತ್ತರ ಅನುಮತಿ ನೀಡಲು ಇದೇನು 40% ಕಮಿಷನ್ ಬಾಚುವ ರಸ್ತೆ ಕಾಮಗಾರಿಯೇ? ಈ ಮೌಖಿಕ ಸೂಚನೆಯಲ್ಲಿ ಕೆಲಸಮಾಡಿಸಿ ಅಮಾಯಕ ಗುತ್ತಿಗೆದಾರನನ್ನು ಬಲಿ ಪಡೆದಿರುವ ಈ ಸರ್ಕಾರ ಈಗ ಎಳೆಯ ಮಕ್ಕಳ ಭವಿಷ್ಯವನ್ನೇ ಬಲಿಕೊಡಲು ಹೊರಟಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಪಠ್ಯಪುಸ್ತಕ ಸಮಿತಿಯ ವಿಕೃತ ಅಧ್ಯಕ್ಷ ಮತ್ತು ಅವನ ಗ್ಯಾಂಗ್, ಜ್ಞಾನದೀವಿಗೆಗಳಾದ ಬಸವಣ್ಣ, ಅಂಬೇಡ್ಕರ್, ಜ್ಯೋತಿಬಾ ಪುಲೆ, ನಾರಾಯಣ ಗುರು, ಕೆಂಪೇಗೌಡ, ಕುವೆಂಪು ಮಾತ್ರವಲ್ಲ ಮಹರ್ಷಿ ವಾಲ್ಮೀಕಿಯವರನ್ನೂ ಬಿಡದೆ ಅವಮಾನಿಸಿದೆ. ಇಂತಹ ಜ್ಞಾನವಿರೋಧಿ ಮತ್ತು ಮನುಷ್ಯವಿರೋಧಿ ಪಠ್ಯವನ್ನು ತರಗತಿಗಳಲ್ಲಿ ಬೋಧನೆಗೆ ಅವಕಾಶ ನೀಡಿದರೆ ಅದು ನಾಡಿಗೆ ಬಗೆವ ದ್ರೋಹವಾಗುತ್ತದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿರಿ: ಆದೇಶ ಇಲ್ಲದೆ ಪಠ್ಯಪರಿಷ್ಕರಣೆ; ಜನಾಕ್ರೋಶದ ನಡುವೆ ‘ಪ್ರಜಾವಾಣಿ’ ವರದಿಗಳಿಗೆ ಸಚಿವ ಬಿ.ಸಿ.ನಾಗೇಶ್ ಗರಂ!

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರೇ ನಿಮ್ಮ ಕುರ್ಚಿ ಉಳಿಸಿಕೊಳ್ಳಲು ಉಳಿದಿರುವುದೊಂದೇ ದಾರಿ. ಮೊದಲು ಶಿಕ್ಷಣ ಸಚಿವರನ್ನು ವಜಾಮಾಡಿ, ಪಠ್ಯಪುಸ್ತಕ ಪರಿಷ್ಕರಣಾ ಸಮಿತಿ ಅಧ್ಯಕ್ಷನನ್ನು ಬಂಧಿಸಿ ಸರ್ಕಾರಕ್ಕೆ ಆತನಿಂದ ಆಗಿರುವ ನಷ್ಟವನ್ನು ಕಕ್ಕಿಸಿ ಮತ್ತು ಬರಗೂರು ರಾಮಚಂದ್ರಪ್ಪ ಸಮಿತಿಯ ಶಿಫಾರಸಿನ ಹಳೆಯ ಪಠ್ಯವನ್ನೇ ಈ ಶೈಕ್ಷಣಿಕ ವರ್ಷಕ್ಕೆ ಮುಂದುವರಿಸಿ ಎಂದು ಆಗ್ರಹಿಸಿದ್ದಾರೆ.

ಇಷ್ಟೆಲ್ಲ ತಪರಾಕಿಗಳ ನಂತರವೂ ಮುಖ್ಯಮಂತ್ರಿಗಳು ಸಂಘ ಪರಿವಾರ ಒಡ್ಡಿರುವ ನೇಣಿಗೆ ಕೊರಳೊಡ್ಡುವುದಾದರೆ ನಮ್ಮದೇನೂ ಅಭ್ಯಂತರ ಇಲ್ಲ. ಪರಿಷ್ಕೃತ ಪಠ್ಯಪುಸ್ತಕಗಳ ವಿರುದ್ದದ ಪ್ರತಿಭಟನೆಯನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯಲು ಕಾಂಗ್ರೆಸ್ ಪಕ್ಷ ಕಟಿಬದ್ದವಾಗಿದೆ. ನಮ್ಮ ಕಾರ್ಯಕರ್ತರು ಈ ಹೋರಾಟವನ್ನು ಜಿಲ್ಲೆ, ತಾಲೂಕು, ಹೋಬಳಿ ಮಟ್ಟಕ್ಕೂ ಕೊಂಡೊಯ್ಯಲಿದ್ದಾರೆ. ಆಗ ಮುಖ್ಯಮಂತ್ರಿಗಳ ತಲೆದಂಡ ಅವರ ಪಕ್ಷಕ್ಕೂ ಅನಿವಾರ್ಯವಾಗಬಹುದು ಎಂದು ಎಚ್ಚರಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿರ್–ಜುನೈದ್ ಕೊಲೆ ಪ್ರಕರಣ: ಜಾಮೀನಿನ ಮೇಲೆ ಹೊರಬಂದ ಹಿಂದುತ್ವ ಕಾರ್ಯಕರ್ತ ಮೋನು ಮಾನೇಸರ್ ಗೆ ಗುರುಗ್ರಾಮದಲ್ಲಿ ಭವ್ಯ ಸ್ವಾಗತ 

2023 ರಲ್ಲಿ ಹರಿಯಾಣದಲ್ಲಿ ಗೋರಕ್ಷಣೆ ಹೆಸರಿನಲ್ಲಿ ಇಬ್ಬರು ಮುಸ್ಲಿಂ ಪುರುಷರ ಹತ್ಯೆ ಪ್ರಕರಣದ ಆರೋಪಿಯಾಗಿರುವ ಹಿಂದುತ್ವ ಕಾರ್ಯಕರ್ತ ಮೋನು ಮಾನೇಸರ್ ಅವರಿಗೆ ರಾಜಸ್ಥಾನ ಹೈಕೋರ್ಟ್ ಜಾಮೀನು ನೀಡಿದ ನಂತರ ಶನಿವಾರ ಸಂಜೆ ಭರತ್‌ಪುರ...

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ನಾಯಕರನ್ನು ಗುರಿಯಾಗಿಸುವ ಇಸ್ರೇಲ್ ಬೆದರಿಕೆಗೆ ಚೀನಾ ವಿರೋಧ

ಇರಾನ್‌ನಲ್ಲಿ ಸರ್ವೋಚ್ಛ ನಾಯಕರಾಗಿ ಯಾರೇ ಆಯ್ಕೆಯಾದರು ಅವರು ನಮ್ಮ ಮುಂದಿನ ಗುರಿಯಾಗಿರುತ್ತಾರೆ ಎಂದು ಬೆದರಿಕೆ ಹಾಕಿದ್ದ ಇಸ್ರೇಲ್ ನಡೆಯನ್ನು ಚೀನಾ ಖಂಡಿಸಿದೆ. ಸದ್ಯ ಸರ್ವೋಚ್ಛ ನಾಯಕರಾಗಿ ನೇಮಕವಾಗಿರುವ ಅಲಿ ಖಮೇನಿ ಅವರ ಪುತ್ರ...

ಪಶ್ಚಿಮ ಏಷ್ಯಾ ಸಂಘರ್ಷ ಕುರಿತು ಚರ್ಚೆಗೆ ಒತ್ತಾಯ : ಸಂಸತ್ ಆವರಣದಲ್ಲಿ ವಿಪಕ್ಷ ಸಂಸದರಿಂದ ಪ್ರತಿಭಟನೆ

ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಚರ್ಚೆಗೆ ಒತ್ತಾಯಿಸಿ ಮತ್ತು ಅದಕ್ಕೆ ಸಂಬಂಧಿಸಿದ ನಿರ್ಣಾಯಕ ವಿಷಯಗಳ ಬಗ್ಗೆ ಸರ್ಕಾರ ಮೌನ ವಹಿಸಿರುವುದನ್ನು ಖಂಡಿಸಿ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ವಿಪಕ್ಷ ನಾಯಕ ರಾಹುಲ್...

ಇರಾನಿನ ತೈಲ ಸಂಗ್ರಹಾಗಾರಗಳ ಮೇಲೆ ಇಸ್ರೇಲ್ ದಾಳಿ; ಅಮೆರಿಕಾ ಅಸಮಾಧಾನಗೊಂಡಿರುವುದಾಗಿ ವರದಿ

ವಾಷಿಂಗ್ಟನ್, ಡಿಸಿ: ಇರಾನಿನ ಇಂಧನ ಮೂಲಸೌಕರ್ಯವನ್ನು ಗುರಿಯಾಗಿಸಿಕೊಂಡು ಇಸ್ರೇಲ್ ನಡೆಸಿದ ದೊಡ್ಡ ಪ್ರಮಾಣದ ವೈಮಾನಿಕ ದಾಳಿಯ ಬಗ್ಗೆ ಅಮೆರಿಕ ಮತ್ತು ಇಸ್ರೇಲ್ ನಡುವೆ ಭಿನ್ನಾಭಿಪ್ರಾಯ ಹೊರಹೊಮ್ಮಿದೆ ಎಂದು ವರದಿಯಾಗಿದೆ. ಅಮೆರಿಕದ ಅಧಿಕಾರಿಗಳು ಕಾರ್ಯಾಚರಣೆಯ...

ಪಶ್ಚಿಮ ಏಷ್ಯಾ ಸಂಘರ್ಷ ಕುರಿತು ಚರ್ಚೆಗೆ ಪ್ರತಿಪಕ್ಷಗಳು ಪಟ್ಟು : ಲೋಕಸಭೆ ಕಲಾಪ ಮುಂದೂಡಿಕೆ

ಲೋಕಸಭೆಯ ಬಜೆಟ್ ಅಧಿವೇಶನದ ಎರಡನೇ ಹಂತದ ಕಾರ್ಯ ಕಲಾಪಗಳು ಸೋಮವಾರ (ಮಾ.9) ಭಾರೀ ಗದ್ದಲದೊಂದಿಗೆ ಆರಂಭಗೊಂಡಿತು. ಪಶ್ಚಿಮ ಏಷ್ಯಾದ ಪರಿಸ್ಥಿತಿಯ ಕುರಿತು ಚರ್ಚಿಸಲು ಆಗ್ರಹಿಸಿ ಪ್ರತಿಪಕ್ಷಗಳು ತೀವ್ರ ಪ್ರತಿಭಟನೆ ನಡೆಸಿದ ಹಿನ್ನೆಲೆ, ಸ್ಪೀಕರ್...

Parliament Budget Session | ಇಂಧನ ಭದ್ರತೆ ಕುರಿತು ಮಲ್ಲಿಕಾರ್ಜುನ ಖರ್ಗೆ ಪ್ರಸ್ತಾಪ : ರಾಜ್ಯಸಭೆಯಲ್ಲಿ ಗದ್ದಲ

ಸಂಸತ್ತಿನ 2026-27ನೇ ಸಾಲಿನ ಬಜೆಟ್ ಅಧಿವೇಶನದ ಎರಡನೇ ಹಂತದ ಕಾರ್ಯ ಕಲಾಪಗಳು ಸೋಮವಾರದಿಂದ (ಮಾ.9) ಪ್ರಾರಂಭಗೊಂಡಿವೆ. ಮೊದಲ ದಿನ ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜು ಖರ್ಗೆ ಅವರು...

ಯುದ್ಧದ ನಡುವೆಯೇ ಇರಾನ್‌ನ ನೂತನ ಸರ್ವೋಚ್ಚ ನಾಯಕನಾಗಿ ಖಮೇನಿ ಪುತ್ರ ಮೊಜ್ತಬಾ ನೇಮಕ

ಇರಾನ್‌ನ ತಜ್ಞರ ಸಭೆಯು ಮೊಜ್ತಾಬಾ ಖಮೇನಿ ಅವರನ್ನು ಅವರ ತಂದೆ ಅಯತೊಲ್ಲಾ ಅಲಿ ಖಮೇನಿ ಅವರ ಸ್ಥಾನಕ್ಕೆ ದೇಶದ ಹೊಸ ಸರ್ವೋಚ್ಚ ನಾಯಕನನ್ನಾಗಿ ಘೋಷಿಸಿದೆ ಎಂದು ರಾಜ್ಯ ಮಾಧ್ಯಮ ಭಾನುವಾರ ವರದಿ ಮಾಡಿದೆ. "ತಜ್ಞರ...

‘ಮಧ್ಯಪ್ರಾಚ್ಯ ಉದ್ವಿಗ್ನತೆ’: ಸೌದಿ ವಸತಿ ಪ್ರದೇಶದ ಮೇಲಿನ ಕ್ಷಿಪಣಿ ದಾಳಿಯಲ್ಲಿ ಯಾವುದೇ ಭಾರತೀಯ ಸಾವನ್ನಪ್ಪಿಲ್ಲ; ರಿಯಾದ್‌ ರಾಯಭಾರ ಕಚೇರಿ

ಸೌದಿ ಅರೇಬಿಯಾದ ವಸತಿ ಸ್ಥಳದ ಮೇಲೆ ಭಾನುವಾರ ಶೆಲ್ ಬಿದ್ದ ಪರಿಣಾಮ ಯಾವುದೇ ಭಾರತೀಯ ಸಾವು ಸಂಭವಿಸಿಲ್ಲ ಎಂದು ರಿಯಾದ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ದೃಢಪಡಿಸಿದೆ. ಸೌದಿ ಅರೇಬಿಯಾದ ಅಲ್-ಖಾರ್ಜ್ ಗವರ್ನರೇಟ್‌ನಲ್ಲಿರುವ ವಸತಿ ಪ್ರದೇಶದಲ್ಲಿ...

ತಮಿಳುನಾಡು | ಕಸ್ಟಡಿಯಲ್ಲಿದ್ದ ದಲಿತ ಯುವಕ ಸಾವು : ಪೊಲೀಸರ ವಿರುದ್ಧ ಚಿತ್ರಹಿಂಸೆ ಆರೋಪ

ತಮಿಳುನಾಡಿನ ಶಿವಗಂಗಾ ಜಿಲ್ಲೆಯ ಮಾನಮದುರೈನಲ್ಲಿ ಹಲ್ಲೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಪೊಲೀಸರು ಬಂಧಿಸಿದ್ದ 26 ವರ್ಷದ ದಲಿತ ಯುವಕ ಚಿಕಿತ್ಸೆ ಪಡೆಯುತ್ತಿದ್ದಾಗ ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದು, ಪೊಲೀಸರ ಕಸ್ಟಡಿ ಚಿತ್ರಹಿಂಸೆಯೇ ಈ ಸಾವಿಗೆ ಕಾರಣ ಎಂದು...

ಕೇರಳ | ದೇವಸ್ಥಾನದ ಉತ್ಸವದಲ್ಲಿ ಗುಂಪು ಹಲ್ಲೆ : 18 ವರ್ಷದ ಯುವಕ ಸಾವು

ಕೇರಳದ ಕೊಲ್ಲಂ ಜಿಲ್ಲೆಯ ದೇವಸ್ಥಾನವೊಂದರ ಉತ್ಸವದಲ್ಲಿ ಕ್ಷುಲ್ಲಕ ಕಾರಣಕ್ಕೆ 18 ವರ್ಷದ ಯುವಕನ ಮೇಲೆ ಗುಂಪು ಹಲ್ಲೆ ನಡೆಸಲಾಗಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಯುವಕ ಸಾವಿಗೀಡಾಗಿದ್ದಾರೆ. ಈ ಘಟನೆ ಇಡೀ ರಾಜ್ಯವನ್ನು ಬೆಚ್ಚಿ ಬೀಳಿಸಿದೆ. ಮೃತನ...