Homeಮುಖಪುಟಯಾವುದೇ ರಾಜಕೀಯ ಉದ್ದೇಶ ಇಲ್ಲದೇ ಪಠ್ಯಪುಸ್ತಕ ಬದಲಾವಣೆ ಆಗಲಿದೆ: ಮಧು ಬಂಗಾರಪ್ಪ

ಯಾವುದೇ ರಾಜಕೀಯ ಉದ್ದೇಶ ಇಲ್ಲದೇ ಪಠ್ಯಪುಸ್ತಕ ಬದಲಾವಣೆ ಆಗಲಿದೆ: ಮಧು ಬಂಗಾರಪ್ಪ

- Advertisement -
- Advertisement -

ಪಠ್ಯ ಪುಸ್ತಕ ಪೂರ್ಣ ಪರಿಷ್ಕರಣೆ ಆಗಲಿದೆ. ಬಿಜೆಪಿಯವರು ಪಠ್ಯವನ್ನು ಬದಲಿಸಿದ್ದರು. ನಾವು ತುರ್ತಾಗಿ ಸ್ವಲ್ಪ ಬದಲಾವಣೆ ಮಾಡಿ ಮೊದಲು ಇದ್ದಂತೆ ತಂದಿದ್ದೇವೆ. ಮುಂದಿನ ವರ್ಷ ಮಕ್ಕಳಿಗೆ ಅನುಕೂಲವಾಗುವಂತೆ ಬದಲಾಯಿಸುತ್ತೇವೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

ಈ ಬಗ್ಗೆ ಮಂಗಳೂರಿನಲ್ಲಿ ಮಾತನಾಡಿದ ಅವರು, ”ನಾನು ಅಧಿಕಾರಕ್ಕೆ ಬಂದ ಕೂಡಲೇ ಪಠ್ಯ ಪುಸ್ತಕ ಪರಿಷ್ಕರಣೆ ಮಾಡಿದ್ದೇನೆ. ಮಕ್ಕಳ ಭವಿಷ್ಯಕ್ಕೆ ಒಳ್ಳೆದಾಗಲಿ ಎಂದು ಈ ತೀರ್ಮಾನ ಮಾಡಲಾಗಿದೆ. ಇದರಲ್ಲಿ ಬಿಜೆಪಿಯವರು ಹೇಳುವ ಯಾವುದೇ ರಾಜಕೀಯ ಇಲ್ಲ. ಪಠ್ಯ ಪರಿಷ್ಕರಣೆ ವಿಚಾರವಾಗಿ ತಜ್ಞರ ಸಮಿತಿಯ ಸಹಾಯ ಪಡೆದು ಅವಶ್ಯಕತೆ ಇದ್ದಲ್ಲಿ ಬದಲಾವಣೆ ಮಾಡುತ್ತೇವೆ. ಯಾವುದೇ ರಾಜಕೀಯ ಉದ್ದೇಶ ಇಲ್ಲದೇ ಬದಲಾವಣೆ ಆಗಲಿದೆ. ಮುಖ್ಯಮಂತ್ರಿಗಳ ಸಲಹೆ ಪಡೆದು ಅವರ ಸಹಕಾರದಿಂದ ಎಲ್ಲವೂ ಆಗಲಿದೆ. ಮಕ್ಕಳಿಗೆ ಉತ್ತಮ ಮತ್ತು ತಿಳುವಳಿಕೆಯ ಪಠ್ಯಗಳು ಇರಬೇಕು” ಎಂದರು.

”ಬಿಜೆಪಿಯವರು ಕಾಂಗ್ರೆಸ್ ಗ್ಯಾರಂಟಿ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ. ಬಿಜೆಪಿಯವರು ಇದೇ ನೀಚ ಬುದ್ದಿ ಮಾಡಿಕೊಂಡು ಹೋಗಲಿ.. ಬಿಜೆಪಿ ರಾಜ್ಯಾಧ್ಯಕ್ಷ ನಳಿನ ಕುಮಾರ್ ಕಟೀಲ್ ಅವರ ಭಾವನಾತ್ಮಕ ನಾಟಕಕ್ಕೆ ರಾಜ್ಯದ ಜನ ಬುದ್ಧಿ ಕಲಿಸಿದ್ದಾರೆ. ಅವರನ್ನು ಸೋಲಿಸಿ ಜನರು ಕಾಂಗ್ರೆಸ್ ಗೆಲ್ಲಿಸಿದ್ದಾರೆ. ಬಿಜೆಪಿಯವರ ಜೀವನ ನಡೆಯುವುದು ಕೂಡ ನಮ್ಮ ಗ್ಯಾರಂಟಿಗಳ ಮೇಲೆ” ಎಂದು ಹೇಳಿದ್ದಾರೆ.

”ಸದ್ಯ ಮಕ್ಕಳ ಪೌಷ್ಟಿಕತೆಗಾಗಿ ವಾರಕ್ಕೆ ಎರಡು ಬಾರಿ ಮೊಟ್ಟೆ ಕೊಡಲಾಗುತ್ತಿದೆ. ಗ್ಯಾರಂಟಿ ಯೋಜನೆಗಳ ಮಧ್ಯೆ ಸರ್ಕಾರ ಇದನ್ನ ಮಾಡಿದೆ. ಶಿಕ್ಷಕರ ಕೊರತೆ ರಾಜ್ಯದಲ್ಲಿ ಇದೆ, ಅದನ್ನ ನಾವು ಸರಿ ಮಾಡುತ್ತೇವೆ. ಇದರ ಮಧ್ಯೆ ದಾಖಲೆ ಪ್ರಮಾಣದಲ್ಲಿ 25 ಸಾವಿರ ಶಿಕ್ಷಕರ ವರ್ಗಾವಣೆ ಆಗಿದೆ” ಎಂದರು.

”ಈ ಬಿಜೆಪಿಯವರು ಸಭಾಧ್ಯಕ್ಷರ ಪೀಠವನ್ನೇ ಅವಮಾನಿಸಿದ್ದಾರೆ. ಲೋಕಸಭಾ ಚುನಾವಣೆಯಲ್ಲೂ ರಾಜ್ಯದ ಜನ ನಮ್ಮನ್ನ ಗೆಲ್ಲಿಸುತ್ತಾರೆ. ಕರಾವಳಿ ಭಾಗ ಕಲ್ಮಶ ಆಗಿದ್ದು ನಿಜ, ಆದರೆ ಮತ್ತೆ ಶಾಂತಿ ಸೌಹಾರ್ದತೆ ಬರಲಿದೆ. ನಮ್ಮ ಸರ್ಕಾರ ಅವೆಲ್ಲವನ್ನೂ ಮತ್ತೆ ಮೂಡಿಸಲಿದೆ” ಎಂದರು.

ಇದನ್ನೂ ಓದಿ: ಈ ವರ್ಷವೇ ಪಠ್ಯ ಪರಿಷ್ಕರಣೆಯಾಗಲಿದೆ: ಸಚಿವ ಮಧು ಬಂಗಾರಪ್ಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...