Homeಕರ್ನಾಟಕಪಠ್ಯ ವಾಪಸಾತಿ: ಕೇಸರೀಕರಣ ವಿರುದ್ಧದ ಸಮರಕ್ಕೆ ಮೂಡ್ನಾಕೂಡು, ಈರಪ್ಪ ಕಂಬಳಿ ಸೇರ್ಪಡೆ

ಪಠ್ಯ ವಾಪಸಾತಿ: ಕೇಸರೀಕರಣ ವಿರುದ್ಧದ ಸಮರಕ್ಕೆ ಮೂಡ್ನಾಕೂಡು, ಈರಪ್ಪ ಕಂಬಳಿ ಸೇರ್ಪಡೆ

- Advertisement -
- Advertisement -

ಮಕ್ಕಳ ಭವಿಷ್ಯವನ್ನು ನಿರ್ಧರಿಸುವ ಪಠ್ಯಪುಸ್ತಕಗಳನ್ನು ಕೇಸರೀಕರಣ ಮಾಡಿರುವ ವಿರುದ್ಧ ರಾಜ್ಯದಲ್ಲಿ ಎದ್ದಿರುವ ಆಕ್ರೋಶ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರ ಪ್ರಕಾರ ಐಐಟಿ, ಸಿಇಟಿ ಪ್ರೊಫೆಸರ್‌ ಆಗಿರುವ ರೋಹಿತ್ ಚಕ್ರತೀರ್ಥ ನೇತೃತ್ವದ ಪಠ್ಯಪುಸ್ತಕ ಪರಿಶೀಲನಾ ಸಮಿತಿ ಮಾಡಿರುವ ಎಡವಟ್ಟುಗಳಿಗೆ ಎಲ್ಲ ವಲಯಗಳಿಂದ ವಿರೋಧ ವ್ಯಕ್ತವಾಗುತ್ತಿದ್ದು, ಪಠ್ಯಪುಸ್ತಕದಿಂದ ತಮ್ಮ ಪಾಠಗಳನ್ನು ಲೇಖಕರು ವಾಪಸ್‌ ಪಡೆಯುತ್ತಿರುವುದು ಮುಂದುವರಿದಿದೆ. ಈ ಸಾಲಿಗೆ ಈಗ ಖ್ಯಾತ ಕವಿ ಮೂಡ್ನಾಕೂಡು ಚಿನ್ನಸ್ವಾಮಿ, ಲೇಖಕ ಈರಪ್ಪ ಎಂ.ಕಂಬಳಿ ಸೇರ್ಪಡೆಯಾಗಿದ್ದಾರೆ.

ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರಿಗೆ ಪತ್ರ ಬರೆದಿರುವ ಮೂಡ್ನಾಕೂಡು ಅವರು ತಮ್ಮ ಕಾರಣವನ್ನು ಸ್ಪಷ್ಟವಾಗಿ ತಿಳಿಸಿದ್ದಾರೆ. ಪಠ್ಯಪುಸ್ತಕಗಳ ಕೇಸರೀಕರಣ ವಿರೋಧಿಸಿ ನಿರ್ಧಾರ ತೆಗೆದುಕೊಂಡಿರುವುದಾಗಿ ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others


ಮೂಡ್ನಾಕೂಡು ಪತ್ರದಲ್ಲೇನಿದೆ?

ಕರ್ನಾಟಕ ಘನ ಸರ್ಕಾರವು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಪಠ್ಯಪುಸ್ತಕಗಳ ಪರಿಷ್ಕರಣೆಗೆ ಸಮಿತಿಯನ್ನು ನೇಮಿಸಿ ಶಾಲಾ ಪಠ್ಯಗಳನ್ನು ಕೇಸರೀಕರಣಗೊಳಿಸುತ್ತಿರುವ ಬಗ್ಗೆ ಕನ್ನಡ ಸಾರಸ್ವತ ಲೋಕ ವಿಚಲಿತಗೊಂಡಿದೆ. ಬಸವಣ್ಣನವರ ಕುರಿತು ತಪ್ಪು ಮಾಹಿತಿ ನೀಡುವುದು, ಮಹಾನ್ ದಾರ್ಶನಿಕ ಕವಿ ಕುವೆಂಪು ಅವರನ್ನು ಅವಮಾನಿಸುವುದು ಕನ್ನಡ ಸಾಂಸ್ಕೃತಿಕ ಲೋಕಕ್ಕೆ ಮಾಡುವ ಅಪಚಾರ.

ಜಾತಿ ವ್ಯವಸ್ಥೆಯಿಂದ ಕಲುಷಿತಗೊಂಡಿರುವ ನಮ್ಮ ಸಮಾಜವನ್ನು ಜಾತ್ಯತೀತತೆಯಿಂದ ಮಾತ್ರ ಸರಿಪಡಿಸಲು ಸಾಧ್ಯ. ಸ್ವಸ್ಥ ಸಮಾಜಕ್ಕಾಗಿ ಮುಂದಿನ ಪೀಳಿಗೆಯನ್ನು ತಯಾರು ಮಾಡುವ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಕ್ಷೇತ್ರ ಅನವಶ್ಯಕ ವಿದ್ಯಮಾನಗಳಿಂದ ದಾಳಿಗೊಳಗಾಗಿರುವುದು ವಿಷಾದನೀಯ. ಪ್ರಗತಿಪರತೆಯನ್ನು ಪ್ರತಿಪಾದಿಸುವವರನ್ನು ಎಡಪಂಥೀಯರು ಎಂದು ದೂರುವುದು, ದೂರ ಮಾಡುವುದು ಆರೋಗ್ಯಕರ ಸಮಾಜದ ಲಕ್ಷಣವಲ್ಲ.

ಈ ಹಿನ್ನೆಲೆಯಲ್ಲಿ ಐದನೇ ತರಗತಿಗೆ ಪಠ್ಯವಾಗಿರುವ “ನನ್ನ ಕವಿತೆಗೆ” ಎಂಬ ಕವಿತೆಗೆ ನೀಡಿರುವ ನನ್ನ ಅನುಮತಿಯನ್ನು ಈ ಮೂಲಕ ಹಿಂಪಡೆಯುತ್ತಿದ್ದೇನೆ.

  • ಮೂಡ್ನಾಕೂಡು ಚಿನ್ನಸ್ವಾಮಿ

***

ಸಚಿವ ಬಿ.ಸಿ.ನಾಗೇಶ್‌ ಅವರಿಗೆ ಈರಪ್ಪ ಎಂ.ಕಂಬಳಿ ಅವರ ಪತ್ರದಲ್ಲೇನಿದೆ?

ಪಠ್ಯಪುಸ್ತಕ ಪರಿಷ್ಕರಣೆಗೆ ಸಂಬಂಧಿಸಿದಂತೆ ರಾಜ್ಯದಲ್ಲಿ ಇತ್ತೀಚೆಗೆ ನಡೆಯುತ್ತಿರುವ ಅನಾರೋಗ್ಯಕರ ಬೆಳವಣಿಗೆಯನ್ನು ಕಂಡ ನನಗೆ ತೀವ್ರ ಅಸಮಾಧಾನವಾಗಿದೆ. ಈ ಕಾರಣಕ್ಕೆ ಕಳೆದ ಸಾಲಿನಲ್ಲಿ ಹತ್ತನೆಯ ತರಗತಿಯ ನುಡಿ ಕನ್ನಡ ತೃತೀಯ ಭಾಷಾ ಕನ್ನಡ ಪಠ್ಯಪುಸ್ತಕದಲ್ಲಿ ‘ಹೀಗೊಂದು ಟಾಪ್ ಪ್ರಯಾಣ’ ಶೀರ್ಷಿಕೆಯ ನನ್ನ ಲಲಿತ ಪ್ರಬಂಧವನ್ನು ಮುಂದುವರಿಸಬಾರದೆಂದೂ, ಈ ಹಿಂದೆ ನೀಡಿದ್ದ ನನ್ನ ಅನುಮತಿಯನ್ನು ಈ ಮೂಲಕ ವಾಪಸ್‌ ಪಡೆದಿರುವುದನ್ನು ತಮ್ಮ ಗಮನಕ್ಕೆ ತರುತ್ತಿದ್ದೇನೆ.

  • ಈರಪ್ಪ ಎಂ.ಕಂಬಳಿ

ನಾಡಿನ ಸಾಕ್ಷಿಪ್ರಜ್ಞೆಯಾಗಿರುವ ದೇವನೂರ ಮಹಾದೇವ ಅವರು ‘ಎದೆಗೆ ಬಿದ್ದ ಅಕ್ಷರ’ ಪಾಠವನ್ನು ಹತ್ತನೇ ತರಗತಿ ಕನ್ನಡ ಪಠ್ಯದಿಂದ ವಾಪಸ್ ಪಡೆಯುವ ಮೂಲಕ ಮೊದಲಿಗೆ ಪ್ರತಿರೋಧವನ್ನು ದಾಖಲಿಸಿದರು. ನಂತರ ವಿದ್ವಾಂಸರಾದ ಜಿ.ರಾಮಕೃಷ್ಣ ಅವರು ‘ಭಗತ್‌ಸಿಂಗ್‌’ ಪಾಠವನ್ನು ವಾಪಸ್ ಪಡೆದರು. 9ನೇ ತರಗತಿಯ ದ್ವಿತೀಯ ಭಾಷಾ ಪಠ್ಯವಾಗಿದ್ದ “ಮನೆಗೆಲಸದ ಹೆಣ್ಣು ಮಗಳು” ಪದ್ಯವನ್ನು ಪ್ರೊ.ಎಸ್.ಜಿ.ಸಿದ್ದರಾಮಯ್ಯ ವಾಪಸ್ ಪಡೆದರು. ಇದೇ ರೀತಿಯಲ್ಲಿ ಪ್ರತಿರೋಧವನ್ನು ವ್ಯಕ್ತಪಡಿಸಿರುವ ಮೂಡ್ನಾಕೂಡು ಚಿನ್ನಾಸ್ವಾಮಿ ಹಾಗೂ ಮೂಡ್ನಾಕೂಡು ಚಿನ್ನಸ್ವಾಮಿ ತಮ್ಮ ನಿಲುವನ್ನು ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿರಿ: ಸುಮ್ಮನೆ ಬಿಟ್ಟರೆ ರಾಷ್ಟ್ರಗೀತೆಗೂ ಅವಮಾನ ಮಾಡಬಹುದು: ಪಟ್ಟು ಬದಲಿಸದ ಚುಂಚನಗಿರಿ ಶ್ರೀಗಳು

ರಾಜೀನಾಮೆ ಮೂಲಕ ಪ್ರತಿರೋಧ

ರಾಷ್ಟ್ರಕವಿ ಕುವೆಂಪು ಮತ್ತು ರಾಷ್ಟ್ರಗೀತೆಯನ್ನು ನಿಂದಿಸಿದವರ ಮೇಲೆ ಕಾನೂನು ಕ್ರಮಕೈಗೊಳ್ಳದೆ, ಅವರಿಗೆ ಜವಬ್ದಾರಿಯುತ ಸ್ಥಾನಗಳನ್ನು ನೀಡಿದ ಸರ್ಕಾರದ ನಡೆಯನ್ನು ಪ್ರತಿಭಟಿಸಿ ಕುವೆಂಪು ಪ್ರತಿಷ್ಠಾನದ ಅಧ್ಯಕ್ಷ ಸ್ಥಾನಕ್ಕೆ ಹಿರಿಯ ಸಾಹಿತಿ, ನಾಡೋಜ ಡಾ. ಹಂಪ ನಾಗರಾಜಯ್ಯ ಅವರು ಸೋಮವಾರ ರಾಜೀನಾಮೆ ಘೋಷಿಸಿದರು.

ಶಿಕ್ಷಣ, ಸಂಸ್ಕೃತಿ, ಸಾಮಾಜಿಕ ಮತ್ತು ರಾಜಕೀಯ ಕ್ಷೇತ್ರಗಳ ಮೇಲೆ ನಡೆಯುತ್ತಿರುವ ಅಸಂವಿಧಾನಿಕ ದಬ್ಬಾಳಿಕೆಗಳನ್ನು ಪ್ರತಿಭಟಿಸಿ ‘ರಾಷ್ಟ್ರಕವಿ ಡಾ. ಜಿಎಸ್‌ ಶಿವರುದ್ರಪ್ಪ ಪ್ರತಿಷ್ಠಾನ’ದ ಅಧ್ಯಕ್ಷರು ಮತ್ತು ಮೂವರು ಸದಸ್ಯರು ಸೋಮವಾರ ರಾಜೀನಾಮೆ ನೀಡಿದರು. ಪ್ರತಿಷ್ಠಾನದ ಅಧ್ಯಕ್ಷರಾಗಿರುವ ಪ್ರೊಫೆಸರ್‌ ಎಸ್‌.ಜಿ. ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಗೆ ಪತ್ರ ಬರೆದಿದ್ದು, ಪ್ರತಿಷ್ಠಾನದ ಸದಸ್ಯರುಗಳಾದ ಡಾ. ಎಚ್‌.ಎಸ್‌. ರಾಘವೇಂದ್ರ ರಾವ್‌, ಡಾ. ಚಂದ್ರ ಶೇಖರ ನಂಗಲಿ, ಡಾ. ನಟರಾಜ ಬೂದಾಳು ಅವರು ಕೂಡಾ ರಾಜೀನಾಮೆಗೆ ನೀಡುವುದಾಗಿ ಪತ್ರದಲ್ಲಿ ಹೇಳಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ದಾಳಿ ಮುಂದುವರಿಸುವ ಸೂಚನೆ ನೀಡಿದ ಟ್ರಂಪ್ : ಇರಾನ್‌ನಿಂದ ತೀವ್ರ ಪ್ರತಿದಾಳಿಯ ಎಚ್ಚರಿಕೆ

ಅಮೆರಿಕದ ಸಹಯೋಗದೊಂದಿಗೆ ಇಸ್ರೇಲ್ ಶನಿವಾರ (ಫೆ.28) ಇರಾನ್‌ ಮೇಲೆ ಕ್ಷಿಪಣಿ ದಾಳಿ ನಡೆಸಿದೆ. ಇದರಿಂದ ಮಧ್ಯಪ್ರಾಚ್ಯದಲ್ಲಿ ಯುದ್ಧ ಪ್ರಾರಂಭವಾಗುವಾಗ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ. ಇಸ್ರೇಲ್‌ ಇರಾನ್‌ನ ರಾಜಧಾನಿ ಟೆಹ್ರಾನ್‌ ಸೇರಿದಂತೆ ದೇಶದ ಹಲವು ಸ್ಥಳಗಳ...

ಅಮೆರಿಕ ಅಣತಿಯಂತೆ ಇರಾನ್ ಮೇಲೆ ಇಸ್ರೇಲ್ ದಾಳಿ : ಟೆಹ್ರಾನ್‌ನ ಹಲವೆಡೆ ಭಾರೀ ಸ್ಪೋಟ

ಇರಾನ್ ಮೇಲೆ ಇಸ್ರೇಲ್ ಶನಿವಾರ (ಫೆ.28) ವೈಮಾನಿಕ ದಾಳಿ ನಡೆಸಿರುವುದಾಗಿ ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಈ ದಾಳಿಯನ್ನು ಇಸ್ರೇಲ್ 'ಪೂರ್ವಭಾವಿ ದಾಳಿ' ಎಂದು ಕರೆದಿದೆ. ಇಂದು ಬೆಳಿಗ್ಗಿನ ಹೇಳಿಕೆಯೊಂದರಲ್ಲಿ, ಇಸ್ರೇಲ್ ರಕ್ಷಣಾ ಸಚಿವ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ನಟ ದಿಲೀಪ್, ಇತರರ ಖುಲಾಸೆ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ ಕೇರಳ ಸರ್ಕಾರ

ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ (2017ರ ಪ್ರಕರಣ) ಮಲಯಾಳಂನ ಪ್ರಮುಖ ನಟ ದಿಲೀಪ್ ಅವರನ್ನು ಎಲ್ಲಾ ಆರೋಪಗಳಿಂದ ಮುಕ್ತಗೊಳಿಸಿದ ಸೆಷನ್ಸ್ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಕೇರಳ ಸರ್ಕಾರ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಪ್ರಕರಣದ...

‘ದಿ ಕೇರಳ ಸ್ಟೋರಿ-2’ ಬಿಡುಗಡೆಗೆ ವಿಧಿಸಿದ್ದ ತಡೆಯಾಜ್ಞೆ ತೆರವು

'ದಿ ಕೇರಳ ಸ್ಟೋರಿ-2 : ಗೋಸ್ ಬಿಯಾಂಡ್' ಚಿತ್ರದ ಬಿಡುಗಡೆಗೆ ವಿಧಿಸಲಾಗಿದ್ದ ಮಧ್ಯಂತರ ತಡೆಯಾಜ್ಞೆಯನ್ನು ಕೇರಳ ಹೈಕೋರ್ಟ್ ವಿಭಾಗೀಯ ಪೀಠ ಶುಕ್ರವಾರ (ಫೆ.27) ತೆರವುಗೊಳಿಸಿದೆ. 'ಕೋಮು ಸಾಮರಸ್ಯ ಕದಡುವ ಸಾಧ್ಯತೆ'ಯನ್ನು ಉಲ್ಲೇಖಿಸಿ ನ್ಯಾಯಮೂರ್ತಿ ಬೆಚು...

‘ದೆಹಲಿಯಲ್ಲಿ ಮತ್ತೆ ಚುನಾವಣೆ ನಡೆಸಿ; ಬಿಜೆಪಿ 10ಕ್ಕಿಂತ ಹೆಚ್ಚು ಸ್ಥಾನ ಗೆದ್ದರೆ ರಾಜಕೀಯ ತ್ಯಜಿಸುತ್ತೇನೆ’: ಕೇಜ್ರಿವಾಲ್ ಸವಾಲು

"ದೆಹಲಿಯಲ್ಲಿ ಮತ್ತೆ ಚುನಾವಣೆ ನಡೆಸಿ, ಬಿಜೆಪಿ ಹತ್ತಕ್ಕಿಂತ ಹೆಚ್ಚು ಸ್ಥಾನಗಳನ್ನು ಗೆದ್ದರೆ ನಾನು ರಾಜಕೀಯ ತ್ಯಜಿಸುತ್ತೇನೆ" ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಆಮ್‌ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ....

ಚನ್ನರಾಯಪಟ್ಟಣ| ಭೂಸ್ವಾಧೀನ ವಿರುದ್ಧ ಗೆದ್ದ ರೈತರಿಂದ ‘ಭೂಮಿ ಹಬ್ಬ’ ಸಂಭ್ರಮ: ಹೋರಾಟದ ಒಡನಾಡಿಗಳಿಗೆ ಗೌರವ ಸಮರ್ಪಣೆ

ದೇವನಹಳ್ಳಿಯ ಚನ್ನರಾಯಪಟ್ಟಣದ ಹೋಬಳಿಯ 13 ಹಳ್ಳಿಗಳ 1,777 ಎಕರೆ ಕೃಷಿ ಭೂಮಿಯನ್ನು ಉಳಿಸಿಕೊಳ್ಳಲು ರೈತರು ನಡೆಸಿದ ಸುದೀರ್ಘ ನಾಲ್ಕು ವರ್ಷಗಳ ಸತ್ಯಾಗ್ರಹಕ್ಕೆ ಐತಿಹಾಸಿಕ ಜಯ ಲಭಿಸಿದ ಹಿನ್ನಲೆಯಲ್ಲಿ, ಭೂಸ್ವಾದೀನ ವಿರೋಧಿ ಹೋರಾಟ ಸಮಿತಿಯು...

ಅಬಕಾರಿ ಹಗರಣದಲ್ಲಿ ಕೇಜ್ರಿವಾಲ್ ಮತ್ತು ಇತರರು ಖುಲಾಸೆ: ದೆಹಲಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ ಸಿಬಿಐ

ಮದ್ಯ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರರನ್ನು ಖುಲಾಸೆಗೊಳಿಸಿದ ವಿಶೇಷ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಸಿಬಿಐ ದೆಹಲಿ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದೆ ಎಂದು...

ಕಾಂಗ್ರೆಸ್ ಶಾಸಕ ಸುಬ್ಬಾರೆಡ್ಡಿ ಚುನಾವಣೆ ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ

ನವದೆಹಲಿ: 2023ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಕ್ಷೇತ್ರದಿಂದ ಕಾಂಗ್ರೆಸ್ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಅವರ ಆಯ್ಕೆಯನ್ನು ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್‌ನ ತೀರ್ಪನ್ನು ಸುಪ್ರೀಂ ಕೋರ್ಟ್ ಶುಕ್ರವಾರ ತಡೆಹಿಡಿದಿದೆ. ಭಾರತದ ಮುಖ್ಯ...

ಹಾಜರಾತಿ ಆಧಾರದ ಮೇಲೆ ಪರೀಕ್ಷಾ ನಿಷೇಧ ವಿರೋಧಿಸಿ ಎಎಂಯು ಎಂಜಿನಿಯರಿಂಗ್ ವಿದ್ಯಾರ್ಥಿಗಳಿಂದ ಪ್ರತಿಭಟನೆ; ಬಂಧನ, ಹಲ್ಲೆ ಆರೋಪ 

ಕಡಿಮೆ ಹಾಜರಾತಿ ಕಾರಣ ಸೆಮಿಸ್ಟರ್ ಪರೀಕ್ಷೆಗಳಿಂದ ನಿಷೇಧಿಸಲ್ಪಟ್ಟಿದ್ದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ನಂತರ, ವಿಶ್ವವಿದ್ಯಾಲಯದ ಪ್ರೊಕ್ಟೋರಿಯಲ್ ತಂಡವು ಹಲವಾರು ಅಂತಿಮ ವರ್ಷದ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದಿದೆ ಎಂದು ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯದ (AMU)...

ವಿಧಾನಸಭಾ ಚುನಾವಣೆಗೂ ಮುನ್ನ ಎಐಎಡಿಎಂಕೆಯಿಂದ ಉಚ್ಚಾಟನೆಗೊಂಡ ಮಾಜಿ ಸಿಎಂ ಪನ್ನೀರ್‌ಸೆಲ್ವಂ, ಪ್ರತಿಸ್ಪರ್ಧಿ ಡಿಎಂಕೆ ಪಕ್ಷಕ್ಕೆ ಸೇರ್ಪಡೆ

ಮೂರು ಬಾರಿ ತಮಿಳುನಾಡು ಮುಖ್ಯಮಂತ್ರಿ ಮತ್ತು ಜೆ ಜಯಲಲಿತಾ ಅವರ ದೀರ್ಘಕಾಲದ ಸಹಾಯಕರಾಗಿದ್ದ ಪನ್ನೀರ್‌ಸೆಲ್ವಂ ಅವರನ್ನು ಎಡಪ್ಪಾಡಿ ಕೆ ಪಳನಿಸ್ವಾಮಿ (ಇಪಿಎಸ್) ಅವರೊಂದಿಗಿನ ತೀವ್ರ ಅಧಿಕಾರ ಹೋರಾಟದ ನಂತರ 2022 ರಲ್ಲಿ ಎಐಎಡಿಎಂಕೆಯಿಂದ...