Homeಕರ್ನಾಟಕಪಠ್ಯಪುಸ್ತಕ ಪರಿಷ್ಕರಣೆ ವಿಚಾರ: ಮಕ್ಕಳ ಮನಸ್ಸಿಗೆ ವಿಷ ತುಂಬುವ ಪಠ್ಯಕ್ಕೆ ಅವಕಾಶ ನೀಡುವುದಿಲ್ಲ ಎಂದ ಸಿಎಂ...

ಪಠ್ಯಪುಸ್ತಕ ಪರಿಷ್ಕರಣೆ ವಿಚಾರ: ಮಕ್ಕಳ ಮನಸ್ಸಿಗೆ ವಿಷ ತುಂಬುವ ಪಠ್ಯಕ್ಕೆ ಅವಕಾಶ ನೀಡುವುದಿಲ್ಲ ಎಂದ ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಬಿಜೆಪಿ ಸರ್ಕಾರದ ಅವಧಿಯಲ್ಲಿ ಪಠ್ಯಪುಸ್ತಕ ಪರಿಷ್ಕರಣೆ ಭಾರೀ ವಿವಾದ ಹುಟ್ಟುಹಾಕಿತ್ತು. ರೋಹಿತ್ ಚಕ್ರತೀರ್ಥ ಎನ್ನುವವರ ಮುಂದಾಳತ್ವದಲ್ಲಿ ನಡೆದ ಪರಿಷ್ಕರಣೆಯಲ್ಲಿ ಪಠ್ಯದಲ್ಲಿ ಅನೇಕ ಮುಖ್ಯವಾದ ವಿಚಾರಗಳನ್ನು ಕೈ ಬಿಟ್ಟು ಅನಗತ್ಯ ವಿಚಾರಗಳನ್ನು ಸೇರಿಸಲಾಗಿದೆ ಎಂದು ನಾಡಿನ ಸಾಹಿತಿಗಳು, ವಿಚಾರವಂತರು ವಿರೋಧ ವ್ಯಕ್ತಪಡಿಸಿದ್ದರು. ಇದೀಗ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಿದ್ದು, ಪಠ್ಯಪುಸ್ತಕ ಪರಿಷ್ಕರಣೆಗೆ ತಕ್ಷಣವೇ ಸಮಿತಿ ರಚಿಸಬೇಕು ಎಂದು ಸಮಾನ ಮನಸ್ಕರ ಒಕ್ಕೂಟ ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದಾರೆ.

ಸೋಮವಾರ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಖುದ್ದು ಭೇಟಿ ಮಾಡಿದ ಹಿರಿಯ ಸಾಹಿತಿ, ಕಲಾವಿದರು, ಇಂದಿನ ಬದಲಾವಣೆಗೆ ತಕ್ಕಂತೆ ಪಠ್ಯ ಪುಸ್ತಕಗಳನ್ನು ಪರಿಷ್ಕರಿಸಲು ಕೂಡಲೇ ಒಂದು ತಜ್ಞರ ಸಮಿತಿಯನ್ನು ರಚಿಸಬೇಕು’ ಎಂದು ಸಮಾನ ಮನಸ್ಥರ ಒಕ್ಕೂಟದ ಮುಖಂಡರಾದ ಡಾ. ಕೆ.ಮರುಳಸಿದ್ದಪ್ಪ, ಪ್ರೊ.ಎಸ್.ಜಿ. ಸಿದ್ದರಾಮಯ್ಯ, ಪ್ರೊ.ರವಿವರ್ಮಕುಮಾರ್, ಪ್ರೊ. ನಿರಂಜನಾರಾಧ್ಯ, ಡಾ.ವಸುಂಧರ ಭೂಪತಿ ಸೇರಿದಂತೆ ಹಿರಿಯ ಸಾಹಿತಿಗಳು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದ್ದಾರೆ.

ಪಠ್ಯ ಪುಸ್ತಕ ಪರಿಷ್ಕರಣೆಗೆ ತಕ್ಷಣವೇ ಸಮಿತಿ ರಚಿಸಲು 'ಸಮಾನ ಮನಸ್ಕರ ಒಕ್ಕೂಟ'ದಿಂದ ಸಿಎಂಗೆ ಮನವಿ - Varthabharati

”ಬಿಜೆಪಿ ಸರಕಾರವು ಶಿಕ್ಷಣವನ್ನು ಸಂಪೂರ್ಣ ರಾಜಕಾರಣಕ್ಕೆ ಬಳಸಿಕೊಂಡು, ಗೊಂದಲವನ್ನು ಸೃಷ್ಟಿಸಿತ್ತು. ಈಗಾಗಲೇ ಮುದ್ರಣವಾಗಿ ಶಾಲೆಗಳಿಗೆ ತಲುಪಿರುವ ಕಲುಷಿತ ಪುಸ್ತಕಗಳನ್ನು ಮಕ್ಕಳಿಗೆ ವಿತರಿಸಬಾರದು. ಬದಲಾದ ಪ್ರಮುಖ ಪಾಠಗಳನ್ನು ಮತ್ತು ಕಲಿಕಾಂಶಗಳನ್ನು ಈ ಪುಸ್ತಕಗಳಿಂದ ತೆಗೆದು ಹಾಕಿ ವಿತರಿಸಬೇಕು” ಎಂದು ಒತ್ತಾಯಿಸಿದ್ದಾರೆ.

ಈ ಸಂದರ್ಭದಲ್ಲಿ ಡಾ.ಬಂಜಗೆರೆ ಜಯಪ್ರಕಾಶ್, ಜಾಣಗೆರೆ ವೆಂಕಟರಾಮಯ್ಯ, ಡಾ.ಜಾಫೆಟ್, ರುದ್ರಪ್ಪ ಹನಗವಾಡಿ, ಪ್ರೊ. ಎಲ್.ಎನ್.ಮುಕುಂದರಾಜ್, ಕೆ.ಶರೀಫಾ, ಕೆ.ಎಸ್.ವಿಮಲಾ, ಡಾ.ಲೀಲಾ ಸಂಪಿಗೆ, ಶ್ರೀಪಾದಭಟ್, ಎ.ಕೆ.ಕರುಣಾಕರ, ಎಚ್‌. ಆರ್.ಜಯರಾಮ್, ಬಿ.ಎ.ನರಸಿಂಹನ್, ಕೆ.ಸುದೀಶ್, ಡಾ.ಗಿರೀಶ್ ಮೂಡ್, ದಿನೇಶ್ ಅಮಿನ್ ಮಟ್ಟು, ಸುರೇಂದ್ರ ರಾವ್, ಜಿ.ಶರಣಪ್ಪ ರಾಜೇಂದ್ರ ಸಿಂಗ್ ಬಾಬು, ಎನ್. ಹನುಮೇಗೌಡ ಸೇರಿದಂತೆ ಇನ್ನಿತರರು ಹಾಜರಿದ್ದರು.

ಇದನ್ನೂ ಓದಿ: ಬಿಜೆಪಿ ಅವಧಿಯಲ್ಲಿ ಪರಿಷ್ಕರಣೆಗೊಂಡ ಪಠ್ಯಪುಸ್ತಕ ರದ್ದು ಮಾಡಿ, ರೋಹಿತ್ ಚಕ್ರತೀರ್ಥ ವಿರುದ್ದ ಕ್ರಮ ಕೈಗೊಳ್ಳಿ: ಸಿಎಂಗೆ ಶಿಕ್ಷಣ ತಜ್ಞರಿಂದ ಪತ್ರ

ಪಠ್ಯಪುಸ್ತಕ ಪರಿಷ್ಕರಣೆ ಹೆಸರಲ್ಲಿ ಬಿಜೆಪಿ ಮಾಡಿದ ಎಡವಟ್ಟುಗಳು

ಬಿಜೆಪಿ ನೇತೃತ್ವದ ಸರ್ಕಾರದ ಅವಧಿಯಲ್ಲಿ ಪಠ್ಯಪುಸ್ತಕ ಪರಿಶೀಲನೆಗಾಗಿ ರಚಿಸಿದ್ದ ಸಮಿತಿಯು, ತನ್ನ ಮಿತಿಯನ್ನು ಮೀರಿ ತಿರುಚಿದ ಇತಿಹಾಸ ಹಾಗೂ ಜಗತ್ತಿಗೆ ಕೊಡುಗೆ ನೀಡಿದ ದಾರ್ಶನಿಕರ ಪಾಠಗಳಿಗೆ ಕತ್ತರಿ ಹಾಕಿ ಪಠ್ಯವನ್ನು ಪರಿಷ್ಕರಿಸಿತ್ತು.

2019ರಲ್ಲಿ ಅಸ್ತಿತ್ವಕ್ಕೆ ಬಂದ ಬಿಜೆಪಿ ಸರ್ಕಾರದಲ್ಲಿ ಪ್ರಾಥಮಿಕ ಶಿಕ್ಷಣ ಸಚಿವರಾಗಿದ್ದ ಎಸ್. ಸುರೇಶ್‌ಕುಮಾರ್ ಅವರು, ಪಠ್ಯಪುಸ್ತಕ ಪರಿಶೀಲನೆಗಾಗಿ ಶಿಕ್ಷಣ ತಜ್ಞರೇ ಅಲ್ಲದ ರೋಹಿತ್ ಚಕ್ರತೀರ್ಥ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿದ್ದರು.

ಶಿಕ್ಷಣ ಸಚಿವರಾದ ಬಿ.ಸಿ. ನಾಗೇಶ್ ಅವರು, ಪಠ್ಯ ಪರಿಷ್ಕರಣೆ ಹೊಣೆಯನ್ನೂ ರೋಹಿತ್ ಚಕ್ರತೀರ್ಥ ಅಧ್ಯಕ್ಷತೆಯಲ್ಲಿ ಸಮಿತಿಗೆ ವಹಿಸಿದ್ದರು. ಸಮಿತಿ ನೀಡಿದ್ದ ಸಲಹೆ ಆಧರಿಸಿ, ಪಠ್ಯಗಳನ್ನು ಪರಿಷ್ಕರಣೆ ಮಾಡಿ, ತರಾತುರಿಯಲ್ಲಿ ಮುದ್ರಣಕ್ಕೂ ಕಳುಹಿಸಲಾಗಿತ್ತು. ಇದು ತೀವ್ರ ವಿವಾದಕ್ಕೆ ಕಾರಣವಾಗಿತ್ತು.

ಅನೇಕ ಲೇಖಕರು, ಸಾಹಿತಿಗಳು ತಮ್ಮ ಕವಿತೆ, ಲೇಖನಗಳನ್ನು ವಾಪಸ್‌ ಪಡೆದಿದ್ದರು. ವಿವಾದ ಭುಗಿಲೆದ್ದ ಅವಧಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ್ದ ನಾಗೇಶ್, ಚಕ್ರತೀರ್ಥ ಅವರನ್ನು ‘ಐಐಟಿ ಪ್ರೊಫೆಸರ್ ಎಂದು ಸಮರ್ಥಿಸಿಕೊಂಡಿದ್ದು ಅಪಹಾಸ್ಯಕ್ಕೆ ಈಡಾಗಿತ್ತು.

ಪಠ್ಯಪುಸ್ತಕ ಪರಿಷ್ಕರಣೆ ವರದಿ; ರೋಹಿತ್‌ ಚಕ್ರತೀರ್ಥ ಸಮಿತಿ ಪರಿಷ್ಕರಿಸಿರುವ ಪಾಠಾಂಶ ಅಳವಡಿಕೆಗೆ ಆದೇಶ – The File

ಈ ಪಠ್ಯಪುಸ್ತಕ ಪರಿಷ್ಕರಣೆಯನ್ನು ತೀವ್ರವಾಗಿ ಖಂಡಿಸಿದ್ದ ಅಂದಿನ ವಿರೋಧ ಪಕ್ಷ ಕಾಂಗ್ರೆಸ್, ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿತ್ತು. ಅಲ್ಲದೇ, ವೈಜ್ಞಾನಿಕ ಮನೋಭಾವ ಬೆಳೆಸುವ ಪಠ್ಯವನ್ನು ಸೇರಿಸಲಾಗುವುದು ಎಂದೂ ಪ್ರತಿಪಾದಿಸಿತ್ತು. ಇದೀಗ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಿದ್ದು, ಪಠ್ಯ ಪರಿಷ್ಕರಣೆಯನ್ನು ವಿರೋಧಿಸಿದ ಆಂದೋಲನದಲ್ಲಿ ಸಕ್ರಿಯರಾಗಿದ್ದ ಅನೇಕರು, ಚುನಾವಣೆ ವೇಳೆ ಸಮಾನ ಮನಸ್ಕರ ಒಕ್ಕೂಟವನ್ನು ರಚಿಸಿಕೊಂಡಿದ್ದರು. ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಸೋಮವಾರ ಭೇಟಿ ಮಾಡಿದ ಒಕ್ಕೂಟದ ಪ್ರಮುಖರಿದ್ದ ನಿಯೋಗ, ಬರಗೂರು ರಾಮಚಂದ್ರಪ್ಪ ನೇತೃತ್ವದ ಸಮಿತಿ ಪರಿಷ್ಕರಿಸಿದ್ದ ಪಠ್ಯವನ್ನೇ ಮುಂದುವರಿಸುವಂತೆ ಮನವಿ ಮಾಡಿದೆ.

ಸಿದ್ದರಾಮಯ್ಯ ಪ್ರತಿಕ್ರಿಯೆ:

”ಮಕ್ಕಳ ಮನಸ್ಸಿಗೆ ವಿಷ ತುಂಬುವ ಪಠ್ಯಕ್ಕೆ ಅವಕಾಶ ನೀಡುವುದಿಲ್ಲ. ಪಠ್ಯ ಮತ್ತು ಪಾಠಗಳ ಮೂಲಕ ಮಕ್ಕಳ ಮನಸ್ಸನ್ನು ಕಲುಷಿತಗೊಳಿಸಲು ನಡೆಸಿರುವ ಕೃತ್ಯವನ್ನು ಕ್ಷಮಿಸಲು ಸಾಧ್ಯವಿಲ್ಲ. ಶೈಕ್ಷಣಿಕ ವರ್ಷ ಆರಂಭ ಆಗಿರುವುದರಿಂದ ಮಕ್ಕಳ ಶಿಕ್ಷಣಕ್ಕೆ ತೊಂದರೆ ಆಗದಂತೆ ಚರ್ಚಿಸಿ ಕ್ರಮ ಕೈಗೊಳ್ಳುತ್ತೇವೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

ಈ ಬಗ್ಗೆ ಪ್ರೊ.ಬರಗೂರು ರಾಮಚಂದ್ರಪ್ಪ ತಮ್ಮ ಅನಿಸಿಕೆ ತಿಳಿಸಿದ್ದು, ”ಪರಿಷ್ಕೃತ ಪಠ್ಯಪುಸ್ತಕಗಳು ಈಗಾಗಲೇ ಮುದ್ರಣಗೊಂಡು ಶಾಲೆಗಳನ್ನು ತಲುಪಿರುವುದರಿಂದ ಈ ಹಂತದಲ್ಲಿ ಬದಲಾವಣೆ ಅಥವಾ ಪರಿಷ್ಕರಣೆ ಕಾರ್ಯಸಾಧುವಲ್ಲ. ಕೊಟ್ಟ ಮಾತೂ ಉಳಿಯಬೇಕು. ಯಡವಟ್ಟುಗಳೂ ಸರಿಯಾಗಬೇಕು”ಎಂದು ಹೇಳಿದ್ದಾರೆ.

”ಪಠ್ಯಪುಸ್ತಕ ಪರಿಷ್ಕರಣೆ ಸುದೀರ್ಘ ಸಮಯ ತೆಗೆದುಕೊಳ್ಳುವ ಪ್ರಕ್ರಿಯೆ. ಮರುಮುದ್ರಣವೂ ವೆಚ್ಚದಾಯಕ. ಶೈಕ್ಷಣಿಕ ವರ್ಷ ಆರಂಭವಾಗಿರುವುದರಿಂದ ಈಗ ಅಂತಹ ಸಾಹಸ ಮಕ್ಕಳ ಶೈಕ್ಷಣಿಕ ಚಟುವಟಿಕೆಗಳ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು. ಸದ್ಯಕ್ಕೆ ಪಠ್ಯಪುಸ್ತಕದಲ್ಲಿರುವ ಸಾಮಾಜಿಕ, ಪ್ರಾದೇಶಕ ಅಸಮಾನತೆಗೆ ಕಾರಣವಾದ ಕೆಲ ಪಾಠಗಳನ್ನು ಕೈಬಿಟ್ಟು, ಪೂರಕವಾದ ಕೆಲ ಪಾಠಗಳನ್ನು ಸೇರಿಸಿಕೊಂಡು ಪಾಠ ಮಾಡಲು ಸುತ್ತೋಲೆ ಹೊರಡಿಸಬೇಕು. ಮಹಾರಾಷ್ಟ್ರದಲ್ಲಿರುವಂತೆ ವಿಷಯ ತಜ್ಞರು, ಅಧಿಕಾರಿಗಳನ್ನು ಒಳಗೊಂಡ ಶಾಶ್ವತವಾದ ಪಠ್ಯಪುಸ್ತಕ ಆಯೋಗ ಅಥವಾ ಪ್ರಾಧಿಕಾರ ರಚಿಸಬೇಕು. ಭವಿಷ್ಯದಲ್ಲಿ ಪಠ್ಯಪುಸ್ತಕಗಳು ಯಾವುದೇ ಪಕ್ಷದ ಪುಸ್ತಕಗಳಾಗದಂತೆ ಕಾನೂನು ರೂಪಿಸಬೇಕು” ಎಂದು ಬರಗೂರು ರಾಮಚಂದ್ರಪ್ಪ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...