Homeಕರ್ನಾಟಕಪಠ್ಯಪುಸ್ತಕ ಹಗರಣ ಅಪ್‌ಡೇಟ್‌ | ಬಿಜೆಪಿಗರೆ ನೀವು ತುಕ್ಡೆ ಗ್ಯಾಂಗಿನ ನಾಯಕರು: ಸಿದ್ದರಾಮಯ್ಯ ಆಕ್ರೊಶ

ಪಠ್ಯಪುಸ್ತಕ ಹಗರಣ ಅಪ್‌ಡೇಟ್‌ | ಬಿಜೆಪಿಗರೆ ನೀವು ತುಕ್ಡೆ ಗ್ಯಾಂಗಿನ ನಾಯಕರು: ಸಿದ್ದರಾಮಯ್ಯ ಆಕ್ರೊಶ

- Advertisement -
- Advertisement -

ಖಾಕಿ ಚಡ್ಡಿ ತೊಟ್ಟ ಬಿಜೆಪಿಯು ತಮ್ಮ ಎದುರಾಳಿಗಳನ್ನು ನಿಂದಿಸಲು ತುಕ್ಡೆಗ್ಯಾಂಗ್ ಎಂಬ ಪದವನ್ನು ಬಳಸುತ್ತದೆ. ನಿಜವಾದ ಟೂಲ್ ಕಿಟ್ ರಾಜಕಾರಣ ಅಥವಾ ಪ್ಯಾಕೇಜ್ ರಾಜಕಾರಣ ಮಾಡುತ್ತಿರುವ ಬಿಜೆಪಿಗೆ ಸಂಕಷ್ಟ ಬಂದಾಗಲೆಲ್ಲ ‘ತುಕ್ಡೆ ಗ್ಯಾಂಗು’ ಎಂಬಂತಹ ಮಾಯಾವಿ ಪದಗಳನ್ನು ಪ್ಯಾಕೇಜಿನಂತೆ ಒಬ್ಬರಾದ ಮೇಲೆ ಒಬ್ಬರು ಬಳಸುತ್ತಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಬುಧವಾರ ತೀರ್ಥಹಳ್ಳಿಯಲ್ಲಿ ಹೇಳಿದ್ದಾರೆ.

“ಪಠ್ಯ ಪುಸ್ತಕ ಪರಿಷ್ಕರಣೆ ಪ್ರಕರಣದಿಂದ ಕಂಗೆಟ್ಟಿರುವ ಸರ್ಕಾರ ಮತ್ತು ಅದರ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅವರು ತಾವು ಸಚಿವರೆಂಬ ಜವಾಬ್ಧಾರಿಯನ್ನು ಮರೆತು ನಾಡೋಜ ಬರಗೂರು ರಾಮಚಂದ್ರಪ್ಪ ಮುಂತಾದ ದಮನಿತ ವರ್ಗಗಳ ಧ್ವನಿಗಳನ್ನು ಅವಮಾನಿಸಬೇಕೆಂದೆ ‘ತುಕ್ಡೆ ಗ್ಯಾಂಗ್’ ನವರು ಎಂದು ಅವಮಾನಿಸಿದ್ದಾರೆ” ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ರೋಹಿತ್ ಚಕ್ರತೀರ್ಥ ಎಂಬ ರೋಗಿಷ್ಠ ಮನಸ್ಥಿತಿಯ ಪಠ್ಯ ಪುಸ್ತಕ ಪರಿಷ್ಕರಣೆ ಸಮಿತಿಯು, ಉಸಿರಾಡುತ್ತಿರುವ ಜೀವಿಗಳಲ್ಲಿ ಬ್ರಾಹ್ಮಣರು ಶ್ರೇಷ್ಠರು, ಬ್ರಾಹ್ಮಣರಲ್ಲಿ ಮಾಧ್ವರು ಶ್ರೇಷ್ಠರು ಎಂಬ ನಿಲುವಿನಲ್ಲಿ ಪಾಠಗಳನ್ನು ಮಕ್ಕಳಿಗೆ ಕಲಿಸಲು ಶಿಫಾರಸ್ಸು ಮಾಡಿದೆ. ಸರ್ಕಾರ ಇಂಥ ಕೆಟ್ಟ ಮನುಷ್ಯ ವಿರೋಧಿ ನಿಲುವನ್ನು ಮಕ್ಕಳಿಗೆ ಕಲಿಸಲು ಹೊರಟಿದೆ. ಇದರ ಮೂಲಕ ಶೂದ್ರ-ದಲಿತ-ಮಹಿಳೆಯರಿರುವ 98% ರಷ್ಟು ಜನರನ್ನು ದಮನಿಸಲು ಹೊರಟಿದ್ದಾರೆ” ಎಂದು ವಿಪಕ್ಷ ನಾಯಕ ತಿಳಿಸಿದ್ದಾರೆ.

ಇದನ್ನೂ ಓದಿ: ಪಠ್ಯಪುಸ್ತಕ ಹಗರಣ: ಖ್ಯಾತ ಇತಿಹಾಸಗಾರ್ತಿ ರೋಮಿಳ ಥಾಪರ್‌‌ ಸೇರಿದಂತೆ ತಜ್ಞರ ಆಕ್ಷೇಪ

“ಬುದ್ಧ, ಮಹಾವೀರ, ಬಸವಣ್ಣ, ಕನಕದಾಸರು, ನಾರಾಯಣ ಗುರುಗಳು, ಸಾವಿತ್ರಿ ಫುಲೆ, ಅಂಬೇಡ್ಕರ್, ಕುವೆಂಪು, ಉತ್ತರ ಕರ್ನಾಟಕದ ಕವಿ ಸಾಹಿತಿಗಳು, ಹೆಮ್ಮೆಯ ನಾಡಗೀತೆ, ಮನುವಾದ ವಿರೋಧಿ ಭಕ್ತಿ ಪಂಥ, ದೇವನೂರ ಮಹಾದೇವ ಮುಂತಾದ ಶೂದ್ರ-ದಲಿತ ಬರೆಹಗಾರರು ಹೀಗೆ ಎಲ್ಲರನ್ನೂ ಅವಮಾನಿಸಿ, ನಿರ್ಲಕ್ಷಿಸಿ ಶ್ರಮ ವಿರೋಧಿಯಾದ, ಕುವೆಂಪು ಅವರು ಹೇಳಿದ ಹಾಗೆ ಉತ್ಪಾದಕ ವರ್ಗದವರನ್ನು ನಿರ್ಲಕ್ಷಿಸಿ, ಕೇವಲ ಸಂಗ್ರಾಹಕ ವರ್ಗದ ಜನರು ರಚಿಸಿದ ಜೊಳ್ಳನ್ನು ಮಕ್ಕಳಿಗೆ ಕಲಿಸಲು ಹೊರಟಿದ್ದಾರೆ” ಎಂದು ಅವರು ಆರೋಪಿಸಿದ್ದಾರೆ.

“ಇದನ್ನು ಪ್ರಶ್ನಿಸಿ ನಾಡಿನಾದ್ಯಂತ ಸ್ವಾಮೀಜಿಗಳು, ಗುರು ಹಿರಿಯರು, ಜನ ಸಾಮಾನ್ಯರು, ವಿದ್ವಾಂಸರು, ಜನಪರರು ಪ್ರತಿಭಟನೆಗೆ ಇಳಿದಿದ್ದಾರೆ. ಪ್ರತಿಭಟನೆಯನ್ನು ಕಂಡು ಕಂಗೆಟ್ಟು ಕೂತಿರುವ ಬಿಜೆಪಿಯ ಕೆಲವು ಶೂದ್ರ ಹಾಗೂ ಅಗ್ರಹಾರದ ಗೇಟ್‍ಕೀಪರುಗಳಾದವರು ಸೇರಿದಂತೆ, ಹಲವು ‘ತುಕ್ಡೆ ಗ್ಯಾಂಗ್’ನವರು, ರಾಷ್ಟ್ರೀಯ ಹಿತಾಸಕ್ತಿಗಾಗಿ ಇದೆಲ್ಲ ಸಹಿಸಿಕೊಳ್ಳಿ ಎಂದು ಹೇಳುತ್ತಿದ್ದಾರೆ”

“ಹಾಗಿದ್ದರೆ ನಿಜವಾದ ತುಕ್ಡೆ ಗ್ಯಾಂಗ್‍ನವರು ಯಾರು? ಎಂದು ಸ್ವಲ್ಪ ಮೆದುಳಿರುವವರು ಯೋಚಿಸಿದರೆ ಅರ್ಥವಾಗುತ್ತದೆ. ಬಿಜೆಪಿಯಲ್ಲಿರುವವರು ಮತ್ತು ಬಿಜೆಪಿಯ ಸಿದ್ಧಾಂತವನ್ನು ಹುಟ್ಟಿಸಿದವರೆ ತುಕ್ಡೆ ಗ್ಯಾಂಗಿನ ಜನ. ಯಾರು ತುಕ್ಡೆ ಗ್ಯಾಂಗನವರು ಹೇಳಿ ಬಿಜೆಪಿಗರೆ?” ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಇದನ್ನೂ ಓದಿ: ಪಠ್ಯಪುಸ್ತಕ ಹಗರಣ: ಮಾಜಿ ಪ್ರಧಾನಿ ಹೆಚ್‌.ಡಿ. ದೇವೇಗೌಡರೂ ಟಾರ್ಗೆಟ್‌?

“ಜಗತ್ತಿನ ಶ್ರೇಷ್ಠ ಸಂಸ್ಕೃತಿಯಾಗಿದ್ದ, ದ್ರಾವಿಡರೆ ನಿರ್ಮಿಸಿದ್ದ ಸಿಂಧೂ ನಾಗರಿಕತೆಯನ್ನು ಧ್ವಂಸ ಮಾಡಿದ ಆರ್ಯರು, ವಿರಾಟ್ ಪುರುಷನ ತಲೆಯಿಂದ ಬ್ರಾಹ್ಮಣ ಹುಟ್ಟಿದ, ಪಾದಗಳಿಂದ ಶೂದ್ರರು ಹುಟ್ಟಿದರು ಎಂದು ಬರೆದು ಅದನ್ನೆ ಕಾನೂನು ಮಾಡಿ ಜನರನ್ನು ಶಾಶ್ವತವಾಗಿ ಒಡೆದು ಹಾಕಿದ ಸಿದ್ಧಾಂತದವರು ತುಕ್ಡೆ ಗ್ಯಾಂಗಿನವರಲ್ಲವೆ?” ಎಂದು ಅವರು ಪ್ರಶ್ನಿಸಿದ್ದಾರೆ.

“ಇಂದಿನ ತಳಿವಿಜ್ಞಾನ ಹೇಳುತ್ತಿರುವ ಪ್ರಕಾರ 2500 ವರ್ಷಗಳ ಹಿಂದೆ ಅಮಾನುಷವಾದ ಜಾತಿ ವ್ಯವಸ್ಥೆಯನ್ನು ಹುಟ್ಟು ಹಾಕಿ, ವೃತ್ತಿ, ಹುಟ್ಟುಗಳ ಮೇಲೆ ಮನುಷ್ಯ ಸಮುದಾಯಗಳನ್ನು ಒಡೆದು ಹಾಕಿ ಭಾರತದಲ್ಲಿ ನರಕದಂತಹ ಸಮಸ್ಯೆಗಳನ್ನು ಸೃಷ್ಟಿ ಮಾಡಿದವರು ತುಕ್ಡೆ ಗ್ಯಾಂಗಿನವರಲ್ಲವೆ?”

“ನಾಗಪುರದ ತಮ್ಮ ಕಛೇರಿಯ ಮೇಲೆ ಇತ್ತೀಚಿನವರೆಗೂ ರಾಷ್ಟ್ರಧ್ವಜವನ್ನು ಹಾರಿಸದೆ ನಿರ್ಲಕ್ಷ್ಯ ಮಾಡಿದವರು ತುಕ್ಡೆ ಗ್ಯಾಂಗಿನವರಲ್ಲವೆ?”

“ಸಂವಿಧಾನದ ಆಶಯಗಳನ್ನು ಗಾಳಿಗೆ ತೂರಿ ಮನುವಾದವನ್ನು ಜಾರಿಗೆ ತರಲು ನಿರಂತರ ಪ್ರಯತ್ನಿಸುತ್ತಿರುವವರು ತುಕ್ಡೆ ಗ್ಯಾಂಗಿನವರಲ್ಲವೆ? ಗಾಂಧೀಜಿಯರನ್ನು ಕೊಂದ ಗೋಡ್ಸೆಯನ್ನು ಆರಾಧಿಸುವ ಸಂಸ್ಕೃತಿಯನ್ನು ಹುಟ್ಟು ಹಾಕಿದವರು ತುಕ್ಡೆ ಗ್ಯಾಂಗಿನವರಲ್ಲವೆ?”

ಇದನ್ನೂ ಓದಿ: ಪಠ್ಯಪುಸ್ತಕ ಹಗರಣ ವಿರೋಧಿಸಿ ಜೂನ್‌‌ 18ರ ಶನಿವಾರ ನಡೆಯುವ ಬೃಹತ್‌ ರ್‍ಯಾಲಿಯಲ್ಲಿ ಮಾಜಿ ಪ್ರಧಾನಿ ಹೆಚ್‌.ಡಿ. ದೇವೇಗೌಡ ಭಾಗಿ

“ಇಟಲಿಯ ಮುಸಲೋನಿಯಿಂದ ಫ್ಯಾಸಿಸಂ ಅನ್ನು ಕಲಿತು ಬಂದ ಮೂಂಜೆಯವರು ತಮ್ಮ ಶಿಷ್ಯ ಹೆಡಗೆವಾರ್ ಮೂಲಕ ಆರ್‌ಎಸ್‍ಎಸ್ ಅನ್ನು ಸ್ಥಾಪಿಸಿ ಒಂದು ವರ್ಗದ ಹಿತಾಸಕ್ತಿಯನ್ನು ಪೊರೆಯಲು ಕಂಕಣ ತೊಟ್ಟಿದ್ದು ತುಕ್ಡೆವಾದವಲ್ಲವೆ?”

“ಹಿಟ್ಲಟರನನ್ನು ರಾಕ್ಷಸ ಎಂದೂ ಅವನ ಸಿದ್ಧಾಂತವನ್ನು ದುಷ್ಟ, ಸೈತಾನ ಸಿದ್ಧಾಂತ ಎಂದು ತೀರ್ಮಾನಿಸಿ ಅದನ್ನು ಇಡೀ ಯುರೋಪಿನಿಂದಲೆ ಹೊಡೆದೋಡಿಸುತ್ತಿದ್ದರೂ ಆರ್‌‌ಎಸ್‍ಎಸ್ ಮಾತ್ರ ಹಿಟ್ಲರನ ಯೂನಿಫಾರ್ಮು, ಲಾಂಛನ ಇತ್ಯಾದಿಗಳನ್ನು ಹೊತ್ತುಕೊಂಡು ಮೆರೆಯುತ್ತಿರುವುದು, ತಮ್ಮ ಮೆದುಳು, ಹೃದಯ ಎಲ್ಲವೂ ಇಟಲಿ, ಜರ್ಮನಿಗಳಲ್ಲಿ ಇದ್ದರೂ ಸಹ ಸುಳ್ಳು ಸುಳ್ಳೆ ಭಾರತೀಯರು ಎಂದು ಕರೆದುಕೊಳ್ಳುತ್ತಿರುವ ಈ ಜನರ ವಾದ ತುಕ್ಡೆವಾದವಲ್ಲವೆ?”

“ಮನುಷ್ಯ ಕಲ್ಯಾಣಕ್ಕಾಗಿ ದುಡಿದ ಬುದ್ಧ, ಮಹಾವೀರ, ಬಸವಣ್ಣ, ಕನಕದಾಸ, ನಾರಾಯಣಗುರು, ಅಂಬೇಡ್ಕರ್, ಕುವೆಂಪು ಮುಂತಾದ ಮಹನೀಯರನ್ನು ಅವಮಾನಿಸಿ, ನಿರ್ಲಕ್ಷಿಸಿರುವ ಮನುವಾದಿ ಸಿದ್ಧಾಂತದವರು ಹಾಗೂ ಒಂದು ಗುಂಪು ಮಾತ್ರ ಶ್ರೇಷ್ಠ ಉಳಿದವರೆಲ್ಲ ನಿಕೃಷ್ಟರು ಎಂದು ಭಾವಿಸಿ ಪಠ್ಯ ಪುಸ್ತಕ ಮಾಡಿರುವ ಸಿದ್ಧಾಂತದವರು ತುಕ್ಡೆ ಗ್ಯಾಂಗಿನವರಲ್ಲವೆ?. ಒಂದು ಗುಂಪಿನ ಹಿತಾಸಕ್ತಿಯನ್ನು ರಾಷ್ಟ್ರೀಯ ಹಿತಾಸಕ್ತಿ ಎಂದು ಬಿಂಬಿಸುತ್ತಿರುವ ಕೆಟ್ಟ ಸಿದ್ಧಾಂತದ ಜನರು ತುಕ್ಡೆ ಗ್ಯಾಂಗಿನವರಲ್ಲವೆ?.

ಇದನ್ನೂ ಓದಿ: ಪಠ್ಯಪುಸ್ತಕ ಹಗರಣ – ‘ಬರಗೂರು ಸಮಿತಿ ಹಿಂದೆ ತುಕ್ಡೆ ಗ್ಯಾಂಗ್‌’: ಸಚಿವ ಬಿಸಿ ನಾಗೇಶ್‌ ವಿವಾದಾತ್ಮಕ ಹೇಳಿಕೆ

“ಮನುಷ್ಯ ವಿರೋಧಿ ಮನುವಾದಿಗಳೆ ಕೇಳಿಸಿಕೊಳ್ಳಿ; ನಮ್ಮದು ಬುದ್ಧ, ಮಹಾವೀರ, ಬಸವಣ್ಣ, ಕನಕದಾಸ, ನಾರಾಯಣ ಗುರು, ಅಂಬೇಡ್ಕರ್, ಕುವೆಂಪು ಮುಂತಾದ ಜಗತ್ತಿನ ಶ್ರೇಷ್ಠ ದಾರ್ಶನಿಕರ ತತ್ವ. ಇಡೀ ಜಗತ್ತಿನಲ್ಲಿ ಶೋಷಿತರು, ದುಃಖಿತರು ಇರಬಾರದು ಎಂದು ಹೇಳಿಕೊಟ್ಟವರು ನಮ್ಮ ನಾಯಕರು”

“ಇವನಾರವನೆನ್ನದೆ ಇವ ನಮ್ಮವ ಎಂದು ಹೇಳಿಕೊಟ್ಟ ಅಣ್ಣ ಬಸವಣ್ಣನ ದಾರಿ ನಮ್ಮದು. ಕುಲ ಕುಲವೆಂದು ಹೊಡೆದಾಡಬೇಡಿ ಎಂದ ಕನಕದಾಸರ ಪಥ ನಮ್ಮದು. ‘ಮನುಷ್ಯ ಜಾತಿ ತಾನೊಂದೆ ವಲಂ’ ಎಂದ ಪಂಪ ನಮ್ಮ ನಾಯಕ. ನೀನೆಲ್ಲೆ ಇದ್ದರೂ ನೀನೇರುವ ಮಲೆ ಅದೆ ಸಹ್ಯಾದ್ರಿ, ನೀನ್ ಕುಡಿಯುವ ನೀರ್ ಕಾವೇರಿ ಎಂದ, ನಿರಂಕುಶ ಮತಿಗಳಾಗಿ ಎಂದು ಕರೆಕೊಟ್ಟ ಕುವೆಂಪು ಅವರು ನಮ್ಮ ನಾಯಕರು. ಅಸಮಾನತೆಯನ್ನು ತೊಡೆದು ಹಾಕಿ, ಕಾನೂನಿನ ಮುಂದೆ ಎಲ್ಲರೂ ಸಮಾನರು ಎಂದು ಹೇಳಿದ ಬಾಬಾ ಸಾಹೇಬರು ನಮ್ಮ ಮಾರ್ಗದರ್ಶಕರು”

“ನಾವು ಈ ರಾಷ್ಟ್ರದ ವಾರಸುದಾರರು. ತುಕ್ಡೆ ಗ್ಯಾಂಗು ಎಂದು ಬಾಯಿ ಬಡಿದುಕೊಳ್ಳುವ ಬಿಜೆಪಿಗರೆ ಹೇಳಿ ನಿಮ್ಮ ಸಿದ್ಧಾಂತ ಯಾವುದು? ಯಾರು ನಾಯಕರು?” ಎಂದು ಸಿದ್ದರಾಮಯ್ಯ ಅವರು ಬಿಜೆಪಿಯನ್ನು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ‘ಇದು ಕುಪ್ಪಳ್ಳಿ ಕಹಳೆ’-ಪಠ್ಯಪುಸ್ತಕ ಹಗರಣ ವಿರೋಧಿಸಿ ನಡೆದ ಪ್ರತಿಭಟನಾ ರ್‍ಯಾಲಿಯಲ್ಲಿ ಹಂಸಲೇಖ

“ಮತ್ತೂ ಹೇಳುತ್ತೇನೆ ವ್ಯಾಸ, ವಾಲ್ಮೀಕಿ, ಕಾಳಿದಾಸ ನಮ್ಮವರು. ಇಂದ್ರ ಸಂಸ್ಕೃತಿಯ ವಿರುದ್ಧ ತಿರುಗಿ ಬಿದ್ದ ದೇವರುಗಳಾದ ಶಿವ, ರಾಮ, ಕೃಷ್ಣ ನಮ್ಮವರು. ನಿಜವಾದ ಭಾರತದ ರಾಷ್ಟ್ರ ಧರ್ಮವೆಂದರೆ ಶೂದ್ರ ಧರ್ಮವೆ ಹೊರತು, ನಿಮ್ಮದಲ್ಲ. ನಿಮ್ಮದು ಸೀಮಿತ ಗುಂಪಿನ ಧರ್ಮ ಮಾತ್ರ. ಸೀಮಿತ ಹಿತಾಸಕ್ತಿ ಎಂದಿಗೂ ರಾಷ್ಟ್ರೀಯ ಹಿತಾಸಕ್ತಿಯಾಗುವುದಿಲ್ಲ. ಓಟಿಗಾಗಿ ಮಾತ್ರ ನೀವು ರಾಷ್ಟ್ರೀಯ ಹಿತಾಸಕ್ತಿ ಎನ್ನುತ್ತೀರೆ ಹೊರತು ನಿಜವಾದ ಕಾಳಜಿ ನಿಮ್ಮ ಎದೆಯಲ್ಲಿಲ್ಲ. ಇದು ನಿಧಾನಕ್ಕೆ ಬಹುಸಂಖ್ಯಾತ ಜನರಿಗೆ ಅರ್ಥವಾಗುತ್ತಿದೆ” ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಜಾತಿಯಲ್ಲಿ ನಾವೇ ಶ್ರೇಷ್ಠ ಎಂದು ಹುಚ್ಚುನಾಯಿಗಳ ರರಹ ಅರಚುತ್ತಾ, ತಮ್ಮ ಮೌಢ್ಯಯುಕ್ತ ಜೊಳ್ಳು ಸಂಪ್ರದಾಯ ಗಳನ್ನ,ಬಹುಜನ ಮೂಲನಿವಾಸಿಗಳಾದ ದ್ರಾವಿಡರು ಮತ್ತು ಅವರ ಶ್ರೇಷ್ಠ ದ್ರಾವಿಡ ಸಂಸ್ಕೃತಿಯ ಹೇರಲು ಹೊರಟಿರುವ ಹುಚ್ಚುನಾಯಿಗಳಿಗೆ ಸರಿಯಾಗಿ ಚಾಟಿ ಬೀಸಿದ್ದಾರೆ ಸಿದ್ದರಾಮಯ್ಯ, ಅರ್ಥಮಾಡಿಕೊಳ್ಳದೆ ತಮ್ಮದೇ ಶ್ರೇಷ್ಠ ಎಂದು ವಿತ್ತಂಡ ವಾದ ಮಂಡಿಸುವುದೇ ಆದರೆ ,ಸಂಶಯವಿಲ್ಲ, ನೀವು ಅನಾಗರಿಕ ಪರಕೀಯ ಆರ್ಯರೇ.

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...