Homeಕರ್ನಾಟಕಪಠ್ಯಪುಸ್ತಕ ಹಗರಣ ಅಪ್‌ಡೇಟ್‌ | ಬಿಜೆಪಿಗರೆ ನೀವು ತುಕ್ಡೆ ಗ್ಯಾಂಗಿನ ನಾಯಕರು: ಸಿದ್ದರಾಮಯ್ಯ ಆಕ್ರೊಶ

ಪಠ್ಯಪುಸ್ತಕ ಹಗರಣ ಅಪ್‌ಡೇಟ್‌ | ಬಿಜೆಪಿಗರೆ ನೀವು ತುಕ್ಡೆ ಗ್ಯಾಂಗಿನ ನಾಯಕರು: ಸಿದ್ದರಾಮಯ್ಯ ಆಕ್ರೊಶ

- Advertisement -
- Advertisement -

ಖಾಕಿ ಚಡ್ಡಿ ತೊಟ್ಟ ಬಿಜೆಪಿಯು ತಮ್ಮ ಎದುರಾಳಿಗಳನ್ನು ನಿಂದಿಸಲು ತುಕ್ಡೆಗ್ಯಾಂಗ್ ಎಂಬ ಪದವನ್ನು ಬಳಸುತ್ತದೆ. ನಿಜವಾದ ಟೂಲ್ ಕಿಟ್ ರಾಜಕಾರಣ ಅಥವಾ ಪ್ಯಾಕೇಜ್ ರಾಜಕಾರಣ ಮಾಡುತ್ತಿರುವ ಬಿಜೆಪಿಗೆ ಸಂಕಷ್ಟ ಬಂದಾಗಲೆಲ್ಲ ‘ತುಕ್ಡೆ ಗ್ಯಾಂಗು’ ಎಂಬಂತಹ ಮಾಯಾವಿ ಪದಗಳನ್ನು ಪ್ಯಾಕೇಜಿನಂತೆ ಒಬ್ಬರಾದ ಮೇಲೆ ಒಬ್ಬರು ಬಳಸುತ್ತಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಬುಧವಾರ ತೀರ್ಥಹಳ್ಳಿಯಲ್ಲಿ ಹೇಳಿದ್ದಾರೆ.

“ಪಠ್ಯ ಪುಸ್ತಕ ಪರಿಷ್ಕರಣೆ ಪ್ರಕರಣದಿಂದ ಕಂಗೆಟ್ಟಿರುವ ಸರ್ಕಾರ ಮತ್ತು ಅದರ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅವರು ತಾವು ಸಚಿವರೆಂಬ ಜವಾಬ್ಧಾರಿಯನ್ನು ಮರೆತು ನಾಡೋಜ ಬರಗೂರು ರಾಮಚಂದ್ರಪ್ಪ ಮುಂತಾದ ದಮನಿತ ವರ್ಗಗಳ ಧ್ವನಿಗಳನ್ನು ಅವಮಾನಿಸಬೇಕೆಂದೆ ‘ತುಕ್ಡೆ ಗ್ಯಾಂಗ್’ ನವರು ಎಂದು ಅವಮಾನಿಸಿದ್ದಾರೆ” ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ರೋಹಿತ್ ಚಕ್ರತೀರ್ಥ ಎಂಬ ರೋಗಿಷ್ಠ ಮನಸ್ಥಿತಿಯ ಪಠ್ಯ ಪುಸ್ತಕ ಪರಿಷ್ಕರಣೆ ಸಮಿತಿಯು, ಉಸಿರಾಡುತ್ತಿರುವ ಜೀವಿಗಳಲ್ಲಿ ಬ್ರಾಹ್ಮಣರು ಶ್ರೇಷ್ಠರು, ಬ್ರಾಹ್ಮಣರಲ್ಲಿ ಮಾಧ್ವರು ಶ್ರೇಷ್ಠರು ಎಂಬ ನಿಲುವಿನಲ್ಲಿ ಪಾಠಗಳನ್ನು ಮಕ್ಕಳಿಗೆ ಕಲಿಸಲು ಶಿಫಾರಸ್ಸು ಮಾಡಿದೆ. ಸರ್ಕಾರ ಇಂಥ ಕೆಟ್ಟ ಮನುಷ್ಯ ವಿರೋಧಿ ನಿಲುವನ್ನು ಮಕ್ಕಳಿಗೆ ಕಲಿಸಲು ಹೊರಟಿದೆ. ಇದರ ಮೂಲಕ ಶೂದ್ರ-ದಲಿತ-ಮಹಿಳೆಯರಿರುವ 98% ರಷ್ಟು ಜನರನ್ನು ದಮನಿಸಲು ಹೊರಟಿದ್ದಾರೆ” ಎಂದು ವಿಪಕ್ಷ ನಾಯಕ ತಿಳಿಸಿದ್ದಾರೆ.

ಇದನ್ನೂ ಓದಿ: ಪಠ್ಯಪುಸ್ತಕ ಹಗರಣ: ಖ್ಯಾತ ಇತಿಹಾಸಗಾರ್ತಿ ರೋಮಿಳ ಥಾಪರ್‌‌ ಸೇರಿದಂತೆ ತಜ್ಞರ ಆಕ್ಷೇಪ

“ಬುದ್ಧ, ಮಹಾವೀರ, ಬಸವಣ್ಣ, ಕನಕದಾಸರು, ನಾರಾಯಣ ಗುರುಗಳು, ಸಾವಿತ್ರಿ ಫುಲೆ, ಅಂಬೇಡ್ಕರ್, ಕುವೆಂಪು, ಉತ್ತರ ಕರ್ನಾಟಕದ ಕವಿ ಸಾಹಿತಿಗಳು, ಹೆಮ್ಮೆಯ ನಾಡಗೀತೆ, ಮನುವಾದ ವಿರೋಧಿ ಭಕ್ತಿ ಪಂಥ, ದೇವನೂರ ಮಹಾದೇವ ಮುಂತಾದ ಶೂದ್ರ-ದಲಿತ ಬರೆಹಗಾರರು ಹೀಗೆ ಎಲ್ಲರನ್ನೂ ಅವಮಾನಿಸಿ, ನಿರ್ಲಕ್ಷಿಸಿ ಶ್ರಮ ವಿರೋಧಿಯಾದ, ಕುವೆಂಪು ಅವರು ಹೇಳಿದ ಹಾಗೆ ಉತ್ಪಾದಕ ವರ್ಗದವರನ್ನು ನಿರ್ಲಕ್ಷಿಸಿ, ಕೇವಲ ಸಂಗ್ರಾಹಕ ವರ್ಗದ ಜನರು ರಚಿಸಿದ ಜೊಳ್ಳನ್ನು ಮಕ್ಕಳಿಗೆ ಕಲಿಸಲು ಹೊರಟಿದ್ದಾರೆ” ಎಂದು ಅವರು ಆರೋಪಿಸಿದ್ದಾರೆ.

“ಇದನ್ನು ಪ್ರಶ್ನಿಸಿ ನಾಡಿನಾದ್ಯಂತ ಸ್ವಾಮೀಜಿಗಳು, ಗುರು ಹಿರಿಯರು, ಜನ ಸಾಮಾನ್ಯರು, ವಿದ್ವಾಂಸರು, ಜನಪರರು ಪ್ರತಿಭಟನೆಗೆ ಇಳಿದಿದ್ದಾರೆ. ಪ್ರತಿಭಟನೆಯನ್ನು ಕಂಡು ಕಂಗೆಟ್ಟು ಕೂತಿರುವ ಬಿಜೆಪಿಯ ಕೆಲವು ಶೂದ್ರ ಹಾಗೂ ಅಗ್ರಹಾರದ ಗೇಟ್‍ಕೀಪರುಗಳಾದವರು ಸೇರಿದಂತೆ, ಹಲವು ‘ತುಕ್ಡೆ ಗ್ಯಾಂಗ್’ನವರು, ರಾಷ್ಟ್ರೀಯ ಹಿತಾಸಕ್ತಿಗಾಗಿ ಇದೆಲ್ಲ ಸಹಿಸಿಕೊಳ್ಳಿ ಎಂದು ಹೇಳುತ್ತಿದ್ದಾರೆ”

“ಹಾಗಿದ್ದರೆ ನಿಜವಾದ ತುಕ್ಡೆ ಗ್ಯಾಂಗ್‍ನವರು ಯಾರು? ಎಂದು ಸ್ವಲ್ಪ ಮೆದುಳಿರುವವರು ಯೋಚಿಸಿದರೆ ಅರ್ಥವಾಗುತ್ತದೆ. ಬಿಜೆಪಿಯಲ್ಲಿರುವವರು ಮತ್ತು ಬಿಜೆಪಿಯ ಸಿದ್ಧಾಂತವನ್ನು ಹುಟ್ಟಿಸಿದವರೆ ತುಕ್ಡೆ ಗ್ಯಾಂಗಿನ ಜನ. ಯಾರು ತುಕ್ಡೆ ಗ್ಯಾಂಗನವರು ಹೇಳಿ ಬಿಜೆಪಿಗರೆ?” ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಇದನ್ನೂ ಓದಿ: ಪಠ್ಯಪುಸ್ತಕ ಹಗರಣ: ಮಾಜಿ ಪ್ರಧಾನಿ ಹೆಚ್‌.ಡಿ. ದೇವೇಗೌಡರೂ ಟಾರ್ಗೆಟ್‌?

“ಜಗತ್ತಿನ ಶ್ರೇಷ್ಠ ಸಂಸ್ಕೃತಿಯಾಗಿದ್ದ, ದ್ರಾವಿಡರೆ ನಿರ್ಮಿಸಿದ್ದ ಸಿಂಧೂ ನಾಗರಿಕತೆಯನ್ನು ಧ್ವಂಸ ಮಾಡಿದ ಆರ್ಯರು, ವಿರಾಟ್ ಪುರುಷನ ತಲೆಯಿಂದ ಬ್ರಾಹ್ಮಣ ಹುಟ್ಟಿದ, ಪಾದಗಳಿಂದ ಶೂದ್ರರು ಹುಟ್ಟಿದರು ಎಂದು ಬರೆದು ಅದನ್ನೆ ಕಾನೂನು ಮಾಡಿ ಜನರನ್ನು ಶಾಶ್ವತವಾಗಿ ಒಡೆದು ಹಾಕಿದ ಸಿದ್ಧಾಂತದವರು ತುಕ್ಡೆ ಗ್ಯಾಂಗಿನವರಲ್ಲವೆ?” ಎಂದು ಅವರು ಪ್ರಶ್ನಿಸಿದ್ದಾರೆ.

“ಇಂದಿನ ತಳಿವಿಜ್ಞಾನ ಹೇಳುತ್ತಿರುವ ಪ್ರಕಾರ 2500 ವರ್ಷಗಳ ಹಿಂದೆ ಅಮಾನುಷವಾದ ಜಾತಿ ವ್ಯವಸ್ಥೆಯನ್ನು ಹುಟ್ಟು ಹಾಕಿ, ವೃತ್ತಿ, ಹುಟ್ಟುಗಳ ಮೇಲೆ ಮನುಷ್ಯ ಸಮುದಾಯಗಳನ್ನು ಒಡೆದು ಹಾಕಿ ಭಾರತದಲ್ಲಿ ನರಕದಂತಹ ಸಮಸ್ಯೆಗಳನ್ನು ಸೃಷ್ಟಿ ಮಾಡಿದವರು ತುಕ್ಡೆ ಗ್ಯಾಂಗಿನವರಲ್ಲವೆ?”

“ನಾಗಪುರದ ತಮ್ಮ ಕಛೇರಿಯ ಮೇಲೆ ಇತ್ತೀಚಿನವರೆಗೂ ರಾಷ್ಟ್ರಧ್ವಜವನ್ನು ಹಾರಿಸದೆ ನಿರ್ಲಕ್ಷ್ಯ ಮಾಡಿದವರು ತುಕ್ಡೆ ಗ್ಯಾಂಗಿನವರಲ್ಲವೆ?”

“ಸಂವಿಧಾನದ ಆಶಯಗಳನ್ನು ಗಾಳಿಗೆ ತೂರಿ ಮನುವಾದವನ್ನು ಜಾರಿಗೆ ತರಲು ನಿರಂತರ ಪ್ರಯತ್ನಿಸುತ್ತಿರುವವರು ತುಕ್ಡೆ ಗ್ಯಾಂಗಿನವರಲ್ಲವೆ? ಗಾಂಧೀಜಿಯರನ್ನು ಕೊಂದ ಗೋಡ್ಸೆಯನ್ನು ಆರಾಧಿಸುವ ಸಂಸ್ಕೃತಿಯನ್ನು ಹುಟ್ಟು ಹಾಕಿದವರು ತುಕ್ಡೆ ಗ್ಯಾಂಗಿನವರಲ್ಲವೆ?”

ಇದನ್ನೂ ಓದಿ: ಪಠ್ಯಪುಸ್ತಕ ಹಗರಣ ವಿರೋಧಿಸಿ ಜೂನ್‌‌ 18ರ ಶನಿವಾರ ನಡೆಯುವ ಬೃಹತ್‌ ರ್‍ಯಾಲಿಯಲ್ಲಿ ಮಾಜಿ ಪ್ರಧಾನಿ ಹೆಚ್‌.ಡಿ. ದೇವೇಗೌಡ ಭಾಗಿ

“ಇಟಲಿಯ ಮುಸಲೋನಿಯಿಂದ ಫ್ಯಾಸಿಸಂ ಅನ್ನು ಕಲಿತು ಬಂದ ಮೂಂಜೆಯವರು ತಮ್ಮ ಶಿಷ್ಯ ಹೆಡಗೆವಾರ್ ಮೂಲಕ ಆರ್‌ಎಸ್‍ಎಸ್ ಅನ್ನು ಸ್ಥಾಪಿಸಿ ಒಂದು ವರ್ಗದ ಹಿತಾಸಕ್ತಿಯನ್ನು ಪೊರೆಯಲು ಕಂಕಣ ತೊಟ್ಟಿದ್ದು ತುಕ್ಡೆವಾದವಲ್ಲವೆ?”

“ಹಿಟ್ಲಟರನನ್ನು ರಾಕ್ಷಸ ಎಂದೂ ಅವನ ಸಿದ್ಧಾಂತವನ್ನು ದುಷ್ಟ, ಸೈತಾನ ಸಿದ್ಧಾಂತ ಎಂದು ತೀರ್ಮಾನಿಸಿ ಅದನ್ನು ಇಡೀ ಯುರೋಪಿನಿಂದಲೆ ಹೊಡೆದೋಡಿಸುತ್ತಿದ್ದರೂ ಆರ್‌‌ಎಸ್‍ಎಸ್ ಮಾತ್ರ ಹಿಟ್ಲರನ ಯೂನಿಫಾರ್ಮು, ಲಾಂಛನ ಇತ್ಯಾದಿಗಳನ್ನು ಹೊತ್ತುಕೊಂಡು ಮೆರೆಯುತ್ತಿರುವುದು, ತಮ್ಮ ಮೆದುಳು, ಹೃದಯ ಎಲ್ಲವೂ ಇಟಲಿ, ಜರ್ಮನಿಗಳಲ್ಲಿ ಇದ್ದರೂ ಸಹ ಸುಳ್ಳು ಸುಳ್ಳೆ ಭಾರತೀಯರು ಎಂದು ಕರೆದುಕೊಳ್ಳುತ್ತಿರುವ ಈ ಜನರ ವಾದ ತುಕ್ಡೆವಾದವಲ್ಲವೆ?”

“ಮನುಷ್ಯ ಕಲ್ಯಾಣಕ್ಕಾಗಿ ದುಡಿದ ಬುದ್ಧ, ಮಹಾವೀರ, ಬಸವಣ್ಣ, ಕನಕದಾಸ, ನಾರಾಯಣಗುರು, ಅಂಬೇಡ್ಕರ್, ಕುವೆಂಪು ಮುಂತಾದ ಮಹನೀಯರನ್ನು ಅವಮಾನಿಸಿ, ನಿರ್ಲಕ್ಷಿಸಿರುವ ಮನುವಾದಿ ಸಿದ್ಧಾಂತದವರು ಹಾಗೂ ಒಂದು ಗುಂಪು ಮಾತ್ರ ಶ್ರೇಷ್ಠ ಉಳಿದವರೆಲ್ಲ ನಿಕೃಷ್ಟರು ಎಂದು ಭಾವಿಸಿ ಪಠ್ಯ ಪುಸ್ತಕ ಮಾಡಿರುವ ಸಿದ್ಧಾಂತದವರು ತುಕ್ಡೆ ಗ್ಯಾಂಗಿನವರಲ್ಲವೆ?. ಒಂದು ಗುಂಪಿನ ಹಿತಾಸಕ್ತಿಯನ್ನು ರಾಷ್ಟ್ರೀಯ ಹಿತಾಸಕ್ತಿ ಎಂದು ಬಿಂಬಿಸುತ್ತಿರುವ ಕೆಟ್ಟ ಸಿದ್ಧಾಂತದ ಜನರು ತುಕ್ಡೆ ಗ್ಯಾಂಗಿನವರಲ್ಲವೆ?.

ಇದನ್ನೂ ಓದಿ: ಪಠ್ಯಪುಸ್ತಕ ಹಗರಣ – ‘ಬರಗೂರು ಸಮಿತಿ ಹಿಂದೆ ತುಕ್ಡೆ ಗ್ಯಾಂಗ್‌’: ಸಚಿವ ಬಿಸಿ ನಾಗೇಶ್‌ ವಿವಾದಾತ್ಮಕ ಹೇಳಿಕೆ

“ಮನುಷ್ಯ ವಿರೋಧಿ ಮನುವಾದಿಗಳೆ ಕೇಳಿಸಿಕೊಳ್ಳಿ; ನಮ್ಮದು ಬುದ್ಧ, ಮಹಾವೀರ, ಬಸವಣ್ಣ, ಕನಕದಾಸ, ನಾರಾಯಣ ಗುರು, ಅಂಬೇಡ್ಕರ್, ಕುವೆಂಪು ಮುಂತಾದ ಜಗತ್ತಿನ ಶ್ರೇಷ್ಠ ದಾರ್ಶನಿಕರ ತತ್ವ. ಇಡೀ ಜಗತ್ತಿನಲ್ಲಿ ಶೋಷಿತರು, ದುಃಖಿತರು ಇರಬಾರದು ಎಂದು ಹೇಳಿಕೊಟ್ಟವರು ನಮ್ಮ ನಾಯಕರು”

“ಇವನಾರವನೆನ್ನದೆ ಇವ ನಮ್ಮವ ಎಂದು ಹೇಳಿಕೊಟ್ಟ ಅಣ್ಣ ಬಸವಣ್ಣನ ದಾರಿ ನಮ್ಮದು. ಕುಲ ಕುಲವೆಂದು ಹೊಡೆದಾಡಬೇಡಿ ಎಂದ ಕನಕದಾಸರ ಪಥ ನಮ್ಮದು. ‘ಮನುಷ್ಯ ಜಾತಿ ತಾನೊಂದೆ ವಲಂ’ ಎಂದ ಪಂಪ ನಮ್ಮ ನಾಯಕ. ನೀನೆಲ್ಲೆ ಇದ್ದರೂ ನೀನೇರುವ ಮಲೆ ಅದೆ ಸಹ್ಯಾದ್ರಿ, ನೀನ್ ಕುಡಿಯುವ ನೀರ್ ಕಾವೇರಿ ಎಂದ, ನಿರಂಕುಶ ಮತಿಗಳಾಗಿ ಎಂದು ಕರೆಕೊಟ್ಟ ಕುವೆಂಪು ಅವರು ನಮ್ಮ ನಾಯಕರು. ಅಸಮಾನತೆಯನ್ನು ತೊಡೆದು ಹಾಕಿ, ಕಾನೂನಿನ ಮುಂದೆ ಎಲ್ಲರೂ ಸಮಾನರು ಎಂದು ಹೇಳಿದ ಬಾಬಾ ಸಾಹೇಬರು ನಮ್ಮ ಮಾರ್ಗದರ್ಶಕರು”

“ನಾವು ಈ ರಾಷ್ಟ್ರದ ವಾರಸುದಾರರು. ತುಕ್ಡೆ ಗ್ಯಾಂಗು ಎಂದು ಬಾಯಿ ಬಡಿದುಕೊಳ್ಳುವ ಬಿಜೆಪಿಗರೆ ಹೇಳಿ ನಿಮ್ಮ ಸಿದ್ಧಾಂತ ಯಾವುದು? ಯಾರು ನಾಯಕರು?” ಎಂದು ಸಿದ್ದರಾಮಯ್ಯ ಅವರು ಬಿಜೆಪಿಯನ್ನು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ‘ಇದು ಕುಪ್ಪಳ್ಳಿ ಕಹಳೆ’-ಪಠ್ಯಪುಸ್ತಕ ಹಗರಣ ವಿರೋಧಿಸಿ ನಡೆದ ಪ್ರತಿಭಟನಾ ರ್‍ಯಾಲಿಯಲ್ಲಿ ಹಂಸಲೇಖ

“ಮತ್ತೂ ಹೇಳುತ್ತೇನೆ ವ್ಯಾಸ, ವಾಲ್ಮೀಕಿ, ಕಾಳಿದಾಸ ನಮ್ಮವರು. ಇಂದ್ರ ಸಂಸ್ಕೃತಿಯ ವಿರುದ್ಧ ತಿರುಗಿ ಬಿದ್ದ ದೇವರುಗಳಾದ ಶಿವ, ರಾಮ, ಕೃಷ್ಣ ನಮ್ಮವರು. ನಿಜವಾದ ಭಾರತದ ರಾಷ್ಟ್ರ ಧರ್ಮವೆಂದರೆ ಶೂದ್ರ ಧರ್ಮವೆ ಹೊರತು, ನಿಮ್ಮದಲ್ಲ. ನಿಮ್ಮದು ಸೀಮಿತ ಗುಂಪಿನ ಧರ್ಮ ಮಾತ್ರ. ಸೀಮಿತ ಹಿತಾಸಕ್ತಿ ಎಂದಿಗೂ ರಾಷ್ಟ್ರೀಯ ಹಿತಾಸಕ್ತಿಯಾಗುವುದಿಲ್ಲ. ಓಟಿಗಾಗಿ ಮಾತ್ರ ನೀವು ರಾಷ್ಟ್ರೀಯ ಹಿತಾಸಕ್ತಿ ಎನ್ನುತ್ತೀರೆ ಹೊರತು ನಿಜವಾದ ಕಾಳಜಿ ನಿಮ್ಮ ಎದೆಯಲ್ಲಿಲ್ಲ. ಇದು ನಿಧಾನಕ್ಕೆ ಬಹುಸಂಖ್ಯಾತ ಜನರಿಗೆ ಅರ್ಥವಾಗುತ್ತಿದೆ” ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಜಾತಿಯಲ್ಲಿ ನಾವೇ ಶ್ರೇಷ್ಠ ಎಂದು ಹುಚ್ಚುನಾಯಿಗಳ ರರಹ ಅರಚುತ್ತಾ, ತಮ್ಮ ಮೌಢ್ಯಯುಕ್ತ ಜೊಳ್ಳು ಸಂಪ್ರದಾಯ ಗಳನ್ನ,ಬಹುಜನ ಮೂಲನಿವಾಸಿಗಳಾದ ದ್ರಾವಿಡರು ಮತ್ತು ಅವರ ಶ್ರೇಷ್ಠ ದ್ರಾವಿಡ ಸಂಸ್ಕೃತಿಯ ಹೇರಲು ಹೊರಟಿರುವ ಹುಚ್ಚುನಾಯಿಗಳಿಗೆ ಸರಿಯಾಗಿ ಚಾಟಿ ಬೀಸಿದ್ದಾರೆ ಸಿದ್ದರಾಮಯ್ಯ, ಅರ್ಥಮಾಡಿಕೊಳ್ಳದೆ ತಮ್ಮದೇ ಶ್ರೇಷ್ಠ ಎಂದು ವಿತ್ತಂಡ ವಾದ ಮಂಡಿಸುವುದೇ ಆದರೆ ,ಸಂಶಯವಿಲ್ಲ, ನೀವು ಅನಾಗರಿಕ ಪರಕೀಯ ಆರ್ಯರೇ.

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...