Homeಕರ್ನಾಟಕಮಕ್ಕಳಿಗೆ ಇನ್ನೂ ಸಿಕ್ಕಿಲ್ಲ ಪಠ್ಯಪುಸ್ತಕ: ಪೋಷಕರ ಸಂಘಟನೆಗಳ ಸಮನ್ವಯ ಸಮಿತಿ ಆಕ್ರೋಶ

ಮಕ್ಕಳಿಗೆ ಇನ್ನೂ ಸಿಕ್ಕಿಲ್ಲ ಪಠ್ಯಪುಸ್ತಕ: ಪೋಷಕರ ಸಂಘಟನೆಗಳ ಸಮನ್ವಯ ಸಮಿತಿ ಆಕ್ರೋಶ

“ಸರ್ಕಾರಿ ಶಾಲೆಗಳನ್ನು ಸಬಲೀಕರಣ ಮಾಡುತ್ತೇವೆ, ಗುಣಮಟ್ಟವನ್ನು ತರುತ್ತೇವೆ ಎನ್ನುತ್ತೀರಿ. ಕನಿಷ್ಠ ಪಠ್ಯಪುಸ್ತಕಗಳನ್ನು ನೀಡಲು ನಿಮಗೆ ಸಾಧ್ಯವಾಗಿಲ್ಲ. ಮಧ್ಯಾಹ್ನ ಊಟ ಸಿಗದೆ ಅನೇಕ ಮಕ್ಕಳು ಬಾಲ ಕಾರ್ಮಿಕರಾಗುತ್ತಿದ್ದಾರೆ.”

- Advertisement -
- Advertisement -

ಪಠ್ಯಪುಸ್ತಕಗಳ ಮರು ಪರಿಶೀಲನೆಯ ವಿವಾದದ ನೆಪದಲ್ಲಿ ಮಕ್ಕಳಿಗೆ ಪಠ್ಯಪುಸ್ತಕ ವಿತರಣೆ ವಿಳಂಬವಾಗುತ್ತಿರುವ ವಿರುದ್ಧ ಕರ್ನಾಟಕ ರಾಜ್ಯ ಖಾಸಗಿ ಶಾಲಾ ಕಾಲೇಜು ಪೋಷಕರ ಸಂಘಟನೆಗಳ ಸಮನ್ವಯ ಸಮಿತಿ ಆಕ್ರೋಶ ವ್ಯಕ್ತಪಡಿಸಿದೆ.

ಬೆಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಸಮಿತಿಯ ಅಧ್ಯಕ್ಷರಾದ ಬಿ.ಎನ್.ಯೋಗಾನಂದ ಅವರು ಮಾತನಾಡಿ, “ಕೋವಿಡ್ 19 ಬಿಕ್ಕಟ್ಟಿನಿಂದಾಗಿ ರಾಜ್ಯದ ಶೈಕ್ಷಣಿಕ ವಲಯದಲ್ಲಿ ಭಾರೀ ಅಲ್ಲೋಲ ಕಲ್ಲೋಲ ಉಂಟಾಗಿದೆ. ಎರಡು ಶೈಕ್ಷಣಿಕ ಅವಧಿಯಲ್ಲಿ ಬಹುತೇಕ ಮಕ್ಕಳು ಶಾಲೆಗಳ ಮುಖವನ್ನೇ ನೋಡಿಲ್ಲ. ಸರಿಯಾದ ರೀತಿಯಲ್ಲಿ ಮಕ್ಕಳು ಕಲಿಕೆಯಲ್ಲಿ ಭಾಗವಹಿಸಿಲ್ಲ. ಈಗ ಪಠ್ಯಪುಸ್ತಕಗಳೂ ದೊರಕಿಲ್ಲ” ಎಂದು ಬೇಸರ ವ್ಯಕ್ತಪಡಿಸಿದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಎರಡು ವರ್ಷದ ಶೈಕ್ಷಣಿಕ ಅಸಮತೋಲನದಿಂದಾಗಿ ಗ್ರಾಮೀಣ ಪ್ರದೇಶದ ಮಕ್ಕಳು ತಮ್ಮ ಹೆಸರನ್ನೂ ಸರಿಯಾಗಿ ಬರೆಯದ ಮಟ್ಟಕ್ಕೆ ಹೋಗಿದ್ದಾರೆ. ಈ ವರ್ಷ ತರಗತಿಗಳು ಆರಂಭವಾಗಿ ಒಂದು ವಾರವಾಯಿತು. ಕಳೆದ ಎರಡು ವರ್ಷಗಳೂ ಮಕ್ಕಳಿಗೆ ಸರಿಯಾಗಿ ಪಠ್ಯಪುಸ್ತಕಗಳು ಸಿಕ್ಕಿಲ್ಲ. ಸಮವಸ್ತ್ರ, ಬೈಸಿಕಲ್ ಸಿಕ್ಕಿಲ್ಲ, ಬಿಸಿಯೂಟ ಸಿಕ್ಕಿಲ್ಲ. ಇಂತಹ ಸಂದರ್ಭದಲ್ಲಿ ಈ ಸರ್ಕಾರಕ್ಕೆ ಪಠ್ಯಪುಸ್ತಕಗಳ ಪರಿಷ್ಕರಣೆಯ ಅಗತ್ಯವೇನಿತ್ತು? ಎಂದು ಪ್ರಶ್ನಿಸಿದರು.

“ಕಳೆದ ಎರಡು ವರ್ಷಗಳ ಬಜೆಟ್‌ನಲ್ಲಿ ರಾಜ್ಯ ಸರ್ಕಾರ ಶಿಕ್ಷಣಕ್ಕೆ 48,000 ಕೋಟಿ ರೂ. ನೀಡಿದ್ದು, ಆ ಹಣ ಏನಾಯಿತು ಎಂಬುದು ಯಕ್ಷ ಪ್ರಶ್ನೆಯಾಗಿದೆ” ಎಂದ ಅವರು, “ಇಂದು ಹಿಂದುಳಿದ ಜಿಲ್ಲೆಗಳಲ್ಲಿ, ಹೈದ್ರಾಬಾ‌ದ್‌ ಕರ್ನಾಟಕ, ಮುಂಬೈ ಕರ್ನಾಟಕದ ಭಾಗಗಳಲ್ಲಿ ಮಕ್ಕಳಿಗೆ ಬಿಸಿಯೂಟವೂ ಸಿಗುತ್ತಿಲ್ಲ. ಶಾಲೆಗಳಲ್ಲಿ ಊಟ ಸಿಗದೆ ಈ ಮಕ್ಕಳು ಬಾಲ ಕಾರ್ಮಿಕರಾಗುತ್ತಿದ್ದಾರೆ. ಬಾಲ್ಯ ವಿವಾಹ ಪದ್ಧತಿಗಳೂ ಜಾರಿಯಲ್ಲಿವೆ. ಈ ಸಂದರ್ಭದಲ್ಲಿ ಸರ್ಕಾರಕ್ಕೆ ಏನಾದರೂ ಕಿಂಚಿತ್ತು ಶೈಕ್ಷಣಿಕ ಬದುಕಿನ ಬಗ್ಗೆ ಕಾಳಜಿ ಇದ್ದರೆ ಮಕ್ಕಳಿಗಾಗಿರುವ ಕಲಿಕಾ ಕೊರತೆಯನ್ನು ತುಂಬಿಕೊಡುತ್ತಿತ್ತು” ಎಂದರು.

ಇದನ್ನೂ ಓದಿರಿ: ಪಠ್ಯ ಪರಿಶೀಲನೆಗೆ ಚಕ್ರತೀರ್ಥ: ನಾಡಗೀತೆಗೆ ಅವಮಾನ ಮಾಡಿದ್ದ ಪೋಸ್ಟ್‌ ಮತ್ತೆ ವೈರಲ್

ಮಕ್ಕಳಿಗಾಗಿರುವ ಕಲಿಕಾ ಕೊರತೆಯನ್ನು ಇರುವ ಬೇಗ ತುಂಬಬೇಕಿತ್ತು. ಆದಷ್ಟು ಬೇಗ ಈ ಮಕ್ಕಳಿಗೆ ಪಠ್ಯಪುಸ್ತಕವನ್ನು ಕೊಡಬೇಕಾಗಿತ್ತು. ಅದನ್ನು ಮಾಡದೆ ಪಠ್ಯಪುಸ್ತಕ ಪರಿಷ್ಕರಣೆಯ ಹೆಸರಿನಲ್ಲಿ ವಿವಾದ ಸೃಷ್ಟಿಸಲಾಗಿದೆ. ಪಠ್ಯಪುಸ್ತಕ ಇನ್ನೂ ಚರ್ಚೆಯ ಹಂತದಲ್ಲೇ ಇದೆ. ಯಾವ ಪಠ್ಯವನ್ನು ತೆಗೆಯಬೇಕು, ಯಾವುದನ್ನು ಹಾಕಬೇಕು ಎಂದು ಚರ್ಚಿಸುತ್ತಿದ್ದಾರೆ. ವಿವಾದ ಮುಗಿಯುವುದು ಯಾವಾಗ? ಎಂದು ಕೇಳಿದರು.

ಈಗಾಗಲೇ ಎರಡು ವರ್ಷ ನಷ್ಟವಾಗಿದೆ. ಈ ವರ್ಷವೂ ಶೈಕ್ಷಣಿಕ ವಲಯದ ನೂರಾರು ಕೋಟಿ ರೂ.ಗಳನ್ನು ಲೂಟಿ ಮಾಡುವುದಕ್ಕಾಗಿ ಪಠ್ಯ ಪುಸ್ತಕಗಳ ಪರಿಷ್ಕರಣೆಯ ಹೆಸರಲ್ಲಿ ಗೊಂದಲ ಸೃಷ್ಟಿಸಲಾಗಿದೆ. ನಮ್ಮ ಮಕ್ಕಳಿಗೆ ಸರಿಯಾದ ಶಿಕ್ಷಣ ನೀಡುವಲ್ಲಿ ರಾಜ್ಯ ಸರ್ಕಾರ ಹಾಗೂ ಶಿಕ್ಷಣ ಸಚಿವರ ವೈಫಲ್ಯ ಎದ್ದು ಕಾಣುತ್ತಿದೆ. ಈ ಎಲ್ಲ ಗಂಡಾಂತರಗಳಿಗೆ ಶಿಕ್ಷಣ ಸಚಿವರೇ ನೇರ ಹೊಣೆಗಾರರು. ಹೀಗಾಗಿ ಕೂಡಲೇ ಶಿಕ್ಷಣ ಸಚಿವರು ರಾಜೀನಾಮೆಯನ್ನು ನೀಡಬೇಕು. ಇಲ್ಲವಾದರೆ ಶಿಕ್ಷಣ ಸಚಿವರನ್ನು ಮುಖ್ಯಮಂತ್ರಿಯವರು ಬದಲಾಯಿಸಬೇಕು ಎಂದು ಆಗ್ರಹಿಸಿದರು.

ಮಕ್ಕಳಿಗೆ ಸಂವಿಧಾನ ಬದ್ಧವಾಗಿ ಸಿಗಬೇಕಾದ ಶಿಕ್ಷಣದಲ್ಲಿ ಕೇಸರೀಕರಣ, ಖಾಸಗೀಕರಣ ಮಾಡುತ್ತಾ ಹೋಗುತ್ತಿದ್ದಾರೆ. ಇದರಿಂದ ಲಕ್ಷಾಂತರ ವಿದ್ಯಾರ್ಥಿಗಳಿಗೆ ಶಿಕ್ಷಣ ಕೈಗೆಟಕದಂತಾಗುತ್ತಿದೆ. ಇದಕ್ಕೆ ನೇರ ಹೊಣೆ ರಾಜ್ಯ ಸರ್ಕಾರ ಹಾಗೂ ಶಿಕ್ಷಣ ಸಚಿವರು. ಏನಾದರೂ ಮಾಡಿ ದುಡ್ಡು ದೋಚಬೇಕೆಂಬುದು ಶಿಕ್ಷಣ ಇಲಾಖೆಯ ಅಧಿಕಾರಿಗಳ ಮನಸ್ಥಿತಿಯಾಗಿದೆ. ಪರಿಷ್ಕರಣೆ ಮಾಡುವ ನೆಪದಲ್ಲಿ ಮುದ್ರಣ ಮಾಡುತ್ತಿದ್ದಾರೆ. ಮಕ್ಕಳಿಗೆ ಸರಿಯಾದ ರೀತಿಯಲ್ಲಿ ಶಿಕ್ಷಣ ಸಿಗದೆ ಇರುವಂತೆ ನೋಡಿಕೊಳ್ಳಲಾಗುತ್ತಿದೆ. ಸರ್ಕಾರಿ ಶಾಲೆಗಳನ್ನು ಸಬಲೀಕರಣ ಮಾಡುತ್ತೇವೆ, ಗುಣಮಟ್ಟವನ್ನು ತರುತ್ತೇವೆ ಎನ್ನುತ್ತೀರಿ. ಕನಿಷ್ಠ ಪುಸ್ತಕಗಳನ್ನು ಕೊಡದಿದ್ದರೆ ನೀವು ಹೇಗೆ ಗುಣಮಟ್ಟವನ್ನು ತರಲು ಸಾಧ್ಯ?

ಸೈಕಲ್‌ ನೀಡುತ್ತಿದ್ದ ಕಾರಣ ಸಾರಿಗೆ ಸೌಲಭ್ಯವಿಲ್ಲದ ಗುಡ್ಡಗಾಡು ಪ್ರದೇಶದಲ್ಲಿ ಹೆಚ್ಚು ದಾಖಲಾತಿ ಆಗುತ್ತಿತ್ತು. ಈ ವರ್ಷವೂ ಮಕ್ಕಳಿಗೆ ಬೈಸಿಕಲ್ ಸಿಗುವುದು ಅನುಮಾನವಾಗಿದೆ. ನಮ್ಮ ಸಣ್ಣ ಅಭಿಪ್ರಾಯವನ್ನು ಕೇಳುವ ತಾಳ್ಮೆ ಸರ್ಕಾರಕ್ಕೆ ಇಲ್ಲ. ನಮ್ಮ ಮಕ್ಕಳು ಏನನ್ನು ಕಲಿಯಬೇಕು, ಎಷ್ಟು ಕಲಿಯಬೇಕು, ಹೇಗೆ ಕಲಿಯಬೇಕು ಎಂದು ನಿರ್ಧರಿಸುವಲ್ಲಿ ನಮ್ಮ ಪಾತ್ರ ಏನು ಇಲ್ಲವೇ? ಎಂದು ಹರಿಹಾಯ್ದಿದ್ದಾರೆ.

ಪಠ್ಯಪುಸ್ತಕಗಳನ್ನು ಪರಿಶೀಲನೆ ಮಾಡುವುದನ್ನು ತಕ್ಷಣ ಕೈಬಿಡಬೇಕು. ಈ ಹಿಂದೆ ಇದ್ದ ಪಠ್ಯಪುಸ್ತಕಗಳನ್ನೇ ತಕ್ಷಣದಲ್ಲಿ ರಾಜ್ಯದ ಎಲ್ಲ ಶಾಲೆಗಳಿಗೆ ಸರಬರಾಜು ಮಾಡಬೇಕು. ಈ ಪಠ್ಯಪುಸ್ತಕ ಪರಿಶೀಲನಾ ಸಮಿತಿಯನ್ನು ತಕ್ಷಣವೇ ವಿಸರ್ಜನೆ ಮಾಡಬೇಕು ಎಂದು ತಮ್ಮ ಆಗ್ರಹಿಸಿದರು.

ನನ್ನ ಮಗನಿಗೆ ಕನ್ನಡ ಪುಸ್ತಕ ಸಿಕ್ಕಿಲ್ಲ. ಪರಿಷ್ಕರಣೆಯ ಹೆಸರಲ್ಲಿ ರಾಜ್ಯದ ಬೊಕ್ಕಸವನ್ನು ಇವರು ಲೂಟಿ ಮಾಡುತ್ತಿದ್ದಾರಲ್ಲ, ಇದನ್ನು ನೋಡಿಕೊಂಡು ನಾವು ಸುಮ್ಮನೆ ಕೂರಬೇಕಾ? ನಮ್ಮ ಬೇಡಿಕೆಯನ್ನು ತಕ್ಷಣದಲ್ಲಿ ಈಡೇರಿಸದಿದ್ದರೆ ಎಲ್ಲ ಸಂಘಟನೆಗಳು, ಶಿಕ್ಷಣ ತಜ್ಞರು, ಪೋಷಕರು ಹೋರಾಟಕ್ಕೆ ಇಳಿಯಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಇದನ್ನೂ ಓದಿರಿ: ಪಿಯು ಪಠ್ಯ ಪರಿಶೀಲನೆಗೂ ಚಾಲನೆ; ಮತ್ತದೇ ಚಕ್ರತೀರ್ಥ ಸಮಿತಿಗೆ ಜವಾಬ್ದಾರಿ!

ದಲಿತ ಮುಖಂಡರಾದ ಆರ್‌.ಮೋಹನ್‌ ರಾಜ್‌ ಮಾತನಾಡಿ, ಈ ಪಠ್ಯಪುಸ್ತಕವು ಶೂದ್ರ ಹಾಗೂ ಅತಿಶೂದ್ರರನ್ನು ವೇದಗಳ ಕಾಲಕ್ಕೆ, ಮನುವಿನ ಕಾಲಕ್ಕೆ ಕರೆದೊಯ್ಯುವ ಎಲ್ಲ ಹುನ್ನಾರಗಳನ್ನು ಹೊಂದಿದೆ. ಬಾಬಾ ಸಾಹೇಬ್ ಡಾ.ಬಿ.ಆರ್‌.ಅಂಬೇಡ್ಕರ್‌ ಅವರು ಶಿಕ್ಷಣ ಎಲ್ಲರಿಗೂ ಸಿಗಬೇಕು, ವೈಜ್ಞಾನಿಕವಾಗಿರಬೇಕು ಎಂದು ಪ್ರತಿಪಾದಿಸಿದರು. ಆದರೆ ಇವರು ವೈದಿಕಶಾಹಿಗೆ ಕರೆದೊಯ್ಯಬೇಕೆಂದು ಹೊರಟಿದ್ದಾರೆ. ಸಮಿತಿಯಲ್ಲಿ ಹತ್ತು ಜನರಲ್ಲಿ ಒಂಬತ್ತು ಜನರು ಒಂದೇ ಜಾತಿಗೆ ಸೇರಿದವರು. ಜನಸಂಖ್ಯೆಯಲ್ಲಿ ಶೇ. 3ರಷ್ಟಿರುವ ಜಾತಿಯನ್ನು ಪ್ರತಿನಿಧಿಸುವವರಷ್ಟೇ ಪಠ್ಯಪುಸ್ತಕ ಪರಿಶೀಲನಾ ಸಮಿತಿಯಲ್ಲಿದ್ದಾರೆ. ಇದನ್ನು ಸಾಮಾಜಿಕ ನ್ಯಾಯ, ಸಮಾನತೆ ಎನ್ನಲು ಸಾಧ್ಯವೆ? ಎಂದು ಟೀಕಿಸಿದರು.

“ತಳ ಸಮುದಾಯಗಳ ಜಾಗೃತಿ ಮೂಡಿಸಿದ ನಾರಾಯಣಗುರುಗಳನ್ನು ತೆಗೆಯಲು ಹೊರಟಿದ್ದು ಏತಕ್ಕೆ? ವೈಜ್ಞಾನಿಕ ವಿಚಾರಗಳನ್ನು ಪ್ರತಿಪಾದಿಸಿ ಶೂದ್ರ, ಅತಿಶೂದ್ರರಲ್ಲಿ ಜಾಗೃತಿ ಮೂಡಿಸಿದ, ಪ್ರೀತಿ, ಕರುಣೆಯನ್ನು ಸಾರಿದ, ಜಗತ್ತಿಗೆ ಶಾಂತಿಯ ಮಹತ್ವನ್ನು ತಿಳಿಸಿದ ಬುದ್ಧನ ಪಠ್ಯವನ್ನು ತೆಗೆದಿದ್ದಿರಿ. ಏನು ಮಾಡಲು ಹೊರಟಿದ್ದೀರಿ? ಪುರೋಹಿತಶಾಹಿಯನ್ನು, ಮನುವಾದ ಹಾಗೂ ಪಂಚಾಂಗವನ್ನು ತರಲು ಹೊರಟಿದ್ದೀರಿ” ಎಂದು ಆಕ್ರೋಶ ಹೊರಹಾಕಿದರು.

ವಿದ್ಯಾರ್ಥಿ ಬಂಧುತ್ವ ವೇದಿಕೆ ತೋಳಿ ಭರಮಣ್ಣ, ಮುಖಂಡರಾದ ನಾಗೇಶ್ ಅರಳಕುಪ್ಪೆ, ಎಸ್‌ಐಒ ಝೀಶಾನ್‌, ಕೆವಿಎಸ್‌ ಸಂಚಾಲಕರಾದ ಸರೋವರ್‌ ಬೆಂಕಿಕೆರೆ ಹಾಜರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...