Homeಕರ್ನಾಟಕಪಠ್ಯಪುಸ್ತಕ ಹಗರಣ - ‘ಬರಗೂರು ಸಮಿತಿ ಹಿಂದೆ ತುಕ್ಡೆ ಗ್ಯಾಂಗ್‌’: ಸಚಿವ ಬಿಸಿ ನಾಗೇಶ್‌ ವಿವಾದಾತ್ಮಕ...

ಪಠ್ಯಪುಸ್ತಕ ಹಗರಣ – ‘ಬರಗೂರು ಸಮಿತಿ ಹಿಂದೆ ತುಕ್ಡೆ ಗ್ಯಾಂಗ್‌’: ಸಚಿವ ಬಿಸಿ ನಾಗೇಶ್‌ ವಿವಾದಾತ್ಮಕ ಹೇಳಿಕೆ

- Advertisement -
- Advertisement -

ಬರಗೂರು ರಾಮಚಂದ್ರಪ್ಪ ನೇತೃತ್ವದ ಸಮಿತಿಯ ಹಿಂದೆ ಜೆಎನ್‌ಯು ತುಕ್ಡೆ ಗ್ಯಾಂಗ್‌ ಇದ್ದು, ಕರ್ನಾಟಕ ಪಠ್ಯ ಪುಸ್ತಕದ ವಿಚಾರಕ್ಕೆ ಜೆಎನ್‌ಯು ಪ್ರೊಫೆಸರ್‌ ಪತ್ರ ಬರೆದಿರುವುದೇ ಇದಕ್ಕೆ ಸಾಕ್ಷಿ ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್‌ ಮಂಗಳವಾರದಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಭಾರತವನ್ನು ಒಡೆಯಲು ತುಕ್ಡೆ ಗ್ಯಾಂಗ್‌ ಯತ್ನಿಸಿತು. ಆದರೆ, ಸಾಧ್ಯವಾಗಲಿಲ್ಲ. ಪಾಕಿಸ್ತಾನದ ಧ್ವಜ ಹಾರಿಸುವ ಒಂದಷ್ಟು ಜನರು ಈ ತಂಡದಲ್ಲಿದ್ದಾರೆ. ಆದ್ದರಿಂದಲೇ, ಜೆಎನ್‌ಯು ಪ್ರೊಫೆಸರ್ ಪತ್ರ ಬರೆದಿದ್ದಾರೆ. ಕರ್ನಾಟಕದ ಪಠ್ಯಪುಸ್ತಕದ ವಿಚಾರಕ್ಕೆ ಅವರೇಕೆ ಪತ್ರ ಬರೆಯುತ್ತಾರೆ” ಎಂದು ಸಚಿವ ನಾಗೇಶ್‌ ಪ್ರಶ್ನಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಬಸವಣ್ಣನವರ ಬಗ್ಗೆ ಏನು ಅವಹೇಳನವಾಗಿದೆ ಎಂದು ಹೇಳುತ್ತಿದ್ದಾರೆ. ಬರಗೂರು ಸಮಿತಿಯಿದ್ದಾಗ ಬಸವಣ್ಣ ಅವರ ಕುರಿತು ಇದ್ದ ವಿಷಯವೇ ಈಗಲೂ ಇದೆ. ಒಂದೇ ಒಂದು ವಾಕ್ಯ ಬದಲಾಯಿಸಿಲ್ಲ. ಪಠ್ಯದಲ್ಲಿ ಉಪನಯನದ ಬಗ್ಗೆ ಉಲ್ಲೇಖಿಸಲಾಗಿದೆ. ಬಸವಣ್ಣ ಜನಿವಾರ ಕಿತ್ತಾಕಿ ಹೋದರು ಎಂದಿದೆ. ಇದರಲ್ಲಿ ಅವಮಾನ ಆಗುವಂತದ್ದು ಏನಿದೆ?” ಎಂದು ಸಚಿವರು ಕೇಳಿದ್ದಾರೆ.

ಇದನ್ನೂ ಓದಿ: ಪಠ್ಯಪುಸ್ತಕ ಹಗರಣ ವಿರೋಧಿಸಿ ಜೂನ್‌‌ 18ರ ಶನಿವಾರ ನಡೆಯುವ ಬೃಹತ್‌ ರ್‍ಯಾಲಿಯಲ್ಲಿ ಮಾಜಿ ಪ್ರಧಾನಿ ಹೆಚ್‌.ಡಿ. ದೇವೇಗೌಡ ಭಾಗಿ

“ಪಠ್ಯಪುಸ್ತಕ ಪರಿಷ್ಕರಣೆ ವಿಚಾರದಲ್ಲಿ ಕಪೋಲಕಲ್ಪಿತ ಆರೋಪಗಳನ್ನು ಬರಗೂರು ರಾಮಚಂದ್ರಪ್ಪ ಮಾಡಿದ್ದಾರೆ. ಬರಗೂರು ಮತ್ತು ಇತರರು ಆರೋಪ ಮಾಡಿರುವಂತೆ ಯಾವುದೇ ಪಠ್ಯವನ್ನು ಪುಸ್ತಕದಿಂದ ತೆಗೆದಿಲ್ಲ. ನಾರಾಯಣ ಗುರು, ಟಿಪ್ಪು, ಭಗತ್ ಸಿಂಗ್ ಸೇರಿದಂತೆ ಎಲ್ಲರ ಪಾಠಗಳು ಪುಸ್ತಕದಲ್ಲಿವೆ. ಕೆಲವು ತಪ್ಪುಗಳನ್ನಷ್ಟೇ ಪರಿಷ್ಕರಣೆ ಮಾಡಲಾಗಿದೆ” ಎಂದು ಬಿ.ಸಿ ನಾಗೇಶ್‌ ಪ್ರತಿಪಾದಿಸಿದ್ದಾರೆ.

ಸುಳ್ಳು ಹೇಳಿದ ಸಚಿವ ಬಿಸಿ ನಾಗೇಶ್‌!

ಆದರೆ ಸಚಿವ ನಾಗೇಶ್‌ ಹೇಳಿರುವುದಕ್ಕೂ ವಾಸ್ತವಕ್ಕೂ ವ್ಯತ್ಯಾಸವಿದೆ. ರೋಹಿತ್‌ ಚಕ್ರತೀರ್ಥ ನೇತೃತ್ವದ ಮರು ಪರಿಷ್ಕರಣಾ ಸಮಿತಿಯು ಪಠ್ಯಪುಸ್ತಕದಲ್ಲಿ ಸಾಕಷ್ಟು ತಿದ್ದುಪಡಿಗಳನ್ನು ಮಾಡಿದೆ. ಮರು ಪರಿಷ್ಕೃತ ಪಠ್ಯ ಪುಸ್ತಕದ ‘ಪಿಡಿಎಫ್‌’ ಪ್ರತಿಗಳು ಲಭ್ಯವಾಗಿದ್ದು, ಅದರಲ್ಲಿ, ಭಗತ್‌ಸಿಂಗ್, ನಾರಾಯಣಗುರು ವಿಷಯಗಳನ್ನು ಕೈಬಿಡಲಾಗಿದೆ.

ಬಸವಣ್ಣನವರನ್ನು ಹಿಂದು ಪ್ರತಿಪಾದಕನೆಂಬಂತೆ ತಿರುಚಿ ಬರೆಯಲಾಗಿದೆ. ಅಂಬೇಡ್ಕರ್‌ರ ಪಾಠದಲ್ಲಿ ‘ಸಂವಿಧಾನ ಶಿಲ್ಪಿ’ ಎಂಬ ಪದವನ್ನು ತೆಗೆಯಲಾಗಿದೆ. ಅಲ್ಲಮ ಪ್ರಭು, ಸಾವಿತ್ರಿ ಬಾ ಪುಲೆ ಅವರ ಕುರಿತು ಏಕವಚನದಲ್ಲಿ ‘ಅವನು-ಅವಳು’ ಎಂದು ಬರೆಯಲಾಗಿದೆ. ಹಿಂದುತ್ವವಾದಿ, ಕೋಮು ದ್ವೇಷವುಳ್ಳ ಹೆಡ್ಗೆವಾರ್‌ ಅವರ ಭಾಷಣವನ್ನು ಸೇರಿಸಲಾಗಿದೆ. ಹಿಂದುಯೇತರ ದೇವರನ್ನು ‘ಗಾಡ್‌ನು’ ಎಂದು ಉಲ್ಲೇಖಿಸಲಾಗಿದೆ. ಹಿಂದುಯೇತರ ಧರ್ಮಗಳ ಬಗ್ಗೆ ಬರೆಯುವಾಗ ಕನ್ನಡದಲ್ಲಿ ‘ಧರ್ಮ’ ಎಂದು ಉಲ್ಲೇಖಿಸದೇ ‘ರಿಲಿಜಿಯನ್’ ಎಂದು ಬರೆಯಲಾಗಿದೆ.

ಇದನ್ನೂ ಓದಿ: ಪಠ್ಯಪುಸ್ತಕ ಹಗರಣ: ಮಾಜಿ ಪ್ರಧಾನಿ ಹೆಚ್‌.ಡಿ. ದೇವೇಗೌಡರೂ ಟಾರ್ಗೆಟ್‌?

ಈ ಎಲ್ಲ ಕಾರಣಗಳಿಂದಾಗಿ ಮರು ಪರಿಷ್ಕೃತ ಪಠ್ಯಗಳು ಮಕ್ಕಳಲ್ಲಿ ದ್ವೇಷವನ್ನು ಬಿತ್ತಲಿದ್ದು, ತಿರುಚಿದ ಇತಿಹಾಸವನ್ನು ಬೋಧಿಸುತ್ತದೆ ಎಂದು ರಾಜ್ಯದ್ಯಂತ ಆಕ್ರೋಶ ವ್ಯಕ್ತವಾಗುತ್ತಿದೆ. ಚಕ್ರತೀರ್ಥ ಸಮಿತಿ ಸಿದ್ದಪಡಿಸಿದ ಪಠ್ಯಕ್ರಮಗಳನ್ನು ಕೈಬಿಡಬೇಕು ಎಂದು ಜೂನ್ 18ರ ಶನಿವಾರ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆಯೂ ಆಯೋಜಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...