Homeಕರ್ನಾಟಕಪಠ್ಯಪುಸ್ತಕ ಹಗರಣ - ‘ಬರಗೂರು ಸಮಿತಿ ಹಿಂದೆ ತುಕ್ಡೆ ಗ್ಯಾಂಗ್‌’: ಸಚಿವ ಬಿಸಿ ನಾಗೇಶ್‌ ವಿವಾದಾತ್ಮಕ...

ಪಠ್ಯಪುಸ್ತಕ ಹಗರಣ – ‘ಬರಗೂರು ಸಮಿತಿ ಹಿಂದೆ ತುಕ್ಡೆ ಗ್ಯಾಂಗ್‌’: ಸಚಿವ ಬಿಸಿ ನಾಗೇಶ್‌ ವಿವಾದಾತ್ಮಕ ಹೇಳಿಕೆ

- Advertisement -
- Advertisement -

ಬರಗೂರು ರಾಮಚಂದ್ರಪ್ಪ ನೇತೃತ್ವದ ಸಮಿತಿಯ ಹಿಂದೆ ಜೆಎನ್‌ಯು ತುಕ್ಡೆ ಗ್ಯಾಂಗ್‌ ಇದ್ದು, ಕರ್ನಾಟಕ ಪಠ್ಯ ಪುಸ್ತಕದ ವಿಚಾರಕ್ಕೆ ಜೆಎನ್‌ಯು ಪ್ರೊಫೆಸರ್‌ ಪತ್ರ ಬರೆದಿರುವುದೇ ಇದಕ್ಕೆ ಸಾಕ್ಷಿ ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್‌ ಮಂಗಳವಾರದಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಭಾರತವನ್ನು ಒಡೆಯಲು ತುಕ್ಡೆ ಗ್ಯಾಂಗ್‌ ಯತ್ನಿಸಿತು. ಆದರೆ, ಸಾಧ್ಯವಾಗಲಿಲ್ಲ. ಪಾಕಿಸ್ತಾನದ ಧ್ವಜ ಹಾರಿಸುವ ಒಂದಷ್ಟು ಜನರು ಈ ತಂಡದಲ್ಲಿದ್ದಾರೆ. ಆದ್ದರಿಂದಲೇ, ಜೆಎನ್‌ಯು ಪ್ರೊಫೆಸರ್ ಪತ್ರ ಬರೆದಿದ್ದಾರೆ. ಕರ್ನಾಟಕದ ಪಠ್ಯಪುಸ್ತಕದ ವಿಚಾರಕ್ಕೆ ಅವರೇಕೆ ಪತ್ರ ಬರೆಯುತ್ತಾರೆ” ಎಂದು ಸಚಿವ ನಾಗೇಶ್‌ ಪ್ರಶ್ನಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಬಸವಣ್ಣನವರ ಬಗ್ಗೆ ಏನು ಅವಹೇಳನವಾಗಿದೆ ಎಂದು ಹೇಳುತ್ತಿದ್ದಾರೆ. ಬರಗೂರು ಸಮಿತಿಯಿದ್ದಾಗ ಬಸವಣ್ಣ ಅವರ ಕುರಿತು ಇದ್ದ ವಿಷಯವೇ ಈಗಲೂ ಇದೆ. ಒಂದೇ ಒಂದು ವಾಕ್ಯ ಬದಲಾಯಿಸಿಲ್ಲ. ಪಠ್ಯದಲ್ಲಿ ಉಪನಯನದ ಬಗ್ಗೆ ಉಲ್ಲೇಖಿಸಲಾಗಿದೆ. ಬಸವಣ್ಣ ಜನಿವಾರ ಕಿತ್ತಾಕಿ ಹೋದರು ಎಂದಿದೆ. ಇದರಲ್ಲಿ ಅವಮಾನ ಆಗುವಂತದ್ದು ಏನಿದೆ?” ಎಂದು ಸಚಿವರು ಕೇಳಿದ್ದಾರೆ.

ಇದನ್ನೂ ಓದಿ: ಪಠ್ಯಪುಸ್ತಕ ಹಗರಣ ವಿರೋಧಿಸಿ ಜೂನ್‌‌ 18ರ ಶನಿವಾರ ನಡೆಯುವ ಬೃಹತ್‌ ರ್‍ಯಾಲಿಯಲ್ಲಿ ಮಾಜಿ ಪ್ರಧಾನಿ ಹೆಚ್‌.ಡಿ. ದೇವೇಗೌಡ ಭಾಗಿ

“ಪಠ್ಯಪುಸ್ತಕ ಪರಿಷ್ಕರಣೆ ವಿಚಾರದಲ್ಲಿ ಕಪೋಲಕಲ್ಪಿತ ಆರೋಪಗಳನ್ನು ಬರಗೂರು ರಾಮಚಂದ್ರಪ್ಪ ಮಾಡಿದ್ದಾರೆ. ಬರಗೂರು ಮತ್ತು ಇತರರು ಆರೋಪ ಮಾಡಿರುವಂತೆ ಯಾವುದೇ ಪಠ್ಯವನ್ನು ಪುಸ್ತಕದಿಂದ ತೆಗೆದಿಲ್ಲ. ನಾರಾಯಣ ಗುರು, ಟಿಪ್ಪು, ಭಗತ್ ಸಿಂಗ್ ಸೇರಿದಂತೆ ಎಲ್ಲರ ಪಾಠಗಳು ಪುಸ್ತಕದಲ್ಲಿವೆ. ಕೆಲವು ತಪ್ಪುಗಳನ್ನಷ್ಟೇ ಪರಿಷ್ಕರಣೆ ಮಾಡಲಾಗಿದೆ” ಎಂದು ಬಿ.ಸಿ ನಾಗೇಶ್‌ ಪ್ರತಿಪಾದಿಸಿದ್ದಾರೆ.

ಸುಳ್ಳು ಹೇಳಿದ ಸಚಿವ ಬಿಸಿ ನಾಗೇಶ್‌!

ಆದರೆ ಸಚಿವ ನಾಗೇಶ್‌ ಹೇಳಿರುವುದಕ್ಕೂ ವಾಸ್ತವಕ್ಕೂ ವ್ಯತ್ಯಾಸವಿದೆ. ರೋಹಿತ್‌ ಚಕ್ರತೀರ್ಥ ನೇತೃತ್ವದ ಮರು ಪರಿಷ್ಕರಣಾ ಸಮಿತಿಯು ಪಠ್ಯಪುಸ್ತಕದಲ್ಲಿ ಸಾಕಷ್ಟು ತಿದ್ದುಪಡಿಗಳನ್ನು ಮಾಡಿದೆ. ಮರು ಪರಿಷ್ಕೃತ ಪಠ್ಯ ಪುಸ್ತಕದ ‘ಪಿಡಿಎಫ್‌’ ಪ್ರತಿಗಳು ಲಭ್ಯವಾಗಿದ್ದು, ಅದರಲ್ಲಿ, ಭಗತ್‌ಸಿಂಗ್, ನಾರಾಯಣಗುರು ವಿಷಯಗಳನ್ನು ಕೈಬಿಡಲಾಗಿದೆ.

ಬಸವಣ್ಣನವರನ್ನು ಹಿಂದು ಪ್ರತಿಪಾದಕನೆಂಬಂತೆ ತಿರುಚಿ ಬರೆಯಲಾಗಿದೆ. ಅಂಬೇಡ್ಕರ್‌ರ ಪಾಠದಲ್ಲಿ ‘ಸಂವಿಧಾನ ಶಿಲ್ಪಿ’ ಎಂಬ ಪದವನ್ನು ತೆಗೆಯಲಾಗಿದೆ. ಅಲ್ಲಮ ಪ್ರಭು, ಸಾವಿತ್ರಿ ಬಾ ಪುಲೆ ಅವರ ಕುರಿತು ಏಕವಚನದಲ್ಲಿ ‘ಅವನು-ಅವಳು’ ಎಂದು ಬರೆಯಲಾಗಿದೆ. ಹಿಂದುತ್ವವಾದಿ, ಕೋಮು ದ್ವೇಷವುಳ್ಳ ಹೆಡ್ಗೆವಾರ್‌ ಅವರ ಭಾಷಣವನ್ನು ಸೇರಿಸಲಾಗಿದೆ. ಹಿಂದುಯೇತರ ದೇವರನ್ನು ‘ಗಾಡ್‌ನು’ ಎಂದು ಉಲ್ಲೇಖಿಸಲಾಗಿದೆ. ಹಿಂದುಯೇತರ ಧರ್ಮಗಳ ಬಗ್ಗೆ ಬರೆಯುವಾಗ ಕನ್ನಡದಲ್ಲಿ ‘ಧರ್ಮ’ ಎಂದು ಉಲ್ಲೇಖಿಸದೇ ‘ರಿಲಿಜಿಯನ್’ ಎಂದು ಬರೆಯಲಾಗಿದೆ.

ಇದನ್ನೂ ಓದಿ: ಪಠ್ಯಪುಸ್ತಕ ಹಗರಣ: ಮಾಜಿ ಪ್ರಧಾನಿ ಹೆಚ್‌.ಡಿ. ದೇವೇಗೌಡರೂ ಟಾರ್ಗೆಟ್‌?

ಈ ಎಲ್ಲ ಕಾರಣಗಳಿಂದಾಗಿ ಮರು ಪರಿಷ್ಕೃತ ಪಠ್ಯಗಳು ಮಕ್ಕಳಲ್ಲಿ ದ್ವೇಷವನ್ನು ಬಿತ್ತಲಿದ್ದು, ತಿರುಚಿದ ಇತಿಹಾಸವನ್ನು ಬೋಧಿಸುತ್ತದೆ ಎಂದು ರಾಜ್ಯದ್ಯಂತ ಆಕ್ರೋಶ ವ್ಯಕ್ತವಾಗುತ್ತಿದೆ. ಚಕ್ರತೀರ್ಥ ಸಮಿತಿ ಸಿದ್ದಪಡಿಸಿದ ಪಠ್ಯಕ್ರಮಗಳನ್ನು ಕೈಬಿಡಬೇಕು ಎಂದು ಜೂನ್ 18ರ ಶನಿವಾರ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆಯೂ ಆಯೋಜಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...