Homeಕರ್ನಾಟಕಪಠ್ಯಪುಸ್ತಕ ಹಗರಣ ವಿರೋಧಿಸಿ ಜೂನ್‌‌ 18ರ ಶನಿವಾರ ನಡೆಯುವ ಬೃಹತ್‌ ರ್‍ಯಾಲಿಯಲ್ಲಿ ಮಾಜಿ ಪ್ರಧಾನಿ ಹೆಚ್‌.ಡಿ....

ಪಠ್ಯಪುಸ್ತಕ ಹಗರಣ ವಿರೋಧಿಸಿ ಜೂನ್‌‌ 18ರ ಶನಿವಾರ ನಡೆಯುವ ಬೃಹತ್‌ ರ್‍ಯಾಲಿಯಲ್ಲಿ ಮಾಜಿ ಪ್ರಧಾನಿ ಹೆಚ್‌.ಡಿ. ದೇವೇಗೌಡ ಭಾಗಿ

- Advertisement -
- Advertisement -

ರಾಜ್ಯ ಸರ್ಕಾರ ನಡೆಸಿರುವ ‘ಪಠ್ಯಪುಸ್ತಕ ಹಗರಣ’ವನ್ನು ವಿರೋಧಿಸಿ ಜೂನ್‌ 18ರ ಶನಿವಾರದಂದು ಬೆಂಗಳೂರಿನಲ್ಲಿ ನಡೆಯಲಿರುವ ಬೃಹತ್‌ ಪ್ರತಿಭಟನಾ ರ್‍ಯಾಲಿಯಲ್ಲಿ ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ, ಮಾಜಿ ಪ್ರಧಾನಿ ಹೆಚ್‌.ಡಿ ದೇವೇಗೌಡ ಅವರು ಭಾಗವಹಿಸುವುದಾಗಿ ಮಂಗಳವಾರ ಹೇಳಿದ್ದಾರೆ.

ನಾಡಿನ ಮಹನಿಯರಿಗೆ ಅವಮಾನ ಮಾಡಿ ರಾಜ್ಯದ ಜನತೆಯ ಭಾವನೆಗೆ ಧಕ್ಕೆ ತಂದು ಸಮಾಜದಲ್ಲಿ ಶಾಂತಿಭಂಗಪಡಿಸಲು ಯತ್ನಿಸಿರುವ ಚಕ್ರತೀರ್ಥನನ್ನು ತಕ್ಷಣವೇ ಬಂಧಿಸಿ ಕಾನೂನು ಕ್ರಮ ಜರುಗಿಸಬೇಕು ಹಾಗೂ ಅವರ ಬೆನ್ನಿಗೆ ನಿಂತ ಶಿಕ್ಷಣ ಸಚಿವರಾದ ಬಿ.ಸಿ.ನಾಗೇಶ್ ತಕ್ಷಣವೇ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ, ‘ವಿಶ್ವಮಾನವ ಕ್ರಾಂತಿಕಾರಿ ಮಹಾಕವಿ ಕುವೆಂಪು ಹೋರಾಟ ಸಮಿತಿ – ಕರ್ನಾಟಕ’ದ ವತಿಯಿಂದ ಜೂನ್ 18ರ ಶನಿವಾರದಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆಯನ್ನು ಆಯೋಜಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪ್ರತಿಭಟನಾ ಮೆರವಣಿಗೆ ಬೆಳಿಗ್ಗೆ 10 ಗಂಟೆಗೆ ಬೆಂಗಳೂರಿನ ಕೇಂದ್ರ ರೈಲ್ವೇ ನಿಲ್ದಾಣದಿಂದ ಪ್ರಾರಂಭವಾಗಲಿದ್ದು ಫ್ರೀಡಂ ಪಾರ್ಕ್‌‌ನಲ್ಲಿ ಸಮಾವೇಶಗೊಳ್ಳಲಿದೆ. ಬೃಹತ್‌ ಹೋರಾಟಕ್ಕೆ ರಾಜ್ಯದ ಎಲ್ಲಾ ಸಮುದಾಯದ ಮಠಗಳ ಸ್ವಾಮೀಜಿಗಳು, ಹಿಂದುಳಿದ ವರ್ಗಗಳ‌ ಸಂಘ ಸಂಸ್ಥೆಗಳು, ದಲಿತ ಸಮುದಾಯದ ಸಂಘಟನೆಗಳು, ಅಲ್ಪಸಂಖ್ಯಾತ ಸಮುದಾಯ ಸಂಘಟನೆಗಳು, ಕನ್ನಡಪರ ಸಂಘಟನೆಗಳು, ಮಹಿಳಾ ಸಂಘಟನೆಗಳು, ಕಾರ್ಮಿಕ ಸಂಘಟನೆಗಳು, ವಕೀಲರ ಒಕ್ಕೂಟಗಳು, ವಿದ್ಯಾರ್ಥಿ ಸಂಘಟನೆಗಳು ಹಾಗೂ ರೈತ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ ಎಂದು ಹೋರಾಟ ಸಮಿತಿಯ ಸಂಚಾಲಕರು ಹೇಳಿದ್ದಾರೆ.

ಇದನ್ನೂ ಓದಿ: ಪಠ್ಯಪುಸ್ತಕ ಹರಗರಣ: ಮಾಜಿ ಪ್ರಧಾನಿ ಹೆಚ್‌.ಡಿ. ದೇವೇಗೌಡರೂ ಟಾರ್ಗೆಟ್‌?

ಬರಗೂರು ರಾಮಚಂದ್ರಪ್ಪ ಅವರ ಸರ್ವಾಧ್ಯಕ್ಷತೆಯಲ್ಲಿ ರೂಪಿಸಲಾಗಿದ್ದ 6ನೇ ತರಗತಿ ಸಮಾಜ ವಿಜ್ಞಾನ ಭಾಗ-1ರ ಪಠ್ಯಪುಸ್ತಕದಲ್ಲಿ ‘ನಮ್ಮ ಕರ್ನಾಟಕ’ ಪಾಠವನ್ನು ಸೇರಿಸಲಾಗಿತ್ತು. ರಾಜ್ಯದ ಜಿಲ್ಲೆಗಳ ಪರಿಚಯದ ಜೊತೆಗೆ, ಕರ್ನಾಟಕದ ಅಸ್ಮಿತೆಗಳನ್ನು ಪುಟ್ಟ ಮಕ್ಕಳಿಗೆ ಪರಿಚಯಿಸುವ ಪ್ರಯತ್ನ ಮಾಡಲಾಗಿತ್ತು. ಅದರಲ್ಲಿ ನೀಡಲಾಗಿದ್ದ ದೇವೇಗೌಡ ಅವರ ಬಗ್ಗೆ ಇದ್ದ ಮಾಹಿತಿಯನ್ನು ರೋಹಿತ್‌ ಚಕ್ರತೀರ್ಥ ನೇತೃತ್ವದ ಸಮಿತಿಯು ತೆಗೆದುಹಾಕಿದೆ.

ಹಾಸನ ಜಿಲ್ಲೆಯ ಪರಿಚಯ ಪಠ್ಯದಲ್ಲಿದ್ದ ದೇವೇಗೌಡ ಅವರ ಫೋಟೋಗೆ ಖೋಖ್‌

ಹಾಸನ ಜಿಲ್ಲೆಯ ಪರಿಚಯ ಹೀಗೆ ಆರಂಭವಾಗುತ್ತದೆ: “ಹಾಸನಾಂಬ ದೇವಾಲಯದಿಂದ ಇದಕ್ಕೆ ಹಾಸನ ಎಂಬ ಹೆಸರು ಬಂದಿದೆ. ಈ ದೇವಾಲಯದ ಗರ್ಭಗುಡಿ ಬಾಗಿಲನ್ನು ವರ್ಷದಲ್ಲಿ ಒಮ್ಮೆ ಮಾತ್ರ ತೆರೆಯಲಾಗುತ್ತದೆ. ಈ ಜಿಲ್ಲೆಯಲ್ಲಿ ದೇವಾಲಯಗಳು ಹೊಯ್ಸಳ ವಾಸ್ತುಶಿಲ್ಪಕ್ಕೆ ಹೆಸರುವಾಸಿಯಾಗಿವೆ. ಗೊರುರು, ಮೊಸಳೆ, ಮುಂತಾದವು ಪ್ರಸಿದ್ಧ ಗ್ರಾಮಗಳು…”

ಕೊನೆಯಲ್ಲಿ, “ಕರ್ನಾಟದಿಂದ ಪ್ರಧಾನಿಯಾಗಿದ್ದ ಶ್ರೀ ಎಚ್.ಡಿ.ದೇವೇಗೌಡರು ಈ ಜಿಲ್ಲೆಯವರು” ಎಂದು ಮಕ್ಕಳಿಗೆ ಪರಿಚಯ ಮಾಡಿಕೊಡಲಾಗಿದೆ. ಜೊತೆಗೆ ದೇವೇಗೌಡರ ಭಾವಚಿತ್ರವನ್ನು ನೀಡಲಾಗಿತ್ತು. ಆದರೆ ರೋಹಿತ್ ಚಕ್ರತೀರ್ಥ ಸಮಿತಿಯು ಈ ಭಾಗವನ್ನು ಕಿತ್ತು ಹಾಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...