Homeಅಂತರಾಷ್ಟ್ರೀಯಬೃಹತ್ ಪ್ರತಿಭಟನೆಗಳ ನಡುವೆ ತುರ್ತು ಪರಿಸ್ಥಿತಿ ಹೇರಿದ ಥೈಲ್ಯಾಂಡ್!

ಬೃಹತ್ ಪ್ರತಿಭಟನೆಗಳ ನಡುವೆ ತುರ್ತು ಪರಿಸ್ಥಿತಿ ಹೇರಿದ ಥೈಲ್ಯಾಂಡ್!

ಥೈಲ್ಯಾಂಡ್ ರಾಜ ಜರ್ಮನಿಯಲ್ಲಿ ವಾಸಿಸುತ್ತಿದ್ದು, ಇತ್ತೀಚೆಗೆ ಕೆಲವು ತಿಂಗಳಿನಿಂದ ಕೇವಲ ಒಂದು ದಿನ ಮಾತ್ರ ದೇಶಕ್ಕೆ ಭೇಟಿ ನೀಡಿದ್ದರು. ಈಗ ಶನಿವಾರ ಬ್ಯಾಂಕಾಕ್‌ಗೆ ಭೇಟಿ ನೀಡಿದ್ದರು.

- Advertisement -
- Advertisement -

ಪ್ರತಿಭಟನಾಕಾರರು ಗುರುವಾರ ಥೈಲ್ಯಾಂಡ್ ಪ್ರಧಾನಮಂತ್ರಿ ಕಛೇರಿಯ ಹೊರಗೆ ಭಾರಿ ಪ್ರಮಾಣದಲ್ಲಿ ಗುಂಪು ಸೇರಿದ್ದರಿಂದ ಮತ್ತು ರಾಜರ ಬೆಂಗಾವಲು ಮೇಲೆ ಮುತ್ತಿಗೆ ಹಾಕಿದ್ದರರಿಂದ ಅಲ್ಲಿನ ಸರ್ಕಾರ ರಾಜ್ಯದಲ್ಲಿ ತುರ್ತು ಪರಿಸ್ಥಿತಿಯನ್ನು ಹೇರಿದೆ. ಪೊಲೀಸರು ಮತ್ತು ಸೈನಿಕರು ವಿದ್ಯಾರ್ಥಿಗಳ ನೇತೃತ್ವದ ಪ್ರತಿಭಟನಾ ಆಂದೋಲನವನ್ನು ದಮನಿಸಲು ಪ್ರತಿಭಟನಾಕಾರರನ್ನು ಚದುರಿಸಿದ್ದಾರೆ.

ಮಾಜಿ ಜುಂಟಾ ನಾಯಕ ಪ್ರಧಾನ ಮಂತ್ರಿ ಪ್ರಯುತ್ ಚಾನ್-ಓಚಾ ಮತ್ತು ಹೊಸ ಸಂವಿಧಾನವನ್ನು ಉಚ್ಚಾಟಿಸಲು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ. ರಾಜ ಮಹಾ ವಾಜಿರಲಾಂಗ್‌ಕಾರ್ನ್‌ನ ರಾಜಪ್ರಭುತ್ವಕ್ಕೆ ಸುಧಾರಣೆಗಳನ್ನೂ ತರಬೇಕೆಂದು ಅವರು ಒತ್ತಾಯಿಸಿದ್ದಾರೆ ಎಂದು ರಾಜ್ಯ ದೂರದರ್ಶನ ವರದಿ ಮಾಡಿದೆ.

ಇದನ್ನೂ ಓದಿ: ಪಕ್ಷಾಂತರದಿಂದ ಆರ್‌ಆರ್ ನಗರ ಉಪಚುನಾವಣೆ: ರಾಜಕೀಯ ದಿಕ್ಕು ಬದಲಿಸುತ್ತಾ?

ಥೈಲ್ಯಾಂಡ್‌ನ ರಾಯಲ್ ಗೆಜೆಟ್ ವೆಬ್‌ಸೈಟ್‌ನಲ್ಲಿ ಪ್ರಕಟವಾದ ಪ್ರಕಟಣೆಯಲ್ಲಿ, ರಾಜ ಮಹಾ ವಾಜಿರಲಾಂಗ್‌ಕಾರ್ನ್ ಅವರ ಕುಟುಂಬದ ಸದಸ್ಯರು ಬರುತ್ತಿದ್ದಾಗ ಪ್ರತಿಭಟನಾಕಾರರು, ಮುತ್ತಿಗೆ ಹಾಕಿದ್ದರಿಂದ ರಾಷ್ಟ್ರೀಯ ಭದ್ರತೆ ಮತ್ತು ಆರ್ಥಿಕ ಪರಿಗಣನೆಗಳ ಕಾರಣದಿಂದಾಗಿ ಈ ತುರ್ತು ಪರಿಸ್ಥಿತಿಯ ಕ್ರಮವನ್ನು ತೆಗೆದುಕೊಳ್ಳಲಾಗಿದೆ ಎಂದು ಸರ್ಕಾರ ಹೇಳಿದೆ.

ಬುಧವಾರ, ಸುಮಾರು 10,000 ಸರ್ಕಾರಿ ವಿರೋಧಿ ಪ್ರತಿಭಟನಾಕಾರರು, ಥಾಯ್ ಸರ್ಕಾರದ ಸ್ಥಾನವಾದ ಸರ್ಕಾರಿ ಭವನಕ್ಕೆ ಮೆರವಣಿಗೆ ಹೊರಟಿದ್ದರು. ನಂತರ ಪ್ರಧಾನಿ ಪ್ರಯುತ್ ಚಾನ್-ಓಚಾ ತುರ್ತು ಪರಿಸ್ಥಿತಿಯನ್ನು ಘೋಷಿಸಿದರು. ಆದರೂ ಪ್ರತಿಭಟನಾಕಾರರು ಪೊಲೀಸ್ ಬ್ಯಾರಿಕೇಡ್‌ಗಳನ್ನು ಭೇದಿಸಿ ಕಟ್ಟಡವನ್ನು ಸುತ್ತುವರೆದು, ಪ್ರಯುತ್ ಚಾನ್-ಓಚಾ ರಾಜೀನಾಮೆ ನೀಡುವಂತೆ ಒತ್ತಾಯಿಸಿದರು.

ಇದನ್ನೂ ಓದಿ: ಆಂಧ್ರ ಮುಖ್ಯಮಂತ್ರಿಯನ್ನು ಹುದ್ದೆಯಿಂದ ಕೆಳಗಿಳಿಸುವಂತೆ ಸುಪ್ರೀಂನಲ್ಲಿ ಅರ್ಜಿ

ಈ ಕ್ರಮಕ್ಕೆ ಸಂಬಂಧಿಸಿದ ಎಲ್ಲಾ ಅಂತರರಾಷ್ಟ್ರೀಯ ಪ್ರಸಾರಗಳನ್ನು “ಟು ವಿಶನ್ಸ್” ಎಂದು ಕರೆಯಲ್ಪಡುವ ಥೈಲ್ಯಾಂಡ್‌ನ ಅತಿದೊಡ್ಡ ಕೇಬಲ್ ಆಪರೇಟರ್ ಸೆನ್ಸಾರ್ ಮಾಡಿರುವುದರಿಂದ ಅದಕ್ಕೆ ಸಂಬಂಧಿಸಿದ ಸುದ್ದಿಗಳು ಜನರಿಗೆ ತಲುಪುತ್ತಿಲ್ಲ.

“ಬ್ಯಾಂಕಾಕ್‌ನಲ್ಲಿ ಅನೇಕ ಗುಂಪುಗಳು ಅಕ್ರಮ ಸಾರ್ವಜನಿಕ ಸಭೆಗಳನ್ನು ಆಹ್ವಾನಿಸಿ ಪ್ರಚೋದನೆ ನೀಡಿವೆ. ರಾಜರ ವಾಹನದ ಮೇಲೆ ಪರಿಣಾಮ ಬೀರುವಂತೆ ವರ್ತಿಸಿದ್ದು, ರಾಷ್ಟ್ರೀಯ ಭದ್ರತೆಗೆ ಧಕ್ಕೆ ತರುವಂತಹ ಕೆಲಸಗಳನ್ನು ಮಾಡಿದೆ. ಹಾಗಾಗಿ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡಿಕೊಳ್ಳಲು ಈ ಪರಿಸ್ಥಿತಿಯನ್ನು ಪರಿಣಾಮಕಾರಿಯಾಗಿ ಮತ್ತು ತ್ವರಿತವಾಗಿ ಕೊನೆಗೊಳಿಸಲು ತುರ್ತು ಪರಿಸ್ಥಿತಿಯನ್ನು ಪರಿಚಯಿಸುವುದು ಅತ್ಯಂತ ಅವಶ್ಯಕವಾಗಿದೆ” ಎಂದು ರಾಜ್ಯ ದೂರದರ್ಶನದಲ್ಲಿ ಪ್ರಕಟಣೆ ಹೇಳಿದೆ.

ಇದನ್ನೂ ಓದಿ: ಗೌರಿ ಲಂಕೇಶ್ ಹತ್ಯೆ ಪ್ರಕರಣ ಸದ್ಯ ಯಾವ ಹಂತದಲ್ಲಿದೆ?

ಕಳೆದ 3 ತಿಂಗಳಿನಿಂದ ನಡೆಯುತ್ತಿರುವ ಸರ್ಕಾರದ ವಿರುದ್ಧದ ರ್ಯಾಲಿಗಳು ಉಲ್ಬಣಗೊಂಡನಂತರ ಸರ್ಕಾರ ಈ ಕ್ರಮವನ್ನು ಕೈಗೊಂಡು, ಕೆಲವು ಪ್ರತಿಭಟನಾ ನಾಯಕರನ್ನು ಇಂದು ಬಂಧಿಸಿದೆ.

ಥೈಲ್ಯಾಂಡ್ ರಾಜ ಜರ್ಮನಿಯಲ್ಲಿ ವಾಸಿಸುತ್ತಿದ್ದು, ಇತ್ತೀಚೆಗೆ ಕೆಲವು ತಿಂಗಳಿನಿಂದ ಕೇವಲ ಒಂದು ದಿನ ಮಾತ್ರ ದೇಶಕ್ಕೆ ಭೇಟಿ ನೀಡಿದ್ದರು. ಈಗ ಶನಿವಾರ ಬ್ಯಾಂಕಾಕ್‌ಗೆ ಭೇಟಿ ನೀಡಿದ್ದರು. ಆದರೆ ಅಲ್ಲಿನ ಪ್ರಜೆಗಳು ರಾಜ ಧೀರ್ಘಾವಧಿಯವರೆಗೆ ಇಲ್ಲಿಯೇ ಇರಬೇಕು ಎಂದು ಒತ್ತಾಯಿಸಿದ್ದಾರೆ.


ಇದನ್ನೂ ಓದಿ: ಉಪಚುನಾವಣೆ: 2 ವರ್ಷದಲ್ಲಿ BJP ಅಭ್ಯರ್ಥಿ ಮುನಿರತ್ನ ಆಸ್ತಿ ದುಪ್ಪಟ್ಟು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...