Homeಕರ್ನಾಟಕಪಠ್ಯಪುಸ್ತಕ ಹಗರಣ ವಿರೋಧಿಸಿ ಜೂನ್‌‌ 18ರ ಶನಿವಾರ ನಡೆಯುವ ಬೃಹತ್‌ ರ್‍ಯಾಲಿಯಲ್ಲಿ ಮಾಜಿ ಪ್ರಧಾನಿ ಹೆಚ್‌.ಡಿ....

ಪಠ್ಯಪುಸ್ತಕ ಹಗರಣ ವಿರೋಧಿಸಿ ಜೂನ್‌‌ 18ರ ಶನಿವಾರ ನಡೆಯುವ ಬೃಹತ್‌ ರ್‍ಯಾಲಿಯಲ್ಲಿ ಮಾಜಿ ಪ್ರಧಾನಿ ಹೆಚ್‌.ಡಿ. ದೇವೇಗೌಡ ಭಾಗಿ

- Advertisement -
- Advertisement -

ರಾಜ್ಯ ಸರ್ಕಾರ ನಡೆಸಿರುವ ‘ಪಠ್ಯಪುಸ್ತಕ ಹಗರಣ’ವನ್ನು ವಿರೋಧಿಸಿ ಜೂನ್‌ 18ರ ಶನಿವಾರದಂದು ಬೆಂಗಳೂರಿನಲ್ಲಿ ನಡೆಯಲಿರುವ ಬೃಹತ್‌ ಪ್ರತಿಭಟನಾ ರ್‍ಯಾಲಿಯಲ್ಲಿ ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ, ಮಾಜಿ ಪ್ರಧಾನಿ ಹೆಚ್‌.ಡಿ ದೇವೇಗೌಡ ಅವರು ಭಾಗವಹಿಸುವುದಾಗಿ ಮಂಗಳವಾರ ಹೇಳಿದ್ದಾರೆ.

ನಾಡಿನ ಮಹನಿಯರಿಗೆ ಅವಮಾನ ಮಾಡಿ ರಾಜ್ಯದ ಜನತೆಯ ಭಾವನೆಗೆ ಧಕ್ಕೆ ತಂದು ಸಮಾಜದಲ್ಲಿ ಶಾಂತಿಭಂಗಪಡಿಸಲು ಯತ್ನಿಸಿರುವ ಚಕ್ರತೀರ್ಥನನ್ನು ತಕ್ಷಣವೇ ಬಂಧಿಸಿ ಕಾನೂನು ಕ್ರಮ ಜರುಗಿಸಬೇಕು ಹಾಗೂ ಅವರ ಬೆನ್ನಿಗೆ ನಿಂತ ಶಿಕ್ಷಣ ಸಚಿವರಾದ ಬಿ.ಸಿ.ನಾಗೇಶ್ ತಕ್ಷಣವೇ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ, ‘ವಿಶ್ವಮಾನವ ಕ್ರಾಂತಿಕಾರಿ ಮಹಾಕವಿ ಕುವೆಂಪು ಹೋರಾಟ ಸಮಿತಿ – ಕರ್ನಾಟಕ’ದ ವತಿಯಿಂದ ಜೂನ್ 18ರ ಶನಿವಾರದಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆಯನ್ನು ಆಯೋಜಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪ್ರತಿಭಟನಾ ಮೆರವಣಿಗೆ ಬೆಳಿಗ್ಗೆ 10 ಗಂಟೆಗೆ ಬೆಂಗಳೂರಿನ ಕೇಂದ್ರ ರೈಲ್ವೇ ನಿಲ್ದಾಣದಿಂದ ಪ್ರಾರಂಭವಾಗಲಿದ್ದು ಫ್ರೀಡಂ ಪಾರ್ಕ್‌‌ನಲ್ಲಿ ಸಮಾವೇಶಗೊಳ್ಳಲಿದೆ. ಬೃಹತ್‌ ಹೋರಾಟಕ್ಕೆ ರಾಜ್ಯದ ಎಲ್ಲಾ ಸಮುದಾಯದ ಮಠಗಳ ಸ್ವಾಮೀಜಿಗಳು, ಹಿಂದುಳಿದ ವರ್ಗಗಳ‌ ಸಂಘ ಸಂಸ್ಥೆಗಳು, ದಲಿತ ಸಮುದಾಯದ ಸಂಘಟನೆಗಳು, ಅಲ್ಪಸಂಖ್ಯಾತ ಸಮುದಾಯ ಸಂಘಟನೆಗಳು, ಕನ್ನಡಪರ ಸಂಘಟನೆಗಳು, ಮಹಿಳಾ ಸಂಘಟನೆಗಳು, ಕಾರ್ಮಿಕ ಸಂಘಟನೆಗಳು, ವಕೀಲರ ಒಕ್ಕೂಟಗಳು, ವಿದ್ಯಾರ್ಥಿ ಸಂಘಟನೆಗಳು ಹಾಗೂ ರೈತ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ ಎಂದು ಹೋರಾಟ ಸಮಿತಿಯ ಸಂಚಾಲಕರು ಹೇಳಿದ್ದಾರೆ.

ಇದನ್ನೂ ಓದಿ: ಪಠ್ಯಪುಸ್ತಕ ಹರಗರಣ: ಮಾಜಿ ಪ್ರಧಾನಿ ಹೆಚ್‌.ಡಿ. ದೇವೇಗೌಡರೂ ಟಾರ್ಗೆಟ್‌?

ಬರಗೂರು ರಾಮಚಂದ್ರಪ್ಪ ಅವರ ಸರ್ವಾಧ್ಯಕ್ಷತೆಯಲ್ಲಿ ರೂಪಿಸಲಾಗಿದ್ದ 6ನೇ ತರಗತಿ ಸಮಾಜ ವಿಜ್ಞಾನ ಭಾಗ-1ರ ಪಠ್ಯಪುಸ್ತಕದಲ್ಲಿ ‘ನಮ್ಮ ಕರ್ನಾಟಕ’ ಪಾಠವನ್ನು ಸೇರಿಸಲಾಗಿತ್ತು. ರಾಜ್ಯದ ಜಿಲ್ಲೆಗಳ ಪರಿಚಯದ ಜೊತೆಗೆ, ಕರ್ನಾಟಕದ ಅಸ್ಮಿತೆಗಳನ್ನು ಪುಟ್ಟ ಮಕ್ಕಳಿಗೆ ಪರಿಚಯಿಸುವ ಪ್ರಯತ್ನ ಮಾಡಲಾಗಿತ್ತು. ಅದರಲ್ಲಿ ನೀಡಲಾಗಿದ್ದ ದೇವೇಗೌಡ ಅವರ ಬಗ್ಗೆ ಇದ್ದ ಮಾಹಿತಿಯನ್ನು ರೋಹಿತ್‌ ಚಕ್ರತೀರ್ಥ ನೇತೃತ್ವದ ಸಮಿತಿಯು ತೆಗೆದುಹಾಕಿದೆ.

ಹಾಸನ ಜಿಲ್ಲೆಯ ಪರಿಚಯ ಪಠ್ಯದಲ್ಲಿದ್ದ ದೇವೇಗೌಡ ಅವರ ಫೋಟೋಗೆ ಖೋಖ್‌

ಹಾಸನ ಜಿಲ್ಲೆಯ ಪರಿಚಯ ಹೀಗೆ ಆರಂಭವಾಗುತ್ತದೆ: “ಹಾಸನಾಂಬ ದೇವಾಲಯದಿಂದ ಇದಕ್ಕೆ ಹಾಸನ ಎಂಬ ಹೆಸರು ಬಂದಿದೆ. ಈ ದೇವಾಲಯದ ಗರ್ಭಗುಡಿ ಬಾಗಿಲನ್ನು ವರ್ಷದಲ್ಲಿ ಒಮ್ಮೆ ಮಾತ್ರ ತೆರೆಯಲಾಗುತ್ತದೆ. ಈ ಜಿಲ್ಲೆಯಲ್ಲಿ ದೇವಾಲಯಗಳು ಹೊಯ್ಸಳ ವಾಸ್ತುಶಿಲ್ಪಕ್ಕೆ ಹೆಸರುವಾಸಿಯಾಗಿವೆ. ಗೊರುರು, ಮೊಸಳೆ, ಮುಂತಾದವು ಪ್ರಸಿದ್ಧ ಗ್ರಾಮಗಳು…”

ಕೊನೆಯಲ್ಲಿ, “ಕರ್ನಾಟದಿಂದ ಪ್ರಧಾನಿಯಾಗಿದ್ದ ಶ್ರೀ ಎಚ್.ಡಿ.ದೇವೇಗೌಡರು ಈ ಜಿಲ್ಲೆಯವರು” ಎಂದು ಮಕ್ಕಳಿಗೆ ಪರಿಚಯ ಮಾಡಿಕೊಡಲಾಗಿದೆ. ಜೊತೆಗೆ ದೇವೇಗೌಡರ ಭಾವಚಿತ್ರವನ್ನು ನೀಡಲಾಗಿತ್ತು. ಆದರೆ ರೋಹಿತ್ ಚಕ್ರತೀರ್ಥ ಸಮಿತಿಯು ಈ ಭಾಗವನ್ನು ಕಿತ್ತು ಹಾಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...