Homeಕರ್ನಾಟಕಮಕ್ಕಳಿಗೆ ಇನ್ನೂ ಸಿಕ್ಕಿಲ್ಲ ಪಠ್ಯಪುಸ್ತಕ: ಪೋಷಕರ ಸಂಘಟನೆಗಳ ಸಮನ್ವಯ ಸಮಿತಿ ಆಕ್ರೋಶ

ಮಕ್ಕಳಿಗೆ ಇನ್ನೂ ಸಿಕ್ಕಿಲ್ಲ ಪಠ್ಯಪುಸ್ತಕ: ಪೋಷಕರ ಸಂಘಟನೆಗಳ ಸಮನ್ವಯ ಸಮಿತಿ ಆಕ್ರೋಶ

“ಸರ್ಕಾರಿ ಶಾಲೆಗಳನ್ನು ಸಬಲೀಕರಣ ಮಾಡುತ್ತೇವೆ, ಗುಣಮಟ್ಟವನ್ನು ತರುತ್ತೇವೆ ಎನ್ನುತ್ತೀರಿ. ಕನಿಷ್ಠ ಪಠ್ಯಪುಸ್ತಕಗಳನ್ನು ನೀಡಲು ನಿಮಗೆ ಸಾಧ್ಯವಾಗಿಲ್ಲ. ಮಧ್ಯಾಹ್ನ ಊಟ ಸಿಗದೆ ಅನೇಕ ಮಕ್ಕಳು ಬಾಲ ಕಾರ್ಮಿಕರಾಗುತ್ತಿದ್ದಾರೆ.”

- Advertisement -
- Advertisement -

ಪಠ್ಯಪುಸ್ತಕಗಳ ಮರು ಪರಿಶೀಲನೆಯ ವಿವಾದದ ನೆಪದಲ್ಲಿ ಮಕ್ಕಳಿಗೆ ಪಠ್ಯಪುಸ್ತಕ ವಿತರಣೆ ವಿಳಂಬವಾಗುತ್ತಿರುವ ವಿರುದ್ಧ ಕರ್ನಾಟಕ ರಾಜ್ಯ ಖಾಸಗಿ ಶಾಲಾ ಕಾಲೇಜು ಪೋಷಕರ ಸಂಘಟನೆಗಳ ಸಮನ್ವಯ ಸಮಿತಿ ಆಕ್ರೋಶ ವ್ಯಕ್ತಪಡಿಸಿದೆ.

ಬೆಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಸಮಿತಿಯ ಅಧ್ಯಕ್ಷರಾದ ಬಿ.ಎನ್.ಯೋಗಾನಂದ ಅವರು ಮಾತನಾಡಿ, “ಕೋವಿಡ್ 19 ಬಿಕ್ಕಟ್ಟಿನಿಂದಾಗಿ ರಾಜ್ಯದ ಶೈಕ್ಷಣಿಕ ವಲಯದಲ್ಲಿ ಭಾರೀ ಅಲ್ಲೋಲ ಕಲ್ಲೋಲ ಉಂಟಾಗಿದೆ. ಎರಡು ಶೈಕ್ಷಣಿಕ ಅವಧಿಯಲ್ಲಿ ಬಹುತೇಕ ಮಕ್ಕಳು ಶಾಲೆಗಳ ಮುಖವನ್ನೇ ನೋಡಿಲ್ಲ. ಸರಿಯಾದ ರೀತಿಯಲ್ಲಿ ಮಕ್ಕಳು ಕಲಿಕೆಯಲ್ಲಿ ಭಾಗವಹಿಸಿಲ್ಲ. ಈಗ ಪಠ್ಯಪುಸ್ತಕಗಳೂ ದೊರಕಿಲ್ಲ” ಎಂದು ಬೇಸರ ವ್ಯಕ್ತಪಡಿಸಿದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಎರಡು ವರ್ಷದ ಶೈಕ್ಷಣಿಕ ಅಸಮತೋಲನದಿಂದಾಗಿ ಗ್ರಾಮೀಣ ಪ್ರದೇಶದ ಮಕ್ಕಳು ತಮ್ಮ ಹೆಸರನ್ನೂ ಸರಿಯಾಗಿ ಬರೆಯದ ಮಟ್ಟಕ್ಕೆ ಹೋಗಿದ್ದಾರೆ. ಈ ವರ್ಷ ತರಗತಿಗಳು ಆರಂಭವಾಗಿ ಒಂದು ವಾರವಾಯಿತು. ಕಳೆದ ಎರಡು ವರ್ಷಗಳೂ ಮಕ್ಕಳಿಗೆ ಸರಿಯಾಗಿ ಪಠ್ಯಪುಸ್ತಕಗಳು ಸಿಕ್ಕಿಲ್ಲ. ಸಮವಸ್ತ್ರ, ಬೈಸಿಕಲ್ ಸಿಕ್ಕಿಲ್ಲ, ಬಿಸಿಯೂಟ ಸಿಕ್ಕಿಲ್ಲ. ಇಂತಹ ಸಂದರ್ಭದಲ್ಲಿ ಈ ಸರ್ಕಾರಕ್ಕೆ ಪಠ್ಯಪುಸ್ತಕಗಳ ಪರಿಷ್ಕರಣೆಯ ಅಗತ್ಯವೇನಿತ್ತು? ಎಂದು ಪ್ರಶ್ನಿಸಿದರು.

“ಕಳೆದ ಎರಡು ವರ್ಷಗಳ ಬಜೆಟ್‌ನಲ್ಲಿ ರಾಜ್ಯ ಸರ್ಕಾರ ಶಿಕ್ಷಣಕ್ಕೆ 48,000 ಕೋಟಿ ರೂ. ನೀಡಿದ್ದು, ಆ ಹಣ ಏನಾಯಿತು ಎಂಬುದು ಯಕ್ಷ ಪ್ರಶ್ನೆಯಾಗಿದೆ” ಎಂದ ಅವರು, “ಇಂದು ಹಿಂದುಳಿದ ಜಿಲ್ಲೆಗಳಲ್ಲಿ, ಹೈದ್ರಾಬಾ‌ದ್‌ ಕರ್ನಾಟಕ, ಮುಂಬೈ ಕರ್ನಾಟಕದ ಭಾಗಗಳಲ್ಲಿ ಮಕ್ಕಳಿಗೆ ಬಿಸಿಯೂಟವೂ ಸಿಗುತ್ತಿಲ್ಲ. ಶಾಲೆಗಳಲ್ಲಿ ಊಟ ಸಿಗದೆ ಈ ಮಕ್ಕಳು ಬಾಲ ಕಾರ್ಮಿಕರಾಗುತ್ತಿದ್ದಾರೆ. ಬಾಲ್ಯ ವಿವಾಹ ಪದ್ಧತಿಗಳೂ ಜಾರಿಯಲ್ಲಿವೆ. ಈ ಸಂದರ್ಭದಲ್ಲಿ ಸರ್ಕಾರಕ್ಕೆ ಏನಾದರೂ ಕಿಂಚಿತ್ತು ಶೈಕ್ಷಣಿಕ ಬದುಕಿನ ಬಗ್ಗೆ ಕಾಳಜಿ ಇದ್ದರೆ ಮಕ್ಕಳಿಗಾಗಿರುವ ಕಲಿಕಾ ಕೊರತೆಯನ್ನು ತುಂಬಿಕೊಡುತ್ತಿತ್ತು” ಎಂದರು.

ಇದನ್ನೂ ಓದಿರಿ: ಪಠ್ಯ ಪರಿಶೀಲನೆಗೆ ಚಕ್ರತೀರ್ಥ: ನಾಡಗೀತೆಗೆ ಅವಮಾನ ಮಾಡಿದ್ದ ಪೋಸ್ಟ್‌ ಮತ್ತೆ ವೈರಲ್

ಮಕ್ಕಳಿಗಾಗಿರುವ ಕಲಿಕಾ ಕೊರತೆಯನ್ನು ಇರುವ ಬೇಗ ತುಂಬಬೇಕಿತ್ತು. ಆದಷ್ಟು ಬೇಗ ಈ ಮಕ್ಕಳಿಗೆ ಪಠ್ಯಪುಸ್ತಕವನ್ನು ಕೊಡಬೇಕಾಗಿತ್ತು. ಅದನ್ನು ಮಾಡದೆ ಪಠ್ಯಪುಸ್ತಕ ಪರಿಷ್ಕರಣೆಯ ಹೆಸರಿನಲ್ಲಿ ವಿವಾದ ಸೃಷ್ಟಿಸಲಾಗಿದೆ. ಪಠ್ಯಪುಸ್ತಕ ಇನ್ನೂ ಚರ್ಚೆಯ ಹಂತದಲ್ಲೇ ಇದೆ. ಯಾವ ಪಠ್ಯವನ್ನು ತೆಗೆಯಬೇಕು, ಯಾವುದನ್ನು ಹಾಕಬೇಕು ಎಂದು ಚರ್ಚಿಸುತ್ತಿದ್ದಾರೆ. ವಿವಾದ ಮುಗಿಯುವುದು ಯಾವಾಗ? ಎಂದು ಕೇಳಿದರು.

ಈಗಾಗಲೇ ಎರಡು ವರ್ಷ ನಷ್ಟವಾಗಿದೆ. ಈ ವರ್ಷವೂ ಶೈಕ್ಷಣಿಕ ವಲಯದ ನೂರಾರು ಕೋಟಿ ರೂ.ಗಳನ್ನು ಲೂಟಿ ಮಾಡುವುದಕ್ಕಾಗಿ ಪಠ್ಯ ಪುಸ್ತಕಗಳ ಪರಿಷ್ಕರಣೆಯ ಹೆಸರಲ್ಲಿ ಗೊಂದಲ ಸೃಷ್ಟಿಸಲಾಗಿದೆ. ನಮ್ಮ ಮಕ್ಕಳಿಗೆ ಸರಿಯಾದ ಶಿಕ್ಷಣ ನೀಡುವಲ್ಲಿ ರಾಜ್ಯ ಸರ್ಕಾರ ಹಾಗೂ ಶಿಕ್ಷಣ ಸಚಿವರ ವೈಫಲ್ಯ ಎದ್ದು ಕಾಣುತ್ತಿದೆ. ಈ ಎಲ್ಲ ಗಂಡಾಂತರಗಳಿಗೆ ಶಿಕ್ಷಣ ಸಚಿವರೇ ನೇರ ಹೊಣೆಗಾರರು. ಹೀಗಾಗಿ ಕೂಡಲೇ ಶಿಕ್ಷಣ ಸಚಿವರು ರಾಜೀನಾಮೆಯನ್ನು ನೀಡಬೇಕು. ಇಲ್ಲವಾದರೆ ಶಿಕ್ಷಣ ಸಚಿವರನ್ನು ಮುಖ್ಯಮಂತ್ರಿಯವರು ಬದಲಾಯಿಸಬೇಕು ಎಂದು ಆಗ್ರಹಿಸಿದರು.

ಮಕ್ಕಳಿಗೆ ಸಂವಿಧಾನ ಬದ್ಧವಾಗಿ ಸಿಗಬೇಕಾದ ಶಿಕ್ಷಣದಲ್ಲಿ ಕೇಸರೀಕರಣ, ಖಾಸಗೀಕರಣ ಮಾಡುತ್ತಾ ಹೋಗುತ್ತಿದ್ದಾರೆ. ಇದರಿಂದ ಲಕ್ಷಾಂತರ ವಿದ್ಯಾರ್ಥಿಗಳಿಗೆ ಶಿಕ್ಷಣ ಕೈಗೆಟಕದಂತಾಗುತ್ತಿದೆ. ಇದಕ್ಕೆ ನೇರ ಹೊಣೆ ರಾಜ್ಯ ಸರ್ಕಾರ ಹಾಗೂ ಶಿಕ್ಷಣ ಸಚಿವರು. ಏನಾದರೂ ಮಾಡಿ ದುಡ್ಡು ದೋಚಬೇಕೆಂಬುದು ಶಿಕ್ಷಣ ಇಲಾಖೆಯ ಅಧಿಕಾರಿಗಳ ಮನಸ್ಥಿತಿಯಾಗಿದೆ. ಪರಿಷ್ಕರಣೆ ಮಾಡುವ ನೆಪದಲ್ಲಿ ಮುದ್ರಣ ಮಾಡುತ್ತಿದ್ದಾರೆ. ಮಕ್ಕಳಿಗೆ ಸರಿಯಾದ ರೀತಿಯಲ್ಲಿ ಶಿಕ್ಷಣ ಸಿಗದೆ ಇರುವಂತೆ ನೋಡಿಕೊಳ್ಳಲಾಗುತ್ತಿದೆ. ಸರ್ಕಾರಿ ಶಾಲೆಗಳನ್ನು ಸಬಲೀಕರಣ ಮಾಡುತ್ತೇವೆ, ಗುಣಮಟ್ಟವನ್ನು ತರುತ್ತೇವೆ ಎನ್ನುತ್ತೀರಿ. ಕನಿಷ್ಠ ಪುಸ್ತಕಗಳನ್ನು ಕೊಡದಿದ್ದರೆ ನೀವು ಹೇಗೆ ಗುಣಮಟ್ಟವನ್ನು ತರಲು ಸಾಧ್ಯ?

ಸೈಕಲ್‌ ನೀಡುತ್ತಿದ್ದ ಕಾರಣ ಸಾರಿಗೆ ಸೌಲಭ್ಯವಿಲ್ಲದ ಗುಡ್ಡಗಾಡು ಪ್ರದೇಶದಲ್ಲಿ ಹೆಚ್ಚು ದಾಖಲಾತಿ ಆಗುತ್ತಿತ್ತು. ಈ ವರ್ಷವೂ ಮಕ್ಕಳಿಗೆ ಬೈಸಿಕಲ್ ಸಿಗುವುದು ಅನುಮಾನವಾಗಿದೆ. ನಮ್ಮ ಸಣ್ಣ ಅಭಿಪ್ರಾಯವನ್ನು ಕೇಳುವ ತಾಳ್ಮೆ ಸರ್ಕಾರಕ್ಕೆ ಇಲ್ಲ. ನಮ್ಮ ಮಕ್ಕಳು ಏನನ್ನು ಕಲಿಯಬೇಕು, ಎಷ್ಟು ಕಲಿಯಬೇಕು, ಹೇಗೆ ಕಲಿಯಬೇಕು ಎಂದು ನಿರ್ಧರಿಸುವಲ್ಲಿ ನಮ್ಮ ಪಾತ್ರ ಏನು ಇಲ್ಲವೇ? ಎಂದು ಹರಿಹಾಯ್ದಿದ್ದಾರೆ.

ಪಠ್ಯಪುಸ್ತಕಗಳನ್ನು ಪರಿಶೀಲನೆ ಮಾಡುವುದನ್ನು ತಕ್ಷಣ ಕೈಬಿಡಬೇಕು. ಈ ಹಿಂದೆ ಇದ್ದ ಪಠ್ಯಪುಸ್ತಕಗಳನ್ನೇ ತಕ್ಷಣದಲ್ಲಿ ರಾಜ್ಯದ ಎಲ್ಲ ಶಾಲೆಗಳಿಗೆ ಸರಬರಾಜು ಮಾಡಬೇಕು. ಈ ಪಠ್ಯಪುಸ್ತಕ ಪರಿಶೀಲನಾ ಸಮಿತಿಯನ್ನು ತಕ್ಷಣವೇ ವಿಸರ್ಜನೆ ಮಾಡಬೇಕು ಎಂದು ತಮ್ಮ ಆಗ್ರಹಿಸಿದರು.

ನನ್ನ ಮಗನಿಗೆ ಕನ್ನಡ ಪುಸ್ತಕ ಸಿಕ್ಕಿಲ್ಲ. ಪರಿಷ್ಕರಣೆಯ ಹೆಸರಲ್ಲಿ ರಾಜ್ಯದ ಬೊಕ್ಕಸವನ್ನು ಇವರು ಲೂಟಿ ಮಾಡುತ್ತಿದ್ದಾರಲ್ಲ, ಇದನ್ನು ನೋಡಿಕೊಂಡು ನಾವು ಸುಮ್ಮನೆ ಕೂರಬೇಕಾ? ನಮ್ಮ ಬೇಡಿಕೆಯನ್ನು ತಕ್ಷಣದಲ್ಲಿ ಈಡೇರಿಸದಿದ್ದರೆ ಎಲ್ಲ ಸಂಘಟನೆಗಳು, ಶಿಕ್ಷಣ ತಜ್ಞರು, ಪೋಷಕರು ಹೋರಾಟಕ್ಕೆ ಇಳಿಯಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಇದನ್ನೂ ಓದಿರಿ: ಪಿಯು ಪಠ್ಯ ಪರಿಶೀಲನೆಗೂ ಚಾಲನೆ; ಮತ್ತದೇ ಚಕ್ರತೀರ್ಥ ಸಮಿತಿಗೆ ಜವಾಬ್ದಾರಿ!

ದಲಿತ ಮುಖಂಡರಾದ ಆರ್‌.ಮೋಹನ್‌ ರಾಜ್‌ ಮಾತನಾಡಿ, ಈ ಪಠ್ಯಪುಸ್ತಕವು ಶೂದ್ರ ಹಾಗೂ ಅತಿಶೂದ್ರರನ್ನು ವೇದಗಳ ಕಾಲಕ್ಕೆ, ಮನುವಿನ ಕಾಲಕ್ಕೆ ಕರೆದೊಯ್ಯುವ ಎಲ್ಲ ಹುನ್ನಾರಗಳನ್ನು ಹೊಂದಿದೆ. ಬಾಬಾ ಸಾಹೇಬ್ ಡಾ.ಬಿ.ಆರ್‌.ಅಂಬೇಡ್ಕರ್‌ ಅವರು ಶಿಕ್ಷಣ ಎಲ್ಲರಿಗೂ ಸಿಗಬೇಕು, ವೈಜ್ಞಾನಿಕವಾಗಿರಬೇಕು ಎಂದು ಪ್ರತಿಪಾದಿಸಿದರು. ಆದರೆ ಇವರು ವೈದಿಕಶಾಹಿಗೆ ಕರೆದೊಯ್ಯಬೇಕೆಂದು ಹೊರಟಿದ್ದಾರೆ. ಸಮಿತಿಯಲ್ಲಿ ಹತ್ತು ಜನರಲ್ಲಿ ಒಂಬತ್ತು ಜನರು ಒಂದೇ ಜಾತಿಗೆ ಸೇರಿದವರು. ಜನಸಂಖ್ಯೆಯಲ್ಲಿ ಶೇ. 3ರಷ್ಟಿರುವ ಜಾತಿಯನ್ನು ಪ್ರತಿನಿಧಿಸುವವರಷ್ಟೇ ಪಠ್ಯಪುಸ್ತಕ ಪರಿಶೀಲನಾ ಸಮಿತಿಯಲ್ಲಿದ್ದಾರೆ. ಇದನ್ನು ಸಾಮಾಜಿಕ ನ್ಯಾಯ, ಸಮಾನತೆ ಎನ್ನಲು ಸಾಧ್ಯವೆ? ಎಂದು ಟೀಕಿಸಿದರು.

“ತಳ ಸಮುದಾಯಗಳ ಜಾಗೃತಿ ಮೂಡಿಸಿದ ನಾರಾಯಣಗುರುಗಳನ್ನು ತೆಗೆಯಲು ಹೊರಟಿದ್ದು ಏತಕ್ಕೆ? ವೈಜ್ಞಾನಿಕ ವಿಚಾರಗಳನ್ನು ಪ್ರತಿಪಾದಿಸಿ ಶೂದ್ರ, ಅತಿಶೂದ್ರರಲ್ಲಿ ಜಾಗೃತಿ ಮೂಡಿಸಿದ, ಪ್ರೀತಿ, ಕರುಣೆಯನ್ನು ಸಾರಿದ, ಜಗತ್ತಿಗೆ ಶಾಂತಿಯ ಮಹತ್ವನ್ನು ತಿಳಿಸಿದ ಬುದ್ಧನ ಪಠ್ಯವನ್ನು ತೆಗೆದಿದ್ದಿರಿ. ಏನು ಮಾಡಲು ಹೊರಟಿದ್ದೀರಿ? ಪುರೋಹಿತಶಾಹಿಯನ್ನು, ಮನುವಾದ ಹಾಗೂ ಪಂಚಾಂಗವನ್ನು ತರಲು ಹೊರಟಿದ್ದೀರಿ” ಎಂದು ಆಕ್ರೋಶ ಹೊರಹಾಕಿದರು.

ವಿದ್ಯಾರ್ಥಿ ಬಂಧುತ್ವ ವೇದಿಕೆ ತೋಳಿ ಭರಮಣ್ಣ, ಮುಖಂಡರಾದ ನಾಗೇಶ್ ಅರಳಕುಪ್ಪೆ, ಎಸ್‌ಐಒ ಝೀಶಾನ್‌, ಕೆವಿಎಸ್‌ ಸಂಚಾಲಕರಾದ ಸರೋವರ್‌ ಬೆಂಕಿಕೆರೆ ಹಾಜರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...