Homeಕರ್ನಾಟಕಪಠ್ಯಪುಸ್ತಕ ಹಗರಣ - ‘ಬರಗೂರು ಸಮಿತಿ ಹಿಂದೆ ತುಕ್ಡೆ ಗ್ಯಾಂಗ್‌’: ಸಚಿವ ಬಿಸಿ ನಾಗೇಶ್‌ ವಿವಾದಾತ್ಮಕ...

ಪಠ್ಯಪುಸ್ತಕ ಹಗರಣ – ‘ಬರಗೂರು ಸಮಿತಿ ಹಿಂದೆ ತುಕ್ಡೆ ಗ್ಯಾಂಗ್‌’: ಸಚಿವ ಬಿಸಿ ನಾಗೇಶ್‌ ವಿವಾದಾತ್ಮಕ ಹೇಳಿಕೆ

- Advertisement -
- Advertisement -

ಬರಗೂರು ರಾಮಚಂದ್ರಪ್ಪ ನೇತೃತ್ವದ ಸಮಿತಿಯ ಹಿಂದೆ ಜೆಎನ್‌ಯು ತುಕ್ಡೆ ಗ್ಯಾಂಗ್‌ ಇದ್ದು, ಕರ್ನಾಟಕ ಪಠ್ಯ ಪುಸ್ತಕದ ವಿಚಾರಕ್ಕೆ ಜೆಎನ್‌ಯು ಪ್ರೊಫೆಸರ್‌ ಪತ್ರ ಬರೆದಿರುವುದೇ ಇದಕ್ಕೆ ಸಾಕ್ಷಿ ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್‌ ಮಂಗಳವಾರದಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಭಾರತವನ್ನು ಒಡೆಯಲು ತುಕ್ಡೆ ಗ್ಯಾಂಗ್‌ ಯತ್ನಿಸಿತು. ಆದರೆ, ಸಾಧ್ಯವಾಗಲಿಲ್ಲ. ಪಾಕಿಸ್ತಾನದ ಧ್ವಜ ಹಾರಿಸುವ ಒಂದಷ್ಟು ಜನರು ಈ ತಂಡದಲ್ಲಿದ್ದಾರೆ. ಆದ್ದರಿಂದಲೇ, ಜೆಎನ್‌ಯು ಪ್ರೊಫೆಸರ್ ಪತ್ರ ಬರೆದಿದ್ದಾರೆ. ಕರ್ನಾಟಕದ ಪಠ್ಯಪುಸ್ತಕದ ವಿಚಾರಕ್ಕೆ ಅವರೇಕೆ ಪತ್ರ ಬರೆಯುತ್ತಾರೆ” ಎಂದು ಸಚಿವ ನಾಗೇಶ್‌ ಪ್ರಶ್ನಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಬಸವಣ್ಣನವರ ಬಗ್ಗೆ ಏನು ಅವಹೇಳನವಾಗಿದೆ ಎಂದು ಹೇಳುತ್ತಿದ್ದಾರೆ. ಬರಗೂರು ಸಮಿತಿಯಿದ್ದಾಗ ಬಸವಣ್ಣ ಅವರ ಕುರಿತು ಇದ್ದ ವಿಷಯವೇ ಈಗಲೂ ಇದೆ. ಒಂದೇ ಒಂದು ವಾಕ್ಯ ಬದಲಾಯಿಸಿಲ್ಲ. ಪಠ್ಯದಲ್ಲಿ ಉಪನಯನದ ಬಗ್ಗೆ ಉಲ್ಲೇಖಿಸಲಾಗಿದೆ. ಬಸವಣ್ಣ ಜನಿವಾರ ಕಿತ್ತಾಕಿ ಹೋದರು ಎಂದಿದೆ. ಇದರಲ್ಲಿ ಅವಮಾನ ಆಗುವಂತದ್ದು ಏನಿದೆ?” ಎಂದು ಸಚಿವರು ಕೇಳಿದ್ದಾರೆ.

ಇದನ್ನೂ ಓದಿ: ಪಠ್ಯಪುಸ್ತಕ ಹಗರಣ ವಿರೋಧಿಸಿ ಜೂನ್‌‌ 18ರ ಶನಿವಾರ ನಡೆಯುವ ಬೃಹತ್‌ ರ್‍ಯಾಲಿಯಲ್ಲಿ ಮಾಜಿ ಪ್ರಧಾನಿ ಹೆಚ್‌.ಡಿ. ದೇವೇಗೌಡ ಭಾಗಿ

“ಪಠ್ಯಪುಸ್ತಕ ಪರಿಷ್ಕರಣೆ ವಿಚಾರದಲ್ಲಿ ಕಪೋಲಕಲ್ಪಿತ ಆರೋಪಗಳನ್ನು ಬರಗೂರು ರಾಮಚಂದ್ರಪ್ಪ ಮಾಡಿದ್ದಾರೆ. ಬರಗೂರು ಮತ್ತು ಇತರರು ಆರೋಪ ಮಾಡಿರುವಂತೆ ಯಾವುದೇ ಪಠ್ಯವನ್ನು ಪುಸ್ತಕದಿಂದ ತೆಗೆದಿಲ್ಲ. ನಾರಾಯಣ ಗುರು, ಟಿಪ್ಪು, ಭಗತ್ ಸಿಂಗ್ ಸೇರಿದಂತೆ ಎಲ್ಲರ ಪಾಠಗಳು ಪುಸ್ತಕದಲ್ಲಿವೆ. ಕೆಲವು ತಪ್ಪುಗಳನ್ನಷ್ಟೇ ಪರಿಷ್ಕರಣೆ ಮಾಡಲಾಗಿದೆ” ಎಂದು ಬಿ.ಸಿ ನಾಗೇಶ್‌ ಪ್ರತಿಪಾದಿಸಿದ್ದಾರೆ.

ಸುಳ್ಳು ಹೇಳಿದ ಸಚಿವ ಬಿಸಿ ನಾಗೇಶ್‌!

ಆದರೆ ಸಚಿವ ನಾಗೇಶ್‌ ಹೇಳಿರುವುದಕ್ಕೂ ವಾಸ್ತವಕ್ಕೂ ವ್ಯತ್ಯಾಸವಿದೆ. ರೋಹಿತ್‌ ಚಕ್ರತೀರ್ಥ ನೇತೃತ್ವದ ಮರು ಪರಿಷ್ಕರಣಾ ಸಮಿತಿಯು ಪಠ್ಯಪುಸ್ತಕದಲ್ಲಿ ಸಾಕಷ್ಟು ತಿದ್ದುಪಡಿಗಳನ್ನು ಮಾಡಿದೆ. ಮರು ಪರಿಷ್ಕೃತ ಪಠ್ಯ ಪುಸ್ತಕದ ‘ಪಿಡಿಎಫ್‌’ ಪ್ರತಿಗಳು ಲಭ್ಯವಾಗಿದ್ದು, ಅದರಲ್ಲಿ, ಭಗತ್‌ಸಿಂಗ್, ನಾರಾಯಣಗುರು ವಿಷಯಗಳನ್ನು ಕೈಬಿಡಲಾಗಿದೆ.

ಬಸವಣ್ಣನವರನ್ನು ಹಿಂದು ಪ್ರತಿಪಾದಕನೆಂಬಂತೆ ತಿರುಚಿ ಬರೆಯಲಾಗಿದೆ. ಅಂಬೇಡ್ಕರ್‌ರ ಪಾಠದಲ್ಲಿ ‘ಸಂವಿಧಾನ ಶಿಲ್ಪಿ’ ಎಂಬ ಪದವನ್ನು ತೆಗೆಯಲಾಗಿದೆ. ಅಲ್ಲಮ ಪ್ರಭು, ಸಾವಿತ್ರಿ ಬಾ ಪುಲೆ ಅವರ ಕುರಿತು ಏಕವಚನದಲ್ಲಿ ‘ಅವನು-ಅವಳು’ ಎಂದು ಬರೆಯಲಾಗಿದೆ. ಹಿಂದುತ್ವವಾದಿ, ಕೋಮು ದ್ವೇಷವುಳ್ಳ ಹೆಡ್ಗೆವಾರ್‌ ಅವರ ಭಾಷಣವನ್ನು ಸೇರಿಸಲಾಗಿದೆ. ಹಿಂದುಯೇತರ ದೇವರನ್ನು ‘ಗಾಡ್‌ನು’ ಎಂದು ಉಲ್ಲೇಖಿಸಲಾಗಿದೆ. ಹಿಂದುಯೇತರ ಧರ್ಮಗಳ ಬಗ್ಗೆ ಬರೆಯುವಾಗ ಕನ್ನಡದಲ್ಲಿ ‘ಧರ್ಮ’ ಎಂದು ಉಲ್ಲೇಖಿಸದೇ ‘ರಿಲಿಜಿಯನ್’ ಎಂದು ಬರೆಯಲಾಗಿದೆ.

ಇದನ್ನೂ ಓದಿ: ಪಠ್ಯಪುಸ್ತಕ ಹಗರಣ: ಮಾಜಿ ಪ್ರಧಾನಿ ಹೆಚ್‌.ಡಿ. ದೇವೇಗೌಡರೂ ಟಾರ್ಗೆಟ್‌?

ಈ ಎಲ್ಲ ಕಾರಣಗಳಿಂದಾಗಿ ಮರು ಪರಿಷ್ಕೃತ ಪಠ್ಯಗಳು ಮಕ್ಕಳಲ್ಲಿ ದ್ವೇಷವನ್ನು ಬಿತ್ತಲಿದ್ದು, ತಿರುಚಿದ ಇತಿಹಾಸವನ್ನು ಬೋಧಿಸುತ್ತದೆ ಎಂದು ರಾಜ್ಯದ್ಯಂತ ಆಕ್ರೋಶ ವ್ಯಕ್ತವಾಗುತ್ತಿದೆ. ಚಕ್ರತೀರ್ಥ ಸಮಿತಿ ಸಿದ್ದಪಡಿಸಿದ ಪಠ್ಯಕ್ರಮಗಳನ್ನು ಕೈಬಿಡಬೇಕು ಎಂದು ಜೂನ್ 18ರ ಶನಿವಾರ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆಯೂ ಆಯೋಜಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....