Homeಅಂತರಾಷ್ಟ್ರೀಯಥಾಯ್ಲೆಂಡ್: ಗುಂಡಿನ ದಾಳಿಯಲ್ಲಿ 34 ಜನರ ಹತ್ಯೆ, ತನಗೂ ಗುಂಡು ಹಾರಿಸಿಕೊಂಡ ಮಾಜಿ ಪೊಲೀಸ್

ಥಾಯ್ಲೆಂಡ್: ಗುಂಡಿನ ದಾಳಿಯಲ್ಲಿ 34 ಜನರ ಹತ್ಯೆ, ತನಗೂ ಗುಂಡು ಹಾರಿಸಿಕೊಂಡ ಮಾಜಿ ಪೊಲೀಸ್

- Advertisement -
- Advertisement -

ಥಾಯ್ಲೆಂಡ್ ನ ಈಶಾನ್ಯ ಪ್ರಾಂತ್ಯದಲ್ಲಿನ ಮಕ್ಕಳ ಆರೈಕೆ ಕೇಂದ್ರಕ್ಕೆ ನುಗ್ಗಿದ ಮಾಜಿ ಪೊಲೀಸ್ ಮನಬಂದಂತೆ ಗುಂಡು ಹಾರಿಸಿ 22 ಮಕ್ಕಳು ಸೇರಿದಂತೆ 34 ಜನರನ್ನು ಹತ್ಯೆಗೈದಿದ್ದಾನೆ. ಅಲ್ಲದೆ ತನ್ನ ಹೆಂಡಂತಿ ಮಕ್ಕಳನ್ನು ಕೊಂದು, ತನಗೂ ಗುಂಡು ಹಾರಿಸಿಕೊಂಡು ಸಾವಿಗೆ ಶರಣಾಗಿದ್ದಾನೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಕಳೆದ ವರ್ಷ ಪೊಲೀಸ್ ಕೆಲಸದಿಂದ ಹೊರಬಂದಿದ್ದ ವ್ಯಕ್ತಿಯು ಇಂದು ಮಧ್ಯಾಹ್ನ ಊಟದ ಸಮಯದಲ್ಲಿ ಬಂದೂಕು ಧರಿಸಿ ಮಕ್ಕಳ ಹಾರೈಕೆ ಕೇಂದ್ರಕ್ಕೆ ನುಗ್ಗಿದ್ದಾನೆ. ಮೊದಲು 8 ತಿಂಗಳ ಗರ್ಭಿಣಿ ಶಿಕ್ಷಕಿ ಸೇರಿ 5-6 ಸಿಬ್ಬಂದಿಗೆ ಗುಂಡು ಹಾರಿಸಿ ಕೊಂದಿದ್ದಾನೆ. ಆನಂತರ 2 ವರ್ಷದ ಮಕ್ಕಳ ಮೇಲೂ ಗುಂಡಿನ ಮಳೆಗೆರೆಯಲಾಗಿದೆ ಎನ್ನಲಾಗಿದೆ.

ಉತೈ ಸಾವನ್ ಈಶಾನ್ಯ ಪ್ರಾಂತ್ಯದ ನಾಂಗ್ ಬುವಾ ಲ್ಯಾಂಫುದಲ್ಲಿನ ಮಕ್ಕಳ ಹಾರೈಕೆ ಕೇಂದ್ರದಲ್ಲಿ ಈ ಅಮಾನುಷ ಘಟನೆ ನಡೆದಿದೆ. ಘಟನೆ ಕುರಿತು ಥಾಯ್ಲೆಂಡ್ ಪ್ರಧಾನಿ ಪ್ರಯುತ್ ಚಾನ್ ಒಚಾ ಕಳವಳ ವ್ಯಕ್ತಪಡಿಸಿದ್ದಾರೆ.

ಮೊದಲು ಆರೋಪಿಯ ಪತ್ತೆಗಾಗಿ ಹಲವು ತಂಡಗಳನ್ನ ರಚಿಸಲಾಗಿತ್ತು. ಆದರೆ ಆರೋಪಿ ಪಾನ್ಯಾ ಕಾಮ್ರಾಬ್ ಎಂಬಾತ ತನಗೆ ಗುಂಡಿಕ್ಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ನಂತರ ತಿಳಿದುಬಂದಿದೆ.

ಮೆಕ್ಸಿಕೊದಲ್ಲಿ ಗುಂಡಿನ ದಾಳಿ: ಮೇಯರ್ ಸೇರಿ 18 ಸಾವು

ಮೆಕ್ಸಿಕೊದ ಗೆರೆರೊ ಪ್ರಾಂತ್ಯದಲ್ಲಿ ಅಪರಿಚಿತ ಮುಸುಕುಧಾರಿ ವ್ಯಕ್ತಿಗಳು ನಡೆಸಿದ ಗುಂಡಿನ ದಾಳಿಯಲ್ಲಿ ಅಲ್ಲಿನ ಮೇಯರ್, ಅವರ ತಂದೆ ಸೇರಿ 18ರನ್ನು ಹತ್ಯೆಗೈಯ್ಯಲಾಗಿದೆ.

ಸ್ಯಾನ್ ಮಿಗುಲ್ ಟೊಟೊಲ್ಯಾಪನ್ ನಗರದ ಮೇಯರ್ ಕೊನ್ರಾಡೊ ಮೆಂಡೊಜಾ ಮತ್ತು ಅವರ ತಂದೆ ಹಾಗೂ ಮಾಜಿ ಮೇಯರ್ ಅವರನ್ನು ಸಹ ಕೊಲೆಗೈಯಲಾಗಿದೆ. ಕೊಲೆ ಹಿಂದಿನ ಕಾರಣ ಇನ್ನೂ ತಿಳಿದುಬಂದಿಲ್ಲ.

ಇದನ್ನೂ ಓದಿ: ಭಾರತ ಐಕ್ಯತಾ ಯಾತ್ರೆ ವಿರುದ್ಧ ಆಕ್ಷೇಪಾರ್ಹ ಸುದ್ದಿ ರೂಪದ ಜಾಹೀರಾತು ನೀಡಿದ ಬಿಜೆಪಿ: ತೀವ್ರ ಖಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಈ ರೀತಿಯ ಘಟನೆಗಳನ್ನು ಓದಿದ ಮೇಲೆ ಭಯ, ಆತಂಕವಾಗುತ್ತಿದೆ. ಸತ್ತವರಿಗಾಗಿ ಮನಸು ಮಿಡಿಯುತ್ತಿದೆ. ಯಾಕೆ ಈ ತರದ ಪೈಶಾಚಿಕ ಕೃತ್ಯಗಳು ನಡೆಯುತ್ತಿವೆ ಎಂಬುದು ಸಹ ತಿಳಿಯುತ್ತಿಲ್ಲ. ಇಂತಹ ಕೃತ್ಯವೆಸಗಲು ವ್ಯಕ್ತಿಯ ಮಾನಸಿಕ ಸ್ಥಿತಿ ಏನಾದರೂ ಕಾರಣವಿರಬಹುದೆ? ಯಾಕೆ, ಆತ ಈ ತರ ಹಸುಗೂಸುಗಳನ್ನು ಕೊಂದನು? ದೇವರಲ್ಲಿ ನಂಬಿಕೆ ಕುಸಿದರೆ ಪರವಾಗಿಲ್ಲ. ಸಂಬಂಧಗಳಲ್ಲಿ, ಮಾನವೀಯತೆಯಲ್ಲಿ ನಂಬಿಕೆಗಳು ಕುಸಿದಾಗ ಇಂತಹ ಕೃತ್ಯಗಳು ನಡೆಯುತ್ತವೇನೋ ಅನಿಸುತ್ತಿದೆ. ಸದ್ಯದ ಪರಿಸ್ಥಿತಿಯಲ್ಲಿ ಯಾರೊಬ್ಬರ ಬಗ್ಗೆಯೂ ಕಾಳಜಿ ತೆಗೆದುಕೊಳ್ಳಲಾಗದಷ್ಟು ಪ್ರಪಂಚದ ಶಿಕ್ಷಣ ವ್ಯವಸ್ಥೆ ನಿರ್ಮಾಣವಾಗಿಬಿಟ್ಟಿದೆ. ಹಾಗಾಗಿ ತಾವುಗಳು ಈ ಸುದ್ಧಿಯನ್ನು ಪ್ರಕಟಿಸಿದ ಮೇಲೆ ಆತನ ಮಾನಸಿಕ ಸ್ಥಿತಿ ಕೌಟಂಬಿಕ ಸ್ಥಿತಿ ಬಗ್ಗೆ ವರದಿ ನೀಡಿದರೆ, ನಮ್ಮ ಶಿಕ್ಷಣದ ಗುಣ ಮಟ್ಟದ ಬಗ್ಗೆ ಚಿಂತನೆ ನಡೆಸಿ ಆರೋಗ್ಯಯುಕ್ತ ಸಮಾಜದ ನಿರ್ಮಾಣಕ್ಕೆ ದಾರಿಯಾಗಬಹುದು.

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...