Homeಕರ್ನಾಟಕಪಠ್ಯಪುಸ್ತಕ ಅಧ್ವಾನ: ಲೇಖಕರ ಅಸಮ್ಮತಿ ಲೆಕ್ಕಿಸದೆ ಮತ್ತೆ ಪಠ್ಯಸೇರ್ಪಡೆ

ಪಠ್ಯಪುಸ್ತಕ ಅಧ್ವಾನ: ಲೇಖಕರ ಅಸಮ್ಮತಿ ಲೆಕ್ಕಿಸದೆ ಮತ್ತೆ ಪಠ್ಯಸೇರ್ಪಡೆ

ಸುತ್ತೋಲೆ ಹೊರಡಿಸಿ, ನಂತರ ವಾಪಸ್ ಪಡೆಯುವ ಸರ್ಕಾರದ ದ್ವಂದ್ವ ನೀತಿ ಮತ್ತೊಮ್ಮೆ ಸಾಬೀತಾಗಿದೆ.

- Advertisement -
- Advertisement -

ರಾಜ್ಯ ಬಿಜೆಪಿ ಸರ್ಕಾರ ತರಾತರಿಯಲ್ಲಿ ಮಾಡಿದ್ದ ಪಠ್ಯಪುಸ್ತಕ ಪರಿಷ್ಕರಣೆಯ ಅಧ್ವಾನ ಬಗೆಹರಿಯುವಂತೆ ಕಾಣುತ್ತಿಲ್ಲ. ನಾಡಗೀತೆಗೆ ಅವಮಾನ ಮಾಡಿದ ಆರೋಪವನ್ನು ಹೊತ್ತಿರುವ ರೋಹಿತ್ ಚಕ್ರತೀರ್ಥ ಎಂಬವರು ಮಾಡಿರುವ ಪಠ್ಯಪುಸ್ತಕ ಪರಿಷ್ಕರಣೆಗೆ ನಾಡಿನ ಹಿರಿಯ ಲೇಖಕರು ವಿರೋಧ ವ್ಯಕ್ತಪಡಿಸಿದ್ದರು. ಸರ್ಕಾರ ಅಂತಿಮವಾಗಿ ಏಳು ಲೇಖಕರ ಪಠ್ಯವನ್ನು ಕೈಬಿಟ್ಟಿತ್ತು. ಆದರೆ ಮತ್ತೆ ಆ ಲೇಖಕರ ಪಠ್ಯಗಳು ಸೇರಿಸುವುದಾಗಿ ಸರ್ಕಾರ ಸುತ್ತೋಲೆ ಹೊರಡಿಸಿದೆ.

ನಾಡಿನ ಸಾಕ್ಷಿಪ್ರಜ್ಞೆಗಳಾದ ದೇವನೂರ ಮಹಾದೇವ ಹಾಗೂ ಡಾ. ಜಿ.ರಾಮಕೃಷ್ಣ ಅವರು ಸೇರಿದಂತೆ ಏಳು ಲೇಖಕರ ಪಠ್ಯವನ್ನು ಕೈಬಿಟ್ಟಿರುವುದಾಗಿ ತಿಳಿಸಿದ್ದ ಸೆ.23ರ ಆದೇಶವನ್ನು ಶಿಕ್ಷಣ ಇಲಾಖೆ ಹಿಂಪಡೆದಿದೆ. ಈ ಮೂಲಕ ಅವರ ಗದ್ಯ ಮತ್ತು ಪದ್ಯಗಳನ್ನು ಬೋಧನೆ, ಕಲಿಕೆ ಮತ್ತು ಮೌಲ್ಯಮಾಪನಕ್ಕೆ ಪರಿಗಣಿಸುವಂತೆ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

10ನೇ ತರಗತಿಯ ಪಠ್ಯದಲ್ಲಿನ (ಪ್ರಥಮ ಭಾಷೆ) ದೇವನೂರ ಮಹಾದೇವ ಅವರ ‘ಎದೆಗೆ ಬಿದ್ದ ಅಕ್ಷರ’ ಗದ್ಯ, ಜಿ.ರಾಮಕೃಷ್ಣ ಅವರ ‘ಭಗತ್ ಸಿಂಗ್’ ಪೂರಕ ಗದ್ಯ, 9ನೇ ತರಗತಿ ಪಠ್ಯದಲ್ಲಿನ (ತೃತೀಯ ಭಾಷೆ) ರೂಪ ಹಾಸನ ಅವರ ‘ಅಮ್ಮನಾಗುವುದೆಂದರೆ’ ಪೂರಕ ಪದ್ಯ, 10ನೇ ತರಗತಿ ಪಠ್ಯದಲ್ಲಿನ (ತೃತೀಯ ಭಾಷೆ) ಈರಪ್ಪ ಎಂ.ಕಂಬಳಿ ಅವರ ‘ಹೀಗೊಂದು ಬಸ್ ಪ್ರಯಾಣ’ ಪೂರಕ ಗದ್ಯ, ಸತೀಶ್ ಕುಲಕರ್ಣಿ ಅವರ ‘ಕಟ್ಟುತ್ತೇವೆ ನಾವು’ ಪದ್ಯ, 10ನೇ ತರಗತಿ ಪಠ್ಯದಲ್ಲಿನ (ದ್ವಿತೀಯ ಭಾಷೆ) ಸುಕನ್ಯ ಮಾರುತಿ ಅವರ ‘ಏಣಿ’ ಪದ್ಯ, 6ನೇ ತರಗತಿ ಪಠ್ಯದಲ್ಲಿನ (ಪ್ರಥಮ ಭಾಷೆ) ದೊಡ್ಡಹುಲ್ಲೂರು ರುಕ್ಕೋಜಿರಾವ್‌ ಅವರ ‘ಡಾ.ರಾಜ್ ಕುಮಾರ್’ ಗದ್ಯಗಳನ್ನು ಪರಿಗಣಿಸದಂತೆ ಶಿಕ್ಷಣ ಇಲಾಖೆಯು ಒಂದು ತಿಂಗಳ ಹಿಂದೆ ಆದೇಶ ಹೊರಡಿಸಿತ್ತು.

ಹಿಂದುತ್ವದ ಅಜೆಂಡಾಗಳನ್ನು ಹೇರಿ, ಪಠ್ಯಪುಸ್ತಕಗಳನ್ನು ಕೇಸರೀಕರಣ ಮಾಡಿದ ರೋಹಿತ್ ಚಕ್ರತೀರ್ಥ ಸಮಿತಿ ವಿರುದ್ಧ ನಾಡಿನಾದ್ಯಂತ ದೊಡ್ಡ ಮಟ್ಟದ ಆಕ್ರೋಶ ವ್ಯಕ್ತವಾಗಿತ್ತು. ಆದೇಶವಿಲ್ಲದೆಯೇ ಪಠ್ಯಪರಿಷ್ಕರಣೆಯಾಗಿದ್ದು ವಿವಾದ ಸೃಷ್ಟಿಸಿತ್ತು. ನಾಡಿನ ಅನೇಕ ಸಾಹಿತಿಗಳು ತಮ್ಮ ಪಠ್ಯವನ್ನು ಕೈಬಿಡುವಂತೆ ಕೋರಿದ್ದರು. ಈ ಸಂಬಂಧ ಪತ್ರ ಸಹ ಬರೆದಿದ್ದರು. ಗದ್ಯ ಮತ್ತು ಪದ್ಯಗಳನ್ನು ಪಠ್ಯದಲ್ಲಿ ಉಳಿಸಿಕೊಳ್ಳಲು ಶಿಕ್ಷಣ ಇಲಾಖೆ ಈ ಲೇಖಕರ ಅನುಮತಿ ಕೋರಿತ್ತು. ಮನವಿಯನ್ನು ಲೇಖಕರು ತಿರಸ್ಕರಿಸಿದ್ದರು. ಈ ಹಿನ್ನೆಲೆ ಸುತ್ತೋಲೆ ಹೊರಡಿಸಲಾಗಿತ್ತು. ಪೋಷಕ, ವಿದ್ಯಾರ್ಥಿಗಳ, ಗಣ್ಯರ ಕೋರಿಕೆಯ ಮೇರೆಗೆ ಪಠ್ಯಗಳನ್ನು ಮುಂದುವರೆಸುತ್ತಿರುವುದಾಗಿ ಇಲಾಖೆ ಸ್ಪಷ್ಟ ಪಡಿಸಿದೆ.

ಸರ್ಕಾರದ ನಿಲುವುಗಳ ಕುರಿತು ಜನರು ಆಕ್ಷೇಪ ವ್ಯಕ್ತಪಡಿಸುತ್ತಿದ್ದಾರೆ. ಈ ಕುರಿತು ಸುದೀರ್ಘವಾದ ಟಿಪ್ಪಣಿಯನ್ನು ಪೋಸ್ಟ್‌ ಮಾಡಿರುವ ಲೇಖಕಿ ಸಂಜ್ಯೋತಿಯವರು, “ಲೇಖಕರ ಅನುಮತಿಯಿಲ್ಲದೆ ಅವರ ಪಠ್ಯವನ್ನು‌ ಸೇರಿಸುವ ಅಧಿಕಾರ ಸರ್ಕಾರಕ್ಕೆ ಇಲ್ಲ. ಅವರ ಅನುಮತಿ ಇಲ್ಲದೆಯೂ ಬೇಕಾದಂತೆ ಹಾಗೆ ಬಳಸಿಕೊಳ್ಳುವುದು ಅಕ್ರಮ (illegal) ಮತ್ತು ಸರ್ಕಾರ ನಡೆಸುತ್ತಿರುವವರ ನಿರ್ಲಜ್ಜ ಅಹಂಕಾರ” ಎಂದಿದ್ದಾರೆ.

ಇದನ್ನೂ ಓದಿರಿ: ಫ್ಯಾಕ್ಟ್‌ಚೆಕ್‌: ಅಪ್ಪು ಬಗ್ಗೆ ಹಗುರವಾಗಿ ಚಕ್ರವರ್ತಿ ಸೂಲಿಬೆಲೆ ಮಾತನಾಡಿದ್ದಾರೆಯೇ?

“ಪೋಷಕರು, ಗಣ್ಯರು ಒತ್ತಾಯಿಸಿದ್ದು ಆ ಪಠ್ಯಗಳನ್ನು ಉಳಿಸಿಕೊಳ್ಳಲು ಅಗತ್ಯವಾದ ಕ್ರಮ ಕೈಗೊಳ್ಳಿ ಎಂದಿದ್ದಾರೆ. ಅದಕ್ಕಾಗಿ ಸರ್ಕಾರ ನಿಜಕ್ಕೂ ಮಾಡಬೇಕಿದ್ದದ್ದು ಆ ಲೇಖಕರು ಯಾವ ಕಾರಣಕ್ಕೆ ಅನುಮತಿ ನಿರಾಕರಿಸಿದ್ದರೋ ಅದನ್ನು ಸರಿಪಡಿಸುವುದೇ ಹೊರತು, ಹೀಗೆ ಸರ್ವಾಧಿಕಾರಿ ಧೋರಣೆಯಿಂದ ಅನುಮತಿ ನಿರಾಕರಿಸಿದವರ ಲೇಖನಗಳನ್ನು ‘ನಮ್ಮಿಷ್ಟದಂತೆ ಬಳಸ್ತೀವಿ, ಏನಿವಾಗ’ ಅನ್ನೋ ಧೋರಣೆಯಿಂದ ಅಹಂಕಾರ ಮೆರೆಯೋದಲ್ಲ” ಎಂದು ಅಭಿಪ್ರಾಯಪಟ್ಟಿದ್ದಾರೆ.

“ಈಗ ಪೋಷಕರ ಗಣ್ಯರ ಒತ್ತಾಯದ ನೆಪ ಹೇಳಿ ಪಠ್ಯ ಮರುಸೇರ್ಪಡೆಯ ಕತೆ ಹೇಳುತ್ತಿರುವ ಸರ್ಕಾರಕ್ಕೆ ಅದೇ ‘ಪೋಷಕರು, ಗಣ್ಯರು’ ಇನ್ನಿಲ್ಲದಂತೆ ಈ ಅಕ್ರಮ, ಅಪ್ರಬುದ್ಧ ದುರುದ್ದೇಶಪೂರಿತ ಪರಿಷ್ಕರಣಾ ಸಮಿತಿಯನ್ನು ವಿರೋಧಿಸಿದ್ದು, ಅದನ್ನು ವಜಾಗೊಳಿಸುವಂತೆ, ಆ ಪರಿಷ್ಕರಣೆಯನ್ನು ಹಿಂತೆಗೆದುಕೊಳ್ಳುವಂತೆ ಒತ್ತಾಯಿಸಿದ್ದು ಇದ್ಯಾವುದೂ ಕಿವಿಗೆ ಬೀಳಲಿಲ್ಲವೇಕೆ?” ಎಂದು ಪ್ರಶ್ನಿಸಿದ್ದಾರೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಆ ಯಾವ ಲೇಖಕ, ಬರಹಗಾರರ ಮನೆಗೆ ಹೋಗಿ ಅವರ ಬರಹ ಪಡೆದಿಲ್ಲ. ಇವರೇ ಪಠ್ಯ ಸಮೀತಿಗೆ ಲಾಭಿ ಮಾಡಿ ಸೇರಿಸಿಕೊಂಡಿದ್ದಾರೆ. ಲಾಭ ಕೀರ್ತಿ ಪಡೆದಿದ್ದಾರೆ. ನಾವು ಇವರುಗಳನ್ನು ಅತ್ಯಂತ ಗೌರವಾನ್ವಿತರೆಂದು ಪ್ರೀತಿ ಮಾಡಿದ್ದೆವು. ಆದರಿಸುತ್ತಿದ್ದೆವು. ಪಠ್ಯ ಪ್ರಕಟವಾಗಿ ಮಕ್ಕಳು ಓದುವ ಕಾಲಘಟ್ಟದಲ್ಲಿ ಮಕ್ಕಳ ಶೈಕ್ಷಣಿಕ ಭವಿಷ್ಯ ಲೆಕ್ಕಿಸದೇ ಸ್ವಾರ್ಥ, ಪ್ರತಿಷ್ಟೆಗೆ ನನ್ನ ಬರಹ ವಾಪಾಸ್ ಪಡೆಯುತ್ತೇವೆ ಎಂದರೆ ಏನ್ರೀ ಅರ್ಥ. ಇವರುಗಳು ಸಾಹಿತಿಗಳೇ!? ಛೇ ಛೇ ಛೇ. ನಮ್ಮ ಮಕ್ಕಳ ಶೈಕ್ಷಣಿಕ ಭವಿಷ್ಯಕ್ಕೆ ಮಾರಕವಾಗಿ ನಿಂತಿರುವವರನ್ನು ಬಹಿಷ್ಕಾರ ಹಾಕಬೇಕು.
    ಜೆ.ಎಮ್ ರಾಜಶೇಖರ ಸಾಹಿತಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...