Homeಅಂತರಾಷ್ಟ್ರೀಯಬೃಹತ್ ಪ್ರತಿಭಟನೆಗಳ ನಡುವೆ ತುರ್ತು ಪರಿಸ್ಥಿತಿ ಹೇರಿದ ಥೈಲ್ಯಾಂಡ್!

ಬೃಹತ್ ಪ್ರತಿಭಟನೆಗಳ ನಡುವೆ ತುರ್ತು ಪರಿಸ್ಥಿತಿ ಹೇರಿದ ಥೈಲ್ಯಾಂಡ್!

ಥೈಲ್ಯಾಂಡ್ ರಾಜ ಜರ್ಮನಿಯಲ್ಲಿ ವಾಸಿಸುತ್ತಿದ್ದು, ಇತ್ತೀಚೆಗೆ ಕೆಲವು ತಿಂಗಳಿನಿಂದ ಕೇವಲ ಒಂದು ದಿನ ಮಾತ್ರ ದೇಶಕ್ಕೆ ಭೇಟಿ ನೀಡಿದ್ದರು. ಈಗ ಶನಿವಾರ ಬ್ಯಾಂಕಾಕ್‌ಗೆ ಭೇಟಿ ನೀಡಿದ್ದರು.

- Advertisement -
- Advertisement -

ಪ್ರತಿಭಟನಾಕಾರರು ಗುರುವಾರ ಥೈಲ್ಯಾಂಡ್ ಪ್ರಧಾನಮಂತ್ರಿ ಕಛೇರಿಯ ಹೊರಗೆ ಭಾರಿ ಪ್ರಮಾಣದಲ್ಲಿ ಗುಂಪು ಸೇರಿದ್ದರಿಂದ ಮತ್ತು ರಾಜರ ಬೆಂಗಾವಲು ಮೇಲೆ ಮುತ್ತಿಗೆ ಹಾಕಿದ್ದರರಿಂದ ಅಲ್ಲಿನ ಸರ್ಕಾರ ರಾಜ್ಯದಲ್ಲಿ ತುರ್ತು ಪರಿಸ್ಥಿತಿಯನ್ನು ಹೇರಿದೆ. ಪೊಲೀಸರು ಮತ್ತು ಸೈನಿಕರು ವಿದ್ಯಾರ್ಥಿಗಳ ನೇತೃತ್ವದ ಪ್ರತಿಭಟನಾ ಆಂದೋಲನವನ್ನು ದಮನಿಸಲು ಪ್ರತಿಭಟನಾಕಾರರನ್ನು ಚದುರಿಸಿದ್ದಾರೆ.

ಮಾಜಿ ಜುಂಟಾ ನಾಯಕ ಪ್ರಧಾನ ಮಂತ್ರಿ ಪ್ರಯುತ್ ಚಾನ್-ಓಚಾ ಮತ್ತು ಹೊಸ ಸಂವಿಧಾನವನ್ನು ಉಚ್ಚಾಟಿಸಲು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ. ರಾಜ ಮಹಾ ವಾಜಿರಲಾಂಗ್‌ಕಾರ್ನ್‌ನ ರಾಜಪ್ರಭುತ್ವಕ್ಕೆ ಸುಧಾರಣೆಗಳನ್ನೂ ತರಬೇಕೆಂದು ಅವರು ಒತ್ತಾಯಿಸಿದ್ದಾರೆ ಎಂದು ರಾಜ್ಯ ದೂರದರ್ಶನ ವರದಿ ಮಾಡಿದೆ.

ಇದನ್ನೂ ಓದಿ: ಪಕ್ಷಾಂತರದಿಂದ ಆರ್‌ಆರ್ ನಗರ ಉಪಚುನಾವಣೆ: ರಾಜಕೀಯ ದಿಕ್ಕು ಬದಲಿಸುತ್ತಾ?

ಥೈಲ್ಯಾಂಡ್‌ನ ರಾಯಲ್ ಗೆಜೆಟ್ ವೆಬ್‌ಸೈಟ್‌ನಲ್ಲಿ ಪ್ರಕಟವಾದ ಪ್ರಕಟಣೆಯಲ್ಲಿ, ರಾಜ ಮಹಾ ವಾಜಿರಲಾಂಗ್‌ಕಾರ್ನ್ ಅವರ ಕುಟುಂಬದ ಸದಸ್ಯರು ಬರುತ್ತಿದ್ದಾಗ ಪ್ರತಿಭಟನಾಕಾರರು, ಮುತ್ತಿಗೆ ಹಾಕಿದ್ದರಿಂದ ರಾಷ್ಟ್ರೀಯ ಭದ್ರತೆ ಮತ್ತು ಆರ್ಥಿಕ ಪರಿಗಣನೆಗಳ ಕಾರಣದಿಂದಾಗಿ ಈ ತುರ್ತು ಪರಿಸ್ಥಿತಿಯ ಕ್ರಮವನ್ನು ತೆಗೆದುಕೊಳ್ಳಲಾಗಿದೆ ಎಂದು ಸರ್ಕಾರ ಹೇಳಿದೆ.

ಬುಧವಾರ, ಸುಮಾರು 10,000 ಸರ್ಕಾರಿ ವಿರೋಧಿ ಪ್ರತಿಭಟನಾಕಾರರು, ಥಾಯ್ ಸರ್ಕಾರದ ಸ್ಥಾನವಾದ ಸರ್ಕಾರಿ ಭವನಕ್ಕೆ ಮೆರವಣಿಗೆ ಹೊರಟಿದ್ದರು. ನಂತರ ಪ್ರಧಾನಿ ಪ್ರಯುತ್ ಚಾನ್-ಓಚಾ ತುರ್ತು ಪರಿಸ್ಥಿತಿಯನ್ನು ಘೋಷಿಸಿದರು. ಆದರೂ ಪ್ರತಿಭಟನಾಕಾರರು ಪೊಲೀಸ್ ಬ್ಯಾರಿಕೇಡ್‌ಗಳನ್ನು ಭೇದಿಸಿ ಕಟ್ಟಡವನ್ನು ಸುತ್ತುವರೆದು, ಪ್ರಯುತ್ ಚಾನ್-ಓಚಾ ರಾಜೀನಾಮೆ ನೀಡುವಂತೆ ಒತ್ತಾಯಿಸಿದರು.

ಇದನ್ನೂ ಓದಿ: ಆಂಧ್ರ ಮುಖ್ಯಮಂತ್ರಿಯನ್ನು ಹುದ್ದೆಯಿಂದ ಕೆಳಗಿಳಿಸುವಂತೆ ಸುಪ್ರೀಂನಲ್ಲಿ ಅರ್ಜಿ

ಈ ಕ್ರಮಕ್ಕೆ ಸಂಬಂಧಿಸಿದ ಎಲ್ಲಾ ಅಂತರರಾಷ್ಟ್ರೀಯ ಪ್ರಸಾರಗಳನ್ನು “ಟು ವಿಶನ್ಸ್” ಎಂದು ಕರೆಯಲ್ಪಡುವ ಥೈಲ್ಯಾಂಡ್‌ನ ಅತಿದೊಡ್ಡ ಕೇಬಲ್ ಆಪರೇಟರ್ ಸೆನ್ಸಾರ್ ಮಾಡಿರುವುದರಿಂದ ಅದಕ್ಕೆ ಸಂಬಂಧಿಸಿದ ಸುದ್ದಿಗಳು ಜನರಿಗೆ ತಲುಪುತ್ತಿಲ್ಲ.

“ಬ್ಯಾಂಕಾಕ್‌ನಲ್ಲಿ ಅನೇಕ ಗುಂಪುಗಳು ಅಕ್ರಮ ಸಾರ್ವಜನಿಕ ಸಭೆಗಳನ್ನು ಆಹ್ವಾನಿಸಿ ಪ್ರಚೋದನೆ ನೀಡಿವೆ. ರಾಜರ ವಾಹನದ ಮೇಲೆ ಪರಿಣಾಮ ಬೀರುವಂತೆ ವರ್ತಿಸಿದ್ದು, ರಾಷ್ಟ್ರೀಯ ಭದ್ರತೆಗೆ ಧಕ್ಕೆ ತರುವಂತಹ ಕೆಲಸಗಳನ್ನು ಮಾಡಿದೆ. ಹಾಗಾಗಿ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡಿಕೊಳ್ಳಲು ಈ ಪರಿಸ್ಥಿತಿಯನ್ನು ಪರಿಣಾಮಕಾರಿಯಾಗಿ ಮತ್ತು ತ್ವರಿತವಾಗಿ ಕೊನೆಗೊಳಿಸಲು ತುರ್ತು ಪರಿಸ್ಥಿತಿಯನ್ನು ಪರಿಚಯಿಸುವುದು ಅತ್ಯಂತ ಅವಶ್ಯಕವಾಗಿದೆ” ಎಂದು ರಾಜ್ಯ ದೂರದರ್ಶನದಲ್ಲಿ ಪ್ರಕಟಣೆ ಹೇಳಿದೆ.

ಇದನ್ನೂ ಓದಿ: ಗೌರಿ ಲಂಕೇಶ್ ಹತ್ಯೆ ಪ್ರಕರಣ ಸದ್ಯ ಯಾವ ಹಂತದಲ್ಲಿದೆ?

ಕಳೆದ 3 ತಿಂಗಳಿನಿಂದ ನಡೆಯುತ್ತಿರುವ ಸರ್ಕಾರದ ವಿರುದ್ಧದ ರ್ಯಾಲಿಗಳು ಉಲ್ಬಣಗೊಂಡನಂತರ ಸರ್ಕಾರ ಈ ಕ್ರಮವನ್ನು ಕೈಗೊಂಡು, ಕೆಲವು ಪ್ರತಿಭಟನಾ ನಾಯಕರನ್ನು ಇಂದು ಬಂಧಿಸಿದೆ.

ಥೈಲ್ಯಾಂಡ್ ರಾಜ ಜರ್ಮನಿಯಲ್ಲಿ ವಾಸಿಸುತ್ತಿದ್ದು, ಇತ್ತೀಚೆಗೆ ಕೆಲವು ತಿಂಗಳಿನಿಂದ ಕೇವಲ ಒಂದು ದಿನ ಮಾತ್ರ ದೇಶಕ್ಕೆ ಭೇಟಿ ನೀಡಿದ್ದರು. ಈಗ ಶನಿವಾರ ಬ್ಯಾಂಕಾಕ್‌ಗೆ ಭೇಟಿ ನೀಡಿದ್ದರು. ಆದರೆ ಅಲ್ಲಿನ ಪ್ರಜೆಗಳು ರಾಜ ಧೀರ್ಘಾವಧಿಯವರೆಗೆ ಇಲ್ಲಿಯೇ ಇರಬೇಕು ಎಂದು ಒತ್ತಾಯಿಸಿದ್ದಾರೆ.


ಇದನ್ನೂ ಓದಿ: ಉಪಚುನಾವಣೆ: 2 ವರ್ಷದಲ್ಲಿ BJP ಅಭ್ಯರ್ಥಿ ಮುನಿರತ್ನ ಆಸ್ತಿ ದುಪ್ಪಟ್ಟು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...