Homeಕರ್ನಾಟಕಪಠ್ಯಪುಸ್ತಕ ಹಗರಣ - ‘ಬರಗೂರು ಸಮಿತಿ ಹಿಂದೆ ತುಕ್ಡೆ ಗ್ಯಾಂಗ್‌’: ಸಚಿವ ಬಿಸಿ ನಾಗೇಶ್‌ ವಿವಾದಾತ್ಮಕ...

ಪಠ್ಯಪುಸ್ತಕ ಹಗರಣ – ‘ಬರಗೂರು ಸಮಿತಿ ಹಿಂದೆ ತುಕ್ಡೆ ಗ್ಯಾಂಗ್‌’: ಸಚಿವ ಬಿಸಿ ನಾಗೇಶ್‌ ವಿವಾದಾತ್ಮಕ ಹೇಳಿಕೆ

- Advertisement -
- Advertisement -

ಬರಗೂರು ರಾಮಚಂದ್ರಪ್ಪ ನೇತೃತ್ವದ ಸಮಿತಿಯ ಹಿಂದೆ ಜೆಎನ್‌ಯು ತುಕ್ಡೆ ಗ್ಯಾಂಗ್‌ ಇದ್ದು, ಕರ್ನಾಟಕ ಪಠ್ಯ ಪುಸ್ತಕದ ವಿಚಾರಕ್ಕೆ ಜೆಎನ್‌ಯು ಪ್ರೊಫೆಸರ್‌ ಪತ್ರ ಬರೆದಿರುವುದೇ ಇದಕ್ಕೆ ಸಾಕ್ಷಿ ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್‌ ಮಂಗಳವಾರದಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಭಾರತವನ್ನು ಒಡೆಯಲು ತುಕ್ಡೆ ಗ್ಯಾಂಗ್‌ ಯತ್ನಿಸಿತು. ಆದರೆ, ಸಾಧ್ಯವಾಗಲಿಲ್ಲ. ಪಾಕಿಸ್ತಾನದ ಧ್ವಜ ಹಾರಿಸುವ ಒಂದಷ್ಟು ಜನರು ಈ ತಂಡದಲ್ಲಿದ್ದಾರೆ. ಆದ್ದರಿಂದಲೇ, ಜೆಎನ್‌ಯು ಪ್ರೊಫೆಸರ್ ಪತ್ರ ಬರೆದಿದ್ದಾರೆ. ಕರ್ನಾಟಕದ ಪಠ್ಯಪುಸ್ತಕದ ವಿಚಾರಕ್ಕೆ ಅವರೇಕೆ ಪತ್ರ ಬರೆಯುತ್ತಾರೆ” ಎಂದು ಸಚಿವ ನಾಗೇಶ್‌ ಪ್ರಶ್ನಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಬಸವಣ್ಣನವರ ಬಗ್ಗೆ ಏನು ಅವಹೇಳನವಾಗಿದೆ ಎಂದು ಹೇಳುತ್ತಿದ್ದಾರೆ. ಬರಗೂರು ಸಮಿತಿಯಿದ್ದಾಗ ಬಸವಣ್ಣ ಅವರ ಕುರಿತು ಇದ್ದ ವಿಷಯವೇ ಈಗಲೂ ಇದೆ. ಒಂದೇ ಒಂದು ವಾಕ್ಯ ಬದಲಾಯಿಸಿಲ್ಲ. ಪಠ್ಯದಲ್ಲಿ ಉಪನಯನದ ಬಗ್ಗೆ ಉಲ್ಲೇಖಿಸಲಾಗಿದೆ. ಬಸವಣ್ಣ ಜನಿವಾರ ಕಿತ್ತಾಕಿ ಹೋದರು ಎಂದಿದೆ. ಇದರಲ್ಲಿ ಅವಮಾನ ಆಗುವಂತದ್ದು ಏನಿದೆ?” ಎಂದು ಸಚಿವರು ಕೇಳಿದ್ದಾರೆ.

ಇದನ್ನೂ ಓದಿ: ಪಠ್ಯಪುಸ್ತಕ ಹಗರಣ ವಿರೋಧಿಸಿ ಜೂನ್‌‌ 18ರ ಶನಿವಾರ ನಡೆಯುವ ಬೃಹತ್‌ ರ್‍ಯಾಲಿಯಲ್ಲಿ ಮಾಜಿ ಪ್ರಧಾನಿ ಹೆಚ್‌.ಡಿ. ದೇವೇಗೌಡ ಭಾಗಿ

“ಪಠ್ಯಪುಸ್ತಕ ಪರಿಷ್ಕರಣೆ ವಿಚಾರದಲ್ಲಿ ಕಪೋಲಕಲ್ಪಿತ ಆರೋಪಗಳನ್ನು ಬರಗೂರು ರಾಮಚಂದ್ರಪ್ಪ ಮಾಡಿದ್ದಾರೆ. ಬರಗೂರು ಮತ್ತು ಇತರರು ಆರೋಪ ಮಾಡಿರುವಂತೆ ಯಾವುದೇ ಪಠ್ಯವನ್ನು ಪುಸ್ತಕದಿಂದ ತೆಗೆದಿಲ್ಲ. ನಾರಾಯಣ ಗುರು, ಟಿಪ್ಪು, ಭಗತ್ ಸಿಂಗ್ ಸೇರಿದಂತೆ ಎಲ್ಲರ ಪಾಠಗಳು ಪುಸ್ತಕದಲ್ಲಿವೆ. ಕೆಲವು ತಪ್ಪುಗಳನ್ನಷ್ಟೇ ಪರಿಷ್ಕರಣೆ ಮಾಡಲಾಗಿದೆ” ಎಂದು ಬಿ.ಸಿ ನಾಗೇಶ್‌ ಪ್ರತಿಪಾದಿಸಿದ್ದಾರೆ.

ಸುಳ್ಳು ಹೇಳಿದ ಸಚಿವ ಬಿಸಿ ನಾಗೇಶ್‌!

ಆದರೆ ಸಚಿವ ನಾಗೇಶ್‌ ಹೇಳಿರುವುದಕ್ಕೂ ವಾಸ್ತವಕ್ಕೂ ವ್ಯತ್ಯಾಸವಿದೆ. ರೋಹಿತ್‌ ಚಕ್ರತೀರ್ಥ ನೇತೃತ್ವದ ಮರು ಪರಿಷ್ಕರಣಾ ಸಮಿತಿಯು ಪಠ್ಯಪುಸ್ತಕದಲ್ಲಿ ಸಾಕಷ್ಟು ತಿದ್ದುಪಡಿಗಳನ್ನು ಮಾಡಿದೆ. ಮರು ಪರಿಷ್ಕೃತ ಪಠ್ಯ ಪುಸ್ತಕದ ‘ಪಿಡಿಎಫ್‌’ ಪ್ರತಿಗಳು ಲಭ್ಯವಾಗಿದ್ದು, ಅದರಲ್ಲಿ, ಭಗತ್‌ಸಿಂಗ್, ನಾರಾಯಣಗುರು ವಿಷಯಗಳನ್ನು ಕೈಬಿಡಲಾಗಿದೆ.

ಬಸವಣ್ಣನವರನ್ನು ಹಿಂದು ಪ್ರತಿಪಾದಕನೆಂಬಂತೆ ತಿರುಚಿ ಬರೆಯಲಾಗಿದೆ. ಅಂಬೇಡ್ಕರ್‌ರ ಪಾಠದಲ್ಲಿ ‘ಸಂವಿಧಾನ ಶಿಲ್ಪಿ’ ಎಂಬ ಪದವನ್ನು ತೆಗೆಯಲಾಗಿದೆ. ಅಲ್ಲಮ ಪ್ರಭು, ಸಾವಿತ್ರಿ ಬಾ ಪುಲೆ ಅವರ ಕುರಿತು ಏಕವಚನದಲ್ಲಿ ‘ಅವನು-ಅವಳು’ ಎಂದು ಬರೆಯಲಾಗಿದೆ. ಹಿಂದುತ್ವವಾದಿ, ಕೋಮು ದ್ವೇಷವುಳ್ಳ ಹೆಡ್ಗೆವಾರ್‌ ಅವರ ಭಾಷಣವನ್ನು ಸೇರಿಸಲಾಗಿದೆ. ಹಿಂದುಯೇತರ ದೇವರನ್ನು ‘ಗಾಡ್‌ನು’ ಎಂದು ಉಲ್ಲೇಖಿಸಲಾಗಿದೆ. ಹಿಂದುಯೇತರ ಧರ್ಮಗಳ ಬಗ್ಗೆ ಬರೆಯುವಾಗ ಕನ್ನಡದಲ್ಲಿ ‘ಧರ್ಮ’ ಎಂದು ಉಲ್ಲೇಖಿಸದೇ ‘ರಿಲಿಜಿಯನ್’ ಎಂದು ಬರೆಯಲಾಗಿದೆ.

ಇದನ್ನೂ ಓದಿ: ಪಠ್ಯಪುಸ್ತಕ ಹಗರಣ: ಮಾಜಿ ಪ್ರಧಾನಿ ಹೆಚ್‌.ಡಿ. ದೇವೇಗೌಡರೂ ಟಾರ್ಗೆಟ್‌?

ಈ ಎಲ್ಲ ಕಾರಣಗಳಿಂದಾಗಿ ಮರು ಪರಿಷ್ಕೃತ ಪಠ್ಯಗಳು ಮಕ್ಕಳಲ್ಲಿ ದ್ವೇಷವನ್ನು ಬಿತ್ತಲಿದ್ದು, ತಿರುಚಿದ ಇತಿಹಾಸವನ್ನು ಬೋಧಿಸುತ್ತದೆ ಎಂದು ರಾಜ್ಯದ್ಯಂತ ಆಕ್ರೋಶ ವ್ಯಕ್ತವಾಗುತ್ತಿದೆ. ಚಕ್ರತೀರ್ಥ ಸಮಿತಿ ಸಿದ್ದಪಡಿಸಿದ ಪಠ್ಯಕ್ರಮಗಳನ್ನು ಕೈಬಿಡಬೇಕು ಎಂದು ಜೂನ್ 18ರ ಶನಿವಾರ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆಯೂ ಆಯೋಜಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...