Homeಕರ್ನಾಟಕಪಠ್ಯಪುಸ್ತಕ ಹಗರಣ - ‘ಬರಗೂರು ಸಮಿತಿ ಹಿಂದೆ ತುಕ್ಡೆ ಗ್ಯಾಂಗ್‌’: ಸಚಿವ ಬಿಸಿ ನಾಗೇಶ್‌ ವಿವಾದಾತ್ಮಕ...

ಪಠ್ಯಪುಸ್ತಕ ಹಗರಣ – ‘ಬರಗೂರು ಸಮಿತಿ ಹಿಂದೆ ತುಕ್ಡೆ ಗ್ಯಾಂಗ್‌’: ಸಚಿವ ಬಿಸಿ ನಾಗೇಶ್‌ ವಿವಾದಾತ್ಮಕ ಹೇಳಿಕೆ

- Advertisement -
- Advertisement -

ಬರಗೂರು ರಾಮಚಂದ್ರಪ್ಪ ನೇತೃತ್ವದ ಸಮಿತಿಯ ಹಿಂದೆ ಜೆಎನ್‌ಯು ತುಕ್ಡೆ ಗ್ಯಾಂಗ್‌ ಇದ್ದು, ಕರ್ನಾಟಕ ಪಠ್ಯ ಪುಸ್ತಕದ ವಿಚಾರಕ್ಕೆ ಜೆಎನ್‌ಯು ಪ್ರೊಫೆಸರ್‌ ಪತ್ರ ಬರೆದಿರುವುದೇ ಇದಕ್ಕೆ ಸಾಕ್ಷಿ ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್‌ ಮಂಗಳವಾರದಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಭಾರತವನ್ನು ಒಡೆಯಲು ತುಕ್ಡೆ ಗ್ಯಾಂಗ್‌ ಯತ್ನಿಸಿತು. ಆದರೆ, ಸಾಧ್ಯವಾಗಲಿಲ್ಲ. ಪಾಕಿಸ್ತಾನದ ಧ್ವಜ ಹಾರಿಸುವ ಒಂದಷ್ಟು ಜನರು ಈ ತಂಡದಲ್ಲಿದ್ದಾರೆ. ಆದ್ದರಿಂದಲೇ, ಜೆಎನ್‌ಯು ಪ್ರೊಫೆಸರ್ ಪತ್ರ ಬರೆದಿದ್ದಾರೆ. ಕರ್ನಾಟಕದ ಪಠ್ಯಪುಸ್ತಕದ ವಿಚಾರಕ್ಕೆ ಅವರೇಕೆ ಪತ್ರ ಬರೆಯುತ್ತಾರೆ” ಎಂದು ಸಚಿವ ನಾಗೇಶ್‌ ಪ್ರಶ್ನಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಬಸವಣ್ಣನವರ ಬಗ್ಗೆ ಏನು ಅವಹೇಳನವಾಗಿದೆ ಎಂದು ಹೇಳುತ್ತಿದ್ದಾರೆ. ಬರಗೂರು ಸಮಿತಿಯಿದ್ದಾಗ ಬಸವಣ್ಣ ಅವರ ಕುರಿತು ಇದ್ದ ವಿಷಯವೇ ಈಗಲೂ ಇದೆ. ಒಂದೇ ಒಂದು ವಾಕ್ಯ ಬದಲಾಯಿಸಿಲ್ಲ. ಪಠ್ಯದಲ್ಲಿ ಉಪನಯನದ ಬಗ್ಗೆ ಉಲ್ಲೇಖಿಸಲಾಗಿದೆ. ಬಸವಣ್ಣ ಜನಿವಾರ ಕಿತ್ತಾಕಿ ಹೋದರು ಎಂದಿದೆ. ಇದರಲ್ಲಿ ಅವಮಾನ ಆಗುವಂತದ್ದು ಏನಿದೆ?” ಎಂದು ಸಚಿವರು ಕೇಳಿದ್ದಾರೆ.

ಇದನ್ನೂ ಓದಿ: ಪಠ್ಯಪುಸ್ತಕ ಹಗರಣ ವಿರೋಧಿಸಿ ಜೂನ್‌‌ 18ರ ಶನಿವಾರ ನಡೆಯುವ ಬೃಹತ್‌ ರ್‍ಯಾಲಿಯಲ್ಲಿ ಮಾಜಿ ಪ್ರಧಾನಿ ಹೆಚ್‌.ಡಿ. ದೇವೇಗೌಡ ಭಾಗಿ

“ಪಠ್ಯಪುಸ್ತಕ ಪರಿಷ್ಕರಣೆ ವಿಚಾರದಲ್ಲಿ ಕಪೋಲಕಲ್ಪಿತ ಆರೋಪಗಳನ್ನು ಬರಗೂರು ರಾಮಚಂದ್ರಪ್ಪ ಮಾಡಿದ್ದಾರೆ. ಬರಗೂರು ಮತ್ತು ಇತರರು ಆರೋಪ ಮಾಡಿರುವಂತೆ ಯಾವುದೇ ಪಠ್ಯವನ್ನು ಪುಸ್ತಕದಿಂದ ತೆಗೆದಿಲ್ಲ. ನಾರಾಯಣ ಗುರು, ಟಿಪ್ಪು, ಭಗತ್ ಸಿಂಗ್ ಸೇರಿದಂತೆ ಎಲ್ಲರ ಪಾಠಗಳು ಪುಸ್ತಕದಲ್ಲಿವೆ. ಕೆಲವು ತಪ್ಪುಗಳನ್ನಷ್ಟೇ ಪರಿಷ್ಕರಣೆ ಮಾಡಲಾಗಿದೆ” ಎಂದು ಬಿ.ಸಿ ನಾಗೇಶ್‌ ಪ್ರತಿಪಾದಿಸಿದ್ದಾರೆ.

ಸುಳ್ಳು ಹೇಳಿದ ಸಚಿವ ಬಿಸಿ ನಾಗೇಶ್‌!

ಆದರೆ ಸಚಿವ ನಾಗೇಶ್‌ ಹೇಳಿರುವುದಕ್ಕೂ ವಾಸ್ತವಕ್ಕೂ ವ್ಯತ್ಯಾಸವಿದೆ. ರೋಹಿತ್‌ ಚಕ್ರತೀರ್ಥ ನೇತೃತ್ವದ ಮರು ಪರಿಷ್ಕರಣಾ ಸಮಿತಿಯು ಪಠ್ಯಪುಸ್ತಕದಲ್ಲಿ ಸಾಕಷ್ಟು ತಿದ್ದುಪಡಿಗಳನ್ನು ಮಾಡಿದೆ. ಮರು ಪರಿಷ್ಕೃತ ಪಠ್ಯ ಪುಸ್ತಕದ ‘ಪಿಡಿಎಫ್‌’ ಪ್ರತಿಗಳು ಲಭ್ಯವಾಗಿದ್ದು, ಅದರಲ್ಲಿ, ಭಗತ್‌ಸಿಂಗ್, ನಾರಾಯಣಗುರು ವಿಷಯಗಳನ್ನು ಕೈಬಿಡಲಾಗಿದೆ.

ಬಸವಣ್ಣನವರನ್ನು ಹಿಂದು ಪ್ರತಿಪಾದಕನೆಂಬಂತೆ ತಿರುಚಿ ಬರೆಯಲಾಗಿದೆ. ಅಂಬೇಡ್ಕರ್‌ರ ಪಾಠದಲ್ಲಿ ‘ಸಂವಿಧಾನ ಶಿಲ್ಪಿ’ ಎಂಬ ಪದವನ್ನು ತೆಗೆಯಲಾಗಿದೆ. ಅಲ್ಲಮ ಪ್ರಭು, ಸಾವಿತ್ರಿ ಬಾ ಪುಲೆ ಅವರ ಕುರಿತು ಏಕವಚನದಲ್ಲಿ ‘ಅವನು-ಅವಳು’ ಎಂದು ಬರೆಯಲಾಗಿದೆ. ಹಿಂದುತ್ವವಾದಿ, ಕೋಮು ದ್ವೇಷವುಳ್ಳ ಹೆಡ್ಗೆವಾರ್‌ ಅವರ ಭಾಷಣವನ್ನು ಸೇರಿಸಲಾಗಿದೆ. ಹಿಂದುಯೇತರ ದೇವರನ್ನು ‘ಗಾಡ್‌ನು’ ಎಂದು ಉಲ್ಲೇಖಿಸಲಾಗಿದೆ. ಹಿಂದುಯೇತರ ಧರ್ಮಗಳ ಬಗ್ಗೆ ಬರೆಯುವಾಗ ಕನ್ನಡದಲ್ಲಿ ‘ಧರ್ಮ’ ಎಂದು ಉಲ್ಲೇಖಿಸದೇ ‘ರಿಲಿಜಿಯನ್’ ಎಂದು ಬರೆಯಲಾಗಿದೆ.

ಇದನ್ನೂ ಓದಿ: ಪಠ್ಯಪುಸ್ತಕ ಹಗರಣ: ಮಾಜಿ ಪ್ರಧಾನಿ ಹೆಚ್‌.ಡಿ. ದೇವೇಗೌಡರೂ ಟಾರ್ಗೆಟ್‌?

ಈ ಎಲ್ಲ ಕಾರಣಗಳಿಂದಾಗಿ ಮರು ಪರಿಷ್ಕೃತ ಪಠ್ಯಗಳು ಮಕ್ಕಳಲ್ಲಿ ದ್ವೇಷವನ್ನು ಬಿತ್ತಲಿದ್ದು, ತಿರುಚಿದ ಇತಿಹಾಸವನ್ನು ಬೋಧಿಸುತ್ತದೆ ಎಂದು ರಾಜ್ಯದ್ಯಂತ ಆಕ್ರೋಶ ವ್ಯಕ್ತವಾಗುತ್ತಿದೆ. ಚಕ್ರತೀರ್ಥ ಸಮಿತಿ ಸಿದ್ದಪಡಿಸಿದ ಪಠ್ಯಕ್ರಮಗಳನ್ನು ಕೈಬಿಡಬೇಕು ಎಂದು ಜೂನ್ 18ರ ಶನಿವಾರ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆಯೂ ಆಯೋಜಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...