Homeಅಂತರಾಷ್ಟ್ರೀಯಬೃಹತ್ ಪ್ರತಿಭಟನೆಗಳ ನಡುವೆ ತುರ್ತು ಪರಿಸ್ಥಿತಿ ಹೇರಿದ ಥೈಲ್ಯಾಂಡ್!

ಬೃಹತ್ ಪ್ರತಿಭಟನೆಗಳ ನಡುವೆ ತುರ್ತು ಪರಿಸ್ಥಿತಿ ಹೇರಿದ ಥೈಲ್ಯಾಂಡ್!

ಥೈಲ್ಯಾಂಡ್ ರಾಜ ಜರ್ಮನಿಯಲ್ಲಿ ವಾಸಿಸುತ್ತಿದ್ದು, ಇತ್ತೀಚೆಗೆ ಕೆಲವು ತಿಂಗಳಿನಿಂದ ಕೇವಲ ಒಂದು ದಿನ ಮಾತ್ರ ದೇಶಕ್ಕೆ ಭೇಟಿ ನೀಡಿದ್ದರು. ಈಗ ಶನಿವಾರ ಬ್ಯಾಂಕಾಕ್‌ಗೆ ಭೇಟಿ ನೀಡಿದ್ದರು.

- Advertisement -
- Advertisement -

ಪ್ರತಿಭಟನಾಕಾರರು ಗುರುವಾರ ಥೈಲ್ಯಾಂಡ್ ಪ್ರಧಾನಮಂತ್ರಿ ಕಛೇರಿಯ ಹೊರಗೆ ಭಾರಿ ಪ್ರಮಾಣದಲ್ಲಿ ಗುಂಪು ಸೇರಿದ್ದರಿಂದ ಮತ್ತು ರಾಜರ ಬೆಂಗಾವಲು ಮೇಲೆ ಮುತ್ತಿಗೆ ಹಾಕಿದ್ದರರಿಂದ ಅಲ್ಲಿನ ಸರ್ಕಾರ ರಾಜ್ಯದಲ್ಲಿ ತುರ್ತು ಪರಿಸ್ಥಿತಿಯನ್ನು ಹೇರಿದೆ. ಪೊಲೀಸರು ಮತ್ತು ಸೈನಿಕರು ವಿದ್ಯಾರ್ಥಿಗಳ ನೇತೃತ್ವದ ಪ್ರತಿಭಟನಾ ಆಂದೋಲನವನ್ನು ದಮನಿಸಲು ಪ್ರತಿಭಟನಾಕಾರರನ್ನು ಚದುರಿಸಿದ್ದಾರೆ.

ಮಾಜಿ ಜುಂಟಾ ನಾಯಕ ಪ್ರಧಾನ ಮಂತ್ರಿ ಪ್ರಯುತ್ ಚಾನ್-ಓಚಾ ಮತ್ತು ಹೊಸ ಸಂವಿಧಾನವನ್ನು ಉಚ್ಚಾಟಿಸಲು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ. ರಾಜ ಮಹಾ ವಾಜಿರಲಾಂಗ್‌ಕಾರ್ನ್‌ನ ರಾಜಪ್ರಭುತ್ವಕ್ಕೆ ಸುಧಾರಣೆಗಳನ್ನೂ ತರಬೇಕೆಂದು ಅವರು ಒತ್ತಾಯಿಸಿದ್ದಾರೆ ಎಂದು ರಾಜ್ಯ ದೂರದರ್ಶನ ವರದಿ ಮಾಡಿದೆ.

ಇದನ್ನೂ ಓದಿ: ಪಕ್ಷಾಂತರದಿಂದ ಆರ್‌ಆರ್ ನಗರ ಉಪಚುನಾವಣೆ: ರಾಜಕೀಯ ದಿಕ್ಕು ಬದಲಿಸುತ್ತಾ?

ಥೈಲ್ಯಾಂಡ್‌ನ ರಾಯಲ್ ಗೆಜೆಟ್ ವೆಬ್‌ಸೈಟ್‌ನಲ್ಲಿ ಪ್ರಕಟವಾದ ಪ್ರಕಟಣೆಯಲ್ಲಿ, ರಾಜ ಮಹಾ ವಾಜಿರಲಾಂಗ್‌ಕಾರ್ನ್ ಅವರ ಕುಟುಂಬದ ಸದಸ್ಯರು ಬರುತ್ತಿದ್ದಾಗ ಪ್ರತಿಭಟನಾಕಾರರು, ಮುತ್ತಿಗೆ ಹಾಕಿದ್ದರಿಂದ ರಾಷ್ಟ್ರೀಯ ಭದ್ರತೆ ಮತ್ತು ಆರ್ಥಿಕ ಪರಿಗಣನೆಗಳ ಕಾರಣದಿಂದಾಗಿ ಈ ತುರ್ತು ಪರಿಸ್ಥಿತಿಯ ಕ್ರಮವನ್ನು ತೆಗೆದುಕೊಳ್ಳಲಾಗಿದೆ ಎಂದು ಸರ್ಕಾರ ಹೇಳಿದೆ.

ಬುಧವಾರ, ಸುಮಾರು 10,000 ಸರ್ಕಾರಿ ವಿರೋಧಿ ಪ್ರತಿಭಟನಾಕಾರರು, ಥಾಯ್ ಸರ್ಕಾರದ ಸ್ಥಾನವಾದ ಸರ್ಕಾರಿ ಭವನಕ್ಕೆ ಮೆರವಣಿಗೆ ಹೊರಟಿದ್ದರು. ನಂತರ ಪ್ರಧಾನಿ ಪ್ರಯುತ್ ಚಾನ್-ಓಚಾ ತುರ್ತು ಪರಿಸ್ಥಿತಿಯನ್ನು ಘೋಷಿಸಿದರು. ಆದರೂ ಪ್ರತಿಭಟನಾಕಾರರು ಪೊಲೀಸ್ ಬ್ಯಾರಿಕೇಡ್‌ಗಳನ್ನು ಭೇದಿಸಿ ಕಟ್ಟಡವನ್ನು ಸುತ್ತುವರೆದು, ಪ್ರಯುತ್ ಚಾನ್-ಓಚಾ ರಾಜೀನಾಮೆ ನೀಡುವಂತೆ ಒತ್ತಾಯಿಸಿದರು.

ಇದನ್ನೂ ಓದಿ: ಆಂಧ್ರ ಮುಖ್ಯಮಂತ್ರಿಯನ್ನು ಹುದ್ದೆಯಿಂದ ಕೆಳಗಿಳಿಸುವಂತೆ ಸುಪ್ರೀಂನಲ್ಲಿ ಅರ್ಜಿ

ಈ ಕ್ರಮಕ್ಕೆ ಸಂಬಂಧಿಸಿದ ಎಲ್ಲಾ ಅಂತರರಾಷ್ಟ್ರೀಯ ಪ್ರಸಾರಗಳನ್ನು “ಟು ವಿಶನ್ಸ್” ಎಂದು ಕರೆಯಲ್ಪಡುವ ಥೈಲ್ಯಾಂಡ್‌ನ ಅತಿದೊಡ್ಡ ಕೇಬಲ್ ಆಪರೇಟರ್ ಸೆನ್ಸಾರ್ ಮಾಡಿರುವುದರಿಂದ ಅದಕ್ಕೆ ಸಂಬಂಧಿಸಿದ ಸುದ್ದಿಗಳು ಜನರಿಗೆ ತಲುಪುತ್ತಿಲ್ಲ.

“ಬ್ಯಾಂಕಾಕ್‌ನಲ್ಲಿ ಅನೇಕ ಗುಂಪುಗಳು ಅಕ್ರಮ ಸಾರ್ವಜನಿಕ ಸಭೆಗಳನ್ನು ಆಹ್ವಾನಿಸಿ ಪ್ರಚೋದನೆ ನೀಡಿವೆ. ರಾಜರ ವಾಹನದ ಮೇಲೆ ಪರಿಣಾಮ ಬೀರುವಂತೆ ವರ್ತಿಸಿದ್ದು, ರಾಷ್ಟ್ರೀಯ ಭದ್ರತೆಗೆ ಧಕ್ಕೆ ತರುವಂತಹ ಕೆಲಸಗಳನ್ನು ಮಾಡಿದೆ. ಹಾಗಾಗಿ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡಿಕೊಳ್ಳಲು ಈ ಪರಿಸ್ಥಿತಿಯನ್ನು ಪರಿಣಾಮಕಾರಿಯಾಗಿ ಮತ್ತು ತ್ವರಿತವಾಗಿ ಕೊನೆಗೊಳಿಸಲು ತುರ್ತು ಪರಿಸ್ಥಿತಿಯನ್ನು ಪರಿಚಯಿಸುವುದು ಅತ್ಯಂತ ಅವಶ್ಯಕವಾಗಿದೆ” ಎಂದು ರಾಜ್ಯ ದೂರದರ್ಶನದಲ್ಲಿ ಪ್ರಕಟಣೆ ಹೇಳಿದೆ.

ಇದನ್ನೂ ಓದಿ: ಗೌರಿ ಲಂಕೇಶ್ ಹತ್ಯೆ ಪ್ರಕರಣ ಸದ್ಯ ಯಾವ ಹಂತದಲ್ಲಿದೆ?

ಕಳೆದ 3 ತಿಂಗಳಿನಿಂದ ನಡೆಯುತ್ತಿರುವ ಸರ್ಕಾರದ ವಿರುದ್ಧದ ರ್ಯಾಲಿಗಳು ಉಲ್ಬಣಗೊಂಡನಂತರ ಸರ್ಕಾರ ಈ ಕ್ರಮವನ್ನು ಕೈಗೊಂಡು, ಕೆಲವು ಪ್ರತಿಭಟನಾ ನಾಯಕರನ್ನು ಇಂದು ಬಂಧಿಸಿದೆ.

ಥೈಲ್ಯಾಂಡ್ ರಾಜ ಜರ್ಮನಿಯಲ್ಲಿ ವಾಸಿಸುತ್ತಿದ್ದು, ಇತ್ತೀಚೆಗೆ ಕೆಲವು ತಿಂಗಳಿನಿಂದ ಕೇವಲ ಒಂದು ದಿನ ಮಾತ್ರ ದೇಶಕ್ಕೆ ಭೇಟಿ ನೀಡಿದ್ದರು. ಈಗ ಶನಿವಾರ ಬ್ಯಾಂಕಾಕ್‌ಗೆ ಭೇಟಿ ನೀಡಿದ್ದರು. ಆದರೆ ಅಲ್ಲಿನ ಪ್ರಜೆಗಳು ರಾಜ ಧೀರ್ಘಾವಧಿಯವರೆಗೆ ಇಲ್ಲಿಯೇ ಇರಬೇಕು ಎಂದು ಒತ್ತಾಯಿಸಿದ್ದಾರೆ.


ಇದನ್ನೂ ಓದಿ: ಉಪಚುನಾವಣೆ: 2 ವರ್ಷದಲ್ಲಿ BJP ಅಭ್ಯರ್ಥಿ ಮುನಿರತ್ನ ಆಸ್ತಿ ದುಪ್ಪಟ್ಟು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...