Homeಕರ್ನಾಟಕಮಕ್ಕಳಿಗೆ ಇನ್ನೂ ಸಿಕ್ಕಿಲ್ಲ ಪಠ್ಯಪುಸ್ತಕ: ಪೋಷಕರ ಸಂಘಟನೆಗಳ ಸಮನ್ವಯ ಸಮಿತಿ ಆಕ್ರೋಶ

ಮಕ್ಕಳಿಗೆ ಇನ್ನೂ ಸಿಕ್ಕಿಲ್ಲ ಪಠ್ಯಪುಸ್ತಕ: ಪೋಷಕರ ಸಂಘಟನೆಗಳ ಸಮನ್ವಯ ಸಮಿತಿ ಆಕ್ರೋಶ

“ಸರ್ಕಾರಿ ಶಾಲೆಗಳನ್ನು ಸಬಲೀಕರಣ ಮಾಡುತ್ತೇವೆ, ಗುಣಮಟ್ಟವನ್ನು ತರುತ್ತೇವೆ ಎನ್ನುತ್ತೀರಿ. ಕನಿಷ್ಠ ಪಠ್ಯಪುಸ್ತಕಗಳನ್ನು ನೀಡಲು ನಿಮಗೆ ಸಾಧ್ಯವಾಗಿಲ್ಲ. ಮಧ್ಯಾಹ್ನ ಊಟ ಸಿಗದೆ ಅನೇಕ ಮಕ್ಕಳು ಬಾಲ ಕಾರ್ಮಿಕರಾಗುತ್ತಿದ್ದಾರೆ.”

- Advertisement -
- Advertisement -

ಪಠ್ಯಪುಸ್ತಕಗಳ ಮರು ಪರಿಶೀಲನೆಯ ವಿವಾದದ ನೆಪದಲ್ಲಿ ಮಕ್ಕಳಿಗೆ ಪಠ್ಯಪುಸ್ತಕ ವಿತರಣೆ ವಿಳಂಬವಾಗುತ್ತಿರುವ ವಿರುದ್ಧ ಕರ್ನಾಟಕ ರಾಜ್ಯ ಖಾಸಗಿ ಶಾಲಾ ಕಾಲೇಜು ಪೋಷಕರ ಸಂಘಟನೆಗಳ ಸಮನ್ವಯ ಸಮಿತಿ ಆಕ್ರೋಶ ವ್ಯಕ್ತಪಡಿಸಿದೆ.

ಬೆಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಸಮಿತಿಯ ಅಧ್ಯಕ್ಷರಾದ ಬಿ.ಎನ್.ಯೋಗಾನಂದ ಅವರು ಮಾತನಾಡಿ, “ಕೋವಿಡ್ 19 ಬಿಕ್ಕಟ್ಟಿನಿಂದಾಗಿ ರಾಜ್ಯದ ಶೈಕ್ಷಣಿಕ ವಲಯದಲ್ಲಿ ಭಾರೀ ಅಲ್ಲೋಲ ಕಲ್ಲೋಲ ಉಂಟಾಗಿದೆ. ಎರಡು ಶೈಕ್ಷಣಿಕ ಅವಧಿಯಲ್ಲಿ ಬಹುತೇಕ ಮಕ್ಕಳು ಶಾಲೆಗಳ ಮುಖವನ್ನೇ ನೋಡಿಲ್ಲ. ಸರಿಯಾದ ರೀತಿಯಲ್ಲಿ ಮಕ್ಕಳು ಕಲಿಕೆಯಲ್ಲಿ ಭಾಗವಹಿಸಿಲ್ಲ. ಈಗ ಪಠ್ಯಪುಸ್ತಕಗಳೂ ದೊರಕಿಲ್ಲ” ಎಂದು ಬೇಸರ ವ್ಯಕ್ತಪಡಿಸಿದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಎರಡು ವರ್ಷದ ಶೈಕ್ಷಣಿಕ ಅಸಮತೋಲನದಿಂದಾಗಿ ಗ್ರಾಮೀಣ ಪ್ರದೇಶದ ಮಕ್ಕಳು ತಮ್ಮ ಹೆಸರನ್ನೂ ಸರಿಯಾಗಿ ಬರೆಯದ ಮಟ್ಟಕ್ಕೆ ಹೋಗಿದ್ದಾರೆ. ಈ ವರ್ಷ ತರಗತಿಗಳು ಆರಂಭವಾಗಿ ಒಂದು ವಾರವಾಯಿತು. ಕಳೆದ ಎರಡು ವರ್ಷಗಳೂ ಮಕ್ಕಳಿಗೆ ಸರಿಯಾಗಿ ಪಠ್ಯಪುಸ್ತಕಗಳು ಸಿಕ್ಕಿಲ್ಲ. ಸಮವಸ್ತ್ರ, ಬೈಸಿಕಲ್ ಸಿಕ್ಕಿಲ್ಲ, ಬಿಸಿಯೂಟ ಸಿಕ್ಕಿಲ್ಲ. ಇಂತಹ ಸಂದರ್ಭದಲ್ಲಿ ಈ ಸರ್ಕಾರಕ್ಕೆ ಪಠ್ಯಪುಸ್ತಕಗಳ ಪರಿಷ್ಕರಣೆಯ ಅಗತ್ಯವೇನಿತ್ತು? ಎಂದು ಪ್ರಶ್ನಿಸಿದರು.

“ಕಳೆದ ಎರಡು ವರ್ಷಗಳ ಬಜೆಟ್‌ನಲ್ಲಿ ರಾಜ್ಯ ಸರ್ಕಾರ ಶಿಕ್ಷಣಕ್ಕೆ 48,000 ಕೋಟಿ ರೂ. ನೀಡಿದ್ದು, ಆ ಹಣ ಏನಾಯಿತು ಎಂಬುದು ಯಕ್ಷ ಪ್ರಶ್ನೆಯಾಗಿದೆ” ಎಂದ ಅವರು, “ಇಂದು ಹಿಂದುಳಿದ ಜಿಲ್ಲೆಗಳಲ್ಲಿ, ಹೈದ್ರಾಬಾ‌ದ್‌ ಕರ್ನಾಟಕ, ಮುಂಬೈ ಕರ್ನಾಟಕದ ಭಾಗಗಳಲ್ಲಿ ಮಕ್ಕಳಿಗೆ ಬಿಸಿಯೂಟವೂ ಸಿಗುತ್ತಿಲ್ಲ. ಶಾಲೆಗಳಲ್ಲಿ ಊಟ ಸಿಗದೆ ಈ ಮಕ್ಕಳು ಬಾಲ ಕಾರ್ಮಿಕರಾಗುತ್ತಿದ್ದಾರೆ. ಬಾಲ್ಯ ವಿವಾಹ ಪದ್ಧತಿಗಳೂ ಜಾರಿಯಲ್ಲಿವೆ. ಈ ಸಂದರ್ಭದಲ್ಲಿ ಸರ್ಕಾರಕ್ಕೆ ಏನಾದರೂ ಕಿಂಚಿತ್ತು ಶೈಕ್ಷಣಿಕ ಬದುಕಿನ ಬಗ್ಗೆ ಕಾಳಜಿ ಇದ್ದರೆ ಮಕ್ಕಳಿಗಾಗಿರುವ ಕಲಿಕಾ ಕೊರತೆಯನ್ನು ತುಂಬಿಕೊಡುತ್ತಿತ್ತು” ಎಂದರು.

ಇದನ್ನೂ ಓದಿರಿ: ಪಠ್ಯ ಪರಿಶೀಲನೆಗೆ ಚಕ್ರತೀರ್ಥ: ನಾಡಗೀತೆಗೆ ಅವಮಾನ ಮಾಡಿದ್ದ ಪೋಸ್ಟ್‌ ಮತ್ತೆ ವೈರಲ್

ಮಕ್ಕಳಿಗಾಗಿರುವ ಕಲಿಕಾ ಕೊರತೆಯನ್ನು ಇರುವ ಬೇಗ ತುಂಬಬೇಕಿತ್ತು. ಆದಷ್ಟು ಬೇಗ ಈ ಮಕ್ಕಳಿಗೆ ಪಠ್ಯಪುಸ್ತಕವನ್ನು ಕೊಡಬೇಕಾಗಿತ್ತು. ಅದನ್ನು ಮಾಡದೆ ಪಠ್ಯಪುಸ್ತಕ ಪರಿಷ್ಕರಣೆಯ ಹೆಸರಿನಲ್ಲಿ ವಿವಾದ ಸೃಷ್ಟಿಸಲಾಗಿದೆ. ಪಠ್ಯಪುಸ್ತಕ ಇನ್ನೂ ಚರ್ಚೆಯ ಹಂತದಲ್ಲೇ ಇದೆ. ಯಾವ ಪಠ್ಯವನ್ನು ತೆಗೆಯಬೇಕು, ಯಾವುದನ್ನು ಹಾಕಬೇಕು ಎಂದು ಚರ್ಚಿಸುತ್ತಿದ್ದಾರೆ. ವಿವಾದ ಮುಗಿಯುವುದು ಯಾವಾಗ? ಎಂದು ಕೇಳಿದರು.

ಈಗಾಗಲೇ ಎರಡು ವರ್ಷ ನಷ್ಟವಾಗಿದೆ. ಈ ವರ್ಷವೂ ಶೈಕ್ಷಣಿಕ ವಲಯದ ನೂರಾರು ಕೋಟಿ ರೂ.ಗಳನ್ನು ಲೂಟಿ ಮಾಡುವುದಕ್ಕಾಗಿ ಪಠ್ಯ ಪುಸ್ತಕಗಳ ಪರಿಷ್ಕರಣೆಯ ಹೆಸರಲ್ಲಿ ಗೊಂದಲ ಸೃಷ್ಟಿಸಲಾಗಿದೆ. ನಮ್ಮ ಮಕ್ಕಳಿಗೆ ಸರಿಯಾದ ಶಿಕ್ಷಣ ನೀಡುವಲ್ಲಿ ರಾಜ್ಯ ಸರ್ಕಾರ ಹಾಗೂ ಶಿಕ್ಷಣ ಸಚಿವರ ವೈಫಲ್ಯ ಎದ್ದು ಕಾಣುತ್ತಿದೆ. ಈ ಎಲ್ಲ ಗಂಡಾಂತರಗಳಿಗೆ ಶಿಕ್ಷಣ ಸಚಿವರೇ ನೇರ ಹೊಣೆಗಾರರು. ಹೀಗಾಗಿ ಕೂಡಲೇ ಶಿಕ್ಷಣ ಸಚಿವರು ರಾಜೀನಾಮೆಯನ್ನು ನೀಡಬೇಕು. ಇಲ್ಲವಾದರೆ ಶಿಕ್ಷಣ ಸಚಿವರನ್ನು ಮುಖ್ಯಮಂತ್ರಿಯವರು ಬದಲಾಯಿಸಬೇಕು ಎಂದು ಆಗ್ರಹಿಸಿದರು.

ಮಕ್ಕಳಿಗೆ ಸಂವಿಧಾನ ಬದ್ಧವಾಗಿ ಸಿಗಬೇಕಾದ ಶಿಕ್ಷಣದಲ್ಲಿ ಕೇಸರೀಕರಣ, ಖಾಸಗೀಕರಣ ಮಾಡುತ್ತಾ ಹೋಗುತ್ತಿದ್ದಾರೆ. ಇದರಿಂದ ಲಕ್ಷಾಂತರ ವಿದ್ಯಾರ್ಥಿಗಳಿಗೆ ಶಿಕ್ಷಣ ಕೈಗೆಟಕದಂತಾಗುತ್ತಿದೆ. ಇದಕ್ಕೆ ನೇರ ಹೊಣೆ ರಾಜ್ಯ ಸರ್ಕಾರ ಹಾಗೂ ಶಿಕ್ಷಣ ಸಚಿವರು. ಏನಾದರೂ ಮಾಡಿ ದುಡ್ಡು ದೋಚಬೇಕೆಂಬುದು ಶಿಕ್ಷಣ ಇಲಾಖೆಯ ಅಧಿಕಾರಿಗಳ ಮನಸ್ಥಿತಿಯಾಗಿದೆ. ಪರಿಷ್ಕರಣೆ ಮಾಡುವ ನೆಪದಲ್ಲಿ ಮುದ್ರಣ ಮಾಡುತ್ತಿದ್ದಾರೆ. ಮಕ್ಕಳಿಗೆ ಸರಿಯಾದ ರೀತಿಯಲ್ಲಿ ಶಿಕ್ಷಣ ಸಿಗದೆ ಇರುವಂತೆ ನೋಡಿಕೊಳ್ಳಲಾಗುತ್ತಿದೆ. ಸರ್ಕಾರಿ ಶಾಲೆಗಳನ್ನು ಸಬಲೀಕರಣ ಮಾಡುತ್ತೇವೆ, ಗುಣಮಟ್ಟವನ್ನು ತರುತ್ತೇವೆ ಎನ್ನುತ್ತೀರಿ. ಕನಿಷ್ಠ ಪುಸ್ತಕಗಳನ್ನು ಕೊಡದಿದ್ದರೆ ನೀವು ಹೇಗೆ ಗುಣಮಟ್ಟವನ್ನು ತರಲು ಸಾಧ್ಯ?

ಸೈಕಲ್‌ ನೀಡುತ್ತಿದ್ದ ಕಾರಣ ಸಾರಿಗೆ ಸೌಲಭ್ಯವಿಲ್ಲದ ಗುಡ್ಡಗಾಡು ಪ್ರದೇಶದಲ್ಲಿ ಹೆಚ್ಚು ದಾಖಲಾತಿ ಆಗುತ್ತಿತ್ತು. ಈ ವರ್ಷವೂ ಮಕ್ಕಳಿಗೆ ಬೈಸಿಕಲ್ ಸಿಗುವುದು ಅನುಮಾನವಾಗಿದೆ. ನಮ್ಮ ಸಣ್ಣ ಅಭಿಪ್ರಾಯವನ್ನು ಕೇಳುವ ತಾಳ್ಮೆ ಸರ್ಕಾರಕ್ಕೆ ಇಲ್ಲ. ನಮ್ಮ ಮಕ್ಕಳು ಏನನ್ನು ಕಲಿಯಬೇಕು, ಎಷ್ಟು ಕಲಿಯಬೇಕು, ಹೇಗೆ ಕಲಿಯಬೇಕು ಎಂದು ನಿರ್ಧರಿಸುವಲ್ಲಿ ನಮ್ಮ ಪಾತ್ರ ಏನು ಇಲ್ಲವೇ? ಎಂದು ಹರಿಹಾಯ್ದಿದ್ದಾರೆ.

ಪಠ್ಯಪುಸ್ತಕಗಳನ್ನು ಪರಿಶೀಲನೆ ಮಾಡುವುದನ್ನು ತಕ್ಷಣ ಕೈಬಿಡಬೇಕು. ಈ ಹಿಂದೆ ಇದ್ದ ಪಠ್ಯಪುಸ್ತಕಗಳನ್ನೇ ತಕ್ಷಣದಲ್ಲಿ ರಾಜ್ಯದ ಎಲ್ಲ ಶಾಲೆಗಳಿಗೆ ಸರಬರಾಜು ಮಾಡಬೇಕು. ಈ ಪಠ್ಯಪುಸ್ತಕ ಪರಿಶೀಲನಾ ಸಮಿತಿಯನ್ನು ತಕ್ಷಣವೇ ವಿಸರ್ಜನೆ ಮಾಡಬೇಕು ಎಂದು ತಮ್ಮ ಆಗ್ರಹಿಸಿದರು.

ನನ್ನ ಮಗನಿಗೆ ಕನ್ನಡ ಪುಸ್ತಕ ಸಿಕ್ಕಿಲ್ಲ. ಪರಿಷ್ಕರಣೆಯ ಹೆಸರಲ್ಲಿ ರಾಜ್ಯದ ಬೊಕ್ಕಸವನ್ನು ಇವರು ಲೂಟಿ ಮಾಡುತ್ತಿದ್ದಾರಲ್ಲ, ಇದನ್ನು ನೋಡಿಕೊಂಡು ನಾವು ಸುಮ್ಮನೆ ಕೂರಬೇಕಾ? ನಮ್ಮ ಬೇಡಿಕೆಯನ್ನು ತಕ್ಷಣದಲ್ಲಿ ಈಡೇರಿಸದಿದ್ದರೆ ಎಲ್ಲ ಸಂಘಟನೆಗಳು, ಶಿಕ್ಷಣ ತಜ್ಞರು, ಪೋಷಕರು ಹೋರಾಟಕ್ಕೆ ಇಳಿಯಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಇದನ್ನೂ ಓದಿರಿ: ಪಿಯು ಪಠ್ಯ ಪರಿಶೀಲನೆಗೂ ಚಾಲನೆ; ಮತ್ತದೇ ಚಕ್ರತೀರ್ಥ ಸಮಿತಿಗೆ ಜವಾಬ್ದಾರಿ!

ದಲಿತ ಮುಖಂಡರಾದ ಆರ್‌.ಮೋಹನ್‌ ರಾಜ್‌ ಮಾತನಾಡಿ, ಈ ಪಠ್ಯಪುಸ್ತಕವು ಶೂದ್ರ ಹಾಗೂ ಅತಿಶೂದ್ರರನ್ನು ವೇದಗಳ ಕಾಲಕ್ಕೆ, ಮನುವಿನ ಕಾಲಕ್ಕೆ ಕರೆದೊಯ್ಯುವ ಎಲ್ಲ ಹುನ್ನಾರಗಳನ್ನು ಹೊಂದಿದೆ. ಬಾಬಾ ಸಾಹೇಬ್ ಡಾ.ಬಿ.ಆರ್‌.ಅಂಬೇಡ್ಕರ್‌ ಅವರು ಶಿಕ್ಷಣ ಎಲ್ಲರಿಗೂ ಸಿಗಬೇಕು, ವೈಜ್ಞಾನಿಕವಾಗಿರಬೇಕು ಎಂದು ಪ್ರತಿಪಾದಿಸಿದರು. ಆದರೆ ಇವರು ವೈದಿಕಶಾಹಿಗೆ ಕರೆದೊಯ್ಯಬೇಕೆಂದು ಹೊರಟಿದ್ದಾರೆ. ಸಮಿತಿಯಲ್ಲಿ ಹತ್ತು ಜನರಲ್ಲಿ ಒಂಬತ್ತು ಜನರು ಒಂದೇ ಜಾತಿಗೆ ಸೇರಿದವರು. ಜನಸಂಖ್ಯೆಯಲ್ಲಿ ಶೇ. 3ರಷ್ಟಿರುವ ಜಾತಿಯನ್ನು ಪ್ರತಿನಿಧಿಸುವವರಷ್ಟೇ ಪಠ್ಯಪುಸ್ತಕ ಪರಿಶೀಲನಾ ಸಮಿತಿಯಲ್ಲಿದ್ದಾರೆ. ಇದನ್ನು ಸಾಮಾಜಿಕ ನ್ಯಾಯ, ಸಮಾನತೆ ಎನ್ನಲು ಸಾಧ್ಯವೆ? ಎಂದು ಟೀಕಿಸಿದರು.

“ತಳ ಸಮುದಾಯಗಳ ಜಾಗೃತಿ ಮೂಡಿಸಿದ ನಾರಾಯಣಗುರುಗಳನ್ನು ತೆಗೆಯಲು ಹೊರಟಿದ್ದು ಏತಕ್ಕೆ? ವೈಜ್ಞಾನಿಕ ವಿಚಾರಗಳನ್ನು ಪ್ರತಿಪಾದಿಸಿ ಶೂದ್ರ, ಅತಿಶೂದ್ರರಲ್ಲಿ ಜಾಗೃತಿ ಮೂಡಿಸಿದ, ಪ್ರೀತಿ, ಕರುಣೆಯನ್ನು ಸಾರಿದ, ಜಗತ್ತಿಗೆ ಶಾಂತಿಯ ಮಹತ್ವನ್ನು ತಿಳಿಸಿದ ಬುದ್ಧನ ಪಠ್ಯವನ್ನು ತೆಗೆದಿದ್ದಿರಿ. ಏನು ಮಾಡಲು ಹೊರಟಿದ್ದೀರಿ? ಪುರೋಹಿತಶಾಹಿಯನ್ನು, ಮನುವಾದ ಹಾಗೂ ಪಂಚಾಂಗವನ್ನು ತರಲು ಹೊರಟಿದ್ದೀರಿ” ಎಂದು ಆಕ್ರೋಶ ಹೊರಹಾಕಿದರು.

ವಿದ್ಯಾರ್ಥಿ ಬಂಧುತ್ವ ವೇದಿಕೆ ತೋಳಿ ಭರಮಣ್ಣ, ಮುಖಂಡರಾದ ನಾಗೇಶ್ ಅರಳಕುಪ್ಪೆ, ಎಸ್‌ಐಒ ಝೀಶಾನ್‌, ಕೆವಿಎಸ್‌ ಸಂಚಾಲಕರಾದ ಸರೋವರ್‌ ಬೆಂಕಿಕೆರೆ ಹಾಜರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...