Homeಅಂತರಾಷ್ಟ್ರೀಯಥಾಯ್ಲೆಂಡ್: ಗುಂಡಿನ ದಾಳಿಯಲ್ಲಿ 34 ಜನರ ಹತ್ಯೆ, ತನಗೂ ಗುಂಡು ಹಾರಿಸಿಕೊಂಡ ಮಾಜಿ ಪೊಲೀಸ್

ಥಾಯ್ಲೆಂಡ್: ಗುಂಡಿನ ದಾಳಿಯಲ್ಲಿ 34 ಜನರ ಹತ್ಯೆ, ತನಗೂ ಗುಂಡು ಹಾರಿಸಿಕೊಂಡ ಮಾಜಿ ಪೊಲೀಸ್

- Advertisement -
- Advertisement -

ಥಾಯ್ಲೆಂಡ್ ನ ಈಶಾನ್ಯ ಪ್ರಾಂತ್ಯದಲ್ಲಿನ ಮಕ್ಕಳ ಆರೈಕೆ ಕೇಂದ್ರಕ್ಕೆ ನುಗ್ಗಿದ ಮಾಜಿ ಪೊಲೀಸ್ ಮನಬಂದಂತೆ ಗುಂಡು ಹಾರಿಸಿ 22 ಮಕ್ಕಳು ಸೇರಿದಂತೆ 34 ಜನರನ್ನು ಹತ್ಯೆಗೈದಿದ್ದಾನೆ. ಅಲ್ಲದೆ ತನ್ನ ಹೆಂಡಂತಿ ಮಕ್ಕಳನ್ನು ಕೊಂದು, ತನಗೂ ಗುಂಡು ಹಾರಿಸಿಕೊಂಡು ಸಾವಿಗೆ ಶರಣಾಗಿದ್ದಾನೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಕಳೆದ ವರ್ಷ ಪೊಲೀಸ್ ಕೆಲಸದಿಂದ ಹೊರಬಂದಿದ್ದ ವ್ಯಕ್ತಿಯು ಇಂದು ಮಧ್ಯಾಹ್ನ ಊಟದ ಸಮಯದಲ್ಲಿ ಬಂದೂಕು ಧರಿಸಿ ಮಕ್ಕಳ ಹಾರೈಕೆ ಕೇಂದ್ರಕ್ಕೆ ನುಗ್ಗಿದ್ದಾನೆ. ಮೊದಲು 8 ತಿಂಗಳ ಗರ್ಭಿಣಿ ಶಿಕ್ಷಕಿ ಸೇರಿ 5-6 ಸಿಬ್ಬಂದಿಗೆ ಗುಂಡು ಹಾರಿಸಿ ಕೊಂದಿದ್ದಾನೆ. ಆನಂತರ 2 ವರ್ಷದ ಮಕ್ಕಳ ಮೇಲೂ ಗುಂಡಿನ ಮಳೆಗೆರೆಯಲಾಗಿದೆ ಎನ್ನಲಾಗಿದೆ.

ಉತೈ ಸಾವನ್ ಈಶಾನ್ಯ ಪ್ರಾಂತ್ಯದ ನಾಂಗ್ ಬುವಾ ಲ್ಯಾಂಫುದಲ್ಲಿನ ಮಕ್ಕಳ ಹಾರೈಕೆ ಕೇಂದ್ರದಲ್ಲಿ ಈ ಅಮಾನುಷ ಘಟನೆ ನಡೆದಿದೆ. ಘಟನೆ ಕುರಿತು ಥಾಯ್ಲೆಂಡ್ ಪ್ರಧಾನಿ ಪ್ರಯುತ್ ಚಾನ್ ಒಚಾ ಕಳವಳ ವ್ಯಕ್ತಪಡಿಸಿದ್ದಾರೆ.

ಮೊದಲು ಆರೋಪಿಯ ಪತ್ತೆಗಾಗಿ ಹಲವು ತಂಡಗಳನ್ನ ರಚಿಸಲಾಗಿತ್ತು. ಆದರೆ ಆರೋಪಿ ಪಾನ್ಯಾ ಕಾಮ್ರಾಬ್ ಎಂಬಾತ ತನಗೆ ಗುಂಡಿಕ್ಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ನಂತರ ತಿಳಿದುಬಂದಿದೆ.

ಮೆಕ್ಸಿಕೊದಲ್ಲಿ ಗುಂಡಿನ ದಾಳಿ: ಮೇಯರ್ ಸೇರಿ 18 ಸಾವು

ಮೆಕ್ಸಿಕೊದ ಗೆರೆರೊ ಪ್ರಾಂತ್ಯದಲ್ಲಿ ಅಪರಿಚಿತ ಮುಸುಕುಧಾರಿ ವ್ಯಕ್ತಿಗಳು ನಡೆಸಿದ ಗುಂಡಿನ ದಾಳಿಯಲ್ಲಿ ಅಲ್ಲಿನ ಮೇಯರ್, ಅವರ ತಂದೆ ಸೇರಿ 18ರನ್ನು ಹತ್ಯೆಗೈಯ್ಯಲಾಗಿದೆ.

ಸ್ಯಾನ್ ಮಿಗುಲ್ ಟೊಟೊಲ್ಯಾಪನ್ ನಗರದ ಮೇಯರ್ ಕೊನ್ರಾಡೊ ಮೆಂಡೊಜಾ ಮತ್ತು ಅವರ ತಂದೆ ಹಾಗೂ ಮಾಜಿ ಮೇಯರ್ ಅವರನ್ನು ಸಹ ಕೊಲೆಗೈಯಲಾಗಿದೆ. ಕೊಲೆ ಹಿಂದಿನ ಕಾರಣ ಇನ್ನೂ ತಿಳಿದುಬಂದಿಲ್ಲ.

ಇದನ್ನೂ ಓದಿ: ಭಾರತ ಐಕ್ಯತಾ ಯಾತ್ರೆ ವಿರುದ್ಧ ಆಕ್ಷೇಪಾರ್ಹ ಸುದ್ದಿ ರೂಪದ ಜಾಹೀರಾತು ನೀಡಿದ ಬಿಜೆಪಿ: ತೀವ್ರ ಖಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಈ ರೀತಿಯ ಘಟನೆಗಳನ್ನು ಓದಿದ ಮೇಲೆ ಭಯ, ಆತಂಕವಾಗುತ್ತಿದೆ. ಸತ್ತವರಿಗಾಗಿ ಮನಸು ಮಿಡಿಯುತ್ತಿದೆ. ಯಾಕೆ ಈ ತರದ ಪೈಶಾಚಿಕ ಕೃತ್ಯಗಳು ನಡೆಯುತ್ತಿವೆ ಎಂಬುದು ಸಹ ತಿಳಿಯುತ್ತಿಲ್ಲ. ಇಂತಹ ಕೃತ್ಯವೆಸಗಲು ವ್ಯಕ್ತಿಯ ಮಾನಸಿಕ ಸ್ಥಿತಿ ಏನಾದರೂ ಕಾರಣವಿರಬಹುದೆ? ಯಾಕೆ, ಆತ ಈ ತರ ಹಸುಗೂಸುಗಳನ್ನು ಕೊಂದನು? ದೇವರಲ್ಲಿ ನಂಬಿಕೆ ಕುಸಿದರೆ ಪರವಾಗಿಲ್ಲ. ಸಂಬಂಧಗಳಲ್ಲಿ, ಮಾನವೀಯತೆಯಲ್ಲಿ ನಂಬಿಕೆಗಳು ಕುಸಿದಾಗ ಇಂತಹ ಕೃತ್ಯಗಳು ನಡೆಯುತ್ತವೇನೋ ಅನಿಸುತ್ತಿದೆ. ಸದ್ಯದ ಪರಿಸ್ಥಿತಿಯಲ್ಲಿ ಯಾರೊಬ್ಬರ ಬಗ್ಗೆಯೂ ಕಾಳಜಿ ತೆಗೆದುಕೊಳ್ಳಲಾಗದಷ್ಟು ಪ್ರಪಂಚದ ಶಿಕ್ಷಣ ವ್ಯವಸ್ಥೆ ನಿರ್ಮಾಣವಾಗಿಬಿಟ್ಟಿದೆ. ಹಾಗಾಗಿ ತಾವುಗಳು ಈ ಸುದ್ಧಿಯನ್ನು ಪ್ರಕಟಿಸಿದ ಮೇಲೆ ಆತನ ಮಾನಸಿಕ ಸ್ಥಿತಿ ಕೌಟಂಬಿಕ ಸ್ಥಿತಿ ಬಗ್ಗೆ ವರದಿ ನೀಡಿದರೆ, ನಮ್ಮ ಶಿಕ್ಷಣದ ಗುಣ ಮಟ್ಟದ ಬಗ್ಗೆ ಚಿಂತನೆ ನಡೆಸಿ ಆರೋಗ್ಯಯುಕ್ತ ಸಮಾಜದ ನಿರ್ಮಾಣಕ್ಕೆ ದಾರಿಯಾಗಬಹುದು.

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...