Homeಕರ್ನಾಟಕಪಠ್ಯಪುಸ್ತಕ ಪರಿಷ್ಕರಣೆ ವಿಚಾರ: ಮಕ್ಕಳ ಮನಸ್ಸಿಗೆ ವಿಷ ತುಂಬುವ ಪಠ್ಯಕ್ಕೆ ಅವಕಾಶ ನೀಡುವುದಿಲ್ಲ ಎಂದ ಸಿಎಂ...

ಪಠ್ಯಪುಸ್ತಕ ಪರಿಷ್ಕರಣೆ ವಿಚಾರ: ಮಕ್ಕಳ ಮನಸ್ಸಿಗೆ ವಿಷ ತುಂಬುವ ಪಠ್ಯಕ್ಕೆ ಅವಕಾಶ ನೀಡುವುದಿಲ್ಲ ಎಂದ ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಬಿಜೆಪಿ ಸರ್ಕಾರದ ಅವಧಿಯಲ್ಲಿ ಪಠ್ಯಪುಸ್ತಕ ಪರಿಷ್ಕರಣೆ ಭಾರೀ ವಿವಾದ ಹುಟ್ಟುಹಾಕಿತ್ತು. ರೋಹಿತ್ ಚಕ್ರತೀರ್ಥ ಎನ್ನುವವರ ಮುಂದಾಳತ್ವದಲ್ಲಿ ನಡೆದ ಪರಿಷ್ಕರಣೆಯಲ್ಲಿ ಪಠ್ಯದಲ್ಲಿ ಅನೇಕ ಮುಖ್ಯವಾದ ವಿಚಾರಗಳನ್ನು ಕೈ ಬಿಟ್ಟು ಅನಗತ್ಯ ವಿಚಾರಗಳನ್ನು ಸೇರಿಸಲಾಗಿದೆ ಎಂದು ನಾಡಿನ ಸಾಹಿತಿಗಳು, ವಿಚಾರವಂತರು ವಿರೋಧ ವ್ಯಕ್ತಪಡಿಸಿದ್ದರು. ಇದೀಗ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಿದ್ದು, ಪಠ್ಯಪುಸ್ತಕ ಪರಿಷ್ಕರಣೆಗೆ ತಕ್ಷಣವೇ ಸಮಿತಿ ರಚಿಸಬೇಕು ಎಂದು ಸಮಾನ ಮನಸ್ಕರ ಒಕ್ಕೂಟ ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದಾರೆ.

ಸೋಮವಾರ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಖುದ್ದು ಭೇಟಿ ಮಾಡಿದ ಹಿರಿಯ ಸಾಹಿತಿ, ಕಲಾವಿದರು, ಇಂದಿನ ಬದಲಾವಣೆಗೆ ತಕ್ಕಂತೆ ಪಠ್ಯ ಪುಸ್ತಕಗಳನ್ನು ಪರಿಷ್ಕರಿಸಲು ಕೂಡಲೇ ಒಂದು ತಜ್ಞರ ಸಮಿತಿಯನ್ನು ರಚಿಸಬೇಕು’ ಎಂದು ಸಮಾನ ಮನಸ್ಥರ ಒಕ್ಕೂಟದ ಮುಖಂಡರಾದ ಡಾ. ಕೆ.ಮರುಳಸಿದ್ದಪ್ಪ, ಪ್ರೊ.ಎಸ್.ಜಿ. ಸಿದ್ದರಾಮಯ್ಯ, ಪ್ರೊ.ರವಿವರ್ಮಕುಮಾರ್, ಪ್ರೊ. ನಿರಂಜನಾರಾಧ್ಯ, ಡಾ.ವಸುಂಧರ ಭೂಪತಿ ಸೇರಿದಂತೆ ಹಿರಿಯ ಸಾಹಿತಿಗಳು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದ್ದಾರೆ.

ಪಠ್ಯ ಪುಸ್ತಕ ಪರಿಷ್ಕರಣೆಗೆ ತಕ್ಷಣವೇ ಸಮಿತಿ ರಚಿಸಲು 'ಸಮಾನ ಮನಸ್ಕರ ಒಕ್ಕೂಟ'ದಿಂದ ಸಿಎಂಗೆ ಮನವಿ - Varthabharati

”ಬಿಜೆಪಿ ಸರಕಾರವು ಶಿಕ್ಷಣವನ್ನು ಸಂಪೂರ್ಣ ರಾಜಕಾರಣಕ್ಕೆ ಬಳಸಿಕೊಂಡು, ಗೊಂದಲವನ್ನು ಸೃಷ್ಟಿಸಿತ್ತು. ಈಗಾಗಲೇ ಮುದ್ರಣವಾಗಿ ಶಾಲೆಗಳಿಗೆ ತಲುಪಿರುವ ಕಲುಷಿತ ಪುಸ್ತಕಗಳನ್ನು ಮಕ್ಕಳಿಗೆ ವಿತರಿಸಬಾರದು. ಬದಲಾದ ಪ್ರಮುಖ ಪಾಠಗಳನ್ನು ಮತ್ತು ಕಲಿಕಾಂಶಗಳನ್ನು ಈ ಪುಸ್ತಕಗಳಿಂದ ತೆಗೆದು ಹಾಕಿ ವಿತರಿಸಬೇಕು” ಎಂದು ಒತ್ತಾಯಿಸಿದ್ದಾರೆ.

ಈ ಸಂದರ್ಭದಲ್ಲಿ ಡಾ.ಬಂಜಗೆರೆ ಜಯಪ್ರಕಾಶ್, ಜಾಣಗೆರೆ ವೆಂಕಟರಾಮಯ್ಯ, ಡಾ.ಜಾಫೆಟ್, ರುದ್ರಪ್ಪ ಹನಗವಾಡಿ, ಪ್ರೊ. ಎಲ್.ಎನ್.ಮುಕುಂದರಾಜ್, ಕೆ.ಶರೀಫಾ, ಕೆ.ಎಸ್.ವಿಮಲಾ, ಡಾ.ಲೀಲಾ ಸಂಪಿಗೆ, ಶ್ರೀಪಾದಭಟ್, ಎ.ಕೆ.ಕರುಣಾಕರ, ಎಚ್‌. ಆರ್.ಜಯರಾಮ್, ಬಿ.ಎ.ನರಸಿಂಹನ್, ಕೆ.ಸುದೀಶ್, ಡಾ.ಗಿರೀಶ್ ಮೂಡ್, ದಿನೇಶ್ ಅಮಿನ್ ಮಟ್ಟು, ಸುರೇಂದ್ರ ರಾವ್, ಜಿ.ಶರಣಪ್ಪ ರಾಜೇಂದ್ರ ಸಿಂಗ್ ಬಾಬು, ಎನ್. ಹನುಮೇಗೌಡ ಸೇರಿದಂತೆ ಇನ್ನಿತರರು ಹಾಜರಿದ್ದರು.

ಇದನ್ನೂ ಓದಿ: ಬಿಜೆಪಿ ಅವಧಿಯಲ್ಲಿ ಪರಿಷ್ಕರಣೆಗೊಂಡ ಪಠ್ಯಪುಸ್ತಕ ರದ್ದು ಮಾಡಿ, ರೋಹಿತ್ ಚಕ್ರತೀರ್ಥ ವಿರುದ್ದ ಕ್ರಮ ಕೈಗೊಳ್ಳಿ: ಸಿಎಂಗೆ ಶಿಕ್ಷಣ ತಜ್ಞರಿಂದ ಪತ್ರ

ಪಠ್ಯಪುಸ್ತಕ ಪರಿಷ್ಕರಣೆ ಹೆಸರಲ್ಲಿ ಬಿಜೆಪಿ ಮಾಡಿದ ಎಡವಟ್ಟುಗಳು

ಬಿಜೆಪಿ ನೇತೃತ್ವದ ಸರ್ಕಾರದ ಅವಧಿಯಲ್ಲಿ ಪಠ್ಯಪುಸ್ತಕ ಪರಿಶೀಲನೆಗಾಗಿ ರಚಿಸಿದ್ದ ಸಮಿತಿಯು, ತನ್ನ ಮಿತಿಯನ್ನು ಮೀರಿ ತಿರುಚಿದ ಇತಿಹಾಸ ಹಾಗೂ ಜಗತ್ತಿಗೆ ಕೊಡುಗೆ ನೀಡಿದ ದಾರ್ಶನಿಕರ ಪಾಠಗಳಿಗೆ ಕತ್ತರಿ ಹಾಕಿ ಪಠ್ಯವನ್ನು ಪರಿಷ್ಕರಿಸಿತ್ತು.

2019ರಲ್ಲಿ ಅಸ್ತಿತ್ವಕ್ಕೆ ಬಂದ ಬಿಜೆಪಿ ಸರ್ಕಾರದಲ್ಲಿ ಪ್ರಾಥಮಿಕ ಶಿಕ್ಷಣ ಸಚಿವರಾಗಿದ್ದ ಎಸ್. ಸುರೇಶ್‌ಕುಮಾರ್ ಅವರು, ಪಠ್ಯಪುಸ್ತಕ ಪರಿಶೀಲನೆಗಾಗಿ ಶಿಕ್ಷಣ ತಜ್ಞರೇ ಅಲ್ಲದ ರೋಹಿತ್ ಚಕ್ರತೀರ್ಥ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿದ್ದರು.

ಶಿಕ್ಷಣ ಸಚಿವರಾದ ಬಿ.ಸಿ. ನಾಗೇಶ್ ಅವರು, ಪಠ್ಯ ಪರಿಷ್ಕರಣೆ ಹೊಣೆಯನ್ನೂ ರೋಹಿತ್ ಚಕ್ರತೀರ್ಥ ಅಧ್ಯಕ್ಷತೆಯಲ್ಲಿ ಸಮಿತಿಗೆ ವಹಿಸಿದ್ದರು. ಸಮಿತಿ ನೀಡಿದ್ದ ಸಲಹೆ ಆಧರಿಸಿ, ಪಠ್ಯಗಳನ್ನು ಪರಿಷ್ಕರಣೆ ಮಾಡಿ, ತರಾತುರಿಯಲ್ಲಿ ಮುದ್ರಣಕ್ಕೂ ಕಳುಹಿಸಲಾಗಿತ್ತು. ಇದು ತೀವ್ರ ವಿವಾದಕ್ಕೆ ಕಾರಣವಾಗಿತ್ತು.

ಅನೇಕ ಲೇಖಕರು, ಸಾಹಿತಿಗಳು ತಮ್ಮ ಕವಿತೆ, ಲೇಖನಗಳನ್ನು ವಾಪಸ್‌ ಪಡೆದಿದ್ದರು. ವಿವಾದ ಭುಗಿಲೆದ್ದ ಅವಧಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ್ದ ನಾಗೇಶ್, ಚಕ್ರತೀರ್ಥ ಅವರನ್ನು ‘ಐಐಟಿ ಪ್ರೊಫೆಸರ್ ಎಂದು ಸಮರ್ಥಿಸಿಕೊಂಡಿದ್ದು ಅಪಹಾಸ್ಯಕ್ಕೆ ಈಡಾಗಿತ್ತು.

ಪಠ್ಯಪುಸ್ತಕ ಪರಿಷ್ಕರಣೆ ವರದಿ; ರೋಹಿತ್‌ ಚಕ್ರತೀರ್ಥ ಸಮಿತಿ ಪರಿಷ್ಕರಿಸಿರುವ ಪಾಠಾಂಶ ಅಳವಡಿಕೆಗೆ ಆದೇಶ – The File

ಈ ಪಠ್ಯಪುಸ್ತಕ ಪರಿಷ್ಕರಣೆಯನ್ನು ತೀವ್ರವಾಗಿ ಖಂಡಿಸಿದ್ದ ಅಂದಿನ ವಿರೋಧ ಪಕ್ಷ ಕಾಂಗ್ರೆಸ್, ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿತ್ತು. ಅಲ್ಲದೇ, ವೈಜ್ಞಾನಿಕ ಮನೋಭಾವ ಬೆಳೆಸುವ ಪಠ್ಯವನ್ನು ಸೇರಿಸಲಾಗುವುದು ಎಂದೂ ಪ್ರತಿಪಾದಿಸಿತ್ತು. ಇದೀಗ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಿದ್ದು, ಪಠ್ಯ ಪರಿಷ್ಕರಣೆಯನ್ನು ವಿರೋಧಿಸಿದ ಆಂದೋಲನದಲ್ಲಿ ಸಕ್ರಿಯರಾಗಿದ್ದ ಅನೇಕರು, ಚುನಾವಣೆ ವೇಳೆ ಸಮಾನ ಮನಸ್ಕರ ಒಕ್ಕೂಟವನ್ನು ರಚಿಸಿಕೊಂಡಿದ್ದರು. ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಸೋಮವಾರ ಭೇಟಿ ಮಾಡಿದ ಒಕ್ಕೂಟದ ಪ್ರಮುಖರಿದ್ದ ನಿಯೋಗ, ಬರಗೂರು ರಾಮಚಂದ್ರಪ್ಪ ನೇತೃತ್ವದ ಸಮಿತಿ ಪರಿಷ್ಕರಿಸಿದ್ದ ಪಠ್ಯವನ್ನೇ ಮುಂದುವರಿಸುವಂತೆ ಮನವಿ ಮಾಡಿದೆ.

ಸಿದ್ದರಾಮಯ್ಯ ಪ್ರತಿಕ್ರಿಯೆ:

”ಮಕ್ಕಳ ಮನಸ್ಸಿಗೆ ವಿಷ ತುಂಬುವ ಪಠ್ಯಕ್ಕೆ ಅವಕಾಶ ನೀಡುವುದಿಲ್ಲ. ಪಠ್ಯ ಮತ್ತು ಪಾಠಗಳ ಮೂಲಕ ಮಕ್ಕಳ ಮನಸ್ಸನ್ನು ಕಲುಷಿತಗೊಳಿಸಲು ನಡೆಸಿರುವ ಕೃತ್ಯವನ್ನು ಕ್ಷಮಿಸಲು ಸಾಧ್ಯವಿಲ್ಲ. ಶೈಕ್ಷಣಿಕ ವರ್ಷ ಆರಂಭ ಆಗಿರುವುದರಿಂದ ಮಕ್ಕಳ ಶಿಕ್ಷಣಕ್ಕೆ ತೊಂದರೆ ಆಗದಂತೆ ಚರ್ಚಿಸಿ ಕ್ರಮ ಕೈಗೊಳ್ಳುತ್ತೇವೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

ಈ ಬಗ್ಗೆ ಪ್ರೊ.ಬರಗೂರು ರಾಮಚಂದ್ರಪ್ಪ ತಮ್ಮ ಅನಿಸಿಕೆ ತಿಳಿಸಿದ್ದು, ”ಪರಿಷ್ಕೃತ ಪಠ್ಯಪುಸ್ತಕಗಳು ಈಗಾಗಲೇ ಮುದ್ರಣಗೊಂಡು ಶಾಲೆಗಳನ್ನು ತಲುಪಿರುವುದರಿಂದ ಈ ಹಂತದಲ್ಲಿ ಬದಲಾವಣೆ ಅಥವಾ ಪರಿಷ್ಕರಣೆ ಕಾರ್ಯಸಾಧುವಲ್ಲ. ಕೊಟ್ಟ ಮಾತೂ ಉಳಿಯಬೇಕು. ಯಡವಟ್ಟುಗಳೂ ಸರಿಯಾಗಬೇಕು”ಎಂದು ಹೇಳಿದ್ದಾರೆ.

”ಪಠ್ಯಪುಸ್ತಕ ಪರಿಷ್ಕರಣೆ ಸುದೀರ್ಘ ಸಮಯ ತೆಗೆದುಕೊಳ್ಳುವ ಪ್ರಕ್ರಿಯೆ. ಮರುಮುದ್ರಣವೂ ವೆಚ್ಚದಾಯಕ. ಶೈಕ್ಷಣಿಕ ವರ್ಷ ಆರಂಭವಾಗಿರುವುದರಿಂದ ಈಗ ಅಂತಹ ಸಾಹಸ ಮಕ್ಕಳ ಶೈಕ್ಷಣಿಕ ಚಟುವಟಿಕೆಗಳ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು. ಸದ್ಯಕ್ಕೆ ಪಠ್ಯಪುಸ್ತಕದಲ್ಲಿರುವ ಸಾಮಾಜಿಕ, ಪ್ರಾದೇಶಕ ಅಸಮಾನತೆಗೆ ಕಾರಣವಾದ ಕೆಲ ಪಾಠಗಳನ್ನು ಕೈಬಿಟ್ಟು, ಪೂರಕವಾದ ಕೆಲ ಪಾಠಗಳನ್ನು ಸೇರಿಸಿಕೊಂಡು ಪಾಠ ಮಾಡಲು ಸುತ್ತೋಲೆ ಹೊರಡಿಸಬೇಕು. ಮಹಾರಾಷ್ಟ್ರದಲ್ಲಿರುವಂತೆ ವಿಷಯ ತಜ್ಞರು, ಅಧಿಕಾರಿಗಳನ್ನು ಒಳಗೊಂಡ ಶಾಶ್ವತವಾದ ಪಠ್ಯಪುಸ್ತಕ ಆಯೋಗ ಅಥವಾ ಪ್ರಾಧಿಕಾರ ರಚಿಸಬೇಕು. ಭವಿಷ್ಯದಲ್ಲಿ ಪಠ್ಯಪುಸ್ತಕಗಳು ಯಾವುದೇ ಪಕ್ಷದ ಪುಸ್ತಕಗಳಾಗದಂತೆ ಕಾನೂನು ರೂಪಿಸಬೇಕು” ಎಂದು ಬರಗೂರು ರಾಮಚಂದ್ರಪ್ಪ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...