Homeಕರ್ನಾಟಕಪಠ್ಯಪುಸ್ತಕ ಹಗರಣ ಅಪ್‌ಡೇಟ್‌ | ಬಿಜೆಪಿಗರೆ ನೀವು ತುಕ್ಡೆ ಗ್ಯಾಂಗಿನ ನಾಯಕರು: ಸಿದ್ದರಾಮಯ್ಯ ಆಕ್ರೊಶ

ಪಠ್ಯಪುಸ್ತಕ ಹಗರಣ ಅಪ್‌ಡೇಟ್‌ | ಬಿಜೆಪಿಗರೆ ನೀವು ತುಕ್ಡೆ ಗ್ಯಾಂಗಿನ ನಾಯಕರು: ಸಿದ್ದರಾಮಯ್ಯ ಆಕ್ರೊಶ

- Advertisement -
- Advertisement -

ಖಾಕಿ ಚಡ್ಡಿ ತೊಟ್ಟ ಬಿಜೆಪಿಯು ತಮ್ಮ ಎದುರಾಳಿಗಳನ್ನು ನಿಂದಿಸಲು ತುಕ್ಡೆಗ್ಯಾಂಗ್ ಎಂಬ ಪದವನ್ನು ಬಳಸುತ್ತದೆ. ನಿಜವಾದ ಟೂಲ್ ಕಿಟ್ ರಾಜಕಾರಣ ಅಥವಾ ಪ್ಯಾಕೇಜ್ ರಾಜಕಾರಣ ಮಾಡುತ್ತಿರುವ ಬಿಜೆಪಿಗೆ ಸಂಕಷ್ಟ ಬಂದಾಗಲೆಲ್ಲ ‘ತುಕ್ಡೆ ಗ್ಯಾಂಗು’ ಎಂಬಂತಹ ಮಾಯಾವಿ ಪದಗಳನ್ನು ಪ್ಯಾಕೇಜಿನಂತೆ ಒಬ್ಬರಾದ ಮೇಲೆ ಒಬ್ಬರು ಬಳಸುತ್ತಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಬುಧವಾರ ತೀರ್ಥಹಳ್ಳಿಯಲ್ಲಿ ಹೇಳಿದ್ದಾರೆ.

“ಪಠ್ಯ ಪುಸ್ತಕ ಪರಿಷ್ಕರಣೆ ಪ್ರಕರಣದಿಂದ ಕಂಗೆಟ್ಟಿರುವ ಸರ್ಕಾರ ಮತ್ತು ಅದರ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅವರು ತಾವು ಸಚಿವರೆಂಬ ಜವಾಬ್ಧಾರಿಯನ್ನು ಮರೆತು ನಾಡೋಜ ಬರಗೂರು ರಾಮಚಂದ್ರಪ್ಪ ಮುಂತಾದ ದಮನಿತ ವರ್ಗಗಳ ಧ್ವನಿಗಳನ್ನು ಅವಮಾನಿಸಬೇಕೆಂದೆ ‘ತುಕ್ಡೆ ಗ್ಯಾಂಗ್’ ನವರು ಎಂದು ಅವಮಾನಿಸಿದ್ದಾರೆ” ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ರೋಹಿತ್ ಚಕ್ರತೀರ್ಥ ಎಂಬ ರೋಗಿಷ್ಠ ಮನಸ್ಥಿತಿಯ ಪಠ್ಯ ಪುಸ್ತಕ ಪರಿಷ್ಕರಣೆ ಸಮಿತಿಯು, ಉಸಿರಾಡುತ್ತಿರುವ ಜೀವಿಗಳಲ್ಲಿ ಬ್ರಾಹ್ಮಣರು ಶ್ರೇಷ್ಠರು, ಬ್ರಾಹ್ಮಣರಲ್ಲಿ ಮಾಧ್ವರು ಶ್ರೇಷ್ಠರು ಎಂಬ ನಿಲುವಿನಲ್ಲಿ ಪಾಠಗಳನ್ನು ಮಕ್ಕಳಿಗೆ ಕಲಿಸಲು ಶಿಫಾರಸ್ಸು ಮಾಡಿದೆ. ಸರ್ಕಾರ ಇಂಥ ಕೆಟ್ಟ ಮನುಷ್ಯ ವಿರೋಧಿ ನಿಲುವನ್ನು ಮಕ್ಕಳಿಗೆ ಕಲಿಸಲು ಹೊರಟಿದೆ. ಇದರ ಮೂಲಕ ಶೂದ್ರ-ದಲಿತ-ಮಹಿಳೆಯರಿರುವ 98% ರಷ್ಟು ಜನರನ್ನು ದಮನಿಸಲು ಹೊರಟಿದ್ದಾರೆ” ಎಂದು ವಿಪಕ್ಷ ನಾಯಕ ತಿಳಿಸಿದ್ದಾರೆ.

ಇದನ್ನೂ ಓದಿ: ಪಠ್ಯಪುಸ್ತಕ ಹಗರಣ: ಖ್ಯಾತ ಇತಿಹಾಸಗಾರ್ತಿ ರೋಮಿಳ ಥಾಪರ್‌‌ ಸೇರಿದಂತೆ ತಜ್ಞರ ಆಕ್ಷೇಪ

“ಬುದ್ಧ, ಮಹಾವೀರ, ಬಸವಣ್ಣ, ಕನಕದಾಸರು, ನಾರಾಯಣ ಗುರುಗಳು, ಸಾವಿತ್ರಿ ಫುಲೆ, ಅಂಬೇಡ್ಕರ್, ಕುವೆಂಪು, ಉತ್ತರ ಕರ್ನಾಟಕದ ಕವಿ ಸಾಹಿತಿಗಳು, ಹೆಮ್ಮೆಯ ನಾಡಗೀತೆ, ಮನುವಾದ ವಿರೋಧಿ ಭಕ್ತಿ ಪಂಥ, ದೇವನೂರ ಮಹಾದೇವ ಮುಂತಾದ ಶೂದ್ರ-ದಲಿತ ಬರೆಹಗಾರರು ಹೀಗೆ ಎಲ್ಲರನ್ನೂ ಅವಮಾನಿಸಿ, ನಿರ್ಲಕ್ಷಿಸಿ ಶ್ರಮ ವಿರೋಧಿಯಾದ, ಕುವೆಂಪು ಅವರು ಹೇಳಿದ ಹಾಗೆ ಉತ್ಪಾದಕ ವರ್ಗದವರನ್ನು ನಿರ್ಲಕ್ಷಿಸಿ, ಕೇವಲ ಸಂಗ್ರಾಹಕ ವರ್ಗದ ಜನರು ರಚಿಸಿದ ಜೊಳ್ಳನ್ನು ಮಕ್ಕಳಿಗೆ ಕಲಿಸಲು ಹೊರಟಿದ್ದಾರೆ” ಎಂದು ಅವರು ಆರೋಪಿಸಿದ್ದಾರೆ.

“ಇದನ್ನು ಪ್ರಶ್ನಿಸಿ ನಾಡಿನಾದ್ಯಂತ ಸ್ವಾಮೀಜಿಗಳು, ಗುರು ಹಿರಿಯರು, ಜನ ಸಾಮಾನ್ಯರು, ವಿದ್ವಾಂಸರು, ಜನಪರರು ಪ್ರತಿಭಟನೆಗೆ ಇಳಿದಿದ್ದಾರೆ. ಪ್ರತಿಭಟನೆಯನ್ನು ಕಂಡು ಕಂಗೆಟ್ಟು ಕೂತಿರುವ ಬಿಜೆಪಿಯ ಕೆಲವು ಶೂದ್ರ ಹಾಗೂ ಅಗ್ರಹಾರದ ಗೇಟ್‍ಕೀಪರುಗಳಾದವರು ಸೇರಿದಂತೆ, ಹಲವು ‘ತುಕ್ಡೆ ಗ್ಯಾಂಗ್’ನವರು, ರಾಷ್ಟ್ರೀಯ ಹಿತಾಸಕ್ತಿಗಾಗಿ ಇದೆಲ್ಲ ಸಹಿಸಿಕೊಳ್ಳಿ ಎಂದು ಹೇಳುತ್ತಿದ್ದಾರೆ”

“ಹಾಗಿದ್ದರೆ ನಿಜವಾದ ತುಕ್ಡೆ ಗ್ಯಾಂಗ್‍ನವರು ಯಾರು? ಎಂದು ಸ್ವಲ್ಪ ಮೆದುಳಿರುವವರು ಯೋಚಿಸಿದರೆ ಅರ್ಥವಾಗುತ್ತದೆ. ಬಿಜೆಪಿಯಲ್ಲಿರುವವರು ಮತ್ತು ಬಿಜೆಪಿಯ ಸಿದ್ಧಾಂತವನ್ನು ಹುಟ್ಟಿಸಿದವರೆ ತುಕ್ಡೆ ಗ್ಯಾಂಗಿನ ಜನ. ಯಾರು ತುಕ್ಡೆ ಗ್ಯಾಂಗನವರು ಹೇಳಿ ಬಿಜೆಪಿಗರೆ?” ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಇದನ್ನೂ ಓದಿ: ಪಠ್ಯಪುಸ್ತಕ ಹಗರಣ: ಮಾಜಿ ಪ್ರಧಾನಿ ಹೆಚ್‌.ಡಿ. ದೇವೇಗೌಡರೂ ಟಾರ್ಗೆಟ್‌?

“ಜಗತ್ತಿನ ಶ್ರೇಷ್ಠ ಸಂಸ್ಕೃತಿಯಾಗಿದ್ದ, ದ್ರಾವಿಡರೆ ನಿರ್ಮಿಸಿದ್ದ ಸಿಂಧೂ ನಾಗರಿಕತೆಯನ್ನು ಧ್ವಂಸ ಮಾಡಿದ ಆರ್ಯರು, ವಿರಾಟ್ ಪುರುಷನ ತಲೆಯಿಂದ ಬ್ರಾಹ್ಮಣ ಹುಟ್ಟಿದ, ಪಾದಗಳಿಂದ ಶೂದ್ರರು ಹುಟ್ಟಿದರು ಎಂದು ಬರೆದು ಅದನ್ನೆ ಕಾನೂನು ಮಾಡಿ ಜನರನ್ನು ಶಾಶ್ವತವಾಗಿ ಒಡೆದು ಹಾಕಿದ ಸಿದ್ಧಾಂತದವರು ತುಕ್ಡೆ ಗ್ಯಾಂಗಿನವರಲ್ಲವೆ?” ಎಂದು ಅವರು ಪ್ರಶ್ನಿಸಿದ್ದಾರೆ.

“ಇಂದಿನ ತಳಿವಿಜ್ಞಾನ ಹೇಳುತ್ತಿರುವ ಪ್ರಕಾರ 2500 ವರ್ಷಗಳ ಹಿಂದೆ ಅಮಾನುಷವಾದ ಜಾತಿ ವ್ಯವಸ್ಥೆಯನ್ನು ಹುಟ್ಟು ಹಾಕಿ, ವೃತ್ತಿ, ಹುಟ್ಟುಗಳ ಮೇಲೆ ಮನುಷ್ಯ ಸಮುದಾಯಗಳನ್ನು ಒಡೆದು ಹಾಕಿ ಭಾರತದಲ್ಲಿ ನರಕದಂತಹ ಸಮಸ್ಯೆಗಳನ್ನು ಸೃಷ್ಟಿ ಮಾಡಿದವರು ತುಕ್ಡೆ ಗ್ಯಾಂಗಿನವರಲ್ಲವೆ?”

“ನಾಗಪುರದ ತಮ್ಮ ಕಛೇರಿಯ ಮೇಲೆ ಇತ್ತೀಚಿನವರೆಗೂ ರಾಷ್ಟ್ರಧ್ವಜವನ್ನು ಹಾರಿಸದೆ ನಿರ್ಲಕ್ಷ್ಯ ಮಾಡಿದವರು ತುಕ್ಡೆ ಗ್ಯಾಂಗಿನವರಲ್ಲವೆ?”

“ಸಂವಿಧಾನದ ಆಶಯಗಳನ್ನು ಗಾಳಿಗೆ ತೂರಿ ಮನುವಾದವನ್ನು ಜಾರಿಗೆ ತರಲು ನಿರಂತರ ಪ್ರಯತ್ನಿಸುತ್ತಿರುವವರು ತುಕ್ಡೆ ಗ್ಯಾಂಗಿನವರಲ್ಲವೆ? ಗಾಂಧೀಜಿಯರನ್ನು ಕೊಂದ ಗೋಡ್ಸೆಯನ್ನು ಆರಾಧಿಸುವ ಸಂಸ್ಕೃತಿಯನ್ನು ಹುಟ್ಟು ಹಾಕಿದವರು ತುಕ್ಡೆ ಗ್ಯಾಂಗಿನವರಲ್ಲವೆ?”

ಇದನ್ನೂ ಓದಿ: ಪಠ್ಯಪುಸ್ತಕ ಹಗರಣ ವಿರೋಧಿಸಿ ಜೂನ್‌‌ 18ರ ಶನಿವಾರ ನಡೆಯುವ ಬೃಹತ್‌ ರ್‍ಯಾಲಿಯಲ್ಲಿ ಮಾಜಿ ಪ್ರಧಾನಿ ಹೆಚ್‌.ಡಿ. ದೇವೇಗೌಡ ಭಾಗಿ

“ಇಟಲಿಯ ಮುಸಲೋನಿಯಿಂದ ಫ್ಯಾಸಿಸಂ ಅನ್ನು ಕಲಿತು ಬಂದ ಮೂಂಜೆಯವರು ತಮ್ಮ ಶಿಷ್ಯ ಹೆಡಗೆವಾರ್ ಮೂಲಕ ಆರ್‌ಎಸ್‍ಎಸ್ ಅನ್ನು ಸ್ಥಾಪಿಸಿ ಒಂದು ವರ್ಗದ ಹಿತಾಸಕ್ತಿಯನ್ನು ಪೊರೆಯಲು ಕಂಕಣ ತೊಟ್ಟಿದ್ದು ತುಕ್ಡೆವಾದವಲ್ಲವೆ?”

“ಹಿಟ್ಲಟರನನ್ನು ರಾಕ್ಷಸ ಎಂದೂ ಅವನ ಸಿದ್ಧಾಂತವನ್ನು ದುಷ್ಟ, ಸೈತಾನ ಸಿದ್ಧಾಂತ ಎಂದು ತೀರ್ಮಾನಿಸಿ ಅದನ್ನು ಇಡೀ ಯುರೋಪಿನಿಂದಲೆ ಹೊಡೆದೋಡಿಸುತ್ತಿದ್ದರೂ ಆರ್‌‌ಎಸ್‍ಎಸ್ ಮಾತ್ರ ಹಿಟ್ಲರನ ಯೂನಿಫಾರ್ಮು, ಲಾಂಛನ ಇತ್ಯಾದಿಗಳನ್ನು ಹೊತ್ತುಕೊಂಡು ಮೆರೆಯುತ್ತಿರುವುದು, ತಮ್ಮ ಮೆದುಳು, ಹೃದಯ ಎಲ್ಲವೂ ಇಟಲಿ, ಜರ್ಮನಿಗಳಲ್ಲಿ ಇದ್ದರೂ ಸಹ ಸುಳ್ಳು ಸುಳ್ಳೆ ಭಾರತೀಯರು ಎಂದು ಕರೆದುಕೊಳ್ಳುತ್ತಿರುವ ಈ ಜನರ ವಾದ ತುಕ್ಡೆವಾದವಲ್ಲವೆ?”

“ಮನುಷ್ಯ ಕಲ್ಯಾಣಕ್ಕಾಗಿ ದುಡಿದ ಬುದ್ಧ, ಮಹಾವೀರ, ಬಸವಣ್ಣ, ಕನಕದಾಸ, ನಾರಾಯಣಗುರು, ಅಂಬೇಡ್ಕರ್, ಕುವೆಂಪು ಮುಂತಾದ ಮಹನೀಯರನ್ನು ಅವಮಾನಿಸಿ, ನಿರ್ಲಕ್ಷಿಸಿರುವ ಮನುವಾದಿ ಸಿದ್ಧಾಂತದವರು ಹಾಗೂ ಒಂದು ಗುಂಪು ಮಾತ್ರ ಶ್ರೇಷ್ಠ ಉಳಿದವರೆಲ್ಲ ನಿಕೃಷ್ಟರು ಎಂದು ಭಾವಿಸಿ ಪಠ್ಯ ಪುಸ್ತಕ ಮಾಡಿರುವ ಸಿದ್ಧಾಂತದವರು ತುಕ್ಡೆ ಗ್ಯಾಂಗಿನವರಲ್ಲವೆ?. ಒಂದು ಗುಂಪಿನ ಹಿತಾಸಕ್ತಿಯನ್ನು ರಾಷ್ಟ್ರೀಯ ಹಿತಾಸಕ್ತಿ ಎಂದು ಬಿಂಬಿಸುತ್ತಿರುವ ಕೆಟ್ಟ ಸಿದ್ಧಾಂತದ ಜನರು ತುಕ್ಡೆ ಗ್ಯಾಂಗಿನವರಲ್ಲವೆ?.

ಇದನ್ನೂ ಓದಿ: ಪಠ್ಯಪುಸ್ತಕ ಹಗರಣ – ‘ಬರಗೂರು ಸಮಿತಿ ಹಿಂದೆ ತುಕ್ಡೆ ಗ್ಯಾಂಗ್‌’: ಸಚಿವ ಬಿಸಿ ನಾಗೇಶ್‌ ವಿವಾದಾತ್ಮಕ ಹೇಳಿಕೆ

“ಮನುಷ್ಯ ವಿರೋಧಿ ಮನುವಾದಿಗಳೆ ಕೇಳಿಸಿಕೊಳ್ಳಿ; ನಮ್ಮದು ಬುದ್ಧ, ಮಹಾವೀರ, ಬಸವಣ್ಣ, ಕನಕದಾಸ, ನಾರಾಯಣ ಗುರು, ಅಂಬೇಡ್ಕರ್, ಕುವೆಂಪು ಮುಂತಾದ ಜಗತ್ತಿನ ಶ್ರೇಷ್ಠ ದಾರ್ಶನಿಕರ ತತ್ವ. ಇಡೀ ಜಗತ್ತಿನಲ್ಲಿ ಶೋಷಿತರು, ದುಃಖಿತರು ಇರಬಾರದು ಎಂದು ಹೇಳಿಕೊಟ್ಟವರು ನಮ್ಮ ನಾಯಕರು”

“ಇವನಾರವನೆನ್ನದೆ ಇವ ನಮ್ಮವ ಎಂದು ಹೇಳಿಕೊಟ್ಟ ಅಣ್ಣ ಬಸವಣ್ಣನ ದಾರಿ ನಮ್ಮದು. ಕುಲ ಕುಲವೆಂದು ಹೊಡೆದಾಡಬೇಡಿ ಎಂದ ಕನಕದಾಸರ ಪಥ ನಮ್ಮದು. ‘ಮನುಷ್ಯ ಜಾತಿ ತಾನೊಂದೆ ವಲಂ’ ಎಂದ ಪಂಪ ನಮ್ಮ ನಾಯಕ. ನೀನೆಲ್ಲೆ ಇದ್ದರೂ ನೀನೇರುವ ಮಲೆ ಅದೆ ಸಹ್ಯಾದ್ರಿ, ನೀನ್ ಕುಡಿಯುವ ನೀರ್ ಕಾವೇರಿ ಎಂದ, ನಿರಂಕುಶ ಮತಿಗಳಾಗಿ ಎಂದು ಕರೆಕೊಟ್ಟ ಕುವೆಂಪು ಅವರು ನಮ್ಮ ನಾಯಕರು. ಅಸಮಾನತೆಯನ್ನು ತೊಡೆದು ಹಾಕಿ, ಕಾನೂನಿನ ಮುಂದೆ ಎಲ್ಲರೂ ಸಮಾನರು ಎಂದು ಹೇಳಿದ ಬಾಬಾ ಸಾಹೇಬರು ನಮ್ಮ ಮಾರ್ಗದರ್ಶಕರು”

“ನಾವು ಈ ರಾಷ್ಟ್ರದ ವಾರಸುದಾರರು. ತುಕ್ಡೆ ಗ್ಯಾಂಗು ಎಂದು ಬಾಯಿ ಬಡಿದುಕೊಳ್ಳುವ ಬಿಜೆಪಿಗರೆ ಹೇಳಿ ನಿಮ್ಮ ಸಿದ್ಧಾಂತ ಯಾವುದು? ಯಾರು ನಾಯಕರು?” ಎಂದು ಸಿದ್ದರಾಮಯ್ಯ ಅವರು ಬಿಜೆಪಿಯನ್ನು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ‘ಇದು ಕುಪ್ಪಳ್ಳಿ ಕಹಳೆ’-ಪಠ್ಯಪುಸ್ತಕ ಹಗರಣ ವಿರೋಧಿಸಿ ನಡೆದ ಪ್ರತಿಭಟನಾ ರ್‍ಯಾಲಿಯಲ್ಲಿ ಹಂಸಲೇಖ

“ಮತ್ತೂ ಹೇಳುತ್ತೇನೆ ವ್ಯಾಸ, ವಾಲ್ಮೀಕಿ, ಕಾಳಿದಾಸ ನಮ್ಮವರು. ಇಂದ್ರ ಸಂಸ್ಕೃತಿಯ ವಿರುದ್ಧ ತಿರುಗಿ ಬಿದ್ದ ದೇವರುಗಳಾದ ಶಿವ, ರಾಮ, ಕೃಷ್ಣ ನಮ್ಮವರು. ನಿಜವಾದ ಭಾರತದ ರಾಷ್ಟ್ರ ಧರ್ಮವೆಂದರೆ ಶೂದ್ರ ಧರ್ಮವೆ ಹೊರತು, ನಿಮ್ಮದಲ್ಲ. ನಿಮ್ಮದು ಸೀಮಿತ ಗುಂಪಿನ ಧರ್ಮ ಮಾತ್ರ. ಸೀಮಿತ ಹಿತಾಸಕ್ತಿ ಎಂದಿಗೂ ರಾಷ್ಟ್ರೀಯ ಹಿತಾಸಕ್ತಿಯಾಗುವುದಿಲ್ಲ. ಓಟಿಗಾಗಿ ಮಾತ್ರ ನೀವು ರಾಷ್ಟ್ರೀಯ ಹಿತಾಸಕ್ತಿ ಎನ್ನುತ್ತೀರೆ ಹೊರತು ನಿಜವಾದ ಕಾಳಜಿ ನಿಮ್ಮ ಎದೆಯಲ್ಲಿಲ್ಲ. ಇದು ನಿಧಾನಕ್ಕೆ ಬಹುಸಂಖ್ಯಾತ ಜನರಿಗೆ ಅರ್ಥವಾಗುತ್ತಿದೆ” ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಜಾತಿಯಲ್ಲಿ ನಾವೇ ಶ್ರೇಷ್ಠ ಎಂದು ಹುಚ್ಚುನಾಯಿಗಳ ರರಹ ಅರಚುತ್ತಾ, ತಮ್ಮ ಮೌಢ್ಯಯುಕ್ತ ಜೊಳ್ಳು ಸಂಪ್ರದಾಯ ಗಳನ್ನ,ಬಹುಜನ ಮೂಲನಿವಾಸಿಗಳಾದ ದ್ರಾವಿಡರು ಮತ್ತು ಅವರ ಶ್ರೇಷ್ಠ ದ್ರಾವಿಡ ಸಂಸ್ಕೃತಿಯ ಹೇರಲು ಹೊರಟಿರುವ ಹುಚ್ಚುನಾಯಿಗಳಿಗೆ ಸರಿಯಾಗಿ ಚಾಟಿ ಬೀಸಿದ್ದಾರೆ ಸಿದ್ದರಾಮಯ್ಯ, ಅರ್ಥಮಾಡಿಕೊಳ್ಳದೆ ತಮ್ಮದೇ ಶ್ರೇಷ್ಠ ಎಂದು ವಿತ್ತಂಡ ವಾದ ಮಂಡಿಸುವುದೇ ಆದರೆ ,ಸಂಶಯವಿಲ್ಲ, ನೀವು ಅನಾಗರಿಕ ಪರಕೀಯ ಆರ್ಯರೇ.

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...