Homeಕರ್ನಾಟಕಮಕ್ಕಳಿಗೆ ಇನ್ನೂ ಸಿಕ್ಕಿಲ್ಲ ಪಠ್ಯಪುಸ್ತಕ: ಪೋಷಕರ ಸಂಘಟನೆಗಳ ಸಮನ್ವಯ ಸಮಿತಿ ಆಕ್ರೋಶ

ಮಕ್ಕಳಿಗೆ ಇನ್ನೂ ಸಿಕ್ಕಿಲ್ಲ ಪಠ್ಯಪುಸ್ತಕ: ಪೋಷಕರ ಸಂಘಟನೆಗಳ ಸಮನ್ವಯ ಸಮಿತಿ ಆಕ್ರೋಶ

“ಸರ್ಕಾರಿ ಶಾಲೆಗಳನ್ನು ಸಬಲೀಕರಣ ಮಾಡುತ್ತೇವೆ, ಗುಣಮಟ್ಟವನ್ನು ತರುತ್ತೇವೆ ಎನ್ನುತ್ತೀರಿ. ಕನಿಷ್ಠ ಪಠ್ಯಪುಸ್ತಕಗಳನ್ನು ನೀಡಲು ನಿಮಗೆ ಸಾಧ್ಯವಾಗಿಲ್ಲ. ಮಧ್ಯಾಹ್ನ ಊಟ ಸಿಗದೆ ಅನೇಕ ಮಕ್ಕಳು ಬಾಲ ಕಾರ್ಮಿಕರಾಗುತ್ತಿದ್ದಾರೆ.”

- Advertisement -
- Advertisement -

ಪಠ್ಯಪುಸ್ತಕಗಳ ಮರು ಪರಿಶೀಲನೆಯ ವಿವಾದದ ನೆಪದಲ್ಲಿ ಮಕ್ಕಳಿಗೆ ಪಠ್ಯಪುಸ್ತಕ ವಿತರಣೆ ವಿಳಂಬವಾಗುತ್ತಿರುವ ವಿರುದ್ಧ ಕರ್ನಾಟಕ ರಾಜ್ಯ ಖಾಸಗಿ ಶಾಲಾ ಕಾಲೇಜು ಪೋಷಕರ ಸಂಘಟನೆಗಳ ಸಮನ್ವಯ ಸಮಿತಿ ಆಕ್ರೋಶ ವ್ಯಕ್ತಪಡಿಸಿದೆ.

ಬೆಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಸಮಿತಿಯ ಅಧ್ಯಕ್ಷರಾದ ಬಿ.ಎನ್.ಯೋಗಾನಂದ ಅವರು ಮಾತನಾಡಿ, “ಕೋವಿಡ್ 19 ಬಿಕ್ಕಟ್ಟಿನಿಂದಾಗಿ ರಾಜ್ಯದ ಶೈಕ್ಷಣಿಕ ವಲಯದಲ್ಲಿ ಭಾರೀ ಅಲ್ಲೋಲ ಕಲ್ಲೋಲ ಉಂಟಾಗಿದೆ. ಎರಡು ಶೈಕ್ಷಣಿಕ ಅವಧಿಯಲ್ಲಿ ಬಹುತೇಕ ಮಕ್ಕಳು ಶಾಲೆಗಳ ಮುಖವನ್ನೇ ನೋಡಿಲ್ಲ. ಸರಿಯಾದ ರೀತಿಯಲ್ಲಿ ಮಕ್ಕಳು ಕಲಿಕೆಯಲ್ಲಿ ಭಾಗವಹಿಸಿಲ್ಲ. ಈಗ ಪಠ್ಯಪುಸ್ತಕಗಳೂ ದೊರಕಿಲ್ಲ” ಎಂದು ಬೇಸರ ವ್ಯಕ್ತಪಡಿಸಿದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಎರಡು ವರ್ಷದ ಶೈಕ್ಷಣಿಕ ಅಸಮತೋಲನದಿಂದಾಗಿ ಗ್ರಾಮೀಣ ಪ್ರದೇಶದ ಮಕ್ಕಳು ತಮ್ಮ ಹೆಸರನ್ನೂ ಸರಿಯಾಗಿ ಬರೆಯದ ಮಟ್ಟಕ್ಕೆ ಹೋಗಿದ್ದಾರೆ. ಈ ವರ್ಷ ತರಗತಿಗಳು ಆರಂಭವಾಗಿ ಒಂದು ವಾರವಾಯಿತು. ಕಳೆದ ಎರಡು ವರ್ಷಗಳೂ ಮಕ್ಕಳಿಗೆ ಸರಿಯಾಗಿ ಪಠ್ಯಪುಸ್ತಕಗಳು ಸಿಕ್ಕಿಲ್ಲ. ಸಮವಸ್ತ್ರ, ಬೈಸಿಕಲ್ ಸಿಕ್ಕಿಲ್ಲ, ಬಿಸಿಯೂಟ ಸಿಕ್ಕಿಲ್ಲ. ಇಂತಹ ಸಂದರ್ಭದಲ್ಲಿ ಈ ಸರ್ಕಾರಕ್ಕೆ ಪಠ್ಯಪುಸ್ತಕಗಳ ಪರಿಷ್ಕರಣೆಯ ಅಗತ್ಯವೇನಿತ್ತು? ಎಂದು ಪ್ರಶ್ನಿಸಿದರು.

“ಕಳೆದ ಎರಡು ವರ್ಷಗಳ ಬಜೆಟ್‌ನಲ್ಲಿ ರಾಜ್ಯ ಸರ್ಕಾರ ಶಿಕ್ಷಣಕ್ಕೆ 48,000 ಕೋಟಿ ರೂ. ನೀಡಿದ್ದು, ಆ ಹಣ ಏನಾಯಿತು ಎಂಬುದು ಯಕ್ಷ ಪ್ರಶ್ನೆಯಾಗಿದೆ” ಎಂದ ಅವರು, “ಇಂದು ಹಿಂದುಳಿದ ಜಿಲ್ಲೆಗಳಲ್ಲಿ, ಹೈದ್ರಾಬಾ‌ದ್‌ ಕರ್ನಾಟಕ, ಮುಂಬೈ ಕರ್ನಾಟಕದ ಭಾಗಗಳಲ್ಲಿ ಮಕ್ಕಳಿಗೆ ಬಿಸಿಯೂಟವೂ ಸಿಗುತ್ತಿಲ್ಲ. ಶಾಲೆಗಳಲ್ಲಿ ಊಟ ಸಿಗದೆ ಈ ಮಕ್ಕಳು ಬಾಲ ಕಾರ್ಮಿಕರಾಗುತ್ತಿದ್ದಾರೆ. ಬಾಲ್ಯ ವಿವಾಹ ಪದ್ಧತಿಗಳೂ ಜಾರಿಯಲ್ಲಿವೆ. ಈ ಸಂದರ್ಭದಲ್ಲಿ ಸರ್ಕಾರಕ್ಕೆ ಏನಾದರೂ ಕಿಂಚಿತ್ತು ಶೈಕ್ಷಣಿಕ ಬದುಕಿನ ಬಗ್ಗೆ ಕಾಳಜಿ ಇದ್ದರೆ ಮಕ್ಕಳಿಗಾಗಿರುವ ಕಲಿಕಾ ಕೊರತೆಯನ್ನು ತುಂಬಿಕೊಡುತ್ತಿತ್ತು” ಎಂದರು.

ಇದನ್ನೂ ಓದಿರಿ: ಪಠ್ಯ ಪರಿಶೀಲನೆಗೆ ಚಕ್ರತೀರ್ಥ: ನಾಡಗೀತೆಗೆ ಅವಮಾನ ಮಾಡಿದ್ದ ಪೋಸ್ಟ್‌ ಮತ್ತೆ ವೈರಲ್

ಮಕ್ಕಳಿಗಾಗಿರುವ ಕಲಿಕಾ ಕೊರತೆಯನ್ನು ಇರುವ ಬೇಗ ತುಂಬಬೇಕಿತ್ತು. ಆದಷ್ಟು ಬೇಗ ಈ ಮಕ್ಕಳಿಗೆ ಪಠ್ಯಪುಸ್ತಕವನ್ನು ಕೊಡಬೇಕಾಗಿತ್ತು. ಅದನ್ನು ಮಾಡದೆ ಪಠ್ಯಪುಸ್ತಕ ಪರಿಷ್ಕರಣೆಯ ಹೆಸರಿನಲ್ಲಿ ವಿವಾದ ಸೃಷ್ಟಿಸಲಾಗಿದೆ. ಪಠ್ಯಪುಸ್ತಕ ಇನ್ನೂ ಚರ್ಚೆಯ ಹಂತದಲ್ಲೇ ಇದೆ. ಯಾವ ಪಠ್ಯವನ್ನು ತೆಗೆಯಬೇಕು, ಯಾವುದನ್ನು ಹಾಕಬೇಕು ಎಂದು ಚರ್ಚಿಸುತ್ತಿದ್ದಾರೆ. ವಿವಾದ ಮುಗಿಯುವುದು ಯಾವಾಗ? ಎಂದು ಕೇಳಿದರು.

ಈಗಾಗಲೇ ಎರಡು ವರ್ಷ ನಷ್ಟವಾಗಿದೆ. ಈ ವರ್ಷವೂ ಶೈಕ್ಷಣಿಕ ವಲಯದ ನೂರಾರು ಕೋಟಿ ರೂ.ಗಳನ್ನು ಲೂಟಿ ಮಾಡುವುದಕ್ಕಾಗಿ ಪಠ್ಯ ಪುಸ್ತಕಗಳ ಪರಿಷ್ಕರಣೆಯ ಹೆಸರಲ್ಲಿ ಗೊಂದಲ ಸೃಷ್ಟಿಸಲಾಗಿದೆ. ನಮ್ಮ ಮಕ್ಕಳಿಗೆ ಸರಿಯಾದ ಶಿಕ್ಷಣ ನೀಡುವಲ್ಲಿ ರಾಜ್ಯ ಸರ್ಕಾರ ಹಾಗೂ ಶಿಕ್ಷಣ ಸಚಿವರ ವೈಫಲ್ಯ ಎದ್ದು ಕಾಣುತ್ತಿದೆ. ಈ ಎಲ್ಲ ಗಂಡಾಂತರಗಳಿಗೆ ಶಿಕ್ಷಣ ಸಚಿವರೇ ನೇರ ಹೊಣೆಗಾರರು. ಹೀಗಾಗಿ ಕೂಡಲೇ ಶಿಕ್ಷಣ ಸಚಿವರು ರಾಜೀನಾಮೆಯನ್ನು ನೀಡಬೇಕು. ಇಲ್ಲವಾದರೆ ಶಿಕ್ಷಣ ಸಚಿವರನ್ನು ಮುಖ್ಯಮಂತ್ರಿಯವರು ಬದಲಾಯಿಸಬೇಕು ಎಂದು ಆಗ್ರಹಿಸಿದರು.

ಮಕ್ಕಳಿಗೆ ಸಂವಿಧಾನ ಬದ್ಧವಾಗಿ ಸಿಗಬೇಕಾದ ಶಿಕ್ಷಣದಲ್ಲಿ ಕೇಸರೀಕರಣ, ಖಾಸಗೀಕರಣ ಮಾಡುತ್ತಾ ಹೋಗುತ್ತಿದ್ದಾರೆ. ಇದರಿಂದ ಲಕ್ಷಾಂತರ ವಿದ್ಯಾರ್ಥಿಗಳಿಗೆ ಶಿಕ್ಷಣ ಕೈಗೆಟಕದಂತಾಗುತ್ತಿದೆ. ಇದಕ್ಕೆ ನೇರ ಹೊಣೆ ರಾಜ್ಯ ಸರ್ಕಾರ ಹಾಗೂ ಶಿಕ್ಷಣ ಸಚಿವರು. ಏನಾದರೂ ಮಾಡಿ ದುಡ್ಡು ದೋಚಬೇಕೆಂಬುದು ಶಿಕ್ಷಣ ಇಲಾಖೆಯ ಅಧಿಕಾರಿಗಳ ಮನಸ್ಥಿತಿಯಾಗಿದೆ. ಪರಿಷ್ಕರಣೆ ಮಾಡುವ ನೆಪದಲ್ಲಿ ಮುದ್ರಣ ಮಾಡುತ್ತಿದ್ದಾರೆ. ಮಕ್ಕಳಿಗೆ ಸರಿಯಾದ ರೀತಿಯಲ್ಲಿ ಶಿಕ್ಷಣ ಸಿಗದೆ ಇರುವಂತೆ ನೋಡಿಕೊಳ್ಳಲಾಗುತ್ತಿದೆ. ಸರ್ಕಾರಿ ಶಾಲೆಗಳನ್ನು ಸಬಲೀಕರಣ ಮಾಡುತ್ತೇವೆ, ಗುಣಮಟ್ಟವನ್ನು ತರುತ್ತೇವೆ ಎನ್ನುತ್ತೀರಿ. ಕನಿಷ್ಠ ಪುಸ್ತಕಗಳನ್ನು ಕೊಡದಿದ್ದರೆ ನೀವು ಹೇಗೆ ಗುಣಮಟ್ಟವನ್ನು ತರಲು ಸಾಧ್ಯ?

ಸೈಕಲ್‌ ನೀಡುತ್ತಿದ್ದ ಕಾರಣ ಸಾರಿಗೆ ಸೌಲಭ್ಯವಿಲ್ಲದ ಗುಡ್ಡಗಾಡು ಪ್ರದೇಶದಲ್ಲಿ ಹೆಚ್ಚು ದಾಖಲಾತಿ ಆಗುತ್ತಿತ್ತು. ಈ ವರ್ಷವೂ ಮಕ್ಕಳಿಗೆ ಬೈಸಿಕಲ್ ಸಿಗುವುದು ಅನುಮಾನವಾಗಿದೆ. ನಮ್ಮ ಸಣ್ಣ ಅಭಿಪ್ರಾಯವನ್ನು ಕೇಳುವ ತಾಳ್ಮೆ ಸರ್ಕಾರಕ್ಕೆ ಇಲ್ಲ. ನಮ್ಮ ಮಕ್ಕಳು ಏನನ್ನು ಕಲಿಯಬೇಕು, ಎಷ್ಟು ಕಲಿಯಬೇಕು, ಹೇಗೆ ಕಲಿಯಬೇಕು ಎಂದು ನಿರ್ಧರಿಸುವಲ್ಲಿ ನಮ್ಮ ಪಾತ್ರ ಏನು ಇಲ್ಲವೇ? ಎಂದು ಹರಿಹಾಯ್ದಿದ್ದಾರೆ.

ಪಠ್ಯಪುಸ್ತಕಗಳನ್ನು ಪರಿಶೀಲನೆ ಮಾಡುವುದನ್ನು ತಕ್ಷಣ ಕೈಬಿಡಬೇಕು. ಈ ಹಿಂದೆ ಇದ್ದ ಪಠ್ಯಪುಸ್ತಕಗಳನ್ನೇ ತಕ್ಷಣದಲ್ಲಿ ರಾಜ್ಯದ ಎಲ್ಲ ಶಾಲೆಗಳಿಗೆ ಸರಬರಾಜು ಮಾಡಬೇಕು. ಈ ಪಠ್ಯಪುಸ್ತಕ ಪರಿಶೀಲನಾ ಸಮಿತಿಯನ್ನು ತಕ್ಷಣವೇ ವಿಸರ್ಜನೆ ಮಾಡಬೇಕು ಎಂದು ತಮ್ಮ ಆಗ್ರಹಿಸಿದರು.

ನನ್ನ ಮಗನಿಗೆ ಕನ್ನಡ ಪುಸ್ತಕ ಸಿಕ್ಕಿಲ್ಲ. ಪರಿಷ್ಕರಣೆಯ ಹೆಸರಲ್ಲಿ ರಾಜ್ಯದ ಬೊಕ್ಕಸವನ್ನು ಇವರು ಲೂಟಿ ಮಾಡುತ್ತಿದ್ದಾರಲ್ಲ, ಇದನ್ನು ನೋಡಿಕೊಂಡು ನಾವು ಸುಮ್ಮನೆ ಕೂರಬೇಕಾ? ನಮ್ಮ ಬೇಡಿಕೆಯನ್ನು ತಕ್ಷಣದಲ್ಲಿ ಈಡೇರಿಸದಿದ್ದರೆ ಎಲ್ಲ ಸಂಘಟನೆಗಳು, ಶಿಕ್ಷಣ ತಜ್ಞರು, ಪೋಷಕರು ಹೋರಾಟಕ್ಕೆ ಇಳಿಯಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಇದನ್ನೂ ಓದಿರಿ: ಪಿಯು ಪಠ್ಯ ಪರಿಶೀಲನೆಗೂ ಚಾಲನೆ; ಮತ್ತದೇ ಚಕ್ರತೀರ್ಥ ಸಮಿತಿಗೆ ಜವಾಬ್ದಾರಿ!

ದಲಿತ ಮುಖಂಡರಾದ ಆರ್‌.ಮೋಹನ್‌ ರಾಜ್‌ ಮಾತನಾಡಿ, ಈ ಪಠ್ಯಪುಸ್ತಕವು ಶೂದ್ರ ಹಾಗೂ ಅತಿಶೂದ್ರರನ್ನು ವೇದಗಳ ಕಾಲಕ್ಕೆ, ಮನುವಿನ ಕಾಲಕ್ಕೆ ಕರೆದೊಯ್ಯುವ ಎಲ್ಲ ಹುನ್ನಾರಗಳನ್ನು ಹೊಂದಿದೆ. ಬಾಬಾ ಸಾಹೇಬ್ ಡಾ.ಬಿ.ಆರ್‌.ಅಂಬೇಡ್ಕರ್‌ ಅವರು ಶಿಕ್ಷಣ ಎಲ್ಲರಿಗೂ ಸಿಗಬೇಕು, ವೈಜ್ಞಾನಿಕವಾಗಿರಬೇಕು ಎಂದು ಪ್ರತಿಪಾದಿಸಿದರು. ಆದರೆ ಇವರು ವೈದಿಕಶಾಹಿಗೆ ಕರೆದೊಯ್ಯಬೇಕೆಂದು ಹೊರಟಿದ್ದಾರೆ. ಸಮಿತಿಯಲ್ಲಿ ಹತ್ತು ಜನರಲ್ಲಿ ಒಂಬತ್ತು ಜನರು ಒಂದೇ ಜಾತಿಗೆ ಸೇರಿದವರು. ಜನಸಂಖ್ಯೆಯಲ್ಲಿ ಶೇ. 3ರಷ್ಟಿರುವ ಜಾತಿಯನ್ನು ಪ್ರತಿನಿಧಿಸುವವರಷ್ಟೇ ಪಠ್ಯಪುಸ್ತಕ ಪರಿಶೀಲನಾ ಸಮಿತಿಯಲ್ಲಿದ್ದಾರೆ. ಇದನ್ನು ಸಾಮಾಜಿಕ ನ್ಯಾಯ, ಸಮಾನತೆ ಎನ್ನಲು ಸಾಧ್ಯವೆ? ಎಂದು ಟೀಕಿಸಿದರು.

“ತಳ ಸಮುದಾಯಗಳ ಜಾಗೃತಿ ಮೂಡಿಸಿದ ನಾರಾಯಣಗುರುಗಳನ್ನು ತೆಗೆಯಲು ಹೊರಟಿದ್ದು ಏತಕ್ಕೆ? ವೈಜ್ಞಾನಿಕ ವಿಚಾರಗಳನ್ನು ಪ್ರತಿಪಾದಿಸಿ ಶೂದ್ರ, ಅತಿಶೂದ್ರರಲ್ಲಿ ಜಾಗೃತಿ ಮೂಡಿಸಿದ, ಪ್ರೀತಿ, ಕರುಣೆಯನ್ನು ಸಾರಿದ, ಜಗತ್ತಿಗೆ ಶಾಂತಿಯ ಮಹತ್ವನ್ನು ತಿಳಿಸಿದ ಬುದ್ಧನ ಪಠ್ಯವನ್ನು ತೆಗೆದಿದ್ದಿರಿ. ಏನು ಮಾಡಲು ಹೊರಟಿದ್ದೀರಿ? ಪುರೋಹಿತಶಾಹಿಯನ್ನು, ಮನುವಾದ ಹಾಗೂ ಪಂಚಾಂಗವನ್ನು ತರಲು ಹೊರಟಿದ್ದೀರಿ” ಎಂದು ಆಕ್ರೋಶ ಹೊರಹಾಕಿದರು.

ವಿದ್ಯಾರ್ಥಿ ಬಂಧುತ್ವ ವೇದಿಕೆ ತೋಳಿ ಭರಮಣ್ಣ, ಮುಖಂಡರಾದ ನಾಗೇಶ್ ಅರಳಕುಪ್ಪೆ, ಎಸ್‌ಐಒ ಝೀಶಾನ್‌, ಕೆವಿಎಸ್‌ ಸಂಚಾಲಕರಾದ ಸರೋವರ್‌ ಬೆಂಕಿಕೆರೆ ಹಾಜರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸುಪ್ರೀಂ ಕೋರ್ಟ್ ನಿರ್ದೇಶನದ ಹೊರತಾಗಿಯೂ ಮುಂದುವರೆದ ಬುಲ್ಡೋಝರ್ ಅ’ನ್ಯಾಯ’ : ಯುಪಿ ಸರ್ಕಾರಕ್ಕೆ ಅಲಾಹಾಬಾದ್‌ ಹೈಕೋರ್ಟ್‌ ಛೀಮಾರಿ

ಉತ್ತರ ಪ್ರದೇಶದ ಸರ್ಕಾರದ "ಬುಲ್ಡೋಝರ್ ಅನ್ಯಾಯ" ವಿರುದ್ಧ ಸುಪ್ರೀಂ ಕೋರ್ಟ್ 2024ರ ನವೆಂಬರ್‌ನಲ್ಲಿ ಕಟ್ಟುನಿಟ್ಟಾದ ತೀರ್ಪು ನೀಡಿದ್ದರೂ, ದಂಡನಾತ್ಮಕ ಕ್ರಮವಾಗಿ ಕಟ್ಟಡಗಳನ್ನು ಉರುಳಿಸುವ ಪ್ರಕ್ರಿಯೆ ಇನ್ನೂ ಮುಂದುವರಿಯುತ್ತಿರುವುದರ ಬಗ್ಗೆ ಅಲಹಾಬಾದ್ ಹೈಕೋರ್ಟ್ ತೀವ್ರ...

‘ಕಾಶ್ಮೀರಿಗಳ ವಿರುದ್ಧ ಗುಂಪು ಹಿಂಸಾಚಾರಕ್ಕೆ ರಾಜ್ಯ ಸರ್ಕಾರ ಪ್ರೋತ್ಸಾಹಿಸುತ್ತಿದೆ’: ಮೆಹಬೂಬಾ ಮುಫ್ತಿ ಆರೋಪ

ಶ್ರೀನಗರ: ಕೇಂದ್ರಾಡಳಿತ ಪ್ರದೇಶದ ಹೊರಗೆ ಕಾಶ್ಮೀರಿಗಳ ವಿರುದ್ಧ ಗುಂಪು ಹಿಂಸಾಚಾರಕ್ಕೆ ರಾಜ್ಯ ಸರ್ಕಾರಗಳು ಪ್ರೋತ್ಸಾಹ ನೀಡುತ್ತಿರುವಂತೆ ಕಾಣುತ್ತಿದೆ, ಕಾನೂನಿನ ಆಡಳಿತವನ್ನು ದ್ವೇಷವು ಬದಲಾಯಿಸಲು ಅವಕಾಶ ನೀಡುತ್ತದೆ ಎಂದು ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ...

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ | ಒತ್ತಡಕ್ಕೆ ಮಣಿದು ಪ್ರಧಾನಿ ರಾಜಿ ಮಾಡಿಕೊಂಡಿದ್ದಾರೆ, ದೇಶವನ್ನು ಮಾರಿದ್ದಾರೆ : ರಾಹುಲ್ ಗಾಂಧಿ

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ಸಂಬಂಧ ಪ್ರಧಾನಿ ನರೇಂದ್ರ ಮೋದಿ ವಿರುದ್ದ ವಿಪಕ್ಷ ನಾಯಕ ರಾಹುಲ್ ಗಾಂಧಿ ಮಂಗಳವಾರ (ಫೆ.3) ತೀವ್ರ ವಾಗ್ದಾಳಿ ನಡೆಸಿದ್ದು, "ಪ್ರಧಾನಿ ರಾಜಿ ಮಾಡಿಕೊಂಡಿದ್ದಾರೆ, ದೇಶವನ್ನು ಮಾರಿದ್ದಾರೆ" ಎಂದು ಆರೋಪಿಸಿದರು. ಸಂಸತ್ತಿನ...

ಧರ್ಮಸ್ಥಳ ಪ್ರಕರಣದ ಚರ್ಚೆ ವೇಳೆ ಹಲ್ಲೆಗೆ ಯತ್ನ; ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ, ಕಿರಿಕ್ ಕೀರ್ತಿ ವಿರುದ್ಧ ಎಫ್‌ಐಆರ್

2025ರ ಅಕ್ಟೋಬರ್‌ನಲ್ಲಿ ‘R.ಕನ್ನಡ’ ಸುದ್ದಿ ವಾಹಿನಿಯಲ್ಲಿ ಧರ್ಮಸ್ಥಳ ಪ್ರಕರಣ ಸಂಬಂಧ ನಡೆದಿದ್ದ ಚರ್ಚಾ ಕಾರ್ಯಕ್ರಮದ ವೇಳೆ ದಾಂಧಲೆ ನಡೆಸಿ, ಹಲ್ಲೆಗೆ ಯತ್ನಿಸಿದ್ದ ಹಿಂದುತ್ವ ಕೋಮುವಾದಿ ಕಾರ್ಯಕರ್ತ ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ ಹಾಗೂ...

ಲೋಕಸಭೆಯಲ್ಲಿ ನರವಾಣೆ ಆತ್ಮಕಥೆ ಗದ್ದಲ : ವಿಪಕ್ಷಗಳ 8 ಮಂದಿ ಸಂಸದರು ಅಮಾನತು

ಮಾಜಿ ಸೇನಾ ಮುಖ್ಯಸ್ಥ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಕತೆಯ ವಿಚಾರ ಮಂಗಳವಾರ (ಫೆ.3) ಕೂಡ ಲೋಕಸಭೆಯಲ್ಲಿ ತೀವ್ರ ಗದ್ದಲಕ್ಕೆ ಕಾರಣವಾಯಿತು. ಪುಸ್ತಕದ ವಿಷಯಗಳನ್ನು ಪ್ರಸ್ತಾಪಿಸಲು ವಿರೋಧ ಪಕ್ಷದ ನಾಯಕ ರಾಹುಲ್...

ಮನ್ರೇಗಾ ಕಾರ್ಮಿಕರ ಮಹಾ ಪಂಚಾಯತ್ ರಾಷ್ಟ್ರಪತಿಗಳಿಗೆ ಬರೆದ ಮನ ಮುಟ್ಟುವ ಪತ್ರ

ಕೇಂದ್ರ ಸರ್ಕಾರ ವಿಬಿಜಿ- ರಾಮ್ ಜಿ 2025 ಕಾನೂನನ್ನು ವಾಪಸ್ ಪಡೆಯಬೇಕು ಹಾಗೂ ನರೇಗಾ ಯೋಜನೆಯನ್ನು ಮರು ಸ್ಥಾಪಿಸಬೇಕು ಎಂದು ಮನ್ರೇಗಾ ಕಾರ್ಮಿಕರ ಮಹಾ ಪಂಚಾಯತ್‌ ರಾಷ್ಟ್ರಪತಿಗಳಿಗೆ ಮನವಿ ಪತ್ರ ಸಲ್ಲಿಸಿದೆ.  2026 ಫೆಬ್ರವರಿ...

ಗುಜರಾತ್‌| ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಕತ್ತಿಯಿಂದ ಹಲ್ಲೆ

ಗುಜರಾತ್‌ನ ಪಠಾನ್ ಜಿಲ್ಲೆಯ ಗ್ರಾಮವೊಂದರಲ್ಲಿ, ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಕತ್ತಿಯಿಂದ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ದಲಿತ ಸಮುದಾಯದ ಯುವಕ ವಿಶಾಲ್ ಚಾವ್ಡಾಗೆ ಮದುವೆಯ ಸಂತೋಷದ ದಿನವು ಜೀವನದ ದುಃಸ್ವಪ್ನವಾಗಿ...

ಗೃಹಲಕ್ಷ್ಮಿ ಯೋಜನೆಯಿಂದ 52 ಸಾವಿರಕ್ಕೂ ಹೆಚ್ಚಿನ ಮಹಿಳೆಯರು ಹೊರಕ್ಕೆ: ಆದಾಯ ತೆರಿಗೆ ಇಲಾಖೆ ದಾಖಲೆಗಳು ಕಾರಣ ಎಂದ ಲಕ್ಷ್ಮಿ ಹೆಬ್ಬಾಳ್ಕರ್

ಬೆಂಗಳೂರು: ರಾಜ್ಯಾದ್ಯಂತ 1.26 ಕೋಟಿ ಫಲಾನುಭವಿಗಳಲ್ಲಿ 52,000 ಕ್ಕೂ ಹೆಚ್ಚು ಮಹಿಳೆಯರನ್ನು ಗೃಹಲಕ್ಷ್ಮಿ ಯೋಜನೆಯಿಂದ ತೆಗೆದುಹಾಕಲಾಗಿದೆ, ಏಕೆಂದರೆ ಅವರು ಜಿಎಸ್ಟಿ ಅಥವಾ ಆದಾಯ ತೆರಿಗೆ ಇಲಾಖೆಗಳ ದಾಖಲೆಗಳಲ್ಲಿ ತೆರಿಗೆದಾರರಾಗಿದ್ದಾರೆ ಎಂದು ಮಹಿಳಾ ಮತ್ತು...

ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ಧ ವಿಧಾನಸಭೆಯಲ್ಲಿ ನಿರ್ಣಯ ಮಂಡನೆ

ಮನರೇಗಾ ಬದಲಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ (ಫೆ.3) ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿದರು. ರಾಜ್ಯದ ಗ್ರಾಮೀಣ ಜನರ ಬದುಕಿನ ಹಕ್ಕನ್ನು ಕಾಪಾಡುವ ದೃಷ್ಟಿಯಿಂದ,...

‘ಖಾಸಗಿ ಮಾಹಿತಿಯ ಕಳ್ಳತನ’ : ವಿವಾದಾತ್ಮಕ ಗೌಪ್ಯತೆ ನೀತಿ ಸಂಬಂಧ ವಾಟ್ಸಾಪ್, ಮೆಟಾ ವಿರುದ್ಧ ಸುಪ್ರೀಂ ಕೋರ್ಟ್ ಕಿಡಿ

ನಾಗರಿಕರ ಗೌಪ್ಯತೆಯ ಹಕ್ಕನ್ನು ಉಲ್ಲಂಘಿಸಲಾಗಿದೆ ಎಂದು ಮಂಗಳವಾರ ಸುಪ್ರೀಂ ಕೋರ್ಟ್ ವಾಟ್ಸಾಪ್ ಮತ್ತು ಅದರ ಪೋಷಕ ಕಂಪನಿ ಮೆಟಾವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಡೇಟಾ ಹಂಚಿಕೆಯ ಹೆಸರಿನಲ್ಲಿ ಬಳಕೆದಾರರ ಖಾಸಗಿ ಡೇಟಾವನ್ನು ಬಳಸಿಕೊಳ್ಳಲು...