Homeಕರ್ನಾಟಕಪಠ್ಯಪುಸ್ತಕ ಅಧ್ವಾನ: ಲೇಖಕರ ಅಸಮ್ಮತಿ ಲೆಕ್ಕಿಸದೆ ಮತ್ತೆ ಪಠ್ಯಸೇರ್ಪಡೆ

ಪಠ್ಯಪುಸ್ತಕ ಅಧ್ವಾನ: ಲೇಖಕರ ಅಸಮ್ಮತಿ ಲೆಕ್ಕಿಸದೆ ಮತ್ತೆ ಪಠ್ಯಸೇರ್ಪಡೆ

ಸುತ್ತೋಲೆ ಹೊರಡಿಸಿ, ನಂತರ ವಾಪಸ್ ಪಡೆಯುವ ಸರ್ಕಾರದ ದ್ವಂದ್ವ ನೀತಿ ಮತ್ತೊಮ್ಮೆ ಸಾಬೀತಾಗಿದೆ.

- Advertisement -
- Advertisement -

ರಾಜ್ಯ ಬಿಜೆಪಿ ಸರ್ಕಾರ ತರಾತರಿಯಲ್ಲಿ ಮಾಡಿದ್ದ ಪಠ್ಯಪುಸ್ತಕ ಪರಿಷ್ಕರಣೆಯ ಅಧ್ವಾನ ಬಗೆಹರಿಯುವಂತೆ ಕಾಣುತ್ತಿಲ್ಲ. ನಾಡಗೀತೆಗೆ ಅವಮಾನ ಮಾಡಿದ ಆರೋಪವನ್ನು ಹೊತ್ತಿರುವ ರೋಹಿತ್ ಚಕ್ರತೀರ್ಥ ಎಂಬವರು ಮಾಡಿರುವ ಪಠ್ಯಪುಸ್ತಕ ಪರಿಷ್ಕರಣೆಗೆ ನಾಡಿನ ಹಿರಿಯ ಲೇಖಕರು ವಿರೋಧ ವ್ಯಕ್ತಪಡಿಸಿದ್ದರು. ಸರ್ಕಾರ ಅಂತಿಮವಾಗಿ ಏಳು ಲೇಖಕರ ಪಠ್ಯವನ್ನು ಕೈಬಿಟ್ಟಿತ್ತು. ಆದರೆ ಮತ್ತೆ ಆ ಲೇಖಕರ ಪಠ್ಯಗಳು ಸೇರಿಸುವುದಾಗಿ ಸರ್ಕಾರ ಸುತ್ತೋಲೆ ಹೊರಡಿಸಿದೆ.

ನಾಡಿನ ಸಾಕ್ಷಿಪ್ರಜ್ಞೆಗಳಾದ ದೇವನೂರ ಮಹಾದೇವ ಹಾಗೂ ಡಾ. ಜಿ.ರಾಮಕೃಷ್ಣ ಅವರು ಸೇರಿದಂತೆ ಏಳು ಲೇಖಕರ ಪಠ್ಯವನ್ನು ಕೈಬಿಟ್ಟಿರುವುದಾಗಿ ತಿಳಿಸಿದ್ದ ಸೆ.23ರ ಆದೇಶವನ್ನು ಶಿಕ್ಷಣ ಇಲಾಖೆ ಹಿಂಪಡೆದಿದೆ. ಈ ಮೂಲಕ ಅವರ ಗದ್ಯ ಮತ್ತು ಪದ್ಯಗಳನ್ನು ಬೋಧನೆ, ಕಲಿಕೆ ಮತ್ತು ಮೌಲ್ಯಮಾಪನಕ್ಕೆ ಪರಿಗಣಿಸುವಂತೆ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

10ನೇ ತರಗತಿಯ ಪಠ್ಯದಲ್ಲಿನ (ಪ್ರಥಮ ಭಾಷೆ) ದೇವನೂರ ಮಹಾದೇವ ಅವರ ‘ಎದೆಗೆ ಬಿದ್ದ ಅಕ್ಷರ’ ಗದ್ಯ, ಜಿ.ರಾಮಕೃಷ್ಣ ಅವರ ‘ಭಗತ್ ಸಿಂಗ್’ ಪೂರಕ ಗದ್ಯ, 9ನೇ ತರಗತಿ ಪಠ್ಯದಲ್ಲಿನ (ತೃತೀಯ ಭಾಷೆ) ರೂಪ ಹಾಸನ ಅವರ ‘ಅಮ್ಮನಾಗುವುದೆಂದರೆ’ ಪೂರಕ ಪದ್ಯ, 10ನೇ ತರಗತಿ ಪಠ್ಯದಲ್ಲಿನ (ತೃತೀಯ ಭಾಷೆ) ಈರಪ್ಪ ಎಂ.ಕಂಬಳಿ ಅವರ ‘ಹೀಗೊಂದು ಬಸ್ ಪ್ರಯಾಣ’ ಪೂರಕ ಗದ್ಯ, ಸತೀಶ್ ಕುಲಕರ್ಣಿ ಅವರ ‘ಕಟ್ಟುತ್ತೇವೆ ನಾವು’ ಪದ್ಯ, 10ನೇ ತರಗತಿ ಪಠ್ಯದಲ್ಲಿನ (ದ್ವಿತೀಯ ಭಾಷೆ) ಸುಕನ್ಯ ಮಾರುತಿ ಅವರ ‘ಏಣಿ’ ಪದ್ಯ, 6ನೇ ತರಗತಿ ಪಠ್ಯದಲ್ಲಿನ (ಪ್ರಥಮ ಭಾಷೆ) ದೊಡ್ಡಹುಲ್ಲೂರು ರುಕ್ಕೋಜಿರಾವ್‌ ಅವರ ‘ಡಾ.ರಾಜ್ ಕುಮಾರ್’ ಗದ್ಯಗಳನ್ನು ಪರಿಗಣಿಸದಂತೆ ಶಿಕ್ಷಣ ಇಲಾಖೆಯು ಒಂದು ತಿಂಗಳ ಹಿಂದೆ ಆದೇಶ ಹೊರಡಿಸಿತ್ತು.

ಹಿಂದುತ್ವದ ಅಜೆಂಡಾಗಳನ್ನು ಹೇರಿ, ಪಠ್ಯಪುಸ್ತಕಗಳನ್ನು ಕೇಸರೀಕರಣ ಮಾಡಿದ ರೋಹಿತ್ ಚಕ್ರತೀರ್ಥ ಸಮಿತಿ ವಿರುದ್ಧ ನಾಡಿನಾದ್ಯಂತ ದೊಡ್ಡ ಮಟ್ಟದ ಆಕ್ರೋಶ ವ್ಯಕ್ತವಾಗಿತ್ತು. ಆದೇಶವಿಲ್ಲದೆಯೇ ಪಠ್ಯಪರಿಷ್ಕರಣೆಯಾಗಿದ್ದು ವಿವಾದ ಸೃಷ್ಟಿಸಿತ್ತು. ನಾಡಿನ ಅನೇಕ ಸಾಹಿತಿಗಳು ತಮ್ಮ ಪಠ್ಯವನ್ನು ಕೈಬಿಡುವಂತೆ ಕೋರಿದ್ದರು. ಈ ಸಂಬಂಧ ಪತ್ರ ಸಹ ಬರೆದಿದ್ದರು. ಗದ್ಯ ಮತ್ತು ಪದ್ಯಗಳನ್ನು ಪಠ್ಯದಲ್ಲಿ ಉಳಿಸಿಕೊಳ್ಳಲು ಶಿಕ್ಷಣ ಇಲಾಖೆ ಈ ಲೇಖಕರ ಅನುಮತಿ ಕೋರಿತ್ತು. ಮನವಿಯನ್ನು ಲೇಖಕರು ತಿರಸ್ಕರಿಸಿದ್ದರು. ಈ ಹಿನ್ನೆಲೆ ಸುತ್ತೋಲೆ ಹೊರಡಿಸಲಾಗಿತ್ತು. ಪೋಷಕ, ವಿದ್ಯಾರ್ಥಿಗಳ, ಗಣ್ಯರ ಕೋರಿಕೆಯ ಮೇರೆಗೆ ಪಠ್ಯಗಳನ್ನು ಮುಂದುವರೆಸುತ್ತಿರುವುದಾಗಿ ಇಲಾಖೆ ಸ್ಪಷ್ಟ ಪಡಿಸಿದೆ.

ಸರ್ಕಾರದ ನಿಲುವುಗಳ ಕುರಿತು ಜನರು ಆಕ್ಷೇಪ ವ್ಯಕ್ತಪಡಿಸುತ್ತಿದ್ದಾರೆ. ಈ ಕುರಿತು ಸುದೀರ್ಘವಾದ ಟಿಪ್ಪಣಿಯನ್ನು ಪೋಸ್ಟ್‌ ಮಾಡಿರುವ ಲೇಖಕಿ ಸಂಜ್ಯೋತಿಯವರು, “ಲೇಖಕರ ಅನುಮತಿಯಿಲ್ಲದೆ ಅವರ ಪಠ್ಯವನ್ನು‌ ಸೇರಿಸುವ ಅಧಿಕಾರ ಸರ್ಕಾರಕ್ಕೆ ಇಲ್ಲ. ಅವರ ಅನುಮತಿ ಇಲ್ಲದೆಯೂ ಬೇಕಾದಂತೆ ಹಾಗೆ ಬಳಸಿಕೊಳ್ಳುವುದು ಅಕ್ರಮ (illegal) ಮತ್ತು ಸರ್ಕಾರ ನಡೆಸುತ್ತಿರುವವರ ನಿರ್ಲಜ್ಜ ಅಹಂಕಾರ” ಎಂದಿದ್ದಾರೆ.

ಇದನ್ನೂ ಓದಿರಿ: ಫ್ಯಾಕ್ಟ್‌ಚೆಕ್‌: ಅಪ್ಪು ಬಗ್ಗೆ ಹಗುರವಾಗಿ ಚಕ್ರವರ್ತಿ ಸೂಲಿಬೆಲೆ ಮಾತನಾಡಿದ್ದಾರೆಯೇ?

“ಪೋಷಕರು, ಗಣ್ಯರು ಒತ್ತಾಯಿಸಿದ್ದು ಆ ಪಠ್ಯಗಳನ್ನು ಉಳಿಸಿಕೊಳ್ಳಲು ಅಗತ್ಯವಾದ ಕ್ರಮ ಕೈಗೊಳ್ಳಿ ಎಂದಿದ್ದಾರೆ. ಅದಕ್ಕಾಗಿ ಸರ್ಕಾರ ನಿಜಕ್ಕೂ ಮಾಡಬೇಕಿದ್ದದ್ದು ಆ ಲೇಖಕರು ಯಾವ ಕಾರಣಕ್ಕೆ ಅನುಮತಿ ನಿರಾಕರಿಸಿದ್ದರೋ ಅದನ್ನು ಸರಿಪಡಿಸುವುದೇ ಹೊರತು, ಹೀಗೆ ಸರ್ವಾಧಿಕಾರಿ ಧೋರಣೆಯಿಂದ ಅನುಮತಿ ನಿರಾಕರಿಸಿದವರ ಲೇಖನಗಳನ್ನು ‘ನಮ್ಮಿಷ್ಟದಂತೆ ಬಳಸ್ತೀವಿ, ಏನಿವಾಗ’ ಅನ್ನೋ ಧೋರಣೆಯಿಂದ ಅಹಂಕಾರ ಮೆರೆಯೋದಲ್ಲ” ಎಂದು ಅಭಿಪ್ರಾಯಪಟ್ಟಿದ್ದಾರೆ.

“ಈಗ ಪೋಷಕರ ಗಣ್ಯರ ಒತ್ತಾಯದ ನೆಪ ಹೇಳಿ ಪಠ್ಯ ಮರುಸೇರ್ಪಡೆಯ ಕತೆ ಹೇಳುತ್ತಿರುವ ಸರ್ಕಾರಕ್ಕೆ ಅದೇ ‘ಪೋಷಕರು, ಗಣ್ಯರು’ ಇನ್ನಿಲ್ಲದಂತೆ ಈ ಅಕ್ರಮ, ಅಪ್ರಬುದ್ಧ ದುರುದ್ದೇಶಪೂರಿತ ಪರಿಷ್ಕರಣಾ ಸಮಿತಿಯನ್ನು ವಿರೋಧಿಸಿದ್ದು, ಅದನ್ನು ವಜಾಗೊಳಿಸುವಂತೆ, ಆ ಪರಿಷ್ಕರಣೆಯನ್ನು ಹಿಂತೆಗೆದುಕೊಳ್ಳುವಂತೆ ಒತ್ತಾಯಿಸಿದ್ದು ಇದ್ಯಾವುದೂ ಕಿವಿಗೆ ಬೀಳಲಿಲ್ಲವೇಕೆ?” ಎಂದು ಪ್ರಶ್ನಿಸಿದ್ದಾರೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಆ ಯಾವ ಲೇಖಕ, ಬರಹಗಾರರ ಮನೆಗೆ ಹೋಗಿ ಅವರ ಬರಹ ಪಡೆದಿಲ್ಲ. ಇವರೇ ಪಠ್ಯ ಸಮೀತಿಗೆ ಲಾಭಿ ಮಾಡಿ ಸೇರಿಸಿಕೊಂಡಿದ್ದಾರೆ. ಲಾಭ ಕೀರ್ತಿ ಪಡೆದಿದ್ದಾರೆ. ನಾವು ಇವರುಗಳನ್ನು ಅತ್ಯಂತ ಗೌರವಾನ್ವಿತರೆಂದು ಪ್ರೀತಿ ಮಾಡಿದ್ದೆವು. ಆದರಿಸುತ್ತಿದ್ದೆವು. ಪಠ್ಯ ಪ್ರಕಟವಾಗಿ ಮಕ್ಕಳು ಓದುವ ಕಾಲಘಟ್ಟದಲ್ಲಿ ಮಕ್ಕಳ ಶೈಕ್ಷಣಿಕ ಭವಿಷ್ಯ ಲೆಕ್ಕಿಸದೇ ಸ್ವಾರ್ಥ, ಪ್ರತಿಷ್ಟೆಗೆ ನನ್ನ ಬರಹ ವಾಪಾಸ್ ಪಡೆಯುತ್ತೇವೆ ಎಂದರೆ ಏನ್ರೀ ಅರ್ಥ. ಇವರುಗಳು ಸಾಹಿತಿಗಳೇ!? ಛೇ ಛೇ ಛೇ. ನಮ್ಮ ಮಕ್ಕಳ ಶೈಕ್ಷಣಿಕ ಭವಿಷ್ಯಕ್ಕೆ ಮಾರಕವಾಗಿ ನಿಂತಿರುವವರನ್ನು ಬಹಿಷ್ಕಾರ ಹಾಕಬೇಕು.
    ಜೆ.ಎಮ್ ರಾಜಶೇಖರ ಸಾಹಿತಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...