Homeಕರ್ನಾಟಕಪಠ್ಯ ತಿರುಚೀಕರಣ ವಿವಾದ: ‘ಅಂದು’ ಮತ್ತು ‘ಇಂದು’ ಏನಾಗಿದೆ ಎಂದು ನೋಡೋಣ ಬನ್ನಿ!

ಪಠ್ಯ ತಿರುಚೀಕರಣ ವಿವಾದ: ‘ಅಂದು’ ಮತ್ತು ‘ಇಂದು’ ಏನಾಗಿದೆ ಎಂದು ನೋಡೋಣ ಬನ್ನಿ!

- Advertisement -
- Advertisement -

ಸಂಘ ಪರಿವಾರದ ಬರಹಗಾರ ರೋಹಿತ್‌ ಚಕ್ರತೀರ್ಥ ಅಧ್ಯಕ್ಷತೆಯಲ್ಲಿ ಪಠ್ಯಪುಸ್ತಕಗಳ ಪರಿಶೀಲನೆ ನಡೆದ ಬಳಿಕ ಹಲವಾರು ವಿಷಯಗಳು ಮುನ್ನಲೆಗೆ ಬಂದಿವೆ. ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಪಠ್ಯದಲ್ಲಿ ಹಲವು ಬದಲಾವಣೆಗಳನ್ನು ತಂದು ಮಕ್ಕಳಿಗೆ ಬೋಧಿಸಲು ಸರ್ಕಾರ ಹೊರಟಿದೆ.

ಜೊತೆಗೆ ಬರಗೂರು ಅವರ ಅಧ್ಯಕ್ಷತೆಯಲ್ಲಿ ಹಲವು ತಪ್ಪುಗಳಾಗಿವೆ ಎಂದು ಕೆಲವು ಸಂಘಟನೆಗಳು ಹೊರಟಿದ್ದು, ರೋಹಿತ್‌ ಚಕ್ರತೀರ್ಥ ಅವರ ವಜಾಕ್ಕೆ ಕೇಳಿ ಬರುತ್ತಿರುವ ಕೂಗನ್ನು ದಮನ ಮಾಡಲು ಯತ್ನಿಸುತ್ತಿವೆ. ಹೀಗಾಗಿ ಪಠ್ಯ ಪುಸ್ತಕ ಪರಿಶೀಲನೆಯಲ್ಲಿ ‘ಅಂದು’ ಮತ್ತು ‘ಇಂದು’ ಏನೇನು ಬದಲಾವಣೆಯಾಗಿದೆ ಎಂದು ಗಮನ ಹರಿಸುವ ಅಗತ್ಯವಿದೆ. ಅಂದಿನ ಪಠ್ಯ ಪುಸ್ತಕ ಪರಿಷ್ಕರಣ ಸಮಿತಿ ಹಾಗೂ ಇಂದಿನ ಪಠ್ಯಪುಸ್ತಕ ಪರಿಶೀಲನಾ ಸಮಿತಿಯ ನಡುವಿನ ವ್ಯತ್ಯಾಸಗಳನ್ನು ಇಲ್ಲಿ ಗುರುತಿಸುವ ಪ್ರಯತ್ನ ಮಾಡಲಾಗಿದೆ.

(ಸೂಚನೆ: ಈ ಪಟ್ಟಿಯೂ ಅಪೂರ್ಣವಾಗಿದ್ದು, ಗಮನಕ್ಕೆ ಬಂದಿರುವ ವಿಷಯಗಳನ್ನಷ್ಟೇ ಇಲ್ಲಿ ಪಟ್ಟಿ ಮಾಡಲಾಗಿದೆ.)
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others


ಅಂದು

ಬೆಂಗಳೂರು ವಿವಿ ಕನ್ನಡ ವಿಭಾಗದ ಪ್ರೊಫೆಸರ್, ಎರಡು ವಿವಿಗಳಿಂದ ಗೌರವ ಡಾಕ್ಟರೇಟ್, ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ, ಸಾಹಿತ್ಯ ಅಕಾಡೆಮಿ ಅಧ್ಯಕ್ಷ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ, ಅನೇಕ ಪ್ರಶಸ್ತಿಗಳನ್ನು ಪಡೆದ ಲೇಖಕರು, ಸಿನಿಮಾ ನಿರ್ದೇಶಕರು, ಕಥೆಗಾರರೂ ಆದ ಪ್ರೊ.ಬರಗೂರು ರಾಮಚಂದ್ರಪ್ಪ ಅವರ ಸರ್ವಾಧ್ಯಕ್ಷತೆಯಲ್ಲಿ ಪಠ್ಯಪುಸ್ತಕ ಪರಿಷ್ಕರಣೆಯನ್ನು ನಡೆಸಲಾಯಿತು.

ಇಂದು

ಬಲಪಂಥೀಯ ಬರಹಗಾರ, ಸಾಮಾಜಿಕ ಮಾಧ್ಯಮಗಳಲ್ಲಿ ಟ್ರೋಲ್‌ ಹಾಗೂ ಅಶ್ಲೀಲ ಭಾಷೆಯ ಮೂಲಕ ಟೀಕೆಗಳಿಗೆ ಒಳಗಾದ ರೋಹಿತ್‌ ಚಕ್ರತೀರ್ಥ ಅವರನ್ನು ಪಠ್ಯ ಪರಿಶೀಲನಾ ಸಮಿತಿಗೆ ಅಧ್ಯಕ್ಷರನ್ನಾಗಿ ಮಾಡಲಾಯಿತು. ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರ ಪ್ರಕಾರ ರೋಹಿತ್‌ ಚಕ್ರತೀರ್ಥ ಅವರು ಐಐಟಿ, ಸಿಇಟಿ ಪ್ರೊಫೆಸರ್‌. ಇದನ್ನು ಸ್ವತಃ ರೋಹಿತ್ ಚಕ್ರತೀರ್ಥ ಅವರೇ ಅಲ್ಲಗಳೆದಿದ್ದಾರೆ!


ಅಂದು

ಮೂರು ವರ್ಷಗಳ ಕಾಲ ಪಠ್ಯ ಪರಿಷ್ಕರಣೆ ನಡೆಯಿತು. 2014-15ರಲ್ಲಿ ಬಜೆಟ್‌ನಲ್ಲಿ ತಜ್ಞರ ಸಮಿತಿ ರಚಿಸಲು ಘೋಷಿಸಲಾಯಿತು. ಒಂದರಿಂದ ಹತ್ತನೇ ತರಗತಿಯವರೆಗೆ ಪಠ್ಯಪುಸ್ತಕಗಳ ಪರಿಷ್ಕರಣೆಗಾಗಿ 27 ಸಮಿತಿಗಳನ್ನು ರಚಿಸಲಾಯಿತು. 2017-18ನೇ ಶೈಕ್ಷಣಿಕ ವರ್ಷದಿಂದ ಹೊಸ ಪಠ್ಯ ಜಾರಿಯಾಯಿತು. ಪ್ರತಿ ಪಠ್ಯ ಪುಸ್ತಕಕ್ಕೂ ತಜ್ಞರ ನೇತೃತ್ವದಲ್ಲಿ ರಚನಾ ಸಮಿತಿ, ಬರಗೂರು ನೇತೃತ್ವದ ಪರಿಷ್ಕರಣ ಸಮಿತಿ, ಇದಾದ ಬಳಿಕ ಉನ್ನತ ಮಟ್ಟದ ಪರಿಶೀಲನಾ ಸಮಿತಿ ಅಥವಾ ಅನುಮೋದನೆಗೆ ತಜ್ಞರ ಸಮಿತಿ ಇತ್ತು.

ಇಂದು

ಎಲ್ಲ ಪಠ್ಯಗಳನ್ನು ಒಂದೇ ಸಮಿತಿ ಪರಿಶೀಲಿಸಿದೆ. ಆ ಸಮಿತಿ ಮಾಡಿದ ಪರಿಶೀಲನೆಯನ್ನು ಅನುಮೋದನೆ ಮಾಡಿದ್ದು ಯಾರೆಂಬ ವಿವರಣೆಗಳು ಸಾರ್ವಜನಿಕವಾಗಿ ಲಭ್ಯವಿಲ್ಲ. ಅತ್ಯಂತ ಕಡಿಮೆ ಅವಧಿಯಲ್ಲಿ ಎಲ್ಲ ಪಠ್ಯಗಳನ್ನು ಪರಿಶೀಲಿಸಿ, ತರಾತುರಿಯಲ್ಲಿ ಕೆಲವು ಪಠ್ಯಗಳನ್ನು ಹೊಸದಾಗಿ ಸೇರಿಸಿ, ಹಲವು ಪಠ್ಯಗಳನ್ನು ತೆಗೆದುಹಾಕಲಾಗಿದೆ.


ಅಂದು

ಸಂವಿಧಾನದ ಆಶಯಗಳಾದ ಸಾಮಾಜಿಕ ನ್ಯಾಯ ಹಾಗೂ ಲಿಂಗ ಸಮಾನತೆಗೆ ಪಠ್ಯದಲ್ಲಿ ಆದ್ಯತೆ ನೀಡಲಾಯಿತು. 2005ರ ರಾಷ್ಟ್ರೀಯ ಪಠ್ಯಕ್ರಮ ಚೌಕಟ್ಟು ಅನುಸರಿಸಿ ಪಠ್ಯಪುಸ್ತಕ ರಚನೆ ಮಾಡಲಾಯಿತು.

ಇಂದು

ಲಿಂಗ ಸಮಾನತೆ, ಸಾಮಾಜಿಕ ನ್ಯಾಯವನ್ನು ಭಾಷಾ ಪಠ್ಯದಲ್ಲಿ ತುರಕಬಾರದು ಎಂದು ಸಮಿತಿ ಹೇಳಿದೆ. ಪಠ್ಯದ ಮೂಲಕ ಸಂವಿಧಾನ ಆಶಯಗಳನ್ನು ಕಲಿಸಬೇಕೆಂಬುದು ಪಠ್ಯಕ್ರಮ ಚೌಕಟ್ಟು ಸ್ಪಷ್ಟವಾಗಿ ತಿಳಿಸಿದರೂ ಅದನ್ನು ಉಲ್ಲಂಘಿಸಲಾಗಿದೆ.


ಅಂದು

272 ಜನರು ವಿವಿಧ ಸಮಿತಿಗಳಲ್ಲಿ ಪಾಲ್ಗೊಂಡಿದ್ದರು. ಕರ್ನಾಟಕದ ವೈವಿಧ್ಯತೆಯನ್ನೂ ಸಮಿತಿ ಒಳಗೊಂಡಿತ್ತು.

ಇಂದು

ಪರಿಶೀಲನೆಯ ಮುಖ್ಯ ಸಮಿತಿಯಲ್ಲಿ ಏಳು ಮಂದಿ ಇದ್ದು, ಬೆಂಗಳೂರು ಆಸುಪಾಸಿನ ಜಿಲ್ಲೆಯವರಾಗಿದ್ದಾರೆ. ಎಲ್ಲರೂ ಬ್ರಾಹ್ಮಣ ಸಮುದಾಯಕ್ಕೆ ಸೇರಿದವರಾಗಿದ್ದಾರೆ.


ಅಂದು

ಯಜ್ಞಗಳಲ್ಲಿ ಮಾಡಲಾಗುತ್ತಿದ್ದ ಆಹಾರದ ಪೋಲು, ವೇದ ಕಾಲದ ಡಂಬಾಚಾರಗಳಿಂದಾಗಿ ಹೊಸಧರ್ಮಗಳ ಉದಯ ಎಂದು ಹೇಳಲಾಗಿತ್ತು. ಈ ವಿಚಾರಗಳು ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ಬರಹಗಳಲ್ಲಿ ದಾಖಲಾಗಿವೆ.

ಇಂದು

ಯಜ್ಞಗಳನ್ನು ದಾನದ ಸಂಕೇತ ಎಂದು ಬಿಂಬಿಸುವ ಶತಾವಧಾನಿ ಗಣೇಶ್ ಅವರ ಪಠ್ಯವನ್ನು ಹತ್ತನೇ ತರಗತಿ ಪ್ರಥಮ ಭಾಷಾ ವಿಷಯವಾಗಿ ಇಡಲಾಗಿದೆ.


ಅಂದು

ಸಾಹಿತ್ಯ ಕ್ಷೇತ್ರ ವಿವಿಧ ಪ್ರಕಾರಗಳನ್ನು ಮಕ್ಕಳಿಗೆ ಪರಿಚಯ ಮಾಡಿಕೊಡುವ ನಿಟ್ಟಿನಲ್ಲಿ ಹತ್ತನೇ ತರಗತಿ ಪ್ರಥಮ ಭಾಷಾ ಪಠ್ಯವನ್ನು ರೂಪಿಸಲಾಗಿತ್ತು. ವೈಚಾರಿಕ ಚಿಂತಕ ಎ.ಎನ್‌.ಮೂರ್ತಿ ರಾವ್ ಅವರು ಬರೆದ ‘ಲಲಿತ ಪ್ರಬಂಧ’, ಸಾ.ರಾ.ಅಬೂಬುಕರ್‌ ಅವರ ‘ಕಥೆ’, ಲಂಕೇಶ್ ಅವರು ಅನುವಾದಿಸಿರುವ ‘ಕಾ‌ಲ್ಪನಿಕ ಕಥೆ’ಯನ್ನು ನೀಡಲಾಗಿತ್ತು.

ಇಂದು

10ನೇ ತರಗತಿ ಪಠ್ಯದಲ್ಲಿ ಈ ವೈವಿಧ್ಯತೆ ನಾಶವಾದಂತೆ ಕಾಣುತ್ತಿದೆ. ಭಾಷಣ ಹಾಗೂ ಬೋಧಪ್ರದ ಪಠ್ಯಗಳನ್ನು ನೀಡಲಾಗಿದೆ. ಇಂಥವುಗಳೇ ಹೆಚ್ಚಾಗಿವೆ. ಆರ್‌ಎಸ್‌ಎಸ್‌ ಸಂಸ್ಥಾಪಕ ಹೆಡಗೇವಾರ್‌ ಭಾಷಣ ‘ನಿಜವಾದ ಆದರ್ಶ ಪುರುಷ ಯಾರಾಗಬೇಕು?’, ಬನ್ನಂಜೆ ಗೋವಿಂದಾಚಾರ್ಯರ ‘ಶುಕನಾಸನ ಉಪದೇಶ’, ಶತವಾಧಾನಿ ಗಣೇಶ್ ಅವರು ಬರೆದಿರುವ ವೈದಿಕತೆಯನ್ನು ವೈಭವೀಕರಿಸುವ ‘ಭಾರತೀಯ ಶ್ರೇಷ್ಠ ಚಿಂತನೆಗಳು’ ಪಾಠಗಳು ಬೋಧಪ್ರಧವಾಗಿವೆ.


ಅಂದು

ಅಕ್ಷರದ ಅವ್ವ, ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಹೋರಾಡಿದ ಸಾವಿತ್ರಿಬಾಯಿ ಫುಲೆಯವರ ವಿವರಣೆಗಳನ್ನು ನೀಡಲಾಗಿತ್ತು. ಮಹಿಳಾ ಸಮಾಜ ಸುಧಾರಕಿಯರನ್ನು ಪರಿಚಯಿಸಲಾಯಿತು.

ಇಂದು

ಸಾವಿತ್ರಿಬಾಯಿ ಫುಲೆ ಕುರಿತ ವಿವರಗಳನ್ನು ತೆಗೆಯಲಾಗಿದೆ. ಅಕ್ಷರ ಮಾತೆಯ ವಿಚಾರಗಳಿಗೆ ವಿರುದ್ಧವಾಗಿರುವ ಬನ್ನಂಜೆಯವರ ಪಾಠಗಳನ್ನು ನೀಡಲಾಗಿದೆ. ‘ಕೆಟ್ಟ ನಡತೆಯ ಸಿರಿಯೆಂಬ ಹೆಣ್ಣು’ ಎಂಬ ಸಾಲನ್ನು ಬನ್ನಂಜೆ ಬರೆದಿದ್ದಾರೆ. (ವಿರೋಧಗಳು ಬಂದ ಮೇಲೆ ಹಣವನ್ನು ಹೆಣ್ಣಿಗೆ ಹೋಲಿಸಿರುವುದನ್ನು ತೆಗೆದು ಹಾಕಲಾಗಿದೆ. ಲೇಖಕರೊಬ್ಬರು ತೀರಿಹೋದ ಮೇಲೆ ಅವರ ಲೇಖನವನ್ನು ತಿದ್ದುವುದು ಎಷ್ಟು ಸರಿ ಎಂಬ ಪ್ರಶ್ನೆಯನ್ನು ವಿಮರ್ಶಕರು ಕೇಳಿದ್ದಾರೆ.)

ಇದನ್ನೂ ಓದಿರಿ: ಜನಸಾಮಾನ್ಯರನ್ನು ಕೆರಳಿಸಿದ ಪಠ್ಯಪುಸ್ತಕ ಪರಿಷ್ಕರಣೆ


ಅಂದು

ಸಂವಿಧಾನಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಬೌದ್ಧಧರ್ಮ‌ಕ್ಕೆ ಸೇರಿದ್ದು ಏಕೆಂಬ ವಿವರ ನೀಡಲಾಗಿತ್ತು.

ಇಂದು

ಸಂವಿಧಾನಶಿಲ್ಪಿ ಅಂಬೇಡ್ಕರ್‌ ಏಕೆ ಹಿಂದೂಧರ್ಮ ತ್ಯಜಿಸಿದರೆಂಬ ವಿವರ ಕಿತ್ತುಹಾಕಲಾಗಿದೆ.


ಅಂದು

ಬಸವಣ್ಣನವರ ಸಾಧನೆಯನ್ನು ಸರಿಯಾಗಿ ಚಿತ್ರಿಸಲಾಗಿದೆ.

ಇಂದು

ಬಸವಣ್ಣನವರ ಮೂಲವನ್ನು ತಿರುಚಲಾಗಿದೆ.


ಅಂದು

ಹತ್ತನೇ ತರಗತಿ ಪಠ್ಯದಲ್ಲಿತ್ತು ನಾರಾಯಣಗುರು ಹಾಗೂ ಪೆರಿಯಾರ್ ರಾಮಸ್ವಾಮಿ ನಾಯ್ಕರ್‌ ಪಾಠ.

ಇಂದು

ನಾರಾಯಣಗುರು, ಪೆರಿಯಾರ್‌ ಪಾಠ ತೆಗೆಯಲಾಗಿದೆ.


ಅಂದು

ಏಳನೇ ತರಗತಿಯಲ್ಲಿತ್ತು ‘ಭಕ್ತಿ ಪಂಥ ಮತ್ತು ಸೂಫಿ ಪಂಥ ಪರಂಪರೆ’ಯ ಪಾಠ.

ಇಂದು

ಈಗ ಈ ಪಾಠವನ್ನು ತೆಗೆಯಲಾಗಿದೆ.


ಅಂದು

ಪಠ್ಯದಲ್ಲಿತ್ತು ಶಾಂತಿ ಸಾರಿದ ಗೌತಮ ಬುದ್ದನ ಪದ್ಯ

ಬುದ್ದನ ಪದ್ಯ ತೆಗೆಯಲಾಗಿದೆ.


ಅಂದು

ಲೇಖಕರ ಮೂಲ ಪಠ್ಯವನ್ನು ಸಂಕ್ಷಿಪ್ತಗೊಳಿಸಿ ಪಠ್ಯವಾಗಿ ರೂಪಿಸಿದ್ದರು.

ಇಂದು

ಲೇಖಕರ ಮೂಲ ಪಠ್ಯದಲ್ಲಿನ ಲೇಖಕರ ಆಶಯಗಳನ್ನೇ ತಿದ್ದಲಾಗುತ್ತಿದೆ. ಉದಾಹರಣೆಗೆ ‘ಭಗವಾಧ್ವಜ’ ಎಂದಿರುವುದನ್ನು ‘ಧ್ವಜ’ ಎಂದು ತಿದ್ದಲಾಗಿದೆ. ಮುಂದಿನ ದಿನಗಳಲ್ಲಿ ಯಾರಾದರೂ ಡಾ.ಬಿ.ಆರ್‌.ಅಂಬೇಡ್ಕರ್‌, ಗಾಂಧೀಜಿ, ಕುವೆಂಪು ಅವರಂತಹ ಮಹಾನೀಯರ ಆಶಯವನ್ನು ತಿರುಚಬಹುದಲ್ಲ, ಎಂಬ ಪ್ರಶ್ನೆ ಮೂಡಿಬಂದಿದೆ.

(ಮುಂದುವರಿಯಲಿದೆ…)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...