Homeಮುಖಪುಟಪಠ್ಯಪುಸ್ತಕ ಪರಿಷ್ಕರಣೆ: 10ನೇ ತರಗತಿ ಪಠ್ಯದಿಂದ 'ಪ್ರಜಾಪ್ರಭುತ್ವ' ಪಾಠವನ್ನೇ ಕೈಬಿಟ್ಟ ಎನ್‌ಸಿಇಆರ್‌ಟಿ

ಪಠ್ಯಪುಸ್ತಕ ಪರಿಷ್ಕರಣೆ: 10ನೇ ತರಗತಿ ಪಠ್ಯದಿಂದ ‘ಪ್ರಜಾಪ್ರಭುತ್ವ’ ಪಾಠವನ್ನೇ ಕೈಬಿಟ್ಟ ಎನ್‌ಸಿಇಆರ್‌ಟಿ

- Advertisement -
- Advertisement -

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿಯು (ಎನ್‌ಸಿಇಆರ್‌ಟಿ) ಪಠ್ಯಪುಸ್ತಕ ಪರಿಷ್ಕರಣೆ ಮಾಡಿದ್ದು ಹತ್ತನೇ ತರಗತಿಯ ರಾಜ್ಯಶಾಸ್ತ್ರ ಪಠ್ಯಪುಸ್ತಕದಿಂದ ‘ಪ್ರಜಾಪ್ರಭುತ್ವ’ ಪಾಠ ಹಾಗೂ ವಿಜ್ಞಾನ ಪಠ್ಯಪುಸ್ತಕದಿಂದ ‘ಆವರ್ತಕ ಕೋಷ್ಟಕ’ (ಪಿರಿಯಾಡಿಕ್ ಟೇಬಲ್) ಪಾಠಗಳನ್ನು ಕೈಬಿಟ್ಟಿದೆ.

ಈ ಬಗ್ಗೆ ಸ್ಪಷ್ಟನೆ ನೀಡಿರುವ ಎನ್‌ಸಿಇಆರ್‌ಟಿ, ”ಪಠ್ಯವನ್ನು ತರ್ಕಬದ್ಧಗೊಳಿಸುವ ಜತೆಗೆ ವಿದ್ಯಾರ್ಥಿಗಳ ಮೇಲಿನ ಶೈಕ್ಷಣಿಕ ಹೊರೆ ಇಳಿಸುವ ಉದ್ದೇಶದಿಂದ ಈ ವಿರ್ಧಾರ ಕೈಗೊಳ್ಳಲಾಗಿದೆ” ಎಂದು ಹೇಳಿದೆ.

ಎನ್‌ಸಿಇಆರ್‌ಟಿ ನಡೆಗೆ ಶಿಕ್ಷಣತಜ್ಞರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಒಂದು ತಿಂಗಳ ಹಿಂದೆಯಷ್ಟೇ ಪಠ್ಯಪುಸ್ತಕದಿಂದ ಮೊಘಲ್ ಸಾಮ್ರಾಜ್ಯ, ಮಹಾತ್ಮಗಾಂಧಿ ಹತ್ಯೆ, ಗುಜರಾತ್ ದಂಗೆ, ಡಾರ್ವಿನ್‌ನ ವಿಕಾಸವಾದ ಸಿದ್ಧಾಂತದ ಕುರಿತ ವಿವರಗಳನ್ನು ಪಠ್ಯಪುಸ್ತಕದಿಂದ ಕೈಬಿಡಲಾಗಿತ್ತು. ಮಂಡಳಿಯ ಈ ಕ್ರಮಕ್ಕೆ ಪ್ರತಿಪಕ್ಷಗಳು ಮತ್ತು ಶಿಕ್ಷಣ ತಜ್ಞರು ಆಕ್ಷೇಪ ವ್ಯಕ್ತಪಡಿಸಿದ್ದರು. ಈಗ 10ನೇ ತರಗತಿ ಪಠ್ಯಪುಸ್ತಕದಲ್ಲೂ ಪ್ರಮುಖ ವಿಷಯದ ಪಠ್ಯಗಳನ್ನು ಕೈ ಬಿಟ್ಟಿದೆ.

ಈ ಬಗ್ಗೆ ಎನ್‌ಇಆರ್‌ಟಿಯ ಮಾಜಿ ಅಧ್ಯಕ್ಷ ಪ್ರೊ.ಕೃಷ್ಣಕುಮಾರ್ ಅವರು, ”ಮಂಡಳಿಯು ಮಾಡಿದ ಈ ಬದಲಾವಣೆಯು ತರ್ಕಬದ್ಧವೇ ಅಥವಾ ಸಮರ್ಥನೀಯವೇ?” ಎಂದು ಪ್ರಶ್ನೆ ಮಾಡಿದ್ದಾರೆ. ”ಇಂತಹ ಬದಲಾವಣೆಗೆ ವಿವರ ನೀಡಲು ಆಗುವುದಿಲ್ಲ. ವಿಕಾಸವಾದದ ಸಿದ್ಧಾಂತ ಇಲ್ಲದೆ ಒಬ್ಬ ಶಿಕ್ಷಕ, ವಿದ್ಯಾರ್ಥಿಗಳಿಗೆ ಬೋಧಿಸಲು ಹೇಗೆ ಸಾಧ್ಯ? ಪರಿವರ್ತಕ ಕೋಷ್ಟಕ ಇಲ್ಲದೆ ರಸಾಯನ ವಿಜ್ಞಾನ ಇಲ್ಲ” ಎಂದು ತಿಳಿಹೇಳಿದ್ದಾರೆ.

”ಪರಿಷ್ಕರಣೆ ಮಾಡಿರುವ ವಿಜ್ಞಾನ ಪಠ್ಯಪುಸ್ತಕದಲ್ಲಿ ಆವರ್ತಕ ಕೋಷ್ಟಕವನ್ನು ತೆಗೆದುಹಾಕಲಾಗಿದೆ. ಇದರಡಿ ಬರುವ ಪರಿಸರ ಸುಸ್ಥಿರತೆ ಹಾಗೂ ಇಂಧನ ಮೂಲಗಳು ಅಧ್ಯಾಯಗಳನ್ನು ಕೈಬಿಡಲಾಗಿದೆ. ವಿದ್ಯುತ್ ಮತ್ತು ಕಾಂತೀಯತೆಗೆ ವಿಜ್ಞಾನಿ ಮೈಕಲ್ ಫ್ಯಾರಡೆ ಸಲ್ಲಿಸಿದ ಕೊಡುಗೆಯ ಅಧ್ಯಯನದಿಂದ ವಿದ್ಯಾರ್ಥಿಗಳು ವಂಚಿತರಾಗುವಂತಾಗಿದೆ” ಎಂದು ಹೇಳಿದ್ದಾರೆ.

”ರಾಜ್ಯಶಾಸ್ತ್ರ ಪಠ್ಯಪುಸ್ತಕದಿಂದ ಪ್ರಜಾಪ್ರಭುತ್ವ ರಾಜಕೀಯ- 1ರಡಿ ಬರುವ ಮಹತ್ವದ ಸಂಘರ್ಷಗಳು ಮತ್ತು ಚಳವಳಿಗಳು, ಪ್ರಜಾಪ್ರಭುತ್ವದ ಸವಾಲುಗಳು, ರಾಜಕೀಯ ಪಕ್ಷಗಳು ಅಧ್ಯಾಯಗಳನ್ನೂ ಕೈಬಿಡಲಾಗಿದೆ” ಎಂದಿದ್ದಾರೆ.

ಇದನ್ನೂ ಓದಿ: NCERT ಪುಸ್ತಕದಿಂದ ‘ಡಾರ್ವಿನ್‌ನ ವಿಕಾಸದ ಸಿದ್ಧಾಂತ’ ಕೈಬಿಡುವುದನ್ನು ಸಮರ್ಥಿಸಿಕೊಂಡ ಶಿಕ್ಷಣ ಸಚಿವ

ಎನ್‌ಸಿಇಆರ್‌ಟಿ ಸ್ಪಷ್ಟಣೆ

ಮಕ್ಕಳು ಈ ಕೋವಿಡ್ ಪಿಡುಗಿನ ಸಂದರ್ಭದಲ್ಲಿ ಡಿಜಿಟಲ್ ಕಲಿಕೆಯ ಮಹತ್ವದ ಅರಿತಿದ್ದಾರೆ. ಪಠ್ಯಪುಸ್ತಕದಲ್ಲಿದ್ದ ಕಷ್ಟಕರ, ಪುನರಾವರ್ತಿತ ಹಾಗೂ ಅನಗತ್ಯ ಅಂಶಗಳನ್ನು ಕೈಬಿಡಲಾಗಿದೆ ಎಂದು ಎನ್‌ಸಿಇಆರ್‌ಟಿ ತಿಳಿಸಿದೆ.

11 ಮತ್ತು 12ನೇ ತರಗತಿಯಲ್ಲಿ ವಿದ್ಯಾರ್ಥಿಗಳು ಈ ವಿಷಯಗಳನ್ನು ಪ್ರತ್ಯೇಕವಾಗಿ ಆಯ್ಕೆ ಮಾಡಿಕೊಂಡು ಕಲಿಯುವ ಅವಕಾಶವಿದೆ. ಪದವಿ ಪೂರ್ವ ಶಿಕ್ಷಣ ಹಂತದಲ್ಲಿ ರಸಾಯನ ವಿಜ್ಞಾನ ವಿಷಯವನ್ನು ಆಯ್ಕೆ ಮಾಡಿಕೊಳ್ಳುವ ವಿದ್ಯಾರ್ಥಿಗಳಿಗೆ ಆವರ್ತಕ ಕೋಷ್ಟಕ ಕಲಿಯುವ ಅವಕಾಶವಿದೆ ಎಂದು ವಿವರಿಸಿದೆ.

”ಕೋವಿಡ್ ಸಂದರ್ಭದಲ್ಲಿನ ಶೈಕ್ಷಣಿಕ ಸ್ಥಿತಿ ಆಧರಿಸಿ ಪಠ್ಯ ತರ್ಕಬದ್ಧಗೊಳಿಸುವಿಕೆಯ ಪ್ರಕ್ರಿಯೆ ಆರಂಭವಾಗಿದೆ. ವಿದ್ಯಾರ್ಥಿಗಳ ಮೇಲಿನ ಶೈಕ್ಷಣಿಕ ಹೊರೆ ಕಡಿಮೆ ಮಾಡುವ ಆಶಯವೂ ಇದರ ಹಿಂದಿದೆ’ ಎಂದು ಕೇಂದ್ರ ಶಿಕ್ಷಣ ಖಾತೆಯ ರಾಜ್ಯ ಸಚಿವ ಸುಭಾಷ್‌ ಸರ್ಕಾ‌ರ್ ಸಮರ್ಥಿಸಿಕೊಂಡಿದ್ದಾರೆ.

ಮತ್ತೊಂದೆಡೆ ದೇಶದ ಎಲ್ಲಾ ಶಾಲೆಗಳಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿಯ(ಎನ್‌ಇಪಿ) ಜಾರಿಗೊಳಿಸಬೇಕು ಎಂದು ಆರೆಸ್ಸೆಸ್ ಈಗಾಗಲೇ ಕೇಂದ್ರದ ಮೇಲೆ ಒತ್ತಡ ಹೇರಿದೆ. ಆರೆಸ್ಸೆಸ್‌ನ ಅಂಗ ಸಂಸ್ಥೆಯಾದ ಶಿಕ್ಷಾ ಸಂಸ್ಕೃತಿ ಉತ್ಪಾನ್ ನ್ಯಾಸ್, ಎನ್‌ಸಿಇಆರ್‌ಟಿಯ ಈ ಕ್ರಮಕ್ಕೆ ಬೆಂಬಲ ನೀಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...