Homeಕರ್ನಾಟಕಪಠ್ಯ ತಿರುಚೀಕರಣ ವಿವಾದ: ‘ಅಂದು’ ಮತ್ತು ‘ಇಂದು’ ಏನಾಗಿದೆ ಎಂದು ನೋಡೋಣ ಬನ್ನಿ!

ಪಠ್ಯ ತಿರುಚೀಕರಣ ವಿವಾದ: ‘ಅಂದು’ ಮತ್ತು ‘ಇಂದು’ ಏನಾಗಿದೆ ಎಂದು ನೋಡೋಣ ಬನ್ನಿ!

- Advertisement -
- Advertisement -

ಸಂಘ ಪರಿವಾರದ ಬರಹಗಾರ ರೋಹಿತ್‌ ಚಕ್ರತೀರ್ಥ ಅಧ್ಯಕ್ಷತೆಯಲ್ಲಿ ಪಠ್ಯಪುಸ್ತಕಗಳ ಪರಿಶೀಲನೆ ನಡೆದ ಬಳಿಕ ಹಲವಾರು ವಿಷಯಗಳು ಮುನ್ನಲೆಗೆ ಬಂದಿವೆ. ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಪಠ್ಯದಲ್ಲಿ ಹಲವು ಬದಲಾವಣೆಗಳನ್ನು ತಂದು ಮಕ್ಕಳಿಗೆ ಬೋಧಿಸಲು ಸರ್ಕಾರ ಹೊರಟಿದೆ.

ಜೊತೆಗೆ ಬರಗೂರು ಅವರ ಅಧ್ಯಕ್ಷತೆಯಲ್ಲಿ ಹಲವು ತಪ್ಪುಗಳಾಗಿವೆ ಎಂದು ಕೆಲವು ಸಂಘಟನೆಗಳು ಹೊರಟಿದ್ದು, ರೋಹಿತ್‌ ಚಕ್ರತೀರ್ಥ ಅವರ ವಜಾಕ್ಕೆ ಕೇಳಿ ಬರುತ್ತಿರುವ ಕೂಗನ್ನು ದಮನ ಮಾಡಲು ಯತ್ನಿಸುತ್ತಿವೆ. ಹೀಗಾಗಿ ಪಠ್ಯ ಪುಸ್ತಕ ಪರಿಶೀಲನೆಯಲ್ಲಿ ‘ಅಂದು’ ಮತ್ತು ‘ಇಂದು’ ಏನೇನು ಬದಲಾವಣೆಯಾಗಿದೆ ಎಂದು ಗಮನ ಹರಿಸುವ ಅಗತ್ಯವಿದೆ. ಅಂದಿನ ಪಠ್ಯ ಪುಸ್ತಕ ಪರಿಷ್ಕರಣ ಸಮಿತಿ ಹಾಗೂ ಇಂದಿನ ಪಠ್ಯಪುಸ್ತಕ ಪರಿಶೀಲನಾ ಸಮಿತಿಯ ನಡುವಿನ ವ್ಯತ್ಯಾಸಗಳನ್ನು ಇಲ್ಲಿ ಗುರುತಿಸುವ ಪ್ರಯತ್ನ ಮಾಡಲಾಗಿದೆ.

(ಸೂಚನೆ: ಈ ಪಟ್ಟಿಯೂ ಅಪೂರ್ಣವಾಗಿದ್ದು, ಗಮನಕ್ಕೆ ಬಂದಿರುವ ವಿಷಯಗಳನ್ನಷ್ಟೇ ಇಲ್ಲಿ ಪಟ್ಟಿ ಮಾಡಲಾಗಿದೆ.)
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others


ಅಂದು

ಬೆಂಗಳೂರು ವಿವಿ ಕನ್ನಡ ವಿಭಾಗದ ಪ್ರೊಫೆಸರ್, ಎರಡು ವಿವಿಗಳಿಂದ ಗೌರವ ಡಾಕ್ಟರೇಟ್, ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ, ಸಾಹಿತ್ಯ ಅಕಾಡೆಮಿ ಅಧ್ಯಕ್ಷ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ, ಅನೇಕ ಪ್ರಶಸ್ತಿಗಳನ್ನು ಪಡೆದ ಲೇಖಕರು, ಸಿನಿಮಾ ನಿರ್ದೇಶಕರು, ಕಥೆಗಾರರೂ ಆದ ಪ್ರೊ.ಬರಗೂರು ರಾಮಚಂದ್ರಪ್ಪ ಅವರ ಸರ್ವಾಧ್ಯಕ್ಷತೆಯಲ್ಲಿ ಪಠ್ಯಪುಸ್ತಕ ಪರಿಷ್ಕರಣೆಯನ್ನು ನಡೆಸಲಾಯಿತು.

ಇಂದು

ಬಲಪಂಥೀಯ ಬರಹಗಾರ, ಸಾಮಾಜಿಕ ಮಾಧ್ಯಮಗಳಲ್ಲಿ ಟ್ರೋಲ್‌ ಹಾಗೂ ಅಶ್ಲೀಲ ಭಾಷೆಯ ಮೂಲಕ ಟೀಕೆಗಳಿಗೆ ಒಳಗಾದ ರೋಹಿತ್‌ ಚಕ್ರತೀರ್ಥ ಅವರನ್ನು ಪಠ್ಯ ಪರಿಶೀಲನಾ ಸಮಿತಿಗೆ ಅಧ್ಯಕ್ಷರನ್ನಾಗಿ ಮಾಡಲಾಯಿತು. ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರ ಪ್ರಕಾರ ರೋಹಿತ್‌ ಚಕ್ರತೀರ್ಥ ಅವರು ಐಐಟಿ, ಸಿಇಟಿ ಪ್ರೊಫೆಸರ್‌. ಇದನ್ನು ಸ್ವತಃ ರೋಹಿತ್ ಚಕ್ರತೀರ್ಥ ಅವರೇ ಅಲ್ಲಗಳೆದಿದ್ದಾರೆ!


ಅಂದು

ಮೂರು ವರ್ಷಗಳ ಕಾಲ ಪಠ್ಯ ಪರಿಷ್ಕರಣೆ ನಡೆಯಿತು. 2014-15ರಲ್ಲಿ ಬಜೆಟ್‌ನಲ್ಲಿ ತಜ್ಞರ ಸಮಿತಿ ರಚಿಸಲು ಘೋಷಿಸಲಾಯಿತು. ಒಂದರಿಂದ ಹತ್ತನೇ ತರಗತಿಯವರೆಗೆ ಪಠ್ಯಪುಸ್ತಕಗಳ ಪರಿಷ್ಕರಣೆಗಾಗಿ 27 ಸಮಿತಿಗಳನ್ನು ರಚಿಸಲಾಯಿತು. 2017-18ನೇ ಶೈಕ್ಷಣಿಕ ವರ್ಷದಿಂದ ಹೊಸ ಪಠ್ಯ ಜಾರಿಯಾಯಿತು. ಪ್ರತಿ ಪಠ್ಯ ಪುಸ್ತಕಕ್ಕೂ ತಜ್ಞರ ನೇತೃತ್ವದಲ್ಲಿ ರಚನಾ ಸಮಿತಿ, ಬರಗೂರು ನೇತೃತ್ವದ ಪರಿಷ್ಕರಣ ಸಮಿತಿ, ಇದಾದ ಬಳಿಕ ಉನ್ನತ ಮಟ್ಟದ ಪರಿಶೀಲನಾ ಸಮಿತಿ ಅಥವಾ ಅನುಮೋದನೆಗೆ ತಜ್ಞರ ಸಮಿತಿ ಇತ್ತು.

ಇಂದು

ಎಲ್ಲ ಪಠ್ಯಗಳನ್ನು ಒಂದೇ ಸಮಿತಿ ಪರಿಶೀಲಿಸಿದೆ. ಆ ಸಮಿತಿ ಮಾಡಿದ ಪರಿಶೀಲನೆಯನ್ನು ಅನುಮೋದನೆ ಮಾಡಿದ್ದು ಯಾರೆಂಬ ವಿವರಣೆಗಳು ಸಾರ್ವಜನಿಕವಾಗಿ ಲಭ್ಯವಿಲ್ಲ. ಅತ್ಯಂತ ಕಡಿಮೆ ಅವಧಿಯಲ್ಲಿ ಎಲ್ಲ ಪಠ್ಯಗಳನ್ನು ಪರಿಶೀಲಿಸಿ, ತರಾತುರಿಯಲ್ಲಿ ಕೆಲವು ಪಠ್ಯಗಳನ್ನು ಹೊಸದಾಗಿ ಸೇರಿಸಿ, ಹಲವು ಪಠ್ಯಗಳನ್ನು ತೆಗೆದುಹಾಕಲಾಗಿದೆ.


ಅಂದು

ಸಂವಿಧಾನದ ಆಶಯಗಳಾದ ಸಾಮಾಜಿಕ ನ್ಯಾಯ ಹಾಗೂ ಲಿಂಗ ಸಮಾನತೆಗೆ ಪಠ್ಯದಲ್ಲಿ ಆದ್ಯತೆ ನೀಡಲಾಯಿತು. 2005ರ ರಾಷ್ಟ್ರೀಯ ಪಠ್ಯಕ್ರಮ ಚೌಕಟ್ಟು ಅನುಸರಿಸಿ ಪಠ್ಯಪುಸ್ತಕ ರಚನೆ ಮಾಡಲಾಯಿತು.

ಇಂದು

ಲಿಂಗ ಸಮಾನತೆ, ಸಾಮಾಜಿಕ ನ್ಯಾಯವನ್ನು ಭಾಷಾ ಪಠ್ಯದಲ್ಲಿ ತುರಕಬಾರದು ಎಂದು ಸಮಿತಿ ಹೇಳಿದೆ. ಪಠ್ಯದ ಮೂಲಕ ಸಂವಿಧಾನ ಆಶಯಗಳನ್ನು ಕಲಿಸಬೇಕೆಂಬುದು ಪಠ್ಯಕ್ರಮ ಚೌಕಟ್ಟು ಸ್ಪಷ್ಟವಾಗಿ ತಿಳಿಸಿದರೂ ಅದನ್ನು ಉಲ್ಲಂಘಿಸಲಾಗಿದೆ.


ಅಂದು

272 ಜನರು ವಿವಿಧ ಸಮಿತಿಗಳಲ್ಲಿ ಪಾಲ್ಗೊಂಡಿದ್ದರು. ಕರ್ನಾಟಕದ ವೈವಿಧ್ಯತೆಯನ್ನೂ ಸಮಿತಿ ಒಳಗೊಂಡಿತ್ತು.

ಇಂದು

ಪರಿಶೀಲನೆಯ ಮುಖ್ಯ ಸಮಿತಿಯಲ್ಲಿ ಏಳು ಮಂದಿ ಇದ್ದು, ಬೆಂಗಳೂರು ಆಸುಪಾಸಿನ ಜಿಲ್ಲೆಯವರಾಗಿದ್ದಾರೆ. ಎಲ್ಲರೂ ಬ್ರಾಹ್ಮಣ ಸಮುದಾಯಕ್ಕೆ ಸೇರಿದವರಾಗಿದ್ದಾರೆ.


ಅಂದು

ಯಜ್ಞಗಳಲ್ಲಿ ಮಾಡಲಾಗುತ್ತಿದ್ದ ಆಹಾರದ ಪೋಲು, ವೇದ ಕಾಲದ ಡಂಬಾಚಾರಗಳಿಂದಾಗಿ ಹೊಸಧರ್ಮಗಳ ಉದಯ ಎಂದು ಹೇಳಲಾಗಿತ್ತು. ಈ ವಿಚಾರಗಳು ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ಬರಹಗಳಲ್ಲಿ ದಾಖಲಾಗಿವೆ.

ಇಂದು

ಯಜ್ಞಗಳನ್ನು ದಾನದ ಸಂಕೇತ ಎಂದು ಬಿಂಬಿಸುವ ಶತಾವಧಾನಿ ಗಣೇಶ್ ಅವರ ಪಠ್ಯವನ್ನು ಹತ್ತನೇ ತರಗತಿ ಪ್ರಥಮ ಭಾಷಾ ವಿಷಯವಾಗಿ ಇಡಲಾಗಿದೆ.


ಅಂದು

ಸಾಹಿತ್ಯ ಕ್ಷೇತ್ರ ವಿವಿಧ ಪ್ರಕಾರಗಳನ್ನು ಮಕ್ಕಳಿಗೆ ಪರಿಚಯ ಮಾಡಿಕೊಡುವ ನಿಟ್ಟಿನಲ್ಲಿ ಹತ್ತನೇ ತರಗತಿ ಪ್ರಥಮ ಭಾಷಾ ಪಠ್ಯವನ್ನು ರೂಪಿಸಲಾಗಿತ್ತು. ವೈಚಾರಿಕ ಚಿಂತಕ ಎ.ಎನ್‌.ಮೂರ್ತಿ ರಾವ್ ಅವರು ಬರೆದ ‘ಲಲಿತ ಪ್ರಬಂಧ’, ಸಾ.ರಾ.ಅಬೂಬುಕರ್‌ ಅವರ ‘ಕಥೆ’, ಲಂಕೇಶ್ ಅವರು ಅನುವಾದಿಸಿರುವ ‘ಕಾ‌ಲ್ಪನಿಕ ಕಥೆ’ಯನ್ನು ನೀಡಲಾಗಿತ್ತು.

ಇಂದು

10ನೇ ತರಗತಿ ಪಠ್ಯದಲ್ಲಿ ಈ ವೈವಿಧ್ಯತೆ ನಾಶವಾದಂತೆ ಕಾಣುತ್ತಿದೆ. ಭಾಷಣ ಹಾಗೂ ಬೋಧಪ್ರದ ಪಠ್ಯಗಳನ್ನು ನೀಡಲಾಗಿದೆ. ಇಂಥವುಗಳೇ ಹೆಚ್ಚಾಗಿವೆ. ಆರ್‌ಎಸ್‌ಎಸ್‌ ಸಂಸ್ಥಾಪಕ ಹೆಡಗೇವಾರ್‌ ಭಾಷಣ ‘ನಿಜವಾದ ಆದರ್ಶ ಪುರುಷ ಯಾರಾಗಬೇಕು?’, ಬನ್ನಂಜೆ ಗೋವಿಂದಾಚಾರ್ಯರ ‘ಶುಕನಾಸನ ಉಪದೇಶ’, ಶತವಾಧಾನಿ ಗಣೇಶ್ ಅವರು ಬರೆದಿರುವ ವೈದಿಕತೆಯನ್ನು ವೈಭವೀಕರಿಸುವ ‘ಭಾರತೀಯ ಶ್ರೇಷ್ಠ ಚಿಂತನೆಗಳು’ ಪಾಠಗಳು ಬೋಧಪ್ರಧವಾಗಿವೆ.


ಅಂದು

ಅಕ್ಷರದ ಅವ್ವ, ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಹೋರಾಡಿದ ಸಾವಿತ್ರಿಬಾಯಿ ಫುಲೆಯವರ ವಿವರಣೆಗಳನ್ನು ನೀಡಲಾಗಿತ್ತು. ಮಹಿಳಾ ಸಮಾಜ ಸುಧಾರಕಿಯರನ್ನು ಪರಿಚಯಿಸಲಾಯಿತು.

ಇಂದು

ಸಾವಿತ್ರಿಬಾಯಿ ಫುಲೆ ಕುರಿತ ವಿವರಗಳನ್ನು ತೆಗೆಯಲಾಗಿದೆ. ಅಕ್ಷರ ಮಾತೆಯ ವಿಚಾರಗಳಿಗೆ ವಿರುದ್ಧವಾಗಿರುವ ಬನ್ನಂಜೆಯವರ ಪಾಠಗಳನ್ನು ನೀಡಲಾಗಿದೆ. ‘ಕೆಟ್ಟ ನಡತೆಯ ಸಿರಿಯೆಂಬ ಹೆಣ್ಣು’ ಎಂಬ ಸಾಲನ್ನು ಬನ್ನಂಜೆ ಬರೆದಿದ್ದಾರೆ. (ವಿರೋಧಗಳು ಬಂದ ಮೇಲೆ ಹಣವನ್ನು ಹೆಣ್ಣಿಗೆ ಹೋಲಿಸಿರುವುದನ್ನು ತೆಗೆದು ಹಾಕಲಾಗಿದೆ. ಲೇಖಕರೊಬ್ಬರು ತೀರಿಹೋದ ಮೇಲೆ ಅವರ ಲೇಖನವನ್ನು ತಿದ್ದುವುದು ಎಷ್ಟು ಸರಿ ಎಂಬ ಪ್ರಶ್ನೆಯನ್ನು ವಿಮರ್ಶಕರು ಕೇಳಿದ್ದಾರೆ.)

ಇದನ್ನೂ ಓದಿರಿ: ಜನಸಾಮಾನ್ಯರನ್ನು ಕೆರಳಿಸಿದ ಪಠ್ಯಪುಸ್ತಕ ಪರಿಷ್ಕರಣೆ


ಅಂದು

ಸಂವಿಧಾನಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಬೌದ್ಧಧರ್ಮ‌ಕ್ಕೆ ಸೇರಿದ್ದು ಏಕೆಂಬ ವಿವರ ನೀಡಲಾಗಿತ್ತು.

ಇಂದು

ಸಂವಿಧಾನಶಿಲ್ಪಿ ಅಂಬೇಡ್ಕರ್‌ ಏಕೆ ಹಿಂದೂಧರ್ಮ ತ್ಯಜಿಸಿದರೆಂಬ ವಿವರ ಕಿತ್ತುಹಾಕಲಾಗಿದೆ.


ಅಂದು

ಬಸವಣ್ಣನವರ ಸಾಧನೆಯನ್ನು ಸರಿಯಾಗಿ ಚಿತ್ರಿಸಲಾಗಿದೆ.

ಇಂದು

ಬಸವಣ್ಣನವರ ಮೂಲವನ್ನು ತಿರುಚಲಾಗಿದೆ.


ಅಂದು

ಹತ್ತನೇ ತರಗತಿ ಪಠ್ಯದಲ್ಲಿತ್ತು ನಾರಾಯಣಗುರು ಹಾಗೂ ಪೆರಿಯಾರ್ ರಾಮಸ್ವಾಮಿ ನಾಯ್ಕರ್‌ ಪಾಠ.

ಇಂದು

ನಾರಾಯಣಗುರು, ಪೆರಿಯಾರ್‌ ಪಾಠ ತೆಗೆಯಲಾಗಿದೆ.


ಅಂದು

ಏಳನೇ ತರಗತಿಯಲ್ಲಿತ್ತು ‘ಭಕ್ತಿ ಪಂಥ ಮತ್ತು ಸೂಫಿ ಪಂಥ ಪರಂಪರೆ’ಯ ಪಾಠ.

ಇಂದು

ಈಗ ಈ ಪಾಠವನ್ನು ತೆಗೆಯಲಾಗಿದೆ.


ಅಂದು

ಪಠ್ಯದಲ್ಲಿತ್ತು ಶಾಂತಿ ಸಾರಿದ ಗೌತಮ ಬುದ್ದನ ಪದ್ಯ

ಬುದ್ದನ ಪದ್ಯ ತೆಗೆಯಲಾಗಿದೆ.


ಅಂದು

ಲೇಖಕರ ಮೂಲ ಪಠ್ಯವನ್ನು ಸಂಕ್ಷಿಪ್ತಗೊಳಿಸಿ ಪಠ್ಯವಾಗಿ ರೂಪಿಸಿದ್ದರು.

ಇಂದು

ಲೇಖಕರ ಮೂಲ ಪಠ್ಯದಲ್ಲಿನ ಲೇಖಕರ ಆಶಯಗಳನ್ನೇ ತಿದ್ದಲಾಗುತ್ತಿದೆ. ಉದಾಹರಣೆಗೆ ‘ಭಗವಾಧ್ವಜ’ ಎಂದಿರುವುದನ್ನು ‘ಧ್ವಜ’ ಎಂದು ತಿದ್ದಲಾಗಿದೆ. ಮುಂದಿನ ದಿನಗಳಲ್ಲಿ ಯಾರಾದರೂ ಡಾ.ಬಿ.ಆರ್‌.ಅಂಬೇಡ್ಕರ್‌, ಗಾಂಧೀಜಿ, ಕುವೆಂಪು ಅವರಂತಹ ಮಹಾನೀಯರ ಆಶಯವನ್ನು ತಿರುಚಬಹುದಲ್ಲ, ಎಂಬ ಪ್ರಶ್ನೆ ಮೂಡಿಬಂದಿದೆ.

(ಮುಂದುವರಿಯಲಿದೆ…)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....