Homeಕರ್ನಾಟಕಮಕ್ಕಳಿಗೆ ಇನ್ನೂ ಸಿಕ್ಕಿಲ್ಲ ಪಠ್ಯಪುಸ್ತಕ: ಪೋಷಕರ ಸಂಘಟನೆಗಳ ಸಮನ್ವಯ ಸಮಿತಿ ಆಕ್ರೋಶ

ಮಕ್ಕಳಿಗೆ ಇನ್ನೂ ಸಿಕ್ಕಿಲ್ಲ ಪಠ್ಯಪುಸ್ತಕ: ಪೋಷಕರ ಸಂಘಟನೆಗಳ ಸಮನ್ವಯ ಸಮಿತಿ ಆಕ್ರೋಶ

“ಸರ್ಕಾರಿ ಶಾಲೆಗಳನ್ನು ಸಬಲೀಕರಣ ಮಾಡುತ್ತೇವೆ, ಗುಣಮಟ್ಟವನ್ನು ತರುತ್ತೇವೆ ಎನ್ನುತ್ತೀರಿ. ಕನಿಷ್ಠ ಪಠ್ಯಪುಸ್ತಕಗಳನ್ನು ನೀಡಲು ನಿಮಗೆ ಸಾಧ್ಯವಾಗಿಲ್ಲ. ಮಧ್ಯಾಹ್ನ ಊಟ ಸಿಗದೆ ಅನೇಕ ಮಕ್ಕಳು ಬಾಲ ಕಾರ್ಮಿಕರಾಗುತ್ತಿದ್ದಾರೆ.”

- Advertisement -
- Advertisement -

ಪಠ್ಯಪುಸ್ತಕಗಳ ಮರು ಪರಿಶೀಲನೆಯ ವಿವಾದದ ನೆಪದಲ್ಲಿ ಮಕ್ಕಳಿಗೆ ಪಠ್ಯಪುಸ್ತಕ ವಿತರಣೆ ವಿಳಂಬವಾಗುತ್ತಿರುವ ವಿರುದ್ಧ ಕರ್ನಾಟಕ ರಾಜ್ಯ ಖಾಸಗಿ ಶಾಲಾ ಕಾಲೇಜು ಪೋಷಕರ ಸಂಘಟನೆಗಳ ಸಮನ್ವಯ ಸಮಿತಿ ಆಕ್ರೋಶ ವ್ಯಕ್ತಪಡಿಸಿದೆ.

ಬೆಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಸಮಿತಿಯ ಅಧ್ಯಕ್ಷರಾದ ಬಿ.ಎನ್.ಯೋಗಾನಂದ ಅವರು ಮಾತನಾಡಿ, “ಕೋವಿಡ್ 19 ಬಿಕ್ಕಟ್ಟಿನಿಂದಾಗಿ ರಾಜ್ಯದ ಶೈಕ್ಷಣಿಕ ವಲಯದಲ್ಲಿ ಭಾರೀ ಅಲ್ಲೋಲ ಕಲ್ಲೋಲ ಉಂಟಾಗಿದೆ. ಎರಡು ಶೈಕ್ಷಣಿಕ ಅವಧಿಯಲ್ಲಿ ಬಹುತೇಕ ಮಕ್ಕಳು ಶಾಲೆಗಳ ಮುಖವನ್ನೇ ನೋಡಿಲ್ಲ. ಸರಿಯಾದ ರೀತಿಯಲ್ಲಿ ಮಕ್ಕಳು ಕಲಿಕೆಯಲ್ಲಿ ಭಾಗವಹಿಸಿಲ್ಲ. ಈಗ ಪಠ್ಯಪುಸ್ತಕಗಳೂ ದೊರಕಿಲ್ಲ” ಎಂದು ಬೇಸರ ವ್ಯಕ್ತಪಡಿಸಿದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಎರಡು ವರ್ಷದ ಶೈಕ್ಷಣಿಕ ಅಸಮತೋಲನದಿಂದಾಗಿ ಗ್ರಾಮೀಣ ಪ್ರದೇಶದ ಮಕ್ಕಳು ತಮ್ಮ ಹೆಸರನ್ನೂ ಸರಿಯಾಗಿ ಬರೆಯದ ಮಟ್ಟಕ್ಕೆ ಹೋಗಿದ್ದಾರೆ. ಈ ವರ್ಷ ತರಗತಿಗಳು ಆರಂಭವಾಗಿ ಒಂದು ವಾರವಾಯಿತು. ಕಳೆದ ಎರಡು ವರ್ಷಗಳೂ ಮಕ್ಕಳಿಗೆ ಸರಿಯಾಗಿ ಪಠ್ಯಪುಸ್ತಕಗಳು ಸಿಕ್ಕಿಲ್ಲ. ಸಮವಸ್ತ್ರ, ಬೈಸಿಕಲ್ ಸಿಕ್ಕಿಲ್ಲ, ಬಿಸಿಯೂಟ ಸಿಕ್ಕಿಲ್ಲ. ಇಂತಹ ಸಂದರ್ಭದಲ್ಲಿ ಈ ಸರ್ಕಾರಕ್ಕೆ ಪಠ್ಯಪುಸ್ತಕಗಳ ಪರಿಷ್ಕರಣೆಯ ಅಗತ್ಯವೇನಿತ್ತು? ಎಂದು ಪ್ರಶ್ನಿಸಿದರು.

“ಕಳೆದ ಎರಡು ವರ್ಷಗಳ ಬಜೆಟ್‌ನಲ್ಲಿ ರಾಜ್ಯ ಸರ್ಕಾರ ಶಿಕ್ಷಣಕ್ಕೆ 48,000 ಕೋಟಿ ರೂ. ನೀಡಿದ್ದು, ಆ ಹಣ ಏನಾಯಿತು ಎಂಬುದು ಯಕ್ಷ ಪ್ರಶ್ನೆಯಾಗಿದೆ” ಎಂದ ಅವರು, “ಇಂದು ಹಿಂದುಳಿದ ಜಿಲ್ಲೆಗಳಲ್ಲಿ, ಹೈದ್ರಾಬಾ‌ದ್‌ ಕರ್ನಾಟಕ, ಮುಂಬೈ ಕರ್ನಾಟಕದ ಭಾಗಗಳಲ್ಲಿ ಮಕ್ಕಳಿಗೆ ಬಿಸಿಯೂಟವೂ ಸಿಗುತ್ತಿಲ್ಲ. ಶಾಲೆಗಳಲ್ಲಿ ಊಟ ಸಿಗದೆ ಈ ಮಕ್ಕಳು ಬಾಲ ಕಾರ್ಮಿಕರಾಗುತ್ತಿದ್ದಾರೆ. ಬಾಲ್ಯ ವಿವಾಹ ಪದ್ಧತಿಗಳೂ ಜಾರಿಯಲ್ಲಿವೆ. ಈ ಸಂದರ್ಭದಲ್ಲಿ ಸರ್ಕಾರಕ್ಕೆ ಏನಾದರೂ ಕಿಂಚಿತ್ತು ಶೈಕ್ಷಣಿಕ ಬದುಕಿನ ಬಗ್ಗೆ ಕಾಳಜಿ ಇದ್ದರೆ ಮಕ್ಕಳಿಗಾಗಿರುವ ಕಲಿಕಾ ಕೊರತೆಯನ್ನು ತುಂಬಿಕೊಡುತ್ತಿತ್ತು” ಎಂದರು.

ಇದನ್ನೂ ಓದಿರಿ: ಪಠ್ಯ ಪರಿಶೀಲನೆಗೆ ಚಕ್ರತೀರ್ಥ: ನಾಡಗೀತೆಗೆ ಅವಮಾನ ಮಾಡಿದ್ದ ಪೋಸ್ಟ್‌ ಮತ್ತೆ ವೈರಲ್

ಮಕ್ಕಳಿಗಾಗಿರುವ ಕಲಿಕಾ ಕೊರತೆಯನ್ನು ಇರುವ ಬೇಗ ತುಂಬಬೇಕಿತ್ತು. ಆದಷ್ಟು ಬೇಗ ಈ ಮಕ್ಕಳಿಗೆ ಪಠ್ಯಪುಸ್ತಕವನ್ನು ಕೊಡಬೇಕಾಗಿತ್ತು. ಅದನ್ನು ಮಾಡದೆ ಪಠ್ಯಪುಸ್ತಕ ಪರಿಷ್ಕರಣೆಯ ಹೆಸರಿನಲ್ಲಿ ವಿವಾದ ಸೃಷ್ಟಿಸಲಾಗಿದೆ. ಪಠ್ಯಪುಸ್ತಕ ಇನ್ನೂ ಚರ್ಚೆಯ ಹಂತದಲ್ಲೇ ಇದೆ. ಯಾವ ಪಠ್ಯವನ್ನು ತೆಗೆಯಬೇಕು, ಯಾವುದನ್ನು ಹಾಕಬೇಕು ಎಂದು ಚರ್ಚಿಸುತ್ತಿದ್ದಾರೆ. ವಿವಾದ ಮುಗಿಯುವುದು ಯಾವಾಗ? ಎಂದು ಕೇಳಿದರು.

ಈಗಾಗಲೇ ಎರಡು ವರ್ಷ ನಷ್ಟವಾಗಿದೆ. ಈ ವರ್ಷವೂ ಶೈಕ್ಷಣಿಕ ವಲಯದ ನೂರಾರು ಕೋಟಿ ರೂ.ಗಳನ್ನು ಲೂಟಿ ಮಾಡುವುದಕ್ಕಾಗಿ ಪಠ್ಯ ಪುಸ್ತಕಗಳ ಪರಿಷ್ಕರಣೆಯ ಹೆಸರಲ್ಲಿ ಗೊಂದಲ ಸೃಷ್ಟಿಸಲಾಗಿದೆ. ನಮ್ಮ ಮಕ್ಕಳಿಗೆ ಸರಿಯಾದ ಶಿಕ್ಷಣ ನೀಡುವಲ್ಲಿ ರಾಜ್ಯ ಸರ್ಕಾರ ಹಾಗೂ ಶಿಕ್ಷಣ ಸಚಿವರ ವೈಫಲ್ಯ ಎದ್ದು ಕಾಣುತ್ತಿದೆ. ಈ ಎಲ್ಲ ಗಂಡಾಂತರಗಳಿಗೆ ಶಿಕ್ಷಣ ಸಚಿವರೇ ನೇರ ಹೊಣೆಗಾರರು. ಹೀಗಾಗಿ ಕೂಡಲೇ ಶಿಕ್ಷಣ ಸಚಿವರು ರಾಜೀನಾಮೆಯನ್ನು ನೀಡಬೇಕು. ಇಲ್ಲವಾದರೆ ಶಿಕ್ಷಣ ಸಚಿವರನ್ನು ಮುಖ್ಯಮಂತ್ರಿಯವರು ಬದಲಾಯಿಸಬೇಕು ಎಂದು ಆಗ್ರಹಿಸಿದರು.

ಮಕ್ಕಳಿಗೆ ಸಂವಿಧಾನ ಬದ್ಧವಾಗಿ ಸಿಗಬೇಕಾದ ಶಿಕ್ಷಣದಲ್ಲಿ ಕೇಸರೀಕರಣ, ಖಾಸಗೀಕರಣ ಮಾಡುತ್ತಾ ಹೋಗುತ್ತಿದ್ದಾರೆ. ಇದರಿಂದ ಲಕ್ಷಾಂತರ ವಿದ್ಯಾರ್ಥಿಗಳಿಗೆ ಶಿಕ್ಷಣ ಕೈಗೆಟಕದಂತಾಗುತ್ತಿದೆ. ಇದಕ್ಕೆ ನೇರ ಹೊಣೆ ರಾಜ್ಯ ಸರ್ಕಾರ ಹಾಗೂ ಶಿಕ್ಷಣ ಸಚಿವರು. ಏನಾದರೂ ಮಾಡಿ ದುಡ್ಡು ದೋಚಬೇಕೆಂಬುದು ಶಿಕ್ಷಣ ಇಲಾಖೆಯ ಅಧಿಕಾರಿಗಳ ಮನಸ್ಥಿತಿಯಾಗಿದೆ. ಪರಿಷ್ಕರಣೆ ಮಾಡುವ ನೆಪದಲ್ಲಿ ಮುದ್ರಣ ಮಾಡುತ್ತಿದ್ದಾರೆ. ಮಕ್ಕಳಿಗೆ ಸರಿಯಾದ ರೀತಿಯಲ್ಲಿ ಶಿಕ್ಷಣ ಸಿಗದೆ ಇರುವಂತೆ ನೋಡಿಕೊಳ್ಳಲಾಗುತ್ತಿದೆ. ಸರ್ಕಾರಿ ಶಾಲೆಗಳನ್ನು ಸಬಲೀಕರಣ ಮಾಡುತ್ತೇವೆ, ಗುಣಮಟ್ಟವನ್ನು ತರುತ್ತೇವೆ ಎನ್ನುತ್ತೀರಿ. ಕನಿಷ್ಠ ಪುಸ್ತಕಗಳನ್ನು ಕೊಡದಿದ್ದರೆ ನೀವು ಹೇಗೆ ಗುಣಮಟ್ಟವನ್ನು ತರಲು ಸಾಧ್ಯ?

ಸೈಕಲ್‌ ನೀಡುತ್ತಿದ್ದ ಕಾರಣ ಸಾರಿಗೆ ಸೌಲಭ್ಯವಿಲ್ಲದ ಗುಡ್ಡಗಾಡು ಪ್ರದೇಶದಲ್ಲಿ ಹೆಚ್ಚು ದಾಖಲಾತಿ ಆಗುತ್ತಿತ್ತು. ಈ ವರ್ಷವೂ ಮಕ್ಕಳಿಗೆ ಬೈಸಿಕಲ್ ಸಿಗುವುದು ಅನುಮಾನವಾಗಿದೆ. ನಮ್ಮ ಸಣ್ಣ ಅಭಿಪ್ರಾಯವನ್ನು ಕೇಳುವ ತಾಳ್ಮೆ ಸರ್ಕಾರಕ್ಕೆ ಇಲ್ಲ. ನಮ್ಮ ಮಕ್ಕಳು ಏನನ್ನು ಕಲಿಯಬೇಕು, ಎಷ್ಟು ಕಲಿಯಬೇಕು, ಹೇಗೆ ಕಲಿಯಬೇಕು ಎಂದು ನಿರ್ಧರಿಸುವಲ್ಲಿ ನಮ್ಮ ಪಾತ್ರ ಏನು ಇಲ್ಲವೇ? ಎಂದು ಹರಿಹಾಯ್ದಿದ್ದಾರೆ.

ಪಠ್ಯಪುಸ್ತಕಗಳನ್ನು ಪರಿಶೀಲನೆ ಮಾಡುವುದನ್ನು ತಕ್ಷಣ ಕೈಬಿಡಬೇಕು. ಈ ಹಿಂದೆ ಇದ್ದ ಪಠ್ಯಪುಸ್ತಕಗಳನ್ನೇ ತಕ್ಷಣದಲ್ಲಿ ರಾಜ್ಯದ ಎಲ್ಲ ಶಾಲೆಗಳಿಗೆ ಸರಬರಾಜು ಮಾಡಬೇಕು. ಈ ಪಠ್ಯಪುಸ್ತಕ ಪರಿಶೀಲನಾ ಸಮಿತಿಯನ್ನು ತಕ್ಷಣವೇ ವಿಸರ್ಜನೆ ಮಾಡಬೇಕು ಎಂದು ತಮ್ಮ ಆಗ್ರಹಿಸಿದರು.

ನನ್ನ ಮಗನಿಗೆ ಕನ್ನಡ ಪುಸ್ತಕ ಸಿಕ್ಕಿಲ್ಲ. ಪರಿಷ್ಕರಣೆಯ ಹೆಸರಲ್ಲಿ ರಾಜ್ಯದ ಬೊಕ್ಕಸವನ್ನು ಇವರು ಲೂಟಿ ಮಾಡುತ್ತಿದ್ದಾರಲ್ಲ, ಇದನ್ನು ನೋಡಿಕೊಂಡು ನಾವು ಸುಮ್ಮನೆ ಕೂರಬೇಕಾ? ನಮ್ಮ ಬೇಡಿಕೆಯನ್ನು ತಕ್ಷಣದಲ್ಲಿ ಈಡೇರಿಸದಿದ್ದರೆ ಎಲ್ಲ ಸಂಘಟನೆಗಳು, ಶಿಕ್ಷಣ ತಜ್ಞರು, ಪೋಷಕರು ಹೋರಾಟಕ್ಕೆ ಇಳಿಯಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಇದನ್ನೂ ಓದಿರಿ: ಪಿಯು ಪಠ್ಯ ಪರಿಶೀಲನೆಗೂ ಚಾಲನೆ; ಮತ್ತದೇ ಚಕ್ರತೀರ್ಥ ಸಮಿತಿಗೆ ಜವಾಬ್ದಾರಿ!

ದಲಿತ ಮುಖಂಡರಾದ ಆರ್‌.ಮೋಹನ್‌ ರಾಜ್‌ ಮಾತನಾಡಿ, ಈ ಪಠ್ಯಪುಸ್ತಕವು ಶೂದ್ರ ಹಾಗೂ ಅತಿಶೂದ್ರರನ್ನು ವೇದಗಳ ಕಾಲಕ್ಕೆ, ಮನುವಿನ ಕಾಲಕ್ಕೆ ಕರೆದೊಯ್ಯುವ ಎಲ್ಲ ಹುನ್ನಾರಗಳನ್ನು ಹೊಂದಿದೆ. ಬಾಬಾ ಸಾಹೇಬ್ ಡಾ.ಬಿ.ಆರ್‌.ಅಂಬೇಡ್ಕರ್‌ ಅವರು ಶಿಕ್ಷಣ ಎಲ್ಲರಿಗೂ ಸಿಗಬೇಕು, ವೈಜ್ಞಾನಿಕವಾಗಿರಬೇಕು ಎಂದು ಪ್ರತಿಪಾದಿಸಿದರು. ಆದರೆ ಇವರು ವೈದಿಕಶಾಹಿಗೆ ಕರೆದೊಯ್ಯಬೇಕೆಂದು ಹೊರಟಿದ್ದಾರೆ. ಸಮಿತಿಯಲ್ಲಿ ಹತ್ತು ಜನರಲ್ಲಿ ಒಂಬತ್ತು ಜನರು ಒಂದೇ ಜಾತಿಗೆ ಸೇರಿದವರು. ಜನಸಂಖ್ಯೆಯಲ್ಲಿ ಶೇ. 3ರಷ್ಟಿರುವ ಜಾತಿಯನ್ನು ಪ್ರತಿನಿಧಿಸುವವರಷ್ಟೇ ಪಠ್ಯಪುಸ್ತಕ ಪರಿಶೀಲನಾ ಸಮಿತಿಯಲ್ಲಿದ್ದಾರೆ. ಇದನ್ನು ಸಾಮಾಜಿಕ ನ್ಯಾಯ, ಸಮಾನತೆ ಎನ್ನಲು ಸಾಧ್ಯವೆ? ಎಂದು ಟೀಕಿಸಿದರು.

“ತಳ ಸಮುದಾಯಗಳ ಜಾಗೃತಿ ಮೂಡಿಸಿದ ನಾರಾಯಣಗುರುಗಳನ್ನು ತೆಗೆಯಲು ಹೊರಟಿದ್ದು ಏತಕ್ಕೆ? ವೈಜ್ಞಾನಿಕ ವಿಚಾರಗಳನ್ನು ಪ್ರತಿಪಾದಿಸಿ ಶೂದ್ರ, ಅತಿಶೂದ್ರರಲ್ಲಿ ಜಾಗೃತಿ ಮೂಡಿಸಿದ, ಪ್ರೀತಿ, ಕರುಣೆಯನ್ನು ಸಾರಿದ, ಜಗತ್ತಿಗೆ ಶಾಂತಿಯ ಮಹತ್ವನ್ನು ತಿಳಿಸಿದ ಬುದ್ಧನ ಪಠ್ಯವನ್ನು ತೆಗೆದಿದ್ದಿರಿ. ಏನು ಮಾಡಲು ಹೊರಟಿದ್ದೀರಿ? ಪುರೋಹಿತಶಾಹಿಯನ್ನು, ಮನುವಾದ ಹಾಗೂ ಪಂಚಾಂಗವನ್ನು ತರಲು ಹೊರಟಿದ್ದೀರಿ” ಎಂದು ಆಕ್ರೋಶ ಹೊರಹಾಕಿದರು.

ವಿದ್ಯಾರ್ಥಿ ಬಂಧುತ್ವ ವೇದಿಕೆ ತೋಳಿ ಭರಮಣ್ಣ, ಮುಖಂಡರಾದ ನಾಗೇಶ್ ಅರಳಕುಪ್ಪೆ, ಎಸ್‌ಐಒ ಝೀಶಾನ್‌, ಕೆವಿಎಸ್‌ ಸಂಚಾಲಕರಾದ ಸರೋವರ್‌ ಬೆಂಕಿಕೆರೆ ಹಾಜರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೇಮಕಾತಿ ಅಕ್ರಮ ಖಂಡಿಸಿ ಜಾರ್ಖಂಡ್‌ನಲ್ಲಿ ಧರಣಿ: ವಿದ್ಯಾರ್ಥಿಗಳ ಹೋರಾಟಕ್ಕೆ ತಲೆಬಾಗಿದ ಸಿಎಂ ಹೇಮಂತ್ ಸೊರೇನ್, ‘ನ್ಯಾಯದ ಭರವಸೆ’

ಜಾರ್ಖಂಡ್‌ನ ಸರ್ಕಾರಿ ಉದ್ಯೋಗ ಆಕಾಂಕ್ಷಿಗಳು ಹಾಗೂ ಯುವಜನತೆ ತಮ್ಮ ಭವಿಷ್ಯದ ಭದ್ರತೆಗಾಗಿ ಬೀದಿಗಿಳಿದು ನಡೆಸುತ್ತಿರುವ ಬೃಹತ್ ಪ್ರತಿಭಟನೆ ಈಗ ಇಡೀ ರಾಜ್ಯದ ಗಮನ ಸೆಳೆದಿದೆ. ಜಾರ್ಖಂಡ್ ಸಾರ್ವಜನಿಕ ಸೇವಾ ಆಯೋಗ (JPSC) ಮತ್ತು...

ಪ.ಬಂಗಾಳ : ಮಮತಾ ಬ್ಯಾನರ್ಜಿ ಕಾರಿನ ಮೇಲೆ ದಾಳಿ; ಕಲ್ಲು, ಚಪ್ಪಲಿ ತೂರಿದ ಗುಂಪು

ಪೊಲೀಸ್ ಕಸ್ಟಡಿಯಲ್ಲಿ ಸಾವನ್ನಪ್ಪಿದ್ದಾರೆ ಎನ್ನಲಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕಾರ್ಯಕರ್ತನ ಮನೆಗೆ ಹೋಗುತ್ತಿದ್ದಾಗ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇದ್ದ ಕಾರಿನ ಮೇಲೆ ಗುಂಪೊಂದು ದಾಳಿ ನಡೆಸಿದ ಘಟನೆ ಭಾನುವಾರ...

SIR ನೆಪದಲ್ಲಿ 1 ಕೋಟಿ ಮತ ಡಿಲೀಟ್ ಮಾಡೋ ಸಂಚು: ಎಚ್ಚೆತ್ತುಕೊಳ್ಳುವಂತೆ ಕಾರ್ಯಕರ್ತರಿಗೆ ಡಿ.ಕೆ. ಶಿವಕುಮಾರ್ ಕರೆ

SIR ನೆಪದಲ್ಲಿ ಮತದಾರರ ಪಟ್ಟಿಯಿಂದ ಒಂದು ಕೋಟಿಗೂ ಹೆಚ್ಚು ಮತಗಳನ್ನು ಅಳಿಸುವ ಸಂಚು ನಡೆಯುತ್ತಿದೆ, ಕಾಂಗ್ರೆಸ್ ಕಾರ್ಯಕರ್ತರು ಈ ವಿಚಾರದಲ್ಲಿ ಎಚ್ಚೆತ್ತುಕೊಳ್ಳಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕರೆ ನೀಡಿದರು. ಕೆಪಿಸಿಸಿ ಕಚೇರಿಯ...

‘ಮೋದಿ ದೇಶದ ಯುವಕರನ್ನು ಸಬಲೀಕರಣಗೊಳಿಸಲು ಶ್ರಮಿಸುತ್ತಿದ್ದಾರೆ ’: ‘ಜೆನ್ ಝೀ’ಗಳನ್ನು ‘ಬಾಹ್ಯ ಶಕ್ತಿಗಳು ದಾರಿ ತಪ್ಪಿಸುತ್ತಿವೆ’: ಒಡಿಶಾ ಸಿಎಂ ಮೋಹನ್ ಚರಣ್ ಮಾಝಿ

ಭುವನೇಶ್ವರ: ಜಾಗತಿಕ ವೇದಿಕೆಯಲ್ಲಿ "ತಮ್ಮನ್ನು ದಾರಿ ತಪ್ಪಿಸಲು ಮತ್ತು ಭಾರತವನ್ನು ದುರ್ಬಲಗೊಳಿಸಲು" ನಿರಂತರವಾಗಿ ಪ್ರಯತ್ನಿಸುತ್ತಿರುವ "ಬಾಹ್ಯ ಶಕ್ತಿಗಳಿಗೆ" ಬಲಿಯಾಗಬೇಡಿ ಎಂದು ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಭಾನುವಾರ ಜೆನ್ ಝೀ (GEN-Z)...

ಪದವಿ ಪ್ರದಾನ ಸಮಾರಂಭಕ್ಕೆ CJI ಆಹ್ವಾನಿಸಲು ಹೈದರಾಬಾದ್ ಕಾನೂನು ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ವಿರೋಧ

ಹೈದರಾಬಾದ್‌ನ ‘ನಾಲ್ಸಾರ್’ (NALSAR) ಕಾನೂನು ವಿಶ್ವವಿದ್ಯಾಲಯದ ಪದವಿ ಪ್ರದಾನ ಸಮಾರಂಭಕ್ಕೆ ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಬಾರದು ಎಂದು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಒಂದು ಗುಂಪು ಆಡಳಿತ...

3ನೇ ಹಂತದ ‘SIR’ ಕರಡು ಮತದಾರರ ಪಟ್ಟಿ ಬಿಡುಗಡೆ: 12 ರಾಜ್ಯಗಳಲ್ಲಿ 1.58 ಕೋಟಿ ಮತದಾರರ ಹೆಸರು ಕೈಬಿಟ್ಟ ಆಯೋಗ, ಇನ್ನು ಕರ್ನಾಟಕ ಬಾಕಿ

3ನೇ ಹಂತದದಲ್ಲಿ ದೇಶದ 12 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಜುಲೈನಿಂದ ನಡೆಸಲಾದ ‘ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ’ (SIR) ಪ್ರಕ್ರಿಯೆಯ ಬಳಿಕ ಬಿಡುಗಡೆಯಾದ ಕರಡು ಮತದಾರರ ಪಟ್ಟಿಯಲ್ಲಿ ಭಾರಿ ಪ್ರಮಾಣದ ಹೆಸರುಗಳು...

ದಾರುಲ್ ಉಲೂಮ್ ದಿಯೋಬಂದ್ ಆವರಣದಲ್ಲಿ ಶಿವಲಿಂಗವಿದೆ ಎಂದ ಹಿಂದುತ್ವ ಸಂಘಟನೆ : ಆ.11ರಂದು ಗಂಗಾಜಲ ಅರ್ಪಿಸುವುದಾಗಿ ಘೋಷಣೆ

ಉತ್ತರ ಪ್ರದೇಶದ ದಿಯೋಬಂದ್‌ನಲ್ಲಿರುವ ಪ್ರಸಿದ್ದ ಮುಸ್ಲಿಂ ಶಿಕ್ಷಣ ಸಂಸ್ಥೆ ದಾರುಲ್ ಉಲೂಮ್ ಆವರಣದಲ್ಲಿ ಶಿವಲಿಂಗವಿದೆ ಎಂದು ಪ್ರತಿಪಾದಿಸಿರುವ ಹಿಂದೂ ರಕ್ಷಾ ದಳ ಸಂಘಟನೆ, ಆಗಸ್ಟ್ 11 ರಂದು ಸಂಸ್ಥೆಗೆ ಭೇಟಿ ನೀಡಿ ಗಂಗಾಜಲ...

‘ಮೋದಿ ನಮ್ಮನ್ನು ಗುಂಡಿಕ್ಕಿ ಕೊಂದರೂ ಈ ಜೀವಿತಾವಧಿಯಲ್ಲಿ ವಂದೇ ಮಾತರಂ ಪೂರ್ಣ ಆವೃತ್ತಿ ಹಾಡುವುದಿಲ್ಲ’: ಕೇರಳ ಕಾಂಗ್ರೆಸ್ ಸಂಸದ ರಾಜಮೋಹನ್ ಉನ್ನಿತ್ತಾನ್

ಕಾಸರಗೋಡು (ಕೇರಳ): ಕೇಂದ್ರ ಸರ್ಕಾರದ ನಿರ್ದೇಶನದ ಮೇರೆಗೆ 'ಹರ್ ಘರ್ ತಿರಂಗಾ' ಅಭಿಯಾನದ ಸಮಯದಲ್ಲಿ ರಾಷ್ಟ್ರಗೀತೆ 'ವಂದೇ ಮಾತರಂ'ನ ಸಂಪೂರ್ಣ ವಾಗ್ವಾದ/ಆವೃತ್ತಿಯನ್ನು ಹಾಡುವಂತೆ ರಾಜ್ಯ ಸರ್ಕಾರ ಹೊರಡಿಸಿರುವ ಸಂವಹನದ ಸುತ್ತ ಭಾರಿ ವಿವಾದ...

ಮೊಜ್ತಬಾ ಖಾಮಿನೈ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದ ಇಸ್ರೇಲ್ ಮಾಧ್ಯಮಗಳು : ವಿಡಿಯೋ ಬಿಡುಗಡೆ ಮಾಡಿ ಕೌಂಟರ್ ಕೊಟ್ಟ ಇರಾನ್

ಇರಾನ್‌ನ ಸರ್ವೋಚ್ಚ ನಾಯಕ ಮೊಜ್ತಾಬಾ ಖಾಮಿನೈ ಅವರ ಆರೋಗ್ಯ ಸ್ಥಿತಿ 'ಅತ್ಯಂತ ಗಂಭೀರವಾಗಿದೆ' ಎಂದು ಇಸ್ರೇಲಿ ಮಾಧ್ಯಮಗಳು ವರದಿ ಮಾಡಿದ ಬೆನ್ನಲ್ಲೇ, ಅವರು ಉತ್ತಮ ಆರೋಗ್ಯದಿಂದ ಇರುವಂತೆ ಕಾಣಿಸುವ ದಿನಾಂಕವಿಲ್ಲದ ವಿಡಿಯೋ ಒಂದನ್ನು...

‘ಬ್ರಿಟಿಷರಿಂದ ಕಠಿಣ ಶಿಕ್ಷೆ ಅನುಭವಿಸಿದವರು ಸಾವರ್ಕರ್’ ಎಂಬ ಕೇರಳ ಶಾಲೆಯೊಂದರ ಕ್ವಿಜ್‌ ಪ್ರಶ್ನೆ ತಂದಿಟ್ಟ ವಿವಾದ

ಕೇರಳದ ಕಾಸರಗೋಡು ಜಿಲ್ಲೆಯ ಮಂಜೇಶ್ವರಂ ಮತ್ತು ಕುಂಬಳೆ ಉಪಜಿಲ್ಲೆಗಳ ಕಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದ್ದ ಸ್ವಾತಂತ್ರ್ಯ ದಿನಾಚರಣೆ ಕ್ವಿಜ್‌ನಲ್ಲಿ ವಿ ವಿನಾಯಕ ದಾಮೋದರ ಸಾವರ್ಕರ್ ಕುರಿತಾದ ಪ್ರಶ್ನೆಯೊಂದು ತೀವ್ರ ವಿವಾದಕ್ಕೆ ಕಾರಣವಾಗಿದೆ....