Homeಅಂತರಾಷ್ಟ್ರೀಯಥಾಯ್ಲೆಂಡ್: ಗುಂಡಿನ ದಾಳಿಯಲ್ಲಿ 34 ಜನರ ಹತ್ಯೆ, ತನಗೂ ಗುಂಡು ಹಾರಿಸಿಕೊಂಡ ಮಾಜಿ ಪೊಲೀಸ್

ಥಾಯ್ಲೆಂಡ್: ಗುಂಡಿನ ದಾಳಿಯಲ್ಲಿ 34 ಜನರ ಹತ್ಯೆ, ತನಗೂ ಗುಂಡು ಹಾರಿಸಿಕೊಂಡ ಮಾಜಿ ಪೊಲೀಸ್

- Advertisement -
- Advertisement -

ಥಾಯ್ಲೆಂಡ್ ನ ಈಶಾನ್ಯ ಪ್ರಾಂತ್ಯದಲ್ಲಿನ ಮಕ್ಕಳ ಆರೈಕೆ ಕೇಂದ್ರಕ್ಕೆ ನುಗ್ಗಿದ ಮಾಜಿ ಪೊಲೀಸ್ ಮನಬಂದಂತೆ ಗುಂಡು ಹಾರಿಸಿ 22 ಮಕ್ಕಳು ಸೇರಿದಂತೆ 34 ಜನರನ್ನು ಹತ್ಯೆಗೈದಿದ್ದಾನೆ. ಅಲ್ಲದೆ ತನ್ನ ಹೆಂಡಂತಿ ಮಕ್ಕಳನ್ನು ಕೊಂದು, ತನಗೂ ಗುಂಡು ಹಾರಿಸಿಕೊಂಡು ಸಾವಿಗೆ ಶರಣಾಗಿದ್ದಾನೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಕಳೆದ ವರ್ಷ ಪೊಲೀಸ್ ಕೆಲಸದಿಂದ ಹೊರಬಂದಿದ್ದ ವ್ಯಕ್ತಿಯು ಇಂದು ಮಧ್ಯಾಹ್ನ ಊಟದ ಸಮಯದಲ್ಲಿ ಬಂದೂಕು ಧರಿಸಿ ಮಕ್ಕಳ ಹಾರೈಕೆ ಕೇಂದ್ರಕ್ಕೆ ನುಗ್ಗಿದ್ದಾನೆ. ಮೊದಲು 8 ತಿಂಗಳ ಗರ್ಭಿಣಿ ಶಿಕ್ಷಕಿ ಸೇರಿ 5-6 ಸಿಬ್ಬಂದಿಗೆ ಗುಂಡು ಹಾರಿಸಿ ಕೊಂದಿದ್ದಾನೆ. ಆನಂತರ 2 ವರ್ಷದ ಮಕ್ಕಳ ಮೇಲೂ ಗುಂಡಿನ ಮಳೆಗೆರೆಯಲಾಗಿದೆ ಎನ್ನಲಾಗಿದೆ.

ಉತೈ ಸಾವನ್ ಈಶಾನ್ಯ ಪ್ರಾಂತ್ಯದ ನಾಂಗ್ ಬುವಾ ಲ್ಯಾಂಫುದಲ್ಲಿನ ಮಕ್ಕಳ ಹಾರೈಕೆ ಕೇಂದ್ರದಲ್ಲಿ ಈ ಅಮಾನುಷ ಘಟನೆ ನಡೆದಿದೆ. ಘಟನೆ ಕುರಿತು ಥಾಯ್ಲೆಂಡ್ ಪ್ರಧಾನಿ ಪ್ರಯುತ್ ಚಾನ್ ಒಚಾ ಕಳವಳ ವ್ಯಕ್ತಪಡಿಸಿದ್ದಾರೆ.

ಮೊದಲು ಆರೋಪಿಯ ಪತ್ತೆಗಾಗಿ ಹಲವು ತಂಡಗಳನ್ನ ರಚಿಸಲಾಗಿತ್ತು. ಆದರೆ ಆರೋಪಿ ಪಾನ್ಯಾ ಕಾಮ್ರಾಬ್ ಎಂಬಾತ ತನಗೆ ಗುಂಡಿಕ್ಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ನಂತರ ತಿಳಿದುಬಂದಿದೆ.

ಮೆಕ್ಸಿಕೊದಲ್ಲಿ ಗುಂಡಿನ ದಾಳಿ: ಮೇಯರ್ ಸೇರಿ 18 ಸಾವು

ಮೆಕ್ಸಿಕೊದ ಗೆರೆರೊ ಪ್ರಾಂತ್ಯದಲ್ಲಿ ಅಪರಿಚಿತ ಮುಸುಕುಧಾರಿ ವ್ಯಕ್ತಿಗಳು ನಡೆಸಿದ ಗುಂಡಿನ ದಾಳಿಯಲ್ಲಿ ಅಲ್ಲಿನ ಮೇಯರ್, ಅವರ ತಂದೆ ಸೇರಿ 18ರನ್ನು ಹತ್ಯೆಗೈಯ್ಯಲಾಗಿದೆ.

ಸ್ಯಾನ್ ಮಿಗುಲ್ ಟೊಟೊಲ್ಯಾಪನ್ ನಗರದ ಮೇಯರ್ ಕೊನ್ರಾಡೊ ಮೆಂಡೊಜಾ ಮತ್ತು ಅವರ ತಂದೆ ಹಾಗೂ ಮಾಜಿ ಮೇಯರ್ ಅವರನ್ನು ಸಹ ಕೊಲೆಗೈಯಲಾಗಿದೆ. ಕೊಲೆ ಹಿಂದಿನ ಕಾರಣ ಇನ್ನೂ ತಿಳಿದುಬಂದಿಲ್ಲ.

ಇದನ್ನೂ ಓದಿ: ಭಾರತ ಐಕ್ಯತಾ ಯಾತ್ರೆ ವಿರುದ್ಧ ಆಕ್ಷೇಪಾರ್ಹ ಸುದ್ದಿ ರೂಪದ ಜಾಹೀರಾತು ನೀಡಿದ ಬಿಜೆಪಿ: ತೀವ್ರ ಖಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಈ ರೀತಿಯ ಘಟನೆಗಳನ್ನು ಓದಿದ ಮೇಲೆ ಭಯ, ಆತಂಕವಾಗುತ್ತಿದೆ. ಸತ್ತವರಿಗಾಗಿ ಮನಸು ಮಿಡಿಯುತ್ತಿದೆ. ಯಾಕೆ ಈ ತರದ ಪೈಶಾಚಿಕ ಕೃತ್ಯಗಳು ನಡೆಯುತ್ತಿವೆ ಎಂಬುದು ಸಹ ತಿಳಿಯುತ್ತಿಲ್ಲ. ಇಂತಹ ಕೃತ್ಯವೆಸಗಲು ವ್ಯಕ್ತಿಯ ಮಾನಸಿಕ ಸ್ಥಿತಿ ಏನಾದರೂ ಕಾರಣವಿರಬಹುದೆ? ಯಾಕೆ, ಆತ ಈ ತರ ಹಸುಗೂಸುಗಳನ್ನು ಕೊಂದನು? ದೇವರಲ್ಲಿ ನಂಬಿಕೆ ಕುಸಿದರೆ ಪರವಾಗಿಲ್ಲ. ಸಂಬಂಧಗಳಲ್ಲಿ, ಮಾನವೀಯತೆಯಲ್ಲಿ ನಂಬಿಕೆಗಳು ಕುಸಿದಾಗ ಇಂತಹ ಕೃತ್ಯಗಳು ನಡೆಯುತ್ತವೇನೋ ಅನಿಸುತ್ತಿದೆ. ಸದ್ಯದ ಪರಿಸ್ಥಿತಿಯಲ್ಲಿ ಯಾರೊಬ್ಬರ ಬಗ್ಗೆಯೂ ಕಾಳಜಿ ತೆಗೆದುಕೊಳ್ಳಲಾಗದಷ್ಟು ಪ್ರಪಂಚದ ಶಿಕ್ಷಣ ವ್ಯವಸ್ಥೆ ನಿರ್ಮಾಣವಾಗಿಬಿಟ್ಟಿದೆ. ಹಾಗಾಗಿ ತಾವುಗಳು ಈ ಸುದ್ಧಿಯನ್ನು ಪ್ರಕಟಿಸಿದ ಮೇಲೆ ಆತನ ಮಾನಸಿಕ ಸ್ಥಿತಿ ಕೌಟಂಬಿಕ ಸ್ಥಿತಿ ಬಗ್ಗೆ ವರದಿ ನೀಡಿದರೆ, ನಮ್ಮ ಶಿಕ್ಷಣದ ಗುಣ ಮಟ್ಟದ ಬಗ್ಗೆ ಚಿಂತನೆ ನಡೆಸಿ ಆರೋಗ್ಯಯುಕ್ತ ಸಮಾಜದ ನಿರ್ಮಾಣಕ್ಕೆ ದಾರಿಯಾಗಬಹುದು.

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...