Homeಕರ್ನಾಟಕಆದೇಶವಿಲ್ಲದೆ ಪಠ್ಯ ಪರಿಷ್ಕರಣೆ: ಸಂಪುಟದಿಂದ ಬಿ.ಸಿ.ನಾಗೇಶ್ ವಜಾಕ್ಕೆ ಸಿದ್ದರಾಮಯ್ಯ ಪಟ್ಟು

ಆದೇಶವಿಲ್ಲದೆ ಪಠ್ಯ ಪರಿಷ್ಕರಣೆ: ಸಂಪುಟದಿಂದ ಬಿ.ಸಿ.ನಾಗೇಶ್ ವಜಾಕ್ಕೆ ಸಿದ್ದರಾಮಯ್ಯ ಪಟ್ಟು

“ಪಠ್ಯಪುಸ್ತಕ ಪರಿಷ್ಕರಣೆಗೆ ಅವಸರದಲ್ಲಿ ಮೌಖಿಕ ಸೂಚನೆ ನೀಡಿ ಘಟನೋತ್ತರ ಅನುಮತಿ ನೀಡಲು ಇದೇನು 40% ಕಮಿಷನ್ ಬಾಚುವ ರಸ್ತೆ ಕಾಮಗಾರಿಯೇ?”

- Advertisement -
- Advertisement -

ಸ್ಪಷ್ಟವಾದ ಸರ್ಕಾರಿ ಆದೇಶವಿಲ್ಲದೆ ಪಠ್ಯಪುಸ್ತಕಗಳ ಪರಿಷ್ಕರಿಸಲು ಒಬ್ಬ ಕಿಡಿಗೇಡಿ ಟ್ರೋಲರ್‌ನಿಗೆ ಅವಕಾಶ ನೀಡಿ, ಈಗ ಆತ ಮಾಡಿಟ್ಟಿರುವ ಕೊಳಕುಗಳನ್ನೆಲ್ಲ ತಲೆಮೇಲೆ ಇಟ್ಟುಕೊಂಡು ಸಮರ್ಥಿಸುತ್ತಿರುವ ಬೇಜವಾಬ್ದಾರಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಕ್ಷಣ ಸಂಪುಟದಿಂದ ವಜಾಮಾಡಬೇಕು ಮತ್ತು ಪಠ್ಯಪುಸ್ತಕ ಪರಿಷ್ಕರಣಾ ಸಮಿತಿ ಅಧ್ಯಕ್ಷ ರೋಹಿತ್ ಚಕ್ರತೀರ್ಥನನ್ನು ಬಂಧಿಸಿ ಕಾನೂನು ಕ್ರಮಕೈಗೊಳ್ಳಬೇಕು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ರಾಜ್ಯದ ಶೈಕ್ಷಣಿಕ, ಸಾಮಾಜಿಕ, ಸಾಹಿತ್ತಿಕ ಕ್ಷೇತ್ರವನ್ನೇ ಅಲ್ಲೋಲಕಲ್ಲೋಲ ಮಾಡಿರುವ ಪಠ್ಯಪುಸ್ತಕ ಪರಿಷ್ಕರಣೆಯ ಅದ್ವಾನಕ್ಕೆ ಕಾರಣಕರ್ತರಾಗಿರುವ ಇಂತಹ ಬೇಜವಾಬ್ದಾರಿ ಶಿಕ್ಷಣ ಸಚಿವರನ್ನು ಮುಖ್ಯಮಂತ್ರಿಗಳು ಇನ್ನೂ ಸಮರ್ಥಿಸಿಕೊಳ್ಳಲು ಹೊರಡುವುದಾದರೆ ಅವರೇ ಮೊದಲು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪಠ್ಯಪುಸ್ತಕ ಪರಿಷ್ಕರಣೆಯಂತಹ ಅತ್ಯಂತ ಜವಾಬ್ದಾರಿಯುತ ಕೆಲಸವನ್ನು ಸ್ವಭಾವತ: ವಿಕೃತನಾದ ಒಬ್ಬ ಯಕಶ್ಚಿತ್ ಟ್ರೋಲರ್‌‌ನಿಗೆ ಒಪ್ಪಿಸಿ, ಅವನು ಮಾಡುವ ಅವಾಂತರಗಳಿಗೆ ಅವನೇ ಹೊಣೆ ಎಂದು ಅಧಿಕೃತ ಆದೇಶದಲ್ಲಿ ತಿಳಿಸಿ, ಈಗ ಆತ ಮಾಡಿಟ್ಟಿರುವ ರಾಡಿಗಳನ್ನೆಲ್ಲ ಸಮರ್ಥಿಸುತ್ತಾ ಕೂತಿರುವ ಸರ್ಕಾರಕ್ಕೆ ಅಧಿಕಾರದಲ್ಲಿ ಮುಂದುವರಿಯುವ ಯಾವ ನೈತಿಕತೆ ಇದೆ? ಎಂದು ಪ್ರಶ್ನಿಸಿದ್ದಾರೆ.

ಪಠ್ಯಪುಸ್ತಕ ಪರಿಷ್ಕರಣೆಗೆ ಅವಸರದಲ್ಲಿ ಮೌಖಿಕ ಸೂಚನೆ ನೀಡಿ ಘಟನೋತ್ತರ ಅನುಮತಿ ನೀಡಲು ಇದೇನು 40% ಕಮಿಷನ್ ಬಾಚುವ ರಸ್ತೆ ಕಾಮಗಾರಿಯೇ? ಈ ಮೌಖಿಕ ಸೂಚನೆಯಲ್ಲಿ ಕೆಲಸಮಾಡಿಸಿ ಅಮಾಯಕ ಗುತ್ತಿಗೆದಾರನನ್ನು ಬಲಿ ಪಡೆದಿರುವ ಈ ಸರ್ಕಾರ ಈಗ ಎಳೆಯ ಮಕ್ಕಳ ಭವಿಷ್ಯವನ್ನೇ ಬಲಿಕೊಡಲು ಹೊರಟಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಪಠ್ಯಪುಸ್ತಕ ಸಮಿತಿಯ ವಿಕೃತ ಅಧ್ಯಕ್ಷ ಮತ್ತು ಅವನ ಗ್ಯಾಂಗ್, ಜ್ಞಾನದೀವಿಗೆಗಳಾದ ಬಸವಣ್ಣ, ಅಂಬೇಡ್ಕರ್, ಜ್ಯೋತಿಬಾ ಪುಲೆ, ನಾರಾಯಣ ಗುರು, ಕೆಂಪೇಗೌಡ, ಕುವೆಂಪು ಮಾತ್ರವಲ್ಲ ಮಹರ್ಷಿ ವಾಲ್ಮೀಕಿಯವರನ್ನೂ ಬಿಡದೆ ಅವಮಾನಿಸಿದೆ. ಇಂತಹ ಜ್ಞಾನವಿರೋಧಿ ಮತ್ತು ಮನುಷ್ಯವಿರೋಧಿ ಪಠ್ಯವನ್ನು ತರಗತಿಗಳಲ್ಲಿ ಬೋಧನೆಗೆ ಅವಕಾಶ ನೀಡಿದರೆ ಅದು ನಾಡಿಗೆ ಬಗೆವ ದ್ರೋಹವಾಗುತ್ತದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿರಿ: ಆದೇಶ ಇಲ್ಲದೆ ಪಠ್ಯಪರಿಷ್ಕರಣೆ; ಜನಾಕ್ರೋಶದ ನಡುವೆ ‘ಪ್ರಜಾವಾಣಿ’ ವರದಿಗಳಿಗೆ ಸಚಿವ ಬಿ.ಸಿ.ನಾಗೇಶ್ ಗರಂ!

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರೇ ನಿಮ್ಮ ಕುರ್ಚಿ ಉಳಿಸಿಕೊಳ್ಳಲು ಉಳಿದಿರುವುದೊಂದೇ ದಾರಿ. ಮೊದಲು ಶಿಕ್ಷಣ ಸಚಿವರನ್ನು ವಜಾಮಾಡಿ, ಪಠ್ಯಪುಸ್ತಕ ಪರಿಷ್ಕರಣಾ ಸಮಿತಿ ಅಧ್ಯಕ್ಷನನ್ನು ಬಂಧಿಸಿ ಸರ್ಕಾರಕ್ಕೆ ಆತನಿಂದ ಆಗಿರುವ ನಷ್ಟವನ್ನು ಕಕ್ಕಿಸಿ ಮತ್ತು ಬರಗೂರು ರಾಮಚಂದ್ರಪ್ಪ ಸಮಿತಿಯ ಶಿಫಾರಸಿನ ಹಳೆಯ ಪಠ್ಯವನ್ನೇ ಈ ಶೈಕ್ಷಣಿಕ ವರ್ಷಕ್ಕೆ ಮುಂದುವರಿಸಿ ಎಂದು ಆಗ್ರಹಿಸಿದ್ದಾರೆ.

ಇಷ್ಟೆಲ್ಲ ತಪರಾಕಿಗಳ ನಂತರವೂ ಮುಖ್ಯಮಂತ್ರಿಗಳು ಸಂಘ ಪರಿವಾರ ಒಡ್ಡಿರುವ ನೇಣಿಗೆ ಕೊರಳೊಡ್ಡುವುದಾದರೆ ನಮ್ಮದೇನೂ ಅಭ್ಯಂತರ ಇಲ್ಲ. ಪರಿಷ್ಕೃತ ಪಠ್ಯಪುಸ್ತಕಗಳ ವಿರುದ್ದದ ಪ್ರತಿಭಟನೆಯನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯಲು ಕಾಂಗ್ರೆಸ್ ಪಕ್ಷ ಕಟಿಬದ್ದವಾಗಿದೆ. ನಮ್ಮ ಕಾರ್ಯಕರ್ತರು ಈ ಹೋರಾಟವನ್ನು ಜಿಲ್ಲೆ, ತಾಲೂಕು, ಹೋಬಳಿ ಮಟ್ಟಕ್ಕೂ ಕೊಂಡೊಯ್ಯಲಿದ್ದಾರೆ. ಆಗ ಮುಖ್ಯಮಂತ್ರಿಗಳ ತಲೆದಂಡ ಅವರ ಪಕ್ಷಕ್ಕೂ ಅನಿವಾರ್ಯವಾಗಬಹುದು ಎಂದು ಎಚ್ಚರಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...