Homeಕರ್ನಾಟಕಪಠ್ಯಪುಸ್ತಕ ಅಧ್ವಾನ: ಲೇಖಕರ ಅಸಮ್ಮತಿ ಲೆಕ್ಕಿಸದೆ ಮತ್ತೆ ಪಠ್ಯಸೇರ್ಪಡೆ

ಪಠ್ಯಪುಸ್ತಕ ಅಧ್ವಾನ: ಲೇಖಕರ ಅಸಮ್ಮತಿ ಲೆಕ್ಕಿಸದೆ ಮತ್ತೆ ಪಠ್ಯಸೇರ್ಪಡೆ

ಸುತ್ತೋಲೆ ಹೊರಡಿಸಿ, ನಂತರ ವಾಪಸ್ ಪಡೆಯುವ ಸರ್ಕಾರದ ದ್ವಂದ್ವ ನೀತಿ ಮತ್ತೊಮ್ಮೆ ಸಾಬೀತಾಗಿದೆ.

- Advertisement -
- Advertisement -

ರಾಜ್ಯ ಬಿಜೆಪಿ ಸರ್ಕಾರ ತರಾತರಿಯಲ್ಲಿ ಮಾಡಿದ್ದ ಪಠ್ಯಪುಸ್ತಕ ಪರಿಷ್ಕರಣೆಯ ಅಧ್ವಾನ ಬಗೆಹರಿಯುವಂತೆ ಕಾಣುತ್ತಿಲ್ಲ. ನಾಡಗೀತೆಗೆ ಅವಮಾನ ಮಾಡಿದ ಆರೋಪವನ್ನು ಹೊತ್ತಿರುವ ರೋಹಿತ್ ಚಕ್ರತೀರ್ಥ ಎಂಬವರು ಮಾಡಿರುವ ಪಠ್ಯಪುಸ್ತಕ ಪರಿಷ್ಕರಣೆಗೆ ನಾಡಿನ ಹಿರಿಯ ಲೇಖಕರು ವಿರೋಧ ವ್ಯಕ್ತಪಡಿಸಿದ್ದರು. ಸರ್ಕಾರ ಅಂತಿಮವಾಗಿ ಏಳು ಲೇಖಕರ ಪಠ್ಯವನ್ನು ಕೈಬಿಟ್ಟಿತ್ತು. ಆದರೆ ಮತ್ತೆ ಆ ಲೇಖಕರ ಪಠ್ಯಗಳು ಸೇರಿಸುವುದಾಗಿ ಸರ್ಕಾರ ಸುತ್ತೋಲೆ ಹೊರಡಿಸಿದೆ.

ನಾಡಿನ ಸಾಕ್ಷಿಪ್ರಜ್ಞೆಗಳಾದ ದೇವನೂರ ಮಹಾದೇವ ಹಾಗೂ ಡಾ. ಜಿ.ರಾಮಕೃಷ್ಣ ಅವರು ಸೇರಿದಂತೆ ಏಳು ಲೇಖಕರ ಪಠ್ಯವನ್ನು ಕೈಬಿಟ್ಟಿರುವುದಾಗಿ ತಿಳಿಸಿದ್ದ ಸೆ.23ರ ಆದೇಶವನ್ನು ಶಿಕ್ಷಣ ಇಲಾಖೆ ಹಿಂಪಡೆದಿದೆ. ಈ ಮೂಲಕ ಅವರ ಗದ್ಯ ಮತ್ತು ಪದ್ಯಗಳನ್ನು ಬೋಧನೆ, ಕಲಿಕೆ ಮತ್ತು ಮೌಲ್ಯಮಾಪನಕ್ಕೆ ಪರಿಗಣಿಸುವಂತೆ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

10ನೇ ತರಗತಿಯ ಪಠ್ಯದಲ್ಲಿನ (ಪ್ರಥಮ ಭಾಷೆ) ದೇವನೂರ ಮಹಾದೇವ ಅವರ ‘ಎದೆಗೆ ಬಿದ್ದ ಅಕ್ಷರ’ ಗದ್ಯ, ಜಿ.ರಾಮಕೃಷ್ಣ ಅವರ ‘ಭಗತ್ ಸಿಂಗ್’ ಪೂರಕ ಗದ್ಯ, 9ನೇ ತರಗತಿ ಪಠ್ಯದಲ್ಲಿನ (ತೃತೀಯ ಭಾಷೆ) ರೂಪ ಹಾಸನ ಅವರ ‘ಅಮ್ಮನಾಗುವುದೆಂದರೆ’ ಪೂರಕ ಪದ್ಯ, 10ನೇ ತರಗತಿ ಪಠ್ಯದಲ್ಲಿನ (ತೃತೀಯ ಭಾಷೆ) ಈರಪ್ಪ ಎಂ.ಕಂಬಳಿ ಅವರ ‘ಹೀಗೊಂದು ಬಸ್ ಪ್ರಯಾಣ’ ಪೂರಕ ಗದ್ಯ, ಸತೀಶ್ ಕುಲಕರ್ಣಿ ಅವರ ‘ಕಟ್ಟುತ್ತೇವೆ ನಾವು’ ಪದ್ಯ, 10ನೇ ತರಗತಿ ಪಠ್ಯದಲ್ಲಿನ (ದ್ವಿತೀಯ ಭಾಷೆ) ಸುಕನ್ಯ ಮಾರುತಿ ಅವರ ‘ಏಣಿ’ ಪದ್ಯ, 6ನೇ ತರಗತಿ ಪಠ್ಯದಲ್ಲಿನ (ಪ್ರಥಮ ಭಾಷೆ) ದೊಡ್ಡಹುಲ್ಲೂರು ರುಕ್ಕೋಜಿರಾವ್‌ ಅವರ ‘ಡಾ.ರಾಜ್ ಕುಮಾರ್’ ಗದ್ಯಗಳನ್ನು ಪರಿಗಣಿಸದಂತೆ ಶಿಕ್ಷಣ ಇಲಾಖೆಯು ಒಂದು ತಿಂಗಳ ಹಿಂದೆ ಆದೇಶ ಹೊರಡಿಸಿತ್ತು.

ಹಿಂದುತ್ವದ ಅಜೆಂಡಾಗಳನ್ನು ಹೇರಿ, ಪಠ್ಯಪುಸ್ತಕಗಳನ್ನು ಕೇಸರೀಕರಣ ಮಾಡಿದ ರೋಹಿತ್ ಚಕ್ರತೀರ್ಥ ಸಮಿತಿ ವಿರುದ್ಧ ನಾಡಿನಾದ್ಯಂತ ದೊಡ್ಡ ಮಟ್ಟದ ಆಕ್ರೋಶ ವ್ಯಕ್ತವಾಗಿತ್ತು. ಆದೇಶವಿಲ್ಲದೆಯೇ ಪಠ್ಯಪರಿಷ್ಕರಣೆಯಾಗಿದ್ದು ವಿವಾದ ಸೃಷ್ಟಿಸಿತ್ತು. ನಾಡಿನ ಅನೇಕ ಸಾಹಿತಿಗಳು ತಮ್ಮ ಪಠ್ಯವನ್ನು ಕೈಬಿಡುವಂತೆ ಕೋರಿದ್ದರು. ಈ ಸಂಬಂಧ ಪತ್ರ ಸಹ ಬರೆದಿದ್ದರು. ಗದ್ಯ ಮತ್ತು ಪದ್ಯಗಳನ್ನು ಪಠ್ಯದಲ್ಲಿ ಉಳಿಸಿಕೊಳ್ಳಲು ಶಿಕ್ಷಣ ಇಲಾಖೆ ಈ ಲೇಖಕರ ಅನುಮತಿ ಕೋರಿತ್ತು. ಮನವಿಯನ್ನು ಲೇಖಕರು ತಿರಸ್ಕರಿಸಿದ್ದರು. ಈ ಹಿನ್ನೆಲೆ ಸುತ್ತೋಲೆ ಹೊರಡಿಸಲಾಗಿತ್ತು. ಪೋಷಕ, ವಿದ್ಯಾರ್ಥಿಗಳ, ಗಣ್ಯರ ಕೋರಿಕೆಯ ಮೇರೆಗೆ ಪಠ್ಯಗಳನ್ನು ಮುಂದುವರೆಸುತ್ತಿರುವುದಾಗಿ ಇಲಾಖೆ ಸ್ಪಷ್ಟ ಪಡಿಸಿದೆ.

ಸರ್ಕಾರದ ನಿಲುವುಗಳ ಕುರಿತು ಜನರು ಆಕ್ಷೇಪ ವ್ಯಕ್ತಪಡಿಸುತ್ತಿದ್ದಾರೆ. ಈ ಕುರಿತು ಸುದೀರ್ಘವಾದ ಟಿಪ್ಪಣಿಯನ್ನು ಪೋಸ್ಟ್‌ ಮಾಡಿರುವ ಲೇಖಕಿ ಸಂಜ್ಯೋತಿಯವರು, “ಲೇಖಕರ ಅನುಮತಿಯಿಲ್ಲದೆ ಅವರ ಪಠ್ಯವನ್ನು‌ ಸೇರಿಸುವ ಅಧಿಕಾರ ಸರ್ಕಾರಕ್ಕೆ ಇಲ್ಲ. ಅವರ ಅನುಮತಿ ಇಲ್ಲದೆಯೂ ಬೇಕಾದಂತೆ ಹಾಗೆ ಬಳಸಿಕೊಳ್ಳುವುದು ಅಕ್ರಮ (illegal) ಮತ್ತು ಸರ್ಕಾರ ನಡೆಸುತ್ತಿರುವವರ ನಿರ್ಲಜ್ಜ ಅಹಂಕಾರ” ಎಂದಿದ್ದಾರೆ.

ಇದನ್ನೂ ಓದಿರಿ: ಫ್ಯಾಕ್ಟ್‌ಚೆಕ್‌: ಅಪ್ಪು ಬಗ್ಗೆ ಹಗುರವಾಗಿ ಚಕ್ರವರ್ತಿ ಸೂಲಿಬೆಲೆ ಮಾತನಾಡಿದ್ದಾರೆಯೇ?

“ಪೋಷಕರು, ಗಣ್ಯರು ಒತ್ತಾಯಿಸಿದ್ದು ಆ ಪಠ್ಯಗಳನ್ನು ಉಳಿಸಿಕೊಳ್ಳಲು ಅಗತ್ಯವಾದ ಕ್ರಮ ಕೈಗೊಳ್ಳಿ ಎಂದಿದ್ದಾರೆ. ಅದಕ್ಕಾಗಿ ಸರ್ಕಾರ ನಿಜಕ್ಕೂ ಮಾಡಬೇಕಿದ್ದದ್ದು ಆ ಲೇಖಕರು ಯಾವ ಕಾರಣಕ್ಕೆ ಅನುಮತಿ ನಿರಾಕರಿಸಿದ್ದರೋ ಅದನ್ನು ಸರಿಪಡಿಸುವುದೇ ಹೊರತು, ಹೀಗೆ ಸರ್ವಾಧಿಕಾರಿ ಧೋರಣೆಯಿಂದ ಅನುಮತಿ ನಿರಾಕರಿಸಿದವರ ಲೇಖನಗಳನ್ನು ‘ನಮ್ಮಿಷ್ಟದಂತೆ ಬಳಸ್ತೀವಿ, ಏನಿವಾಗ’ ಅನ್ನೋ ಧೋರಣೆಯಿಂದ ಅಹಂಕಾರ ಮೆರೆಯೋದಲ್ಲ” ಎಂದು ಅಭಿಪ್ರಾಯಪಟ್ಟಿದ್ದಾರೆ.

“ಈಗ ಪೋಷಕರ ಗಣ್ಯರ ಒತ್ತಾಯದ ನೆಪ ಹೇಳಿ ಪಠ್ಯ ಮರುಸೇರ್ಪಡೆಯ ಕತೆ ಹೇಳುತ್ತಿರುವ ಸರ್ಕಾರಕ್ಕೆ ಅದೇ ‘ಪೋಷಕರು, ಗಣ್ಯರು’ ಇನ್ನಿಲ್ಲದಂತೆ ಈ ಅಕ್ರಮ, ಅಪ್ರಬುದ್ಧ ದುರುದ್ದೇಶಪೂರಿತ ಪರಿಷ್ಕರಣಾ ಸಮಿತಿಯನ್ನು ವಿರೋಧಿಸಿದ್ದು, ಅದನ್ನು ವಜಾಗೊಳಿಸುವಂತೆ, ಆ ಪರಿಷ್ಕರಣೆಯನ್ನು ಹಿಂತೆಗೆದುಕೊಳ್ಳುವಂತೆ ಒತ್ತಾಯಿಸಿದ್ದು ಇದ್ಯಾವುದೂ ಕಿವಿಗೆ ಬೀಳಲಿಲ್ಲವೇಕೆ?” ಎಂದು ಪ್ರಶ್ನಿಸಿದ್ದಾರೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಆ ಯಾವ ಲೇಖಕ, ಬರಹಗಾರರ ಮನೆಗೆ ಹೋಗಿ ಅವರ ಬರಹ ಪಡೆದಿಲ್ಲ. ಇವರೇ ಪಠ್ಯ ಸಮೀತಿಗೆ ಲಾಭಿ ಮಾಡಿ ಸೇರಿಸಿಕೊಂಡಿದ್ದಾರೆ. ಲಾಭ ಕೀರ್ತಿ ಪಡೆದಿದ್ದಾರೆ. ನಾವು ಇವರುಗಳನ್ನು ಅತ್ಯಂತ ಗೌರವಾನ್ವಿತರೆಂದು ಪ್ರೀತಿ ಮಾಡಿದ್ದೆವು. ಆದರಿಸುತ್ತಿದ್ದೆವು. ಪಠ್ಯ ಪ್ರಕಟವಾಗಿ ಮಕ್ಕಳು ಓದುವ ಕಾಲಘಟ್ಟದಲ್ಲಿ ಮಕ್ಕಳ ಶೈಕ್ಷಣಿಕ ಭವಿಷ್ಯ ಲೆಕ್ಕಿಸದೇ ಸ್ವಾರ್ಥ, ಪ್ರತಿಷ್ಟೆಗೆ ನನ್ನ ಬರಹ ವಾಪಾಸ್ ಪಡೆಯುತ್ತೇವೆ ಎಂದರೆ ಏನ್ರೀ ಅರ್ಥ. ಇವರುಗಳು ಸಾಹಿತಿಗಳೇ!? ಛೇ ಛೇ ಛೇ. ನಮ್ಮ ಮಕ್ಕಳ ಶೈಕ್ಷಣಿಕ ಭವಿಷ್ಯಕ್ಕೆ ಮಾರಕವಾಗಿ ನಿಂತಿರುವವರನ್ನು ಬಹಿಷ್ಕಾರ ಹಾಕಬೇಕು.
    ಜೆ.ಎಮ್ ರಾಜಶೇಖರ ಸಾಹಿತಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...