Homeಮುಖಪುಟಯಾವುದೇ ರಾಜಕೀಯ ಉದ್ದೇಶ ಇಲ್ಲದೇ ಪಠ್ಯಪುಸ್ತಕ ಬದಲಾವಣೆ ಆಗಲಿದೆ: ಮಧು ಬಂಗಾರಪ್ಪ

ಯಾವುದೇ ರಾಜಕೀಯ ಉದ್ದೇಶ ಇಲ್ಲದೇ ಪಠ್ಯಪುಸ್ತಕ ಬದಲಾವಣೆ ಆಗಲಿದೆ: ಮಧು ಬಂಗಾರಪ್ಪ

- Advertisement -
- Advertisement -

ಪಠ್ಯ ಪುಸ್ತಕ ಪೂರ್ಣ ಪರಿಷ್ಕರಣೆ ಆಗಲಿದೆ. ಬಿಜೆಪಿಯವರು ಪಠ್ಯವನ್ನು ಬದಲಿಸಿದ್ದರು. ನಾವು ತುರ್ತಾಗಿ ಸ್ವಲ್ಪ ಬದಲಾವಣೆ ಮಾಡಿ ಮೊದಲು ಇದ್ದಂತೆ ತಂದಿದ್ದೇವೆ. ಮುಂದಿನ ವರ್ಷ ಮಕ್ಕಳಿಗೆ ಅನುಕೂಲವಾಗುವಂತೆ ಬದಲಾಯಿಸುತ್ತೇವೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

ಈ ಬಗ್ಗೆ ಮಂಗಳೂರಿನಲ್ಲಿ ಮಾತನಾಡಿದ ಅವರು, ”ನಾನು ಅಧಿಕಾರಕ್ಕೆ ಬಂದ ಕೂಡಲೇ ಪಠ್ಯ ಪುಸ್ತಕ ಪರಿಷ್ಕರಣೆ ಮಾಡಿದ್ದೇನೆ. ಮಕ್ಕಳ ಭವಿಷ್ಯಕ್ಕೆ ಒಳ್ಳೆದಾಗಲಿ ಎಂದು ಈ ತೀರ್ಮಾನ ಮಾಡಲಾಗಿದೆ. ಇದರಲ್ಲಿ ಬಿಜೆಪಿಯವರು ಹೇಳುವ ಯಾವುದೇ ರಾಜಕೀಯ ಇಲ್ಲ. ಪಠ್ಯ ಪರಿಷ್ಕರಣೆ ವಿಚಾರವಾಗಿ ತಜ್ಞರ ಸಮಿತಿಯ ಸಹಾಯ ಪಡೆದು ಅವಶ್ಯಕತೆ ಇದ್ದಲ್ಲಿ ಬದಲಾವಣೆ ಮಾಡುತ್ತೇವೆ. ಯಾವುದೇ ರಾಜಕೀಯ ಉದ್ದೇಶ ಇಲ್ಲದೇ ಬದಲಾವಣೆ ಆಗಲಿದೆ. ಮುಖ್ಯಮಂತ್ರಿಗಳ ಸಲಹೆ ಪಡೆದು ಅವರ ಸಹಕಾರದಿಂದ ಎಲ್ಲವೂ ಆಗಲಿದೆ. ಮಕ್ಕಳಿಗೆ ಉತ್ತಮ ಮತ್ತು ತಿಳುವಳಿಕೆಯ ಪಠ್ಯಗಳು ಇರಬೇಕು” ಎಂದರು.

”ಬಿಜೆಪಿಯವರು ಕಾಂಗ್ರೆಸ್ ಗ್ಯಾರಂಟಿ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ. ಬಿಜೆಪಿಯವರು ಇದೇ ನೀಚ ಬುದ್ದಿ ಮಾಡಿಕೊಂಡು ಹೋಗಲಿ.. ಬಿಜೆಪಿ ರಾಜ್ಯಾಧ್ಯಕ್ಷ ನಳಿನ ಕುಮಾರ್ ಕಟೀಲ್ ಅವರ ಭಾವನಾತ್ಮಕ ನಾಟಕಕ್ಕೆ ರಾಜ್ಯದ ಜನ ಬುದ್ಧಿ ಕಲಿಸಿದ್ದಾರೆ. ಅವರನ್ನು ಸೋಲಿಸಿ ಜನರು ಕಾಂಗ್ರೆಸ್ ಗೆಲ್ಲಿಸಿದ್ದಾರೆ. ಬಿಜೆಪಿಯವರ ಜೀವನ ನಡೆಯುವುದು ಕೂಡ ನಮ್ಮ ಗ್ಯಾರಂಟಿಗಳ ಮೇಲೆ” ಎಂದು ಹೇಳಿದ್ದಾರೆ.

”ಸದ್ಯ ಮಕ್ಕಳ ಪೌಷ್ಟಿಕತೆಗಾಗಿ ವಾರಕ್ಕೆ ಎರಡು ಬಾರಿ ಮೊಟ್ಟೆ ಕೊಡಲಾಗುತ್ತಿದೆ. ಗ್ಯಾರಂಟಿ ಯೋಜನೆಗಳ ಮಧ್ಯೆ ಸರ್ಕಾರ ಇದನ್ನ ಮಾಡಿದೆ. ಶಿಕ್ಷಕರ ಕೊರತೆ ರಾಜ್ಯದಲ್ಲಿ ಇದೆ, ಅದನ್ನ ನಾವು ಸರಿ ಮಾಡುತ್ತೇವೆ. ಇದರ ಮಧ್ಯೆ ದಾಖಲೆ ಪ್ರಮಾಣದಲ್ಲಿ 25 ಸಾವಿರ ಶಿಕ್ಷಕರ ವರ್ಗಾವಣೆ ಆಗಿದೆ” ಎಂದರು.

”ಈ ಬಿಜೆಪಿಯವರು ಸಭಾಧ್ಯಕ್ಷರ ಪೀಠವನ್ನೇ ಅವಮಾನಿಸಿದ್ದಾರೆ. ಲೋಕಸಭಾ ಚುನಾವಣೆಯಲ್ಲೂ ರಾಜ್ಯದ ಜನ ನಮ್ಮನ್ನ ಗೆಲ್ಲಿಸುತ್ತಾರೆ. ಕರಾವಳಿ ಭಾಗ ಕಲ್ಮಶ ಆಗಿದ್ದು ನಿಜ, ಆದರೆ ಮತ್ತೆ ಶಾಂತಿ ಸೌಹಾರ್ದತೆ ಬರಲಿದೆ. ನಮ್ಮ ಸರ್ಕಾರ ಅವೆಲ್ಲವನ್ನೂ ಮತ್ತೆ ಮೂಡಿಸಲಿದೆ” ಎಂದರು.

ಇದನ್ನೂ ಓದಿ: ಈ ವರ್ಷವೇ ಪಠ್ಯ ಪರಿಷ್ಕರಣೆಯಾಗಲಿದೆ: ಸಚಿವ ಮಧು ಬಂಗಾರಪ್ಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಜಿತ್ ಪವಾರ್ ಸಾವು | ಪತನಗೊಂಡ ವಿಮಾನದ ನಿರ್ವಹಣಾ ಸಂಸ್ಥೆಗೂ ಟಿಡಿಪಿಗೂ ನಂಟು : ರೋಹಿತ್ ಪವಾರ್

ಅಜಿತ್ ಪವಾರ್ ಸಾವಿಗೆ ಕಾರಣವಾದ ಪತನಗೊಂಡ ವಿಮಾನದ ನಿರ್ವಾಹಕ ಸಂಸ್ಥೆ ವಿಎಸ್ಆರ್ ವೆಂಚರ್ಸ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಡುವೆ ಸಂಬಂಧವಿದೆ ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಶರದ್ ಪವಾರ್ ಬಣದ)...

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...