Homeಕರ್ನಾಟಕಪಠ್ಯಪುಸ್ತಕ ಅಧ್ವಾನ: ಲೇಖಕರ ಅಸಮ್ಮತಿ ಲೆಕ್ಕಿಸದೆ ಮತ್ತೆ ಪಠ್ಯಸೇರ್ಪಡೆ

ಪಠ್ಯಪುಸ್ತಕ ಅಧ್ವಾನ: ಲೇಖಕರ ಅಸಮ್ಮತಿ ಲೆಕ್ಕಿಸದೆ ಮತ್ತೆ ಪಠ್ಯಸೇರ್ಪಡೆ

ಸುತ್ತೋಲೆ ಹೊರಡಿಸಿ, ನಂತರ ವಾಪಸ್ ಪಡೆಯುವ ಸರ್ಕಾರದ ದ್ವಂದ್ವ ನೀತಿ ಮತ್ತೊಮ್ಮೆ ಸಾಬೀತಾಗಿದೆ.

- Advertisement -
- Advertisement -

ರಾಜ್ಯ ಬಿಜೆಪಿ ಸರ್ಕಾರ ತರಾತರಿಯಲ್ಲಿ ಮಾಡಿದ್ದ ಪಠ್ಯಪುಸ್ತಕ ಪರಿಷ್ಕರಣೆಯ ಅಧ್ವಾನ ಬಗೆಹರಿಯುವಂತೆ ಕಾಣುತ್ತಿಲ್ಲ. ನಾಡಗೀತೆಗೆ ಅವಮಾನ ಮಾಡಿದ ಆರೋಪವನ್ನು ಹೊತ್ತಿರುವ ರೋಹಿತ್ ಚಕ್ರತೀರ್ಥ ಎಂಬವರು ಮಾಡಿರುವ ಪಠ್ಯಪುಸ್ತಕ ಪರಿಷ್ಕರಣೆಗೆ ನಾಡಿನ ಹಿರಿಯ ಲೇಖಕರು ವಿರೋಧ ವ್ಯಕ್ತಪಡಿಸಿದ್ದರು. ಸರ್ಕಾರ ಅಂತಿಮವಾಗಿ ಏಳು ಲೇಖಕರ ಪಠ್ಯವನ್ನು ಕೈಬಿಟ್ಟಿತ್ತು. ಆದರೆ ಮತ್ತೆ ಆ ಲೇಖಕರ ಪಠ್ಯಗಳು ಸೇರಿಸುವುದಾಗಿ ಸರ್ಕಾರ ಸುತ್ತೋಲೆ ಹೊರಡಿಸಿದೆ.

ನಾಡಿನ ಸಾಕ್ಷಿಪ್ರಜ್ಞೆಗಳಾದ ದೇವನೂರ ಮಹಾದೇವ ಹಾಗೂ ಡಾ. ಜಿ.ರಾಮಕೃಷ್ಣ ಅವರು ಸೇರಿದಂತೆ ಏಳು ಲೇಖಕರ ಪಠ್ಯವನ್ನು ಕೈಬಿಟ್ಟಿರುವುದಾಗಿ ತಿಳಿಸಿದ್ದ ಸೆ.23ರ ಆದೇಶವನ್ನು ಶಿಕ್ಷಣ ಇಲಾಖೆ ಹಿಂಪಡೆದಿದೆ. ಈ ಮೂಲಕ ಅವರ ಗದ್ಯ ಮತ್ತು ಪದ್ಯಗಳನ್ನು ಬೋಧನೆ, ಕಲಿಕೆ ಮತ್ತು ಮೌಲ್ಯಮಾಪನಕ್ಕೆ ಪರಿಗಣಿಸುವಂತೆ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

10ನೇ ತರಗತಿಯ ಪಠ್ಯದಲ್ಲಿನ (ಪ್ರಥಮ ಭಾಷೆ) ದೇವನೂರ ಮಹಾದೇವ ಅವರ ‘ಎದೆಗೆ ಬಿದ್ದ ಅಕ್ಷರ’ ಗದ್ಯ, ಜಿ.ರಾಮಕೃಷ್ಣ ಅವರ ‘ಭಗತ್ ಸಿಂಗ್’ ಪೂರಕ ಗದ್ಯ, 9ನೇ ತರಗತಿ ಪಠ್ಯದಲ್ಲಿನ (ತೃತೀಯ ಭಾಷೆ) ರೂಪ ಹಾಸನ ಅವರ ‘ಅಮ್ಮನಾಗುವುದೆಂದರೆ’ ಪೂರಕ ಪದ್ಯ, 10ನೇ ತರಗತಿ ಪಠ್ಯದಲ್ಲಿನ (ತೃತೀಯ ಭಾಷೆ) ಈರಪ್ಪ ಎಂ.ಕಂಬಳಿ ಅವರ ‘ಹೀಗೊಂದು ಬಸ್ ಪ್ರಯಾಣ’ ಪೂರಕ ಗದ್ಯ, ಸತೀಶ್ ಕುಲಕರ್ಣಿ ಅವರ ‘ಕಟ್ಟುತ್ತೇವೆ ನಾವು’ ಪದ್ಯ, 10ನೇ ತರಗತಿ ಪಠ್ಯದಲ್ಲಿನ (ದ್ವಿತೀಯ ಭಾಷೆ) ಸುಕನ್ಯ ಮಾರುತಿ ಅವರ ‘ಏಣಿ’ ಪದ್ಯ, 6ನೇ ತರಗತಿ ಪಠ್ಯದಲ್ಲಿನ (ಪ್ರಥಮ ಭಾಷೆ) ದೊಡ್ಡಹುಲ್ಲೂರು ರುಕ್ಕೋಜಿರಾವ್‌ ಅವರ ‘ಡಾ.ರಾಜ್ ಕುಮಾರ್’ ಗದ್ಯಗಳನ್ನು ಪರಿಗಣಿಸದಂತೆ ಶಿಕ್ಷಣ ಇಲಾಖೆಯು ಒಂದು ತಿಂಗಳ ಹಿಂದೆ ಆದೇಶ ಹೊರಡಿಸಿತ್ತು.

ಹಿಂದುತ್ವದ ಅಜೆಂಡಾಗಳನ್ನು ಹೇರಿ, ಪಠ್ಯಪುಸ್ತಕಗಳನ್ನು ಕೇಸರೀಕರಣ ಮಾಡಿದ ರೋಹಿತ್ ಚಕ್ರತೀರ್ಥ ಸಮಿತಿ ವಿರುದ್ಧ ನಾಡಿನಾದ್ಯಂತ ದೊಡ್ಡ ಮಟ್ಟದ ಆಕ್ರೋಶ ವ್ಯಕ್ತವಾಗಿತ್ತು. ಆದೇಶವಿಲ್ಲದೆಯೇ ಪಠ್ಯಪರಿಷ್ಕರಣೆಯಾಗಿದ್ದು ವಿವಾದ ಸೃಷ್ಟಿಸಿತ್ತು. ನಾಡಿನ ಅನೇಕ ಸಾಹಿತಿಗಳು ತಮ್ಮ ಪಠ್ಯವನ್ನು ಕೈಬಿಡುವಂತೆ ಕೋರಿದ್ದರು. ಈ ಸಂಬಂಧ ಪತ್ರ ಸಹ ಬರೆದಿದ್ದರು. ಗದ್ಯ ಮತ್ತು ಪದ್ಯಗಳನ್ನು ಪಠ್ಯದಲ್ಲಿ ಉಳಿಸಿಕೊಳ್ಳಲು ಶಿಕ್ಷಣ ಇಲಾಖೆ ಈ ಲೇಖಕರ ಅನುಮತಿ ಕೋರಿತ್ತು. ಮನವಿಯನ್ನು ಲೇಖಕರು ತಿರಸ್ಕರಿಸಿದ್ದರು. ಈ ಹಿನ್ನೆಲೆ ಸುತ್ತೋಲೆ ಹೊರಡಿಸಲಾಗಿತ್ತು. ಪೋಷಕ, ವಿದ್ಯಾರ್ಥಿಗಳ, ಗಣ್ಯರ ಕೋರಿಕೆಯ ಮೇರೆಗೆ ಪಠ್ಯಗಳನ್ನು ಮುಂದುವರೆಸುತ್ತಿರುವುದಾಗಿ ಇಲಾಖೆ ಸ್ಪಷ್ಟ ಪಡಿಸಿದೆ.

ಸರ್ಕಾರದ ನಿಲುವುಗಳ ಕುರಿತು ಜನರು ಆಕ್ಷೇಪ ವ್ಯಕ್ತಪಡಿಸುತ್ತಿದ್ದಾರೆ. ಈ ಕುರಿತು ಸುದೀರ್ಘವಾದ ಟಿಪ್ಪಣಿಯನ್ನು ಪೋಸ್ಟ್‌ ಮಾಡಿರುವ ಲೇಖಕಿ ಸಂಜ್ಯೋತಿಯವರು, “ಲೇಖಕರ ಅನುಮತಿಯಿಲ್ಲದೆ ಅವರ ಪಠ್ಯವನ್ನು‌ ಸೇರಿಸುವ ಅಧಿಕಾರ ಸರ್ಕಾರಕ್ಕೆ ಇಲ್ಲ. ಅವರ ಅನುಮತಿ ಇಲ್ಲದೆಯೂ ಬೇಕಾದಂತೆ ಹಾಗೆ ಬಳಸಿಕೊಳ್ಳುವುದು ಅಕ್ರಮ (illegal) ಮತ್ತು ಸರ್ಕಾರ ನಡೆಸುತ್ತಿರುವವರ ನಿರ್ಲಜ್ಜ ಅಹಂಕಾರ” ಎಂದಿದ್ದಾರೆ.

ಇದನ್ನೂ ಓದಿರಿ: ಫ್ಯಾಕ್ಟ್‌ಚೆಕ್‌: ಅಪ್ಪು ಬಗ್ಗೆ ಹಗುರವಾಗಿ ಚಕ್ರವರ್ತಿ ಸೂಲಿಬೆಲೆ ಮಾತನಾಡಿದ್ದಾರೆಯೇ?

“ಪೋಷಕರು, ಗಣ್ಯರು ಒತ್ತಾಯಿಸಿದ್ದು ಆ ಪಠ್ಯಗಳನ್ನು ಉಳಿಸಿಕೊಳ್ಳಲು ಅಗತ್ಯವಾದ ಕ್ರಮ ಕೈಗೊಳ್ಳಿ ಎಂದಿದ್ದಾರೆ. ಅದಕ್ಕಾಗಿ ಸರ್ಕಾರ ನಿಜಕ್ಕೂ ಮಾಡಬೇಕಿದ್ದದ್ದು ಆ ಲೇಖಕರು ಯಾವ ಕಾರಣಕ್ಕೆ ಅನುಮತಿ ನಿರಾಕರಿಸಿದ್ದರೋ ಅದನ್ನು ಸರಿಪಡಿಸುವುದೇ ಹೊರತು, ಹೀಗೆ ಸರ್ವಾಧಿಕಾರಿ ಧೋರಣೆಯಿಂದ ಅನುಮತಿ ನಿರಾಕರಿಸಿದವರ ಲೇಖನಗಳನ್ನು ‘ನಮ್ಮಿಷ್ಟದಂತೆ ಬಳಸ್ತೀವಿ, ಏನಿವಾಗ’ ಅನ್ನೋ ಧೋರಣೆಯಿಂದ ಅಹಂಕಾರ ಮೆರೆಯೋದಲ್ಲ” ಎಂದು ಅಭಿಪ್ರಾಯಪಟ್ಟಿದ್ದಾರೆ.

“ಈಗ ಪೋಷಕರ ಗಣ್ಯರ ಒತ್ತಾಯದ ನೆಪ ಹೇಳಿ ಪಠ್ಯ ಮರುಸೇರ್ಪಡೆಯ ಕತೆ ಹೇಳುತ್ತಿರುವ ಸರ್ಕಾರಕ್ಕೆ ಅದೇ ‘ಪೋಷಕರು, ಗಣ್ಯರು’ ಇನ್ನಿಲ್ಲದಂತೆ ಈ ಅಕ್ರಮ, ಅಪ್ರಬುದ್ಧ ದುರುದ್ದೇಶಪೂರಿತ ಪರಿಷ್ಕರಣಾ ಸಮಿತಿಯನ್ನು ವಿರೋಧಿಸಿದ್ದು, ಅದನ್ನು ವಜಾಗೊಳಿಸುವಂತೆ, ಆ ಪರಿಷ್ಕರಣೆಯನ್ನು ಹಿಂತೆಗೆದುಕೊಳ್ಳುವಂತೆ ಒತ್ತಾಯಿಸಿದ್ದು ಇದ್ಯಾವುದೂ ಕಿವಿಗೆ ಬೀಳಲಿಲ್ಲವೇಕೆ?” ಎಂದು ಪ್ರಶ್ನಿಸಿದ್ದಾರೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಆ ಯಾವ ಲೇಖಕ, ಬರಹಗಾರರ ಮನೆಗೆ ಹೋಗಿ ಅವರ ಬರಹ ಪಡೆದಿಲ್ಲ. ಇವರೇ ಪಠ್ಯ ಸಮೀತಿಗೆ ಲಾಭಿ ಮಾಡಿ ಸೇರಿಸಿಕೊಂಡಿದ್ದಾರೆ. ಲಾಭ ಕೀರ್ತಿ ಪಡೆದಿದ್ದಾರೆ. ನಾವು ಇವರುಗಳನ್ನು ಅತ್ಯಂತ ಗೌರವಾನ್ವಿತರೆಂದು ಪ್ರೀತಿ ಮಾಡಿದ್ದೆವು. ಆದರಿಸುತ್ತಿದ್ದೆವು. ಪಠ್ಯ ಪ್ರಕಟವಾಗಿ ಮಕ್ಕಳು ಓದುವ ಕಾಲಘಟ್ಟದಲ್ಲಿ ಮಕ್ಕಳ ಶೈಕ್ಷಣಿಕ ಭವಿಷ್ಯ ಲೆಕ್ಕಿಸದೇ ಸ್ವಾರ್ಥ, ಪ್ರತಿಷ್ಟೆಗೆ ನನ್ನ ಬರಹ ವಾಪಾಸ್ ಪಡೆಯುತ್ತೇವೆ ಎಂದರೆ ಏನ್ರೀ ಅರ್ಥ. ಇವರುಗಳು ಸಾಹಿತಿಗಳೇ!? ಛೇ ಛೇ ಛೇ. ನಮ್ಮ ಮಕ್ಕಳ ಶೈಕ್ಷಣಿಕ ಭವಿಷ್ಯಕ್ಕೆ ಮಾರಕವಾಗಿ ನಿಂತಿರುವವರನ್ನು ಬಹಿಷ್ಕಾರ ಹಾಕಬೇಕು.
    ಜೆ.ಎಮ್ ರಾಜಶೇಖರ ಸಾಹಿತಿ

LEAVE A REPLY

Please enter your comment!
Please enter your name here

- Advertisment -

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...