Homeಕರ್ನಾಟಕಮಕ್ಕಳಿಗೆ ಇನ್ನೂ ಸಿಕ್ಕಿಲ್ಲ ಪಠ್ಯಪುಸ್ತಕ: ಪೋಷಕರ ಸಂಘಟನೆಗಳ ಸಮನ್ವಯ ಸಮಿತಿ ಆಕ್ರೋಶ

ಮಕ್ಕಳಿಗೆ ಇನ್ನೂ ಸಿಕ್ಕಿಲ್ಲ ಪಠ್ಯಪುಸ್ತಕ: ಪೋಷಕರ ಸಂಘಟನೆಗಳ ಸಮನ್ವಯ ಸಮಿತಿ ಆಕ್ರೋಶ

“ಸರ್ಕಾರಿ ಶಾಲೆಗಳನ್ನು ಸಬಲೀಕರಣ ಮಾಡುತ್ತೇವೆ, ಗುಣಮಟ್ಟವನ್ನು ತರುತ್ತೇವೆ ಎನ್ನುತ್ತೀರಿ. ಕನಿಷ್ಠ ಪಠ್ಯಪುಸ್ತಕಗಳನ್ನು ನೀಡಲು ನಿಮಗೆ ಸಾಧ್ಯವಾಗಿಲ್ಲ. ಮಧ್ಯಾಹ್ನ ಊಟ ಸಿಗದೆ ಅನೇಕ ಮಕ್ಕಳು ಬಾಲ ಕಾರ್ಮಿಕರಾಗುತ್ತಿದ್ದಾರೆ.”

- Advertisement -
- Advertisement -

ಪಠ್ಯಪುಸ್ತಕಗಳ ಮರು ಪರಿಶೀಲನೆಯ ವಿವಾದದ ನೆಪದಲ್ಲಿ ಮಕ್ಕಳಿಗೆ ಪಠ್ಯಪುಸ್ತಕ ವಿತರಣೆ ವಿಳಂಬವಾಗುತ್ತಿರುವ ವಿರುದ್ಧ ಕರ್ನಾಟಕ ರಾಜ್ಯ ಖಾಸಗಿ ಶಾಲಾ ಕಾಲೇಜು ಪೋಷಕರ ಸಂಘಟನೆಗಳ ಸಮನ್ವಯ ಸಮಿತಿ ಆಕ್ರೋಶ ವ್ಯಕ್ತಪಡಿಸಿದೆ.

ಬೆಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಸಮಿತಿಯ ಅಧ್ಯಕ್ಷರಾದ ಬಿ.ಎನ್.ಯೋಗಾನಂದ ಅವರು ಮಾತನಾಡಿ, “ಕೋವಿಡ್ 19 ಬಿಕ್ಕಟ್ಟಿನಿಂದಾಗಿ ರಾಜ್ಯದ ಶೈಕ್ಷಣಿಕ ವಲಯದಲ್ಲಿ ಭಾರೀ ಅಲ್ಲೋಲ ಕಲ್ಲೋಲ ಉಂಟಾಗಿದೆ. ಎರಡು ಶೈಕ್ಷಣಿಕ ಅವಧಿಯಲ್ಲಿ ಬಹುತೇಕ ಮಕ್ಕಳು ಶಾಲೆಗಳ ಮುಖವನ್ನೇ ನೋಡಿಲ್ಲ. ಸರಿಯಾದ ರೀತಿಯಲ್ಲಿ ಮಕ್ಕಳು ಕಲಿಕೆಯಲ್ಲಿ ಭಾಗವಹಿಸಿಲ್ಲ. ಈಗ ಪಠ್ಯಪುಸ್ತಕಗಳೂ ದೊರಕಿಲ್ಲ” ಎಂದು ಬೇಸರ ವ್ಯಕ್ತಪಡಿಸಿದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಎರಡು ವರ್ಷದ ಶೈಕ್ಷಣಿಕ ಅಸಮತೋಲನದಿಂದಾಗಿ ಗ್ರಾಮೀಣ ಪ್ರದೇಶದ ಮಕ್ಕಳು ತಮ್ಮ ಹೆಸರನ್ನೂ ಸರಿಯಾಗಿ ಬರೆಯದ ಮಟ್ಟಕ್ಕೆ ಹೋಗಿದ್ದಾರೆ. ಈ ವರ್ಷ ತರಗತಿಗಳು ಆರಂಭವಾಗಿ ಒಂದು ವಾರವಾಯಿತು. ಕಳೆದ ಎರಡು ವರ್ಷಗಳೂ ಮಕ್ಕಳಿಗೆ ಸರಿಯಾಗಿ ಪಠ್ಯಪುಸ್ತಕಗಳು ಸಿಕ್ಕಿಲ್ಲ. ಸಮವಸ್ತ್ರ, ಬೈಸಿಕಲ್ ಸಿಕ್ಕಿಲ್ಲ, ಬಿಸಿಯೂಟ ಸಿಕ್ಕಿಲ್ಲ. ಇಂತಹ ಸಂದರ್ಭದಲ್ಲಿ ಈ ಸರ್ಕಾರಕ್ಕೆ ಪಠ್ಯಪುಸ್ತಕಗಳ ಪರಿಷ್ಕರಣೆಯ ಅಗತ್ಯವೇನಿತ್ತು? ಎಂದು ಪ್ರಶ್ನಿಸಿದರು.

“ಕಳೆದ ಎರಡು ವರ್ಷಗಳ ಬಜೆಟ್‌ನಲ್ಲಿ ರಾಜ್ಯ ಸರ್ಕಾರ ಶಿಕ್ಷಣಕ್ಕೆ 48,000 ಕೋಟಿ ರೂ. ನೀಡಿದ್ದು, ಆ ಹಣ ಏನಾಯಿತು ಎಂಬುದು ಯಕ್ಷ ಪ್ರಶ್ನೆಯಾಗಿದೆ” ಎಂದ ಅವರು, “ಇಂದು ಹಿಂದುಳಿದ ಜಿಲ್ಲೆಗಳಲ್ಲಿ, ಹೈದ್ರಾಬಾ‌ದ್‌ ಕರ್ನಾಟಕ, ಮುಂಬೈ ಕರ್ನಾಟಕದ ಭಾಗಗಳಲ್ಲಿ ಮಕ್ಕಳಿಗೆ ಬಿಸಿಯೂಟವೂ ಸಿಗುತ್ತಿಲ್ಲ. ಶಾಲೆಗಳಲ್ಲಿ ಊಟ ಸಿಗದೆ ಈ ಮಕ್ಕಳು ಬಾಲ ಕಾರ್ಮಿಕರಾಗುತ್ತಿದ್ದಾರೆ. ಬಾಲ್ಯ ವಿವಾಹ ಪದ್ಧತಿಗಳೂ ಜಾರಿಯಲ್ಲಿವೆ. ಈ ಸಂದರ್ಭದಲ್ಲಿ ಸರ್ಕಾರಕ್ಕೆ ಏನಾದರೂ ಕಿಂಚಿತ್ತು ಶೈಕ್ಷಣಿಕ ಬದುಕಿನ ಬಗ್ಗೆ ಕಾಳಜಿ ಇದ್ದರೆ ಮಕ್ಕಳಿಗಾಗಿರುವ ಕಲಿಕಾ ಕೊರತೆಯನ್ನು ತುಂಬಿಕೊಡುತ್ತಿತ್ತು” ಎಂದರು.

ಇದನ್ನೂ ಓದಿರಿ: ಪಠ್ಯ ಪರಿಶೀಲನೆಗೆ ಚಕ್ರತೀರ್ಥ: ನಾಡಗೀತೆಗೆ ಅವಮಾನ ಮಾಡಿದ್ದ ಪೋಸ್ಟ್‌ ಮತ್ತೆ ವೈರಲ್

ಮಕ್ಕಳಿಗಾಗಿರುವ ಕಲಿಕಾ ಕೊರತೆಯನ್ನು ಇರುವ ಬೇಗ ತುಂಬಬೇಕಿತ್ತು. ಆದಷ್ಟು ಬೇಗ ಈ ಮಕ್ಕಳಿಗೆ ಪಠ್ಯಪುಸ್ತಕವನ್ನು ಕೊಡಬೇಕಾಗಿತ್ತು. ಅದನ್ನು ಮಾಡದೆ ಪಠ್ಯಪುಸ್ತಕ ಪರಿಷ್ಕರಣೆಯ ಹೆಸರಿನಲ್ಲಿ ವಿವಾದ ಸೃಷ್ಟಿಸಲಾಗಿದೆ. ಪಠ್ಯಪುಸ್ತಕ ಇನ್ನೂ ಚರ್ಚೆಯ ಹಂತದಲ್ಲೇ ಇದೆ. ಯಾವ ಪಠ್ಯವನ್ನು ತೆಗೆಯಬೇಕು, ಯಾವುದನ್ನು ಹಾಕಬೇಕು ಎಂದು ಚರ್ಚಿಸುತ್ತಿದ್ದಾರೆ. ವಿವಾದ ಮುಗಿಯುವುದು ಯಾವಾಗ? ಎಂದು ಕೇಳಿದರು.

ಈಗಾಗಲೇ ಎರಡು ವರ್ಷ ನಷ್ಟವಾಗಿದೆ. ಈ ವರ್ಷವೂ ಶೈಕ್ಷಣಿಕ ವಲಯದ ನೂರಾರು ಕೋಟಿ ರೂ.ಗಳನ್ನು ಲೂಟಿ ಮಾಡುವುದಕ್ಕಾಗಿ ಪಠ್ಯ ಪುಸ್ತಕಗಳ ಪರಿಷ್ಕರಣೆಯ ಹೆಸರಲ್ಲಿ ಗೊಂದಲ ಸೃಷ್ಟಿಸಲಾಗಿದೆ. ನಮ್ಮ ಮಕ್ಕಳಿಗೆ ಸರಿಯಾದ ಶಿಕ್ಷಣ ನೀಡುವಲ್ಲಿ ರಾಜ್ಯ ಸರ್ಕಾರ ಹಾಗೂ ಶಿಕ್ಷಣ ಸಚಿವರ ವೈಫಲ್ಯ ಎದ್ದು ಕಾಣುತ್ತಿದೆ. ಈ ಎಲ್ಲ ಗಂಡಾಂತರಗಳಿಗೆ ಶಿಕ್ಷಣ ಸಚಿವರೇ ನೇರ ಹೊಣೆಗಾರರು. ಹೀಗಾಗಿ ಕೂಡಲೇ ಶಿಕ್ಷಣ ಸಚಿವರು ರಾಜೀನಾಮೆಯನ್ನು ನೀಡಬೇಕು. ಇಲ್ಲವಾದರೆ ಶಿಕ್ಷಣ ಸಚಿವರನ್ನು ಮುಖ್ಯಮಂತ್ರಿಯವರು ಬದಲಾಯಿಸಬೇಕು ಎಂದು ಆಗ್ರಹಿಸಿದರು.

ಮಕ್ಕಳಿಗೆ ಸಂವಿಧಾನ ಬದ್ಧವಾಗಿ ಸಿಗಬೇಕಾದ ಶಿಕ್ಷಣದಲ್ಲಿ ಕೇಸರೀಕರಣ, ಖಾಸಗೀಕರಣ ಮಾಡುತ್ತಾ ಹೋಗುತ್ತಿದ್ದಾರೆ. ಇದರಿಂದ ಲಕ್ಷಾಂತರ ವಿದ್ಯಾರ್ಥಿಗಳಿಗೆ ಶಿಕ್ಷಣ ಕೈಗೆಟಕದಂತಾಗುತ್ತಿದೆ. ಇದಕ್ಕೆ ನೇರ ಹೊಣೆ ರಾಜ್ಯ ಸರ್ಕಾರ ಹಾಗೂ ಶಿಕ್ಷಣ ಸಚಿವರು. ಏನಾದರೂ ಮಾಡಿ ದುಡ್ಡು ದೋಚಬೇಕೆಂಬುದು ಶಿಕ್ಷಣ ಇಲಾಖೆಯ ಅಧಿಕಾರಿಗಳ ಮನಸ್ಥಿತಿಯಾಗಿದೆ. ಪರಿಷ್ಕರಣೆ ಮಾಡುವ ನೆಪದಲ್ಲಿ ಮುದ್ರಣ ಮಾಡುತ್ತಿದ್ದಾರೆ. ಮಕ್ಕಳಿಗೆ ಸರಿಯಾದ ರೀತಿಯಲ್ಲಿ ಶಿಕ್ಷಣ ಸಿಗದೆ ಇರುವಂತೆ ನೋಡಿಕೊಳ್ಳಲಾಗುತ್ತಿದೆ. ಸರ್ಕಾರಿ ಶಾಲೆಗಳನ್ನು ಸಬಲೀಕರಣ ಮಾಡುತ್ತೇವೆ, ಗುಣಮಟ್ಟವನ್ನು ತರುತ್ತೇವೆ ಎನ್ನುತ್ತೀರಿ. ಕನಿಷ್ಠ ಪುಸ್ತಕಗಳನ್ನು ಕೊಡದಿದ್ದರೆ ನೀವು ಹೇಗೆ ಗುಣಮಟ್ಟವನ್ನು ತರಲು ಸಾಧ್ಯ?

ಸೈಕಲ್‌ ನೀಡುತ್ತಿದ್ದ ಕಾರಣ ಸಾರಿಗೆ ಸೌಲಭ್ಯವಿಲ್ಲದ ಗುಡ್ಡಗಾಡು ಪ್ರದೇಶದಲ್ಲಿ ಹೆಚ್ಚು ದಾಖಲಾತಿ ಆಗುತ್ತಿತ್ತು. ಈ ವರ್ಷವೂ ಮಕ್ಕಳಿಗೆ ಬೈಸಿಕಲ್ ಸಿಗುವುದು ಅನುಮಾನವಾಗಿದೆ. ನಮ್ಮ ಸಣ್ಣ ಅಭಿಪ್ರಾಯವನ್ನು ಕೇಳುವ ತಾಳ್ಮೆ ಸರ್ಕಾರಕ್ಕೆ ಇಲ್ಲ. ನಮ್ಮ ಮಕ್ಕಳು ಏನನ್ನು ಕಲಿಯಬೇಕು, ಎಷ್ಟು ಕಲಿಯಬೇಕು, ಹೇಗೆ ಕಲಿಯಬೇಕು ಎಂದು ನಿರ್ಧರಿಸುವಲ್ಲಿ ನಮ್ಮ ಪಾತ್ರ ಏನು ಇಲ್ಲವೇ? ಎಂದು ಹರಿಹಾಯ್ದಿದ್ದಾರೆ.

ಪಠ್ಯಪುಸ್ತಕಗಳನ್ನು ಪರಿಶೀಲನೆ ಮಾಡುವುದನ್ನು ತಕ್ಷಣ ಕೈಬಿಡಬೇಕು. ಈ ಹಿಂದೆ ಇದ್ದ ಪಠ್ಯಪುಸ್ತಕಗಳನ್ನೇ ತಕ್ಷಣದಲ್ಲಿ ರಾಜ್ಯದ ಎಲ್ಲ ಶಾಲೆಗಳಿಗೆ ಸರಬರಾಜು ಮಾಡಬೇಕು. ಈ ಪಠ್ಯಪುಸ್ತಕ ಪರಿಶೀಲನಾ ಸಮಿತಿಯನ್ನು ತಕ್ಷಣವೇ ವಿಸರ್ಜನೆ ಮಾಡಬೇಕು ಎಂದು ತಮ್ಮ ಆಗ್ರಹಿಸಿದರು.

ನನ್ನ ಮಗನಿಗೆ ಕನ್ನಡ ಪುಸ್ತಕ ಸಿಕ್ಕಿಲ್ಲ. ಪರಿಷ್ಕರಣೆಯ ಹೆಸರಲ್ಲಿ ರಾಜ್ಯದ ಬೊಕ್ಕಸವನ್ನು ಇವರು ಲೂಟಿ ಮಾಡುತ್ತಿದ್ದಾರಲ್ಲ, ಇದನ್ನು ನೋಡಿಕೊಂಡು ನಾವು ಸುಮ್ಮನೆ ಕೂರಬೇಕಾ? ನಮ್ಮ ಬೇಡಿಕೆಯನ್ನು ತಕ್ಷಣದಲ್ಲಿ ಈಡೇರಿಸದಿದ್ದರೆ ಎಲ್ಲ ಸಂಘಟನೆಗಳು, ಶಿಕ್ಷಣ ತಜ್ಞರು, ಪೋಷಕರು ಹೋರಾಟಕ್ಕೆ ಇಳಿಯಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಇದನ್ನೂ ಓದಿರಿ: ಪಿಯು ಪಠ್ಯ ಪರಿಶೀಲನೆಗೂ ಚಾಲನೆ; ಮತ್ತದೇ ಚಕ್ರತೀರ್ಥ ಸಮಿತಿಗೆ ಜವಾಬ್ದಾರಿ!

ದಲಿತ ಮುಖಂಡರಾದ ಆರ್‌.ಮೋಹನ್‌ ರಾಜ್‌ ಮಾತನಾಡಿ, ಈ ಪಠ್ಯಪುಸ್ತಕವು ಶೂದ್ರ ಹಾಗೂ ಅತಿಶೂದ್ರರನ್ನು ವೇದಗಳ ಕಾಲಕ್ಕೆ, ಮನುವಿನ ಕಾಲಕ್ಕೆ ಕರೆದೊಯ್ಯುವ ಎಲ್ಲ ಹುನ್ನಾರಗಳನ್ನು ಹೊಂದಿದೆ. ಬಾಬಾ ಸಾಹೇಬ್ ಡಾ.ಬಿ.ಆರ್‌.ಅಂಬೇಡ್ಕರ್‌ ಅವರು ಶಿಕ್ಷಣ ಎಲ್ಲರಿಗೂ ಸಿಗಬೇಕು, ವೈಜ್ಞಾನಿಕವಾಗಿರಬೇಕು ಎಂದು ಪ್ರತಿಪಾದಿಸಿದರು. ಆದರೆ ಇವರು ವೈದಿಕಶಾಹಿಗೆ ಕರೆದೊಯ್ಯಬೇಕೆಂದು ಹೊರಟಿದ್ದಾರೆ. ಸಮಿತಿಯಲ್ಲಿ ಹತ್ತು ಜನರಲ್ಲಿ ಒಂಬತ್ತು ಜನರು ಒಂದೇ ಜಾತಿಗೆ ಸೇರಿದವರು. ಜನಸಂಖ್ಯೆಯಲ್ಲಿ ಶೇ. 3ರಷ್ಟಿರುವ ಜಾತಿಯನ್ನು ಪ್ರತಿನಿಧಿಸುವವರಷ್ಟೇ ಪಠ್ಯಪುಸ್ತಕ ಪರಿಶೀಲನಾ ಸಮಿತಿಯಲ್ಲಿದ್ದಾರೆ. ಇದನ್ನು ಸಾಮಾಜಿಕ ನ್ಯಾಯ, ಸಮಾನತೆ ಎನ್ನಲು ಸಾಧ್ಯವೆ? ಎಂದು ಟೀಕಿಸಿದರು.

“ತಳ ಸಮುದಾಯಗಳ ಜಾಗೃತಿ ಮೂಡಿಸಿದ ನಾರಾಯಣಗುರುಗಳನ್ನು ತೆಗೆಯಲು ಹೊರಟಿದ್ದು ಏತಕ್ಕೆ? ವೈಜ್ಞಾನಿಕ ವಿಚಾರಗಳನ್ನು ಪ್ರತಿಪಾದಿಸಿ ಶೂದ್ರ, ಅತಿಶೂದ್ರರಲ್ಲಿ ಜಾಗೃತಿ ಮೂಡಿಸಿದ, ಪ್ರೀತಿ, ಕರುಣೆಯನ್ನು ಸಾರಿದ, ಜಗತ್ತಿಗೆ ಶಾಂತಿಯ ಮಹತ್ವನ್ನು ತಿಳಿಸಿದ ಬುದ್ಧನ ಪಠ್ಯವನ್ನು ತೆಗೆದಿದ್ದಿರಿ. ಏನು ಮಾಡಲು ಹೊರಟಿದ್ದೀರಿ? ಪುರೋಹಿತಶಾಹಿಯನ್ನು, ಮನುವಾದ ಹಾಗೂ ಪಂಚಾಂಗವನ್ನು ತರಲು ಹೊರಟಿದ್ದೀರಿ” ಎಂದು ಆಕ್ರೋಶ ಹೊರಹಾಕಿದರು.

ವಿದ್ಯಾರ್ಥಿ ಬಂಧುತ್ವ ವೇದಿಕೆ ತೋಳಿ ಭರಮಣ್ಣ, ಮುಖಂಡರಾದ ನಾಗೇಶ್ ಅರಳಕುಪ್ಪೆ, ಎಸ್‌ಐಒ ಝೀಶಾನ್‌, ಕೆವಿಎಸ್‌ ಸಂಚಾಲಕರಾದ ಸರೋವರ್‌ ಬೆಂಕಿಕೆರೆ ಹಾಜರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...