Homeರಾಷ್ಟ್ರೀಯಪಠ್ಯಪುಸ್ತಕ ಹಗರಣ: ಖ್ಯಾತ ಇತಿಹಾಸಗಾರ್ತಿ ರೋಮಿಳ ಥಾಪರ್‌‌ ಸೇರಿದಂತೆ ತಜ್ಞರ ಆಕ್ಷೇಪ

ಪಠ್ಯಪುಸ್ತಕ ಹಗರಣ: ಖ್ಯಾತ ಇತಿಹಾಸಗಾರ್ತಿ ರೋಮಿಳ ಥಾಪರ್‌‌ ಸೇರಿದಂತೆ ತಜ್ಞರ ಆಕ್ಷೇಪ

- Advertisement -
- Advertisement -

ಕರ್ನಾಟಕದ ಪಠ್ಯ ಪುಸ್ತಕಗಳನ್ನು ವಿರೂಪ ಮಾಡುತ್ತಿರುವ ಬಿಜೆಪಿ ಸರ್ಕಾರ ವಿರುದ್ಧ ದೇಶದ ಖ್ಯಾತ ಇತಿಹಾಸ ತಜ್ಞರು ಪ್ರತಿಕ್ರಿಯೆ ನೀಡಿದ್ದು, ತೀವ್ರ ಆಕ್ರೋಶ ಮತ್ತು ಆತಂಕ ವ್ಯಕ್ತಪಡಿಸಿದ್ದಾರೆ. ವಿಶೇಷ ಜ್ಞಾನವಿಲ್ಲದ ವ್ಯಕ್ತಿಗಳು ಸಾಮಾಜ ವಿಜ್ಞಾನದಲ್ಲಿನ ಪಠ್ಯಪುಸ್ತಕಗಳಲ್ಲಿ ಯಾಕೆ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದು ಖ್ಯಾತ ಇತಿಹಾಸ ತಜ್ಞೆ ಪ್ರೊಫೆಸರ್‌ ರೋಮಿಳಾ ಥಾಪರ್‌ ಅವರು ಪ್ರಶ್ನಿಸಿದ್ದು, ಇತಿಹಾಸದಂತಹ ಸಮಾಜ ವಿಜ್ಞಾನದ ಪಠ್ಯಪುಸ್ತಕಗಳು ವಿಷಯದ ತಜ್ಞರ ಜವಾಬ್ದಾರಿಯಾಗಿರಬೇಕು ಎಂದು ಅವರು ಹೇಳಿದ್ದಾರೆ.

ಜೆಎ‌ನ್‌ಯು ಪ್ರಾಧ್ಯಾಪಕಿ, NCERT ಪಠ್ಯಪುಸ್ತಕಗಳ ಸಮಿತಿಯ ಅಧ್ಯಕ್ಷರೂ ಆಗಿದ್ದ ರೋಮಿಳಾ ಥಾಪರ್‌ ಅವರು,“ಉತ್ತಮ ಶಿಕ್ಷಣದ ಅಡಿಪಾಯಕ್ಕೆ ಉತ್ತಮ ಪಠ್ಯಪುಸ್ತಕ ಮುಖ್ಯವಾಗಿರುತ್ತದೆ. ಇದು ಎರಡು ಕೆಲಸಗಳನ್ನು ಮಾಡುತ್ತದೆ. ಮೊದಲನೆಯದಾಗಿ, ಇದು ಒಂದು ವಿಷಯದ ಬಗ್ಗೆ ಪಾಠ ಪುಸ್ತಕವು ಮಾಹಿತಿಯನ್ನು ಒದಗಿಸುತ್ತದೆ. ಇತಿಹಾಸ ಪಠ್ಯದಲ್ಲಿ ಏನೆಲ್ಲಾ ಮಾಹಿತಿ ಇರಬೇಕು ಎಂಬುದನ್ನು ತಜ್ಞ ಇತಿಹಾಸಕಾರರು ತೀರ್ಮಾನಿಸಬೇಕೇ ವಿನಃ ರಾಜಕಾರಣಿಗಳು ಮತ್ತು ಅಧಿಕಾರಿಗಳು ಅದನ್ನು ಮಾಡಬಾರದು” ಎಂದು ಅವರು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಪಠ್ಯಪುಸ್ತಕದಲ್ಲಿ ಸಾರ್ವಜನಿಕ ಅಭಿಪ್ರಾಯ ಅಥವಾ ರಾಜಕೀಯ ಸಿದ್ಧಾಂತವನ್ನು ಹರಡುವ ಕುರಿತು ಇರಬಾರದು. ವಿಷಯ ತಜ್ಞರು ಏನು ಹೇಳಲು ಬಯಸುತ್ತಾರೆಯೋ ಅದು ಅದರಲ್ಲಿ ಇರಬೇಕು. ಒಂದು ವಿಷಯಗಳ ಆಯ್ಕೆಯು ಆ ವಿಷಯ ತಜ್ಞರು ಏನು ಮುಖ್ಯವೆಂದು ಭಾವಿಸುತ್ತಾರೆ ಎಂಬುದನ್ನು ಪ್ರತಿಬಿಂಬಿಸಬೇಕು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ನೂತನ ಪಠ್ಯ: ಘಟನೋತ್ತರ ಆದೇಶ ಸಂವಿಧಾನಬದ್ಧ ಅವಕಾಶ- ಬಿಜೆಪಿ ನಾಯಕ ವಿನಯ್‌ ಬಿದರೆ ಸಮರ್ಥನೆ

“ದ್ರಾವಿಡ ಚಳವಳಿಯ ಇತಿಹಾಸವು ಐತಿಹಾಸಿಕವಾಗಿ ದಕ್ಷಿಣ ಭಾರತದ ಇತಿಹಾಸಕ್ಕೆ ಪ್ರಮುಖವಾಗಿದೆ. ಉತ್ತರ ಭಾರತಕ್ಕೆ ಆರ್ಯ ಸಮಾಜದ ಇತಿಹಾಸವಿದೆ. ಉತ್ತರ ಭಾರತದಲ್ಲಿ ಸುಲ್ತಾನರು, ಡೆಕ್ಕನ್ ಮತ್ತು ಮೊಘಲರ ಇತಿಹಾಸವನ್ನು ನಿರ್ಲಕ್ಷಿಸಲು ಸಾಧ್ಯವಿಲ್ಲ. ಯಾಕೆಂದರೆ ಅದು ಭಾರತದ ಉತ್ತಮ ಸಾಂಸ್ಕೃತಿಕ ಬೆಳವಣಿಗೆಯ ಅವಧಿಯಾಗಿದೆ. ವಿಜ್ಞಾನದಲ್ಲಿನ ಪಠ್ಯಪುಸ್ತಕಗಳಲ್ಲಿ ಮಧ್ಯ ಪ್ರವೇಶಿಸಲು ಸಾಧ್ಯವಿಲ್ಲ. ಅದನ್ನು ನಿರ್ಧರಿಸಲು ವಿಜ್ಞಾನಿಗಳಿಗೆ ಬಿಡಲಾಗುತ್ತದೆ. ಹಾಗೆಯೆ, ವಿಶೇಷ ಜ್ಞಾನವಿಲ್ಲದ ವ್ಯಕ್ತಿಗಳು ಸಾಮಾಜ ವಿಜ್ಞಾನದಲ್ಲಿನ ಪಠ್ಯಪುಸ್ತಕಗಳು ಯಾಕೆ ಹಸ್ತಕ್ಷೇಪ ಮಾಡುತ್ತವೆ. ಇತಿಹಾಸದಂತಹ ಸಮಾಜ ವಿಜ್ಞಾನದ ಪಠ್ಯಪುಸ್ತಕಗಳು ಸಹ ವಿಷಯದ ತಜ್ಞರ ಜವಾಬ್ದಾರಿಯಾಗಿರಬೇಕು”

“ಎರಡನೆಯದಾಗಿ, ಇತಿಹಾಸ ಪಠ್ಯಪುಸ್ತಕದ ಉದ್ದೇಶ ವಿದ್ಯಾರ್ಥಿಯು ಹಿಂದಿನ ಮತ್ತು ಇತಿಹಾಸದ ಬಗ್ಗೆ ಯೋಚಿಸುವಂತೆ ಮಾಡುವುದಾಗಿದೆ. ಘಟನೆಗಳು ಹೇಗೆ, ಏನು, ಏಕೆ ಮತ್ತು ಎಲ್ಲಿ ಸಂಭವಿಸಿದವು ಎಂಬುದಕ್ಕೆ ಸಂಬಂಧಿಸಿದ ಪ್ರಶ್ನೆಗಳನ್ನು ಕೇಳುವಂತಾಗಬೇಕು. ಪಠ್ಯಪುಸ್ತಕದಲ್ಲಿ ನೀಡಲಾದ ಉತ್ತರಗಳು ಮತ್ತು ಇತಿಹಾಸದ ಹೇಳಿಕೆಗಳು ಸಾಬೀತಾದ ಪುರಾವೆಗಳನ್ನು ಆಧರಿಸಿರಬೇಕು. ಹೇಳಿಕೆಯು ತಾರ್ಕಿಕ ಮತ್ತು ತರ್ಕಬದ್ಧ ಚಿಂತನೆಯನ್ನು ಆಧರಿಸಿರಬೇಕು. ಇತಿಹಾಸವು ಕಾಲ್ಪನಿಕವಲ್ಲ, ಅದು ಸಾಬೀತಾಗಿರುವ ಸತ್ಯಗಳನ್ನು ಆಧರಿಸಿರಬೇಕು” ಎಂದು ರೋಮಿಳಾ ಥಾಪರ್‌ ಅವರು ಹೇಳಿದ್ದಾರೆ.

ಜೆಎನ್‌ಯು ನಿವೃತ್ತ ಪ್ರಾಧ್ಯಾಪಕ, ಇತಿಹಾಕಾರ ಪ್ರೊ. ಆದಿತ್ಯ ಮುಖರ್ಜಿ ಅವರು,“ಅತ್ಯುನ್ನತ ಮಟ್ಟದ ಶಿಕ್ಷಣ, ಸಾಂಸ್ಕೃತಿಕ ಸಾಧನೆ ಮತ್ತು ಶ್ರೇಷ್ಠವಾದ ಸಂಪ್ರದಾಯವನ್ನು ಹೊಂದಿರುವ ಅತ್ಯಂತ ಪ್ರಗತಿಪರ ರಾಜ್ಯಗಳಲ್ಲಿ ಒಂದಾದ ಕರ್ನಾಟಕದಲ್ಲಿ ನಡೆಯುತ್ತಿರುವ ಘಟನೆಗಳು ಆಘಾತಕಾರಿಯಾಗಿದೆ. ನಮ್ಮ ಜಾತ್ಯತೀತ ಪ್ರಜಾಪ್ರಭುತ್ವವನ್ನು ನಾಶಪಡಿಸುವುದಲ್ಲದೆ, ಅದಕ್ಕೆ ಧಕ್ಕೆ ತರುವ ರೀತಿಯಲ್ಲಿ ಇತಿಹಾಸವನ್ನು ತಿರುಚುವ ಪ್ರಯತ್ನಗಳಿಗೆ ಕರ್ನಾಟಕ ಸಾಕ್ಷಿಯಾಗುತ್ತಿದೆ. ಬ್ರಿಟಿಷರ ಕೋಮುವಾದಿ ಸಹಯೋಗಿಗಳ ಈ ವಿಧ್ವಂಸಕ ಪ್ರಯತ್ನಗಳನ್ನು ವಿರೋಧಿಸುವಲ್ಲಿ ಕರ್ನಾಟಕವು ದೇಶವನ್ನು ಮುನ್ನಡೆಸಲಿ. ಇದರಿಂದ ನಮ್ಮ ಸ್ವಾತಂತ್ರ್ಯ ಹೋರಾಟದ ನಾಯಕರು ಕಲ್ಪಿಸಿದ ರಾಷ್ಟ್ರ, ಅವರು ಕಲ್ಪಿಸಿದ ‘ಭಾರತದ ಕಲ್ಪನೆ’ ಉಳಿದು ಅರಳುತ್ತದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಪಠ್ಯ ಪರಿಷ್ಕರಣೆಗೆ ವಿರೋಧ: ನಾಳೆ ಕುಪ್ಪಳ್ಳಿಯಿಂದ ತೀರ್ಥಹಳ್ಳಿಗೆ ಪಾದಯಾತ್ರೆ – ಕಿಮ್ಮನೆ ರತ್ನಾಕರ್

ಇತಿಹಾಸ ಮತ್ತು ಪುರಾತತ್ವಶಾಸ್ತ್ರಜ್ಞ, ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕ ಪ್ರೊಫೆಸರ್‌‌ ಅಶೋಕ್‌ ಶೆಟ್ಟರ್‌‌, “ಕನ್ನಡ ಪಠ್ಯದ ಕುರಿತೇ ಬಹಳಷ್ಟು ಮಾತುಗಳಾಗುತ್ತಿವೆ. ಸಮಾಜ ವಿಜ್ಞಾನ ಪಠ್ಯಗಳ ಕುರಿತು, ಅದರಲ್ಲೂ ವಿಶೇಷವಾಗಿ 8 ಹಾಗೂ 9ನೇ ತರಗತಿಯ ಪಾಠಗಳಲ್ಲಿ ಇರುವ ದೋಷಗಳು ಮತ್ತು ಸೇರ್ಪಡೆಗಳ ಕುರಿತು ಯಾರಾದರೂ ಗಮನ ಸೆಳೆಯಿರಿ. ಗುರು ನಾನಕ್ ಅವರನ್ನು ಭಕ್ತಿ ಪಂಥದಲ್ಲಿ ಸೇರಿಸಿದ್ದಾರೆ. ಅವರು ಸಿಖ್ ಧರ್ಮದ ಸ್ಥಾಪಕರೆಂಬ ಉಲ್ಲೇಖವೇ ಇಲ್ಲ. ಹರಪ್ಪನ್ ಸಂಸ್ಕೃತಿಯನ್ನು ಸಿಂಧು- ಸರಸ್ವತಿ ಸಂಸ್ಕೃತಿ ಎಂದು ಕರೆದು ಅದರಲ್ಲಿ ವೇದಕಾಲವನ್ನು ತಳಕುಗೊಳಿಸುವ ಕುತ್ಸಿತ ಪ್ರಯತ್ನ ಮಾಡಲಾಗಿದೆ. ವೇದಕಾಲವನ್ನು ತುಂಬ ಹಿಂದಕ್ಕೆ ಕೊಂಡೊಯ್ಯಲಾಗಿದೆ. ಬಸವಣ್ಣನವರ ಕುರಿತ ಪಾಠದಲ್ಲಿ ಅವರ ಆಂದೋಲನದ ಸಾಮಾಜಿಕ ಆಯಾಮಗಳಕುರಿತ ವಿವರಗಳನ್ನೆಲ್ಲ ಕಡಿತಗೊಳಿಸಲಾಗಿದೆ” ಎಂದು ಹೇಳಿದ್ದಾರೆ.

ಖ್ಯಾತ ಇತಿಹಾಸಕಾರರಾದ ಪ್ರೊ ಸುಮಿತ್ ಸರ್ಕಾರ್ ಮತ್ತು ಪ್ರೊ ತಾನಿಕಾ ಸರ್ಕಾರ್ ಅವರು, “ಕರ್ನಾಟಕ ಶಾಲಾ ಮಟ್ಟದ ಸಮಾಜ ವಿಜ್ಞಾನ ಪಠ್ಯಕ್ರಮ ಮತ್ತು ಪಠ್ಯಪುಸ್ತಕಗಳಲ್ಲಿ ಅಳವಡಿಸಲಾಗಿರುವ ಬದಲಾವಣೆಗಳ ಬಗ್ಗೆ ಓದಿ ಗಾಬರಿಯಾಯಿತು. ವಿದ್ವಾಂಸರ ಘನ ಸಂಶೋಧನೆಯನ್ನು ಆಧರಿಸಿದ ಸತ್ಯಗಳಿಗೆ ಯಾವುದೇ ಸಂಬಂಧವಿಲ್ಲದೆ, ಪುರಾಣಗಳು ಮತ್ತು ಐತಿಹಾಸಿಕ ಪುರಾವೆಗಳ ನಡುವಿನ ಗಡಿಯನ್ನು ಸವೆತ ಮಾಡಲಾಗಿದೆ” ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಪಠ್ಯ ಪರಿಷ್ಕರಣೆಯಲ್ಲಿ ಮಾಜಿ ಪ್ರಧಾನಿ ದೇವೇಗೌಡರೂ ಟಾರ್ಗೆಟ್‌?

“ನಮ್ಮ ದೇಶದಲ್ಲಿ ಸಾಮಾಜಿಕ ನ್ಯಾಯಕ್ಕಾಗಿ ಹೋರಾಡಿದ ಜನರ ಅಗಾಧ ಕೊಡುಗೆಗಳನ್ನು ಅಳಿಸಿಹಾಕಲಾಗಿದೆ. ಹಲವಾರು ಅಪ್ರತಿಮ ಕ್ರಾಂತಿಕಾರಿಗಳ ಆದರ್ಶಗಳನ್ನು ಪ್ರಸ್ತುತ ಆಡಳಿತ ಶಕ್ತಿಗಳ ಹಿಂದಿನ ನಾಯಕರ ಸಂದೇಶಗಳೊಂದಿಗೆ ಬದಲಾಯಿಸಲಾಗಿದೆ. ಶಾಲಾ ಮಕ್ಕಳಿಗೆ ಹಿಂದಿನದು ಇನ್ನು ಮುಂದೆ ತಿಳಿಯಲು ಆಗುವುದಿಲ್ಲ. ಅವರ ಸಾಮಾಜಿಕ, ಸಾಂಸ್ಕೃತಿಕ ಮತ್ತು ನೈತಿಕ ಮೌಲ್ಯಗಳಿಗೆ ಬಲವಾದ ಬಲಪಂಥೀಯ ತಿರುವು ನೀಡಲಾಗುತ್ತದೆ. ಇದು ಕರ್ನಾಟಕದ ಯುವ ಪೀಳಿಗೆಗೆ ಮಾತ್ರವಲ್ಲದೆ ಇಡೀ ದೇಶಕ್ಕೆ ಸಮಾಜ ವಿಜ್ಞಾನ ಅಧ್ಯಯನದ ಮಾದರಿಗೆ ದೊಡ್ಡ ಹೊಡೆತ ನೀಡಲಿದೆ” ಎಂದು ಇತಿಹಾಸಕಾರರಿಬ್ಬರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...